Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ 4ನೇ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಕೆಎಸ್ಆರ್ಟಿಸಿ ಬಸ್ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುತ್ತಿತ್ತು. ಈ ವೇಳೆ ಎದುರಿಗೆ ಬಂದ ಖಾಸಗಿ ಬಸ್ ಬೆಟ್ಟದ 4ನೇ ತಿರುವಿನಲ್ಲಿ ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದಿವೆ. ಈ ಒಂದು ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಾವಣಗೆರೆ : ರಾಜ್ಯದ SC, ST ಯವರಿಗೆ ನಿವೇಶನ ಕೊಡುವ ಸ್ಕೀಮ್ಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಎಲ್ಲೆಲ್ಲಿ ಸರ್ಕಾರಿ ಜಾಗಗಳಿವೆ ಅವುಗಳನ್ನು ಗುರುತಿಸಿ ಅಭಿವೃದ್ಧಿ ಮಾಡಿ, ಸೈಟ್ ಕೊಡುವ ಕೆಲಸ ಮಾಡುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೋಳಿ ತಿಳಿಸಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು, ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಒಳ್ಳೆಯ ಬಜೆಟ್ ನಿರೀಕ್ಷೆ ಮಾಡಿದ್ದೇವೆ. ನಿಂದ ಇಡೀ ರಾಜ್ಯಕ್ಕೆ ಒಳ್ಳೆಯದಾಗಲಿದೆ. ಸಾಮಾನ್ಯವಾಗಿ ಬಜೆಟ್ನಲ್ಲಿ 10 ರಿಂದ 20 ಸಾವಿರ ಕೋಟಿಯಷ್ಟು ಪ್ರತಿ ವರ್ಷ ಹೆಚ್ಚಾಗುತ್ತದೆ. ಇದು ರಾಜ್ಯದ ಅಭಿವೃದ್ಧಿಗೆ ನೆರವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದರು.
ಬೆಂಗಳೂರು ಜನತೆ ಗಮನಕ್ಕೆ : ನಿರ್ವಹಣಾ ಕಾಮಗಾರಿ ಹಿನ್ನೆಲೆ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಬೆಂಗಳೂರು : ಬೆಸ್ಕಾಂ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರಿನ ವಿವಿಧೆಡೆ ವಿದ್ಯುತ್ ಸರಬರಾಜಲ್ಲಿ ವ್ಯತ್ಯಯವಾಗಲಿದೆ. ಹೀಗಾಗಿ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ತುಮಕೂರಿನ ಶಿರಾ ಹಾಗೂ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿಯೂ ನಿರ್ವಹಣಾ ಕಾಮಗಾರಿ ಹಿನ್ನೆಲೆ ವಿದ್ಯುತ್ ಸರಬರಾಜಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಲಾಗಿದೆ. ಜಾಲಹಳ್ಳಿ ವ್ಯಾಪ್ತಿಯ ಡಿಬಿ ಸಂದ್ರ 2ನೇ ಮತ್ತು 4ನೇ ಬ್ಲಾಕ್, ಜೆಬಿ ಕಾವಲ್ ಟ್ರೀ ಪಾರ್ಕ್, ಗಂಗಮ್ಮ ಸರ್ಕಲ್, ಕಮ್ಮಗೊಂಡನಹಳ್ಳಿ, ಬಿಇಎಲ್ ಉತ್ತರ ಮತ್ತು ದಕ್ಷಿಣ ಕಾಲೋನಿ, ಬಾಹುಬಲಿ ನಗರ, ಬ್ಲೂಮ್ಫೀಲ್ಡ್ ಗಾರ್ಡನ್, ರಾಮಚಂದ್ರಾಪುರ, ಎಚ್ಎಂಟಿ ಇಂಡಸ್ಟ್ರಿಯಲ್ ಎಸ್ಟೇಟ್, ಪ್ರೆಸ್ಟೀಜ್ ವೆಲ್ಲಿಂಗ್ಟನ್, ಪ್ರೆಸ್ಟೀಜ್ ಕೆನ್ಸಿಂಗ್ಟನ್, ಚಾಮುಂಡೇಶ್ವರಿ ಲೇಔಟ್, ನಂಜಪ್ಪ ಲೇಔಟ್ಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ವಿದ್ಯುತ್ ಸರಬರಾಜಲ್ಲಿ ವ್ಯತ್ಯವಾಗಲಿದೆ. ದೊಮ್ಮಲೂರು ವ್ಯಾಪ್ತಿಯ ದೊಮ್ಮಲೂರು 2ನೇ ಹಂತ, ಕೋಡಿಹಳ್ಳಿ, ಯೋಗಾನಂದ ಲೇಔಟ್, ಪರಮಹಂಸ ರಸ್ತೆ, ಧೂಪನಹಳ್ಳಿ, ಎಚ್ಎಎಲ್ 2ನೇ…
ನವದೆಹಲಿ : ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಪ್ರೀಂ ಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಒಂದು ವಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ನೋಟಿಸ್ ನೀಡಿದೆ. ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರ್ಜಿ ವಿಚಾರಣೆ ನಡೆಸಿ ಸಿಬಿಐಗೆ ನೋಟಿಸ್ ನೀಡಿದೆ. ಒಂದು ವಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನೆಸಿ ವಿನಯ್ ಕುಲಕರ್ಣಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಸಿಬಿಐ ಗೆ ನೋಟಿಸ್ ನೀಡಿದೆ.
