Author: kannadanewsnow05

ಬೆಂಗಳೂರು : ಲಕ್ಷ್ಮಿಸಾಗರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಲಕ್ಷ್ಮಿ ಸಾಗರ ಗ್ರಾಮದಲ್ಲಿ ನಡೆದಿದೆ. ಶನಿವಾರ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ತಾಯಿ ಲಾವಣ್ಯ (28) ಹಾಗೂ ಪುತ್ರಿ ಲಕ್ಷತಾ (8) ಮೃತ ದುರ್ದವಿಗಳು ಎಂದು ತಿಳಿದುಬಂದಿದೆ. ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪತಿ ಸಂಪತ್ ವಿರುದ್ಧ ದೂರು ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಮೃತ ಲಾವಣ್ಯ ಪೋಷಕರು ಇದೀಗ ಆಗ್ರಹಿಸಿದ್ದಾರೆ. ಘಟನೆ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Read More

ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಜಾತ್ರೆಗೆ ತೆರಳಿದವರು ಇದೀಗ ಮಸಣಕ್ಕೆ ತೆರಳಿದ್ದಾರೆ. ಹೌದು ಜಾತ್ರೆಗೆ ತೆರಳಿದವರು ಅಪಘಾತಕ್ಕೆ ಬಲಿಯಾದಂತಹ ದಾರುಣ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ನೋಡುವುದಕ್ಕೆಂದು ಬಂದು ವಾಪಸ್ ಹೋಗುವ ವೇಳೆ ನಾಲ್ವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಹಾಗೂ ಗಾಯಾಳುಗಳು ನಿನ್ನೆ ಸಂಜೆ ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆಗೆ ಬಂದಿದ್ದರು. ಬಳಿಕ ರಾತ್ರಿ ಶಾಖಾಪುರಕ್ಕೆ ಒಂದೇ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಮಾರ್ಗಮಧ್ಯೆ ಇವರು ಸಾಗುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಬಸವೇಶ್ವರ ಜಾತ್ರೆಯ ರಥೋತ್ಸವ ಮುಗಿಸಿ ವಾಪಸ್ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಮೃತರ ದೇಹ ನಜ್ಜುಗುಜ್ಜಾಗಿದ್ದು, ದೇಹದ ಭಾಗಗಳು ಛಿದ್ರ ಛಿದ್ರವಾಗಿವೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ. ಶಾಖಾಪುರ ಮುಖ್ಯರಸ್ತೆಯಲ್ಲಿ ಈ…

Read More

ಬೆಳಗಾವಿ : ತಡರಾತ್ರಿ ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು ಇಲ್ಲಿನ ಖ್ಯಾತ ವಕೀಲರಾದ ಪೂಜಾ ಕಾಕತಕರ್ ಅವರ ಮಂಡೋಳಿ ರಸ್ತೆಯ ನಿವಾಸದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದೆ. ಘಟನೆಯಿಂದ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ‌. ಶನಿವಾರ ಮಧ್ಯರಾತ್ರಿ ಸುಮಾರು 1 ರಿಂದ 2 ಗಂಟೆಯ ಸುಮಾರಿಗೆ ಈ ದಾಳಿ ನಡೆದಿದ್ದು, ದುಷ್ಕರ್ಮಿಗಳು ಪೂಜಾ ಅವರ ಮನೆಯ ಮೊದಲ ಮಹಡಿಯನ್ನು ಗುರಿಯಾಗಿಸಿಕೊಂಡು ಫೈರಿಂಗ್ ನಡೆಸಿದ್ದಾರೆ. ಆ ಸಮಯದಲ್ಲಿ ಮೊದಲ ಮಹಡಿಯ ಕೊಠಡಿಯಲ್ಲಿ ಪೂಜಾ ಅವರ ಪುತ್ರಿ ಸಂಸ್ಕೃತಿ ಪರೀಕ್ಷೆಗೆ ಅಂತಾ ಓದುತ್ತಿದ್ದರು. ಗುಂಡು ಕಿಟಕಿಯ ಗ್ಲಾಸ್‌ಗೆ ಬಡಿದಿದ್ದು, ಅದೃಷ್ಟವಶಾತ್ ಸಂಸ್ಕೃತಿ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಮತ್ತು ಸೋಕೋ ತಂಡ ಪರಿಶೀಲನೆ ನಡೆಸಿದೆ. ಕಿಟಕಿಯ ಗಾಜಿನ ಮೇಲಿರುವ ಗುಂಡಿನ ಗುರುತುಗಳು ಮತ್ತು ಪತ್ತೆಯಾದ ಗುಂಡಿನ ಅಂಶಗಳನ್ನು ಹೆಚ್ಚಿನ ತನಿಖೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಪೂಜಾ…

