Author: kannadanewsnow05

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿ ಹಾವಳಿ ಮುಂದುವರೆದಿದ್ದು, ಬೆಂಗಳೂರಿನ ಕಾಳನ ಅಗ್ರಹಾರದ ಎಂಎಲ್ಎ ಲೇಔಟ್ ನಲ್ಲಿ ಮಗುವಿನ ಮೇಲೆ ನಾಯಿ ದಾಳಿ ಮಾಡಿದ ಘಟನೆ ವರದಿಯಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗು ಈ ವೇಳೆ ಮಗುವಿನ ಮೇಲೆ ಬೀದಿ ನಾಯಿ ಒಂದು ದಾಳಿಗೆ ಮುಂದಾಗಿದೆ. ತಕ್ಷಣ ಮಗುವನ್ನು ತಾಯಿ ರಕ್ಷಣೆ ಮಾಡಿದ್ದಾರೆ. ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ತಾಯಿ ಮತ್ತು ಮಗು ನೆಲಕ್ಕೆ ಬಿದ್ದಿದ್ದಾರೆ. ನಿನ್ನೆ ಸಂಜೆ 7:30 ಸುಮಾರಿಗೆ ಈ ಒಂದು ಘಟನೆ ನಡೆದಿದೆ. ಬೀದಿ ನಾಯಿ ದಾಳಿ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಐವಿಎಫ್ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ಇದೀಗ ಹದ್ದಿನ ಕಣ್ಣು ಇಟ್ಟಿದೆ. ನಗರದಲ್ಲಿನ ಆಸ್ಪತ್ರೆಗಳಲ್ಲೂ ಕೂಡ ಅಂಡಾಣು ಮಾರಾಟ ದಂಧೆ ನಡೆಯುತ್ತಿದೆ. ಪ್ರಕರಣವನ್ನು ರಾಜ್ಯ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಮಹಾರಾಷ್ಟ್ರ ಆರೋಗ್ಯ ಇಲಾಖೆ ಬಳಿಕ ರಾಜ್ಯದಲ್ಲೂ ಇಲಾಖೆ ಅಲರ್ಟ್ ಆಗಿದೆ. ಮಹಾರಾಷ್ಟ್ರ ಆರೋಗ್ಯ ಇಲಾಖೆಯಿಂದ ಅಧಿಕಾರಿಗಳು ಮಾಹಿತಿ ಕೇಳಿದ್ದಾರೆ. ಅಂಡಾಣು ಮಾರಾಟ ಜಾಲದ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಹಾರಾಷ್ಟ್ರದ ಆರೋಗ್ಯ ಇಲಾಖೆಗೆ ಮಾಹಿತಿ ಕೇಳಿದ್ದಾರೆ. ಮಹಿಳೆಯರಿಗೆ ಹಣದ ಆಮಿಷ ಒಡ್ಡಿ ಅಂಡಾಣು ಹೊರ ತೆಗೆಯುತ್ತಿದ್ದ ಜಾಲ ಕಾನೂನುಬಾಹಿರವಾಗಿ ಅಂಡಾಣು ಹೊರತೆಗೆಯುತ್ತಿದ್ದ ಬೃಹತ್ ಜಾಲ ಬೆಳಕಿಗೆ ಬಂದಿದೆ. ಬೆಂಗಳೂರು, ತೆಲಂಗಾಣ, ಮಹಾರಾಷ್ಟ್ರದ, ನಾಗಪುರ, ಪುಣೆ ಹಾಗೂ ನಾಸಿಕ ಜಿಲ್ಲೆಯಲ್ಲಿ ಈ ಒಂದು ಜಾಲ ವಿಸ್ತರಿಸಿದೆ. ಅಮಾಯಕರ ಜೀವ ಅಪಾಯಕ್ಕೆ ದೂಡುತ್ತಿದ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ. ಅಂಡಾಣು ಮಾರಾಟ ದಂಧೆ ಹಿಂದೆ ಬೆಂಗಳೂರು ಹಿನ್ನೆಲೆ, ಹೀಗಾಗಿ ಸಮಗ್ರ ತನಿಖೆಗೆ ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ ಈಗಾಗಲೇ…

