Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಮಂಡ್ಯ: ರಾಜ್ಯಾದ್ಯಂತ ಸೂರ್ಯನ ಪ್ರಖರತೆ ಹೆಚ್ಚಾಗಿದ್ದು, ಭೀಕರ ಬೇಸಿಗೆಗೆ ಜನತೆ ಈಗಾಗಲೇ ತತ್ತರಿಸಿ ಹೋಗಿದ್ದಾರೆ. ಬಿಸಿಲಿನ ಬೇಗೆಯಿಂದ ಹೈರಾಣಾಗಿರುವ ಮಂಡ್ಯ ಮತ್ತು ಮೈಸೂರು ಭಾಗದ ಜನತೆಗೆ ಇದೀಗ ಮತ್ತೊಂದು ಆತಂಕ ಎದುರಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದ್ದು, ಜನರಲ್ಲಿ ಭೀತಿ ಮೂಡಿಸಿದೆ. ಒಟ್ಟು 124.80 ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಈ ಜಲಾಶಯದಲ್ಲಿ ಸದ್ಯದ ನೀರಿನ ಮಟ್ಟ ಕೇವಲ 90 ಅಡಿಗಳಿಗೆ ಬಂದು ತಲುಪಿದೆ. ಬೇಸಿಗೆಯ ಆರಂಭದಲ್ಲೇ ನೀರಿನ ಮಟ್ಟ ಇಷ್ಟು ವೇಗವಾಗಿ ಕುಸಿಯುತ್ತಿರುವುದು ಕೃಷಿ ಚಟುವಟಿಕೆಗಳ ಮೇಲೆ ಮಾತ್ರವಲ್ಲದೆ, ದೈನಂದಿನ ಜೀವನದ ಮೇಲೂ ಗಂಭೀರ ಪರಿಣಾಮ ಬೀರುವ ಮುನ್ಸೂಚನೆ ನೀಡುತ್ತಿದೆ. ಜಲಾಶಯದ ಒಟ್ಟು ನೀರಿನ ಸಂಗ್ರಹದ ಅಂಕಿ-ಅಂಶಗಳನ್ನು ಗಮನಿಸಿದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿರುವುದು ಕಂಡುಬರುತ್ತದೆ. ಸದ್ಯ ಡ್ಯಾಮ್‌ನಲ್ಲಿ ಇರುವುದು ಕೇವಲ 16 ಟಿಎಂಸಿ ನೀರು ಮಾತ್ರ. ಇದರಲ್ಲಿ ಹೂಳು ಮತ್ತು ತಾಂತ್ರಿಕ ಕಾರಣಗಳನ್ನು ಹೊರತುಪಡಿಸಿ,…

Read More

ವಿಜಯನಗರ : ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಸರಣಿ ಕಳ್ಳತನ ಮಾಡಿ, ಸಾರ್ವಜನಿಕರ ನಿದ್ದೆಗೆಡಿಸಿದ್ದ ಇಬ್ಬರು ಅಂತರ ಜಿಲ್ಲಾ ಮನೆಗಳ್ಳರನ್ನು ಹಗರಿಬೊಮ್ಮನಹಳ್ಳಿ ಪೊಲೀಸರು ಸೋಮವಾರ ಬಂಧಿಸಿದ್ದು, ಬಂಧಿತರಿಂದ 14.06 ಲಕ್ಷ ರೂ. ಬೆಲೆಬಾಳುವ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಹಗರಿಬೊಮ್ಮನಹಳ್ಳಿ ತಾಲೂಕಿನ ಗದ್ದಿಕೇರಿ ಗ್ರಾಮದ ಕುಮಾರನಹಳ್ಳಿ ಆನಂದ (24) ಹಾಗೂ ಅರಳೇಹಳ್ಳಿಯ ಜಹಾಂಗೀರ್ ಭಾಷಾ (36) ಎಂದು ಗುರುತಿಸಲಾಗಿದೆ. ಈ ಪೈಕಿ ಜಹಾಂಗೀರ್ ಭಾಷಾ ಎಂಬಾತ ಹಳೆಯ ಅಪರಾಧಿಯಾಗಿದ್ದು, ಈ ಹಿಂದೆ ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ ಹಾಗೂ ಅರಸೀಕೆರೆ ಪೊಲೀಸ್ ಠಾಣೆಗಳಲ್ಲಿ ಬೈಕ್ ಕಳ್ಳತನ ಮತ್ತು ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಎಸ್. ಮಾಹಿತಿ ನೀಡಿದರು. ಕಳುವಾಗಿದ್ದ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡಿರುವ ಆಭರಣಗಳ ಮೌಲ್ಯ 14.06 ರೂಪಾಯಿ ಎಂದು ಅಂದಾಜಿಸಲಾಗಿದೆ. ಇದರೊಂದಿಗೆ, ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳು, ತಂಬ್ರಹಳ್ಳಿ ಪೊಲೀಸ್…

Read More

ರಾಯಚೂರು : ರಾಯಚೂರಲ್ಲಿ ವೃತ್ತಿಯಲ್ಲಿ ಉಪನ್ಯಾಸಕರೂ ಆಗಿದ್ದ ಉದ್ಯಮಿಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ಸೋಮವಾರ ನಡೆದಿದೆ. ಸಿಂಧನೂರು ನಗರದ ಆದರ್ಶ ಕಾಲೋನಿಯ ಬಾಡಿಗೆ ಮನೆಯಲ್ಲಿದ್ದ ಪ್ರಾಣೇಶ್ ವರ್ಣೆಕರ್(38) ಆತ್ಮಹತ್ಯೆ ಮಾಡಿಕೊಂಡಿರುವ ಉಪನ್ಯಾಸಕ/ಉದ್ಯಮಿ ಎಂದು ಗುರುತಿಸಲಾಗಿದೆ. ಪ್ರಾಣೇಶ್ ವರ್ಣೆಕರ್ ನಗರದ ಸಮರ್ಥ್ ಜ್ಯೂವಲೆರ್ಸ್ ಮಾಲೀಕರಾಗಿದ್ದು, ವಿಜಡಂ ಪಾರ್ಟ್ ಟೈಮ್ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಆರ್ಥಿಕ ಸಂಕಷ್ಟ ಹಾಗೂ ಅಧಿಕ ಸಾಲದ ಒತ್ತಡದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಪೊಲೀಸರು ತಿಳಿಸಿದ್ದಾರೆ.‌ ಸಾಲ ಪಡೆದವರಿಗೆ ಸೋಮವಾರ (ಮೇ 11) ಹಣ ವಾಪಸ್ ನೀಡುವುದಾಗಿ ಭರವಸೆ ನೀಡಿದ್ದರೂ, ಹಣ ಒದಗಿಸಲು ಸಾಧ್ಯವಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆಯ ಮೊದಲು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸಿಂಧನೂರು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯ ವಿವರ: ಪ್ರಾಣೇಶ್ ವರ್ಣೆಕರ್ ಅವರು ಸಿಂಧನೂರು ನಗರದ ಆದರ್ಶ…

Read More

ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪಮಾನಕ್ಕೆ ಇತ್ತೀಚಿಗೆ ಕೆಲವರು ಕುಸಿದು ಬಿದ್ದು ಸಾವನ್ನಪ್ಪಿರುವ ಪ್ರಕರಣಗಳು ನಡೆದಿದ್ದವು . ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬರದಿ ಗ್ರಾಮದ ಬಳಿ ಕುಸಿದು ಬಿದ್ದು 70 ವರ್ಷದ ವೃದ್ಧರೊಬ್ಬರೂ ಸಾವನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬರದಿ ಗ್ರಾಮದ ಬಳಿ ಚಿಕ್ಕಣ್ಣ (70) ಎಂಬುವವರು ಸಾವನ್ನಪ್ಪಿದ್ದಾರೆ. ದಾಸರಹಳ್ಳಿಯ ಶೆಟ್ಟಿಹಳ್ಳಿ ನಿವಾಸಿಯಾಗಿದ್ದ ಚಿಕ್ಕಣ್ಣ ಬರದಿ ಬಳಿ ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದರು. ಬೆಳಿಗ್ಗೆ ಕೆಲಸಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದು ಸಾವನ್ನಪ್ಪಿದ್ದರೆ. ನೆಲಮಂಗಲ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಮೃತ ದೇಹ ರವಾನೆ ಮಾಡಲಾಗಿದೆ. ನೆಲಮಂಗಲ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಧಾರವಾಡ : ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ವೇತಾ ಕೊಟೆನ್ನವರ್ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೃತ ಶ್ವೇತ ಹಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್ ಎನ್ನುವ ಯುವಕನನ್ನ ಪ್ರೀತಿಸುತ್ತಿದ್ದಳು. ಈ ವಿಷಯವನ್ನು ತನ್ನ ಕುಟುಂಬಸ್ಥರಿಗೆ ತಿಳಿಸಿ, ನಾಗರಾಜ್‌ನನ್ನು ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಳು. ಆದರೆ ಇದಕ್ಕೆ ಕುಟುಂಬಸ್ಥರು ಒಪ್ಪಿರಲಿಲ್ಲ. ಇದರಿಂದ ಮನನೊಂದು ವಿಷ ಸೇವಿಸಿ ಶ್ವೇತ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನೆಲೆ: ಮೃತ ಶ್ವೇತಾ ಕಳೆದ ಕೆಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್ ಎಂಬ ಯುವಕನನ್ನು ಗಾಢವಾಗಿ ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ತನ್ನ ಪ್ರೇಮ ವಿಷಯವನ್ನು ಪೋಷಕರಿಗೆ ತಿಳಿಸಿದ್ದ ಯುವತಿ, ತಾನು ನಾಗರಾಜ್‌ನನ್ನೇ ಮದುವೆಯಾಗುವುದಾಗಿ ತನ್ನ ಇಚ್ಛೆಯನ್ನು…

