Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನ ಶ್ರೀನಿವಾಸಪುರದ ಕೋಗಿಲು ಬಡಾವಣೆ ತೆರವು ಪ್ರಕರಣದಲ್ಲಿ ಸಂತ್ರಸ್ತರಾದ 161 ಕುಟುಂಬಗಳ ಪೈಕಿ ಕೇವಲ 26 ಮಂದಿಗಷ್ಟೇ ಪರ್ಯಾಯವಾಗಿ ಮನೆ ನೀಡಲು ನಿರ್ಧಾರ ಮಾಡಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಈ ಕುರಿತಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಾಹಿತಿ ನೀಡಿದ್ದು, 26 ಮಂದಿಯ ದಾಖಲೆ ಪರಿಶೀಲನೆ ನಡೆಸಲಾಗಿದೆ. ಕೋಗಿಲು ಸಂತ್ರಸ್ತರಿಗೆ ಮನೆ ನೀಡುವ ವಿಚಾರವಾಗಿ ಸಚಿವ ಕೃಷ್ಣಬೈರೇಗೌಡರು ನನಗೆ ಕರೆ ಮಾಡಿದ್ದರು. 26 ಜನರ ದಾಖಲೆ ಪರಿಶೀಲನೆ ಮುಗಿದಿದೆ ಎಂದು ಹೇಳಿದ್ದಾರೆ ಎಂದರು. ಪ್ರಕರಣ ಹಿನ್ನಲೆ ಕೋಗಿಲು ಬಡಾವಣೆಯಲ್ಲಿ ಜಿಬಿಎಗೆ ಸೇರಿದ ಭೂಮಿಯಲ್ಲಿ ಅನಧಿಕೃತವಾಗಿ ಮನೆ ಕಟ್ಟಿಕೊಂಡು ವಾಸವಾಗಿದ್ದಾರೆಂದು ಜಿಬಿಎ ಅಧಿಕಾರಿಗಳು ಕಳೆದ ವಾರ ತೆರವು ಕಾರ್ಯಾಚರಣೆ ಮಾಡಿ 180 ಕುಟುಂಬಗಳನ್ನು ಸ್ಥಳಾಂತರಿಸಿದ್ದರು. ಬಳಿಕ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕ ಸರ್ಕಾರವು ಅಲ್ಪಸಂಖ್ಯಾತರ ವಿರುದ್ಧ ಬುಲ್ಡೋಜರ್ ಸಂಸ್ಕೃತಿ ಅಳವಡಿಸಿಕೊಂಡಿದೆ ಎಂದು ಆರೋಪಿಸಿದ್ದರು. ಕೇರಳದ ರಾಜ್ಯಸಭಾ ಸದಸ್ಯರು ಮತ್ತು…
ಮಹಾಭಾರತದಲ್ಲಿ ‘ಸಹದೇವ’ ಪಾಂಡವ ರಲ್ಲಿ ನಾಲ್ಕನೇಯವನು. ಪಾಂಡುರಾಜನ ಪತ್ನಿಯರು, ಕುಂತಿ ಮತ್ತು ಮಾದ್ರಿ. ಋಷಿ ಮುನಿಗಳ ಶಾಪದಿಂದಾಗಿ ಪಾಂಡುರಾಜಗೆ ಮಕ್ಕಳಾಗುವುದಿಲ್ಲ ಎಂದು ತಿಳಿದಾಗ, ಹಿಂದೆ ದುರ್ವಾಸ ಮುನಿಗಳು ಕೊಟ್ಟ ವರ ದಿಂದ ಕುಂತಿಯು ಯುಧಿಷ್ಠಿರ, ಭೀಮ, ಮತ್ತು ಅರ್ಜುನ ಎಂಬ ಮೂರು ಮಕ್ಕ ಳನ್ನು ಪಡೆದು ಇನ್ನೊಂದು ಮಂತ್ರವನ್ನು ಮಾದ್ರಿಗೆ ಅನುಗ್ರಹಿಸುತ್ತಾಳೆ. ಮಾದ್ರಿ ಅಶ್ವಿನಿ ಅವಳಿ ದೇವತೆಗಳನ್ನು ಪ್ರಾರ್ಥಿಸಿ ಆ ದೇವತೆಗಳ ಆಶೀರ್ವಾದದಿಂದ ನಕುಲ ಹಾಗೂ ಸಹದೇವ ಅವಳಿ ಮಕ್ಕಳನ್ನು ಪಡೆದಳು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪಾಲಿಕೆಯ ಕಾಂಗ್ರೆಸ್ ಸದಸ್ಯ ಆಗಿರುವ ಸುವರ್ಣ ಕಲ್ಲಕುಂಟ್ಲಾ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿಯ ಹೊರವಲಯದಲ್ಲಿ ಪೊಲೀಸರು ವಶಕ್ಕೆ ಪಡೆಯಲು ಮುಂದಾದರು ಈ ವೇಳೆ ಕಾಂಗ್ರೆಸ್ ಸದಸ್ಯ ಸುವರ್ಣ ಕುಸಿದು ಬಿದ್ದಿದ್ದಾರೆ. ಪೊಲೀಸರು ವಶಕ್ಕೆ ಪಡೆಯುವ ವೇಳೆ ಸುವರ್ಣ ಕುಸಿದು ಬಿದ್ದಿದ್ದಾರೆ. ಆರೋಗ್ಯದಲ್ಲಿ ಏರುಪೇರು ಹಿನ್ನೆಲೆಯಲ್ಲಿ ತಕ್ಷಣ ಪೊಲೀಸರು ಸುವರ್ಣ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆತಂದಿದ್ದಾರೆ. ನಿನ್ನೆ ರಾತ್ರಿ ಸುವರ್ಣ ಕಲ್ಲು ವಿರುದ್ಧ ದೂರು ದಾಖಲಾಗಿತ್ತು. ಹುಬ್ಬಳ್ಳಿಯ ಕೇಶವಪುರ ಪೊಲೀಸ್ ಠಾಣೆಯಲ್ಲಿ ಕೆಸ್ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ಸುವರ್ಣ ನಾಪತ್ತೆಯಾಗಿದ್ದರು.
