Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಕೇರಳ : ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸುವ ‘ಪ್ರಿಯದರ್ಶಿನಿ’ ಯೋಜನೆಗೆ ಕೇರಳ ಸರ್ಕಾರ ಚಾಲನೆ ನೀಡಿದೆ. ಮುಖ್ಯಮಂತ್ರಿ ವಿ.ಡಿ.ಸತೀಶನ್ ತಿರುವನಂತಪುರಂನ ತಂಪನೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಯೋಜನೆಯನ್ನು ಉದ್ಘಾಟಿಸಿದರು. ಯೋಜನೆಯ ಉದ್ಘಾಟನಾ ಪ್ರಯಾಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಗಣ್ಯರು ಭಾಗವಹಿಸಿದ್ದರು. ವಿಶೇಷವೆಂದರೆ, ಈ ಬಸ್ ಅನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದರು.ಈ ಯೋಜನೆಯಡಿ ಮಹಿಳೆಯರು ಮತ್ತು ತೃತೀಯಲಿಂಗಿಗಳು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಡೆಸುವ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ರಾಜ್ಯದಾದ್ಯಂತ ಸುಮಾರು 3,125 ಸಾಮಾನ್ಯ ಬಸ್ಗಳು ಈ ಯೋಜನೆಯ ವ್ಯಾಪ್ತಿಗೆ ಬರಲಿವೆ. ಯೋಜನೆಯಿಂದ KSRTCಗೆ ಆಗುವ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಖಾಸಗಿ ಬಸ್ಗಳಿಗೂ ಯಾವುದೇ ತೊಂದರೆ ಆಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಆರಂಭಿಕ ಹಂತದಲ್ಲಿ ಮೊದಲ 100 ದಿನಗಳ ಕಾಲ ಮಹಿಳೆಯರು ಮತ್ತು ತೃತೀಯಲಿಂಗಿಗಳು ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಬಳಿಕ ಯೋಜನೆಯ ಪರಿಣಾಮವನ್ನು…
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳ ಅನುಷ್ಠಾನದಲ್ಲಿ ಹಲವು ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಸರ್ಕಾರ ಈಗ ಮಹತ್ವದ ಪರಿಷ್ಕರಣೆಗೆ ಮುಂದಾಗಿದೆ. ಇನ್ಮುಂದೆ ರಾಜ್ಯದಲ್ಲಿ ಮತದಾನದ ಹಕ್ಕು ಹೊಂದಿರುವವರಿಗೆ (ವೋಟ್ ಇದ್ದವರಿಗೆ) ಮಾತ್ರ ಈ ಗ್ಯಾರಂಟಿ ಯೋಜನೆಗಳ ಲಾಭ ಸಿಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಗಳ ದುರುಪಯೋಗವನ್ನು ತಡೆಯಲು ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಸರ್ಕಾರದ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ನಿಯಮಗಳನ್ನು ಬಿಗಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಆರಂಭದಲ್ಲಿ ಸಾರ್ವಜನಿಕರು ತರಾತುರಿಯಲ್ಲಿ ಅರ್ಜಿ ಸಲ್ಲಿಸಿದ್ದರಿಂದ ತಾಂತ್ರಿಕ ಹಾಗೂ ಪ್ರಾಯೋಗಿಕ ದೋಷಗಳು ಸೃಷ್ಟಿಯಾಗಿದ್ದು, ಇವುಗಳನ್ನು ಸರಿಪಡಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದರು. ಬ್ಯಾಂಕ್ ಖಾತೆ ಲಿಂಕ್ ದೋಷ: ಯಾರದೋ ಹಣ ಇನ್ನಾರದ್ದೋ ಅಕೌಂಟ್ಗೆ! ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಾರ್ವಜನಿಕರು ನೀಡಿದ ತಪ್ಪು ಮಾಹಿತಿಗಳಿಂದಾಗಿ ಸದ್ಯ ದೊಡ್ಡ ಗೊಂದಲ ನಿರ್ಮಾಣವಾಗಿದೆ. “ಯೋಜನೆಯ ಲಾಭ ಪಡೆಯಲು ಅಗತ್ಯ ದಾಖಲೆಗಳು…
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಜ್ಯೋತಿ’ಗೆ ಇದೀಗ ಭಾರಿ ಸರ್ಜರಿ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ. ಇತ್ತೀಚೆಗಷ್ಟೇ ಗೃಹಲಕ್ಷ್ಮಿ ಯೋಜನೆಗೆ ನಿಯಮಾವಳಿಗಳ ಬಿಸಿ ಮುಟ್ಟಿಸಿದ್ದ ಸರ್ಕಾರ, ಇದೀಗ ಉಚಿತ ವಿದ್ಯುತ್ ಯೋಜನೆಯಲ್ಲೂ ಆಗುತ್ತಿರುವ ಲೋಪದೋಷಗಳನ್ನು ತಡೆಗಟ್ಟಲು ಕಠಿಣ ಕ್ರಮಗಳಿಗೆ ಮುಂದಾಗಿದೆ. ಅರ್ಹರಿಗೆ ಮಾತ್ರ ಯೋಜನೆಯ ಲಾಭ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಈ ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಸುಮಾರು 1.70 ಕೋಟಿಗೂ ಅಧಿಕ ಕುಟುಂಬಗಳು ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆದುಕೊಳ್ಳುತ್ತಿವೆ. ಇದರಿಂದಾಗಿ ಬೊಕ್ಕಸಕ್ಕೆ ಪ್ರತಿ ತಿಂಗಳು ಬರೋಬ್ಬರಿ 440 ಕೋಟಿ ರೂಪಾಯಿಗಳಷ್ಟು ಭಾರಿ ವೆಚ್ಚ ತಗುಲುತ್ತಿದೆ. ಆದರೆ, ಇಷ್ಟೊಂದು ದೊಡ್ಡ ಪ್ರಮಾಣದ ಹಣ ವ್ಯಯವಾಗುತ್ತಿದ್ದರೂ, ಯೋಜನೆಯ ದುರ್ಬಳಕೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಪರಿಶೀಲನಾ ಕ್ರಮ ಅನಿವಾರ್ಯವಾಗಿದೆ ಎಂದು ಮೂಲಗಳು ತಿಳಿಸಿವೆ. ವಾಣಿಜ್ಯ ಬಳಕೆಗೆ ಬ್ರೇಕ್ ಮುಖ್ಯವಾಗಿ, ಗೃಹಬಳಕೆಯ ಹೆಸರಿನಲ್ಲಿ ಉಚಿತ ವಿದ್ಯುತ್ ಪಡೆದುಕೊಂಡು, ಅದನ್ನು ವಾಣಿಜ್ಯ ಉದ್ದೇಶಗಳಿಗೆ (Commercial Use)…
ನವದೆಹಲಿ: ಪಾಕಿಸ್ತಾನ ವಾಯುಸೇನೆಯ (PAF) ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ಭೀಕರವಾಗಿ ಪತನಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಈ ಭೀಕರ ದುರಂತದಲ್ಲಿ ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಹೊರಬರಲಾಗದೆ ವಿಮಾನದೊಳಗೇ ಸಜೀವ ದಹನವಾಗಿದ್ದಾರೆ. ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಪ್ರಮುಖ ಹೆದ್ದಾರಿಯೊಂದರ ಮೇಲೆ ಈ ಘಟನೆ ಸಂಭವಿಸಿದೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಹೆದ್ದಾರಿಗೆ ಅಪ್ಪಳಿಸಿ ಹೊತ್ತಿ ಉರಿದ ವಿಮಾನ ನಿಯಮಿತ ತರಬೇತಿ ಹಾರಾಟ ನಡೆಸುತ್ತಿದ್ದ ಈ ವಾಯುಸೇನೆ ವಿಮಾನವು ಹತೋಟಿ ತಪ್ಪಿ ಪಂಖ್ತುಂಕ್ವಾದ ಜನನಿಬಿಡ ಹೆದ್ದಾರಿಗೆ ನೇರವಾಗಿ ಅಪ್ಪಳಿಸಿದೆ. ರಸ್ತೆಗೆ ಅಪ್ಪಳಿಸುತ್ತಿದ್ದಂತೆ ವಿಮಾನದಲ್ಲಿ ಭಾರಿ ಪ್ರಮಾಣದ ಸ್ಫೋಟ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಇಡೀ ವಿಮಾನವು ಬೆಂಕಿಯ ಉಂಡೆಯಾಗಿ ಮಾರ್ಪಟ್ಟಿದೆ. ವಿಮಾನಕ್ಕೆ ಹೊತ್ತಿಕೊಂಡ ಜ್ವಾಲೆ ಎಷ್ಟು ತೀವ್ರವಾಗಿತ್ತೆಂದರೆ, ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಧಾವಿಸುವಷ್ಟರಲ್ಲೇ ಇಬ್ಬರು ಪೈಲಟ್ಗಳು ತೀವ್ರವಾಗಿ ಸುಟ್ಟು ಭಸ್ಮವಾಗಿದ್ದಾರೆ. ಬೈಕ್ ಸವಾರನಿಗೂ ಗಂಭೀರ ಗಾಯ ವಿಮಾನವು ಹೆದ್ದಾರಿಯ ಮೇಲೆ ಪತನಗೊಂಡ ಸಮಯದಲ್ಲಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಇತ್ತು ಎನ್ನಲಾಗಿದೆ. ವಿಮಾನವು…
ಬೆಂಗಳೂರು: ದೇಶಾದ್ಯಂತ ಹಳದಿ ಲೋಹದ ಬೆಲೆಯಲ್ಲಿ ನಿರಂತರ ಏರಿಳಿತಗಳು ಮುಂದುವರಿದಿದ್ದು, ಇಂದು ಆಭರಣ ಪ್ರಿಯರಿಗೆ ಮತ್ತೊಂದು ದೊಡ್ಡ ಶಾಕ್ ಎದುರಾಗಿದೆ. ಜಾಗತಿಕ ಮಾರುಕಟ್ಟೆಯ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಬೇಡಿಕೆಯಿಂದಾಗಿ ಚಿನ್ನದ ಬೆಲೆ ಮತ್ತೆ ಗಣನೀಯವಾಗಿ ಏರಿಕೆ ಕಂಡಿದೆ. ಮದುವೆ ಹಾಗೂ ಹಬ್ಬಗಳ ಸೀಸನ್ ಆರಂಭವಾಗುತ್ತಿರುವ ಬೆನ್ನಲ್ಲೇ ಈ ಬೆಲೆ ಏರಿಕೆಯು ಗ್ರಾಹಕರ ಜೇಬಿಗೆ ಕತ್ತರಿ ಹಾಕುವಂತೆ ಮಾಡಿದೆ. ಹತ್ತು ಗ್ರಾಂ ಬೆಲೆಯಲ್ಲಿ ಭಾರಿ ಜಿಗಿತ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ದರದಲ್ಲಿ ಭಾರಿ ಏರಿಕೆ ದಾಖಲಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು 22 ಕ್ಯಾರೆಟ್ನ 10 ಗ್ರಾಂ ಆಭರಣ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,250 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ, ಅತ್ಯಂತ ಶುದ್ಧವಾದ 24 ಕ್ಯಾರೆಟ್ನ 10 ಗ್ರಾಂ ಅಪರಂಜಿ ಚಿನ್ನದ ಬೆಲೆಯೂ ಸಹ ಇಂದು 2,450 ರೂಪಾಯಿಗಳಷ್ಟು ದುಬಾರಿಯಾಗಿದೆ. ಗ್ರಾಮ್ ಲೆಕ್ಕದಲ್ಲಿ 22 ಕ್ಯಾರೆಟ್ ಚಿನ್ನದ ದರ ಇಂದಿನ ಮಾರುಕಟ್ಟೆ ದರದ ಪ್ರಕಾರ, 22 ಕ್ಯಾರೆಟ್ನ ಒಂದು…