Read More

ಬೆಂಗಳೂರು : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಅಡ್ಡ ಬಂದ ಬೀದಿ ನಾಯಿಯನ್ನ ಪಾರು ಮಾಡಲು ಹೋದ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಥಾರ್ ಕಾರನ್ನು ಡಿಕ್ಕಿ ಹೊಡೆಸಿದ್ದಾನೆ. ಅಪಘಾತದಲ್ಲಿ ಮೂವರು ಯುವತಿಯರು ಸೇರಿದಂತೆ 5 ಮಂದಿಗೆ ಗಾಯವಾಗಿದೆ. ದೊಡ್ಡಬಳ್ಳಾಪುರ ನಗರ ಹೊರವಲಯದ ಸ್ಕೌಟ್ಸ್ ಕ್ಯಾಂಪ್ ರಸ್ತೆಯಲ್ಲಿ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅಪಘಾತದಲ್ಲಿ 5 ಮಂದಿಗೆ ಗಾಯವಾಗಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಓರ್ವ ಯುವತಿ ಮತ್ತು ಚಾಲಕನಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳಿಸಲಾಗಿದೆ. ಗಾಯಾಳುಗಳು ಆಂಧ್ರ ಮೂಲದವರು, ಬಾಶೆಟ್ಟಿಹಳ್ಳಿಯ ಪಿ.ಜಿಯಲ್ಲಿ ವಾಸವಾಗಿದ್ದರು. ರಜೆ ಹಿನ್ನಲೆ ನಿನ್ನೆ ಊರಿಗೆ ತೆರಳಿದ್ದ ಅವರು ಇಂದು ಬೆಳಗ್ಗೆ ಪಿಜಿಗೆ ವಾಪಸ್ ಬರುವ ವೇಳೆ ದುರ್ಘಟನೆ ಸಂಭವಿಸಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆ ನಡೆದಿದ್ದು, ಕೆರೆಯಲ್ಲಿ ಈಜಲು ಹೋಗಿ ಇಬ್ಬರು‌ ಯುವಕರ ಸಾವನ್ನಪ್ಪಿದ್ದರೆ. ಯರಗನಹಳ್ಳಿ ಕೆರೆಯಲ್ಲಿ ಘಟನೆ‌ ನಡೆದಿದ್ದು, ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಯರಗನಹಳ್ಳಿಯಲ್ಲಿ ನಡೆದಿದೆ. ಪ್ರಕಾಶ್ ಗೌಡ (24) ಯಶಸ್(23) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮೃತರಿಬ್ಬರು ನಿನ್ನೆ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿ ದುರ್ಘಟನೆ ಸಂಭವಿಸಿದೆ. ಇಂದು ಮೃತ ಯುವಕರಿಬ್ಬರ ಮೃತದೇಹ ಹೊರ ತೆಗೆದಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಹಸ್ತಾಂತರಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯ ಸ್ವಾಮಿ ಭೇಟಿ ನೀಡಿದ್ದು ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೇಟಿನ್ ಕಡ್ಡಿಗಳು ಪತ್ತೆಯಾಗಿರುವುದು ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಬೆಂಗಳೂರಿನ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಗಂಭೀರ ಘಟನೆಯನ್ನು ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಇದೀಗ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕೃತವಾಗಿ ತನಿಖೆಗೆ ಇಳಿದಿದೆ. ಘಟನೆಗೆ ಸಂಬಂಧಿಸಿದಂತೆ ರಾಮನಗರ ಠಾಣೆಯ ಪೊಲೀಸರು ಇಂದು ಮಹತ್ವದ ತನಿಖಾ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಸ್ಥಳಕ್ಕೆ ಕರೆತಂದು ‘ಸೀನ್ ರಿ-ಕನ್ಸ್ಟ್ರಕ್ಷನ್’ ಅಥವಾ ಘಟನೆ ಮರುಸೃಷ್ಟಿ ಮಾಡಲಾಗುತ್ತಿದೆ. ಆರೋಪಿ ಯಾವ ಮಾರ್ಗದಿಂದ ಬಂದ? ಎಲ್ಲಿಂದ ಸ್ಫೋಟಕಗಳನ್ನು ತಂದ? ಮತ್ತು ಪ್ರಧಾನಿ ಸಂಚರಿಸುವ ಮಾರ್ಗದಲ್ಲೇ ಅವುಗಳನ್ನು ಹೇಗೆ ಇರಿಸಿದ ಎನ್ನುವ ಬಗ್ಗೆ ಪೊಲೀಸರು ಕೂಲಂಕಷವಾಗಿ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಪ್ರಕರಣದ ಸೂಕ್ಷ್ಮತೆಯನ್ನು ಗಮನಿಸಿ ಎನ್‌ಐಎ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಂಗಳೂರು ದಕ್ಷಿಣ ವಿಭಾಗದ ಎಸ್‌ಪಿ ಶ್ರೀನಿವಾಸ ಗೌಡ ಅವರಿಂದ ಅಧಿಕಾರಿಗಳು ಘಟನೆಯ ಸಂಪೂರ್ಣ ವಿವರಗಳನ್ನು ಪಡೆದುಕೊಂಡಿದ್ದಾರೆ. ಸ್ಫೋಟಕಗಳ…