Read More

ಬೆಂಗಳೂರು : ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ವಂಚಿಸಿದ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವುದು ಕಡ್ಡಾಯವಲ್ಲದಿದ್ದರೂ, ಪೊಲೀಸರು ಬಂಧಿಸುತ್ತಿರುವುದಕ್ಕೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಬೆಳವಣಿಗೆಗಳನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಅತ್ಯಾಚಾರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆಯಡಿ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಹೊಕ್ಕಳ್ಳಿ ಗ್ರಾಮದ ನಿವಾಸಿ ಎಚ್‌.ಜಿ. ಗಂಗ (29) ಎಂಬಾತ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪೊಲೀಸರ ಕಾರ್ಯವೈಖರಿಗೆ ಅತೃಪ್ತಿ ವ್ಯಕ್ತಪಡಿಸಿತು. ವಿಚಾರಣೆ ವೇಳೆ ಆರೋಪಿ ಪರ ವಕೀಲರು ವಾದ ಮಂಡಿಸಿ, ಪ್ರಕರಣ ಸಂಬಂಧ ಅರ್ಜಿದಾರರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿದಾರರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣಾ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ದೂರು ದಾಖಲಿಸುವಲ್ಲಿ ದೂರುದಾರೆ 1 ವರ್ಷ 3 ತಿಂಗಳು ವಿಳಂಬ ಮಾಡಿದ್ದಾರೆ ಎಂದು ನ್ಯಾಯಪೀಠದ…

Read More

ಚೈನ್ನೈ : ತಮಿಳುನಾಡು ರಾಜಕೀಯದಲ್ಲಿ ಇದೀಗ ಕ್ಷಿಪ್ರವಾದ ರಾಜಕೀಯ ಬೆಳವಣಿಗೆ ನಡೆದಿದ್ದು, ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು, ಡಿಎಂಕೆ ಪಕ್ಷ ಸೇರಿದ್ದಾರೆ. ಹೌದು ಜಯಲಲಿತ ಆಪ್ತ ಪನ್ನೀರ್ ಸೆಲ್ವಂ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಮ್ಮುಖದಲ್ಲಿ ಡಿಎಂಕೆ ಪಕ್ಷ ಸೇರ್ಪಡೆಯಾಗಿದ್ದಾರೆ.ಪಕ್ಷದ ಬಾವುಟ ನೀಡಿ ಸ್ಟಾಲಿನ್ ಅವರು ಸೆಲ್ವಂ ಅವರನ್ನು ತಮ್ಮ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.ಚೆನ್ನೈನ ಡಿಎಂಕೆ ಪಕ್ಷದ ಕಚೇರಿಯಲ್ಲಿ ಈ ಒಂದು ಕಾರ್ಯಕ್ರಮ ನಡೆದಿದೆ. ಮಾಜಿ ಸಿಎಂ ಪನೀರ್ ಸೆಲ್ವಂ ಅವರ ಜೊತೆಗೆ ಹಲವರು ಕೂಡ ಡಿಎಂಕೆ ಪಕ್ಷ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಜಯಲಲಿತ ಅವರ ಮೆಚ್ಚಿನ ಶಿಷ್ಯ ಆಗಿದ್ದ ಪನ್ನೀರ್ ಸೆಲ್ವಂ, ಎರಡು ಬಾರಿ ಜಯಲಲಿತ ಸೂಚನೆಯಂತೆ ಸಿಎಂ ಆಗಿದ್ದರು. ಭ್ರಷ್ಟಾಚಾರ ಆರೋಪ ಬಂದಿದ್ದಾಗ ಸಿಎಂ ಆಗಿದ್ದರು. ಇದೀಗ ಜಯಲಲಿತಾ ಅವರ ವಿರೋಧಿ ಪಡೆ ಯನ್ನು ಪನ್ನೀರ್ ಸೇಲ್ವಮ್ ಸೇರ್ಪಡೆಯಾಗಿದ್ದಾರೆ. ಮೂರು ಬಾರಿ ತಮಿಳುನಾಡು ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು. ಒಂದು ಬಾರಿ ಉಪ ಮುಖ್ಯಮಂತ್ರಿ ಕೂಡ ಆಗಿದ್ದರು ಎಐಡಿಎಂಕೆಯಿಂದ ಪನ್ನೀರ್ ಸೆಲ್ವಂ…

