Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಕನಕಪುರದ ನವೋದಯ ಆಸ್ಪತ್ರೆಯ ವೈದ್ಯ ಚೇತನ್ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ 2 ದಿನಗಳ ಬಳಿಕ ಮಹದೇಶ್ವರ ಬಡಾವಣೆಯ ಮನೆಯಲ್ಲಿ ಅದೇ ಆಸ್ಪತ್ರೆಯ ನರ್ಸ್ ಒಬ್ಬರು ನೇಣಿಗೆ ಶರಣಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ ಮಹದೇಶ್ವರ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದೆ. ನವೋದಯ ಆಸ್ಪತ್ರೆಯ ನರ್ಸ್ ಸರಸ್ವತಿ (45) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡು ದಿನಗಳ ಹಿಂದೆ ಡಾ. ಚೇತನ್ ಟೆಂಕರ್ ಆತ್ಮಹತ್ಯೆಗೆ ಶರಣಾಗಿದ್ದರು. ಕನಕಪುರದ ನವೋದಯ ಆಸ್ಪತ್ರೆಯ ವೈದ್ಯ ಡಾಕ್ಟರ್ ಚೇತನ್ ಟೆಂಕರ್ ಆತ್ಮಹತ್ಯೆಗೆ ಶರಣಾಗಿದ್ದರು. ವೈದ್ಯ ಚೇತನ್ ಆತ್ಮಹತ್ಯೆ ನರ್ಸ್ ಕೂಡ ನೇಣಿಗೆ ಶರಣಾಗಿದ್ದಾರೆ. ಘಟನೆ ಕುರಿತಂತೆ ಕನಕಪುರದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಅನುಚಿತ ವರ್ತನೆ ಹಾಗೂ ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕಲು ಪ್ರಿಸನರ್ಸ್ ಟ್ರ್ಯಾಕಿಂಗ್ ಮೂವ್ಮೆಂಟ್ ಸಿಸ್ಟಂ ಪರಿಚಯಿಸಲಾಗಿದ್ದು, ಇನ್ನು ಮುಂದೆ ಪ್ರತಿ ಬ್ಯಾರಕ್ ಪ್ರವೇಶಿಸುವಾಗ ಕೈದಿಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆ ಕಡ್ಡಾಯ. ಈಗಾಗಲೇ ಜೈಲಿನಲ್ಲಿ ಕೃತಕ ಬುದ್ದಿಮತ್ತೆ (ಎಐ) ಕ್ಯಾಮೆರಾಗಳ ಮೂಲಕ ಕೈದಿಗಳು ಮತ್ತು ಅಧಿಕಾರಿ-ಸಿಬ್ಬಂದಿ ಮೇಲೆ ನಿಗಾವಹಿಸಲಾಗಿತ್ತು. ಇದೀಗ ಅದರೊಂದಿಗೆ ಕೈದಿಗಳ ಫೋನ್ ಕರೆ ವ್ಯವಸ್ಥೆ ಸಂಪೂರ್ಣ ಡಿಜಿಟಲ್ ಟ್ರ್ಯಾಕಿಂಗ್, ಸಂದರ್ಶಕರನ್ನು ಭೇಟಿಯಾಗಲು ಡಿಜಿಟಲ್ ಟೋಕನ್ ಪದ್ಧತಿ ಸೇರಿ ಕಾರಾಗೃಹ ಬಂಧಿಗಳ ಚಲನವಲನಗಳ ಮೇಲೆ ಸಂಪೂರ್ಣ ನಿಗಾ ಇಡಲು ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದಕ್ಕೆ ಸುಮಾರು 2.25 ಕೋಟಿ ರೂ. ವೆಚ್ಚವಾಗಿದೆ ಎಂದು ಜೈಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜೈಲಿನ ಪ್ರತಿ ಬ್ಯಾರಕ್, ಸಂದರ್ಶಕರ ಕೊಠಡಿ, ಆಸ್ಪತ್ರೆ, ಕ್ಯಾಂಟೀನ್, ಅಡುಗೆ ಕೋಣೆ, ಗ್ರಂಥಾಲಯ, ಮೈದಾನ, ಕರಕುಶಲ ಕಾರ್ಖಾನೆಗಳು, ಬೇಕರಿ ಸೇರಿ ಎಲ್ಲೆಡೆ ಬಯೋಮೆಟ್ರಿಕ್ ವ್ಯವಸ್ಥೆ ಮಾಡಲಾಗಿದೆ. ಪ್ರಮುಖವಾಗಿ ಸಂದರ್ಶಕರ ಕೊಠಡಿಗೆ ಹೋಗುವಾಗ ಬಯೊಮೆಟ್ರಿಕ್ ಜೊತೆಗೆ ಟೋಕನ್ ಪಡೆಯಬೇಕು.…
