Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಹಾವೇರಿ : ಜಾಗತಿಕ ಮಟ್ಟದ ರಾಜಕೀಯ ವಿದ್ಯಮಾನಗಳು ಸ್ಥಳೀಯವಾಗಿ ತೀವ್ರ ಆರ್ಥಿಕ ಸಂಕಷ್ಟವನ್ನು ತಂದೊಡ್ಡುತ್ತಿವೆ. ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದ ಭೀತಿಯಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗಗನಕ್ಕೇರಿದೆ. ಇದರ ನೇರ ಪರಿಣಾಮವಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಹಾಗೂ ರಾಸಾಯನಿಕ ಗೊಬ್ಬರಗಳ ದರದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಬೆಲೆ ಏರಿಕೆಯ ಈ ಚಕ್ರವ್ಯೂಹಕ್ಕೆ ಸಿಲುಕಿ ಈಗಾಗಲೇ ಕಂಗಾಲಾಗಿರುವ ರಾಜ್ಯದ ರೈತರಿಗೆ, ಇದೀಗ ಮುಂಗಾರು ಹಂಗಾಮಿನ ಆರಂಭದಲ್ಲೇ ಬಿತ್ತನೆ ಬೀಜದ ತೀವ್ರ ಅಭಾವ ಎದುರಾಗಿದ್ದು, ಮತ್ತೊಂದು ಆಘಾತ ಎದುರಾಗಿದೆ. ವಿಶೇಷವಾಗಿ ಹಾವೇರಿ ಜಿಲ್ಲೆಯ ಕೃಷಿ ಕೇಂದ್ರಗಳಲ್ಲಿ ಬಿತ್ತನೆ ಬೀಜಕ್ಕಾಗಿ ರೈತರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷಿ ಚಟುವಟಿಕೆಗಳು ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ಹಾವೇರಿಯ ಪ್ರಮುಖ ಕೃಷಿ ಸಂಪರ್ಕ ಕೇಂದ್ರಕ್ಕೆ ನೂರಾರು ರೈತರು ಮುಗಿಬೀಳುತ್ತಿದ್ದಾರೆ. ಸಕಾಲಕ್ಕೆ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರೈತರು ಬಿತ್ತನೆ ಕಾರ್ಯ ಚುರುಕುಗೊಳಿಸಲು ಮುಂದಾಗಿದ್ದಾರೆ. ಆದರೆ ಕೃಷಿ ಕೇಂದ್ರಗಳಲ್ಲಿ ಬೀಜದ ದಾಸ್ತಾನು ಕೊರತೆ…

Read More

ನವದೆಹಲಿ  : ಆಫ್ರಿಕಾದ ಹಲವು ದೇಶಗಳಲ್ಲಿ ತಲ್ಲಣ ಮೂಡಿಸುತ್ತಿರುವ, ಕೋವಿಡ್‌ಗಿಂತಲೂ ಅತ್ಯಂತ ಭೀಕರ ಎನ್ನಲಾದ ‘ಎಬೋಲಾ’ ವೈರಸ್ ಭೀತಿ ಇದೀಗ ಭಾರತಕ್ಕೂ ತಟ್ಟಿದೆ. ಆಫ್ರಿಕಾ ಖಂಡದಲ್ಲಿ ಎಬೋಲಾ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಕಟ್ಟೆಚ್ಚರ ವಹಿಸುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಮುಖ್ಯವಾಗಿ ರಾಷ್ಟ್ರ ರಾಜಧಾನಿ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದ್ದು, ಹೆಚ್ಚು ಅಪಾಯವಿರುವ (High-Risk) ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ವೈರಸ್ ಹಾವಳಿಯ ತೀವ್ರತೆಯನ್ನು ಪರಿಗಣಿಸಿ, ನವದೆಹಲಿಯಲ್ಲಿ ಆಯೋಜನೆಗೊಳ್ಳಬೇಕಿದ್ದ ಪ್ರತಿಷ್ಠಿತ ‘ಭಾರತ-ಆಫ್ರಿಕಾ ಒಕ್ಕೂಟದ ಶೃಂಗಸಭೆ’ಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಅಧಿಕೃತವಾಗಿ ಮಾಹಿತಿ ನೀಡಿದೆ. ಈ ಬೆನ್ನಲ್ಲೇ ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಎಬೋಲಾ ನಿಯಂತ್ರಣಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ…

