Author: kannadanewsnow05

ಇಂದು ಸಂಭವಿಸಲಿರುವ ಈ ವರ್ಷದ ಏಕೈಕ ಚಂದ್ರಗ್ರಹಣದ ಬಗ್ಗೆ ಭಯ ಬೇಡ. ಇದು ಪ್ರಕೃತಿಯ ಸುಂದರ ವಿದ್ಯಮಾನ. ಹೊಸ ಅಲೆಗಳು ಅಥವಾ ಹೊಸ ಕಿರಣಗಳು ಉಂಟಾಗುವುದಿಲ್ಲ ಎಂದು ಖಗೋಳ ವಿಜ್ಞಾನಿ ಡಾ. ಎಪಿ ಭಟ್ ಸ್ಪಷ್ಟಪಡಿಸಿದ್ದಾರೆ. ಭಾರತದವರಿಗೆ ಸುಮಾರು ಶೇ. 8 ರಿಂದ 15 ರವರೆಗೆ ಮಾತ್ರ ಗ್ರಹಣ ಗೋಚರಿಸಲಿದೆ. ವಿಶೇಷವಾಗಿ ಭಾರತದ ಪೂರ್ವ ತೀರ ಭಾಗದವರಿಗೆ ಸುಮಾರು ಶೇ.15 ಗೋಚರವಾಗಬಹುದು. ಆದರೆ, ಆಸ್ಟ್ರೇಲಿಯಾದ ಕೆಲವು ಭಾಗಗಳಲ್ಲಿ ಸಂಪೂರ್ಣ ಖಗ್ರಾಸ ಗ್ರಹಣ ಸ್ಪಷ್ಟವಾಗಿ ಕಾಣಿಸಿಕೊಳ್ಳಲಿದೆ. ಉತ್ತರ ಅಮೆರಿಕ ಮತ್ತು ಕೆನಡಾ ಪ್ರದೇಶಗಳಲ್ಲಿ ಸಹ ಗ್ರಹಣ ಸ್ಪಷ್ಟವಾಗಿ ಗೋಚರಿಸಲಿದೆ. ಗ್ರಹಣವು ಮಧ್ಯಾಹ್ನ 3.20ಕ್ಕೆ ಆರಂಭವಾಗಿ, 4.34ಕ್ಕೆ ಖಗ್ರಾಸ ಹಂತ ಪ್ರವೇಶಿಸಲಿದೆ. ಸಂಜೆ 5.32ಕ್ಕೆ ಖಗ್ರಾಸ ಹಂತ ಮುಗಿದು, 6.47ಕ್ಕೆ ಗ್ರಹಣ ಸಂಪೂರ್ಣ ಅಂತ್ಯಗೊಳ್ಳಲಿದೆ. ಉಡುಪಿಯಂತಹ ಭಾಗಗಳಲ್ಲಿ ಚಂದ್ರೋದಯವು ಸಂಜೆ 6.38ಕ್ಕೆ ನಡೆಯುವುದರಿಂದ, 6.38ರಿಂದ 6.47ರವರೆಗೆ ಕೇವಲ 9 ನಿಮಿಷಗಳ ಕಾಲ ಮಾತ್ರ ಗ್ರಹಣದ ಚಂದ್ರನನ್ನು ಕಾಣಲು ಸಾಧ್ಯವಾಗುತ್ತದೆ. ಗ್ರಹಣವನ್ನು ಬರಿ ಕಣ್ಣಿನಿಂದಲೇ ನೋಡಬಹುದು.…

Read More

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ. ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಈ ನಿರುದ್ಯೋಗಿ ವಿರೋಧ ಪಕ್ಷದ ನಾಯಕರು ನನ್ನ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಪ್ರಯತ್ನಿಸುತ್ತಲೇ ಇದ್ದಾರೆ, ಇದರಿಂದ ಅವರೊಳಗೆ ತುಂಬಿಕೊಂಡಿರುವ ಹುಳಿ ಖಾಲಿಯಾಗಬಹುದೇ ಹೊರತು ನಮ್ಮ ಹಾಲು-ಜೇನಿನಂತಹ ಸಂಬಂಧದ ಮೇಲೆ ಯಾವ ಪರಿಣಾಮವೂ ಆಗುವುದಿಲ್ಲ ಎನ್ನುವುದು ಇಬ್ಬರಿಗೂ ತಿಳಿದಿರಲಿ.‌ ಆರೋಪ ಮಾಡಿರುವ ಒಬ್ಬರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು, ಇನ್ನೊಬ್ಬರು ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರಾಗಿದ್ದವರು. ಅವರ ಕಾಲದಲ್ಲಿ ಕೂಡಾ ಗುಪ್ತಚರ ವಿಭಾಗ ಮುಖ್ಯಮಂತ್ರಿಯವರ ಬಳಿಯೇ ಇತ್ತು. ಅವರ ಹೇಳಿಕೆಗಳನ್ನು ಗಮನಿಸಿದರೆ ಇವರಿಬ್ಬರೂ ತಮ್ಮ ಅನುಭವದ ಬಲದಿಂದಲೇ ಈ ಆರೋಪ ಮಾಡುತ್ತಿರುವಂತೆ ಕಾಣಿಸುತ್ತಿದೆ. ನಮ್ಮದು ಆಂತರಿಕ…

Read More

ಬೆಂಗಳೂರು : ಬೆಂಗಳೂರಲ್ಲಿ ಇವಿ ಬೈಕ್ ಮಾಲೀಕನಿಂದ ಇದೀಗ 35 ಕೋಟಿಗೂ ಹೆಚ್ಚು ವಂಚನೆ ಆರೋಪ ಕೇಳಿ ಬರುತ್ತಿದೆ. ಸುಮಾರು 3,750 ಜನರಿಗೆ 35 ಕೋಟಿಗೂ ಅಧಿಕ ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ. ಸ್ಕೀಮ್ ಗಳ ಕಥೆ ಹೇಳಿ ಈಗ 35 ಕೋಟಿಗೂ ಹೆಚ್ಚು ವಂಚನೆ ಎಸಗಿದ್ದಾನೆ. ಈ ಒಂದು ಸ್ಕೀಂ ನಂಬಿ ಜನರು ದುಡ್ಡು ಕಟ್ಟಿ ಕೋಟ್ಯಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಆಪ್ ಕಿ ಇವಿ ಶೋರೂಮ್ ಮಾಲೀಕ ರವಿ ಮತ್ತು ಹನುಮಂತರಾಜು ಮತ್ತೋರ್ವ ರಾಜು ವಿರುದ್ಧ ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ದಾಖಲೆ ಪಡೆದು ಕೋಟಾಕ್ ಮಹಿಂದ್ರ ಬ್ಯಾಂಕ್ ನಲ್ಲಿ ಲೋನ್ 1,50,000 ಲೋನ್ ಮಾಡಿಸುತ್ತಿದ್ದ. ಶೋರೂಮ್ ಮಾಲೀಕ ರವಿ 20,000 ಕಟ್ಟಿ ಉಳಿದ ಮೊತ್ತ ಸಬ್ಬಸಿಡಿಯಲ್ಲಿ ಬಿಡಲಾಗುತ್ತದೆ. ಒಂದು ವೇಳೆ ಹಣ ಕಟ್ಟುವುದಾದರೆ ನಾವೇ ಕಟ್ಟುತ್ತೇವೆ ಎಂದು ಜನರನ್ನು ನಂಬಿಸಿದ್ದಾನೆ. ಇವಿ ಬೈಕ್ ಶೋರೂಮ್ ಮಾಲೀಕನ ವಿರುದ್ಧ ಇದೀಗ ಗ್ರಾಹಕರು ಪ್ರತಿಭಟನೆ ಮಾಡುತ್ತಿದ್ದಾರೆ.ಜಾಲಹಳ್ಳಿಯಿಂದ ಎಂಜಿ ರಸ್ತೆವರಿಗೂ…

Read More

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾರ್ಚ್ 10 ರಂದು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಪಕ್ಷದ ಎಲ್ಲಾ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ. ಹೌದು ಕೆಪಿಸಿಸಿ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಕ್ಷದ ಶಾಸಕರಿಗೆ ಡಿಕೆ ಶಿವಕುಮಾರ್ ಪಾರ್ಟಿ ಆಯೋಜನೆ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಡಿಕೆ ಶಿವಕುಮಾರ್ ಈ ಒಂದು ಔತಣಕೂಟ ಏರ್ಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಸಚಿವರು ಹಾಗೂ ಪಕ್ಷದ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅಹ್ವಾನ ನೀಡಿದ್ದಾರೆ. ಈ ಒಂದು ಡಿನ್ನರ್ ಪಾರ್ಟಿ ಆಯೋಜನೆ ಮೂಲಕ ವಿಶ್ವಾಸಕ್ಕೆ ಸಳೆಯಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಬಜೆಟ್ ನಂತರ ರಾಜ್ಯದಲ್ಲಿ ಹಲವು ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಸಹ ಹೇಳಲಾಗುತ್ತಿದೆ.

