Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಟ್ರಯಲ್ ಶುರುವಾಗಿದ್ದು, ರೇಣುಕಾಸ್ವಾಮಿ ತಂದೆ-ತಾಯಿಯ ಹೇಳಿಕೆ ದಾಖಲಿಸಲಾಗುತ್ತಿದೆ. ಈ ಹೊತ್ತಲ್ಲೇ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಾಸಿಕ್ಯೂಷನ್ ವಿರುದ್ಧವೇ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಹೇಳಿಕೆ ನೀಡಿದ್ದಾರೆ. ಹಿಂದಿನ ಹೇಳಿಕೆಗೂ ಈಗಿನ ಹೇಳಿಕೆಗೂ ದ್ವಂದ್ವ ಹಿನ್ನೆಲೆಯಲ್ಲಿ ರತ್ನಪ್ರಭಾರನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು ಎಸ್ಪಿಪಿ (SPP) ಮನವಿ ಮಾಡಿದ್ದಾರೆ. ಎಸ್ಪಿಪಿ ಪ್ರಸನ್ನಕುಮಾರ್ ಸಲ್ಲಿಸಿದ ಮನವಿ ಬಗ್ಗೆ ಸೋಮವಾರ ನಿರ್ಧಾರ ಆಗಲಿದೆ. ರತ್ನಪ್ರಭಾ 8 ಅಂಶಗಳಲ್ಲಿ ಪ್ರಾಸಿಕ್ಯೂಷನ್ ವಿರುದ್ಧವೇ ವ್ಯತಿರಿಕ್ತ ಹೇಳಿಕೆ ಕೊಟ್ಟಿದ್ದಾರೆ. ಮಗನ ಮೊಬೈಲ್ ಬಗ್ಗೆ ಗೊತ್ತಿಲ್ಲ ಎಂದು ನ್ಯಾಯಾಲಯದಲ್ಲಿ ಹೇಳಿದ್ದು ಪೊಲೀಸರ ಮುಂದೆ ಇದೇ ಮೊಬೈಲ್ ಅಂತ ಹೇಳಿದ್ದರು. ಜೊತೆಗೆ ಹತ್ಯೆಯಾದ ದಿನ 2 ಬಾರಿ ರೇಣುಕಾಗೆ ಕರೆ ಮಾಡಿದ್ದರು. ಆದರೆ ಕರೆ ಮಾಡಿಲ್ಲ ಅಂತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದರು. ಈ ಎಲ್ಲಾ ಹೇಳಿಕೆಗಳ ಆಧಾರದಲ್ಲಿ ರತ್ನಪ್ರಭಾರನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು…
ಉತ್ತರಕನ್ನಡ : ಶೈಕ್ಷಣಿಕ ಪ್ರವಾಸ ಹಿನ್ನಲೆಯಲ್ಲಿ ದಾವಣಗೆರೆಯ ವಿದ್ಯಾರ್ಥಿಗಳು ಉತ್ತರ ಕನ್ನಡ ಜಿಲ್ಲೆಗೆ ತೆರಳಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಬಸ್ ನಲ್ಲಿ ಇದ್ದಂತಹ ಸುಮಾರು 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಮೂಲತಃ ದಾವಣಗೆರೆಯ ಜೈನ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಬಸ್ ಪಲ್ಟಿಯಾಗಿದೆ. ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ವಿಭೂತಿ ಫಾಲ್ಸ್ಗೆ ಹೋಗುವಾಗ ಶಿರಸಿ ತಾಲೂಕಿನ ಮತ್ತಿಘಟ್ಟ ಸಮೀಪದ ಹಸೆಮನೆ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 10 ರಿಂದ 12 ವಿದ್ಯಾರ್ಥಿಗಳಿಗೆ ಗಾಯಗೊಂಡಿದ್ದಾರೆ. ಅಪಘಾತಕ್ಕೀಡಾದ ತಕ್ಷಣ ಗಾಯಾಳು ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಅಂಕೋಲಾ ಹಾಗೂ ಶಿರಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಡಿಸೆಂಬರ್ 28 ರಂದು ದಾವಣಗೆರೆಯಿಂದ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಅದರ ಭಾಗವಾಗಿ ಮಂಗಳವಾರ ಬೆಳಿಗ್ಗೆ ಶಿರಸಿ ಮಾರಿಕಾಂಬಾ ದೇವಾಲಯಕ್ಕೆ ತೆರಳಿ, ಅಲ್ಲಿಂದ ಯಾನ ಹಾಗೂ ವಿಭೂತಿ ಫಾಲ್ಸ್ಗೆ ತೆರಳಬೇಕಿತ್ತು. ಮಾರ್ಗಮಧ್ಯೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ…