ಬೆಂಗಳೂರು : RTO ಇಲಾಖೆಯಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು ತಪಾಸಣೆ ಮಾಡದೇ ಸಾವಿರಾರು ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ (FC) ಕೊಡಲಾಗಿದೆ ಎನ್ನುವ ಗಂಭೀರವಾದ ಆರೋಪ ಕೇಳಿ ಬಂದಿದೆ. ಬೆಂಗಳೂರ್ ನಗರ ಬೆಂಗಳೂರು ಕೇಂದ್ರ ಸೇರಿದಂತೆ ಕೋರಮಂಗಲ ಆರ್ ಟಿ ಓ ಕಚೇರಿಯಲ್ಲಿ ವೆಹಿಕಲ್ ಇನ್ಸ್ಪೆಕ್ಟರ್ ರಿಂದ ಫಿಟ್ನೆಸ್ ಸರ್ಟಿಫಿಕೇಟ್ ನೀಡಿದ್ದಾರೆ. ದಾಖಲೆ ಸಮೇತ ವಕೀಲ ನಟರಾಜ್ ಎಂಬವರು ಇದೀಗ ಆರ್ಟಿಓ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಹೊರ ರಾಜ್ಯದ ಒಟ್ಟು 10,000 22 ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ಕೊಡಲಾಗಿದೆ ತಪಾಸಣೆ ಮಾಡದೇ ಅಧಿಕಾರಿಗಳು ಫಿಟ್ನೆಸ್ ಸರ್ಟಿಫಿಕೇಟ್ ಮಾಡಿ ಕೊಟ್ಟಿದ್ದಾರೆ. ಮಹಾರಾಷ್ಟ್ರ ಕೇರಳ ಗುಜರಾತ್ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ನೀಡಿದ್ದಾರೆ ಎಂದು ವಕೀಲ ನಟರಾಜ್ ಅವರು ಆರೋಪಿಸಿದ್ದಾರೆ. ಬೆಂಗಳೂರು ನಗರ ಬೆಂಗಳೂರು ಸೆಂಟ್ರಲ್ ಸೇರಿದಂತೆ ಆರ್ ಟಿ ಓ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಅಧಿಕಾರಿಗಳು ತಮಗೆ ಮನಸ್ಸು ಇಚ್ಛೆ ಸುಮಾರು 10000ಕ್ಕೂ ಹೆಚ್ಚು ವಾಹನಗಳಿಗೆ ತಪಾಸಣೆ ಮಾಡದೇ ಫಿಟ್ನೆಸ್ ಸರ್ಟಿಫಿಕೇಟ್ ಕೊಟ್ಟಿದ್ದಾರೆ.…
ಬೆಂಗಳೂರು : ದಿವಂಗತ ದೇವರಾಜ್ ಅರಸು ಅವರ ಬಳಿಕ ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿಎಂ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ಕಳೆದ ಜನವರಿ 7ರಂದು ದೇವರಾಜ್ ಅರಸು ಅವರ ದಾಖಲೆಯನ್ನು ಮುರಿದು ಹೊಸ ದಾಖಲೆ ಸಹ ಬರೆದಿದ್ದಾರೆ. ಅಷ್ಟೆ ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳು ಹಲವು ಹೆಸರಿನಿಂದ ಕರೆಯುತ್ತಾರೆ. ಕ್ಷೀರ ಭಾಗ್ಯ ಜಾರಿ ಮಾಡಿದಾಗ ಕ್ಷೀರ ರಾಮಯ್ಯ, ಅಕ್ಷರರಾಮಯ್ಯ ಹಾಗೂ ಟಗರು ಸಿದ್ದರಾಮಯ್ಯ ಎಂತಲ್ಲ ಸಿಎಂ ಸಿದ್ದರಾಮಯ್ಯ ಪ್ರಸಿದ್ಧಿ ಪಡೆದಿದ್ದಾರೆ. ಇದೀಗ ಮೇಕಪ್ ಆರ್ಟಿಸ್ಟ್ ಒಬ್ಬ ಸಿಎಂ ಸಿದ್ದರಾಮಯ್ಯ ಅವರ ಪ್ರತಿರೂಪವನ್ನು ಪ್ರಾಸ್ತಟಿಕ್ ಸಿಲಿಕಾನ್ ಹ್ಯಾಂಡ್ ನಲ್ಲಿ ರೆಡಿ ಮಾಡಿದ್ದಾನೆ. ಈ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲಾಗುತ್ತಿದೆ. ಇನ್ಸ್ಟಾಗ್ರಾಮ್ ನಲ್ಲಿ siddu.makeup ಎಂಬ ಕಲಾವಿದನ ಖಾತೆಯಲ್ಲಿ ಈ ಒಂದು ಸಿಎಂ ಸಿದ್ದರಾಮಯ್ಯ ಅವರ ಸ್ಟ್ಯಾಚು ಮಾಡಿ ವಿಡಿಯೋ ಹರಿಬಿಟ್ಟಿದ್ದಾನೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಈ ಒಂದು ಸ್ಟ್ಯಾಚು ಭಾರಿ ವೈರಲ್ ಆಗುತ್ತಿದೆ.
ಶಿವಮೊಗ್ಗ : ನಿನ್ನೆ ರಾತ್ರಿ ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರು ಗ್ರಾಮದಲ್ಲಿ ನಡೆದಿದೆ. ಮೃತನನ್ನು ಶಿವಮೊಗ್ಗದ ಹೊಸಮನೆ ಬಡಾವಣೆ 6ನೇ ತಿರುವಿನ ನಿವಾಸಿ ಶ್ರೀನಿವಾಸ್ (36) ಎಂದು ಗುರುತಿಸಲಾಗಿದೆ. ಶ್ರೀನಿವಾಸ್ ಗಾರೆ ಕೆಲಸ ಮಾಡುತ್ತಿದ್ದ. ಗಾಜನೂರಿನಲ್ಲೂ ಸಹ ಗಾರೆ ಕೆಲಸಕ್ಕೆ ಹೋಗಿದ್ದ ಈತ ಕಳೆದ ಮೂರು ದಿನಗಳಿಂದ ಅಲ್ಲಿಯೇ ಇದ್ದ. ನಿನ್ನೆ ರಾತ್ರಿ ಗಾಜನೂರು ಗ್ರಾಮದ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಪಕ್ಕದಲ್ಲಿ ಆತ ಇನ್ನೋರ್ವನ ಜೊತೆ ಮದ್ಯ ಸೇವಿಸುತ್ತ ಕುಳಿತಿರುವುದನ್ನು ನೋಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಯಾವ ಕಾರಣಕ್ಕೆ ಕೊಲೆ ನಡೆದಿದೆ. ಕೊಲೆ ಮಾಡಿರುವುದು ಯಾರೆಂಬುದು ಇನ್ನೂ ತಿಳಿದು ಬಂದಿಲ್ಲ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಿನ್ನೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ರನ್ನು ಏರ್ಪೋರ್ಟ್ ನಲ್ಲಿಯೇ ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದರು. ಇದೀಗ ಬೆಂಗಳೂರಿನಲ್ಲಿ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನ ಅರೆಸ್ಟ್ ಮಾಡಿದ್ದು ಮಲಯಾಳಿ ಅಜಿತ್ ಎಂಬ ಆರೋಪಿಯನ್ನ ಅರೆಸ್ಟ್ ಮಾಡಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ A20 ಆರೋಪಿಯಾಗಿರುವ ಮಲಯಾಳಿ ಅಜಿತ್, ನಿನ್ನೆ ಅಜಿತ್ ಜಾಮೀನು ರದ್ದುಪಡಿಸಿ ಕೋರ್ಟ್ ಸಿಐಡಿ ವಶಕ್ಕೆ ನೀಡಿತ್ತು.