Read More

ತುಮಕೂರು :ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಗರಿಗೆದರಿದ್ದು, ಜೆಡಿಎಸ್ ಅಭ್ಯರ್ಥಿ ನಾಗರಾಜ್ ಅವರು ಹಾಲಿ ಶಾಸಕ ಎಸ್.ಆರ್. ಶ್ರೀನಿವಾಸ್ ಮತ್ತು ಅವರ ಪುತ್ರ ದುಷ್ಯಂತ್ ವಿರುದ್ಧ ಅತ್ಯಂತ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ತಮ್ಮನ್ನು ರಾಜಕೀಯವಾಗಿ ಮುಗಿಸಲು ಮತ್ತು ಮುಂಬರುವ ಚುನಾವಣೆಯಲ್ಲಿ ಸೋಲಿಸಲು ತಮಗೆ ‘ಹನಿಟ್ರ್ಯಾಪ್’ ಮಾಡಲು ಸಂಚು ರೂಪಿಸಲಾಗಿತ್ತು ಎಂದು ನಾಗರಾಜ್ ಆಪಾದಿಸಿದ್ದಾರೆ. ಈ ಆಘಾತಕಾರಿ ಆರೋಪವು ಜಿಲ್ಲಾ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ತಮ್ಮ ಆರೋಪಕ್ಕೆ ಪುಷ್ಟಿ ನೀಡುವಂತೆ ಜೆಡಿಎಸ್ ಅಭ್ಯರ್ಥಿ ನಾಗರಾಜ್ ಅವರು ಆಡಿಯೋ ರೆಕಾರ್ಡಿಂಗ್ ಒಂದನ್ನು ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ್ದಾರೆ. ಈ ಆಡಿಯೋದಲ್ಲಿ ಶಾಸಕ ಶ್ರೀನಿವಾಸ್ ಅವರ ಪುತ್ರ ದುಷ್ಯಂತ್ ಅವರು ಮತ್ತೊಬ್ಬ ವ್ಯಕ್ತಿಯ ಜೊತೆ ಮಾತನಾಡಿದ್ದಾರೆ ಎನ್ನಲಾಗಿದ್ದು, ನಾಗರಾಜ್ ಅವರನ್ನು ಹೇಗೆ ಸಿಲುಕಿಸಬೇಕು ಎಂಬ ಕುರಿತು ಚರ್ಚ ನಡೆಸಿರುವುದು ಕೇಳಿಬಂದಿದೆ ಎನ್ನಲಾಗಿದೆ. ಈ ಆಡಿಯೋ ಸಿಡಿ ಈಗ ಗುಬ್ಬಿ ಕ್ಷೇತ್ರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ತುಮಕೂರಿನ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಜಂಟಿ…

