Subscribe to Updates
Get the latest creative news from FooBar about art, design and business.
Author: kannadanewsnow05
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊನೆಗೂ ನೊಬೆಲ್ ಶಾಂತಿ ಪ್ರಶಸ್ತಿ ಸಿಕ್ಕಿದೆ. 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ವೆನೆಜುವೆಲಾದ ವಿರೋಧ ಪಕ್ಷದ ಮಾರಿಯಾ ಕೊರಿನಾ ಮಚಾದೋ ಅವರು ತನಗೆ ಸಿಕ್ಕಿದ್ದ ಪ್ರಶಸ್ತಿಯನ್ನು ಟ್ರಂಪ್ ಅವರಿಗೆ ನೀಡಿದ್ದಾರೆ. ಹೌದು ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪುರಸ್ಕಾರವನ್ನು ಡೊನಾಲ್ಡ್ ಟ್ರಂಪ್ಗೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಟ್ರಂಪ್ ಈ ಪ್ರಶಸ್ತಿಯನ್ನು ಬಹುಕಾಲದಿಂದ ಬಯಸಿದ್ದರು. ನೊಬೆಲ್ ಸಮಿತಿಯ ನಿಯಮದಂತೆ ಪ್ರಶಸ್ತಿಯನ್ನು ವರ್ಗಾಯಿಸಲು ಸಾಧ್ಯವಿಲ್ಲವಾದರೂ, ಮಚಾದೊ ಅವರ ಈ ನಡೆ ವೆನೆಜುವೆಲಾಗೆ ಅಮೆರಿಕದ ಬೆಂಬಲ ಬಲಪಡಿಸಲು ರೂಪಿಸಿದ ರಾಜಕೀಯ ತಂತ್ರ ಎಂದು ವಿಶ್ಲೇಷಿಸಲಾಗಿದೆ. ಮಚಾದೊ ಅವರು ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ವಾಷಿಂಗ್ಟನ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಚಾದೊ, ಅಧ್ಯಕ್ಷ ಟ್ರಂಪ್ಗೆ ಪುರಸ್ಕಾರ ಪ್ರಧಾನ ಮಾಡಿರುವುದಾಗಿ ಹೇಳಿದರು. ಟ್ರಂಪ್ ಅದನ್ನು ಸ್ವೀಕರಿಸಿದ್ದಾರೆಯೇ ಎಂದು ಅವರು ಹೇಳಲಿಲ್ಲ. ಈ ವಿಷಯದ ಕುರಿತು ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಲು ಮಚಾದೊ ನಿರಾಕರಿಸಿದರು.…
ಚಾಮರಾಜನಗರ : ಚಿರತೆಯೊಂದು ದನ ಕರುಗಳನ್ನು ಬೇಟೆಯಾಡುತ್ತಿದ್ದ ಬಿಸತ್ತ ವ್ಯಕ್ತಿ ಅದಕ್ಕೆ ವಿಷ ಹಾಕಿ ಕೊಲೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಚಾಮರಾಜನಗರ ಬಫರ್ ಅಧಿಕಾರಿಗಳು ಓರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನ ಚಾಮರಾಜನಗರ ತಾಲೂಕಿನ ಆಲೂರು ಹೊಮ್ಮ ಗ್ರಾಮದ ದೊರೆಸ್ವಾಮಿ( 60) ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಜಮೀನು ಸಮೀಪ ಚಿರತೆಯ ಕಳೇಬರ ಪತ್ತೆಯಾಗಿತ್ತು. 