Read More

ಮಂಗಳೂರು : ಪ್ರೇಯಸಿಯಿಂದ ಯಾವುದೇ ಕರೆಗಳು ಹಾಗೂ ಮೆಸೇಜ್ ಬರದ ಹಿನ್ನೆಲೆಯಲ್ಲಿ ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಯುವಕನೊಬ್ಬ ವಿದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇದೀಗ ವರದಿಯಾಗಿದೆ. ಮೃತ ಯುವಕನನ್ನು ಪುನೀತ್ ಪೂಜಾರಿ (32) ಎಂದು ತಿಳಿದುಬಂದಿದೆ. ಮಂಗಳೂರಿನ ಸೋಮೇಶ್ವರದ ಪುನೀತ್ ಕೆಲಸದ ನಿಮಿತ್ ಒಮನ್ ದೇಶದಲ್ಲಿದ್ದನು. ಕಳೆದ ಒಂದೂವರೆ ವರ್ಷಗಳಿಂದ ಪುನೀತ್ ಪೂಜಾರಿ ಒಮನ್ ದೇಶದಲ್ಲಿ ಲಿಫ್ಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಪುನೀತ್ ಪೂಜಾರಿ ಒಂದೂವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದು ಹಿಂದಿರುಗಿದ್ದನು. ಇದೀಗ ಪ್ರೇಮ ವೈಫಲ್ಯದಿಂದ ಆತ್ಮ-ಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ಉರ್ವಾ ನಿವಾಸಿ ಯುವತಿಯನ್ನು ಪ್ರೀತಿಸುತ್ತಿದ್ದನು. ಸೋಶಿಯಲ್ ಮೀಡಿಯಾ ಖಾತೆಗಳಲ್ಲಿಯೂ ಯುವತಿ ಜೊತೆಗಿನ ಫೋಟೋಗಳನ್ನು ಸಹ ಶೇರ್ ಮಾಡಿಕೊಂಡಿದ್ದನು. ಕಳೆದ ಕೆಲವು ದಿನಗಳಿಂದ ಯುವತಿ ಫೋನ್ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಮನನೊಂದು ಪುನೀತ್ ಪ್ರಾಣ ಕಳೆದುಕೊಂಡಿದ್ದಾನೆ.

