Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಉತ್ತರ ಪ್ರದೇಶ : ಕ್ಷುಲ್ಲಕ ಆಸ್ತಿ ವಿಚಾರಕ್ಕಾಗಿ ನಡೆದ ಜಗಳವೊಂದು ಭೀಕರ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ. ಪಿತ್ರಾರ್ಜಿತ ಆಸ್ತಿ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿ ಮಗನೇ ತನ್ನ ಹೆತ್ತ ತಾಯಿ ಹಾಗೂ ಸ್ವಂತ ತಮ್ಮನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಘಟನೆಯ ಹಿನ್ನೆಲೆ: ಆರೋಪಿಯನ್ನು ರಾಜ್‌ಕಿಶೋರ್ ಗುಪ್ತಾ ಎಂದು ಗುರುತಿಸಲಾಗಿದೆ. ಈತನ ತಂದೆಯು ಕುಟುಂಬದ ಪಿತ್ರಾರ್ಜಿತ ಆಸ್ತಿಯನ್ನು ಮಾರಾಟ ಮಾಡಿದ್ದರು. ಈ ನಿರ್ಧಾರಕ್ಕೆ ರಾಜ್‌ಕಿಶೋರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಮನೆಯಲ್ಲಿ ಪದೇ ಪದೇ ಜಗಳವಾಡುತ್ತಿದ್ದನು. ಇಂದು ಮುಂಜಾನೆ ಕೂಡ ಇದೇ ವಿಚಾರವಾಗಿ ತಾಯಿ ಮತ್ತು ತಮ್ಮನೊಂದಿಗೆ ರಾಜ್‌ಕಿಶೋರ್ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರ ಪರಿಶೀಲನೆ: ಜಗಳ ತೀವ್ರ ಸ್ವರೂಪಕ್ಕೆ ತಿರುಗಿದಾಗ ಆಕ್ರೋಶಗೊಂಡ ಆರೋಪಿಯು ತನ್ನ ಬಳಿಯಿದ್ದ ಬಂದೂಕಿನಿಂದ ತಾಯಿ ಮತ್ತು ತಮ್ಮನ ಮೇಲೆ ಗುಂಡು ಹಾರಿಸಿದ್ದಾನೆ. ಇಂದು ಮುಂಜಾನೆ ಮನೆಯೊಳಗೆ ಗುಂಡಿನ ಸದ್ದು ಕೇಳಿ ಆತಂಕಗೊಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.…

Read More

ಬೆಂಗಳೂರು : ಸಚಿವ ಡಿ. ಸುಧಾಕರ್ ನಿಧನಕ್ಕೆ ಸಂತಾಪ ಸೂಚಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಚಿತ್ರದುರ್ಗಕ್ಕೆ ಸೋಮವಾರ ಸರ್ಕಾರ ರಜೆ ಘೋಷಣೆ ಮಾಡಿದ್ದು, ರಾಜ್ಯಾದ್ಯಂತ 3 ದಿನ ಸಂತಾಪ ಕೋರಲು ತಿಳಿಸಲಾಗಿದೆ. ಇನ್ನು ಮೃತರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಸರ್ಕಾರ ಸೂಚನೆ ನೀಡಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ ಅವರು ಮೇ 10 ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಹಿನ್ನೆಲೆ ಸರ್ಕಾರ ಸಂತಾಪ ಸೂಚಿಸಿ ಅಧಿಸೂಚನೆ ಹೊರಡಿಸಿದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದೆ. ಮೇ 10 ರಿಂದ 12 ರವರೆಗೆ ಮೂರು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಿದಲಾಗಿದೆ.

