Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕೆ.ಆರ್. ಪುರ ಶಾಸಕ ಬೈರತಿ ಬಸವರಾಜ್ ಅವರಿಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ರದ್ದುಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮತ್ತೆ ಅರ್ಜಿ ಸಲ್ಲಿಸಿದೆ. ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2026ರ ಮಾ.12ರಂದು ಹೊರಡಿಸಿದ ಆದೇಶ ರದ್ದು ಕೋರಿ ಸಿಐಡಿ ತನಿಖಾಧಿಕಾರಿಯು ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಕೆ.ಆರ್. ಪುರ ಶಾಸಕ ಬಿ.ಎ.ಬಸವರಾಜ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಪ್ರಕರಣ ಸಂಬಂಧ ಈವರೆಗೂ ತನಿಖೆ ಪೂರ್ಣಗೊಂಡಿಲ್ಲ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಆರೋಪಿಗೆ ಜಾಮೀನು ನೀಡಲಾಗಿದೆ. ಇದರಿಂದಾಗಿ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸುವುದಕ್ಕೆ ಸಾಧ್ಯವಾಗದಂತಾಗಿದೆ. ಆದ್ದರಿಂದ ಆರೋಪಿಯ ಜಾಮೀನು ರದ್ದು ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Read More

ಬೆಂಗಳೂರು : ಮೊದಲೇ ರಾಜ್ಯದಲ್ಲಿ ಸಿಲಿಂಡರ್ ಇಲ್ಲದೆ ಗ್ರಾಹಕರು ಹಾಗೂ ಆಟೋ ಚಾಲಕರು ಪರದಾಡುತ್ತಿದ್ದರೆ, ಇತ್ತ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಸಿಲಿಂಡರ್ ಅಭಾವದಿಂದ ಸಂಕಷ್ಟ ಎದುರಾಗಿದ್ದು ಇದೀಗ ಕಳ್ಳನೊಬ್ಬ ಹೆಲ್ಮೆಟ್ ಹಾಕಿಕೊಂಡು ಬಂದು ಸಿಲಿಂಡರ್ ಕದ್ದು ಹೋಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಮನೆ ಗೇಟ್ ತೆಗೆದು ಸಿಲಿಂಡರ್ ಕದ್ದು ಬೈಕ್ ನಲ್ಲಿ ಇಟ್ಟುಕೊಂಡು ಎಸ್ಕೇಪ್ ಆಗಿದ್ದಾನೆ. ನಿನ್ನೆ ನಸುಕಿನ ಜಾವ ಸುಮಾರು 3 ಗಂಟೆಗೆ ಈ ಒಂದು ಘಟನೆ ನಡೆದಿದೆ. ಬೈಕ್ ನಲ್ಲಿ ಬಂದು ಗೇಟ್ ಓಪನ್ ಮಾಡಿ ಸಿಲಿಂಡರ್ ತೆಗೆದುಕೊಂಡು ಬೈಕ್ ಮೇಲೆ ಇಟ್ಟುಕೊಂಡು ಎಸ್ಕೇಪ್ ಆಗಿದ್ದಾನೆ. ಮೊದಲೇ ಈ ಮನೇಲಿ ಸಿಲಿಂಡರ್ ಇದೆ ಎಂದು ಗಮನಿಸಿ ಸ್ಕೆಚ್ ಹಾಕಿದ್ದ ಕಳ್ಳ ನಸುಕಿನ ಜಾವ 3 ಗಂಟೆಗೆ ಬಂದು ಸಿಲಿಂಡರ್ ಕಳ್ಳತನ ಮಾಡಿದ್ದಾನೆ.

