Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಸುರಿದ ದಿಢೀರ್ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿ ಸಹಿತ ಸುರಿದ ಮಳೆಯ ಆರ್ಭಟಕ್ಕೆ ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಸದಾಶಿವನಗರದಲ್ಲಿ ಬೃಹತ್ ಮರವೊಂದು ಬುಡಸಮೇತ ಉರುಳಿ ಬಿದ್ದಿದ್ದು, ಭಾರೀ ಹಾನಿ ಸಂಭವಿಸಿದೆ. ಮಳೆಯ ತೀವ್ರತೆಗೆ ರಸ್ತೆ ಬದಿಯಲ್ಲಿದ್ದ ದೈತ್ಯ ಮರವು ರಸ್ತೆಗೆ ಧರೆಗುರುಳಿದ ಪರಿಣಾಮ, ಅಲ್ಲಿಯೇ ನಿಲ್ಲಿಸಲಾಗಿದ್ದ ಐಷಾರಾಮಿ ಕಾರೊಂದರ ಮೇಲೆ ಬಿದ್ದಿದೆ. ಮರದ ಭಾರಕ್ಕೆ ಸಿಲುಕಿದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಜಖಂಗೊಂಡಿದೆ. ಅದೃಷ್ಟವಶಾತ್ ಘಟನೆ ನಡೆದ ಸಂದರ್ಭದಲ್ಲಿ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಪ್ರಾಣಾಪಾಯವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ. ಇನ್ನು ಮರ ಬಿದ್ದ ರಭಸಕ್ಕೆ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬವೂ ಸಹ ಮುರಿದು ನೆಲಕ್ಕೆ ಬಿದ್ದಿದೆ. ಪರಿಣಾಮವಾಗಿ ಇಡೀ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸ್ಥಳೀಯ ನಿವಾಸಿಗಳು ಕತ್ತಲೆಯಲ್ಲಿ ಕಳೆಯುವಂತಾಯಿತು. ಅಷ್ಟೇ ಅಲ್ಲದೆ, ಪ್ರಮುಖ ರಸ್ತೆಯಲ್ಲೇ ಮರ ಮತ್ತು ವಿದ್ಯುತ್ ಕಂಬ ಬಿದ್ದಿದ್ದರಿಂದ ಸದಾಶಿವನಗರದ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ…

Read More

ಬೆಂಗಳೂರು: ರಾಜ್ಯದ ಸಾರಿಗೆ ನೌಕರರು ತಮ್ಮ ವಿವಿಧ ಬಾಕಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಬಾರಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ನೌಕರರ ಒಕ್ಕೂಟಗಳು ಎಚ್ಚರಿಕೆ ನೀಡಿವೆ. ಬುಧವಾರದಿಂದಲೇ ಮುಷ್ಕರ ಆರಂಭವಾಗುತ್ತಿರುವುದರಿಂದ ರಾಜಧಾನಿಯ ಬಿಎಂಟಿಸಿ ಹಾಗೂ ರಾಜ್ಯದ ಪ್ರಮುಖ ಸಾರಿಗೆ ಸಂಸ್ಥೆಯಾದ ಕೆಎಸ್​ಆರ್​ಟಿಸಿ ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳ ಬಸ್ ಸೇವೆಗಳು ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಇದರಿಂದಾಗಿ ಪ್ರತಿನಿತ್ಯ ಸಾರಿಗೆ ಬಸ್‌ಗಳನ್ನೇ ಆಶ್ರಯಿಸಿರುವ ಲಕ್ಷಾಂತರ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ಸಾರಿಗೆ ನೌಕರರ ಈ ದಿಢೀರ್ ಹೋರಾಟಕ್ಕೆ ಸೆಡ್ಡು ಹೊಡೆಯಲು ಸಾರಿಗೆ ಇಲಾಖೆ ಹಾಗೂ ಸರ್ಕಾರ ಜಂಟಿಯಾಗಿ ವಿಶೇಷ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ನೌಕರರು ಮುಷ್ಕರ ನಡೆಸಿದರೂ ಸಹ ಸಾರ್ವಜನಿಕ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ಇಲಾಖೆಯು ‘ಪ್ಲಾನ್ ಬಿ’ ಸಿದ್ಧಪಡಿಸಿಕೊಂಡಿದೆ. ಪ್ರತಿಭಟನೆಯ ನಡುವೆಯೂ ಬಹುತೇಕ ಸಾರಿಗೆ ಬಸ್‌ಗಳನ್ನು ರಸ್ತೆಗೆ ಇಳಿಸಲು…