Read More

ಬೆಂಗಳೂರು : ಹಿಂದೂ ರಾಷ್ಟ್ರ ಮಾಡಲು SIR ಮಾಡ್ತಿದಾರೆ. SIR ಮಾಡೋದು ಚುನಾವಣಾ ಆಯೋಗದ ಕೆಲಸವಲ್ಲ ಎಂದು SIR ವಿರುದ್ಧ MLC ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.n ಬೆಂಗಳೂರಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆಡಳಿತ ವೈಖರಿಯನ್ನು ತರಾಟೆಗೆ ತೆಗೆದುಕೊಂಡ ಬಿ.ಕೆ. ಹರಿಪ್ರಸಾದ್, “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನರನ್ನು ಭಿಕಾರಿ ಮಾಡಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು. ಪ್ರಧಾನಿಯವರು ಸಾಮಾನ್ಯ ಜನರ ಹಿತ ಕಾಯುವ ಬದಲು ಕಾರ್ಪೊರೇಟ್ ಕಂಪನಿಗಳ ಪರವಾಗಿ ನಿಂತಿದ್ದಾರೆ ಎಂದು ದೂರಿದ ಅವರು, ಕೊನೆಯ ಪಕ್ಷ ಪಾರ್ಲೆ ಕಂಪನಿಯ ಜೊತೆಗೂ ಪ್ರಧಾನಿ ಮೋದಿ ವ್ಯಾಪಾರ ಕುದುರಿಸಿದ್ದಾರೆ ಎಂದು ಲೇವಡಿ ಮಾಡಿದರು. ಇದೇ ಸಂದರ್ಭದಲ್ಲಿ ಪ್ರಾಚೀನ ರಾಜತಾಂತ್ರಿಕ ಚಾಣಕ್ಯನ ನೀತಿಯನ್ನು ಉಲ್ಲೇಖಿಸಿದ ಹರಿಪ್ರಸಾದ್, “ಯಾವಾಗ ದೇಶದ ರಾಜನೇ ವ್ಯಾಪಾರಿಯಾಗುತ್ತಾನೋ, ಆ ದೇಶದ ಪ್ರಜೆಗಳು ಭಿಕಾರಿಗಳಾಗುತ್ತಾರೆ ಎಂಬುದು ಚಾಣಕ್ಯ ನೀತಿ. ಇಂದು ಭಾರತದಲ್ಲಿ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದ ಆಡಳಿತಗಾರನೇ ವ್ಯಾಪಾರ ಮಾಡಲು ಹೊರಟಿರುವುದರಿಂದ ದೇಶದ ಜನಸಾಮಾನ್ಯರು ಆರ್ಥಿಕವಾಗಿ…

Read More

ಹಾವೇರಿ : ಹಾವೇರಿ ಜಿಲ್ಲೆಯಲ್ಲಿ ಅತ್ಯಂತ ದುಃಖದಾಯಕ ಮತ್ತು ಕರುಳು ಹಿಂಡುವ ಘಟನೆಯೊಂದು ಸಂಭವಿಸಿದೆ. ಹೊಂಡಕ್ಕೆ ಬಿದ್ದ ತನ್ನ ದಿವ್ಯಾಂಗ (ವಿಕಲಚೇತನ) ಮಗನನ್ನು ರಕ್ಷಿಸಲು ಹೋಗಿ ತಂದೆಯೂ ಸಹ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಹಾವೇರಿ ತಾಲೂಕಿನ ಆಲದಕಟ್ಟೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆಲದಕಟ್ಟೆ ಗ್ರಾಮದ ನಿವಾಸಿ ಶಂಭುಲಿಂಗ ಹಂಸಬಾವಿ (40) ಮತ್ತು ಅವರ ಎಂಟು ವರ್ಷದ ಪುತ್ರ ಶರತ್ ಶಂಭುಲಿಂಗ ಹಂಸಬಾವಿ ಎಂದು ಗುರುತಿಸಲಾಗಿದೆ. ಎಂದಿನಂತೆ ತಂದೆ-ಮಗ ಇಬ್ಬರೂ ಹಳ್ಳಿಯಲ್ಲಿ ವಾಕಿಂಗ್ ಮಾಡಲು ತೆರಳಿದ್ದಾಗ ಈ ವಿಧಿಲಿಖಿತ ದುರಂತ ಸಂಭವಿಸಿದೆ. ದುರಂತ ನಡೆದಿದ್ದು ಹೇಗೆ? ಗ್ರಾಮದ ಮಧ್ಯದಲ್ಲಿರುವ ಹೊಂಡವೊಂದರ ಬಳಿ ತಂದೆ ಶಂಭುಲಿಂಗ ಅವರು ತಮ್ಮ ವಿಕಲಚೇತನ ಪುತ್ರ ಶರತ್‌ನನ್ನು ಕರೆದುಕೊಂಡು ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಹೊಂಡದ ಸುತ್ತಲೂ ಹಸಿರು ಪಾಚಿ ಬೆಳೆದಿದ್ದರಿಂದ, ಬಾಲಕ ಶರತ್ ಕಾಲು ಜಾರಿ ದಿಢೀರನೆ ಹೊಂಡದ ನೀರಿಗೆ ಬಿದ್ದಿದ್ದಾನೆ. ಮಗ ನೀರೊಳಗೆ ಮುಳುಗುತ್ತಿರುವುದನ್ನು ಕಂಡು ಆತಂಕಗೊಂಡ ತಂದೆ ಶಂಭುಲಿಂಗ, ಆತನನ್ನು…