ಬೆಳಗಾವಿ ::ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು ಬೆಳಗಾವಿಯಲ್ಲಿ ತಂದೆ ಒಬ್ಬ ಹೆತ್ತ ಮಗನ ಕುತ್ತಿಗೆಗೆ ವೈರಿನಿಂದ ಬಿಗಿದು ಕೊಲೆ ಮಾಡಿದ್ದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಇಂದ್ರ ನಗರದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಕೊಲೆಯ ಬಳಿಕ ಬೆಂಕಿಯಲ್ಲಿ ಮಗನನ್ನು ಸುಟ್ಟು ಹಾಕಿ ಸಾಕ್ಷಿ ನಾಶಪಡಿಸಲು ಯತ್ನಿಸಿರುವ ಘಟನೆ ನಡೆದಿದೆ. ಕೊಲೆಯಾದ ಕಿರಣ್ ಆಲೂರು (31) ಸ್ನೇಹಿತರಿಂದ ಕೊಲೆ ರಹಸ್ಯ ಬೆಳಕಿಗೆ ಬಂದಿದೆ. ಪುತ್ರ ಕಿರಣ್ ನನ್ನ ತಂದೆ ನಿಜಗುಣಿ ಆಲೋರೆ ಕೊಲೆ ಮಾಡಿದ್ದಾನೆ. ಹೋಟೆಲ್ ಮಾಲೀಕ ಉಸ್ಮನ್ ಮುಲ್ಲಾ ಜೊತೆ ಸೇರಿಕೊಂಡು ಮಗನನ್ನು ನಿಜಗುಣಿ ಕೊಲೆ ಮಾಡಿದ್ದಾನೆ. ಉಸ್ಮಾನ್ ಹೋಟೆಲ್ ನಲ್ಲಿ ನಿಜಗುನಿ ಕೆಲಸ ಮಾಡುತ್ತಿದ್ದ ಇಬ್ಬರು ಸೇರಿಕೊಂಡು ಕಾರಿನಲ್ಲಿ ಶವ ತೆಗೆದುಕೊಂಡು ತಿರುಗಾಡಿದ್ದಾರೆ. ಬಳಿಕ ಹೃದಯಾಘಾತದಿಂದ ಮಗನ ಸಾವಾಗಿದೆ ಎಂದು ತಂದೆ ನಿಜಗುಣಿ ನಾಟಕ ಮಾಡಿದ್ದಾನೆ. ಪುತ್ರ ಕಿರಣ್ ಗೆಳೆಯರಿಗೆ ಕರೆ ಮಾಡಿ ನಿಜಗುಣಿ ವಿಷಯ ತಿಳಿಸಿದ್ದಾನೆ. ತರಾತುರಿಯಲ್ಲಿಯೇ ಕಿರಣ್ ಶವವನ್ನು ಸುಟ್ಟುಹಾಕಲು ತಂದೆ ಮುಂದಾಗಿದ್ದಾನೆ.…
ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಅದೆಷ್ಟೋ ಹೆಣ್ಣುಮಕ್ಕಳು ಬಲಿಯಾಗಿದ್ದಾರೆ ಬಲಿಯಾಗುತ್ತಿದ್ದಾರೆ. ಇದೀಗ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಕರ್ನಾಟಕ ಹೈಕೋರ್ಟ್ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿದೆ. ಐಪಿಸಿ ಸೆಕ್ಷನ್ 498ಎ ಅಡಿಯಲ್ಲಿ ನೆರೆಹೊರೆಯವರ ಮೇಲೆ ದೂರು ದಾಖಲಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಕುಟುಂಬ ಸದಸ್ಯರಲ್ಲದವರನ್ನು ಈ ಕಾಯ್ದೆಯಡಿ ಸೇರಿಸಲು ಸಾಧ್ಯವಿಲ್ಲ ಎಂದಿದೆ. ಪಕ್ಕದ ಮನೆಯವರ ಮೇಲೆ 498ಎ ಅಡಿ ಕೇಸ್ ದಾಖಲಿಸುವಂತಿಲ್ಲ ಎಂದಿರುವ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ, ತಮ್ಮ ಮೇಲೆ ದಾಖಲಾಗಿರುವ ಕೇಸ್ ರದ್ದುಪಡಿಸುವಂತೆ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯಮಾಡಿ ದೂರು ರದ್ದುಗೊಳಿಸಿದೆ. ಮುನಿರತ್ನಮ್ಮ ಎಂಬಾಕೆ ಪತಿ, ಅತ್ತೆ, ಮಾವ, ನಾದಿನಿ ಹಾಗೂ ಪಕ್ಕದ ಮನೆ ಮಹಿಳೆ ಮೇಲೆಯೂ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆಂದು ದೂರು ದಾಖಲಿಸಿದ್ದರು. ವೈವಾಹಿಕ ವಿವಾದದಲ್ಲಿ ಪತಿ, ಪತ್ನಿ ಅಥವಾ ಇತರ ಕುಟುಂಬ ಸದಸ್ಯರ ನಡುವಿನ ವಿಷಯದಲ್ಲಿ ಪರಿಚಿತವಲ್ಲದ ವ್ಯಕ್ತಿ ಅಥವಾ ನೆರೆಹೊರೆಯವರನ್ನು IPC ಸೆಕ್ಷನ್ 498A ಅಡಿಯಲ್ಲಿ ಪ್ರಕರಣಕ್ಕೆ…
ಬೆಳಗಾವಿಯಲ್ಲಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ ಪ್ರಕರಣ : ಮತ್ತೆ ನಾಲ್ವರು ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ
ಬೆಳಗಾವಿ : ನಿನ್ನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇನಾಮದಾರ ಸಕ್ಕರೆ ಕಾರ್ಖಾನೆ ದುರಂತದಲ್ಲಿ ನಿನ್ನೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು. ಇದೀಗ ಗಾಯಗೊಂಡ ಕಾರ್ಮಿಕರಲ್ಲಿ ಮತ್ತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 7ಕ್ಕೇರಿದೆ. ನಿನ್ನೆ ಮೂವರು ಸಾವನ್ನಪ್ಪಿದ್ದರು. ಕಾರ್ಖಾನೆಯ ನಂಬರ್ 1ರ ಕಂಪಾರ್ಟ್ಮೆಂಟ್ನಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ವಾಲ್ ರಿಪೇರಿ ಮಾಡುವಾಗ ಸ್ಫೋಟವಾಗಿತ್ತು. ಬಾಯ್ಲರ್ನಲ್ಲಿದ್ದ ಬಿಸಿ ಮಳ್ಳಿ (ಪದಾರ್ಥ) ಕಾರ್ಮಿಕರ ಮೈಮೇಲೆ ಬಿದ್ದು 8 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಗಾಯಾಳುಗಳನ್ನು ಕೆಎಲ್ಇ ಆಸ್ಪತ್ರೆ ಮತ್ತು ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆಯೇ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದ ದೀಪಕ್ ಮುನವಳ್ಳಿ (31), ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಸುದರ್ಶನ ಬನೋಶಿ (25), ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯ ಅಕ್ಷಯ್ ಸುಭಾಷ ಚೋಪಡೆ (48) ಮೃತಪಟ್ಟವರು. ಇಂದು ನಾಲ್ವರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ಭರತ್ ಬಸಪ್ಪ ಸಾರವಾಡಿ (27), ಬೈಲಹೊಂಗಲ…
