Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ವಿಜಯಪುರ : ಜಿಲ್ಲೆಯಲ್ಲಿ ಅಕಾಲಿಕ ಮಳೆಗೆ ಭಾರಿ ಅವಾಂತರ ಸೃಷ್ಟಿಯಾಗಿದ್ದು, ಜಿಲ್ಲೆಯ ನಿಡಗುಂದಿ ಪಟ್ಟಣದ ಸುತ್ತಮುತ್ತ ನಿನ್ನೆ ಧಾರಾಕಾರವಾಗಿ ಮಳೆ ಸುರಿದಿದೆ. ಧಾರಾಕಾರ ಮಳೆಗೆ ತೋಟದ ಮನೆಗೆ ಹಾನಿಯಾಗಿದೆ. ಶಿವಪ್ಪ ಹುಗ್ಗಿ ಎಂಬವರಿಗೆ ಸೇರಿದ ತೋಟದಲ್ಲಿ ಒಂದು ಘಟನೆ ನಡೆದಿದೆ. ಶೀಟ್ ಮನೆಯ ಮೇಲೆ ಬೇರುಸಮಿತ ಬೃಹತ್ ಉರುಳಿ ಬಿದ್ದಿದೆ. ಮನೆಯೊಳಗೆ ಇದ್ದ ನಾಲ್ವರನ್ನು ತಕ್ಷಣ ರಕ್ಷಣೆ ಮಾಡಿದ್ದಾರೆ. ಮರ ಬಿದ್ದ ಪರಿಣಾಮ ಪರಸಪ್ಪ ಹುಗ್ಗಿ ಎನ್ನುವ ಬಾಲಕನಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯಲ್ಲಿ ಇದ್ದ ಪಡಿತರ ಧಾನ್ಯ ಗೃಹ ಉಪಯೋಗಿ ವಸ್ತುಗಳಿಗೆ ಹಾನಿಗಳಾಗಿದೆ. ಸ್ಥಳಕ್ಕೆ ಪೊಲೀಸರು ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
ತುಮಕೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದ್ದು, ಪ್ರೀತಿಯ ವಿಚಾರಕ್ಕೆ ತಂದೆಯಿಂದಲೇ ಮಗಳ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಳ್ಳದಲ್ಲಿ ತಂದೆ ಹೂತು ಇಟ್ಟಿದ್ದ ಮಗಳ ಶವ ಹೊರಗೆ ತೆಗೆಯಲಾಗಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಿಂಬೆಮರದ ಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಕೊಲೆಯಾದ ಬಾಲಕಿ ಮೇಘನ ಸಂಬಂಧಿಯನ್ನು ಪ್ರೀತಿಸಿದಳು. ಇದನ್ನು ತಂದೆ ತಿಮ್ಮರಾಯಪ್ಪ ವಿರೋಧಿಸಿ ಮೇಘನಾಳನ್ನ ಭೀಕರವಾಗಿ ಕೊಲೆ ಮಾಡಿದ್ದ. ಕಲ್ಲು ಎತ್ತಿಹಾಕಿ ಮಗಳನ್ನು ಕೊಂದು ಹಳ್ಳದಲ್ಲಿ ಹೂತು ಹಾಕಿದ್ದ. ಮಗಳ ಪ್ರೀತಿಗೆ ವಿರೋಧಿಸಿ ಪ್ರೀತಿಯ ವಿಚಾರದಲ್ಲಿ ಹೆತ್ತಮಗಳನ್ನು ಕೊಲೆ ಮಾಡಿದ್ದಾನೆ. ಏಪ್ರಿಲ್ 16 ರಂದು ಈ ಒಂದು ಕೊಲೆ ನಡೆದಿತ್ತು. ಕೊಲೆಯಾದ ಬಳಿಕ ಮಗಳು ನಾಪತ್ತೆಯಾಗಿದ್ದಾಳೆ ಎಂದು ತಿಮ್ಮರಾಯಪ್ಪ ನಾಟಕ ಮಾಡಿದ್ದಾನೆ. ಹತ್ಯೆಯ ಬಳಿಕ ಮೇಘನಾ ತಂದೆ ತಿಮ್ಮರಾಯಪ್ಪ ಊರು ಬಿಟ್ಟಿದ್ದ ಆದರೆ ಪತ್ನಿ ಪೊಲೀಸ್ ಠಾಣೆಗೆ ಕೊಟ್ಟಿರುತ್ತಾರೆ. ಪತ್ನಿಯ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದಾಗ ತಿಮ್ಮರಾಯಪ್ಪನ ಈ ಒಂದು ಬಯಲಾಗಿದೆ. ಕಳ್ಳಂಬೆಳ್ಳ ಠಾಣೆ…
ದಾವಣಗೆರೆ: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ವರುಣನ ಆರ್ಭಟಕ್ಕೆ ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಈಗಾಗಲೇ ರಾಜ್ಯದ ವಿವಿಧೆಡೆ ಗುಡುಗು, ಸಿಡಿಲಿಗೆ ಇಬ್ಬರು ಬಲಿಯಾಗಿದ್ದರು. ಈ ಬೆನ್ನಲ್ಲೇ ದಾವಣಗೆರೆ ಜಿಲ್ಲೆಯಲ್ಲಿ ಮತ್ತೊಂದು ಅತ್ಯಂತ ದಾರುಣ ಹಾಗೂ ದುರದೃಷ್ಟಕರ ಘಟನೆ ಸಂಭವಿಸಿದ್ದು, ಭೀಕರ ಸಿಡಿಲಿನ ಶಬ್ದಕ್ಕೆ ಬೆಚ್ಚಿಬಿದ್ದ ಶಾಲಾ ಮುಖ್ಯ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಯು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ನಾಗರಾಜಪ್ಪ (56) ಅವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕರ್ತವ್ಯನಿಷ್ಠ ಹಾಗೂ ಎಲ್ಲರೊಂದಿಗೆ ಸೌಮ್ಯವಾಗಿ ನಡೆದುಕೊಳ್ಳುತ್ತಿದ್ದ ಶಿಕ್ಷಕರ ಆಕಸ್ಮಿಕ ಸಾವು ಇಡೀ ಗ್ರಾಮಸ್ಥರನ್ನು ಮತ್ತು ಶಿಕ್ಷಣ ಇಲಾಖೆಯ ಸಿಬ್ಬಂದಿಯನ್ನು ಆಘಾತಕ್ಕೀಡು ಮಾಡಿದೆ. ಭಾನುವಾರ (ಮೇ 17) ರಾತ್ರಿ ಹೊನ್ನಾಳಿ ತಾಲೂಕಿನಾದ್ಯಂತ ಇದ್ದಕ್ಕಿದ್ದಂತೆ ಹವಾಮಾನ ವೈಪರೀತ್ಯ ಉಂಟಾಗಿ, ಜೋರು ಗಾಳಿ ಹಾಗೂ ಗುಡುಗು ಸಿಡಿಲಿನ ಆರ್ಭಟ ಆರಂಭವಾಗಿತ್ತು. ಈ ವೇಳೆ ಮುಖ್ಯ ಶಿಕ್ಷಕ ನಾಗರಾಜಪ್ಪ…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಎದುರಾಗಿರುವ ಕಾನೂನು ಸಂಕಷ್ಟಗಳು ಸ್ಯಾಂಡಲ್ವುಡ್ ನಟ ದರ್ಶನ್ ಬೆನ್ನಿಡದೇ ಕಾಡುತ್ತಿವೆ. ಇತ್ತೀಚೆಗಷ್ಟೇ ಹೈಕೋರ್ಟ್ನಲ್ಲಿ ಜಾಮೀನು ನಿರಾಕರಿಸಲ್ಪಟ್ಟ ಹಿನ್ನೆಲೆಯಲ್ಲಿ, ನಟ ದರ್ಶನ್ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ದೇಶದ ಅತ್ಯುನ್ನತ ನ್ಯಾಯಾಲಯದಲ್ಲೂ ನಟ ದರ್ಶನ್ಗೆ ಸದ್ಯಕ್ಕೆ ಯಾವುದೇ ದೊಡ್ಡ ರಿಲೀಫ್ ಸಿಕ್ಕಿಲ್ಲ ಎನ್ನಲಾಗಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ನಲ್ಲಿ ನಡೆದ ಸುದೀರ್ಘ ವಿಚಾರಣೆಯ ಬಳಿಕ, ನ್ಯಾಯಾಧೀಶರು ಪ್ರಕರಣದ ಪ್ರಮುಖ ಸಾಕ್ಷಿಗಳ ವಿಚಾರಣೆಗೆ ಮಹತ್ವದ ಆದೇಶ ನೀಡಿದ್ದಾರೆ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಸಾಕ್ಷ್ಯಗಳ ಕ್ರಿಮಿನಲ್ ವಿಚಾರಣೆ ಮುಗಿಯಲು ಕನಿಷ್ಠ ಒಂದು ವರ್ಷಗಳ ಕಾಲ ಸಮಯಾವಕಾಶವನ್ನು ನ್ಯಾಯಾಲಯ ನಿಗದಿಪಡಿಸಿದೆ. ತನಿಖೆ ಮತ್ತು ಸಾಕ್ಷ್ಯ ನುಡಿಯುವ ಪ್ರಕ್ರಿಯೆಗೆ ಯಾವುದೇ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ, ಅಲ್ಲಿಯವರೆಗೆ ದರ್ಶನ್ ಜೈಲಿನಲ್ಲೇ ಇರಬೇಕಾದ ಅನಿವಾರ್ಯತೆ ಎದುರಾಗಿದೆ. ಪತಿಯ ನೆನಪಿನಲ್ಲಿ ಕಣ್ಣೀರಿಟ್ಟ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್ನ ಈ ಕಠಿಣ…
ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಲಾಕಪ್ ಡೆತ್ (ಪೊಲೀಸ್ ಕಸ್ಟಡಿ ಸಾವು) ಹಾಗೂ ಪೊಲೀಸ್ ದೌರ್ಜನ್ಯ ಪ್ರಕರಣಗಳಿಗೆ ಬ್ರೇಕ್ ಹಾಕಲು ರಾಜ್ಯ ಪೊಲೀಸ್ ಇಲಾಖೆ ಅತ್ಯಂತ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ-ಐಜಿಪಿ) ಆದ ಡಾ. ಎಂ.ಎ. ಸಲೀಂ ಅವರು ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಕಾಯ್ದೆಯಡಿ ಅತ್ಯಂತ ಮಹತ್ವದ ‘ಸ್ಟ್ಯಾಂಡಿಂಗ್ ಆರ್ಡರ್-1060’ (Standing Order-1060) ಅನ್ನು ಜಾರಿಗೊಳಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಈ ಹೊಸ ಸ್ಟ್ಯಾಂಡಿಂಗ್ ಆರ್ಡರ್ ಪ್ರಕಾರ, ಇನ್ನುಮುಂದೆ ಪೊಲೀಸ್ ಕಸ್ಟಡಿಯಲ್ಲಿ ಯಾವುದೇ ರೀತಿಯ ದೌರ್ಜನ್ಯಗಳು ಅಥವಾ ಅಹಿತಕರ ಘಟನೆಗಳು ನಡೆದ ತಕ್ಷಣವೇ ಸ್ಥಳೀಯ ಪೊಲೀಸರು ಬಿಎನ್ಎಸ್ಎಸ್ (BNSS) ಸೆಕ್ಷನ್ 103 ಮತ್ತು 185ರ ಅಡಿಯಲ್ಲಿ ಕಡ್ಡಾಯವಾಗಿ ಸ್ಪಾಟ್ ಮಹಜರ್ (ಸ್ಥಳ ತನಿಖೆ) ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಯಾವುದೇ ವಿಳಂಬಕ್ಕೆ ಆಸ್ಪದ ನೀಡದೆ ತಕ್ಷಣವೇ ಕಾನೂನು ಕ್ರಮಗಳನ್ನು ಜರುಗಿಸುವುದನ್ನು ಈ ಆದೇಶ ಕಡ್ಡಾಯಗೊಳಿಸಿದೆ. ಮುಖ್ಯವಾಗಿ, ಕಸ್ಟಡಿ ದೌರ್ಜನ್ಯ…
ತಿರುವನಂತಪುರಂ: ಕೇರಳ ರಾಜಕಾರಣದಲ್ಲಿ ಇಂದು ಹೊಸದೊಂದು ಅಧ್ಯಾಯ ಆರಂಭವಾಗಿದೆ. ರಾಜಧಾನಿ ತಿರುವನಂತಪುರಂನಲ್ಲಿ ನಡೆದ ಅತ್ಯಂತ ವೈಭವಯುತ ಸಮಾರಂಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಅವರೊಂದಿಗೆ ಒಟ್ಟು 20 ಶಾಸಕರು ನೂತನ ಸಚಿವ ಸಂಪುಟದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಜ್ಯಪಾಲರಿಂದ ಪ್ರತಿಜ್ಞಾ ವಿಧಿ ಬೋಧನೆ ನಗರದ ಸೆಂಟ್ರಲ್ ಸ್ಟೇಡಿಯಂನಲ್ಲಿ ಏರ್ಪಡಿಸಲಾಗಿದ್ದ ಈ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲರಾದ ಆರ್.ವಿ. ಅರ್ಲೇಕರ್ ಅವರು ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್ ಹಾಗೂ ಅವರ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಅತ್ಯಂತ ಸೌಹಾರ್ದಯುತ ವಾತಾವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಬೆಂಬಲಿಗರು ಮತ್ತು ಸಾರ್ವಜನಿಕರು ಭಾಗವಹಿಸಿ ನೂತನ ಸರ್ಕಾರಕ್ಕೆ ಶುಭ ಹಾರೈಸಿದರು. ಹಸ್ತ ನಾಯಕರ ದಂಡು: ರಾಷ್ಟ್ರೀಯ ನಾಯಕರ ಉಪಸ್ಥಿತಿ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಇಡೀ ದೇಶದ ಗಮನ ಸೆಳೆಯುವಲ್ಲಿ…
