Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಹೈದರಾಬಾದ್: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅದರಿಂದ ಜಾಗತಿಕವಾಗಿ ಉಂಟಾಗಿರುವ ಇಂಧನ ಹಾಗೂ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಅತ್ಯಂತ ಮಹತ್ವದ ಹಾಗೂ ಅಚ್ಚರಿಯ ಮನವಿಯೊಂದನ್ನು ಮಾಡಿದ್ದಾರೆ. ದೇಶದ ಆರ್ಥಿಕತೆಯನ್ನು ಸುಭದ್ರಗೊಳಿಸಲು ಮುಂದಿನ ಒಂದು ವರ್ಷಗಳ ಕಾಲ ಕೆಲವು ಅಭ್ಯಾಸಗಳನ್ನು ಬದಲಿಸಿಕೊಳ್ಳುವಂತೆ ಅವರು ಕರೆ ನೀಡಿದ್ದಾರೆ. ಚಿನ್ನ ಮತ್ತು ವಿದೇಶ ಪ್ರವಾಸಕ್ಕೆ ಬ್ರೇಕ್: ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಮುಂದಿನ ಒಂದು ವರ್ಷಗಳ ಕಾಲ ಹಬ್ಬ ಹರಿದಿನಗಳಲ್ಲಿ ಚಿನ್ನವನ್ನು ಖರೀದಿಸಬೇಡಿ (Do not buy gold for one year)” ಎಂದು ದೇಶವಾಸಿಗಳಿಗೆ ಮನವಿ ಮಾಡಿದರು. ಇದರೊಂದಿಗೆ, ಒಂದು ವರ್ಷದವರೆಗೆ ತಮ್ಮ ವಿದೇಶ ಪ್ರವಾಸಗಳನ್ನು ಮುಂದೂಡುವಂತೆಯೂ ಅವರು ಸಲಹೆ ನೀಡಿದ್ದಾರೆ. ಪ್ರಧಾನಿಯವರ ಈ ಕರೆಯ ಹಿಂದಿನ ಪ್ರಮುಖ ಕಾರಣಗಳು: ಈ ಅಸಾಮಾನ್ಯ ಮನವಿಯ ಹಿಂದೆ ಬಲವಾದ ಆರ್ಥಿಕ ಕಾರಣಗಳಿವೆ: ವಿದೇಶಿ ವಿನಿಮಯ ಉಳಿತಾಯ: ಭಾರತವು ಅತಿ ಹೆಚ್ಚು…

Read More

ಬೆಂಗಳೂರು : ನಿನ್ನೆ ಒಂದು ಕಡೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕನೊಬ್ಬ ಸಾವನ್ನಪ್ಪಿದ್ದರೆ, ಇನ್ನೊಂದು ಕಡೆ ಬೆಂಗಳೂರಲ್ಲಿ ನಾಗಮಲೆಯಲ್ಲಿ ಚಿರತೆ ದಾಳಿಗೆ ಬಾಲಕ ಸಾವನ್ನಪ್ಪಿದಕ್ಕೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನಗರದ ಕಾಮಾಕ್ಷಿಪಾಳ್ಯದ ವೃಷಭಾವತಿ ನಗರದ ಹರ್ಷಿತ್ ಗೌಡ ನಾಗಮಲೆಯಲ್ಲಿ ಚಿರತೆ ದಾಳಿಗೆ ಬಲಿಯಾಗಿದ್ದ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಲಕನ ಅಜ್ಜಿ, ನನ್ನ ಸೊಸೆ ಪವಿತ್ರ ತನ್ನ ಇಬ್ಬರು ಮಕ್ಕಳು ಹಾಗೂ ಸ್ನೇಹಿತರ ಜೊತೆ ದೇವರ ದರ್ಶನಕ್ಕೆ ಹೋಗಿದ್ದರು. ಪಾದಯಾತ್ರೆ ಮೂಲಕ ಕಾಡಿನಲ್ಲಿ ಹೋಗುವಾಗ ಮೊಮ್ಮಗನ ಮೇಲೆ ಚಿರತೆ ದಾಳಿ ಮಾಡಿದೆ ಎಂದು ಮಾಹಿತಿ ನೀಡಿದರು. ಕಾಡಿನೊಳಗೆ ಹೋಗುವಾಗ 200 ರೂ. ಹೆಚ್ಚಿನ ಹಣ ತೆಗೆದುಕೊಂಡು ಒಳಗಡೆ ಬಿಟ್ಟಿದ್ದಾರೆ. ಮಗು ಮೇಲೆ ದಾಳಿಯಾಗಿ ಅರ್ಧ ಗಂಟೆಯಾದರೂ ಯಾವ ಅರಣ್ಯಾಧಿಕಾರಿಯೂ ಬಂದಿರಲಿಲ್ಲ. ನಂತರ ಜನ ಜಗಳ ಮಾಡಿದಾಗ ಮೃತದೇಹ ಹುಡುಕಿದ್ದಾರೆ. ನಮ್ಮ ಮಗುವಿಗೆ ಆದ ಹಾಗೆ ಯಾರಿಗೂ ಆಗಬಾರದು. ಈ ಸಾವಿಗೆ ಅರಣ್ಯ…