Read More

ದಾವಣಗೆರೆ: ರಾಜ್ಯದ ನಿರುದ್ಯೋಗಿ ಯುವಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೊಡ್ಡ ಭರವಸೆಯೊಂದನ್ನು ನೀಡಿದ್ದಾರೆ. ಪ್ರಸಕ್ತ ವರ್ಷದಲ್ಲೇ ಸುಮಾರು 56,432 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಅವರು ಘೋಷಿಸಿದ್ದಾರೆ. ಸೋಮವಾರ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಿದ ಸಂದರ್ಭದಲ್ಲಿ ಸಿಎಂ ಈ ಮಹತ್ವದ ಮಾಹಿತಿ ಹಂಚಿಕೊಂಡರು. ಖಾಲಿ ಇರುವ ಹುದ್ದೆಗಳು: ರಾಜ್ಯ ಸರ್ಕಾರದಲ್ಲಿ ಸದ್ಯ ಒಟ್ಟು 2.50 ಲಕ್ಷ ಉದ್ಯೋಗಗಳು ಖಾಲಿ ಇವೆ. ಈ ಪೈಕಿ ಮೊದಲ ಹಂತವಾಗಿ 40 ಸಾವಿರ ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದೆ ಎಂದು ಸಿಎಂ ತಿಳಿಸಿದರು. ಹೊಸ ಗುರಿ: ನೀಡಿದ ಭರವಸೆಯಂತೆ ಉಳಿದಿರುವ ಹುದ್ದೆಗಳಲ್ಲಿ 56,432 ಸರ್ಕಾರಿ ಹುದ್ದೆಗಳಿಗೆ ಇದೇ ವರ್ಷ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಹಂತ ಹಂತವಾಗಿ ನೇಮಕ: ಎಲ್ಲಾ ಹುದ್ದೆಗಳಿಗೂ ಈ ವರ್ಷ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದು. ಆತಂಕ ಬೇಡ: “ಉದ್ಯೋಗಾಕಾಂಕ್ಷಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಅರ್ಹ ಅಭ್ಯರ್ಥಿಗಳಿಗೆ…

Read More

ಬೆಂಗಳೂರು : ಉದ್ದೇಶ ಪೂರ್ವಕವಾಗಿ ದ್ವಿಚಕ್ರವಾಹನದ ಕಡೆ ಕಾರನ್ನು ತಿರುಗಿಸಿ ಅಪಘಾತವೆಸಗಿದ ಆರೋಪದಲ್ಲಿ ಸಾಫ್ಟ್​​​ವೇರ್​ ಎಂಜಿನಿಯರ್ ಒಬ್ಬರ ವಿರುದ್ಧ ಪೊಲೀಸರು ದಾಖಲಿಸಿದ್ದ ಕೊಲೆಯತ್ನ ಪ್ರಕರಣವನ್ನು ರದ್ದಪಡಿಸಲು ನಿರಾಕರಿಸಿದ ಹೈಕೋರ್ಟ್, ರೋಡ್‌ ರೇಜ್‌ ಯಾವುದೇ ಕ್ಷಮೆಯಿರುವುದಿಲ್ಲ ಎಂದು ತಿಳಿಸಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಸಾಫ್ಟ್​ವೇರ್​ ಎಂಜಿನಿಯರ್ ಆಗಿದ್ದು ಘಟನೆ ನಡೆದ ಸಂದರ್ಭದಲ್ಲಿ ಅವರು ಕಚೇರಿಗೆ ಹೋಗುತ್ತಿದ್ದರು. ಅಪಘಾತ ನಡೆಸಬೇಕು ಎಂಬ ಯಾವುದೇ ಉದ್ದೇಶ ಅವರಿಗಿರಲಿಲ್ಲ. ಆದರೆ, ಎಫ್ಐಆರ್ ನಲ್ಲಿ ತಪ್ಪಾಗಿ ಕೊಲೆ ಯತ್ನ ಆರೋಪ ದಾಖಲಿಸಲಾಗಿದೆ. ಆದ್ದರಿಂದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದರು. ಅರ್ಜಿದಾರರು ಸಾಫ್ಟ್‌ವೇರ್‌ ಎಂಜಿನಿಯರ್‌ ಸಾಫ್ಟ್‌ ಆಗಿ ಇರಬೇಕಾಗಿತ್ತು. ಅವರಿಗೆ ತಾಳ್ಮೆ ಇರಲಿಲ್ಲ ಎಂದರೆ ಏನೂ ಮಾಡೋಕೆ ಆಗಲ್ಲ. ಬೆಂಗಳೂರು ಸಂಚಾರ ದಟ್ಟಣೆ ತಾಳ್ಮೆ ಕಲಿಸಲಿದೆ. ಆದರೆ, ನಿಮಗೆ ಅದು ಇರಬೇಕು. ರೋಡ್‌ ರೇಜ್‌ಗೆ ಕ್ಷಮೆಯೇ ಇಲ್ಲ ಎಂದು ತಿಳಿಸಿತು. ಅಲ್ಲದೆ, ಪ್ರಕರಣ ಸಂಬಂಧ ಆರೋಪ ಪಟ್ಟಿ ಸಲ್ಲಿಕೆಯಾದ ಮೇಲೆ ಅರ್ಜಿದಾರರು ಮತ್ತೊಮ್ಮೆ ಅದನ್ನು ಪ್ರಶ್ನಿಸಿ…

