Subscribe to Updates
Get the latest creative news from FooBar about art, design and business.
Author: kannadanewsnow05
ತುಮಕೂರು : ಠಾಣೆಗೆ ಕರೆತಂದಿದ ವ್ಯಕ್ತಿ ಅನುಮಾನಾಸ್ಪದ ರೀತಿ ಸಾವನ್ನಪ್ಪಿರುವ ಘಟನೆ ತುಮಕೂರಲ್ಲಿ ನಡೆದಿದೆ. ವ್ಯಕ್ತಿಯ ಸಾವಿಗೆ ಪೊಲೀಸರೇ ಕಾರಣ ಎಂದು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದು, ಪೊಲೀಸ್ ಠಾಣೆ ಒಳಗೆ ಶವ ತಂದಿಟ್ಟು ಪ್ರತಿಭಟನೆ ನಡೆಸಲಾಗಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಜನರು ಪ್ರತಿಭಟನೆ ಮಾಡುತ್ತಿದ್ದಾರೆ. ಯಳನಾಡು ಗ್ರಾಮದ ಕಾಂತರಾಜು ಎಂಬಾತ ಸಾವನಪ್ಪಿದ್ದು, ಠಾಣೆ ಎದರು ಊರಿನ ಜನರು ಜಮಾಯಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಠಾಣೆಗೆ ಕರೆ ಬಂದಾಗ ಕಾಂತರಾಜು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದ. ಹಾಗಾಗಿ ಗ್ರಾಮಸ್ಥರು ಪೊಲೀಸರೇ ಕಾಂತರಾಜ್ ಸಾವಿಗೆ ಕಾರಣ ಎಂದು ಶವ ಪೊಲೀಸ್ ಠಾಣೆಯಲ್ಲಿ ಇಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ. ಜೂಜಾಟ ಕೇಸ್ನಲ್ಲಿ ಪೊಲೀಸರು ಸಂಜೆ ಕಾಂತರಾಜು ಸೇರಿದಂತೆ ಆರು ಜನರನ್ನು ಠಾಣೆಗೆ ಕರೆತಂದಿದ್ದಾರೆ. ರಾತ್ರಿ 8 ಗಂಟೆಯವರೆಗೂ ಠಾಣೆಯಲ್ಲಿ ಇರಿಸಿಕೊಂಡಿದ್ದಾರೆ ಈ ವೇಳೆ ಕಾಂತರಾಜ್ ಠಾಣೆಯಲ್ಲಿಯೇ ಮೃತಪಟ್ಟಿದ್ದಾರೆ. ಕಾಂತರಾಜ್ ಸಾವಿಗೆ ನೇರವಾಗಿ ಪೊಲೀಸರೇ ಕಾರಣ ಎಂದು ಕಿಡಿ ಕಾರಿದ್ದಾರೆ. ರಾತ್ರಿ 8 ಗಂಟೆ ಬಳಿಕ…
ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಹಿಂದೆ ರಂಜಾನ್ ಹಬ್ಬ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬದ ಸಂಭ್ರಮ ಕಳೆಕಟ್ಟಿದೆ. ಕಳೆದ ಒಂದು ತಿಂಗಳಿಂದ ಮುಸ್ಲಿಮರು ಉಪವಾಸ ಆಚರಿಸಿದ್ದರು. ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಮೂಲಕ ಹಬ್ಬ ಆಚರಣೆ ಮಾಡುತ್ತಾರೆ. ಹೌದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಅತ್ಯಂತ ಸಡಗರ-ಸಂಭ್ರಮದಿಂದ ‘ಈದುಲ್ ಫಿತ್ರ್’ ಹಬ್ಬವನ್ನು ಆಚರಿಸಲಾಗುತ್ತದೆ. ಇಂದು ಸಂಜೆ ಆಕಾಶದಲ್ಲಿ ಶವ್ವಾಲ್ ತಿಂಗಳ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ, ನಾಳೆ ಶುಕ್ರವಾರ ಈದ್ ಹಬ್ಬವನ್ನು ಆಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ. ಕಳೆದ 30 ದಿನಗಳಿಂದ ಮುಂಜಾನೆಯಿಂದ ಸಂಜೆಯವರೆಗೆ ಅನ್ನಾಹಾರಗಳನ್ನು ತ್ಯಜಿಸಿ, ಕಠಿಣ ಉಪವಾಸ ವ್ರತವನ್ನು ಕೈಗೊಂಡಿದ್ದ ಮುಸ್ಲಿಂ ಸಮುದಾಯದವರು ಇಂದು ಸಂಜೆ ಚಂದ್ರದರ್ಶನದೊಂದಿಗೆ ತಮ್ಮ ವ್ರತವನ್ನು ಪೂರೈಸಿದ್ದಾರೆ. ದಾನ-ಧರ್ಮ,…
ನವದೆಹಲಿ : ಕತಾರ್ ಇಂಧನ ಘಟಕಗಳ ಮೇಲೆ ಇರಾನ್ ದಾಳಿ ನಡೆಸಿದ್ದು ಕತಾರ್ ನ ಶೇಕಡ 17ರಷ್ಟು ಎನರ್ಜಿ ಸಾಮರ್ಥ್ಯ ಭಸ್ಮವಾಗಿದೆ ಎಂದು ಕತಾರ್ ಎನರ್ಜಿ CEO ಸಾದ್ ಅಲ್-ಕಾಬಿ ಕಳವಳ ವ್ಯಕ್ತಪಡಿಸಿದ್ದಾರೆ. ಇರಾನ್ ನಡೆಸಿದ ಅಟ್ಟಹಾಸಕ್ಕೆ ಅನಿಲ ಘಟಕಗಳು ನಲುಗಿ ಹೋಗಿವೆ. ತೈಲ ಘಟಕಗಳ ದುರಸ್ತಿಗೆ ಕನಿಷ್ಠ ಮೂರರಿಂದ ಐದು ವರ್ಷಗಳು ಬೇಕು. ರಂಜಾನ್ ದಿನದಂದೆ ಮುಸ್ಲಿಂ ರಾಷ್ಟ್ರದಿಂದ ದಾಳಿ ಆಗಿದೆ ಇದು ಅತೀವ ನೋವು ತಂದಿದೆ ಎಂದು ಸಾದ್ ಅಲ್-ಕಾಬಿ ಬೇಸರ ವ್ಯಕ್ತಪಡಿಸಿದ್ದಾರೆ. ದಾಳಿಯಿಂದ ಜಾಗತಿಕ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ಇಟಲಿ ಹಾಗು ಬೆಲ್ಜಿಯಂ ರಾಷ್ಟ್ರಗಳಿಗೆ ಗ್ಯಾಸ್ ಕಟ್ ಆಗಲಿದೆ ಹಾಗೂ ದೀರ್ಘಕಾಲದ ಒಪ್ಪಂದಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಕಾಂತಾರ ಭರ್ಜರಿ ಯಶಸ್ವಿ ಬಳಿಕ ಕಾಂತಾರ ಚಾಪ್ಟರ್ 1 ಸಹ ಭಾರಿ ಯಶಸ್ವಿ ಕಂಡಿತು. ಇದೀಗ ಅದೇ ಸಂಭ್ರಮದಲ್ಲಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಅಭಿಮಾನಿಗಳ ತಲೆಗೆ ಮತ್ತೊಂದು ಹುಳ ಬಿಟ್ಟಿದ್ದಾರೆ. ಹೌದು ಇನ್ಸ್ಟಾಗ್ರಾಮ್ ನಲ್ಲಿ ಯುಗಾದಿ ಹಬ್ಬ ಸಂಭ್ರಮದ ಮಧ್ಯೆ ಈ ಒಂದು ಪೋಸ್ಟ್ ಭಾರಿ ವೈರಲ್ ಆಗಿದೆ.