Read More

ತಮಿಳುನಾಡು : ತಮಿಳುನಾಡು ನೂತನ ಸಿಎಂ ವಿಜಯ್ ಕಪ್ಪು ಬಣ್ಣದ ಕೋರ್ಟ್ ಧರಿಸಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಚರ್ಚೆಗೆ ಕಾರಣವಾಗಿದೆ. ಬಹುತೇಕ ಜನರು ಕಪ್ಪು ಬಟ್ಟೆ ಅಶುಭದ ಸಂಕೇತ ಅಂತ ಹೇಳ್ತಾರೆ. ಆದರೂ ವಿಜಯ್ ಕಪ್ಪು ಕಲರ್ ಬಟ್ಟೆ ಧರಿಸಿದ್ದರು. ಇದಕ್ಕೆ ಕಾರಣವೂ ಇದೆ. ಆ ಕಾರಣ ಏನು ಅನ್ನೋದನ್ನ ಇದೀಗ ತಿಳಿದುಕೊಳ್ಳೋಣ ಬನ್ನಿ. ಸಾಮಾನ್ಯವಾಗಿ ಭಾರತೀಯ ಸಂಸ್ಕೃತಿಯಲ್ಲಿ ಕಪ್ಪು ಬಣ್ಣವನ್ನು ಅಶುಭ ಅಥವಾ ಶೋಕದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಯಾವುದೇ ಶುಭ ಕಾರ್ಯಗಳಿಗೆ ಬಿಳಿ ಅಥವಾ ಬಣ್ಣಬಣ್ಣದ ಉಡುಪುಗಳನ್ನು ಧರಿಸುವುದು ರೂಢಿ. ಆದರೆ ತಮಿಳುನಾಡಿನ ರಾಜಕೀಯ ಇತಿಹಾಸ ಮತ್ತು ದ್ರಾವಿಡ ಚಳುವಳಿಯ ಹಿನ್ನೆಲೆಯಲ್ಲಿ ನೋಡಿದಾಗ, ಈ ಕಪ್ಪು ಬಣ್ಣ ಕೇವಲ ಒಂದು ಬಣ್ಣವಲ್ಲ; ಅದೊಂದು ಪ್ರತಿರೋಧದ ಸಂಕೇತ. ವಿಜಯ್ ಅವರ ಈ ನಡೆ ಕೇವಲ ಫ್ಯಾಷನ್ ಆಗಿರದೆ, ಅವರ ರಾಜಕೀಯ ಸಿದ್ಧಾಂತದ ಪ್ರಬಲ ಸಂದೇಶವಾಗಿದೆ. ಕಪ್ಪು ಬಣ್ಣಕ್ಕೂ ತಮಿಳುನಾಡು ರಾಜಕೀಯಕ್ಕೂ ಅವಿನಾಭಾವ ಸಂಬಂಧವಿದೆ. ದ್ರಾವಿಡ ಚಳವಳಿಯ ಪಿತಾಮಹ, ಸಾಮಾಜಿಕ ಹೋರಾಟಗಾರ…

Read More

ಬೆಂಗಳೂರು: ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಕರೆದೊಯ್ದಿರುವ ಕಾರಣಕ್ಕೆ ಯುವಕನ ಸಹೋದರನನ್ನು ಯುವತಿಯ ಪೋಷಕರು ಅಪಹರಿಸಿ ಕೈಕಾಲು ಕಟ್ಟಿ ಹಾಕಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಅಸಲಿಗೆ ಯುವಕನ ಸಹೋದರ ಮತ್ತು ಯುವತಿಯ ಪೋಷಕರೇ ಪ್ಲಾನ್‌ ಮಾಡಿ ಈ ರೀತಿಯ ವಿಡಿಯೋ ಮಾಡಿ ಹರಿಬಿಟ್ಟಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಯುವತಿಯ ಪೋಷಕರಾದ ಬಸವರಾಜು, ಉಮೇಶ್‌ ಸ್ವಾಮಿ, ವಿರೂಪಾಕ್ಷ ಸೇರಿ ನಾಲ್ವರಿಗೆ ನೋಟಿಸ್‌ ಕೊಟ್ಟು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ಇನ್ನು ವಿಡಿಯೋ ಮಾಡಲು ಸಹಕಾರ ನೀಡಿದ ಯುವಕನ ಸಹೋದರ ಕೋಟ್ರೇಶ್‌ಗೂ ಎಚ್ಚರಿಕೆ ನೀಡಿ, ಕರೆದಾಗ ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಗರದ ಖಾಸಗಿ ಕಾಲೇಜಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಯುವತಿಗೆ ಬಳ್ಳಾರಿ ಮೂಲದ ದೇವಸ್ಥಾನವೊಂದರ ಅರ್ಚಕ ಶಿವು ಎಂಬಾತನ ಪರಿಚಯವಾಗಿತ್ತು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಮನೆಯವರು ಒಪ್ಪದ ಕಾರಣಕ್ಕೆ ಶನಿವಾರ (ಮೇ 9ರಂದು) ಯುವತಿ ಮನೆ ಬಿಟ್ಟು ಶಿವು ಜೊತೆ…

