Author: kannadanewsnow05

ನವದೆಹಲಿ: ಮೊಬೈಲ್‌ಫೋನ್‌ನಲ್ಲಿ ಚಿತ್ರೀಕರಿಸಿದ ವೀಡಿಯೊಗಳನ್ನು ಜನರು ಅಥವಾ ಪೊಲೀಸರು ತಕ್ಷಣ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುವ ಪ್ರವೃತ್ತಿ ಬಗ್ಗೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಇಂಥ ಚಟುವಟಿಕೆಗಳು ನ್ಯಾಯಯುತ ವಿಚಾರಣೆಗೆ ಗಂಭೀರ ಬೆದರಿಕೆ ಉಂಟುಮಾಡುತ್ತವೆ ಎಂದು ಹೇಳಿದೆ. ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಆರೋಪಿಗಳ ವಿಡಿಯೋ-ಫೋಟೋಗಳನ್ನು ಅಪ್‌ಲೋಡ್ ಮಾಡುವುದು ಜನರ ಮನಸ್ಸಿನಲ್ಲಿ ಕೆಟ್ಟ ಭಾವನೆಗಳನ್ನು ಸೃಷ್ಟಿಸಿದಂತಾಗುತ್ತದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಸಿಜೆಐ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಯಲ್ಯ ಬಾಗಿ ಮತ್ತು ವಿಪುಲ್ ಎಂ. ಪಾಂಚೋಲಿ ಅವರ ಪೀಠ ನಡೆಸಿತು. ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಹೊಂದಿರುವ ಪ್ರತಿ ವ್ಯಕ್ತಿ ಮಾಧ್ಯಮದವರಾಗಿದ್ದಾರೆ. ಆರೋಪಿಗಳಿಗೆ ಕೈಕೋಳ ತೊಡಿಸುವುದು, ಮೆರವಣಿಗೆ ಮಾಡುವುದು, ಬಲವಂತವಾಗಿ ಮೊಣಕಾಲು ಊರಿ ಕೂರಿಸುವ ಚಿತ್ರಗಳನ್ನು ಪೊಲೀಸರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುತ್ತಿರುವ ಇತ್ತೀಚಿನ ಪ್ರವೃತ್ತಿ ವ್ಯಕ್ತಿಯ ವೈಯಕ್ತಿಕ ಘನತೆಗೆ ಧಕ್ಕೆ ತರುವ ಜತೆಗೆ, ಸಾರ್ವಜನಿಕ ಪಕ್ಷಪಾತಕ್ಕೆ ಕಾರಣವಾಗುತ್ತದೆ ಎಂದು ವಕೀಲರು ವಾದಿಸಿದರು. ಪೊಲೀಸ್ ಇಲಾಖೆ ಮಾಧ್ಯಮಗಳಿಗೆ ನೀಡುವ ಮಾಹಿತಿ ಜವಾಬ್ದಾರಿಯುತ…

Read More

ಬೆಂಗಳೂರು : ರಾಜ್ಯದಲ್ಲಿ ವರಾಯ ಅಟ್ಟಹಾಸ ಮೆರೆದಿದ್ದು, ಪ್ರತ್ಯೇಕ ಅಪಘಾತದಲ್ಲಿ 6 ಜನ ಸಾವನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನಪ್ಪಿದ್ದಾರೆ. ಹೈವೇ ಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ನಡೆದಿದೆ. ಮಧ್ಯರಾತ್ರಿ ಒಂದು ಭೀಕರ ಅಪಘಾತ ಸಂಭವಿಸಿದ್ದು ಹೈವೇಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿ ಇದ್ದಂತಹವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಜಯಮ್ಮ (60) ಯಶೋದಮ್ಮ (60) ಹಾಗೂ ಗಂಗಾ (38) ಎಂದು ತಿಳಿದು ಬಂದಿದೆ. ಇನ್ನು ಅಪಘಾತದಲ್ಲಿ ಗಾಯಗೊಂಡ ಟಿಟಿ ವಾಹನ ಚಾಲಕ ಮತ್ತು ಉಳಿದ 8 ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮತ್ತೊಂದು ಘಟನೆಯಲ್ಲಿ ಕ್ಯಾಂಟರ್ ಗೆ ಗೂಡ್ಸ್ ಡಿಕ್ಕಿಯಾಗಿ ಮೂರು ಸಾವನಪ್ಪಿದ್ದಾರೆ. ಬೆಂಗಳೂರಿನ ಮೆಡಹಳ್ಳಿ ಬಳಿ…

