Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಚಾಣಕ್ಯ ಬಂದ ವೇಳೆ ಅಪಘಾತ ಆಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಚಾರಣಕ್ಕೆ ತೆರಳುವವರಿಗೆ ಇದೀಗ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಮಾರ್ಗಸೂರ್ಚಿಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಇದೀಗ ಬಿಡುಗಡೆ ಮಾಡಿದ್ದಾರೆ.. ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಚಾರಣಕ್ಕೆ ಹೋಗುವವರಿಗೆ ಎಸ್ಓಪಿ ಕಡ್ಡಾಯಗೊಳಿಸಲಾಗಿದೆ. ಸೆವೆನ್ ಮಿನಿಸ್ಟರ್ ಕ್ವಾಟರ್ಸ್ನಲ್ಲಿ ಸಚಿವ ಈಶ್ವರ ಖಂಡ್ರೆ ಎಸ್ಓಪಿ ಅನ್ನು ಬಿಡುಗಡೆ ಮಾಡಿದರು. ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಂಗಳೂರಲ್ಲಿ ಚರಣಕ್ಕೆ ಬಂದು ಓರ್ವ ಬಾಲಕಿ ಸಾವನ್ನುಪ್ಪಿದ್ದಳು. ಘಟನೆಗಳು ಪುನರಾವರ್ತನೆ ಆಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಎಸ್ಓಪಿ ಜಾರಿಗೊಳಿಸಲಾಗಿದೆ. ಹೊಸ ಮಾರ್ಗಸೂಚಿಯ ಪ್ರಮುಖ ಅಂಶಗಳು: ರಿಯಲ್ ಟೈಮ್ ಟ್ರ್ಯಾಕಿಂಗ್ ಆ್ಯಪ್: ಚಾರಣಿಗರ ಚಲನವಲನವನ್ನು ಪತ್ತೆಹಚ್ಚಲು ವಿಶೇಷ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗುತ್ತಿದೆ. ಚಾರಣಕ್ಕೆ ತೆರಳುವವರು ಈ ಆ್ಯಪ್ ಅನ್ನು ಕಡ್ಡಾಯವಾಗಿ ಇನ್ಸ್ಟಾಲ್ ಮಾಡಿಕೊಳ್ಳಬೇಕು. ಇದು ಕಾಡಿನೊಳಗೆ ದಾರಿ ತಪ್ಪಿದಲ್ಲಿ ಅವರನ್ನು ಹುಡುಕಲು ನೆರವಾಗಲಿದೆ. ಕಡ್ಡಾಯ ವಿಮೆ (Mandatory Insurance): ಚಾರಣದ ಸಮಯದಲ್ಲಿ ಸಂಭವಿಸಬಹುದಾದ ಅಪಘಾತ ಅಥವಾ ತುರ್ತು…
ಬೆಂಗಳೂರು : ನಿವೇಶನದ ಖಾತೆ ಮಾಡಲು ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 1 ಲಕ್ಷ ರೂ, ಲಂಚ ಸ್ವೀಕರಿಸುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಯುಟ್ಯೂಬರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಳಲುಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಮಣಿ, ಹಾಗೂ ಸ್ಥಳೀಯ ಖಾಸಗಿ ವಾಹಿನಿ ಪ್ರತಿನಿಧಿ ಗಂಗಾಧರ್ ಒಂದು ಲಕ್ಷ ರೂ. ಲಂಚದ ಹಣದ ಸಮೇತ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಿಡಿಓ ಗೀತಾಮಣಿ ಅವರು 1,50,000 ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಈ ಹಣವನ್ನು ಯುಟ್ಯೂಬರ್ ಗಂಗಾಧರ್ ಗೆ ನೀಡುವಂತೆ ಸೂಚಿಸಿದ್ದರು. ಈ ವಿಚಾರವನ್ನು ಗೀತಾಮಣಿ, ಗಂಗಾಧರ್ಗೆ ಹೇಳಿದ್ದರು. ಡೀಲ್ ನಂತೆ ಫೈಜಲ್ ನಿಂದ ಗಂಗಾಧರ್ 1,20,000 ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಅಧಿಕಾರಿಗಳು ಪಿಐ ಉಮಾ ಮಹೇಶ್, ಹಾಗೂ ಎಸ್ ಪಿ ಮಹಾಂತೇಶ್ವರ ಜಿದ್ದಿ ತಂಡ ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ…
ಬೆಂಗಳೂರು : ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಗೆ ಹೈ ಕೋರ್ಟ್ ಶಾಕ್ ನೀಡಿದೆ. ಬುಡಕ ಜಂಗಮ ಜಾತಿ ಪ್ರಮಾಣ ಪತ್ರ ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಇದೀಗ ವಜಾಗೊಳಿಸಿದೆ. ಹೌದು ಬುಡಗ ಜಂಗಮ ಜಾತಿ ಪ್ರಮಾಣ ಪತ್ರ ಕೋರಿ ಕೊತ್ತೂರು ಮಂಜುನಾಥ್ ಮೇಲ್ಮನವಿ ಸಲ್ಲಿಸಿದ್ದರು. ಏಕ ಸದಸ್ಯ ಪೀಠ ಕೊತ್ತೂರು ಮಂಜುನಾಥ ಅರ್ಜಿಯನ್ನು ವಜಾಗೊಳಿಸಿತ್ತು. ಬಳಿಕ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರ ಆದರೆ ಇದೀಗ ಈ ಒಂದು ಮೇಲ್ಮನವಿ ಅರ್ಜಿ ಕೂಡ ವಜಾಗೊಂಡಿದೆ. ಶಾಲಾ ಕಾಲೇಜುಗಳಲ್ಲಿ ಭೈರಾಗಿ ಜಾತಿಗೆ ಸೇರಿದವರು ಎಂದು ನಮೂದಿಸಿದ್ದರು ಆದರೆ ಬುಡಗ ಜಂಗಮ ಜಾತಿ ಪ್ರಮಾಣ ಪತ್ರಕ್ಕೆ ಶಾಸಕ ಮಂಜುನಾಥ್ ಮೇಲ್ಮನವಿ ಸಲ್ಲಿಸಿದ್ದರು ಆದರೆ ಇದೀಗ ಮೇಲ್ಮನವಿ ಅರ್ಜಿ ಕೂಡ ವಜಾಗೊಂಡಿದೆ.
ಬೆಂಗಳೂರು : ಕೊನೆಗೂ ಅಂಗನವಾಡಿ ಕಾರ್ಯಕರ್ತೆಯರ ದಶಕಗಳ ಕನಸು ಕೊನೆಗೂ ನನಸಾಗುವ ಕಾಲ ಬಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿನ ‘ಮಹಿಳಾ ಮೇಲ್ವಿಚಾರಕಿ’ ಹುದ್ದೆಗಳಲ್ಲಿ ಶೇ.75 ಹುದ್ದೆಗಳಿಗೆ ಅರ್ಹ ಅಂಗನವಾಡಿ ಕಾರ್ಯಕರ್ತೆಯರು ಬಡ್ತಿ ಮೂಲಕ ನೇಮಕವಾಗಲಿದ್ದಾರೆ. ಈ ಸಂಬಂಧ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಿ ಅರ್ಹರಿಗೆ ನ್ಯಾಯ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. 