ಬೆಂಗಳೂರು : ಬೆಂಗಳೂರಲ್ಲಿ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ದುಷ್ಕರ್ಮಿಗಳು ಚಾಕು ಇರಿದು, ಬೈಕ್ ಕಸಿದುಕೊಂಡು ಪರಾರಿಯಾದ ಘಟನೆ ರಾಮಮೂರ್ತಿ ನಗರದ ಬಂಜಾರ ಲೇಔಟ್ನಲ್ಲಿ ನಡೆದಿದೆ.ಚಾಕು ಇರಿತಕ್ಕೊಳಗಾದ ವಿದ್ಯಾರ್ಥಿಯನ್ನು ಧೀರಜ್ (21) ಎಂದು ಗುರುತಿಸಲಾಗಿದೆ. ಭಾನುವಾರ (ಮೆ 18) ಬೆಳಗಿನ ಜಾವ 3 ಗಂಟೆಗೆ ಈ ದಾಳಿ ನಡೆದಿದೆ. ಬೈಕ್ಗೆ ಅಡ್ಡ ಬಂದ ವಿಚಾರಕ್ಕೆ ಆರೋಪಿಗಳು ಹಾಗೂ ವಿದ್ಯಾರ್ಥಿಗಳ ನಡುವೆ ಜಗಳ ನಡೆದಿತ್ತು. ಈ ಜಗಳ ವಿಕೋಪಕ್ಕೆ ತಿರುಗಿ ಚಾಕು ಇರಿಯುವ ಮಟ್ಟಕ್ಕೆ ಹೋಗಿತ್ತು.ಚಾಕು ಇರಿತದಿಂದ ವಿದ್ಯಾರ್ಥಿಯ ಬೆನ್ನಿಗೆ ಹಾಗೂ ತೊಡೆ ಭಾಗಕ್ಕೆ ಗಾಯಗಳಾಗಿದೆ. ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಧೀರಜ್ ಪ್ರಾಣಪಾಯದಿಂದ ಪಾರಾಗಿದ್ದಾನೆ. ಹಲ್ಲೆಗೊಳಗಾದ ವಿದ್ಯಾರ್ಥಿ ಬಿಬಿಎ ಓದುತ್ತಾ ಫ್ಲಿಫ್ಕಾರ್ಟ್ನಲ್ಲಿ ಕೆಲಸ ಮಾಡುತ್ತಿದ್ದ. ಈ ಸಂಬಂಧ ರಾಮಮೂರ್ತಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದ ಭುವನ್, ಮಿಥುನ್ ಸೇರಿ ಅಪ್ರಾಪ್ತ ಬಾಲಕನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ನವದೆಹಲಿ : ಅಬುದಾಭಿಯ ಅಣು ವಿದ್ಯುತ್ ಸ್ಥಾವರದ ಮೇಲೆ ಡ್ರೋನ್ ದಾಳಿ ನಡೆದಿದೆ. ದಾಳಿಯ ಬಳಿಕ ಸ್ಥಾವರದ ಜನರೇಟರ್ ಹೊತ್ತಿ ಉರಿದಿದೆ. ಅಲ್ ದಫ್ರಾ ಪ್ರದೇಶದಲ್ಲಿ ಇರುವ ಅಣು ವಿದ್ಯುತ್ ಸ್ಥಾವರದ ಮೇಲೆ ಡ್ರೋನ್ ದಾಳಿ ನಡೆದಿದ್ದು, ಅಣು ವಿದ್ಯುತ್ ಸ್ಥಾವರದ ಜನರೇಟರ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ನ್ಯೂಕ್ಲಿಯರ್ ಪವರ್ ಜನರೇಟರ್ ಮೇಲೆ ಈ ರೀತಿ ದಾಳಿ ನಡೆದಿದೆ. ಇದರಿಂದ ಏನಾದರೂ ವಿಕಿರಣ ಸೋರಿಕೆ ಏನಾದರೂ ಆಗಿದೆಯ ಅದರ ಬಗ್ಗೆ ಮಾಹಿತಿ ಬಂದಿಲ್ಲ. ಆದರೆ ಜನರೇಟರ್ ಭಾಗದ ಮೇಲೆ ಈ ರೀತಿ ದಾಳಿ ಆಗಿದೆ. ಏನಾದರೂ ಇದೆ ರೀತಿಯಾಗಿ ಇರಾನ್ ಅನ್ನು ಕಟ್ಟಿ ಹಾಕುವಂತಹ ಪ್ರಯತ್ನ ಅಮೆರಿಕ ಏನಾದರೂ ಮುಂದುವರಿಸಿಕೊಂಡು ಹೋದರೆ ಕೊಲ್ಲಿ ರಾಷ್ಟ್ರಗಳ ಮೇಲೆ ತನ್ನ ಅಟ್ಯಾಕ್ ಹೇಗೆ ಇರುತ್ತೆ ಎನ್ನುವಂತಹ ಸೂಚನೆಯನ್ನು ಇರಾನ್ ನೀಡಿದೆ.