Read More

ಬೆಳಗಾವಿ : ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಲಾಂಗು ಕಟ್ಟಿಗೆ ಹಿಡಿದು ಮಾರಮಾರಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಪನಾಳ ಗ್ರಾಮದ ಬಿಲಕಾರ ತೋಟದಲ್ಲಿ ನಡೆದಿದೆ. ಸತ್ಯಪ್ಪ ಬಿಲಾಕರ ಇವರ ಜಮೀನನ್ನು ಪರಮಪ್ಪ ಹರಿಜನ ಹಾಗೂ ಲಕ್ಷ್ಮಿತಾಯಿ ಹರಿಜನ ಎಂಬ ದಂಪತಿ ಉಳುಮೆ ಮಾಡುತ್ತಿದ್ದರು. ಜಮೀನಿನಲ್ಲಿ ಅರಿಶಿಣ ಬೆಳೆಯನ್ನು ಬೆಳೆದಿದ್ದರು. ಇಂದು ಏಕಾಏಕಿ ಬಂದು ಜಮೀನು ಬಿಟ್ಟು ಹೋಗಿ ಅಂತ ಸತ್ಯಪ್ಪ ಹಲ್ಲೆ ನಡೆಸಿದ್ದಾರೆ. ದೊಣ್ಣೆ, ಮಚ್ಚು ಕಲ್ಲುಗಳಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಬಸವರಾಜ್ ವಿವೇಕಾನಂದ ಸೇರಿ 8 ಜನರಿಂದ ಹಲ್ಲೆ ಮಾಡಿದ್ದಾರೆ. ಹೊಡೆದಾಟದ ಭೀಕರ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು ಸದ್ಯ ಗಾಯಳುಗಳನ್ನ ಗೋಕಾಕ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ

Read More

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯಲ್ಲಿ ಇಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸಜ್ಜಾಗುತ್ತಿದೆ. ಇಂದಿನ ಪಂದ್ಯದಲ್ಲಿ ಆರ್‌ಸಿಬಿ ತಂಡವು ಪ್ರಮುಖ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ತಂಡದ ಪ್ರಮುಖ ಸ್ಫೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅನುಪಸ್ಥಿತಿಯಲ್ಲಿ ಜೇಕಬ್ ಬೆಥೆಲ್‌ಗೆ ಆರಂಭಿಕನಾಗಿ ಸಾಕಷ್ಟು ಅವಕಾಶಗಳನ್ನು ನೀಡಲಾಗಿತ್ತು. ಆದರೆ, ಬೆಥೆಲ್ ಸಿಕ್ಕ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಆರಂಭಿಕನಾಗಿ ವೆಂಕಟೇಶ್ ಅಯ್ಯರ್: ಜೇಕಬ್ ಬೆಥೆಲ್ ಸತತ ವೈಫಲ್ಯ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಆರಂಭಿಕ ವಿಭಾಗದಲ್ಲಿ ದೊಡ್ಡ ಬದಲಾವಣೆ ಮಾಡಲು ಮುಂದಾಗಿದೆ. ಕಳೆದ ಪಂದ್ಯದಲ್ಲಿ ಅತ್ಯಾಕರ್ಷಕ ಅರ್ಧಶತಕ ಸಿಡಿಸಿ ತಂಡಕ್ಕೆ ಅದ್ಭುತ ಜಯ ತಂದುಕೊಟ್ಟಿದ್ದ ಎಡಗೈ ಬ್ಯಾಟರ್ ವೆಂಕಟೇಶ್ ಅಯ್ಯರ್ ಅವರಿಗೆ ಪ್ರಮೋಷನ್ ಸಿಗುವ ಸಾಧ್ಯತೆಯಿದೆ. ಇಂದಿನ ಪಂದ್ಯದಲ್ಲಿ ಕಿಂಗ್ ವಿರಾಟ್ ಕೊಹ್ಲಿ ಜೊತೆ ವೆಂಕಟೇಶ್ ಅಯ್ಯರ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂದು ಕ್ರಿಕೆಟ್ ವಲಯದಲ್ಲಿ ಬಲವಾಗಿ ಕೇಳಿಬರುತ್ತಿದೆ. ಬೌಲಿಂಗ್ ವಿಭಾಗಕ್ಕೆ…