Read More

ಬೆಂಗಳೂರು: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಬಿ. ರಮೇಶ ಬಂಡಿಸಿದ್ದೇಗೌಡ ವಿರುದ್ಧ ಚುನಾವಣಾ ಆಯೋಗಕ್ಕೆ ಗಂಭೀರ ದೂರು ಸಲ್ಲಿಕೆಯಾಗಿದೆ. ಶಾಸಕರು ತಮ್ಮ ಆಸ್ತಿ ವಿವರವನ್ನು ಮರೆಮಾಚಿದ್ದಾರೆ ಎಂದು ಆರೋಪಿಸಿ ‘ಲೈಕ್ಸ್ ಗ್ರೂಪ್’ ವಕೀಲರು ಮತ್ತು ಸಾಲಿಸಿಟರ್‌ಗಳ ಕಾನೂನು ತಂಡದ ಮೂಲಕ ಮೈಸೂರಿನ ನಾಗರಿಕ ದೂರುದಾರರಾದ ಎಂ.ಡಿ. ಆದಿಶ್ ಸಾಗರ್ ಅವರು ಇಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಿಗೆ (ಸಿಇಒ) ವಿವರವಾದ ದೂರನ್ನು ಸಲ್ಲಿಸಿದ್ದಾರೆ. ದೂರಿನಲ್ಲಿ ಶಾಸಕ ರಮೇಶ ಬಂಡಿಸಿದ್ದೇಗೌಡ ಅವರು 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸಲ್ಲಿಸಿದ್ದ ಅಧಿಕೃತ ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಸ್ಥಿರ ಆಸ್ತಿಗಳು ಮತ್ತು ಅದಕ್ಕೆ ಸಂಬಂಧಿಸಿದ ಸಾಲ ಹಾಗೂ ಹೊಣೆಗಾರಿಕೆಗಳ ಬಗ್ಗೆ ಸುಳ್ಳು ಮತ್ತು ಅಪೂರ್ಣ ಮಾಹಿತಿ ನೀಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಲಾಗಿದೆ. ಕಾನೂನುಬದ್ಧವಾಗಿ ಆಸ್ತಿ ವಿವರಗಳನ್ನು ಬಹಿರಂಗಪಡಿಸದೆ ಇರುವುದು ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರುದಾರರು ತಿಳಿಸಿದ್ದಾರೆ. ಶಾಸಕರು ಸಲ್ಲಿಸಿದ ಚುನಾವಣಾ ಅಫಿಡವಿಟ್‌ನ ಪ್ರತಿ ಮತ್ತು ಚುನಾವಣಾ ಆಯೋಗದ ಅಭ್ಯರ್ಥಿಯ ವಿವರಗಳ ದಾಖಲೆ. ಮೈಸೂರು ನಗರ…

Read More

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಬಾಕಿ ಇರುವ ವೇತನ ಪರಿಷ್ಕರಣೆಗೆ ಆಗ್ರಹಿಸಿ ಮೇ 20ರಂದು ರಾಜ್ಯಾದ್ಯಂತ ಮುಷ್ಕರ ನಡೆಸಲು ಸಾರಿಗೆ ನೌಕರರು ಸಜ್ಜಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಷ್ಕರವನ್ನು ತಡೆಯಲು ಸರ್ಕಾರ ನಡೆಸಿದ ಸಂಧಾನ ಸಭೆಯು ಸದ್ಯಕ್ಕೆ ವಿಫಲಗೊಂಡಿದೆ ಎಂದು ತಿಳಿದುಬಂದಿದೆ. ಇದರಿಂದಾಗಿ ಮೇ 20ರಂದು ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆ ಸ್ತಬ್ಧಗೊಳ್ಳುವ ಆತಂಕ ಎದುರಾಗಿದೆ. ಕಳೆದ ಕೆಲವು ದಿನಗಳಿಂದ ಸಾರಿಗೆ ನೌಕರರ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳ ನಡುವೆ ಮಾತುಕತೆ ನಡೆದಿತ್ತು. ಆದರೆ, ನೌಕರರ ಪ್ರಮುಖ ಬೇಡಿಕೆಗಳಾದ ವೇತನ ಪರಿಷ್ಕರಣೆ ಮತ್ತು ಬಾಕಿ ಸೌಲಭ್ಯಗಳ ವಿತರಣೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಯಾವುದೇ ಸ್ಪಷ್ಟ ಹಾಗೂ ಸಕಾರಾತ್ಮಕ ಭರವಸೆ ಸಿಗದ ಕಾರಣ ಈ ಸಂಧಾನ ಸಭೆಯು ಯಾವುದೇ ತಾರ್ಕಿಕ ಅಂತ್ಯ ಕಾಣದೆ ಮುಕ್ತಾಯಗೊಂಡಿದೆ ಎನ್ನಲಾಗಿದೆ. ಕಾದು ನೋಡುವ ತಂತ್ರಕ್ಕೆ ಮುಂದಾದ ಮುಖಂಡರು ಸಂಧಾನ ಸಭೆ ವಿಫಲವಾಗಿದ್ದರೂ, ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ಮುಖಂಡರು ಸದ್ಯಕ್ಕೆ ‘ಕಾದು ನೋಡುವ ತಂತ್ರ’ಕ್ಕೆ…