Read More

ಬೆಂಗಳೂರು: ಕಾಳೇನ ಅಗ್ರಹಾರದಿಂದ ನಾಗವಾರತನಕ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋದ 3ಎ ಹಂತದ ಯೋಜನೆ ಪಿಂಕ್ ಮಾರ್ಗದ ಕಾಮಗಾರಿಗಳು ಮೊದಲ ಹಂತದವರೆಗೆ ಬಹುತೇಕ ಪೂರ್ಣಗೊಂಡಿದ್ದು, ಕಾಳೇನ ಎತ್ತರಿಸಿದ ಮೆಟ್ರೋ ಮಾರ್ಗವನ್ನು ಮೇನಲ್ಲಿ ಶುರು ಮಾಡುವ ನಿರೀಕ್ಷೆ ಇದೆ. ಈಗಾಗಲೆ ಗುಲಾಬಿ ಮಾರ್ಗಕ್ಕೆ ನಾಲ್ಕು ರೈಲುಗಳು ಆಗಮಿಸಿದ್ದು, ಇದೇ 22ರಿಂದ ಏ. 5ರವರೆಗೆ ಆರ್‌ಡಿಎಸ್‌ಒ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಪರಿಶೀಲನಾ ಕಾರ್ಯಗಳು, ರೈಲಿನ ವೇಗ ಮತ್ತು ತೂಕ, ಹಳಿ ನಿಲ್ದಾಣಗಳ ತಪಾಸಣೆ ನಡೆಯಲಿದೆ. ಮಾಸಾಂತ್ಯಕ್ಕೆ ಮತ್ತೊಂದು ರೈಲು ಸೇರ್ಪಡೆಯಾಗುವ ನಿರೀಕ್ಷೆ ಇದ್ದು, ಮಾರ್ಗದಲ್ಲಿ ಕಾರ್ಯಾಚರಣೆ ಪ್ರಾರಂಭವಾಗುವ ಹೊತ್ತಿಗೆ 6 ರೈಲುಗಳು ಪೂರೈಕೆಯಾಗುವ ನಿರೀಕ್ಷೆ ಇದೆ. ಕಾಳೇನ ಅಗ್ರಹಾರ ಮತ್ತು ತಾವರೆಕೆರೆ ನಡುವಿನ 7.5 ಕಿಮೀ ಎತ್ತರಿಸಿದ ಮಾರ್ಗವು ಮೇನಲ್ಲಿ ಶುರುವಾದರೆ, ಡೇರಿ ಸರ್ಕಲ್ ನಿಂದ ನಾಗವಾರದವರೆಗಿನ ಉಳಿದ 13.76 ಕಿಮೀ ಸುರಂಗ ಮಾರ್ಗವು 2026ರ ಡಿಸೆಂಬರ್ ವೇಳೆಗೆ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬನ್ನೇರುಘಟ್ಟ ರಸ್ತೆಯ…