Read More

ಉಡುಪಿ : ನಗರದಲ್ಲಿ ಆಯೋಜನೆಗೊಂಡಿದ್ದ ಪೊಲೀಸ್ ಮ್ಯಾರಥಾನ್ ವೇಳೆ PSI ಒಬ್ಬರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ (58) ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ – ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಎಲ್ಲರಿಗೂ ಫಿಟ್ನೆಸ್, ಡ್ರಗ್ಸ್ ಫ್ರೀ ಕರ್ನಾಟಕ ಎಂಬ ಧ್ಯೇಯದೊಂದಿಗೆ ಜಿಲ್ಲಾ ಪೊಲೀಸ್ ಇಲಾಖೆ ಭಾನುವಾರ 5 ಕಿ.ಮೀ ಮ್ಯಾರಥಾನ್ ಓಟ ಆಯೋಜಿಸಿತ್ತು. ಮ್ಯಾರಥಾನ್​ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಮ್ಯಾರಥಾನ್‌ ವೇಳೆ ನಾಸೀರ್ ಹುಸೇನ್ ಅವರು, ಜೋಡುಕಟ್ಟೆಯ ಟಿ.ಎಂ.ಎ. ಪೈ ಆಸ್ಪತ್ರೆ ಎದುರು ಏಕಾಏಕಿ ಕುಸಿದು ಬಿದ್ದರು. ತಕ್ಷಣವೇ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ನಾಸಿರ್ ಅವರ ಹಠಾತ್ ನಿಧನದಿಂದ ಕುಟುಂಬಸ್ಥರ ಆಕ್ರಂದನ ಇದೀಗ ಮುಗಿಲುಮುಟ್ಟಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಪೊಲೀಸರು ಸೀಜ್ ಮಾಡಿದ್ದಾರೆ. ಪ್ರತಿಷ್ಠಿತ ಅಪಾರ್ಟ್ಮೆಂಟ್ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿತ್ತು. ಬಾಗಲೂರಿನ ಪ್ರೆಸ್ಟೀಜ್ ಫೈಂಡ್ ವೆರಿ ಪಾರ್ಕ್ ನ ಪ್ಲಾಟ್ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ. 10 ಕೋಟಿ ರೂಪಾಯಿ ಮೌಲ್ಯದ LSD ಹೈಡ್ರೋಗಂಜ, ಚರಸ್ ಅನ್ನು ಜಪ್ತಿ ಮಾಡಿಕೊಂಡಿದ್ದು. ಕೇರಳ ಮೋಡದ ಅಶ್ವಿನ್ (27) ಹಾಗೂ ಮೊಬಿನ (25) ಎನ್ನುವ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಸಿಸಿಬಿ ನಾರ್ಕ್ಕೋಟಿಕ್ ವಿಭಾಗದಿಂದ ಈ ಒಂದು ಕಾರ್ಯಾಚರಣೆ ನಡೆದಿದೆ. ಪೆಡ್ಲಿಂಗ್ ಅನ್ನೆ ಇಬ್ಬರು ಆರೋಪಿಗಳು ವೃತ್ತಿಯನ್ನಾಗಿ ಮಾಡಿಕೊಂಡಿದ್ದರು. ಮೊದಲ ಬಾರಿಗೆ ಕರ್ನಾಟಕದಲ್ಲಿ 8335 LSD ಸೀಜ್ ಮಾಡಲಾಗಿದೆ. ಒಂದು ಎಲ್ ಎಸ್ ಡಿ ಸ್ಕ್ರಿಪ್ಸ್ ಬೆಲೆ ರೂ.6,000 ಬೆಲೆ ಬಾಳುತ್ತದೆ. ದೇವರ ಚಿತ್ರ ಸೇರಿದಂತೆ ವಿವಿಧ ಚಿತ್ರಕಲಾ ರೂಪದಲ್ಲಿ LSD ಸ್ಕ್ರಿಪ್ಟ್ ಮಾರಾಟ ಮಾಡಲಾಗುತ್ತಿತ್ತು. ಜೊತೆಗೆ ಚಿರಸ್ 534 ಗ್ರಾಂ ಹೈಡ್ರೋ ಗಾಂಜಾ 5 ಕೆಜಿ ವಶಕ್ಕೆ…