ಬೆಂಗಳೂರು : 2026ರ ಜ.9ರಿಂದ ಫೆ.5ರವರೆಗೆ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯ ನಡೆಯಲಿದ್ದು, ಈ ಟೂರ್ನಿಯಲ್ಲಿ ಆರ್ಸಿಬಿಯ ಎಲ್ಲಿಸ್ ಪೆರ್ರಿ ಯುಪಿ ವಾರಿಯರ್ಸ್ನ ತಾರಾ ನರ್ರಿಸ್ ಹಾಗೂ ದೆಹಲಿ ಕ್ಯಾಪಿಟಲ್ಸ್ನ ಅನ್ನಾಬೆಲ್ ಸದರ್ಲ್ಯಾಂಡ್ ಹೊರಗುಳಿದಿದ್ದಾರೆ ಎಂದು WPL ಎಕ್ಸ್ನಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ. ಆಸ್ಟ್ರೇಲಿಯಾದ ಆಲ್ ರೌಂಡರ್ಗಳಾದ ಎಲ್ಲಿಸ್ ಪೆರ್ರಿ ಮತ್ತು ಅನ್ನಾಬೆಲ್ ಸದರ್ಲ್ಯಾಂಡ್ ವೈಯಕ್ತಿಕ ಕಾರಣಗಳಿಂದ WPL 2026ರ ಆವೃತ್ತಿಯಿಂದ ಹಿಂದೆ ಸರಿದಿದ್ದಾರೆ. ಆರ್ಸಿಬಿ ತಂಡ ಪೆರ್ರಿ ಬದಲಾಗಿ ಸಯಾಲಿ ಸತ್ಘರೆ ಅವರನ್ನು, ದೆಹಲಿ ಕ್ಯಾಪಿಟಲ್ಸ್ ತಂಡವು ಸದರ್ಲ್ಯಾಂಡ್ ಬದಲಾಗಿ ಅಲಾನಾ ಕಿಂಗ್ ಅವರನ್ನು ಹೆಸರಿಸಿದೆ. 2026ರ ಜ.18ರಿಂದ ಫೆ.1ರವರೆಗೆ ನೇಪಾಳದಲ್ಲಿ 2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ನ ಅರ್ಹತಾ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಯುಎಸ್ ನ್ಯಾಷನಲ್ ಟೀಮ್ಗೆ ತಾರಾ ನರ್ರಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಜ.9ರಿಂದ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ನಿಂದ ತಾರಾ ನರ್ರಿಸ್ ಅವರು ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಯುಪಿ ವಾರಿಯರ್ಸ್ ತಂಡವು ಆಸ್ಟ್ರೇಲಿಯಾದ…
ಬೆಂಗಳೂರು : ಡ್ರಿಂಕ್ ಅಂಡ್ ಡ್ರೈವ್ ತಪಾಸಣೆಯ ವೇಳೆ ಸಂಚಾರಿ ಪೊಲೀಸರಿಗೆ ಅವಾಜ್ ಹಾಕಿರುವ ಘಟನೆ ವರದಿಯಾಗಿದೆ. ಹೌದು ನಾಲ್ವರು ಯುವಕರು ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಮಾಡುವ ವೇಳೆ ಪೋಲೀಸರ ಮೇಲೆ ಹಲ್ಲೆ ಮಾಡಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಾರು ಚಾಲಕನಿಗೆ ಊದಲು ಹೇಳಿದಾಗ ನಿರಾಕರಿಸಿದ ವಿಚಾರಕ್ಕೆ ಪೊಲೀಸರ ನಡುವೆ ಹಾಗೂ ನಾಲ್ವರ ಯುವಕರ ಮಧ್ಯೆ ವಾಗ್ವಾದ ನಡೆದಿದ್ದು, ಕಾರಿನಿಂದ ಕೆಳಗಿಳಿದು ದೇವನಹಳ್ಳಿ ಟ್ರಾಫಿಕ್ ಪೊಲೀಸರ ಮೇಲೆ ದರ್ಪ ತೋರಿದ್ದಾರೆ. ಪೊಲೀಸರನ್ನು ಎಳೆದಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಕರ್ತವ್ಯಕ್ಕೆ ಅಡ್ಡಿ ಸಾರ್ವಜನಿಕವಾಗಿ ಅಪಮಾನ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ fir ದಾಖಲಾಗಿದೆ. ದೇವನಹಳ್ಳಿಯ ಬೈಪಾಸ್ ನಲ್ಲಿ ನಿನ್ನೆ ರಾತ್ರಿ ಒಂದು ಘಟನೆ ನಡೆದಿದೆ.