ಬಳ್ಳಾರಿ : ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಸುಮನ್ ಪನ್ನೇಕರ್ ಅವರ ಗನ್ಮ್ಯಾನ್ ದೇವರಾಜ್ ಹಾಗೂ ಇತರ ಇಬ್ಬರನ್ನು ಅಕ್ರಮವಾಗಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಮೋಕಾ ಪೊಲೀಸರು ಬಂಧಿಸಿದ್ದಾರೆ. ಪಡಿತರ ಅಕ್ಕಿ ಸಾಗಣೆದಾರನೊಬ್ಬನಿಗೆ ಬೆದರಿಕೆ ಹಾಕಿ ಲಕ್ಷಾಂತರ ರೂಪಾಯಿ ಹಣ ಪಡೆದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಘಟನೆಯ ಹಿನ್ನೆಲೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಶರಬಯ್ಯ ಎಂಬಾತನ ಲಾರಿಗಳನ್ನು ತಡೆದ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ. ಅಕ್ರಮವಾಗಿ ಅಕ್ಕಿ ತುಂಬಿದ ಎರಡು ಲಾರಿಗಳು ಬಳ್ಳಾರಿಯಿಂದ ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದವು. ಈ ವೇಳೆ ಮಾರ್ಗಮಧ್ಯೆ ಲಾರಿಗಳನ್ನು ಅಡ್ಡಗಟ್ಟಿದ ಗನ್ಮ್ಯಾನ್ ದೇವರಾಜ್ ಮತ್ತು ತಂಡ, ತಾವು ‘ಎಸ್ಪಿ ಸ್ಕ್ವಾಡ್’ (SP Squad) ನಿಂದ ಬಂದಿರುವುದಾಗಿ ನಂಬಿಸಿದ್ದರು. ಲಕ್ಷಾಂತರ ರೂಪಾಯಿ ವಸೂಲಿ ಅಕ್ರಮ ಅಕ್ಕಿ ಸಾಗಾಟದ ಪ್ರಕರಣ ದಾಖಲಿಸದಂತೆ ಇರಲು ಆರೋಪಿಗಳು ಮೊದಲು 5 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಸುದೀರ್ಘ ಚೌಕಾಶಿ ನಡೆಸಿದ ನಂತರ, ಅಂತಿಮವಾಗಿ 3 ಲಕ್ಷ…
ಮಡಿಕೇರಿ: ಚಾಲನೆ ಮಾಡುತ್ತಿದ್ದ ಸಂದರ್ಭದಲ್ಲಿಯೇ ಬಸ್ ಚಾಲಕನಿಗೆ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಡಿಕೇರಿ ತಾಲೂಕಿನ ತಾಳತ್ಮನೆ ಬಳಿ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲರೂ ಯಾವುದೇ ಅಪಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ವಿವರ: ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಚಾಲಕನಿಗೆ ತಾಳತ್ಮನೆ ತಿರುವಿನ ಬಳಿ ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಬದಿಯಲ್ಲಿದ್ದ ದಿಣ್ಣೆಗೆ ಡಿಕ್ಕಿ ಹೊಡೆದು ನಿಂತಿದೆ. ಘಟನೆಯ ತೀವ್ರತೆಗೆ ಚಾಲಕ ಬಸ್ಸಿನ ಸೀಟಿನ ಮೇಲೆಯೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಪಾರಾದ ಪ್ರಯಾಣಿಕರು: ಅಪಘಾತ ಸಂಭವಿಸಿದ ವೇಳೆ ಬಸ್ಸಿನಲ್ಲಿ ಹಲವಾರು ಪ್ರಯಾಣಿಕರಿದ್ದರು. ಬಸ್ ವೇಗವಾಗಿ ಚಲಿಸುತ್ತಿದ್ದರೂ, ರಸ್ತೆ ಪಕ್ಕದ ದಿಣ್ಣೆಗೆ ಗುದ್ದಿ ನಿಂತಿದ್ದರಿಂದ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ. ಘಟನೆಯಿಂದ ಗಾಬರಿಗೊಂಡ ಪ್ರಯಾಣಿಕರು ತಕ್ಷಣವೇ ಬಸ್ಸಿನಿಂದ ಕೆಳಗಿಳಿದಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಭೇಟಿ: ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ…