Read More

ಮಂಗಳೂರು : ಮಂಗಳೂರಿನಲ್ಲಿ ಚೈನ್ ಲಿಂಕ್ ಹೆಸರಿನಲ್ಲಿ ವಂಚನೆ ಎಸಲಾಗಿದೆ. ಉದ್ಯೋಗ ನೀಡುತ್ತೇವೆ ಎಂದು ಹೇಳಿ ನೂರಾರು ವಿದ್ಯಾರ್ಥಿಗಳಿಗೆ ಇದೀಗ ವಂಚನೆಗೆ ಒಳಗಾಗಿದ್ದಾರೆ. ಮಹಾರಾಷ್ಟ್ರ ಮೂಲದ ವೆಕ್ಸಾನ್ ಹೆಸರಿನ ಕಂಪನಿಯಿಂದ ಈ ಒಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. BMP PVT LTD ಕಂಪನಿ ಹೆಸರಿನಲ್ಲಿ ಜಾಹೀರಾತು ನೀಡಿ ವಂಚನೆ ಎಸಲಾಗಿದೆ. ವಂಚನೆ ವಿಚಾರ ತಿಳಿದು ಪೊಲೀಸರಿಗೆ ವಿದ್ಯಾರ್ಥಿಗಳು ದೂರು ನೀಡಿದ್ದಾರೆ. ಕಂಪನಿ ಹಾಗೂ ಸಿಬ್ಬಂದಿ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದು ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಮ್ಮಂತೆ ಬೇರೆ ಯಾರಿಗೂ ಮೋಸ ಆಗಬಾರದು. ಬ್ಲೇಡ್ ಕಂಪನಿಯನ್ನು ಬಂದ್ ಮಾಡಿಸುವಂತೆ ಆಗ್ರಹಿಸಿದ್ದಾರೆ. ಪ್ರಕರಣ ದಾಖಲಾಗಿದ್ದರೂ ಕೂಡ ವೆಕ್ಸನ್ ಕಂಪನಿ ಇನ್ನೂ ಕೂಡ ಕಾರ್ಯಾಚರಣೆ ನಡೆಸುತ್ತಿದೆ. ಕುದ್ರೋಳಿ ಬಳಿಯ ಬಿರ್ವ ಕಾಂಪ್ಲೆಕ್ಸ್ ಮೂರನೇ ಫ್ಲೋರ್ನಲ್ಲಿ ಕಂಪನಿ ಕಾರ್ಯಾಚರಣೆ ನಡೆಸುತ್ತಿದೆ. ಈ ವಂಚನೆ ಹೇಗೆ ನಡೆಯುತ್ತದೆ? ಆಮಿಷ: “ಪಾರ್ಟ್ ಟೈಮ್ ಕೆಲಸ”, “ಕಡಿಮೆ…

Read More

ಬೆಂಗಳೂರು: ‘ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ’ ಎಂಬ ತಮ್ಮ ಹೇಳಿಕೆಯು ವಿವಿಧ ರೀತಿಯ ವ್ಯಾಖ್ಯಾನಗಳಿಗೆ ಎಡೆಮಾಡಿಕೊಟ್ಟ ಬೆನ್ನಲ್ಲೇ ಅದಕ್ಕೆ ಸಮಜಾಯಿಷಿ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾ‌ರ್, ‘ಹೊರೆಯಾದರೂ ಅವುಗಳನ್ನು ನಿಲ್ಲಿಸುವುದಿಲ್ಲ ಮತ್ತು ಪರಿಷ್ಕರಣೆಯನ್ನೂ ಮಾಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ. ನಿಜ, ಆದರೂ ನಾವು ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ, ಪರಿಷ್ಕರಣೆಯನ್ನೂ ಮಾಡುವುದಿಲ್ಲ’ ಎಂದು ಪುನರುಚ್ಚರಿಸಿದರು. ಅವರ ಹೇಳಿಕೆಯ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ: 1. ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ ಗ್ಯಾರಂಟಿ ಯೋಜನೆಗಳು ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ಹೊರೆಯಾಗುತ್ತಿವೆ ಎಂಬ ಟೀಕೆಗಳು ಕೇಳಿಬರುತ್ತಿದ್ದರೂ, ಯಾವುದೇ ಕಾರಣಕ್ಕೂ ಈ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಜನರ ಹಿತದೃಷ್ಟಿಯಿಂದ ಇವು ಮುಂದುವರಿಯಲಿವೆ ಎಂಬುದು ಅವರ ಭರವಸೆ. 2. ಪರಿಷ್ಕರಣೆಯೂ ಇಲ್ಲ (No Revision) ಕೆಲವು ದಿನಗಳಿಂದ “ಅರ್ಹರಲ್ಲದವರನ್ನು ಕೈಬಿಡಲಾಗುವುದು” ಅಥವಾ “ಯೋಜನೆಯ ಮಾನದಂಡಗಳನ್ನು ಬದಲಾಯಿಸಲಾಗುವುದು” ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು. ಆದರೆ, ಸದ್ಯಕ್ಕೆ ಯೋಜನೆಗಳ ಸ್ವರೂಪದಲ್ಲಿ ಯಾವುದೇ ಪರಿಷ್ಕರಣೆ ಅಥವಾ ಬದಲಾವಣೆ…

Read More

ಹಾವೇರಿ : 8500 ಲಂಚ ಸ್ವೀಕರಿಸುತ್ತಿದ್ದ ವಿಎ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಹಾವೇರಿ ತಾಲೂಕಿನ ನೆಗಳೂರಿನಲ್ಲಿ ವಿಐ ಫಕ್ಕೀರೆಶ್ ಬಾರ್ಕಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ನೆಗಳೂರಿನ ಕಚೇರಿಯಲ್ಲಿ ಬಸಾಪುರದ ರೈತ ಕರಿಯಲ್ಲಪ್ಪ ಕೆಸರಳ್ಳಿಯಿಂದ ಈತ 8500 ಲಂಚ ಸ್ವೀಕರಿಸಿದ್ದಾನೆ. ಖಾತೆ ಬದಲಾವಣೆ ಮಾಡಿಕೊಡಲು 63,000 ಲಂಚಕ್ಕೆ ಮೊದಲು ಬೇಡಿಕೆ ಇಟ್ಟಿದ್ದ. ಮೊದಲು 30,000 ಲಂಚ ಪಡೆದಿದ್ದ. ಫಕ್ಕೀರೇಶ ಬಾರ್ಕಿ, ಇಂದು 8,500 ಲಂಚ ಪಡೆಯುವಾಗ ಸಿಗಿ ಬಿದ್ದಿದ್ದಾನೆ. ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಟೀಲ್ ನೇತ್ರತ್ವದಲ್ಲಿ ಈ ಒಂದು ದಾಳಿ ನಡೆದಿದೆ.