Read More

ಬಿಹಾರ್ : ಬಿಹಾರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಖಗಾರಿಯಾದಲ್ಲಿ ನಡೆದ ರಸ್ತೆ ಮೂರು ವಾಹನಗಳ ಮಧ್ಯ ನಡೆದ ಸರಣಿ ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾನ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-31 ರಲ್ಲಿ ಈ ಅಪಘಾತ ಸಂಭವಿಸಿದೆ. ಥಾಥಾ ಗ್ರಾಮದ ಬಳಿ ಸುಮಾರು 140 mph (ಗಂಟೆಗೆ 150 ಕಿಮೀ) ವೇಗದಲ್ಲಿ ಚಲಿಸುತ್ತಿದ್ದ ಟ್ರಕ್ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಆಟೋದಲ್ಲಿದ್ದವರೆಲ್ಲರೂ ರಸ್ತೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಮೃತರಲ್ಲಿ ಎರಡು ತಿಂಗಳ ಶಿಶು, ಒಬ್ಬ ಮಹಿಳೆ, ಅಪ್ರಾಪ್ತ ಬಾಲಕ ಮತ್ತು ನಾಲ್ವರು ಪುರುಷರು ಸೇರಿದ್ದಾರೆ. ಈ ಘಟನೆಯು ಆ ಪ್ರದೇಶದಲ್ಲಿ ಅವ್ಯವಸ್ಥೆ ಮತ್ತು ಆಕ್ರೋಶಕ್ಕೆ ಕಾರಣವಾಯಿತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಆಟೋರಿಕ್ಷಾ ಸವಾರರು ಯಾವುದೋ ಕೆಲಸದ ನಿಮಿತ್ತ ಪ್ರಯಾಣಿಸುತ್ತಿದ್ದರು. NH-31 ರಲ್ಲಿ ಥಾಥಾ ಬಳಿ ವಿರುದ್ಧ ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ…

Read More

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿ, ಇನ್ನೂ ದಾಖಲೆ ಪರಿಶೀಲನೆ ಮಾಡಿಕೊಳ್ಳದ ಅಭ್ಯರ್ಥಿಗಳು ಅಗತ್ಯ ಮೂಲ ದಾಖಲೆಗಳ ಸಮೇತ ಹತ್ತಿರದ ಸರ್ಕಾರಿ ಪಿಯು ಕಾಲೇಜುಗಳಿಗೆ ಮೇ 21ರೊಳಗೆ ಹೋಗಿ ಪರಿಶೀಲನೆ ಮಾಡಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ. ಅಭ್ಯರ್ಥಿಗಳ ಕ್ಲೇಮ್ಸ್ ಸರ್ಟಿಫಿಕೇಟ್ ನಲ್ಲಿ ಕ್ಲೇಮ್ಸ್ ನಾಟ್ ವೆರಿಫೈಯ್ಡ್ ಎಂದು ಮುದ್ರಿತವಾಗಿದ್ದಲ್ಲಿ ಅಂತಹವರು ಮಾತ್ರ ಸರ್ಕಾರಿ ಪಿಯು ಕಾಲೇಜಿಗೆ ಹೋಗಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಈ ಹಿಂದೆ ಅವಕಾಶ ನೀಡಿದ್ದಾಗಲೂ ಕೆಲವು ಅಭ್ಯರ್ಥಿಗಳು ತಮ್ಮ ಕಾಲೇಜುಗಳಲ್ಲಿ ದಾಖಲೆ ಪರಿಶೀಲನೆ ಮಾಡಿಕೊಂಡಿರುವುದಿಲ್ಲ. ಹೀಗಾಗಿ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಕ್ಲೇಮ್ಡ್ ಮತ್ತು ವೆರಿಫೈಯ್ಡ್ ಎಂದು ಅರ್ಜಿಯಲ್ಲಿ ಮುದ್ರಿತವಾಗಿರುವವರು ದಾಖಲೆ ಪರಿಶೀಲನೆಗೆ ಹೋಗುವ ಅಗತ್ಯ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಕನ್ನಡ ಮಾಧ್ಯಮ ವ್ಯಾಸಂಗ, ಗ್ರಾಮೀಣ ವ್ಯಾಸಂಗ, ಭಾಷಾ ಅಲ್ಪಸಂಖ್ಯಾತ, ಧಾರ್ಮಿಕ ಅಲ್ಪಸಂಖ್ಯಾತ ಮೀಸಲಾತಿ ಕ್ಲೇಮ್ ಮಾಡಿ, ಕ್ಲೇಮ್ಸ್ ಸರ್ಟಿಫಿಕೇಟ್ ನಲ್ಲಿ ನಾಟ್ ವೆರಿಫೈಯ್ಡ್ (Not verified) ಎಂದು ಮುದ್ರಿತವಾಗಿರುವವರು…