Read More

ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ 10 ಆರೋಪಿಗಳನ್ನು ಇದೀಗ ಪೊಲೀಸ್ ಮಾಡಿದ್ದಾರೆ. ಶುಕ್ರವಾರ ಬೆಂಗಳೂರಿನ ಚೆನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ನಡುವೆ ಪಂದ್ಯ ನಡೆದಿತ್ತು. ಒಂದೇ ಮ್ಯಾಚ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ 7 fir ದಾಖಲಾಗಿದ್ದು., ಬ್ಲಾಕ್ ನಲ್ಲಿ ಟಿಕೆಟ್ ಮಾರಾಟ ಸಂಬಂಧ ಪಟ್ಟಂತೆ ಒಟ್ಟು 10 ಆರೋಪಿಗಳನ್ನು ಇದುವರೆಗೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ಬಳಿ ಇದ್ದ 19 ಐಪಿಎಲ್ ಟಿಕೆಟ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆ ಎಸ್ ಎಸ್ ಸಿ ಎ ಸದಸ್ಯರಿಗೆ ನೀಡಿದ ಕಾಂಪ್ಲಿಮೆಂಟರಿ ಟಿಕೆಟ್ಗಳೇ ಮಾರಾಟ ಮಾಡಲಾಗಿದೆ. ಕಾಂಪ್ಲಿಮೆಂಟರಿ ಟಿಕೆಟ್ ಮೇಲೆ ಹಣ ನಮದು ಅಥವಾ ಸೊನ್ನೆ ಬರೆದಿರುತ್ತದೆ. ತಮ್ಮಲ್ಲಿರುವ ಟಿಕೆಟ್ ಮೌಲ್ಯದ ಅರಿವಿಲ್ಲದೆ ಆರೋಪಿಗಳು ಮಾರಾಟ ಮಾಡುತ್ತಿದ್ದರು. P-3 ಸ್ಟಾಂಡ್ ನ 30 ರಿಂದ 40,000 ಬಿಳಿಯ ಟಿಕೆಟ್ 8 ರಿಂದ 10 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಇನ್ನೊಂದೆಡೆ ನಾಲ್ಕರಿಂದ ಐದು ಸಾವಿರ ಮೌಲ್ಯದ ಟಿಕೆಟ್…