5-6 ವರ್ಷ ವಯಸ್ಸಿನ ಗಂಡು ಚಿರತೆ ಇದಾಗಿದ್ದು, ಇದರ ಸಾವಿಗೆ ವಿಷವೇ ಕಾರಣ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ಬೆಳಕಿಗೆ ಬಂದಿತ್ತು. ಅನುಮಾನದ ಹಿನ್ನೆಲೆ ದೊರೆಸ್ವಾಮಿಯನ್ನು ವಿಚಾರಿಸಿದಾಗ ಸತ್ಯಾಂಶ ಹೊರಬಂದಿದೆ. ವಿಚಾರಣೆ ವೇಳೆ ಚಿರತೆಯು ಬೇಟೆಯಾಡಿದ್ದ ಮಾಂಸಕ್ಕೆ ವಿಷ ಬೆರೆಸಿ ಜಾನುವಾರುಗಳ ಸಾವಿಗೆ ಸೇಡು ತೀರಿಸಿಕೊಂಡಿರುವುದಾಗಿ ದೊರೆಸ್ವಾಮಿ ಬಾಯಿ ಬಿಟ್ಟಿದ್ದಾನೆ. ಚಿರತೆಗೆ ವಿಷ ಹಾಕಿ ಕೊಂದಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದು, ಈ ಹಿನ್ನೆಲೆ ದೊರೆಸ್ವಾಮಿ ಎಂಬ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಲು ಇನ್ಮುಂದೆ `ವಾಟರ್ ಬೆಲ್’ ಎಂಬ ಸಮಯ ನಿಗದಿ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದೆ. ಮಕ್ಕಳು ಆಗಾಗ ನೀರು ಕುಡಿಯಲು ಜ್ಞಾಪಿಸಲು ‘ನೀರಿನ ಗಂಟೆ’ (ವಾಟರ್ಬೆಲ್) ಬಾರಿ ಸುವ ನಿಯಮ ಜಾರಿ ಗೊಳಿಸುವಂತೆ ಪಿಎಂ ಪೋಷಣ್ ಶಕ್ತಿ ಶಾಲೆಗಳಿಗೆ ಸೂಚಿಸಿದ್ದಾರೆ. ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಬೇಕೆಂಬ ಅರಿವು ಅಷ್ಟಾಗಿ ಇರುವುದಿಲ್ಲ. ಮಕ್ಕಳ ಬೆಳವಣಿಗೆಗೆ ಮತ್ತು ಆರೋಗ್ಯಕ್ಕೆ ನೀರು ಅತ್ಯವಶ್ಯಕವಾಗಿರುತ್ತದೆ. ಜೊತೆಗೆ ದೇಹದ ಉಷ್ಣತೆಯನ್ನು ನಿಯಂತ್ರಿಸುವುದರ ಜೊತೆಗೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಹೀಗಾಗಿ ರಾಜ್ಯದಲ್ಲಿರುವ ಎಲ್.ಕೆ.ಜಿ, ಯು.ಕೆ.ಜಿ ಒಳಗೊಂಡಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ಆಗಾಗ ನೀರು ಕುಡಿಯುವಂತೆ ಜ್ಞಾಪಿಸಲು ವಾಟರ್ ಬೆಲ್ ಅನುಷ್ಠಾನಗೊಳಿಸಲು ಸೂಚನೆ ನೀಡಿದೆ. 2022ರಲ್ಲೇ ನಿಯಮ ಜಾರಿಗೆ ಬಂದಿ ದ್ದರೂ ಸರಿಯಾಗಿ ಪಾಲನೆಯಾಗದ ಹಿನ್ನೆಲೆ ವಾಟರ್ಬೆಲ್ ನಿಯಮ ಜಾರಿಗೆ ಕ್ರಮ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಗೆ ರಾಜ್ಯ…