Read More

ಬೆಂಗಳೂರು : ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನಪ್ಪಿದ್ದಾರೆ. ಹೈವೇ ಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ನಡೆದಿದೆ. ಮಧ್ಯರಾತ್ರಿ ಒಂದು ಭೀಕರ ಅಪಘಾತ ಸಂಭವಿಸಿದ್ದು ಹೈವೇಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿ ಇದ್ದಂತಹವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಜಯಮ್ಮ (60) ಯಶೋದಮ್ಮ (60) ಹಾಗೂ ಗಂಗಾ (38) ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ದಕ್ಷಿಣಕನ್ನಡ : ತಲೆನೋವಿಗೆಂದು ಮನೆಯಲ್ಲಿದ್ದ ಔಷಧ (ಸಿರಪ್‌) ಸೇವಿಸಿದ್ದ ಬಾಲಕ ಮೃತಪಟ್ಟ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕೊಂಡ್ಯಾಡಿ ಎಂಬಲ್ಲಿ ಮಾ. 18ರಂದು ಸಂಜೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೊಂಡ್ಯಾಡಿ ನಿವಾಸಿ ಸಂಜೀವ ಪೂಜಾರಿ ಅವರ ಪುತ್ರ ರಾಮಕುಂಜದ ಖಾಸಗಿ ಶಾಲಾ 5ನೇ ತರಗತಿ ವಿದ್ಯಾರ್ಥಿ ಚಿರಾಗ್‌ ಎಸ್‌. (10) ಮೃತಪಟ್ಟ ಬಾಲಕ. ಆತನಿಗೆ ಪದೇ ಪದೆ ತಲೆನೋವು ಕಾಣಿಸಿಕೊಳ್ಳುತ್ತಿದ್ದು, ಮಾ. 18 ರಂದು ಸಂಜೆ ತಲೆನೋವಿಗೆಂದು ಮನೆಯಲ್ಲಿದ್ದ ಔಷಧ ಕುಡಿದಿದ್ದ. ಬಳಿಕ ಮನೆಯಲ್ಲಿ ಬಾಲಕ ಹೊರಳಾಡುತ್ತಿರುವುದನ್ನು ಕಂಡ ಬಾಲಕನ ತಾಯಿ ಕೂಡಲೇ ತನ್ನ ಪತಿಗೆ ತಿಳಿಸಿದ್ದಾರೆ. ಮಗನನ್ನು ಸ್ಥಳೀಯವಾಗಿ ವೈದ್ಯರಲ್ಲಿ ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕೊಂಡೊಯ್ಯಲಾಯಿತು. ಅಲ್ಲಿನ ವೈದ್ಯರು ಬಾಲಕ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದರು. ಸಂಜೀವ ಪೂಜಾರಿ ನೀಡಿದ ದೂರಿನಂತೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು 4 ವರ್ಷದ ಮಗುವಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷ ಪ್ರಾಯದ ಮಗು ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ಸಂಭವಿಸಿದೆ.ಮೃತ ಬಾಲಕಿಯನ್ನು ನಿಶಿಕಾ (4) ಮೃತ ಬಾಲಕಿ. ರಾಜೇಂದ್ರ-ಲಾವಣ್ಯ ದಂಪತಿಯ ಮೊದಲ ಮಗಳಾಗಿದ್ದಳು. ಯುಗಾದಿ ಹಬ್ಬದ ಬಳಿಕ ತಾಯಿ ತನ್ನ ಮಕ್ಕಳೊಂದಿಗೆ ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ, ತಾಯಿ ಕಂಕುಳಲ್ಲಿ ಕಿರಿಯ ಮಗುವನ್ನು ಹೊತ್ತುಕೊಂಡು, ದೊಡ್ಡ ಮಗುವಿನ ಕೈ ಹಿಡಿದು ಸಾಗುತ್ತಿದ್ದಾಗ ಎದುರು ಬರುತ್ತಿದ್ದ ಲಾರಿ ಏಕಾಏಕಿ ನಿಯಂತ್ರಣ ತಪ್ಪಿ ಬಾಲಕಿಯ ಮೇಲೆ ಹರಿದಿದೆ. ಅಪಘಾತದ ತೀವ್ರತೆಯಿಂದ ಬಾಲಕಿ ಸ್ಥಳದಲ್ಲೇ ಹೆತ್ತ ತಾಯಿಯ ಎದುರೇ ಪ್ರಾಣ ಕಳೆದುಕೊಂಡಿದ್ದಾಳೆ. ಸ್ಥಳೀಯರು ತಕ್ಷಣ ಸಹಾಯಕ್ಕೆ ಧಾವಿಸಿದರೂ, ಬಾಲಕಿಯನ್ನು ರಕ್ಷಿಸಲಾಗಲಿಲ್ಲ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂಬ ವಿಷಯದ ಮೇಲೆ ತನಿಖೆ ಮುಂದುವರೆದಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತದಲ್ಲಿ ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಓಲ್ಡ್ ಮದ್ರಾಸ್ ರಸ್ತೆಯ ಮೇಳಹಳ್ಳಿ ಬ್ರಿಡ್ಜ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಲಾರಿಗೆ ಹಿಂದಿನಿಂದ ಗೂಡ್ಸ್ ಆಟೋ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋದಲ್ಲಿ ಇದ್ದಂತಹ ಮೂವರ ಸ್ಥಿತಿ ಇದೀಗ ಗಂಭೀರವಾಗಿದೆ. ಗಾಯಾಳುಗಳನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಉಂಟಾದ ಗೊಂದಲ ಇಂದು ಮತ್ತಷ್ಟು ತೀವ್ರಗೊಂಡಿದ್ದು, ಸಭೆಯಲ್ಲೇ ರಾಜೀನಾಮೆ ಬೆದರಿಕೆ ವ್ಯಕ್ತವಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಹೌದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಚಿವ ಜಮೀರ್ ರಾಜೀನಾಮೆ ಅಸ್ತ್ರ ಪ್ರಯೋಗಿಸಿ ಅಚ್ಚರಿ ಮೂಡಿಸಿದರು.t ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರವಾಗಿ ನಡೆದ ಚರ್ಚೆಯ ವೇಳೆ, ಆ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಜಮೀರ್ ಪಟ್ಟು ಹಿಡಿದರು. ಕ್ಷೇತ್ರದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವುದರಿಂದ ಸಮುದಾಯದ ಬೇಡಿಕೆಗೆ ಸ್ಪಂದಿಸಬೇಕೆಂದು ಅವರು ಒತ್ತಾಯಿಸಿದರು. ಬೇಡಿಕೆ ಈಡೇರದಿದ್ದರೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುರ್ಜೆವಾಲಾ, ಕಾಂಗ್ರೆಸ್ ಪಕ್ಷವು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಲ್ಲ ಎಂದು ಸ್ಪಷ್ಟಪಡಿಸಿ, ಯೋಗ್ಯ ಅಭ್ಯರ್ಥಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಿದರು. ಈ ಮೂಲಕ ಜಮೀರ್ ಅವರ ರಾಜೀನಾಮೆ ಬೆದರಿಕೆಯನ್ನು ತಳ್ಳಿಹಾಕಿದಂತಾಯಿತು.ಇದೇ…