Read More

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದ್ದು, ನಗರದ ಪ್ರಮುಖ ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಬೆನ್ನಲ್ಲೇ, ಸಿಲಿಕಾನ್ ಸಿಟಿಯಲ್ಲಿ ಮಳೆರಾಯ ಅಬ್ಬರಿಸತೊಡಗಿದ್ದಾನೆ. ದಿಢೀರ್‌ ಎಂದು ಸುರಿದ ಈ ಭಾರಿ ಮಳೆಯಿಂದಾಗಿ ವಾಹನ ಸವಾರರು ಮತ್ತು ಸಾರ್ವಜನಿಕರು ಪರದಾಡುವಂತಾಗಿದೆ. ನಗರದ ಹೃದಯಭಾಗವಾದ ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ಟೌನ್ ಹಾಲ್, ಕಾರ್ಪೋರೇಶನ್, ಶಾಂತಿನಗರ, ವಸಂತನಗರ ಮತ್ತು ಸದಾಶಿವನಗರ ಸೇರಿದಂತೆ ಮಧ್ಯ ಬೆಂಗಳೂರಿನ ಬಹುತೇಕ ಪ್ರದೇಶಗಳು ಮಳೆಯಿಂದ ಸಂಪೂರ್ಣವಾಗಿ ತೊಯ್ದು ತೊಪ್ಪೆಯಾಗಿವೆ. ಮಳೆಯ ತೀವ್ರತೆಗೆ ರಸ್ತೆಗಳಲ್ಲಿ ನೀರು ನಿಂತು ಸಂಚಾರ ದಟ್ಟಣೆ ಉಂಟಾಗಿದ್ದು, ಕಚೇರಿಗಳಿಂದ ಮನೆಗೆ ಮರಳುತ್ತಿದ್ದ ಸಾರ್ವಜನಿಕರು ಹೈರಾಣಾಗಿದ್ದಾರೆ. ಮತ್ತೊಂದೆಡೆ ಮಲ್ಲೇಶ್ವರಂ, ಶೇಷಾದ್ರಿಪುರಂ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್, ವಿಜಯನಗರ, ಸುಬ್ರಮಣ್ಯನಗರ, ನಾಗರಬಾವಿ, ಮೂಡಲಪಾಳ್ಯ ಹಾಗೂ ಲಗ್ಗೆರೆ ಸೇರಿದಂತೆ ಪಶ್ಚಿಮ ಮತ್ತು ಉತ್ತರ ಬೆಂಗಳೂರಿನ…