ಬಿಳಿ ಬಣ್ಣದ ಬೋರ್ಡ್ನಲ್ಲಿ ಓಂ ಎಂದು ಆರಂಭದಲ್ಲಿ ಬರೆಯಲಾಗಿದೆ. ನಂತರ ಮಧ್ಯಭಾಗದಲ್ಲಿ ʻಅಧ್ಯಾಯ 2 ಇಲ್ಲಿಂದ ಶುರುʼ ಎಂದು ಬರೆದು ಕೊನೆಗೆ ಹ್ಯಾಪಿ ಯುಗಾದಿ.. ಯುಗಾದಿ ಹಬ್ಬದ ಶುಭಾಶಯಗಳು ಎಂದು ಬರೆದಿದ್ದಾರೆ. ಯುಗಾದಿಯ ಶುಭಾಶಯ ತಿಳಿಸಿದ ಅವರು ಅಧ್ಯಾಯ 2 ಇಲ್ಲಿಂದ ಶುರು ಎಂದು ಬರೆದಿರುವ ಬೋರ್ಡ್ನ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಅಪ್ಲೋಡ್ ಮಾಡಿದ ಬೆನ್ನಲ್ಲೇ ಅಭಿಮಾನಿಗಳು ಕಾಂತಾರ ಚಾಪ್ಟರ್ 2 ಬರುತ್ತಾ ಎಂದು ಪ್ರಶ್ನಿಸುತ್ತಿದ್ದಾರೆ. ಅಥವಾ ಅಧ್ಯಾಯ 2 ಹೆಸರಿನಲ್ಲೇ ಬೇರೆ ಸಿನಿಮಾ ಬರುತ್ತಾ ಎಂದು ಕೇಳುತ್ತಿದ್ದಾರೆ.ಅಪ್ಲೋಡ್ ಮಾಡಿದ ಫೋಟೋವನ್ನು ಪತ್ನಿ ಪ್ರಗತಿ ಶೆಟ್ಟಿ,…
BREAKING : ರಾಜ್ಯದಲ್ಲಿ 1 ವಾರ ಭಾರಿ ಮಳೆ : ಈ 8 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ!
ಬೆಂಗಳೂರು : ಕಳೆದ ಎರಡು ರಾಜ್ಯದಲ್ಲಿ ಆಲಿಕಲ್ಲು ಮಳೆಯಾಗಿ ಕರ್ನಾಟಕ ಮಿನಿ ಕಾಶ್ಮೀರ ಎಂಬಂತೆ ಆಗಿತ್ತು. ಇದೀಗ ಹವಾಮಾನ ಇಲಾಖೆ ಕರ್ನಾಟಕದ ಹಲವೆಡೆ ಮುಂದಿನ 1 ವಾರಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 1 ವಾರಗಳ ಕಾಲ ಭಾರಿ ಮಳೆಯಾಗಲಿದೆ. ಅಲ್ಲದೆ ಈ ಭಾರಿ ವಿಜಯಪುರ, ಧಾರವಾಡ, ಹಾವೇರಿ, ಗದಗ, ಚಿಕ್ಕಮಗಳೂರು, ಮಂಡ್ಯ, ಕೋಲಾರ ಮತ್ತು ಹಾಸನ ಸೇರಿದಂತೆ ಒಟ್ಟು 8 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಆಗಲಿದೆ. ವಿಜಯಪುರ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮತ್ತು ಬಿರುಗಾಳಿಯೊಂದಿಗೆ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ…
ಬೆಂಗಳೂರು : ಇತ್ತೀಚಿಗೆ ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ಮಾಡ್ತಿದ್ದಾರೆ ಎಂದು ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಮುಂದಾಗಿದ್ದರು ಎನ್ನುವ ಸುದ್ದಿ ಹರಿದಾಡಿತ್ತು. ಇದೀಗ ಸರ್ಕಾರಿ ನೌಕರರ ವರ್ಗಾವಣೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯರೆ ಹಸ್ತಕ್ಷೇಪ ಮಾಡುತ್ತಿರುವ ವಿಚಾರಕ್ಕೆ ಹೈಕೋರ್ಟ್ ಅಸಮಾಧಾನ ಹೊರಹಾಕಿದೆ. ಹೌದು ಸಿಎಂ ಕಚೇರಿಯಿಂದ ವರ್ಗಾವಣೆ ವಿಚಾರವಾಗಿ ಬೆಸ್ಕಾಂ ಎಇ ಚೇತನ್ ಎಸ್ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡಸಿದ ಹೈಕೋರ್ಟ್ ಗ್ರೂಪ್ ಬಿ ಅಥವಾ ಸಿ ಉದ್ಯೋಗಿಗಳ ವರ್ಗಾವಣೆ ವಿಚಾರದಲ್ಲಿ ಅಸಮಾಧಾನ ಹೊರಹಾಕಿದೆ. ಮುಖ್ಯಮಂತ್ರಿಗಳಿಗೆ ನೌಕರರ ವರ್ಗಾವಣೆಗಿಂತ ಮಾಡಬೇಕಾದ ಉತ್ತಮ ಕೆಲಸಗಳಿದ್ದು, ಸರ್ಕಾರಿ ನೌಕರರ ವರ್ಗಾವಣೆ ವಿಚಾರ ಆಯಾ ಇಲಾಖೆಗೆ ಬಿಡಬೇಕು ಎಂದು ನ್ಯಾ.ಡಿ.ಕೆ.ಸಿಂಗ್, ನ್ಯಾ.ಟಿ.ಎಂ.ನದಾಫ್ ಅವರಿದ್ದ ಹೈಕೋರ್ಟ್ ದ್ವಿಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ. ಸಿಎಂ ನೀಡುವ ವರ್ಗಾವಣೆ ಪತ್ರಗಳ ಬಗ್ಗೆ ಹೈಕೋರ್ಟ್ ಪೀಠವು ಸಿಎಸ್ ನಿಲುವು ಕೇಳಿತ್ತು. ಸಿಎಂ ಕಚೇರಿಯಿಂದ ನೀಡುವ ಟಿಪ್ಪಣಿಗಳು ಕೇವಲ ಶಿಫಾರಸುಗಳಷ್ಟೇ, ಸಂಬಂಧಪಟ್ಟ ಇಲಾಖೆ ವರ್ಗಾವಣೆ ಆದೇಶ…
ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ ಶಾಲಾ ಮಕ್ಕಳಿಗೆ 2026-27ನೇ ಸಾಲಿನಲ್ಲಿ ನೀಡಬೇಕಾದ ಉಚಿತ ಶೂ, ಸಾಕ್ಸ್ ಖರೀದಿಗೆ ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೆ (ಎಸ್ಡಿಎಂಸಿ) ಹಣ ನೀಡುವ ಬದಲು ಟೆಂಡರ್ ಪ್ರಕ್ರಿಯೆ ಮೂಲಕ ಖರೀದಿಸಿ ನೀಡಲು ಸರ್ಕಾರ ತೀರ್ಮಾನಿಸಿದೆ. ಸರ್ಕಾರಿ ಶಾಲೆಗಳಲ್ಲಿನ 1ರಿಂದ 10ನೇ ತರಗತಿವರೆಗಿನ 36.56 ಲಕ್ಷ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಖರೀದಿಗೆ 104 ಕೋಟಿ ರು. ಅನುದಾನ ವೆಚ್ಚಕ್ಕೆ ಶಿಕ್ಷಣ ಇಲಾಖೆ ಆಯುಕ್ತರಿಗೆ ಅನುಮತಿ ನೀಡಿದೆ. ಈ ಪೈಕಿ ಎಸ್ಡಿಎಂಸಿಯವರು ನಿರ್ಧರಿಸಿದರೆ ಅತಿ ಹೆಚ್ಚು ಮಳೆಯಾಗುವ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳ ಶಾಲೆಗಳ ಮಕ್ಕಳಿಗೆ ಶೂ ಬದಲು ಚಪ್ಪಲಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದೆ. ಶೂ, ಸಾಕ್ಸ್ ಖರೀದಿಗೆ ಎಂಟು ವರ್ಷಗಳಿಂದ ಇರುವ ದರವನ್ನೇ ಈ ಬಾರಿಯೂ ಮುಂದುವರೆಸಲಾಗಿದೆ. ತರಗತಿವಾರು 1ರಿಂದ 5ನೇ ತರಗತಿ ಮಕ್ಕಳಿಗೆ ತಲಾ 265 ರು., 6 ರಿಂದ 8ನೇ ತರಗತಿಯ ಪ್ರತಿ ವಿದ್ಯಾರ್ಥಿಗೆ 295 ರು.,…