Read More

ಚನ್ನೈ : ನಿನ್ನೆ ಚೆನ್ನೈನ ಪ್ರತಿಷ್ಠಿತ ನೆಹರು ಕ್ರೀಡಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳು ಮತ್ತು ಬೆಂಬಲಿಗರ ಸಮ್ಮುಖದಲ್ಲಿ ಈ ಐತಿಹಾಸಿಕ ಕ್ಷಣ ಸಂಭವಿಸಿತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಖ್ಯಾತ ನಟಿ ತ್ರಿಶಾ ಸೇರಿದಂತೆ ಹಲವು ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಎಂಜಿಆರ್, ಕರುಣಾನಿಧಿ ಮತ್ತು ಜಯಲಲಿತಾರಂತಹ ದಿಗ್ಗಜರು ಆಳಿದ ತಮಿಳುನಾಡಿನ ಸಿಂಹಾಸನವನ್ನು ಈಗ ದಳಪತಿ ವಿಜಯ್ ಅಲಂಕರಿಸಿದ್ದಾರೆ. ಅತಿ ಕಿರಿಯ ಮಹಿಳಾ ಸಚಿವೆ ಕೀರ್ತನಾ ಶಿವಕಾಶಿ ಕ್ಷೇತ್ರದ 29 ವರ್ಷದ ಟಿವಿಕೆ ಶಾಸಕಿ ಸೆಲ್ವಿ ಕೀರ್ತನಾ ಅವರು ಸಿಎಂ ವಿಜಯ್ ಸಂಪುಟದಲ್ಲಿ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕೇವಲ 29 ವರ್ಷ ವಯಸ್ಸಿನ ಕೀರ್ತನಾ ಅವರು ತಮಿಳುನಾಡಿನ ಅತ್ಯಂತ ಕಿರಿಯ ಸಚಿವರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲ, ವಿಜಯ್ ಸಂಪುಟದಲ್ಲಿ ಅವರು ಮೊದಲ ಮತ್ತು ಏಕೈಕ ಮಹಿಳಾ ಸಚಿವೆಯಾಗಿದ್ದಾರೆ. ಶಿವಕಾಶಿಯಲ್ಲಿ ಇತಿಹಾಸ ಸೃಷ್ಟಿಸಿದ…

Read More

ರಾಯ್ಪುರ : ಕೊನೆವರೆಗೂ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಮುಂಬೈ ವಿರುದ್ಧ ಆರ್‌ಸಿಬಿ 2 ವಿಕೆಟ್‌ಗಳ ಜಯ ಸಾಧಿಸಿದೆ. ಕೊನೆ ಓವರ್‌ನಲ್ಲಿ ಭುವನೇಶ್ವರ್‌ ಕುಮಾರ್‌ ಒಂದು ಸಿಕ್ಸರ್‌ ಸಿಡಿಸುವ ಮೂಲಕ ಬೆಂಗಳೂರು ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ರಾಯ್ಪುರದಲ್ಲಿ ನಡೆದ ಪಂದ್ಯ ರೋಚಕತೆಯಿಂದ ಕೂಡಿತ್ತು. ಕೊನೆ ಮೂರು ಬಾಲ್‌ಗೆ 9 ರನ್‌ ಬೇಕಿತ್ತು. ಶೆಫರ್ಡ್‌ ಔಟಾದ ಬಳಿಕ ಕ್ರೀಸ್‌ಗೆ ಬಂದ ಭುವನೇಶ್ವರ್‌ ಕುಮಾರ್‌ ಸಿಕ್ಸರ್‌ ಸಿಡಿಸಿದರು. ಎರಡು ಬಾಲ್‌ಗೆ ಮೂರು ರನ್‌ ಬೇಕಿತ್ತು. ಈ ವೇಳೆ ಒಂದು ಸಿಂಗಲ್‌ ತೆಗೆದುಕೊಂಡರು. ಕೊನೆ ಬಾಲ್‌ಗೆ ರಸಿಕ್ ಸಲಾಂ ಎರಡು ರನ್‌ ಪಡೆದು ತಂಡವನ್ನು ಗೆಲುವಿನ ದಡ ಸೇರಿಸಿದರು. ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಮುಂಬೈ ಇಂಡಿಯನ್ಸ್‌ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿತು. ತಂಡದ ಮೊತ್ತ ಕೇವಲ 28 ರನ್‌ ಇರುವಾಗಲೇ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡು ಮುಂಬೈ ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ನಮನ್‌ ಧೀರ್‌ ಮತ್ತು ತಿಲಕ್‌ ವರ್ಮಾ ಜವಾಬ್ದಾರಿಯುತ ಆಟವಾಡಿ ತಂಡದ ರನ್ 150ರ…