Read More

ಬೆಂಗಳೂರು : ಮೈಸೂರಿನಲ್ಲಿ ಬಂಧಿತನಾದ ಹುಸಿ ಬಾಂಬ್ ಬೆದರಿಕೆ ಆರೋಪಿ ಶ್ರೀನಿವಾಸ್ ಲೂಯಿಸ್, ಪಾಕಿಸ್ತಾನದ ಸರ್ಕಾರಿ ಕಚೇರಿ ಮತ್ತು ಕೋರ್ಟ್‌ಗಳಿಗೂ ಬೆದರಿಕೆ ಇಮೇಲ್ ಕಳುಹಿಸಿರುವುದು ದೆಹಲಿ ಪೊಲೀಸರ ವಿಚಾರಣೆಯಲ್ಲಿ ಪತ್ತೆಯಾಗಿದೆ. ಡಾರ್ಕ್ ವೆಬ್ ಮತ್ತು 50ಕ್ಕೂ ಹೆಚ್ಚು ಇಮೇಲ್ ಐಡಿಗಳನ್ನು ಬಳಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಈತ ಆತಂಕ ಸೃಷ್ಟಿಸಿದ್ದ. ಹೌದು ಹುಸಿ ಬಾಂಬ್ ಸಂದೇಶಗಳ ರೂವಾರಿ ಶ್ರೀನಿವಾಸ್ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರ ವಿಚಾರಣೆಯಲ್ಲಿ ಸ್ಪೋಟಕವಾದ ಮಾಹಿತಿ ಬಹಿರಂಗವಾಗಿದೆ ರಾಜ್ಯ, ದೇಶ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಈತ ಹೊಸ ಬೆದರಿಕೆ ಸಂದೇಶ ಕಳುಹಿಸಿದ್ದ. ಪಾಕಿಸ್ತಾನದ ಸರಕಾರಿ ಕಚೇರಿಗಳಿಗೂ ಹುಸಿ ಬಾಂಬ್ ಕರೆ ಮಾಡಿದ್ದ. ಸದ್ಯ ಲ್ಯಾಪ್ಟಾಪ್ ಮೊಬೈಲ್ ಸಿಮ್ ಕಾರ್ಡ್ ಗಳನ್ನು ಎಫ್ ಎಸ್ ಎಲ್ ಗೆ ರವಾನೆ ಮಾಡಲಾಗಿದ್ದು, ಸದ್ಯ ಶ್ರೀನಿವಾಸ್ ಲೂಯಿಸ್ ದೆಹಲಿ ಪೊಲೀಸರ ಕಷ್ಟಡಿಯಲ್ಲಿ ಇದ್ದಾನೆ. ದೇಶಾದ್ಯಂತ ಕೋರ್ಟ್, ವಿಧಾನಸಭೆ, ಸರಕಾರಿ ಕಚೇರಿಗಳು ಶಾಲಾ ಕಾಲೇಜುಗಳಿಗೆ ಬಾಂಬ್ ಬೆದರಿಯ ಹಾಕಿದ್ದ ಶ್ರೀನಿವಾಸ ನನ್ನ ಮೈಸೂರಲ್ಲಿ ಅರೆಸ್ಟ್…