ಬೆಂಗಳೂರು : ಬೆಂಗಳೂರಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತು, ಮರಕ್ಕೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ. ಕೆಂಗೇರಿಯಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಶಿವಕುಮಾರ್ (36) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಶಿವಕುಮಾರ್ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದ. ಇನ್ನು ಹೌಸ್ ಕೀಪಿಂಗ್ ಮಾಡಿಕೊಂಡಿದ್ದ ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ. ಇದೆ ವಿಚಾರವಾಗಿ ಆಗಾಗ ಇಬ್ಬರ ಮಧ್ಯ ಗಲಾಟೆ ನಡೆಯುತ್ತಿತ್ತು. ಪತ್ನಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯ ಬಳಿ ಇರುವ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಶಿವಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 8 ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗೆ ಇಬ್ಬರು ಪುತ್ರಿಯರಿದ್ದಾರೆ. ಕೆಂಗೇರಿ ಠಾಣೆಯಲ್ಲಿ ಅಸಹಜ ಸಾವು ಎಂದು ಕೇಸ್ ದಾಖಲಾಗಿದೆ.
ಬೆಂಗಳೂರು : ಹೈಕೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಐವರಿಂದ 54 ಲಕ್ಷ ಪಡೆದು ವಂಚಿಸಿರುವ ಘಟನೆ ಇದು ಈಗ ಬೆಳಕಿಗೆ ಬಂದಿದೆ 2013 ರಲ್ಲಿ ಹೈಕೋರ್ಟ್ ಅಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ವೇಳೆ ಕಾಯಂ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ ಎಸಗಲಾಗಿದೆ. ಸುಮಿತ್, ಶಿವಕುಮಾರ್, ಮಹಿಮಾ, ಹರ್ಷ ಮತ್ತು ಹರ್ಷಿತಾಗೆ ಮೋಸ ಎಸಗಲಾಗಿದೆ. ಸುದರ್ಶನ್, ಲವೀನಾ ಜೆನೆಟ್, ಮಹೇಂದ್ರ, ಜೈಸನ್ ಡಿಸೋಜಾ ಸೇರಿದಂತೆ ಏಳು ಜನರ ವಿರುದ್ಧ ಇದೀಗ ದೂರು ದಾಖಲಾಗಿದೆ. ಹೈಕೋರ್ಟ್ ರಿಜಿಸ್ಟರ್ ಜನರಲ್ ದಾಖಲೆ ನಕಲು ಮಾಡಿ ಮೋಸ ಮಾಡಿದ್ದಾರೆ. ಎಫ್ ಡಿ ಎ ಎಸ್ ಡಿ ಎ ಹಾಗೂ ಜಾರಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದರು. ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆ ಹೈಕೋರ್ಟಿನ ಕೆಲವು ದಾಖಲೆಗಳನ್ನೇ ಆರೋಪಿಗಳು ತಿರುಚಿದ್ದಾರೆ. ಕೊಟ್ಟ ಹಣಕ್ಕೆ ಕೆಲಸವು ಸಿಗದೆ ಹಣವು ವಾಪಸ್ ಆಗದೆ ಹಣ ಕೊಟ್ಟವರು ಪರದಾಡಿದ್ದಾರೆ. ವಂಚನೆ ಸಂಬಂಧ ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಕೇಸ್…