Read More

ನವದೆಹಲಿ: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿ-ಅಂಶಗಳ ಪ್ರಕಾರ, 2024ರಲ್ಲಿ ಕರ್ನಾಟಕದಲ್ಲಿ 334 ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ರಾಜ್ಯವು ಭ್ರಷ್ಟಾಚಾರದಲ್ಲಿ ದೇಶದಲ್ಲೇ ಮೂರನೇ ಸ್ಥಾನ ಪಡೆದಿದೆ. ಪಟ್ಟಿಯಲ್ಲಿ ಮಹಾರಾಷ್ಟ್ರವು 721 ಪ್ರಕರಣಗಳಲ್ಲಿ ಅಗ್ರ ಸ್ಥಾನದಲ್ಲಿದೆ, ನಂತರ ತಮಿಳುನಾಡು 374 ಪ್ರಕರಣಗಳನ್ನು ದಾಖಲಿಸಿದೆ ಮತ್ತು ಕರ್ನಾಟಕವು ಮೂರನೇ ಸ್ಥಾನದಲ್ಲಿದೆ ಎಂದು ಮೇ 7ರ ಗುರುವಾರ ಬಿಡುಗಡೆಯಾದ ವರದಿ ಹೇಳಿದೆ. ಆದಾಗ್ಯೂ, ಅಕ್ರಮ ಆಸ್ತಿ (ಡಿಎ) ಪ್ರಕರಣಗಳಲ್ಲಿ ಕರ್ನಾ ಟಕವು ಎಲ್ಲರಿಗಿಂತ ಮುಂದಿದೆ. 75 ಪ್ರಕರಣಗಳೊಂದಿಗೆ ಪಟ್ಟಿಯಲ್ಲಿ ರಾಜ್ಯವು ಮೊದಲ ಸ್ಥಾನದಲ್ಲಿದೆ. ಇದರ ನಂತರ ಒಡಿಶಾ 62 ಪ್ರಕರಣ ಮತ್ತು ಅಸ್ಸಾಂ 44 ಪ್ರಕರಣಗಳೊಂದಿಗೆ ನಂತರದ ಸ್ಥಾನದಲ್ಲಿದೆ. ಆದಾಗ್ಯೂ,ಕ ಳೆದ ಕೆಲವು ವರ್ಷಗಳಲ್ಲಿ ಕರ್ನಾಟಕದ ಭ್ರಷ್ಟಾಚಾರ ಪ್ರಕರಣಗಳನ್ನು ಪರಿಗಣಿಸಿದಾಗ, ಈಗ ಸ್ವಲ್ಪ ಇಳಿಕೆ ಕಂಡುಬಂದಿದೆ, ಏಕೆಂದರೆ ರಾಜ್ಯ 2023ರಲ್ಲಿ 362 ಪ್ರಕರಣಗಳು ಮತ್ತು 2022ರಲ್ಲಿ 389 ಪ್ರಕರಣಗಳನ್ನು ದಾಖಲಿಸಿತ್ತು ಎಂದು ವರದಿ ಹೇಳಿದೆ.