ಬೆಂಗಳೂರು : ರಾಜ್ಯದಲ್ಲಿ ಸಿಎಂ ಸ್ಥಾನಕ್ಕಾಗಿ ಈಗಾಗಲೇ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆದಿದ್ದು, ಇದರ ಮಧ್ಯ ದಲಿತ ಸಿಎಂ ಕೂಡ ಕೇಳಿ ಬರುತ್ತಿದೆ. ಈ ವಿಚಾರವಾಗಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಮಾತನಾಡಿದ್ದು, ದಲಿತರೊಬ್ಬರು ಸಿಎಂ ಆಗದಿರುವ ಬಗ್ಗೆ ನಮಗೆ ನೋವಿದೆ. ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲವೂ ಆಗುತ್ತದೆ ಎಂದಿದ್ದಾರೆ. ಬೆಂಗಳೂರಲ್ಲಿ ದಲಿತ ಸಿಎಂ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡಬೇಕು. ಮಲ್ಲಿಕಾರ್ಜುನ ಖರ್ಗೆ ಕಾಲದಲ್ಲೇ ಆಗಬೇಕು ಎಂದು ಇತ್ತು. ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲ ಆಗುತ್ತದೆ. ಹೈಕಮಾಂಡ್ಗೆ ಯಾವ ಕಾಲದಲ್ಲಿ ಏನು ಆಗಬೇಕು ಅಂತ ಗೊತ್ತಿದೆ. ಮಾಡುವ ಸ್ಥಾನದಲ್ಲಿ ಖರ್ಗೆಯವರು ಕೂತಿದ್ದಾರೆ. ನಾವು ಇನ್ನೇನು ಮಾತನಾಡೋದು ಎಂದರು. ನಮಗೆ ಇದೊಂದು ನೋವಿದೆ. ಶೇ25ರಷ್ಟು ಇರುವ ಸಮುದಾಯ ಶೇ75ರಷ್ಟು ಮತಗಳನ್ನು ಕಾಂಗ್ರೆಸ್ಗೆ ಹಾಕುತ್ತಾರೆ. ಇದೆಲ್ಲವನ್ನೂ ಹೈಕಮಾಂಡ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. 2028ಕ್ಕೆ ಮತ್ತೆ ಅಧಿಕಾರಕ್ಕೆ ಬರೋದು ನಮ್ಮ ದೃಷ್ಟಿಕೋನ ಎಂದು ಪರೋಕ್ಷವಾಗಿ ದಲಿತ ಸಿಎಂ ಪರ…
ಬೆಂಗಳೂರು : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಸಭೆ ಆಯುಕ್ತೆ ಅಮೃತ ಗೌಡಗೆ ಅಕ್ರಮವಾಗಿ ಕಟ್ಟಿದ್ದ ಬ್ಯಾನರ್ ತೆಗೆಸಿದ್ದಕ್ಕೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಿಂದನೆ ಮಾಡಿದ್ದು ಅಲ್ಲದೆ ಜೀವ ಬೆದರಿಕೆ ಹಾಕಿದ್ದ. ಈ ವಿಚಾರವಾಗಿ ಸಚಿವ ಮುನಿಯಪ್ಪ ರಾಜೀವ್ ಗೌಡ ಪರ ಬ್ಯಾಟ್ ಬೀಸಿದ್ದು, ಆತ ಒಬ್ಬ ಸೌಮ್ಯ ಸ್ವಭಾವದವನು ಎಂದಿದ್ದಾರೆ. ಆತನನ್ನು ಕರೆದು ಬುದ್ದಿ ಹೇಳುತ್ತೇನೆ. ರಾಜಕೀಯದಲ್ಲಿರುವ ವ್ಯಕ್ತಿ ಶಾಂತ ಸ್ವಭಾವದಿಂದ ಇರಬೇಕು. ಅಧಿಕಾರದಲ್ಲಿರುವವರಿಗೆ ಹೀಗೆ ಮಾತನಾಡಬಾರದು. ಕೂಲಂಕಷವಾಗಿ ಯೋಚಿಸಬೇಕು. ಹೀಗೆಲ್ಲ ಮಾತನಾಡಬಾರದು. ಜೆಡಿಎಸ್ನವರು ಹಿಂದೆ ಬ್ಯಾನರ್ ಹಾಕಿದಾಗ ಈ ಅಧಿಕಾರಿ ತೆಗೆದಿಲ್ಲ. ಈಗ ತೆಗೆದ್ರು ಎಂಬುದುರ ರಾಜೀವ್ ಗೌಡ ವಾದ. ಆದರೆ, ಹೀಗೆ ಮಾತನಾಡುವುದು ಅನಾಗರೀಕತೆ ಆಗುತ್ತದೆ. ಸುಸಂಸ್ಕೃತರು ಹೀಗೆಲ್ಲ ಮಾತನಾಡಬಾರದು ಎಂದರು. ರಾಜೀವ್ ಗೌಡ ಹೇಳುವ ಪ್ರಕಾರ ಅವರ ಹಿನ್ನೆಲೆಯನ್ನು ನೋಡಿದಾಗ ಅವರ ಅಭಿಪ್ರಾಯದಲ್ಲಿ ಜೆಡಿಎಸ್ ಬ್ಯಾನರ್ ತೆಗೆಸಿರಲಿಲ್ಲ, ಜೆಡಿಎಸ್ನ ಪೋಸ್ಟರ್ ಬ್ಯಾನರ್ ತೆಗೆಯುತ್ತಿಲ್ಲ ಆ ಅಧಿಕಾರಿ. ಕೇವಲ ಕಾಂಗ್ರೆಸ್ನದ್ದು ಮಾತ್ರ ತೆಗೆದಿದ್ದಾರೆ ಎಂಬುದು ರಾಜೀವ್…
ಬೆಂಗಳೂರು : ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವಾಗಿ ಮಹತ್ವದ ಸುಳಿವು ನೀಡಿದ್ದಾರೆ. ಯಾವಾಗ ರಾಜಕಾರಣಕ್ಕೆ ಬರಬೇಕು ಎಂದು ತೀರ್ಮಾನಿಸುತ್ತೇನೆ ಎಂದು ಹೇಳುವ ಮೂಲಕ ರಾಜರಾಜಕಾರಣಕ್ಕೆ ಬರುವ ಕುರಿತು ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪರೋಕ್ಷವಾಗಿ 2028ಕ್ಕೆ ರಾಜ್ಯ ರಾಜಕೀಯಕ್ಕೆ ಬರುವ ಬಗ್ಗೆ ಸುಳಿವು ನೀಡಿದ್ದಾರೆ.ನಾನು ಎಲ್ಲಿರಬೇಕು ಅಂತ ರಾಜ್ಯದ ಜನ ತೀರ್ಮಾನ ಮಾಡುತ್ತಾರೆ. ಬಿಜೆಪಿ ಮತ್ತು ನಾವು ಮೈತ್ರಿ ಮಾಡಿಕೊಂಡಿದ್ದು ಯಾವುದೇ ರೀತಿ ಗೊಂದಲ ಇರಬಾರದು ರಾಜ್ಯದಲ್ಲಿ ಒಳ್ಳೆ ಸರ್ಕಾರ ಅಧಿಕಾರಕ್ಕೆ ಬಂದವು ಜನರು ನೆಮ್ಮದಿಯಾಗಿ ಇರಬೇಕು ಎಂದು ಅವರು ತಿಳಿಸಿದರು
ಈ ಪೂಜೆ ಹೆಣ್ಣುಮಕ್ಕಳಿಗೆ ಮಾತ್ರ. ಹುಡುಗರಿಗೆ ಮಾಡಬಾರದಾ ಎಂದು ಕೆಲವರು ಕೇಳಬಹುದು. ಅದರಲ್ಲೂ ಹೆಣ್ಣು ಮಕ್ಕಳಿಗೆ ಮಾತ್ರ ಈ ಪೂಜೆ. ಕೆಲವು ಮನೆಗಳಲ್ಲಿ ಹುಡುಗಿಯರು ದಡ್ಡರು. ಅವರು ಕಡಿಮೆ ಸೌಂದರ್ಯ, ಜ್ಞಾನ, ಪ್ರತಿಭೆ ಮತ್ತು ಕ್ರಿಯಾಶೀಲತೆಯನ್ನು ಹೊಂದಿದ್ದಾರೆ. ಅದನ್ನು ದೂಷಿಸುತ್ತಿಲ್ಲ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564. ಹೇಗಾದರೂ, ಮಹಾಲಕ್ಷ್ಮಿ ಅಂಶವು ಲಕ್ಷಣದೊಂದಿಗೆ ಹೊಂದಿಕೆಯಾಗಿದ್ದರೆ ಮಾತ್ರ…
BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : 11 ಎಕರೆ ಆಸ್ತಿಗಾಗಿ ಅಜ್ಜಿಯನ್ನೇ ಭೀಕರವಾಗಿ ಕೊಲೆ ಮಾಡಿದ ಪಾಪಿಗಳು!