Read More

ನವದೆಹಲಿ : ಸದ್ಯ ಭಾರತದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಕಾಕ್ರೋಚ್ ಜನತಾ ಪಾರ್ಟಿ, ಜೆನ್ Z ಯುವಕರನ್ನು ಆಕರ್ಷಿಸುತ್ತಿದೆ. ಆದರೆ, ಈ ಪಕ್ಷಕ್ಕೆ ಸೇರಲು ಕಳುಹಿಸಲಾಗುವ ವಾಟ್ಸ್​ಆ್ಯಪ್​ ಲಿಂಕ್‌ಗಳ ಮೂಲಕ ಸೈಬರ್ ವಂಚಕರು ಬ್ಯಾಂಕ್ ಖಾತೆಗಳನ್ನು ಲೂಟಿ ಮಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದ್ದು, ಅಪರಿಚಿತ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಸೂಚಿಸಿದೆ. ಹೌದು ಜನರನ್ನು ಮರುಳು ಮಾಡಲು, ಅವರ ಬ್ಯಾಂಕ್​ ಖಾತೆಯನ್ನು ಲೂಟಿ ಮಾಡಲು ಹೊಸ ಹೊಸ ಪ್ರಯೋಗ ಮಾಡುತ್ತಲೇ ಬಂದಿದೆ. ಸೋ ಕಾಲ್ಡ್​ ವೆಲ್​ ಎಜುಕೇಟೆಡ್​ ಅರ್ಥಾತ್​ ಸುಶಿಕ್ಷಿತರು ಎನ್ನಿಸಿಕೊಂಡಿರುವ ಜನರೇ ಇವರ ಮೋಸಕ್ಕೆ ಬಲಿಯಾಗಿ ಲಕ್ಷ ಲಕ್ಷ ಕಳೆದುಕೊಳ್ಳುತ್ತಿದ್ದಾರೆ. ಪೊಲೀಸರು, ಮಾಧ್ಯಮಗಳಲ್ಲಿ ಎಷ್ಟೇ ಎಚ್ಚರಿಕೆ ಬಂದರೂ, ತಮಗೆ ಆಮಿಷ ತೋರಿ ಬಂದಿರುವ ಲಿಂಕ್​ ನೋಡಿದ ತಕ್ಷಣ ಎಲ್ಲಾ ಎಚ್ಚರಿಕೆಯೂ ಮರೆತು ಹೋಗಿ ಲಿಂಕ್​ ಕ್ಲಿಕ್​ ಮಾಡಿ ದುಡ್ಡು ಕಳೆದುಕೊಂಡಿರುವವರೇ ಲಕ್ಷ ಲಕ್ಷ ಮಂದಿ ಇದ್ದಾರೆ. ಹೀಗೆ ಕಳೆದುಕೊಂಡ ದುಡ್ಡು ಸಿಗುವುದು ಕೂಡ ಅತ್ಯಂತ ವಿರಳ.…