Read More

ಅಸ್ಸಾಂ : ಹಿಮಂತ ಬಿಸ್ವ ಶರ್ಮಾ ಅವರು ಎರಡನೇ ಬಾರಿಗೆ ಅಸ್ಸಾಂ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ನಿನ್ನೆ ನಡೆದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ಸರ್ವಾನುಮತದಿಂದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಅಸ್ಸಾಂನಲ್ಲಿ ಬಿಜೆಪಿಯನ್ನು ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ತರುವಲ್ಲಿ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದರು. ಮೇ 12ರಂದು ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಸ್ಸಾಮ್ ರಾಜಧಾನಿ ಗುವಾಹಟಿಯಲ್ಲಿ ಭಾನುವಾರ ನಡೆದ ಪ್ರಮುಖ ಸಭೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಾದ ಎಜಿಪಿ (AGP) ಮತ್ತು ಯುಪಿಪಿಎಲ್ (UPPL) ಶಾಸಕರು ಶರ್ಮಾ ಅವರನ್ನು ತಮ್ಮ ನಾಯಕನೆಂದು ಘೋಷಿಸಿದರು. ಅಸ್ಸಾಂನಲ್ಲಿ ಬಿಜೆಪಿಯನ್ನು ಸತತವಾಗಿ ಎರಡನೇ ಬಾರಿಗೆ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶರ್ಮಾ ಅವರಿಗೆ ಹೈಕಮಾಂಡ್ ಮತ್ತೊಮ್ಮೆ ಮನ್ನಣೆ ನೀಡಿದೆ. ಇತ್ತೀಚೆಗೆ ನಡೆದ ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತವನ್ನು ಪಡೆದುಕೊಂಡಿತ್ತು. 126 ಕ್ಷೇತ್ರಗಳ ಪೈಕಿ ಎನ್​ಡಿಎ 102 ಸ್ಥಾನ ಗಳಿಸಿತು. ಈ ಮೈತ್ರಿಕೂಟದಲ್ಲಿ ಬಿಜೆಪಿಯೊಂದೇ 82 ಸ್ಥಾನ…

Read More

ಬೆಂಗಳೂರು : ಈಗಾಗಲೇ ಶೇಕಡ 50ಕ್ಕೂ ಅಧಿಕ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿ ಗೊಳಿಸಿದ್ದು, ಮುಂದಿನ ವರ್ಷ ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು. ಜೀರುಂಡೆ ಪುಸ್ತಕ ಪ್ರಕಾಶನ ಭಾನುವಾರ ಚಾಮರಾಜಪೇ ಟೆಯ ಕನ್ನಡ ಸಾಹಿತ್ಯ ಪರಿಷತ್‌ ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಕಂಚ ಐಲಯ್ಯ ಅವರ ‘ಶೂದ್ರ ಬಂಡಾಯ’ ಕನ್ನಡ ಅನುವಾದ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮಪರಿಚಯಿಸಿದಾಗ ತಮ್ಮ ವಿರುದ್ಧ ಟೀಕೆಗಳು ಕೇಳಿಬಂದವು. ಆದರೆ ನಾವು ದ್ವಿಭಾಷಾ ಶಿಕ್ಷಣದ ಪರವಾಗಿದ್ದೇವೆ. ಮಕ್ಕಳ ಶಿಕ್ಷಣದ ಮಾಧ್ಯಮವನ್ನು ಆಯ್ಕೆ ಮಾಡುವ ಹಕ್ಕು ಪೋಷಕರಿಗೆ ಇರಬೇಕು ಎಂದರು. ಸಮಾನತೆಗೆ ಶಿಕ್ಷಣವೇ ಪ್ರಬಲ ಅಸ್ತ್ರ. ಸಮಾಜದಲ್ಲಿ ಸಮಾನತೆ ತರಲು ಶಿಕ್ಷಣವೇ ಪ್ರಬಲ ಅಸ್ತ್ರ. ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ. ಶೂದ್ರ ಬಂಡಾಯದಂತಹ ಕೃತಿಗಳು ಓದುಗರಲ್ಲಿ ವೈಚಾರಿಕ ಕ್ರಾಂತಿ ಉಂಟು ಮಾಡುತ್ತವೆ. ಇಂಥ ಸಾಮಾಜಿಕ ಕಳಕಳಿಯ ಕೃತಿಗಳು…