Read More

ದಾವಣಗೆರೆ : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಜಟಾಪಟಿ ನಡೆಯುತ್ತಿದ್ದು, ಅಂತಿಮವಾಗಿ ಹೈಕಮಾಂಡ್ ಎಲ್ಲರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸುಖಾಂತ್ಯ ಕಂಡಿದೆ. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ನಡೆಸಿದ ಸಂಧಾನ ಮಾತುಕತೆಯು ಯಶಸ್ವಿಯಾಗಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಂತಿಮವಾಗಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಅವರಿಗೆ ಟಿಕೆಟ್ ಬಹುತೇಕ ಖಚಿತವಾಗಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ನಿರ್ಧಾರ ಕೈಗೊಂಡಿದ್ದಾರೆ. ದಾವಣಗೆರೆ ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ನೀಡಬೇಕೆಂದು ಸಚಿವ ಜಮೀರ್ ಅಹಮದ್ ಸಹಿತ ಪ್ರಮುಖ ಅಲ್ಪಸಂಖ್ಯಾತ ನಾಯಕರು ಪಟ್ಟು ಹಿಡಿದಿದ್ದರು. ಕಾಂಗ್ರೆಸ್ ಹೈಕಮಾಂಡ್ ನಾಳೆ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಿದ್ದು, ಸೋಮವಾರ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ.