ಬೆಂಗಳೂರು : ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿಯಾಗಿ ಮತಪತ್ರ ತಿದ್ದಿರುವುದಾಗಿ ಆರೋಪಿಸಿ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ. ಭೇಟಿ ಬಳಿಕ ಮಾತನಾಡಿದ ಅವರು, 2023ರ ಚುನಾವಣೆ ಮತ ಎಣಿಕೆಯ ವೇಳೆ ಜೆಡಿಎಸ್ ಕಾಂಗ್ರೆಸ್, ಬಿಜೆಪಿ, ಪಕ್ಷೇತರರ ಅಭ್ಯರ್ಥಿಗಳ ಕೌಂಟಿಂಗ್ ಏಜೆಂಟ್ ಇದ್ದರು. ಪಾರದರ್ಶಕವಾಗಿ ಮತ ಎಣಿಕೆ ಆಗಿತ್ತು. ಮತ ಎಣಿಕೆ ಬಳಿಕ ರಾಜೇಗೌಡ ಗೆದ್ದರು ಎಂದು ಘೋಷಣೆ ಮಾಡಿದ್ದರು. ವ್ಯಾಲಿಡ್ ಯಾವುದು ಇನ್ವ್ಯಾಲಿಡ್ ಯಾವುದು ಎಂದು ಎಲ್ಲರಿಗೂ ತೋರಿಸಿದ್ದರು. ಆಮೇಲೆ ನನ್ನ ವಿರುದ್ಧ ಎಲೆಕ್ಷನ್ ಫಿಟಿಶನ್ ಹಾಕಿ, ಅನೇಕ ಆರೋಪ ಮಾಡಿದರು. ಈ ಹಿನ್ನೆಲೆ ಮರು ಎಣಿಕೆಗೆ ಉಚ್ಚ ನ್ಯಾಯಾಲಯ ಆದೇಶ ಮಾಡಿತ್ತು ಎಂದು ವಿವರಿಸಿದರು.
ಬೆಂಗಳೂರು : ನಿರ್ದೇಶಕ ಹಾಗು ನಟ ಪ್ರೇಮ್ ಅವರ ಕೆಡಿ ಚಿತ್ರದ ‘ಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿನ ವಿವಾದಕ್ಕೆ ಸಂಬಂಧಪಟ್ಟಂತೆ ಇದೀಗ ನಟಿ ನೋರಾ ಫತೆಹಿ ಕ್ಷಮೆಯಾಚನೆ ಮಾಡಿದ್ದಾರೆ. ರಾಷ್ಟೀಯ ಮಹಿಳಾ ಆಯೋಗದ ಮುಂದೆ ಹಾಜರಾಗಿದ್ದ ನೋರಾ ಯಾರ ಮನಸ್ಸಿಗೂ ನೋವುಂಟು ಮಾಡುವ ಉದ್ದೇಶ ನನಗಿರಲಿಲ್ಲ. ಒಬ್ಬ ಕಲಾವಿದೆಯಾಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದೆ. ಸಮಾಜಕ್ಕೆ ಒಳ್ಳೆಯದನ್ನು ಮಾಡುವ ಮೂಲಕ ತಪ್ಪನ್ನು ತಿದ್ದಿಕೊಳ್ತೇನೆ. ಅನಾಥ ಹೆಣ್ಮಕ್ಳ ಶಿಕ್ಷಣಕ್ಕೆ ಧನಸಹಾಯ ಮಾಡಲು ನೋರಾ ನಿರ್ಧಾರ ಮಾಡಿದ್ದಾರೆ. ಹಾಡಿನ ಸಾಹಿತ್ಯವು ಮಹಿಳೆಯರ ಘನತೆಗೆ ಕುಂದು ತರುವಂತಿದೆ ಎಂದು ಆರೋಪಿಸಿ ಮಹಿಳಾ ಪರ ಸಂಘಟನೆಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಮಹಿಳಾ ಆಯೋಗವು ನೋರಾ ಅವರಿಗೆ ನೋಟಿಸ್ ನೀಡಿತ್ತು. ವಿಚಾರಣೆಯ ವೇಳೆ ಮಾತನಾಡಿದ ನೋರಾ, “ಯಾರ ಮನಸ್ಸಿಗೂ ನೋವುಂಟು ಮಾಡುವ ಅಥವಾ ಯಾವುದೇ ವರ್ಗದ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ನನಗಿರಲಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಒಬ್ಬ ಕಲಾವಿದೆಯಾಗಿ ಸಮಾಜದಲ್ಲಿ ತನ್ನ…