2015 ಅಧಿಸೂಚನೆ ಹೊರಡಿಸಿದ್ದ ಕೇಂದ್ರ ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿನ ಮಹಿಳಾ ಮೇಲ್ವಿಚಾರಕಿ ಹುದ್ದೆಗಳಲ್ಲಿ ಶೇ.50 ಸೇವಾ ಜೇಷ್ಠತೆ ಆಧಾರದಡಿ ಪದವೀಧರ ಅಂಗನವಾಡಿ ಕಾರ್ಯಕರ್ತೆಯರನ್ನು ನೇಮಿಸುವಂತೆ ನಿರ್ದೇಶಿಸಿತ್ತು. ಈ ಅಧಿಸೂಚನೆ ಪರಿಗಣಿಸಿ ಬಡ್ತಿ ನೀಡುವಂತೆ ಹಲವಾರು ಅಂಗನವಾಡಿ ಕಾರ್ಯಕರ್ತೆಯರುಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಆದರೆ, ಸರ್ಕಾರದ ವೃಂದ ಮತ್ತು ನೇಮಕ ನಿಯಮಗಳಲ್ಲಿ ತಿ ದ್ದುಪಡಿ ಮಾಡದ ಕಾರಣ ಬಡ್ತಿ ನೀಡಲು ಸಾಧ್ಯವಾಗಿರಲಿಲ್ಲ. ಬದಲಾಗಿ 557 ಮೇಲ್ವಿಚಾರಕಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಮುಂದಾಗಿತ್ತು. ಈ ನಿರ್ಧಾರ ಪ್ರಶ್ನಿಸಿ ಪ್ರಶ್ನಿಸಿ ಹೈಕೋರ್ಟ್ನ…
ಬೆಂಗಳೂರು : ಇತ್ತೀಚಿಗೆ ನಾವು ತಿನ್ನುವ ಆಹಾರದಲ್ಲಿ ಕೆಮಿಕಲ್ ಬಳಕೆ ಮಾಡುತ್ತಿರುವುದು ಆಘಾತಕಾರಿ ಸಂಗತಿ ಆಗಿದೆ ಇದೀಗ ಹಣ್ಣುಗಳಲ್ಲೂ ಕೂಡ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ ಮಾಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ FSSAI ಕಳವಳ ವ್ಯಕ್ತಪಡಿಸಿದ್ದು ಈ ಕುರಿತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಹೌದು ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ ಮಾಡುತ್ತಿದ್ದು, ಕಾಯಿ ಬೇಗನೆ ಹಣ್ಣಾಗಲು ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ ಮಾಡಲಾಗುತ್ತಿರುವ ಆತಂಕದ ವಿಚಾರ ಬಯಲಾಗಿದೆ. ಕ್ಯಾಲ್ಸಿಯಂ ಕಾರ್ಬೈಡ್ ಬಳಕೆಯಿಂದ ಸಾಕಷ್ಟು ಆರೋಗ್ಯ ಸಮಸ್ಯೆಯಾಗುತ್ತದೆ. ಚರ್ಮದ ಅಲ್ಸರ್, ವಾಂತಿ, ಗಂಟಲು ನೋವಿನ ಸಮಸ್ಯೆ ಉಲ್ಬಣಗೊಳ್ಳುತ್ತದೆ. ಹೀಗಾಗಿ ಎಫ್ಎಸ್ಎಸ್ಎಐಯಿಂದ ಎಲ್ಲಾ ರಾಜ್ಯದ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಹಣ್ಣುಗಳಿಗೆ ಕೆಮಿಕಲ್ ಬಳಕೆಯ ಬಗ್ಗೆ ಅಧಿಕಾರಿಗಳು ನಿಗಾ ವಹಿಸಬೇಕು ಅಂತಾ ಸೂಚನೆ ನೀಡಲಾಗಿದೆ. ಎಲ್ಲಾ ಮಂಡಿ, ವರ್ತಕರು, ಸ್ಟೋರೆಜ್ಗಳಿಗೆ ದಾಳಿ ನಡೆಸಿ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ರವಾನೆ ಮಾಡಲಾಗಿದೆ.