ಮೈಸೂರು : ಕಾಂಗ್ರೆಸ್ ಕುರ್ಚಿ ಆಟ ಕೊನೆ ಹಂತಕ್ಕೆ ಬಂದಿದೆ. ಕುರುಬ ಸಮಾಜದ ಜೊತೆಗೆ ಯಾವತ್ತು ಜೆಡಿಎಸ್ ಪಕ್ಷ ಇದ್ದೇ ಇರುತ್ತದೆ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜನರೊಂದಿಗೆ ಜನತಾದಳ ಸಮಾವೇಶದಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದರು. ಬೋಗಾದಿ ಭೋಗನಂದೀಶ್ವರ ದೇಗುಲ ಬಳಿ ಈ ಒಂದು ಸಮಾವೇಶ ಆಯೋಜನೆ ಮಾಡಲಾಗಿದೆ. ರಾಜ್ಯದ ಅಭಿವೃದ್ಧಿ ಬಿಟ್ಟು ಕುರ್ಚಿ ಆಟ ನಡೆದಿತ್ತು. ಮಳೆಯಿಂದಾದ ಸಮಸ್ಯೆಗಳನ್ನು ರಾಜ್ಯ ಸರ್ಕಾರ ಬಗೆಹರಿಸಿಲ್ಲ. ಬೆಳೆ ನಷ್ಟದ ಬಗ್ಗೆ ರೈತರಿಗೆ ಧೈರ್ಯ ಹೇಳುವ ಕೆಲಸ ಮಾಡಿಲ್ಲ ಮುಂದೆ ಮೈತ್ರಿ ಸರ್ಕಾರ ಬರಲಿದೆ ಬೇಕಾದ ಪ್ರಯತ್ನ ಮಾಡುತ್ತಿದ್ದೇನೆ. ನಮ್ಮ ಪಕ್ಷಕ್ಕೆ ಶಕ್ತಿ ತುಂಬಿರುವುದು ಕಾರ್ಯಕರ್ತರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಉದ್ಬೂರು ರಮ್ಮನಹಳ್ಳಿ ವಿಶೇಷ. ಕೊನೆಯುಸಿರಿ ಇರುವರೆಗೂ ನಿಮ್ಮ ಪ್ರೀತಿ ಮರೆಯಲ್ಲ ಎಂದರು. ನಮ್ಮವರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ ಈ ರೀತಿ ಬರುತ್ತಿರಲಿಲ್ಲ. ಮುಖಂಡರು ಮೈಮರೆತಿದ್ದಕ್ಕೆ…
ಮೈಸೂರು :ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ‘ಜನರೊಂದಿಗೆ ಜನತಾದಳ ಸಮಾವೇಶ’ ಇದೀಗ ಬ್ಯಾನರ್ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಜೆಡಿಎಸ್ ಹಮ್ಮಿಕೊಂಡಿರುವ ಈ ಬೃಹತ್ ಸಮಾವೇಶದ ಫ್ಲೆಕ್ಸ್ ಹಾಗೂ ಬ್ಯಾನರ್ಗಳಿಂದ ಪಕ್ಷದ ಹಿರಿಯ ನಾಯಕ, ಶಾಸಕ ಜಿ.ಟಿ. ದೇವೇಗೌಡ ಹಾಗೂ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಭಾವಚಿತ್ರಗಳನ್ನು ಕೈಬಿಟ್ಟಿರುವುದು ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕ್ಷೇತ್ರದಾದ್ಯಂತ ರಾರಾಜಿಸುತ್ತಿರುವ ಈ ಸಮಾವೇಶದ ಫ್ಲೆಕ್ಸ್ಗಳಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷರ ಫೋಟೋಗಳಿಗೆ ಮೊದಲ ಆದ್ಯತೆ ನೀಡಲಾಗಿದೆ. ಆದರೆ, ಇದೇ ಕ್ಷೇತ್ರದ ಹಾಲಿ ಶಾಸಕರಾಗಿದ್ದೂ ಜಿ.ಟಿ. ದೇವೇಗೌಡ ಅವರ ಫೋಟೋ ಮಿಸ್ ಆಗಿರುವುದು ಸಾರ್ವಜನಿಕರಲ್ಲಿ ಮತ್ತು ಜೆಡಿಎಸ್ ಕಾರ್ಯಕರ್ತರಲ್ಲಿ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಪುತ್ರನಿಗೆ ಮನ್ನಣೆ, ತಂದೆಗೆ ಕೊಕ್! ಇನ್ನು ಈ ಫ್ಲೆಕ್ಸ್ ರಾಜಕೀಯದಲ್ಲಿ ಮತ್ತೊಂದು ರೋಚಕ ತಿರುವು ಎಂದರೆ, ಜಿ.ಟಿ. ದೇವೇಗೌಡರ ಫೋಟೋಗೆ ಕೊಕ್ ನೀಡಲಾಗಿದ್ದರೂ, ಅವರ ಪುತ್ರ ಹಾಗೂ…