Read More

ನವದೆಹಲಿ : ದೇಶದಲ್ಲಿ ಆಹಾರೋದ್ಯಮಕ್ಕೆ ದೊಡ್ಡಮಟ್ಟದ ಪೆಟ್ಟು ನೀಡಿರುವುದಲ್ಲದೆ, ಜನಸಾಮಾನ್ಯರ ಅಡುಗೆ ಮನೆವರೆಗೂ ವ್ಯಾಪಿಸಿರುವ ಮಧ್ಯಪ್ರಾಚ್ಯ ಯುದ್ಧದ ಅಡ್ಡಪರಿಣಾಮ ಸ್ವಲ್ಪ ಮಟ್ಟಿಗೆ ನಿವಾರಣೆಯಾಗುವ ಲಕ್ಷಣಗಳು ಗೋಚರಿಸಿವೆ. ಇಂಧನ ಪೂರೈಕೆಯಲ್ಲಿ ಉಂಟಾಗಿದ್ದ ವ್ಯತ್ಯಯದಿಂದ ಕಂಗಾಲಾಗಿರುವ ಕಮರ್ಷಿಯಲ್ ಎಲ್‌ಪಿಜಿ ಬಳಕೆದಾರರಿಗೆ ಕೇಂದ್ರ ಸರ್ಕಾರ ಶನಿವಾರ ತುಸು ನಿರಾಳತೆ ನೀಡಿದೆ. ದೇಶೀಯ ಉತ್ಪಾದನೆ ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಾಣಿಜ್ಯ ಬಳಕೆಯ ಹಂಚಿಕೆಯನ್ನು ಕೇಂದ್ರ ಸರ್ಕಾರ ಶೇ. 20ರಷ್ಟು ಹೆಚ್ಚಳ ಮಾಡಿದೆ. ಈ ಮೂಲಕ ಒಟ್ಟು ಹಂಚಿಕೆ ಪ್ರಮಾಣ ಇದೀಗ ಶೇ. 50ಕ್ಕೆ ತಲುಪಿದೆ. ಹೀಗಾಗಿ ಈಗಾಗಲೇ ಬಂದ್ ಆಗಿರುವ ಹೋಟೆಲ್‌ಗಳು, ಕೈಗಾರಿಕೆ ಘಟಕಗಳಿಗೆ ತುಸು ನಿರಾಳತೆ ಸಿಗಲಿದ್ದು, ಹಂತ ಹಂತವಾಗಿ ಇವು ಪುನರಾರಂಭಗೊಳ್ಳುವ ನಿರೀಕ್ಷೆ ಇದೆ. ಇರಾನ್ ವಿರುದ್ಧದ ಅಮೆರಿಕ- ಇಸ್ರೇಲ್ ಯುದ್ಧ ಕೊಲ್ಲಿ ರಾಷ್ಟ್ರಗಳಿಗೂ ವ್ಯಾಪಿಸಿದ್ದರಿಂದ ಭಾರತಕ್ಕೆ ಇಂಧನ ಪೂರೈಕೆಯಲ್ಲಿ ಅಡಚಣೆ ಉಂಟಾಗಿತ್ತು. ಹೀಗಾಗಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಗೆ ಮೊದಲ ಆದ್ಯತೆ ನೀಡುವ ಸಲುವಾಗಿ ಹೋಟೆಲ್ ಗಳಂತಹ ವಾಣಿಜ್ಯ…

Read More