Read More

ಹುಬ್ಬಳ್ಳಿ: ಮಕ್ಕಳಿಲ್ಲದ ದಂಪತಿಗಳಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ (KIMS / ಕೆಎಂಸಿ-ಆರ್‌ಐ) ಮಹತ್ತರ ಹೆಜ್ಜೆಯಿಟ್ಟಿದೆ. ಇಲ್ಲಿನ ಸ್ತ್ರೀರೋಗ ಹಾಗೂ ಪ್ರಸೂತಿ ವಿಭಾಗದ 2ನೇ ಮಹಡಿಯಲ್ಲಿ ನೂತನ ಕೃತಕ ಗರ್ಭಧಾರಣೆ ಕೇಂದ್ರವನ್ನು (IVF) ಸಂಪೂರ್ಣ ಸರ್ಕಾರಿ ಮಾದರಿಯಲ್ಲಿ ಆರಂಭಿಸಲಾಗುತ್ತಿದ್ದು, ಇದು ಕರ್ನಾಟಕದಲ್ಲೇ ಇಂತಹ ಮೊದಲ ಸರ್ಕಾರಿ ಐವಿಎಫ್ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಹುಬ್ಬಳ್ಳಿಯ ಈ ಕೇಂದ್ರದ ಪ್ರಗತಿಯನ್ನು ಗಮನಿಸಿರುವ ರಾಜ್ಯ ಸರ್ಕಾರವು, ಪ್ರಸ್ತುತ ರಾಜ್ಯದ ಇನ್ನೂ ಮೂರು ಪ್ರಮುಖ ವೈದ್ಯಕೀಯ ಕಾಲೇಜುಗಳಲ್ಲಿಯೂ ಐವಿಎಫ್ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದೆ. ಕೆಲವು ತಿಂಗಳುಗಳ ಹಿಂದೆಯೇ ಈ ಕೇಂದ್ರವು ಸಾರ್ವಜನಿಕರ ಸೇವೆಗೆ ಲಭ್ಯವಾಗಬೇಕಿತ್ತಾದರೂ, ಆರಂಭದಲ್ಲಿ ಕೆಲವು ಗೊಂದಲಗಳಿಂದಾಗಿ ವಿಳಂಬವಾಗಿತ್ತು. ಮೊದಲು ಈ ಕೇಂದ್ರವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಸರ್ಕಾರ ನಿಗದಿಪಡಿಸುವ ದರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಕೇಂದ್ರ ನಡೆಸುವುದು ಕಷ್ಟಸಾಧ್ಯವಾಗಿತ್ತು. ಕೇಂದ್ರದ ಕಾರ್ಯನಿರ್ವಹಣೆ ಮತ್ತು…

Read More

ಬೆಂಗಳೂರು: ಬಂಗಾರ ಖರೀದಿಸುವ ಯೋಚನೆಯಲ್ಲಿದ್ದ ಗ್ರಾಹಕರಿಗೆ ಶುಕ್ರವಾರದ ದಿನ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಇಂದು ಗಮನಾರ್ಹ ಇಳಿಕೆ ಕಂಡುಬಂದಿದೆ. ಮೇ 22ರ ಶುಕ್ರವಾರದಂದು ಹಳದಿ ಲೋಹದ ದರ ಗಣನೀಯವಾಗಿ ಕುಸಿದಿರುವುದು ಚಿನ್ನ ಪ್ರಿಯರಲ್ಲಿ ಸಂತಸ ಮೂಡಿಸಿದೆ. ಮತ್ತೊಂದೆಡೆ, ಗುರುವಾರ ಕುಸಿತ ಕಂಡಿದ್ದ ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆಯಾಗದೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಕಳೆದ ಮೂರು ದಿನಗಳಿಂದಲೂ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ತೀವ್ರ ಏರಿಳಿತಗಳು ದಾಖಲಾಗುತ್ತಿದ್ದವು. ಬುಧವಾರ ಮತ್ತು ಗುರುವಾರ ಚಿನ್ನದ ಬೆಲೆ ಸತತವಾಗಿ ಏರಿಕೆಯ ಹಾದಿಯಲ್ಲಿದ್ದರೆ, ಬೆಳ್ಳಿಯ ದರವು ಇಳಿಕೆಯ ಮುಖ ಮಾಡಿತ್ತು. ಆದರೆ ಶುಕ್ರವಾರದ ವಹಿವಾಟಿನಲ್ಲಿ ಈ ಟ್ರೆಂಡ್ ಬದಲಾಗಿದ್ದು, ಚಿನ್ನದ ದರ ಹಠಾತ್ ಕುಸಿತ ಕಾಣುವ ಮೂಲಕ ಗ್ರಾಹಕರಿಗೆ ನಿರಾಳತೆ ತಂದಿದೆ. ಆಭರಣ ತಯಾರಿಕೆಗೆ ಹೆಚ್ಚಾಗಿ ಬಳಸಲಾಗುವ 22 ಕ್ಯಾರೆಟ್ ಚಿನ್ನದ ದರದಲ್ಲಿ ಇಂದು ದೊಡ್ಡ ಮಟ್ಟದ ಇಳಿಕೆಯಾಗಿದೆ. 22 ಕ್ಯಾರೆಟ್‌ನ…

Read More