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಹಲ್ಲಿ ಬಿದ್ದ ನೀರು ಕುಡಿದು 14ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಗುಲ್ಬರ್ಗ ವಿಶ್ವವಿದ್ಯಾಲಯದ ಬಿಸಿಎಂ ಸ್ನಾತಕೋತ್ತರ ವಸತಿ ನಿಲಯದಲ್ಲಿ ನಡೆದಿದೆ. ಬೆಳಿಗ್ಗೆ ನೀರಿನ ಟ್ಯಾಂಕ್ ನಲ್ಲಿ ಹಲ್ಲಿ ಬಿದ್ದಿದ ನೀರನ್ನು ವಿದ್ಯಾರ್ಥಿಗಳು ಕುಡಿದಿದ್ದಾರೆ. ಆದರೆ ಹಲ್ಲಿ ಬಿದ್ದಿರುವ ನೀರನ್ನೆ ಬಳಸಿಕೊಂಡು ಸಿಬ್ಬಂದಿಗಳು ಇದೀಗ ಅಡುಗೆ ಮಾಡುತ್ತಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳಿಗೆ ಕಲ್ಬುರ್ಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಳ್ಳಾರಿ : ಕಳಪೆ ಕಾಮಗಾರಿ ಪ್ರಶ್ನಿಸಿದಕ್ಕೆ ಸಂಸದ ಇ ತುಕಾರಾಂ ಗರಂ ಆಗಿದ್ದು, ಅಶ್ಲೀಲ ಪದ ಬಳಸಿ ಸಂಸದ ತುಕಾರಾಂ ಜನರಿಗೆ ನಿಂದನೆ ಮಾಡಿದ್ದಾರೆ. ಕಳಪೆ ರಸ್ತೆ ಕಾಮಗಾರಿ ಪ್ರಶ್ನಿಸಿದವರಿಗೆ ಸಂಸದ ತುಕಾರಾಂ ಅಶ್ಲೀಲವಾಗಿ ಪದ ಬಳಕೆ ಮಾಡಿ ಬೈದಿದಾರೆ. ಸುಮಾರು 33 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವಂತಹ ರಸ್ತೆ ಮೇಲ್ಸೇತುವೆ ಮತ್ತು ಸರ್ವಿಸ್ ರಸ್ತೆಯ ಕಳಪೆ ಕಾಮಗಾರಿಯನ್ನು ಪ್ರಶ್ನೆ ಮಾಡಿದ್ದಾರೆ. ವಿಜಯನಗರದ ಹೊಸಪೇಟೆ ತಾಲೂಕಿನ ಡಾಣಾಪುರದಲ್ಲಿ ಈ ಒಂದು ಕಾಮಗರಿ ನಡೆದಿದ್ದು, ಕಳಪೆ ಗ್ರಾಮಗಾರಿ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಂಸದ ತುಕಾರಾಂ ಗರಂ ಆಗಿದ್ದು, ಅಶ್ಲೀಲವಾಗಿ ಪದ ಬಳಕೆ ಮಾಡಿ ನಿಂದಿಸಿದ್ದಾರೆ ಹಾಗೂ ಬೈದಿದ್ದಾರೆ ಎಂದು ಸ್ಥಳೀಯರು ಸಂಸದರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು GBA ಕಸದ ವಾಹನ ಹರಿದು ಬೈಕ್ ಸವಾರ ಸಾವನಪ್ಪಿದ್ದಾನೆ , ಬೆಂಗಳೂರಿನ ಶಿರಸಿ ಸರ್ಕಲ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಬೈಕ್ ನಿಂದ ಆಯತಪ್ಪಿ 35 ವರ್ಷದ ವ್ಯಕ್ತಿ ರಸ್ತೆ ಮೇಲೆ ಬಿದ್ದಿದ್ದಾನೆ. ಈ ವೇಳೆ ಜಿಬಿಎ ಕಸದ ಲಾರಿ ಆತನ ಮೇಲೆ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಚಾಮರಾಜಪೇಟೆ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತಮಿಳುನಾಡು ನೋಂದಣಿ ಸಂಖ್ಯೆಯ ಬೈಕ್ ಚಲಾಯಿಸುತ್ತಿದ್ದ ಸವಾರ ಎಂದು ತಿಳಿದು ಬಂದಿದ್ದು, ಆದರೆ ಮೃತ ಬೈಕ್ ಸವಾರ ಯಾರು ಎಂದು ಪತ್ತೆಯಾಗಿಲ್ಲ. ಸದ್ಯ ಪೊಲೀಸರು ಲಾರಿಯನ್ನು ವಶಕ್ಕೆ ಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು : ಮಧ್ಯ ಪ್ರಾಚ್ಯದ ಸಂಘರ್ಷ ಹಾಗೂ ಮಾರುಕಟ್ಟೆಯ ಏರಿಳಿತಗಳಿಂದಾಗಿ ಕಂಗೆಟ್ಟಿದ್ದ ರಾಜ್ಯದ ಟೊಮ್ಯಾಟೊ ಬೆಳೆಗಾರರ ಮೊಗದಲ್ಲಿ ಕೊನೆಗೂ ಮಂದಹಾಸ ಮೂಡಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಕುಸಿತ ಕಂಡಿದ್ದ ಟೊಮ್ಯಾಟೊ ದರವು ಇದೀಗ ದಿಢೀರ್ ಏರಿಕೆ ಕಾಣುತ್ತಿದ್ದು, ಮಾರುಕಟ್ಟೆಯಲ್ಲಿ ಗಣನೀಯ ಚೇತರಿಕೆ ದಾಖಲಿಸಿದೆ. ಇದರಿಂದಾಗಿ ಕೈಸುಟ್ಟುಕೊಳ್ಳುವ ಭೀತಿಯಲ್ಲಿದ್ದ ರೈತರು ನಿಟ್ಟುಸಿರು ಬಿಡುವಂತಾಗಿದೆ. ಏಷ್ಯಾ ಖಂಡದಲ್ಲೇ ಪ್ರಸಿದ್ಧ ಪಡೆದಿರುವ ಕೋಲಾರದ ಎಪಿಎಂಸಿ (APMC) ಮಾರುಕಟ್ಟೆಯಲ್ಲಿ ಟೊಮ್ಯಾಟೊಗೆ ಭರ್ಜರಿ ಬೇಡಿಕೆ ಸೃಷ್ಟಿಯಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಗುಣಮಟ್ಟದ ಟೊಮ್ಯಾಟೊ ಹೊಂದಿರುವ ಪ್ರತಿ 15 ಕೆಜಿಯ ಒಂದು ಬಾಕ್ಸ್ಗೆ 500 ರೂಪಾಯಿಯಿಂದ 550 ರೂಪಾಯಿವರೆಗೆ ಮಾರಾಟವಾಗುತ್ತಿದೆ. ಈ ಉತ್ತಮ ಧಾರಣೆಯು ಮಾರುಕಟ್ಟೆಗೆ ಸ್ಥಿರತೆ ತಂದಿದ್ದು, ರೈತರಿಗೆ ನಿರೀಕ್ಷಿತ ಲಾಭ ತಂದುಕೊಡುತ್ತಿದೆ. ಕೆಲವು ವಾರಗಳ ಹಿಂದೆ ಮಧ್ಯ ಪ್ರಾಚ್ಯ ದೇಶಗಳಲ್ಲಿ ಉಂಟಾದ ಯುದ್ಧದ ಸನ್ನಿವೇಶ ಹಾಗೂ ರಫ್ತು ಪ್ರಕ್ರಿಯೆಯಲ್ಲಾದ ವ್ಯತ್ಯಯದಿಂದಾಗಿ ಟೊಮ್ಯಾಟೊ ಬೆಲೆ ತಳ ಮುಟ್ಟಿತ್ತು. ಸಾಗಣಿಕೆ ವೆಚ್ಚವೂ ಸಿಗದೆ ರೈತರು ಕಂಗಾಲಾಗಿದ್ದರು. ಆದರೆ ಈಗ ಪರಿಸ್ಥಿತಿ…
ಬೆಂಗಳೂರು: ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸಣ್ಣಪುಟ್ಟ ಆರೋಗ್ಯ ಏರುಪೇರಿನಿಂದ ಬಳಲುತ್ತಿದ್ದ ಅವರಿಗೆ, ತಪಾಸಣೆಯ ಬಳಿಕ ಹೃದಯದಲ್ಲಿ ಬ್ಲಾಕೇಜ್ (ರಕ್ತನಾಳದ ತಡೆ) ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ತಕ್ಷಣವೇ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬೆಂಗಳೂರಿನ ಮಲ್ಯ ರಸ್ತೆಯಲ್ಲಿರುವ ಪ್ರಸಿದ್ಧ ವೈದೇಹಿ ಆಸ್ಪತ್ರೆಗೆ (ವಿಠ್ಠಲ್ ಮಲ್ಯ ರಸ್ತೆ) ಇಕ್ಬಾಲ್ ಹುಸೇನ್ ಅವರನ್ನು ದಾಖಲಿಸಲಾಗಿದ್ದು, ಸದ್ಯ ಅವರು ವೈದ್ಯರ ನಿಗಾದಲ್ಲಿದ್ದಾರೆ. ಶಾಸಕರಿಗೆ ಹೃದಯದ ಸಮಸ್ಯೆ ಕಾಣಿಸಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆ ಅವರ ಕುಟುಂಬಸ್ಥರು ಹಾಗೂ ರಾಮನಗರ ಕ್ಷೇತ್ರದ ಪ್ರಮುಖ ಕಾಂಗ್ರೆಸ್ ಮುಖಂಡರು ಆಸ್ಪತ್ರೆಯತ್ತ ಧಾವಿಸಿದ್ದಾರೆ. ಪ್ರಸ್ತುತ ವೈದೇಹಿ ಆಸ್ಪತ್ರೆಯ ನುರಿತ ಹೃದ್ರೋಗ ತಜ್ಞರ ತಂಡವು ಇಕ್ಬಾಲ್ ಹುಸೇನ್ ಅವರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದೆ. ಬ್ಲಾಕೇಜ್ ನಿವಾರಣೆಗೆ ಆಂಜಿಯೋಪ್ಲಾಸ್ಟಿ ಅಥವಾ ಅಗತ್ಯವಿರುವ ಮುಂದಿನ ವೈದ್ಯಕೀಯ ಪ್ರಕ್ರಿಯೆಗಳ ಕುರಿತು ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ…