ಬೆಂಗಳೂರು : ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ಶಾಸಕ ಸ್ಥಾನದಿಂದ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅನರ್ಹರಾಗಿದ್ದಾರೆ. ನ್ಯಾಯಾಲಯದ ತೀರ್ಪಿನ ಪ್ರತಿ ಬಂದ ಕೂಡಲೇ ವಿಧಾನಸಭೆ ಕಾರ್ಯದರ್ಶಿ ನಿಯಮದಂತೆ ಅನರ್ಹತೆಯ ಆದೇಶ ಹೊರಡಿಸಲಿದ್ದಾರೆ. ಜನಪ್ರತಿನಿಧಿಗಳ ಕಾಯ್ದೆ-1951, ಸೆಕ್ಷನ್ 8(3)ರಂತೆ ಅಪರಾಧ ಪ್ರಕರಣದಲ್ಲಿ ಜನಪ್ರತಿನಿಧಿಗಳು ಕನಿಷ್ಠ ಎರಡು ವರ್ಷ ಶಿಕ್ಷೆಗೆ ಒಳಗಾದರೆ ಅವರು ಶಾಸಕತ್ವದಿಂದ ಅನರ್ಹರಾಗಲಿದ್ದಾರೆ. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಜನಪ್ರತಿನಿಧಿ ನ್ಯಾಯಾಲಯದ ತೀರ್ಪಿನ ಪ್ರತಿ ಲಭಿಸುತ್ತಿದ್ದ ಹಾಗೆಯೇ ವಿಧಾನಸಭೆ ಕಾರ್ಯದರ್ಶಿಗಳು ವಿನಯ್ ಕುಲಕರ್ಣಿ ಅನರ್ಹತೆಯ ಆದೇಶ ಹೊರಡಿಸಲಿದ್ದಾರೆ. ಶಿಕ್ಷೆ ಪ್ರಕಟಿಸಿದ ದಿನಾಂಕದಿಂದ ಅನರ್ಹ ಆದೇಶ ಜಾರಿಗೆ ಬರಲಿದೆ ಎಂದು ವಿಧಾನಸಭೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಕಾಯ್ದೆಯಂತೆ ಈ ಅನರ್ಹತೆಯು ಶಿಕ್ಷೆಯ ಅವಧಿ ಮುಕ್ತಾಯದವರೆಗೆ ಮತ್ತು ಶಿಕ್ಷೆ ಅವಧಿ ಮುಗಿದ ಬಳಿಕ ಆರು ವರ್ಷಗಳವರೆಗೆ ಮುಂದುವರಿಯಲಿದೆ. ಅಲ್ಲಿಯವರೆಗೆ ವಿನಯ್ ಕುಲಕರ್ಣಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.…
ಬೆಂಗಳೂರು : ಬೆಂಗಳೂರಲ್ಲಿ ಯಾವಾಗಲು ತಂಪು ಇರುತ್ತೆ ಆದರೆ ಇದೀಗ ಕಳೆದ ಎರಡಮೂರು ದಿನಗಳಿಂದ ಸಿಕ್ಕಾಪಟ್ಟೆ ಬಿಸಿಲು ಇದ್ದುದ್ದರಿಂದ ತಾಪಮಾನ ಏರಿಕೆ ಆಗಿದೆ.ತಾಪಮಾನ ಏರಿಕೆಯಿಂದ ಜನ ಕಂಗೆಟ್ಟಿದ್ದಾರೆ. ಆರೋಗ್ಯ ಇಲಾಖೆ ಮಕ್ಕಳು, ವೃದ್ಧರು, ಗರ್ಭಿಣಿಯರಿಗೆ ವಿಶೇಷ ಎಚ್ಚರಿಕೆ ನೀಡಿದೆ. ನಿರ್ಜಲೀಕರಣ, ಚರ್ಮದ ಸಮಸ್ಯೆಗಳು ಹೆಚ್ಚುತ್ತಿದ್ದು, ಮಧ್ಯಾಹ್ನ ಬಿಸಿಲಿಗೆ ಮೈಯೊಡ್ಡದಂತೆ, ದೇಹವನ್ನು ಹೈಡ್ರೇಟ್ ಆಗಿರಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ. ಬೆಂಗಳೂರಿನಲ್ಲಿ 36ರ ಗರಿಷ್ಠ ತಾಪಮಾನ ದಾಖಲಾಗಿದೆ. ಕ್ಷಣಕ್ಷಣಕ್ಕೂ ಏರಿಕೆ ಆಗುತ್ತಿರುವ ರಾಜಧಾನಿಯ ವಾತಾವರಣ ಬೆಂಗಳೂರಿಗರನ್ನ ಹೈರಾಣಾಗಿಸಿದೆ. ಮುಂಜಾನೆ ಸೂರ್ಯನ ಉದಯವಾಗುತ್ತಿದ್ದಂತೆ ಬಿರುಬಿಸಿಲು, ರಾತ್ರಿ ಆದರೆ ಬಿಸಿ ಗಾಳಿ, ಈ ವರ್ಷದ ತಾಪಮಾನ ಹಾಗೂ ಸೆಕೆಯಿಂದ ಜನರು ಕಂಗಾಲಾಗಿದ್ದರೆ ಗರ್ಭಿಣಿಯರು, ವೃದ್ಧರು, ಮಕ್ಕಳ ಬಗ್ಗೆ ವೈದ್ಯರು ತುಸು ಎಚ್ಚರ ಎನ್ನುತ್ತಿದ್ದಾರೆ. ಬಿಸಿಲಿನ ಎಫೆಕ್ಟ್ ಜನರ ಆರೋಗ್ಯಕ್ಕೆ ಸಂಕಷ್ಟ ತರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರಿಗೆ ವೆದರ್ ತೊಂದರೆ ಕೊಡುತ್ತಿದೆ. ಹೀಗಾಗಿ ಸಿಟಿಯ ಆಸ್ಪತ್ರೆಗಳಲ್ಲಿ ನಿತ್ರಾಣ, ನಿರ್ಜಲೀಕರಣ , ಚರ್ಮದಲ್ಲಿ ಅಲರ್ಜಿ ಹಾಗೂ ಅಜೀರ್ಣ ಸೇರಿದಂತೆ ಸಾಕಷ್ಟು…
ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ (ಏಪ್ರಿಲ್ 17, 2026). ಈ ಮಹತ್ವದ ತೀರ್ಪಿನ ನಂತರ ವಿನಯ್ ಕುಲಕರ್ಣಿ ಅವರ ಮುಂದಿರುವ ಪ್ರಮುಖ ಕಾನೂನು ಆಯ್ಕೆಗಳು ಇಲ್ಲಿವೆ: 1. ಹೈಕೋರ್ಟ್ನಲ್ಲಿ ಮೇಲ್ಮನವಿ (Appeal in High Court) ವಿಶೇಷ ನ್ಯಾಯಾಲಯ ನೀಡಿದ ಈ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಅವರು *ಕರ್ನಾಟಕ ಹೈಕೋರ್ಟ್* ಮೆಟ್ಟಿಲೇರಬಹುದು. ಇದು ಅವರ ಮುಂದಿರುವ ಮೊದಲ ಮತ್ತು ಪ್ರಮುಖ ಕಾನೂನು ಆಯ್ಕೆಯಾಗಿದೆ. 2. ಶಿಕ್ಷೆಗೆ ತಡೆ (Stay on Conviction): ಮೇಲ್ಮನವಿ ಸಲ್ಲಿಸುವಾಗ ಶಿಕ್ಷೆಗೆ ತಡೆ ನೀಡುವಂತೆ ಕೋರಬಹುದು. ಒಂದು ವೇಳೆ ಹೈಕೋರ್ಟ್ ಶಿಕ್ಷೆಗೆ ತಡೆ ನೀಡಿದರೆ, ಅವರು ಜೈಲು ಶಿಕ್ಷೆಯಿಂದ ತಾತ್ಕಾಲಿಕವಾಗಿ ರಕ್ಷಣೆ ಪಡೆಯಬಹುದು. ಶಿಕ್ಷೆಯ ಅವಧಿಯಲ್ಲಿ ಹೊರಬರಲು ಹೈಕೋರ್ಟ್ಗೆ ಜಾಮೀನು ಅರ್ಜಿಯನ್ನು ಸಲ್ಲಿಸಬಹುದು. 3. ಸುಪ್ರೀಂ…