Read More

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಜೈಲಲ್ಲಿ ಜಗಳ ಬಿಡಿಸಲು ಹೋದ ಜೈಲರ್ ಮೇಲೆ ಕೈದಿಗಳು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ. ಜಮಖಂಡಿ ಜೈಲಿನ ಜೈಲರ್ ವಿಡಿ ಕುಂಬಾರ್ ಗೆ ಕೈದಿಗಳಿಂದ ಹಲ್ಲೆ ನಡೆದಿದೆ. ಹೌದು ಜಮಖಂಡಿ ಜೈಲಿನ ಜೈಲರ್ ವಿಡಿ ಕುಂಬಾರ್ ಗೆ ಕೈದಿಗಳಿಂದ ಹಲ್ಲೆ ನಡೆದಿದ್ದು, ಸದ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ವಿಡಿ ಕುಂಬಾರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಪಡಿತರ ಅಕ್ಕಿ ಅಕ್ರಮ ಸಾಗಾಟ ಕೇಸ್ ನಲ್ಲಿ ಗ್ಯಾಂಗ್ ಅರೆಸ್ಟ್ ಆಗಿತ್ತು. ಜಾಕಿರ್ ಹುಸೇನ್ ಹಾಗು ಗ್ಯಾಂಗ್ ಬಂಧಿಸಿ ಜೈಲಿಗೆ ಅಟ್ಟಲಾಗಿತ್ತು. ಇದೀಗ ಅದೇ ಗ್ಯಾಂಗ್ ನಡುವೆ ನಿನ್ನೆ ಸಂಜೆ ಜೈಲಲ್ಲಿ ಜಗಳ ಆಗಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಜೈಲರ್ ಮೇಲೆ ಹಲ್ಲೆ ಮಾಡಿದ್ದಾರೆ. ಜಾಕಿರ್ ಹುಸೇನ್, ಮಕಾಂದರ್ ಫಯಾಜ್, ಅಶೋಕ್, ಅಫ್ರಾತ ತಾಳಿಕೋಟಿಯಿಂದ ಜೈಲರ್ ವಿಡಿ ಕುಂಬಾರ್ ಮೇಲೆ ಹಲ್ಲೆ ನಡೆದಿದೆ.

Read More

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ್ ಅವರ ಭೀಕರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿ ಕರೆತಂದಿದ್ದಾರೆ. ಮೇ 6 ರಂದು ನಡೆದಿದ್ದ ಈ ಹತ್ಯೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ತಾಂತ್ರಿಕ ಸುಳಿವು ನೀಡಿದ ಯುಪಿಐ ಪಾವತಿ: ಈ ಪ್ರಕರಣದ ತನಿಖೆಯಲ್ಲಿ ಪೊಲೀಸರಿಗೆ ಅತ್ಯಂತ ದೊಡ್ಡ ಸುಳಿವು ಸಿಕ್ಕಿದ್ದು ಒಂದು ಡಿಜಿಟಲ್ ಪಾವತಿಯಿಂದ. ಹತ್ಯೆಯ ನಂತರ ಆರೋಪಿಗಳು ವಾಹನದಲ್ಲಿ ಪರಾರಿಯಾಗಿದ್ದರು. ಈ ವೇಳೆ ಮಾರ್ಗಮಧ್ಯದ ಟೋಲ್ ಒಂದರಲ್ಲಿ ಆರೋಪಿಗಳ ಪೈಕಿ ಒಬ್ಬ ತನ್ನ ಮೊಬೈಲ್ ಮೂಲಕ ಯುಪಿಐ (UPI) ಬಳಸಿ ಟೋಲ್ ಶುಲ್ಕ ಪಾವತಿಸಿದ್ದ. ಈ ಡಿಜಿಟಲ್ ವಹಿವಾಟಿನ ಜಾಡನ್ನು ಹಿಡಿದು ತನಿಖೆ ನಡೆಸಿದ ಪೊಲೀಸರಿಗೆ ಆರೋಪಿಗಳ ಚಲನವಲನ ಮತ್ತು ಅವರ ಅಡಗುತಾಣಗಳ…

Read More