Read More

ಮಡಿಕೇರಿ : ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ಇಂದು ಗೌರವ ಘಟನೆ ಒಂದು ನಡೆದಿದ್ದು , ಗುಂಡು ಹಾರಿಸಿಕೊಂಡು ಸರ್ಕಾರಿ ಶಿಕ್ಷಕಿ ಎ.ರೋಹಿಣಿ (51) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮೆಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರೋಹಿಣಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ. ಸದ್ಯ ಘಟನ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಾಡಾನೆ ದಾಳಿಗೆ ರೈತ ಒಬ್ಬರು ಬಲಿಯಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಚೀಲಂದವಾಡಿಯಲ್ಲಿ ಈ ಒಂದು ಘಟನೆ ನಡೆದಿದೆ. ರೈತ ಕರಿಗುಂಡ (55) ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಚೀಲಂದವಾಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಸಂಗಮ ಅರಣ್ಯ ವಲಯ ಪ್ರದೇಶದ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಮೃತ ವ್ಯಕ್ತಿ ದೇಹವನ್ನು ಕನಕಪುರ ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು ಘಟನಾ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಬೀದಿ ನಾಯಿಗಳ ದಾಳಿಯಿಂದ ಮಕ್ಕಳು, ವಯಸ್ಕರು ಗಾಯಗೊಂಡಿರುವ ಘಟನೆಗಳು ನಡೆದಿದ್ದವು. ಆದರೆ ಇದೀಗ ಬೆಂಗಳೂರಲ್ಲಿ ಅಮಾನವೀಯ ಕೃತ್ಯ ನಡೆದಿದ್ದು ಬೀದಿನಾಯಿಯ ಮೇಲೆ ರಾಕ್ಷಸನೊಬ್ಬ ಮಚ್ಚಿನಿಂದ ದಾಳಿ ಮಾಡಿರುವ ಘಟನೆ ವರದಿಯಾಗಿದೆ. ಹೌದು ಬೀದಿ ನಾಯಿಯ ಮೇಲೆ ಮಚ್ಚಿನಿಂದ ಎಳೆನೀರು ವ್ಯಾಪಾರಿ ಒಬ್ಬ ಹಲ್ಲೆ ಮಾಡಿದ್ದಾನೆ. ಎಳನೀರು ಕೊಚ್ಚುವ ಮುಚ್ಚಿನಿಂದ ನಾಯಿಯ ಮೇಲೆ ದಾಳಿ ಮಾಡಿದ್ದಾನೆ. ಬೆಂಗಳೂರಿನ ಕೆಆರ್ ಪುರ ಠಾಣ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ನಾಯಿ ಮೇಲಿನ ಹಲ್ಲೆ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಂಗಳೂರಿನ ಕೆಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ನವದೆಹಲಿ : ಅಮೆರಿಕದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ ನಲ್ಲಿ ನಿನ್ನೆ ರಾತ್ರಿ 8:45 ನಿಮಿಷಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದ್ದ ವೇದಿಕೆಯ ಬಳಿ ಶೂಟ್ ಔಟ್ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದಾಳಿಕೋರ ಥಾಮಸ್ ಅಲೆನ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ. ದಾಳಿ ಕೋರನನ್ನು ಅರೆಸ್ಟ್ ಮಾಡಿದ ಬಳಿಕ ವಿಚಾರಣೆ ನಡೆಸಿದ ಅಲ್ಲಿನ ಪೊಲೀಸ್ ಅಧಿಕಾರಿಗಳು ಟ್ರಂಪ್ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮುಂಚೇಯೇ ಆ ಒಂದು ಹೋಟೆಲ್ನಲ್ಲಿ ಥಾಮಸ್ ರೂಮ್ ಬುಕ್ ಮಾಡಿದ್ದ ಎಂದು ಬಂದಿದೆ. ಇದೀಗ ಭದ್ರತಾ ಸಿಬ್ಬಂದಿಗಳು ಕ್ಯಾಲಿಫೋರ್ನಿಯಾದ ಟೊರೆಂಟ್ಸ್ ನಲ್ಲಿರುವ ಥಾಮಸ್ ನಿವಾಸವನ್ನು ಸೀಜ್ ಮಾಡಿದ್ದಾರೆ ಬೆರಿಂಗ್ ಹಾಕಿ ಟೇಬಲ್ ಕಟ್ಟಿ ಸಿಬ್ಬಂದಿಗಳು ಆತನ ಮನೆಯನ್ನು ಸೀಲ್ ಮಾಡಿದ್ದಾರೆ. ದಾಳಿಕೋರ ಅಲೈನ್ ಹಿನ್ನೆಲೆಯನ್ನು ಅಮೆರಿಕ ಪೊಲೀಸರು ಇದೀಗ ಜಾಲಾಡುತ್ತಿದ್ದಾರೆ. ಥಾಮಸ್ ಅಲೆನ್ ವಿಚಾರಣೆಯನ್ನು ಎಫ್ ಬಿ ಐ ನಡೆಸಲಿದೆ. ಸದ್ಯ ಆತನ ಮನೆಯನ್ನು ಸೀಜ್ ಮಾಡಿರುವ ಪೊಲೀಸರು ಅಕ್ಕಪಕ್ಕದ ನಿವಾಸಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಹಿಲ್ಟನ್ ಹೋಟೆಲ್ ನ…