Read More

ಬೆಂಗಳೂರು : ಸಚಿವ ಡಿ. ಸುಧಾಕರ್ ನಿಧನಕ್ಕೆ ಸಂತಾಪ ಸೂಚಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಚಿತ್ರದುರ್ಗಕ್ಕೆ ಇಂದು ಸರ್ಕಾರ ರಜೆ ಘೋಷಣೆ ಮಾಡಿದ್ದು, ರಾಜ್ಯಾದ್ಯಂತ 3 ದಿನ ಸಂತಾಪ ಕೋರಲು ತಿಳಿಸಲಾಗಿದೆ. ಇನ್ನು ಮೃತರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಸರ್ಕಾರ ಸೂಚನೆ ನೀಡಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ ಅವರು ಮೇ 10 ರಂದು ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಹಿನ್ನೆಲೆ ಸರ್ಕಾರ ಸಂತಾಪ ಸೂಚಿಸಿ ಅಧಿಸೂಚನೆ ಹೊರಡಿಸಿದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದೆ. ಮೇ 10 ರಿಂದ 12 ರವರೆಗೆ ಮೂರು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಿದಲಾಗಿದೆ.

Read More

ಬೆಂಗಳೂರು: ರಾಜ್ಯ ರಾಜಕಾರಣದ ಹಿರಿಯ ಮುಖಂಡರು ಹಾಗೂ ಹಾಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (63) ಅವರು ಭಾನುವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸಚಿವರ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಮೂರು ದಿನಗಳ ರಾಜ್ಯ ಶೋಕಾಚರಣೆ ಸಚಿವ ಸುಧಾಕರ್ ಅವರ ಗೌರವಾರ್ಥವಾಗಿ ರಾಜ್ಯ ಸರ್ಕಾರವು ಮೇ 10 ರಿಂದ ಮೇ 12 ರವರೆಗೆ ಒಟ್ಟು ಮೂರು ದಿನಗಳ ಕಾಲ ರಾಜ್ಯಾದ್ಯಂತ ಅಧಿಕೃತ ಶೋಕಾಚರಣೆಯನ್ನು ಘೋಷಿಸಿದೆ. ಈ ಅವಧಿಯಲ್ಲಿ ರಾಜ್ಯದಾದ್ಯಂತ ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ ಮತ್ತು ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲು ಸೂಚಿಸಲಾಗಿದೆ. ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ರಜೆ ಮೃತರ ಸ್ವಗ್ರಾಮ ಮತ್ತು ಕಾರ್ಯಕ್ಷೇತ್ರವಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ (ಮೇ 11) ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಜಿಲ್ಲೆಯ…

Read More

ಬೆಂಗಳೂರು: ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿಯ ನಡುವೆಯೇ ರಾಜಧಾನಿ ಬೆಂಗಳೂರಿನಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿರುವುದು ತೀವ್ರ ಸಂಚಲನ ಮೂಡಿಸಿದೆ. ಪ್ರಧಾನಿಗಳು ಸಂಚರಿಸಬೇಕಿದ್ದ ಕಗ್ಗಲೀಪುರದ ತಾತಗುಣಿ ರಸ್ತೆಯ ಸಮೀಪದಲ್ಲಿ ಜಿಲೇಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಭದ್ರತಾ ದೃಷ್ಟಿಯಿಂದ ಇದು ಅತ್ಯಂತ ಗಂಭೀರ ವಿಚಾರವಾಗಿ ಪರಿಣಮಿಸಿದೆ. ಬದಲಾದ ಪ್ರಧಾನಿ ಕಾರ್ಯಕ್ರಮ ಪೂರ್ವ ನಿಯೋಜಿತ ವೇಳಾಪಟ್ಟಿಯಂತೆ ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ 1.05ಕ್ಕೆ ಬೆಂಗಳೂರಿನ ಎಚ್‌ಎಎಲ್ (HAL) ವಿಮಾನ ನಿಲ್ದಾಣಕ್ಕೆ ತಲುಪಬೇಕಿತ್ತು. ಅಲ್ಲಿಂದ ಅವರು ವಿಶೇಷ ವಿಮಾನದ ಮೂಲಕ ಹೈದರಾಬಾದ್‌ಗೆ ಪ್ರಯಾಣ ಬೆಳೆಸಬೇಕಿತ್ತು. ಆದರೆ, ಸ್ಫೋಟಕಗಳು ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅವರ ಪ್ರಯಾಣದಲ್ಲಿ ವಿಳಂಬವಾಗಿದೆ. ಸದ್ಯ ಪ್ರಧಾನಿಗಳು ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲೇ ಉಳಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರಿಂದ ಓರ್ವನ ಬಂಧನ ಘಟನೆ ನಡೆದ ತಕ್ಷಣವೇ ಕಾರ್ಯಪ್ರವೃತ್ತರಾದ ಬೆಂಗಳೂರು ಪೊಲೀಸರು ಸ್ಫೋಟಕಗಳಿದ್ದ ಸ್ಥಳವನ್ನು ತಮ್ಮ ಸುಪರ್ದಿಗೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ…