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿಯ ಮೇಲೆ ಚಿರತೆ ದಾಳಿ ಮಾಡಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪುನರ್ವಸತಿ ಕೇಂದ್ರದಲ್ಲಿ ಈ ಒಂದು ಘಟನೆ ನಡೆದಿದೆ. ಉದ್ಯಾನವನದ ಪ್ರಾಣಿ ಪಾಲಕ ಶಾಂತಪ್ಪ ಮೇಲೆ ಚಿರತೆ ದಾಳಿ ಮಾಡಿದೆ. ಇಂದು ಬೆಳಿಗ್ಗೆ 8.30 ಕ್ಕೆ ಎಂದಿನಂತೆ ಶಾಂತಪ್ಪ ಕೆಲಸಕ್ಕೆ ಬಂದಿದ್ದ ಚಿರತೆಯ ಕೇಜುಗಳನ್ನು ಸ್ವಚ್ಛ ಮಾಡುತ್ತಿದ್ದಾಗ ಏಕಏಕಿ ಚಿರತೆ ದಾಳಿ ಮಾಡಿದೆ. ಪ್ರಾಣಿ ಪಾಲಕ ಶಾಂತಪ್ಪ ಮುಖ ಮತ್ತು ಕತ್ತಿನ ಭಾಗಕ್ಕೆ ಗಂಭೀರವಾದಗಳಾಗಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಗಣಿಯ ಖಾಸಗಿ ಆಸ್ಪತ್ರೆಯಲ್ಲಿ ಶಾಂತಪ್ಪ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್ಸಿಬಿ ಪಂದ್ಯಕ್ಕೆ ನಿನ್ನ ನಡೆದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಸರ್ಕಾರ ಅನುಮತಿ ನೀಡಿದ್ದು ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ ಪ್ರೇಕ್ಷಕರ ಸುರಕ್ಷತೆಗೆ ಪ್ರಮುಖ ಆದ್ಯತೆ ಕೊಡಬೇಕು ಎಂದು ತಿಳಿಸಿದರು. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು ನ್ಯಾಯಮೂರ್ತಿ ಕುನ್ಹಾ ಅವರ ಶಿಫಾರಸುಗಳು ಅನುಷ್ಠಾನ ಆಗಬೇಕು ಸೆಲೆಬ್ರೇಶನ್ ಅನುಮತಿ ನೀಡವ ಎನ್ನುವುದರ ಕುರಿತು ಯೋಚಿಸುತ್ತೇವೆ . ಹಾಗಾಗಿ ಪಂದ್ಯ ಆರಂಭಕ್ಕೂ ಮುನ್ನ ಸುರಕ್ಷತಾ ಕ್ರಮ ಕೈಗೊಳ್ಳಬೇಕು. ಸಮಯ ನೀಡಿ ಪಂದ್ಯಗಳು ಆರಂಭ ಮಾಡುವುದಕ್ಕೆ ಮುಂಚೆ ಇಂತಹ ಕ್ರಮಗಳು ಆಗಬೇಕು ಎಂದು ಈಗಾಗಲೇ ಸೂಚನೆ ಕೊಟ್ಟಿದ್ದೇವೆ ಎಂದು ತಿಳಿಸಿದರು. ಅದಕ್ಕಾಗಿ ಈಗಾಗಲೇ ಒಂದು ಸಮಿತಿ ಕೂಡ ರಚನೆ ಮಾಡಲಾಗಿದೆ ಅದರಲ್ಲಿ ಜಿಬಿಎ ಚೀಫ್ ಕಮಿಷನರ್ ಮಹೇಶ್ವರರಾವ್ ಹಾಗೂ ಪೊಲೀಸ್ ಕಮಿಷನರ್ ಸೀಮಂತ ಕುಮಾರ್ ಸಿಂಗ್ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆ ಗಳನ್ನು ಸೇರಿಸಿ ಒಂದು ಸಮಿತಿ ಮಾಡಲಾಗಿದೆ. ಒಂದಕ್ಕಿನ…