ಬೆಂಗಳೂರು : ರೈಲು ಹರಿದು ಕೈ ಕಟ್ ಆಗಿದ್ದರೂ ಗಾಂಜಾ ಮತ್ತಿನಲ್ಲಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಬೇಡ ಅಂತ ಅಂಬುಲೆನ್ಸ್ನಿಂದ ಜಿಗಿದು ರಸ್ತೆಯಲ್ಲಿ ಓಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಕುಂಬಾರ ಬೀದಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ ದಿಲೀಪ್ ರಾತ್ರಿ ರೈಲ್ವೆ ಹಳಿ ಮೇಲೆ ಮತ್ತಿನಲ್ಲಿ ಬಿದ್ದಿದ್ದಾಗ ರೈಲು ಹರಿದು ಕೈ ಕಟ್ ಆಗಿತ್ತು. ಇದನ್ನ ಕಂಡ ಸ್ಥಳೀಯರು ತುಂಡಾಗಿದ್ದ ಕೈಯನ್ನ ಕವರ್ಗೆ ಹಾಕಿಕೊಂಡು ಕೂಡಲೇ 108 ಅಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳೀಯರು ಕಷ್ಟಪಟ್ಟು ಆಂಬುಲೆನ್ಸ್ ಹತ್ತಿಸಿ ಆಸ್ಪತ್ರೆಗೆ ಕಳಿಸಿದರೆ ಗಾಂಜಾ ನಶೆಯಲ್ಲಿದ್ದ ಯುವಕ ಆಸ್ಪತ್ರೆಯ ಬಳಿ ಬರುತ್ತಿದ್ದಂತೆ ಅಂಬುಲೆನ್ಸ್ನಿಂದ ಇಳಿದು ಎಸ್ಕೇಪ್ ಆಗಿದ್ದಾನೆ. ಕೈ ಕಟ್ ಆದರೂ ಅಡ್ಡಾಡುತ್ತಿದ್ದ ದಿಲೀಪ್ನನ್ನು ನೋಡಿದ ಸ್ಥಳೀಯರು, ಆತನನ್ನು ಆಂಬ್ಯುಲನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆಗ ಆತ ರಸ್ತೆ ಮಧ್ಯೆಯೇ ಆಂಬ್ಯುಲನ್ಸ್ನಿಂದ ಜಿಗಿದು ಓಡಿ ಹೋಗಿದ್ದ. ದೇವನಹಳ್ಳಿಯ ಹಳೆ ಬಸ್ ನಿಲ್ದಾಣದ ಬಳಿ ತಪ್ಪಿಸಿಕೊಂಡು ಬಳಿಕ ಕುಂಬಾರ ಬೀದಿಯ ಮನೆಗಳನ್ನು…
ಬೆಂಗಳೂರು : ಮಾಜಿ ಸಚಿವ ಎಚ್ ಎಮ್ ರೇವಣ್ಣ ಪುತ್ರನ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತನ ಕುಟುಂಬಕ್ಕೆ ಪರಿಹಾರ ನೀಡದೆ ಹೆಚ್ಎಮ್ ರೇವಣ್ಣ ಅವಮಾನಿಸಿದ್ದಾರೆ ಹೆಚ್ ಎಮ್ ರೇವಣ್ಣ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿದ್ದು ಅವರ ಪುತ್ರನ ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿದ್ದ. ಡಿಸೆಂಬರ್ 11ರಂದು ಗುಡೇಮಾರನಹಳ್ಳಿ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿತ್ತು. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿಯಲ್ಲಿ ಅಪಘಾತ ಸಂಭವಿಸಿದ್ದು ಎಚ್ ಎಮ್ ರೇವಣ್ಣ ಪುತ್ರ ಆರ್ ಶಶಾಂಕ್ ಬೈಕಿಗೆ ಡಿಕ್ಕಿ ಹೊಡೆದಿತ್ತು. ಸವಾರ ರಾಜೇಶ್ (23) ಬಲಿಯಾಗಿದ್ದ. ಮೃತ ರಾಜೇಶ್ ಮಾಗಡಿ ತಾಲೂಕಿನ ಬೆಳಗುಂಬಿ ಗ್ರಾಮದ ನಿವಾಸಿಯಾಗಿದ್ದು, ಪರಿಹಾರ ನೀಡುವುದಾಗಿ ಮನೆಗೆ ಕರೆಸಿಕೊಂಡು ಅವಮಾನಿಸಿದ್ದಾರೆ ಎಂದು ಹೆಚ್ಎಂ ರೇವಣ್ಣ ವಿರುದ್ಧ ಮೃತ ರಾಜೇಶ್ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮಗೆ ಸಾಲ ಇದ್ದರೆ ನಾನೇನು ಮಾಡಲಿ ಬೇರೆಯವರು ಅಪಘಾತ ಮಾಡಿದರೆ ಇದೇ ರೀತಿ ಪರಿಹಾರ ಕೇಳುತಿದ್ರ?? 2 ಲಕ್ಷ ಅಷ್ಟೇ…