ಬಾಗಲಕೋಟೆ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು 11 ಎಕರೆ ಆಸ್ತಿಗಾಗಿ ಅಜ್ಜಿಯನ್ನೇ ಭೀಕರವಾಗಿ ಆಕೆಯ ಅಣ್ಣನ ಮಕ್ಕಳು ಕೊಲೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಜಗಳದಾಳದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಆಸ್ತಿಗಾಗಿ ದಾನಜ್ಜಿ ಎಂದೇ ಖ್ಯಾತಿಯಾಗಿದ್ದ ಚಂದ್ರವ್ವ ನೀಲಗಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ದಾನಜ್ಜಿ ಎಂದೆ ಹೆಸರಾಗಿದ್ದ ಚಂದ್ರವ್ವ ನೀಲಗಿಯ ಭೀಕರ ಕೊಲೆಯಾಗಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ದಾನಜ್ಜಿಯ ಅಣ್ಣನ ಮಕ್ಕಳು ಈ ಒಂದು ಕೊಲೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮ ದಾನಜ್ಜಿಯನ್ನು ಕೊಲೆ ಮಾಡಿದ್ದಾರೆ. ತರಕಾರಿ ಮಾರಿ ಹಲವಾರು ದಾನ ಧರ್ಮ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅಲ್ಲದೆ ತೇರದಾಳದಾ ಪ್ರಭುಲಿಂಗ ದೇವಸ್ಥಾನಕ್ಕೆ 16 ಲಕ್ಷ ಮೌಲ್ಯದ ಬೆಳ್ಳಿಯ ಬಾಗಿಲು ದಾನ ಮಾಡಿದ್ದು, 3 ಲಕ್ಷ ಹಣದಲ್ಲಿ ಕೊಠಡಿಯನ್ನು ನಿರ್ಮಾಣ ಮಾಡಿದ್ದರು. ದೇವಸ್ಥಾನದ ಬಳಿ 60 ವರ್ಷದಿಂದ ತರಕಾರಿ ಮಾರಾಟ ಮಾಡುತ್ತಿದ್ದರು. 2022 ರಲ್ಲಿ ಪ್ರಭುಲಿಂಗ ದೇವರಿಗೆ 16…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರ ಸಭೆ ಆಯುಕ್ತೆ ಅಮೃತ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಕ್ರಮವಾಗಿ ಕಟ್ಟಿದ ಬ್ಯಾನರ್ ತೆಗೆದಿದ್ದಕ್ಕೆ ಅವಾಚ್ಯ ಪದಗಳಿಂದ ನಿಂದಿಸಿದ್ದು ಅಲ್ಲದೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ನಡೆದಿತ್ತು. ಇದೀಗ ಈ ಒಂದು ವಿಚಾರವಾಗಿ ರಾಜೀವ್ ಗೌಡನ ಮತ್ತೊಂದು ದಾದಾಗಿರಿ ಬಯಲಾಗಿದ್ದು, ಶಿಡ್ಲಘಟ್ಟದ ತಹಶೀಲ್ದಾರ್ಗೂ ಕೂಡ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಏಕವಚನದಲ್ಲಿ ಬೈದಿರುವ ಆರೋಪ ಕೇಳಿ ಬಂದಿದೆ. ತಹಶೀಲ್ದಾರ್ ಆಗಿರುವ ಗಂಗನ ಸಿಂಧು ಇದೇ ರಾಜೇಗೌಡ ಕೆಲವು ದಿನಗಳ ಹಿಂದೆ ನನಗೆ ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಕೆಲ ದಿನಗಳ ಹಿಂದೆ ಅಷ್ಟೇ ಗಗನ ಸಿಂಧು ಅವರಿಗೆ ಏಕ ವಚನದಲ್ಲಿ ರಾಜೀವ್ ಗೌಡ ಬೈದಿರುವ ಆರೋಪ ಕೇಳಿ ಬಂದಿದೆ. ಅಮೃತ ಮತ್ತು ಸಚಿವ ಸುಧಾಕರ್ ಬಳಿ ಗಗನಸಿಂಧು ಈ ರೀತಿ ನನಗೆ ನಿಂದಿಸಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ. ಆದರೆ ಬೈದಿರುವ ಆಡಿಯೋ ಗಗನ ಸಿಂಧು ರೆಕಾರ್ಡ್ ಮಾಡಿಕೊಂಡಿಲ್ಲ.
ಬೆಂಗಳೂರು : ರಾಯಚೂರಿನ ತಿಂಥಣಿಯ ಕನಕ ಗುರು ಪೀಠದ ಶ್ರೀ ಸಿದ್ದರಮಾನಂದ ಶ್ರೀಗಳು ಇಂದು ಬೆಳಿಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶ್ರೀಗಳ ನಿಧನಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ. ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಶ್ರೀಗಳ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ, ಶ್ರೀ ಮಠದ ಭಕ್ತಾದಿಗಳು ಹಾಗೂ ಅಪಾರ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಸಂತಾಪ ಸೂಚಿಸಿದ್ದಾರೆ. https://twitter.com/siddaramaiah/status/2011655898067058930?t=XnJvEKL1DnP5J3EEgCceOA&s=19