ಬೆಂಗಳೂರು : ಅಕ್ರಮವಾಗಿ ಆನ್ಲೈನ್ ಅಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಶಾಸಕ ವೀರೇಂದ್ರ ಪಪ್ಪಿಗೆ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಡಿ ಪ್ರಕರಣದಲ್ಲಿ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಆಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ. ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದರು. ಕಳೆದ ನಾಲ್ಕು ತಿಂಗಳಿಂದ ಪರಪ್ಪನ ಅಗ್ರಹಾರ ಇದೀಗ ಇಡೀ ಪ್ರಕರಣದಲ್ಲಿ ವೀರೇಂದ್ರ ಪಪ್ಪಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣ ಹಿನ್ನೆಲೆ? ಅಕ್ರಮ ಆನ್ಲೈನ್ ಮತ್ತು ಬೆಟ್ಟಿಂಗ್ನಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕರ್ನಾಟಕದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ. ಸಿ. ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗ್ಯಾಂಗ್ಟಾಕ್ನಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಗೆ ಇದೀಗ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ವಿಬಿ-ಜಿ ರಾಮ್ ಜಿ ಕಾಯ್ದೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ ಹೊಸ ಕಾಯ್ದೆಯು ಉದ್ಯೋಗ ಖಾತರಿ ತತ್ವಕ್ಕೆ ಮಾರಕವಾಗಿದೆ. ಈ ಹಿಂದಿನ ಮನರೇಗಾ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರದ್ದು 90% ಹಾಗೂ 10% ರಾಜ್ಯದ ಹಂಚಿಕೆಯಾಗಿದ್ದು ಈಗಿನ ಕಾಯ್ದೆಯು ರಾಜ್ಯ ಸರ್ಕಾರದ ಆರ್ಥಿಕತೆಗೆ ಹೊರೆಯಾಗಲಿದೆ. ಹೊಸ ಕಾಯ್ದೆಯು 258 ಮತ್ತು 250ನೇ ವಿಧಿಯ ಉಲ್ಲಂಘನೆಯಾಗಿದೆ. ರಾಜ್ಯಗಳ ಜೊತೆಗೆ ಚರ್ಚೆ ನಡೆಸದೆ ಇದನ್ನು ಜಾರಿಗೆ ತರಲಾಗಿದೆ. ಈ ವಿಧಾನವು ಸಹಕಾರಿ ಒಕ್ಕೂಟದ ನಾಶಕ್ಕೆ ದಾರಿಯಾಗಿದೆ ಹಾಗಾಗಿ ವಿವಿಜಿ ರಾಮ್ ಜಿ ಕಾಯಿದೆ ಸ್ಥಗಿತಗೊಳಿಸುವಂತೆ ಪತ್ರ ಬರೆದಿದ್ದು ಸಮೃದ್ಧ ಭಾರತ ನಿರ್ಮಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಪ್ರಧಾನಿಗೆ ಪತ್ರ ಬರೆದು ಸಿಎಂ ಸಿದ್ದರಾಮಯ್ಯ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ 3ನೇ ಮಹಡಿಯಿಂದ ಹಾರಿ ಬಯೋಕಾನ್ ಕಂಪನಿ ಉದ್ಯೋಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆನಂತ್ ಭಟ್ (35) ಆತ್ಮಹತ್ಯೆಗೆ ಶರಣಾಗಿರುವ ಉದ್ಯೋಗಿ ಎಂದು ತಿಳಿದುಬಂದಿದೆ.ಎಲೆಕ್ಟ್ರಾನಿಕ್ ಸಿಟಿ 2ನೇ ಹಂತಕ್ಸ ಬಯೋಕಾನ್ ಕಂಪನಿಯಲ್ಲಿ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅನಂತ್ ಮೃತದೇಹವನ್ನು ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವ ಕಾರಣಕ್ಕೆ ಅನಂತ್ ಭಟ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವುದು ತನಿಖೆಯ ನಂತರ ತಿಳಿದುಬರಲಿದೆ.