Read More

ಕಲಬುರ್ಗಿ : ಕಲ್ಬುರ್ಗಿ ಡಿಸಿ ಇಮೇಲ್ ಐಡಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿದ್ದಾರೆ.ಕೋರ್ಟ್ ನಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಸಂದೇಶ ಕಳಿಸಿದ್ದಾರೆ. ತಕ್ಷಣ ಬೆದರಿಕೆ ಸಂದೇಶ ಬಂದಿದ್ದನ್ನು ಜಿಲ್ಲಾಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ವೇಳೆ ತಕ್ಷಣ ಕೋರ್ಟ್ ಹಾಲ್ನಲ್ಲಿದ್ದ ಎಲ್ಲಾ ಸಿಬ್ಬಂದಿಗಳನ್ನು ಹೊರಗಡೆ ಕಳುಹಿಸಲಾಗಿದೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಚಂದ್ರಗ್ರಹಣ ಮತ್ತು ದೇವಸ್ಥಾನಗಳ ಮುಚ್ಚುವಿಕೆಯ ನಡುವೆ ಧಾರ್ಮಿಕ, ವೈಜ್ಞಾನಿಕ ಹಾಗೂ ಆಧ್ಯಾತ್ಮಿಕ ಕಾರಣಗಳ ದೊಡ್ಡ ಪಟ್ಟಿಯೇ ಇದೆ. ಅದರಲ್ಲೂ ಕೇತುಗ್ರಸ್ತ ಚಂದ್ರಗ್ರಹಣ ಎಂದರೆ ರಾಹು ಅಥವಾ ಕೇತು ಎಂಬ ಛಾಯಾ ಗ್ರಹಗಳು ಚಂದ್ರನನ್ನು ಆವರಿಸುವ ಸಮಯ ಎಂದು ನಂಬಲಾಗುತ್ತದೆ. ಇದರ ಕುರಿತಾದ ಸಮಗ್ರ ಮಾಹಿತಿ ಇಲ್ಲಿದೆ: ೧. ಶಾಸ್ತ್ರೀಯ ಮತ್ತು ಧಾರ್ಮಿಕ ಹಿನ್ನೆಲೆ ಹಿಂದೂ ಧರ್ಮದ ಪ್ರಕಾರ, ಗ್ರಹಣದ ಸಮಯವನ್ನು ‘ಸೂತಕ’ ಅಥವಾ ಅಶುಚಿಯ ಕಾಲ ಎಂದು ಪರಿಗಣಿಸಲಾಗುತ್ತದೆ. ಋಣಾತ್ಮಕ ಶಕ್ತಿ: ಗ್ರಹಣದ ಅವಧಿಯಲ್ಲಿ ವಿಶ್ವದಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಿರುತ್ತದೆ ಎಂಬ ನಂಬಿಕೆಯಿದೆ. ದೇವಸ್ಥಾನವು ಸಕಾರಾತ್ಮಕ ಶಕ್ತಿಯ ಕೇಂದ್ರವಾಗಿರುವುದರಿಂದ, ಈ ಋಣಾತ್ಮಕ ಕಿರಣಗಳು ವಿಗ್ರಹದ ಪ್ರಭಾವವನ್ನು ಕಡಿಮೆ ಮಾಡಬಾರದು ಎಂಬ ಉದ್ದೇಶದಿಂದ ಬಾಗಿಲು ಹಾಕಲಾಗುತ್ತದೆ. ದೇವರಿಗೂ ವಿಶ್ರಾಂತಿ: ಗ್ರಹಣ ಕಾಲದಲ್ಲಿ ದೇವರಿಗೆ ‘ಗ್ರಹಣ ಪೀಡೆ’ ಇರುತ್ತದೆ ಎಂದು ಭಾವಿಸಲಾಗುತ್ತದೆ. ಆ ಸಮಯದಲ್ಲಿ ಪೂಜೆ, ಪುನಸ್ಕಾರಗಳನ್ನು ಮಾಡದೆ ದೇವರಿಗೆ ವಿಶ್ರಾಂತಿ ನೀಡುವ ಸಂಪ್ರದಾಯವಿದೆ. ೨. ವೈಜ್ಞಾನಿಕ ಮತ್ತು ಕಾಸ್ಮಿಕ್ ಕಿರಣಗಳ ಪ್ರಭಾವ…

Read More

ಬೆಂಗಳೂರು : ನಟ ರಿಷಬ್ ಶೆಟ್ಟಿ ನಟನೆಯ ಕಾಂತರಾ ಚಾಪ್ಟರ್ 1 ಚಿತ್ರದ ದೈವ ಪಾತ್ರದ ಬಗ್ಗೆ ಅವಮಾನಕಾರಿ ಸನ್ನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಹೈಕೋರ್ಟ್ ಮತ್ತೆ ರಿಲೀಫ್ ನೀಡಿದೆ. ಈ ಒಂದು ಪ್ರಕರಣವನ್ನು ರದ್ದುಗೊಳಿಸುವಂತೆ ರಣವೀರ್ ಸಿಂಗ್ ಕಳೆದ ವಾರ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಮುಂದಿನ ವಿಚಾರಣೆಯವರೆಗೂ ರಣವೀರ್ ಸಿಂಗ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನೀಡಿದ್ದ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ. ತನ್ನ ವಿರುದ್ಧ ದಾಖಲಾಗಿರುವ ಖಾಸಗಿ ದೂರು ಮತ್ತು ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ರಣವೀರ್‌ ಸಿಂಗ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಈ ಹಿಂದೆ ನೀಡಿದ್ದ ಆದೇಶ ವಿಸ್ತರಿಸಿ ಆದೇಶಿಸಿತು. ಪ್ರಕರಣದ ಹಿನ್ನೆಲೆ ಗೋವಾದಲ್ಲಿ ಕಳೆದ 2025ರ ನ.28ರಂದು ನಡೆದಿದ್ದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ ಸಮಾರಂಭದಲ್ಲಿ ರಣವೀರ್‌ ಸಿಂಗ್‌, ಕಾಂತಾರ…

Read More