ಬೆಂಗಳೂರು: ಆನ್ಲೈನ್ ಗೇಮಿಂಗ್ ಲೋಕಕ್ಕೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ. ಬೆಂಗಳೂರು ಸೇರಿದಂತೆ ದೇಶಾದ್ಯಂತ ಒಟ್ಟು 16 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು, ತೆರಿಗೆ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನ ಪ್ರಮುಖ ಗೇಮಿಂಗ್ ಕಂಪನಿಯಾದ ‘ಗೇಮ್ಸ್ಕ್ರಾಫ್ಟ್’ (Gameskraft) ಕಚೇರಿಯ ಮೇಲೆ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ತಪಾಸಣೆ ಆರಂಭಿಸಿದೆ. ರಮ್ಮಿ ಕಲ್ಚರ್ ಆಪ್ ಮೂಲಕ ವಂಚನೆ ಆರೋಪ ಬೆಂಗಳೂರು ಮೂಲದ ಗೇಮ್ಸ್ಕ್ರಾಫ್ಟ್ ಕಂಪನಿಯು ‘ರಮ್ಮಿ ಕಲ್ಚರ್’ (RummyCulture) ಎಂಬ ಜನಪ್ರಿಯ ಆಪ್ ಅನ್ನು ನಡೆಸುತ್ತಿದೆ. ಈ ಆಪ್ ಮೂಲಕ ಬಳಕೆದಾರರಿಗೆ ವಂಚನೆ ಮಾಡಲಾಗಿದೆ ಹಾಗೂ ಆಟದ ಹೆಸರಿನಲ್ಲಿ ದೊಡ್ಡ ಮಟ್ಟದ ಹಣಕಾಸು ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಆನ್ಲೈನ್ ಗೇಮಿಂಗ್ ನೆಪದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಹಣದ ವ್ಯವಹಾರ ನಡೆಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಇಡಿ ಈ ಕ್ರಮ ಕೈಗೊಂಡಿದೆ. ದೆಹಲಿ ಎಫ್ಐಆರ್…
ಬೆಂಗಳೂರು : 26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರು ಅಡ್ಡಿಪಡಿಸಿದ ಹಿನ್ನೆಲೆ ವಿಷ ಸೇವಿಸಿ 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ನಗರದ ರಾಜಾಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ. ಬಿಡದಿ ಮೂಲದ ಬಾಲಕ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮೇ.4ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಿಡದಿ ಮೂಲದ ಶೋಭಾ ಎಂಬ ಯುವತಿ ಜೊತೆ ಬಾಲಕ ಪ್ರೀತಿಯಲ್ಲಿ ಬಿದ್ದಿದ್ದ. ಈ ಬಗ್ಗೆ ಪೋಷಕರಿಗೆ ವಿಚಾರ ಗೊತ್ತಾಗಿದ್ದು, ಬಾಲಕನಿಗೆ ಬೈದು ಬುದ್ಧಿ ಹೇಳಿದ್ದರು. ನಿಮ್ಮಿಬ್ಬರಿಗೂ ವಯಸ್ಸಿನ ಅಂತರ ಇದೆ, ಇದನ್ನ ಇಲ್ಲಿಗೆ ನಿಲ್ಲಿಸುವಂತೆ ತಾಕೀತು ಮಾಡಿದ್ದರು. ಆದರೂ ಬಾಲಕ ಹಾಗೂ ಯುವತಿ ವಾಟ್ಸಪ್, ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಇದಾದ ಬಳಿಕ ಮನೆ ಬಿಟ್ಟು ಬಂದಿದ್ದ ಬಾಲಕ ಚನ್ನಪಟ್ಟಣದ ತನ್ನ ಸ್ನೇಹಿತನ ಮನೆಯಲ್ಲಿದ್ದ. ಯುವತಿ ಜೊತೆ ಇದೇ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಏ.29ರಂದು ವಿಷ ಸೇವಿಸಿ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಸ್ನೇಹಿತರು ಚನ್ನಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ…