Read More

ಕೇರಳ : ಬಹು ವಿವಾದಿತ ದಿ ಕೇರಳ ಸ್ಟೋರಿ 2 ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ ನೀಡಿದೆ. ಈ ಸಿನಿಮಾದ ಟೀಸರ್ ವಿವಾದ ಸ್ವರೂಪ ಪಡೆದುಕೊಂಡಿತ್ತು. ಒತ್ತಾಯಪೂರ್ವಕವಾಗಿ ಗೋಮಾಂಸ ಸೇವನೆ ಮಾಡಿಸುತ್ತಿರುವ ದೃಶ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣ ಹಿನ್ನೆಲೆ ಕೇರಳ ಸ್ಟೋರಿ 2 ಸಿನಿಮಾವು ಕೇರಳ ರಾಜ್ಯದ ವಾಸ್ತವಾಂಶವನ್ನು ತಪ್ಪಾಗಿ ಪ್ರತಿನಿಧಿಸುತ್ತಿದೆ ಮತ್ತು ಇದು ಕೇರಳದ ಕೋಮು ಸಾಮರಸ್ಯವನ್ನು ಭಂಗಗೊಳಿಸಬಹುದು ಎಂದು ಅರ್ಜಿದಾರರು ವಾದಿಸಿದ್ದರು. ಇದೀಗ ವಿಚಾರಣೆಯಲ್ಲಿ ಈ ಸಿನಿಮಾದ ಬಿಡುಗಡೆಯ ದಿನಾಂಕವನ್ನು ಮುಂದಕ್ಕೆ ಹಾಕುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ಫೆಬ್ರವರಿ 27ರಂದು ದಿ ಕೇರಳ ಸ್ಟೋರಿ 2 ಚಿತ್ರವನ್ನು ರಿಲೀಸ್ ಮಾಡುವುದಕ್ಕೆ ಸಿನಿಮಾ ತಂಡ ಮುಂದಾಗಿತ್ತು. ಆದರೆ ಇದೀಗ ಸಿನಿಮಾ ತಂಡಕ್ಕೆ ಭಾರೀ ಮುಖಭಂಗವಾಗಿದೆ. ಕೇರಳದಲ್ಲಿ ಈ ಸಿನಿಮಾದ ಟೀಸರ್​​ಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಚಿತ್ರಕ್ಕೆ ಪ್ರಮಾಣಪತ್ರ ನೀಡಿರುವ ಸೆನ್ಸಾರ್ ಮಂಡಳಿಯ ಕ್ರಮವನ್ನು ಪ್ರಶ್ನಿಸಿ…

Read More

ಯಾದಗಿರಿ : ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಲ್ಲಿಕಾರ್ಜುನ ಮುತ್ಯಾ ಪರಾರಿಯಾಗಿದ್ದು, ಇದೀಗ ವಿಡಿಯೋದಲ್ಲಿ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷರಾಗಿದ್ದಾರೆ. ವಿಡಿಯೋ ಹೇಳಿಕೆಯನ್ನು ಮಲ್ಲಿಕಾರ್ಜುನ ಮುತ್ಯ ಬಿಡುಗಡೆ ಮಾಡಿದ್ದಾರೆ. ಭಕ್ತರು ಯಾರು ಆತಂಕ ಪಡಬೇಡಿ ಎಂದು ಹೇಳಿಕೆ ಕೊಟ್ಟಿದ್ದಾರೆ. ನಾನು ಎಲ್ಲಿಗೂ ಹೋಗಿಲ್ಲ ಇಲ್ಲೇ ಇದ್ದೇನೆ. ಮಠದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮವಿದೆ ಹೀಗಾಗಿ ಆಮಂತ್ರಣ ಪತ್ರಿಕೆ ನೀಡಲು ಬಂದಿದ್ದೇನೆ. ಮಠಕ್ಕೆ ಪೊಲೀಸರು ಬಂದು ಹೋಗಿದ್ದು ಗೊತ್ತಾಗಿದೆ. ಪೊಲೀಸರು ಯಾವಾಗ ಕರೆದರೂ ಕೂಡ ಹೋಗಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಅಜ್ಞಾತ ಸ್ಥಳದಿಂದಲೇ ವಿಡಿಯೋ ಮಾಡಿದ್ದಾರೆ. ಪ್ರಕರಣದ ಹಿನ್ನೆಲೆ ಘಟನೆ: ಈತ ತಾನು ದೈವಪ್ರೇರಿತ ಅಥವಾ ಆಧ್ಯಾತ್ಮಿಕ ಶಕ್ತಿ ಹೊಂದಿರುವವನು ಎಂದು ಬಿಂಬಿಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಈ ನಂಬಿಕೆಯನ್ನೇ ಬಳಸಿಕೊಂಡು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಈತನ ಮೇಲಿದೆ. ಪೊಲೀಸ್ ದೂರು: ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಕಾನೂನು ಕ್ರಮಗಳು ಪೋಕ್ಸೋ ಕಾಯ್ದೆ (POCSO…