ನವದೆಹಲಿ : ಐತಿಹಾಸಿಕ ನಿಖರತೆಯ ಬಗ್ಗೆ ಟೀಕೆಗಳನ್ನು ಎದುರಿಸಿದ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ತನ್ನ 8 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕ ‘ಎಕ್ಸ್ಪ್ಲೋರಿಂಗ್ ಸೊಸೈಟಿ: ಇಂಡಿಯಾ ಮತ್ತು ಬಿಯಾಂಡ್ ಪಾರ್ಟ್-I’ ನಿಂದ ವಿವಾದಾತ್ಮಕ ನಕ್ಷೆಯನ್ನು ಸದ್ದಿಲ್ಲದೆ ಹಿಂತೆಗೆದುಕೊಂಡಿದೆ. ನಕ್ಷೆಯು ಪ್ರಾದೇಶಿಕ ಇತಿಹಾಸವನ್ನು ತಪ್ಪಾಗಿ ಪ್ರತಿನಿಧಿಸುತ್ತದೆ ಎಂದು ರಾಜಸ್ಥಾನದ ಹಿಂದಿನ ರಾಜಮನೆತನದ ಸದಸ್ಯರು ಮತ್ತು ರಾಜಕೀಯ ಪ್ರತಿನಿಧಿಗಳು ಆಕ್ಷೇಪಣೆಗಳನ್ನು ಎತ್ತಿದ ನಂತರ ಎನ್ಸಿಇಆರ್ಟಿ ಈ ಕ್ರಮ ಕೈಗೊಂಡಿದೆ. ಏನಿದು ವಿವಾದ? ಈ ವಿಷಯವು ಜುಲೈ 2025 ರ ಆವೃತ್ತಿಯ ಪಠ್ಯಪುಸ್ತಕದ 3 ನೇ ಘಟಕ (ಪುಟ 71) ನಲ್ಲಿರುವ ನಕ್ಷೆಯ ಬಗ್ಗೆ ಆಗಿದೆ. ಈ ನಕ್ಷೆ 1759 ರಲ್ಲಿ ಮರಾಠಾ ಸಾಮ್ರಾಜ್ಯದ ಪ್ರಾದೇಶಿಕ ವ್ಯಾಪ್ತಿಯನ್ನು ಚಿತ್ರಿಸಿದೆ. ನಕ್ಷೆಯು ಜೈಸಲ್ವೇರ್ ರಾಜಪ್ರಭುತ್ವದ ರಾಜ್ಯ ಮತ್ತು ವಿಸ್ತರಣೆಯ ಮೂಲಕ ರಾಜಸ್ಥಾನದ ಕೆಲವು ಭಾಗಗಳನ್ನು ಮರಾಠಾ ನಿಯಂತ್ರಣಕ್ಕೆ ಒಳಪಡಿಸಲಾಗಿದೆ ಎಂದು ವಿಮರ್ಶಕರು ವಾದಿಸಿದ್ದಾರೆ. 2025 ಆಗಸ್ಟ್ ರಲ್ಲಿ ಜೈಸಲ್ಮೀರ್ನ…
ಬೆಂಗಳೂರು : ರಾಜ್ಯದಲ್ಲಿ ನಡೆಸಲಾಗುವ ಜಯಂತಿ ಹಾಗೂ ಉತ್ಸವಗಳಲ್ಲಿ ಡಿಜೆ ಸೌಂಡ್, ಐಟಂ ಸಾಂಗ್ ಬ್ಯಾನ್ ಮಾಡುವ ಬಗ್ಗೆ ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಕೆಲ ಸದಸ್ಯರಿಂದಲೇ ಒತ್ತಾಯ ಕೇಳಿ ಬಂದಿದೆ.