ಹುಬ್ಬಳ್ಳಿ : ಇಲ್ಲಿನ ಕೆಎಂಸಿಆರ್ಐ ಆಸ್ಪತ್ರೆ ಮೇಲೆ ಲೋಕಾಯುಕ್ತರು ಮಂಗಳವಾರ ದಾಳಿ ಮಾಡಿದ್ದು, ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಔಷಧಿಗಳನ್ನು ಹೊರಗೆ ಬರೆದು ಕೊಡುತ್ತಿರುವ ಬಗ್ಗೆ ದೂರುಗಳಿದ್ದವು. ವ್ಯಕ್ತಿಯೋರ್ವ ಇಂಜೆಕ್ಷನ್ಗಾಗಿ ಪರದಾಡಿದ್ದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಫಣೀಂದ್ರ ಸೂಚನೆ ನೀಡಿದ್ದರು. ಸ್ವಯಂ ದೂರು ದಾಖಲಿಸಿಕೊಂಡು ತನಿಖೆ ನಡೆಸಲು ಸೂಚನೆ ನೀಡಿದ್ದರು. ಈ ವೇಳೆ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಅಕ್ಟೊಬರ್ ತಿಂಗಳಲ್ಲಿ ರೈತನೋರ್ವ ಔಷಧಿಗಾಗಿ ತಿರುಗಾಡುವ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಸ್ವಯಂ ದೂರು ದಾಖಲಿಸಿಕೊಂಡು ಪ್ರಾಥಮಿಕ ವರದಿ ನೀಡಲು ನಮಗೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರಿಂದ ದೂರು ಸಹ ಕೊಡಲಾಗಿತ್ತು. ಪ್ರಾಥಮಿಕ ವಿಚಾರಣೆ ಮಾಡಿ ವರದಿ ಕೇಳಿದ್ರು. ಹೀಗಾಗಿ ಶೋಧ ಮಾಡುತ್ತಿದ್ದೇವೆ. ಚಿಕಿತ್ಸೆ ವಿಭಾಗ, ಶುಚಿತ್ವ, ಆಡಳಿತ ವ್ಯವಸ್ಥೆ ಬಗ್ಗೆ ದೂರುಗಳು ಬಂದಿವೆ. ಈಗ ಪರಿಶೀಲನೆ ಮಾಡ್ತಾ ಇದ್ದೇವೆ ಎಂದರು. ಸರ್ಕಾರಿ ವೈದ್ಯರು ಹೊರಗಡೆಗೆ ಚೀಟಿ ಬರೆದುಕೊಡುತ್ತಿಲ್ಲ.…
ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.ಇದೀಗ ಹೊಸ ವರ್ಷದ ವೇಳೆ ಫಲಾನುಭವಿಗಳ ಖಾತೆಗೆ ಒಂದು ಕಂತಿನ ಹಣ ಬಂದಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಗೃಹಲಕ್ಷ್ಮಿ ಫಲಾನುಭವಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಹೌದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದಂತೆ ಹೊಸ ವರ್ಷಕ್ಕೆ ಯಜಮಾನಿಯರಿಗೆ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ.ಗೃಹಲಕ್ಷ್ಮಿ ಯೋಜನೆಯ 24 ನೇ ಕಂತಿನ 2000 ರೂ ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಜಮಾ ಆಗಿದೆ. ಆದರೆ ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಜಮಾ ಆಗಿದೆ. ಈ ಹಿನ್ನೆಲೆ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಹಣ ತಿಂಗಳಿಗೊಮ್ಮೆ ಬಿಡುಗಡೆಯಾಗಬೇಕಾಗಿದ್ದರೂ, ಕೆಲವೊಮ್ಮೆ ತಾಂತ್ರಿಕ ಕಾರಣಗಳಿಂದಾಗಿ ಒಂದೇ ಬಾರಿ ಎರಡು ಅಥವಾ ಮೂರು ತಿಂಗಳ ಹಣವೂ ಜಮಾ ಆಗುತ್ತಿದೆ. ಫೆಬ್ರವರಿ – ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಲಬುರ್ಗಿ : ಪಿಎಸ್ಐ ನೇಮಕಾತಿ ಹಗರಣದ ಕಿಂಗ್ ಪಿನ್ ಆದಂತಹ RD ಪಾಟೀಲ್ ಸದ್ಯ ಕಲಬುರ್ಗಿ ಸೆಂಟ್ರಲ್ ಜೈಲಿನಲ್ಲಿದ್ದು, ಸಿಬ್ಬಂದಿಗಳ ಜೊತೆ ಕಿರಿಕ್ ಮಾಡಿರುವ ಆರೋಪ ಹಿನ್ನೆಲೆ RD ಪಾಟೀಲನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಲ್ಬುರ್ಗಿಯ ಫರಹತಾಬಾದ್ ಪೊಲೀಸರು RD ಪಾಟೀಲನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಲ್ಬುರ್ಗಿ ಸೆಂಟ್ರಲ್ ಜೈಲು ಸಿಬ್ಬಂದಿ ತಪಾಸಣೆ ಹೋಗಿದ್ದಾಗ ಆರ್ಡಿ ಪಾಟೀಲ್ ಕಿರಿಕ್ ಮಾಡಿದ್ದಾನೆ ಜೈಲು ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ವಾರ ಸಿಬ್ಬಂದಿಗಳ ಜೊತೆಗೆ ಕಿರಿಕ್ ಮಾಡಿದ ಹಿನ್ನೆಲೆ ಜೈಲಾಧಿಕಾರಿಗಳು ಆತನ ವಿರುದ್ಧ ಕೆಎಸ್ ದಾಖಲಿಸಿದ್ದಾರೆ.