Read More

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ಮತ್ತು ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಟಿಕೆಟ್ ಬ್ಲಾಕ್ ನಲ್ಲಿ ಮಾರಾಟ ಮಾಡಲಾಗುತ್ತಿತ್ತು. ಬ್ಲಾಕ್ ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ 7 ಜನರ ವಿರುದ್ಧ ಇದೀಗ ಕೇಸ್ ದಾಖಲಿಸಲಾಗಿದೆ. ಕಬ್ಬನ್ ಪಾರ್ಕ್ ಠಾಣೆ ಪೋಲಿಸರು 7 ಆರೋಪಿಗಳ ವಿರುದ್ಧ FIR ದಾಖಲಿಸಿದ್ದಾರೆ. ಜಗದೀಶ್, ಸತ್ಯನಾರಾಯಣ, ಹರ್ಷ, ವಿನಯ್, ಶಾಹಿದ್, ಲಿಖಿತ್ ಹಾಗೂ ಪುನೀತ್ ಎಂಬುವರ ವಿರುದ್ಧ ಪೊಲೀಸರು FIR ದಾಖಲು ಮಾಡಿಕೊಂಡಿದ್ದಾರೆ. ಸ್ಟೇಡಿಯಂ ಬಳಿ ಹೆಚ್ಚಿನ ಹಣಕ್ಕೆ ಟಿಕೆಟ್ ಮಾರಾಟ ಮಾಡುತ್ತಿದ್ದರು. ಸಿಸಿಬಿ ಪೊಲೀಸರಿಂದ ಮಾನಿಟರ್ ಮಾಡಲಾಗಿತ್ತು. ಮಾನಿಟರ್ ವೇಳೆ ರೆಡ್ ಹ್ಯಾಂಡ್ ಆಗಿ ಆರೋಪಿಗಳು ಸಿಗಿಬಿದ್ದಿದ್ದಾರೆ. ಬ್ಲಾಕ್ ನಲ್ಲಿ ಟಿಕೆಟ್ ಮಾರಾಟಕ್ಕೆ ಈ ಒಂದು ಗುಂಪು ಯತ್ನಿಸುತ್ತಿತ್ತು. ಸದ್ಯ ಆರೋಪಿಗಳ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಮೂರು FIR ದಾಖಲಾಗಿದೆ.

Read More

ಉಡುಪಿ : ರಾಜ್ಯಾದ್ಯಂತ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿದ್ದು ಜನರು ಹಾಗೂ ಆಟೋ ಚಾಲಕರು ಸಿಲಿಂಡರ್ ನಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಇದೀಗ ಗ್ಯಾಸ್ ಸಿಲಿಂಡರ್ otp ಇಂದ ಒಂದು ವೃದ್ಧನ ಜೀವ ಇದೀಗ ಬದುಕಿಸಿದೆ. ಬಾವಿಗೆ ಬಿದ್ದಂತಹ ವೃದ್ಧನನ್ನ ಗ್ಯಾಸ್ ಎಜೇನ್ಸಿ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ. ಉಡುಪಿ ನಗರದ ಕೊಡವುರು ವಾರ್ಡ್ನಲ್ಲಿ ಒಂದು ಘಟನೆ ನಡೆದಿದೆ. ಕೊಡವು ರು ವಾರ್ಡ್ ಕಂಬ್ಳಕಟ್ಟದಲ್ಲಿ ಈ ಒಂದು ಅಪರೂಪದ ಘಟನೆ ನಡೆದಿದೆ. ಹೌದು ಗ್ಯಾಸ್ ಏಜೆನ್ಸಿಯ ಸಿಬ್ಬಂದಿ ಶ್ರೀನಿವಾಸ್ ಆಚಾರ ಎನ್ನುವವರ ಜೀವವನ್ನು ಉಳಿಸಿದ್ದಾರೆ. 15 ರಿಂದ 20 ಅಡಿ ಬಾವಿಯಲ್ಲಿ ಶ್ರೀನಿವಾಸ್ ಆಚಾರಿ ಅವರು ಬಿದ್ದಿರುತ್ತಾರೆ. ಸಿಂಗಲ್ ಸಿಲಿಂಡರ್ ಹೊಂದಿರುವಂತಹ ಶ್ರೀನಿವಾಸ್ ಆಚಾರ್ಯ ಅವರು ನಿರ್ಜನ ಪ್ರದೇಶದ ಮನೆಯಲ್ಲಿ ವಾಸಿಸುತ್ತಾರೆ. ಬಾವಿಗೆ ಹಾಕಿದಂತಹ ಪಂಪ್ ನಲ್ಲಿ ಇರುವ ಕಸ ಕ್ಲೀನಿಂಗ್ ಮಾಡುವ ಪ್ರಯತ್ನ ಮಾಡುತ್ತಾರೆ. ಈ ವೇಳೆ ಬಾವಿಯಲ್ಲಿ ಬೀಳುತ್ತಾರೆ. ಮನೇಲಿ ಒಬ್ಬರೇ ಇರುವುದರಿಂದ ಯಾರೂ ಕೂಡ ಇರುವುದಿಲ್ಲ. ಎಷ್ಟೇ ಕೂಗಿದರು ಸುತ್ತಲೂ…