ಕಲಬುರ್ಗಿ : ಇತ್ತೀಚಿಗೆ ರಾಜ್ಯ ಸರ್ಕಾರ ಒಳಮೀಸಲಾತಿ ಜೊತೆ ಜೊತೆಗೆ 56 ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದ್ದು, ಇದೀಗ ಕಲಬುರ್ಗಿಯಲ್ಲಿ ಅದೇ ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿದ ಭೂಪನೊಬ್ಬ ಹತ್ತಾರು ಯುವಕ, ಯುವತಿಯರಿಂದ ಲಕ್ಷ ಲಕ್ಷ ರೂ ಹಣ ಪಡೆದು ಮೋಸ ಮಾಡಿದ್ದಾನೆ. ನರ್ಸಿಂಗ್ ಕೆಲಸ ಕೊಡಿಸುತ್ತನೆಂದು ಮೋಸ ಮಾಡಿದ್ದಲ್ಲದೆ ಹಣವು ಕೊಡದೇ ಸತಾಯಿಸುತ್ತಿದ್ದಾನೆ. ಹೈದರಾಬಾದ್ ಮೂಲದ ಖಾಸಗಿ ಕಂಪನಿಯೊಂದರ ವ್ಯಕ್ತಿ ಪ್ರದೀಪ್ ಎಂಬಾತ ಸಾಕಷ್ಟು ಜನರಿಗೆ ವಂಚಿಸಿದ್ದಾನೆ. ರಾಜ್ಯದ ಅತೀ ದೊಡ್ಡ ಮೆಡಿಕಲ್ ಕಾಲೇಜು ಕಂ ಆಸ್ಪತ್ರೆಯಾಗಿರುವ ಇಎಸ್ಐ ಆಸ್ಪತ್ರೆಯಲ್ಲಿ ನಸ್೯ ಕೆಲಸ ಕೊಡಿಸುತ್ತೆನೆಂದು ಹತ್ತಾರು ಯುವಕರನ್ನ ನಂಬಿಸಿ ಹಣ ವಸೂಲಿ ಮಾಡಿಸಿದ್ದ. ಅಷ್ಟೇ ಅಲ್ಲದೆ ಈಗಾಗಲೇ ಹಲವರಿಗೆ ಕೆಲಸ ಕೊಡಿಸಿದ್ದಾಗಿ ಹೇಳಿ ನಂಬಿಸಿದ್ದ. ಹೀಗಾಗಿ ಆತನ ನಂಬಿದ್ದ ಜನ ತಮಗೂ ಕೆಲಸ ಸಿಗುತ್ತೆ, ತಮ್ಮ ಭವಿಷ್ಯಕ್ಕೂ ಒಳ್ಳೆಯದಾಗುತ್ತೆ ಅಂತ ನಂಬಿಕೊಂಡಿದ್ದರು. ಅಲ್ಲದೇ ಆತ ಕೇಳಿದಷ್ಟು ಹಣವನ್ನ ಕೊಟ್ಟಿದ್ದರು. ಒಂದೊಂದು ಹುದ್ದೆಗೆ ಒಬ್ಬೊರಿಂದ 2 ಲಕ್ಷದಿಂದ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅತಿವೇಗ ಹಾಗೂ ಅಜಾಗರೂಕ ಚಾಲನೆಗೆ ಮತ್ತೊಂದು ಭೀಕರ ಅಪಘಾತ ಸಾಕ್ಷಿಯಾಗಿದೆ. ವೇಗವಾಗಿ ಬಂದ ಬಿಎಂಟಿಸಿ (BMTC) ಬಸ್ವೊಂದು ನಿಯಂತ್ರಣ ತಪ್ಪಿ ಮುಂದಿದ್ದ ಮೂರು ಕಾರುಗಳಿಗೆ ಸರಣಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿದ್ದು, ಸಂಚಾರ ದಟ್ಟಣೆಯಿಂದ ಕೂಡಿದ್ದ ರಸ್ತೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಿಯಂತ್ರಣ ತಪ್ಪಿದ ಬಸ್: ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಬಿಎಂಟಿಸಿ ಚಾಲಕ ಅತಿ ವೇಗವಾಗಿ ಬಸ್ ಚಲಾಯಿಸಿಕೊಂಡು ಬಂದಿದ್ದೇ ಈ ಅವಾಂತರಕ್ಕೆ ಕಾರಣ ಎನ್ನಲಾಗಿದೆ. ಏಕಾಏಕಿ ಬಸ್ ನಿಯಂತ್ರಣ ಕಳೆದುಕೊಂಡ ಪರಿಣಾಮವಾಗಿ, ರಸ್ತೆಯಲ್ಲಿ ಸಂಚರಿಸುತ್ತಿದ್ದ ಮೂರು ಕಾರುಗಳಿಗೆ ಒಂದರ ಹಿಂದೊಂದರಂತೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರುಗಳ ಹಿಂಭಾಗ ಹಾಗೂ ಮುಂಭಾಗದ ಭಾಗಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ. ಗಾಯಾಳುಗಳ ಸ್ಥಿತಿ: ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಸೇರಿದಂತೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ…