ಬೆಂಗಳೂರು : ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಆರೋಪಿಗಳು ದೋಷಿಗಳು ಎಂದು ತೀರ್ಪು ನೀಡಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದ್ದು,ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 16 ಆರೋಪಿಗಳಿಗೂ ಜೀವಾವಧಿ ಶಿಕ್ಷೆ ನೀಡಿ ಕೋರ್ಟ್ ತೀರ್ಪು ಪ್ರಕಟಿಸಿದೆ. ಇದೆ ವೇಳೆ 16 ಲಕ್ಷ ರೂಪಾಯಿ ಪರಿಹಾರ ನೀಡಲು ಕೋರ್ಟ್ ಆದೇಶ ಹೊರಡಿಸಿತು. ಬಿಜೆಪಿ ಮುಖಂಡ ಯೋಗೀಶ್ ಗೌಡ ಮಕ್ಕಳಿಗೆ 16 ಲಕ್ಷ ರೂಪಾಯಿ ಪರಿಹಾರ ನೀಡಲು ಕೋರ್ಟ್ ಆದೇಶ ನೀಡಿತು. 2015 ಜೂನ್ 5ರಂದು ಧಾರವಾಡದಲ್ಲಿ ಜಿಮ್ ನಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡನ ಕೊಲೆ ನಡೆದಿತ್ತು. ಇದೊಂದು ಫ್ರೀ ಪ್ಲಾನ್ ಮರ್ಡರ್ ಎಂದು ನಿನ್ನೆ ಸಿಬಿಐ ಪರ ವಕೀಲರು ವಾದಮಂಡನೆ ಮಾಡಿದರು.ಇದೀಗ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ…
ಮೈಸೂರು : ಮೈಸೂರಿನ ಸಿದ್ದಾರ್ಥ್ ನಗರದ ಮನೆ ಒಂದರಲ್ಲಿ ಚಿರತೆ ಒಂದು ಪ್ರತ್ಯಕ್ಷವಾಗಿದೆ. ಸಿದ್ಧಾರ್ಥ ನಗರದ ಸುರೇಶ್ ಎಂಬ ಅವರ ಮನೆಗೆ ಚಿರತೆ ನುಗ್ಗಿದೆ. ಮನೆಯಲ್ಲಿ ಅತ್ತೆ ಸೊಸೆ ಇರುವಾಗಲೇ ಚಿರತೆ ನುಗ್ಗಿದ್ದು ಆತಂಕ ಸೃಷ್ಟಿಯಾಗಿತ್ತು. ಸುರೇಶ್ ಪತ್ನಿ ಸುಜಾತ ಹಾಗೂ ತಾಯಿ ಶೈಲಜಾ ಮನೆಯಲ್ಲಿದ್ದಾಗಲೇ ಚಿರತೆ ಮನೆಗೆ ನುಗ್ಗಿದೆ. ಶೈಲಜಾ ಮಲಗಿದ್ದ ಕೊಠಡಿ ಒಳಗೆ ಚಿರತೆ ಪ್ರವೇಶಿಸಿದೆ ಈ ವೇಳೆ ಸಮಯಪ್ರಜ್ಞೆಯಿಂದ ಅತ್ತೆ ಶೈಲಜಾರನ್ನು ಸುಜಾತ ರಕ್ಷಣೆ ಮಾಡಿದ್ದಾರೆ. ಚಿರತೆ ಮನೆಗೆ ನುಗ್ಗಿದ್ದರಿಂದ ಮನೆಯವರು ಆತಂಕಕ್ಕೆ ಒಳಗಾಗಿದ್ದಾರೆ. ಇವಳೆ ಅರಣ್ಯ ಅಧಿಕಾರಿಗಳು ಬಂದು ಚಿರತೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.