Read More

ಹೈದರಾಬಾದ್: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅದರಿಂದ ಜಾಗತಿಕವಾಗಿ ಉಂಟಾಗಿರುವ ಇಂಧನ ಹಾಗೂ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಅತ್ಯಂತ ಮಹತ್ವದ ಹಾಗೂ ಅಚ್ಚರಿಯ ಮನವಿಯೊಂದನ್ನು ಮಾಡಿದ್ದಾರೆ. ದೇಶದ ಆರ್ಥಿಕತೆಯನ್ನು ಸುಭದ್ರಗೊಳಿಸಲು ಮುಂದಿನ ಒಂದು ವರ್ಷಗಳ ಕಾಲ ಕೆಲವು ಅಭ್ಯಾಸಗಳನ್ನು ಬದಲಿಸಿಕೊಳ್ಳುವಂತೆ ಅವರು ಕರೆ ನೀಡಿದ್ದಾರೆ. ಚಿನ್ನ ಮತ್ತು ವಿದೇಶ ಪ್ರವಾಸಕ್ಕೆ ಬ್ರೇಕ್: ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಮುಂದಿನ ಒಂದು ವರ್ಷಗಳ ಕಾಲ ಹಬ್ಬ ಹರಿದಿನಗಳಲ್ಲಿ ಚಿನ್ನವನ್ನು ಖರೀದಿಸಬೇಡಿ (Do not buy gold for one year)” ಎಂದು ದೇಶವಾಸಿಗಳಿಗೆ ಮನವಿ ಮಾಡಿದರು. ಇದರೊಂದಿಗೆ, ಒಂದು ವರ್ಷದವರೆಗೆ ತಮ್ಮ ವಿದೇಶ ಪ್ರವಾಸಗಳನ್ನು ಮುಂದೂಡುವಂತೆಯೂ ಅವರು ಸಲಹೆ ನೀಡಿದ್ದಾರೆ. ಪ್ರಧಾನಿಯವರ ಈ ಕರೆಯ ಹಿಂದಿನ ಪ್ರಮುಖ ಕಾರಣಗಳು: ಈ ಅಸಾಮಾನ್ಯ ಮನವಿಯ ಹಿಂದೆ ಬಲವಾದ ಆರ್ಥಿಕ ಕಾರಣಗಳಿವೆ: ವಿದೇಶಿ ವಿನಿಮಯ ಉಳಿತಾಯ: ಭಾರತವು ಅತಿ ಹೆಚ್ಚು…

Read More

ಬೆಂಗಳೂರು : ನಿನ್ನೆ ಒಂದು ಕಡೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕನೊಬ್ಬ ಸಾವನ್ನಪ್ಪಿದ್ದರೆ, ಇನ್ನೊಂದು ಕಡೆ ಬೆಂಗಳೂರಲ್ಲಿ ನಾಗಮಲೆಯಲ್ಲಿ ಚಿರತೆ ದಾಳಿಗೆ ಬಾಲಕ ಸಾವನ್ನಪ್ಪಿದಕ್ಕೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನಗರದ ಕಾಮಾಕ್ಷಿಪಾಳ್ಯದ ವೃಷಭಾವತಿ ನಗರದ ಹರ್ಷಿತ್ ಗೌಡ ನಾಗಮಲೆಯಲ್ಲಿ ಚಿರತೆ ದಾಳಿಗೆ ಬಲಿಯಾಗಿದ್ದ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಲಕನ ಅಜ್ಜಿ, ನನ್ನ ಸೊಸೆ ಪವಿತ್ರ ತನ್ನ ಇಬ್ಬರು ಮಕ್ಕಳು ಹಾಗೂ ಸ್ನೇಹಿತರ ಜೊತೆ ದೇವರ ದರ್ಶನಕ್ಕೆ ಹೋಗಿದ್ದರು. ಪಾದಯಾತ್ರೆ ಮೂಲಕ ಕಾಡಿನಲ್ಲಿ ಹೋಗುವಾಗ ಮೊಮ್ಮಗನ ಮೇಲೆ ಚಿರತೆ ದಾಳಿ ಮಾಡಿದೆ ಎಂದು ಮಾಹಿತಿ ನೀಡಿದರು. ಕಾಡಿನೊಳಗೆ ಹೋಗುವಾಗ 200 ರೂ. ಹೆಚ್ಚಿನ ಹಣ ತೆಗೆದುಕೊಂಡು ಒಳಗಡೆ ಬಿಟ್ಟಿದ್ದಾರೆ. ಮಗು ಮೇಲೆ ದಾಳಿಯಾಗಿ ಅರ್ಧ ಗಂಟೆಯಾದರೂ ಯಾವ ಅರಣ್ಯಾಧಿಕಾರಿಯೂ ಬಂದಿರಲಿಲ್ಲ. ನಂತರ ಜನ ಜಗಳ ಮಾಡಿದಾಗ ಮೃತದೇಹ ಹುಡುಕಿದ್ದಾರೆ. ನಮ್ಮ ಮಗುವಿಗೆ ಆದ ಹಾಗೆ ಯಾರಿಗೂ ಆಗಬಾರದು. ಈ ಸಾವಿಗೆ ಅರಣ್ಯ…