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮದ ಓಝೂನ್ ಬಡಾವಣೆ ಗೇಟ್ ಬಳಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್‌ ಇನ್ಸಪೆಕ್ಟ‌ರ್ ರಾಕೇಶ್ ದೌರ್ಜನ್ಯ ನಡೆಸಿರುವುದು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾತ್ರಿ ಅಂಗಡಿ ಮುಚ್ಚುವುದು ಸ್ವಲ್ಪ ತಡವಾಗಿದೆ. ಈ ಕಾರಣಕ್ಕೆ ಹುಡುಗನನ್ನು ಅಂಗಡಿಯಿಂದ ಹೊರಗೆಳೆದು ಲಾಠಿಯಿಂದ ಹಲ್ಲೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಈ ಘಟನೆ ನಿಜಕ್ಕೂ ಆತಂಕಕಾರಿ ಮತ್ತು ಖಂಡನೀಯ. ಸಾರ್ವಜನಿಕರ ರಕ್ಷಣೆ ಮಾಡಬೇಕಾದ ಪೊಲೀಸ್ ಅಧಿಕಾರಿಯೇ ಈ ರೀತಿ ಕಾನೂನು ಕೈಗೆತ್ತಿಕೊಳ್ಳುವುದು ವ್ಯವಸ್ಥೆಯ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡುತ್ತದೆ.

Read More

ಬೆಂಗಳೂರು : ಮದುವೆ ಮಂಟಪದಲ್ಲಿ ಒಂದು ಕೋಟಿ ಮೌಲ್ಯದ ಚಿನ್ನಾಭರಣ ಕಳವು ಆಗಿರುವ ಘಟನೆ ಬೆಂಗಳೂರಿನ ಎಸ್ ಡಿ ಪಿ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಈ ಒಂದು ಘಟನೆ ನಡೆದಿದೆ. ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಲ್ಯಾಣ ಮಂಟಪದಲ್ಲಿ ಏಪ್ರಿಲ್ 22ರಂದು ನಡೆದಿರುವ ಕಳ್ಳತನ ಪ್ರಕರಣ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಅಮೆರಿಕಾದಲ್ಲಿ ವೈದ್ಯೆ ಆಗಿರುವ ಶ್ರೀದೇವಿ ಎಂಬುವವರ ಚಿನ್ನಾಭರಣ ಕಳ್ಳತನ ಆಗಿದೆ. ಸುಮಾರು ಒಂದು ಕೋಟಿ ಮೌಲ್ಯದ 750 ಗ್ರಾಂ ಚಿನ್ನಾಭರಣ ಕಳ್ಳತನ ಆಗಿದೆ. ಪರಿಚಯಸ್ತರೆ ಚಿನ್ನಾಭರಣವನ್ನು ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಮೆರಿಕಾದಿಂದ ವೈದ್ಯೆ ಶ್ರೀದೇವಿ ಅಕ್ಕನ ಮಗನ ಮದುವೆಗೆ ಬೆಂಗಳೂರಿಗೆ ಬಂದಿದ್ದರು. ಏಪ್ರಿಲ್ 22ರಂದು ಶ್ರೀದೇವಿ ಆರತಕ್ಷತೆ ಕಾರ್ಯಕ್ರಮಕ್ಕೆ ಬಂದಿದ್ದರು. ತಮ್ಮ ರೂಮ್ ಲಾಕ್ ಮಾಡಿ ಶ್ರೀದೇವಿ ಆರತಕ್ಷತೆಗೆ ಹೋಗಿದ್ದಾರೆ. ಬಳಿಕ ರಿಸೆಪ್ಶನ್ ಮುಗಿಸಿ ಬರುವಷ್ಟರಲ್ಲಿ ರೂಮ್ನಲ್ಲಿ ಇದ್ದಂತಹ ಚಿನ್ನಾಭರಣ ಕಳ್ಳತನ ಆಗಿದೆ. ಘಟನೆ ಸಂಭಂದ ಅವಲಹಳ್ಳಿ ಠಾಣೆಗೆ ವೈದ್ಯೆ ಶ್ರೀದೇವಿ ದೂರು ನೀಡಿದ್ದಾರೆ. ಕೆಲಸದಾಕೆಯ ಮೇಲೆ…

Read More