Read More

ಚೈನ್ನೈ : ತಮಿಳುನಾಡಿನಲ್ಲಿ ಮೊಟ್ಟ ಮೊದಲ ಬಾರಿಗೆ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಅಧಿಕಾರಕ್ಕೆ ಬಂದಿದ್ದು, ಇಂದು ಚೆನ್ನೈನ ಜವಾಹರ್ಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ವೇಳೆ ನಟ ವಿಜಯ್ ಪ್ರಮಾಣ ವಚನ ಸ್ವೀಕರಿಸಿ ಇದೀಗ ಮುಖ್ಯಮಂತ್ರಿ ಕುರ್ಚಿಯನ್ನು ಅಲಂಕರಿಸಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಕುರ್ಚಿ ಅಲಂಕರಿಸಿದ ಸಿಎಂ: ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವೇದಿಕೆಯ ಮೇಲೆ ಸಿದ್ಧಪಡಿಸಲಾಗಿದ್ದ ಮುಖ್ಯಮಂತ್ರಿಗಳ ಅಧಿಕೃತ ಆಸನದ ಬಳಿ ಬಂದ ವಿಜಯ್, ಕೆಲ ಕ್ಷಣಗಳ ಕಾಲ ಕುರ್ಚಿಯನ್ನೇ ದಿಟ್ಟಿಸಿ ನೋಡಿದರು. ನಂತರ ಭಾವುಕರಾಗಿ ಕೈಮುಗಿದು, ಅತ್ಯಂತ ನಿಧಾನವಾಗಿ ಸಿಎಂ ಕುರ್ಚಿಯ ಮೇಲೆ ಆಸೀನರಾದರು. ಬೆಳ್ಳಿತೆರೆಯ ಮೇಲೆ ಮಾಸ್ ಎಂಟ್ರಿ ನೀಡುವಂತೆ, ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಕುರ್ಚಿ ಅಲಂಕರಿಸಿದ ದಳಪತಿಯನ್ನು ಕಂಡು ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಮಹಿಳಾ ಸುರಕ್ಷತೆ ಮತ್ತು ಉಚಿತ ವಿದ್ಯುತ್‌ಗೆ ಆದ್ಯತೆ: ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ವಿಜಯ್ ಅವರು ಜನರ ನಿರೀಕ್ಷೆಯಂತೆ ಜನಪರ ಯೋಜನೆಗಳಿಗೆ ಚಾಲನೆ ನೀಡಿದರು. ತಮ್ಮ ಮೊದಲ…

Read More

ಚಾಮರಾಜನಗರ : ನಾಡಿನ ಪ್ರಸಿದ್ಧ ಯಾತ್ರಾಸ್ಥಳವಾದ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ದಾಳಿ ನಡೆಸಿದ್ದು, ಪಾಲಕರ ಜೊತೆ ಬಂದಿದ್ದ ಬಾಲಕ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಲಗ್ಗೆರೆ ವಾರ್ಡ್‌ನ ನಿವಾಸಿ ಸುರೇಶ ಎಂಬವರ ಪುತ್ರ ಹರ್ಷಿತ್ ಚಿರತೆ ದಾಳಿಯಿಂದ ಮೃತಪಟ್ಟಿದ್ದಾನೆ. ಲಗ್ಗೆರೆ ವಾರ್ಡ್‌ನ ನಿವಾಸಿಗಳು ಶನಿವಾರ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ ಪಡೆದ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ 10ಕ್ಕೂ ಹೆಚ್ಚು ಜನರು ನಾಗಮಲೆಗೆ ತೆರಳುತ್ತಿದ್ದಾಗ ಇಂಡಿಗನತ್ತ ಗ್ರಾಮದ ಸಮೀಪ ಬಾಲಕನ ಮೇಲೆ ಚಿರತೆ ದಾಳಿ ನಡೆಸಿ ಪೊದೆಗೆ ಎಳೆದೊಯ್ದು ಕೊಂದಿದೆ. ಈ ಸಂದರ್ಭದಲ್ಲಿ ಜತೆಗಿದ್ದ ಕುಟುಂಬಸ್ಥರು ಜೋರಾಗಿ ಕಿರುಚಾಡಿದರೂ ಬಿಡದೆ ಎಳೆದೊಯ್ದ ಚಿರತೆ ಬಾಲಕನನ್ನು ಕೊಂದು ಹಾಕಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಪಡೆದು ಶವ ಪತ್ತೆ ಹಚ್ಚಿದ್ದಾರೆ.

Read More