Read More

ಚನ್ನೈ : ನಿನ್ನೆ ಚೆನ್ನೈನ ಪ್ರತಿಷ್ಠಿತ ನೆಹರು ಕ್ರೀಡಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳು ಮತ್ತು ಬೆಂಬಲಿಗರ ಸಮ್ಮುಖದಲ್ಲಿ ಈ ಐತಿಹಾಸಿಕ ಕ್ಷಣ ಸಂಭವಿಸಿತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಖ್ಯಾತ ನಟಿ ತ್ರಿಶಾ ಸೇರಿದಂತೆ ಹಲವು ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಎಂಜಿಆರ್, ಕರುಣಾನಿಧಿ ಮತ್ತು ಜಯಲಲಿತಾರಂತಹ ದಿಗ್ಗಜರು ಆಳಿದ ತಮಿಳುನಾಡಿನ ಸಿಂಹಾಸನವನ್ನು ಈಗ ದಳಪತಿ ವಿಜಯ್ ಅಲಂಕರಿಸಿದ್ದಾರೆ. ಅತಿ ಕಿರಿಯ ಮಹಿಳಾ ಸಚಿವೆ ಕೀರ್ತನಾ ಶಿವಕಾಶಿ ಕ್ಷೇತ್ರದ 29 ವರ್ಷದ ಟಿವಿಕೆ ಶಾಸಕಿ ಸೆಲ್ವಿ ಕೀರ್ತನಾ ಅವರು ಸಿಎಂ ವಿಜಯ್ ಸಂಪುಟದಲ್ಲಿ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕೇವಲ 29 ವರ್ಷ ವಯಸ್ಸಿನ ಕೀರ್ತನಾ ಅವರು ತಮಿಳುನಾಡಿನ ಅತ್ಯಂತ ಕಿರಿಯ ಸಚಿವರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲ, ವಿಜಯ್ ಸಂಪುಟದಲ್ಲಿ ಅವರು ಮೊದಲ ಮತ್ತು ಏಕೈಕ ಮಹಿಳಾ ಸಚಿವೆಯಾಗಿದ್ದಾರೆ. ಶಿವಕಾಶಿಯಲ್ಲಿ ಇತಿಹಾಸ ಸೃಷ್ಟಿಸಿದ…

Read More

ರಾಯ್ಪುರ : ಕೊನೆವರೆಗೂ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಮುಂಬೈ ವಿರುದ್ಧ ಆರ್‌ಸಿಬಿ 2 ವಿಕೆಟ್‌ಗಳ ಜಯ ಸಾಧಿಸಿದೆ. ಕೊನೆ ಓವರ್‌ನಲ್ಲಿ ಭುವನೇಶ್ವರ್‌ ಕುಮಾರ್‌ ಒಂದು ಸಿಕ್ಸರ್‌ ಸಿಡಿಸುವ ಮೂಲಕ ಬೆಂಗಳೂರು ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ರಾಯ್ಪುರದಲ್ಲಿ ನಡೆದ ಪಂದ್ಯ ರೋಚಕತೆಯಿಂದ ಕೂಡಿತ್ತು. ಕೊನೆ ಮೂರು ಬಾಲ್‌ಗೆ 9 ರನ್‌ ಬೇಕಿತ್ತು. ಶೆಫರ್ಡ್‌ ಔಟಾದ ಬಳಿಕ ಕ್ರೀಸ್‌ಗೆ ಬಂದ ಭುವನೇಶ್ವರ್‌ ಕುಮಾರ್‌ ಸಿಕ್ಸರ್‌ ಸಿಡಿಸಿದರು. ಎರಡು ಬಾಲ್‌ಗೆ ಮೂರು ರನ್‌ ಬೇಕಿತ್ತು. ಈ ವೇಳೆ ಒಂದು ಸಿಂಗಲ್‌ ತೆಗೆದುಕೊಂಡರು. ಕೊನೆ ಬಾಲ್‌ಗೆ ರಸಿಕ್ ಸಲಾಂ ಎರಡು ರನ್‌ ಪಡೆದು ತಂಡವನ್ನು ಗೆಲುವಿನ ದಡ ಸೇರಿಸಿದರು. ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಮುಂಬೈ ಇಂಡಿಯನ್ಸ್‌ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿತು. ತಂಡದ ಮೊತ್ತ ಕೇವಲ 28 ರನ್‌ ಇರುವಾಗಲೇ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡು ಮುಂಬೈ ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ನಮನ್‌ ಧೀರ್‌ ಮತ್ತು ತಿಲಕ್‌ ವರ್ಮಾ ಜವಾಬ್ದಾರಿಯುತ ಆಟವಾಡಿ ತಂಡದ ರನ್ 150ರ…

Read More