Read More

ಬೆಂಗಳೂರು : ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. 16 ಕ್ಕೂ ಅಧಿಕ ಜಿಲ್ಲೆಗಳಿಗೆ ಏಪ್ರಿಲ್‌ 6 ರಿಂದ 9 ರವರೆಗೂ ವಿವಿಧ ದಿನಗಳಂದು ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಏಪ್ರಿಲ್ 8ವರೆಗೂ ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಏಪ್ರಿಲ್ 8ರ ತನಕ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೆ ಕನ್ನಡಿಗರ ಮೇಲೆ ದಬ್ಬಾಳಿಕೆ ಗೂಡಾಗಿರಿ ನಡೆದಿದೆ. ಕನ್ನಡಿಗರನ್ನು ಹಿಂಬಾಲಿಸಿಕೊಂಡು ಬಂದು, ತಮಿಳು ಗೂಂಡಾಗಳು ಅತ್ತಿಬೆಲೆ ಟೋಲ್ ಬಳಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪ ಈ ಒಂದು ಘಟನೆ ನಡೆದಿದೆ. ಮಹಿಳೆಯರು ಮಕ್ಕಳ ಎದುರೇ ತಮಿಳುನಾಡಿನ ಗೂಂಡಾಗಳಿಂದ ಕನ್ನಡಿಗರ ಮೇಲೆ ಹಲ್ಲೆ ನಡೆದಿದೆ. ಟೆಂಪೋ ಟ್ರಾವೆಲರ್ ನಲ್ಲಿ ಇದ್ದವರ ಮೇಲೆ ದೊಣ್ಣೆ ಮತ್ತು ಮಾರಕಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ತಮಿಳು ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಟಿಟಿ ವಾಹನದ ಚಾಲಕ ರಾಮಕೃಷ್ಣ ಮೇಲೆ ತಮಿಳು ಗೂಂಡಾಗಳು ಹಲ್ಲೆ ಮಾಡಿದ್ದಾರೆ. ವೈಟ್ಫೀಲ್ಡ್ ನಿಂದ ತಮಿಳುನಾಡಿನ ಕೃಷ್ಣಗಿರಿಗೆ ಚಾಲಕ ಬಾಡಿಗೆಗೆ ಹೋಗಿದ್ದ. ಈ ವೇಳೆ ವಾಹನದಲ್ಲಿ ಇದ್ದಂತಹ ಕನ್ನಡಿಗರ ಜೊತೆಗೆ ಸ್ಥಳೀಯ ತಮಿಳು ಗೂಂಡಾಗಳು ಕಿರಿಕ್ ಮಾಡಿದ್ದಾರೆ. ಟಿಟಿ ವಾಹನದಲ್ಲಿದ್ದ ಕನ್ನಡಿಗರು ಕೃಷ್ಣಗಿರಿ ಸ್ಥಳೀಯರ ನಡುವೆ ಕಿರಿಕ್ ಆಗಿದೆ. ಈ ವೇಳೆ ತಕ್ಷಣ ಅಲ್ಲಿಂದ ತಪ್ಪಿಸಿಕೊಂಡು ಟಿಟಿ ವಾಹನದಲ್ಲಿ…

Read More

ಬೆಂಗಳೂರು : ಎಸ್ ಎಸ್ ಎಲ್ ಸಿ ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ತೃತೀಯ ಭಾಷೆ ಹಿಂದಿಗೆ ಅಂಕ ಕಟ್ ಮಾಡಿದಕ್ಕೆ ರಾಜ್ಯಪಾಲರು ಅಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ನಡೆ ಖಂಡಿಸಿ ಕನ್ನಡ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸುತ್ತಿದ್ದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಟಿಎ ನಾರಾಯಣಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯಪಾಲರೇ ಕರ್ನಾಟಕ ಬಿಟ್ಟು ತೊಲಗಿ ಎಂದು ಘೋಷಣೆ ಕೂಗಿದರು. ರಾಜ್ಯಪಾಲರಿಂದ ಆಕ್ಷೇಪಣೆ ಪತ್ರ ಬಂದಿದ್ದು, ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ನಡೆಸಿದರು. ತೃತೀಯ ಭಾಷೆಯ ಅಂಕ ಕೈಬಿಟ್ಟಿದ್ದಕ್ಕೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಇದನ್ನು ಖಂಡಿಸಿ ಇಂದು ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

Read More