ಈ ಹಿನ್ನೆಲೆ ರಾಜ್ಯ ಸರ್ಕಾರ ಇನ್ಮುಂದೆ ಧಾರ್ಮಿಕ ಕಾರ್ಯಕ್ರಮಗಳಾಗಿರಬಹುದು, ಜಯಂತಿ ಹಾಗೂ ಉತ್ಸವಗಳಲ್ಲಿ ಡಿಜೆ ಬ್ಯಾನ್ ಮಾಡುವ ಕುರಿತು ಚಿಂತನೆ ನಡೆಸುತ್ತಿದೆ. ಇದೇ ವೇಳೆ ಬಿಜೆಪಿಯವರು ಸಹಕರಿಸಿದರೆ ಡಿಜೆ ಬ್ಯಾನ್ ಮಾಡಿ ಆದೇಶಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಹೇಳಿದ ಪ್ರಸಂಗವೂ ಜರುಗಿತು. ಬುಧವಾರ ಪ್ರಶೋತ್ತರ ಕಲಾಪದಲ್ಲಿ ಪ್ರತಿ ಜಿಲ್ಲೆಯಲ್ಲಿ ಉತ್ಸವ ನಡೆಸುವ ಬಗ್ಗೆ ನಡೆದ ಚರ್ಚೆ ವೇಳೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಈ ವಿಚಾರ ಪ್ರಸ್ತಾ ಪಿಸಿ, ರಾಜ್ಯದಲ್ಲಿ ನಡೆಯುವ ವಿವಿಧ ಜಯಂತಿ, ಉತ್ಸವಗ ಳಲ್ಲಿ ಡಿಜೆ, ಐಟಂ ಸಾಂಗ್ಗಳಿಂದ ಸಮಸ್ಯೆಯಾಗಿದೆ. ಐಟಂ ಸಾಂಗ್ ಇಲ್ಲದೇ ದೇವರ ಮೆರವಣಿಗೆ ಇಲ್ಲ ಎನ್ನುವ ಸ್ಥಿತಿ ಇದೆ. ಇದು ನಿಜಕ್ಕೂ ಅಸಹ್ಯ. ಹೀಗಾಗಿ…
ಬೆಂಗಳೂರು : ಸರ್ಕಾರ ಮಂಜೂರು ಮಾಡಿರುವ ಜಮೀನುಗಳಿಗೆ ಸರ್ಕಾರವೇ ಪೋಡಿ ಮಾಡುವ ಅಭಿಯಾನ ಕೈಗೊಂಡಿದ್ದು, ಕಳೆದ ಒಂದು ವರ್ಷ ದಲ್ಲಿ 2.16 ಲಕ್ಷ ಅರ್ಜಿಗಳನ್ನು ಪರಿಶೀಲಿಸಿ ಪೋಡಿ ಮಾಡಲು ಆದೇಶಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನಪರಿಷತ್ ನಲ್ಲಿ ಬಿಜೆಪಿ ಪ್ರತಾಪಸಿಂಹ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ 5,70,116 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 1.60 ಲಕ್ಷ ಅರ್ಜಿಗಳು ಪಹಣಿ ತಿದ್ದುಪಡಿಯಾಗಿ ತಾಲೂಕು ಕಚೇರಿಗಳಲ್ಲಿ ಪರಿಶೀಲನೆ ಹಂತ ದಲ್ಲಿವೆ. 4.09 ಲಕ್ಷ ಅರ್ಜಿಗಳು ಅಳತೆ ಮತ್ತು ವಿವಿಧ ಹಂತದಲ್ಲಿ ಭೂ ಮಾಪನ ಇಲಾಖೆಯಲ್ಲಿ ಬಾಕಿಯಿವೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ 60,943 ಅರ್ಜಿಗಳ ಪೋಡಿ ಮಾಡಲು ಆದೇಶಿಸಲಾಗಿದೆ. ಈ ಪೈಕಿ 23,621 ಅರ್ಜಿಗಳು ಪೋಡಿ ಆಗಿವೆ. ಉಳಿದ ಅರ್ಜಿಗಳನ್ನು ಡಿಸೆಂಬರ್ಒಳಗೆ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಭೂ ಅಳತೆ ಕಾರ್ಯ ತ್ವರಿತಗೊಳಿಸಲು ಭೂ ಮಾಪಕರಿಗೆ ಆಧುನಿಕ ಉಪಕರಣ ಹಂತ-ಹಂತವಾಗಿ ಖರೀದಿಸಿ ನೀಡಲಾಗುತ್ತಿದೆ. ಈಗಾಗಲೇ 590 ರೋವರ್ಸ್ಗಳನ್ನು ಭೂ ಮಾಪಕರಿಗೆ…