Read More

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಮೆಸ್ಕಾಂ ಸಿಬ್ಬಂದಿ ನಿರ್ಲಕ್ಷಕ್ಕೆ ರೈತರೊಬ್ಬರು ಬಲಿಯಾಗಿದ್ದಾರೆ ತುಂಡಾಗಿ ಬಿದ್ದಿದ್ದ ನಿರಂತರ ಜ್ಯೋತಿ ತಂತಿ ತಗುಲಿ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರಡಿಹಳ್ಳಿಯಲ್ಲಿ ನಡೆದಿದೆ. ಹನುಮಂತಪ್ಪ(45) ಎನ್ನುವ ರೈತ ಸಾವನ್ನಪ್ಪಿದ್ದು,, ತುಂಡಾಗಿ ಬಿದ್ದಿದ್ದ ನಿರಂತರ ಜ್ಯೋತಿ ತಂತಿ ತುಳಿದು ರೈತ ಹನುಮಂತಪ್ಪ ಸಾವನಪ್ಪಿದ್ದಾರೆ. ಇದೀಗ ಹನುಮಂತಪ್ಪನ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ದು ಕಡೂರು ಮೆಸ್ಕಾಂ ಕಚೇರಿ ಮುಂದೆ ಮೃತ ಹನುಮಂತಪ್ಪನ ಸಂಬಂಧಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು :ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಪ್ರಮುಖ ಸುದ್ದಿಯೊಂದನ್ನು ನೀಡಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮತ್ತು ಪೂರ್ವ ಮುಂಗಾರು ಮಳೆಯು ಭಾರಿ ಅವಾಂತರಗಳನ್ನು ಸೃಷ್ಟಿಸುತ್ತಿರುವ ಬೆನ್ನಲ್ಲೇ, ಜೂನ್ ಮೊದಲ ವಾರದಲ್ಲಿಯೇ ನೈರುತ್ಯ ಮಾನ್ಸೂನ್ (ಮುಂಗಾರು ಮಳೆ) ಅಧಿಕೃತವಾಗಿ ರಾಜ್ಯವನ್ನು ಪ್ರವೇಶಿಸಲಿದೆ ಎಂದು ಬೆಂಗಳೂರಿನ ಪ್ರಖ್ಯಾತ ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ. ಈ ಬಾರಿ ಮುಂಗಾರು ಸಕಾಲದಲ್ಲಿ ಆರಂಭವಾಗುತ್ತಿರುವುದು ಕೃಷಿ ಚಟುವಟಿಕೆಗಳಿಗೆ ಪೂರಕವಾಗಿದ್ದರೂ, ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ. 60 ರಿಂದ 100 ಸೆಂಟಿಮೀಟರ್ ಮಳೆ ಸಾಧ್ಯತೆ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಾಜ್ಯದಾದ್ಯಂತ ಸರಾಸರಿ 60 ರಿಂದ 100 ಸೆಂಟಿಮೀಟರ್ ನಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗಲಿದ್ದು, ಜಲಮೂಲಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುವ ನಿರೀಕ್ಷೆಯಿದೆ. ಈ ಮಳೆಯು ರೈತರ ಮೊಗದಲ್ಲಿ ಮಂದಹಾಸ ಮೂಡಿಸಲಿದ್ದರೂ, ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಭೀತಿಯನ್ನು…

Read More

ಕಲ್ಬುರ್ಗಿ, ಮೇ 18: ಕೊಡಗು ಜಿಲ್ಲೆ ದುಬಾರೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಅನಿರೀಕ್ಷಿತವಾಗಿ ಆಯ ತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಇದು ಅತ್ಯಂತ ಆಘಾತಕರ ಘಟನೆ, ಆನೆಗಳನ್ನು ಸ್ನಾನ ಮಾಡಿಸುವಾಗ ನದಿಯ ಬಳಿ ನಿಂತು ನೋಡುತ್ತಿದ್ದ ತಮಿಳುನಾಡಿನ ಪ್ರವಾಸಿ ಮಹಿಳೆ ತುಳಸಿ (33) ಈ ಅಪಘಾತದಂತಹ ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಮಗೆ ತಿಳಿಸಿದ್ದು, ಇದು ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ. ಸಾಕಾನೆಗಳಾದ ಕಂಜನ್ ಮತ್ತು ಮಾರ್ತಾಂಡ ಆನೆಗಳು ಸ್ನಾನ ಮಾಡಿಸುತ್ತಿದ್ದ ವೇಳೆ ಪರಸ್ಪರ ಕಾದಾಟ ನಡೆಸಿದ್ದು, ಮಾವುತರು ನಿಯಂತ್ರಿಸುತ್ತಿದ್ದರೂ ಮುನ್ನುಗ್ಗಿದ ಕಂಜನ್ ಆನೆ, ಮಾರ್ತಾಂಡ ಆನೆಗೆ ಗುದ್ದಿದ್ದು, ಮಾರ್ತಾಂಡ ಆಯ ತಪ್ಪಿ ಕೆಳಗೆ ಬಿದ್ದಾಗ, ಈ ಮಹಿಳೆ ಆನೆಯ…

Read More