Read More

ಸಾಮಾನ್ಯವಾಗಿ ಸ್ಯಾಂಡಲ್ ವುಡ್ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ಹೊಸ ಸಿನಿಮಾ ಶುಕ್ರವಾರದಂದು ಬಿಡುಗಡೆ ಆಗುತ್ತೆ. ಶುಕ್ರವಾರದಂದೆ ಥಿಯೇಟರ್ ನಲ್ಲಿ ಯಾಕೆ ಸಿನಿಮಾ ರಿಲೀಸ್ ಮಾಡುತ್ತಾರೆ? ಅದರ ಹಿಂದಿನ ಕಾರಣವೇನು? ಇದರ ಹಿಂದೆ ಹಲವು ಇತಿಹಾಸ ಹಾಗೂ ಕೆಲವು ಪ್ರಮುಖ ಕಾರಣಗಳು ಕೂಡ ಇವೆ. ಸಿನಿಮಾಗಳು ಶುಕ್ರವಾರವೇ ಬಿಡುಗಡೆಯಾಗುವುದರ ಹಿಂದೆ ಕುತೂಹಲಕಾರಿ ಇತಿಹಾಸ ಮತ್ತು ವ್ಯವಹಾರಿಕ ತಂತ್ರಗಳಿವೆ. ಈ ಸಂಪ್ರದಾಯವು ಕೇವಲ ಭಾರತಕ್ಕೆ ಸೀಮಿತವಾಗಿಲ್ಲ, ಇದು ಜಾಗತಿಕವಾಗಿ ನಡೆದುಬಂದ ಪದ್ಧತಿ. ಇದರ ಸಮಗ್ರ ಮಾಹಿತಿ ಇಲ್ಲಿದೆ: 1. ಇತಿಹಾಸದ ಹಿನ್ನೆಲೆ (History) ಈ ಸಂಪ್ರದಾಯವು ಮೊದಲು ಪ್ರಾರಂಭವಾಗಿದ್ದು ಹಾಲಿವುಡ್‌ನಲ್ಲಿ. 1939ರಲ್ಲಿ ತೆರೆಕಂಡ ವಿಶ್ವಪ್ರಸಿದ್ಧ ಸಿನಿಮಾ ‘ಗಾನ್ ವಿತ್ ದಿ ವಿಂಡ್’ (Gone with the Wind) ಡಿಸೆಂಬರ್ 15, 1939ರ ಶುಕ್ರವಾರದಂದು ಬಿಡುಗಡೆಯಾಯಿತು. ಅಂದಿನಿಂದ ಹಾಲಿವುಡ್‌ನಲ್ಲಿ ಶುಕ್ರವಾರದ ಬಿಡುಗಡೆ ಒಂದು ಸಂಪ್ರದಾಯವಾಗಿ ಬೆಳೆದುಬಂತು. ಭಾರತದಲ್ಲಿ ಮೊದಮೊದಲು ಸಿನಿಮಾಗಳು ವಾರದ ಯಾವುದೇ ದಿನ ಬಿಡುಗಡೆಯಾಗುತ್ತಿದ್ದವು (ಉದಾಹರಣೆಗೆ: 1947ರಲ್ಲಿ ಬಂದ ‘ನೀಲ್ ಕಮಲ್’ ಸೋಮವಾರ ಬಿಡುಗಡೆಯಾಗಿತ್ತು).…

Read More