Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ದೆವ್ವ ಹಿಡಿದಿದೆ ಅಂತ ಮಹಿಳೆಯ ಬರ್ಬರ ಕೊಲೆ ಮಾಡಲಾಗಿದೆ. ಬೇವಿನ ಕಟ್ಟಿಗೆಯಿಂದ ಹೊಡೆದು ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ ಕಲ್ಬುರ್ಗಿ ಮೂಲದ ಮಹಿಳೆಯನ್ನು ಮಹಾರಾಷ್ಟ್ರದಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಸಂಬಂಧಿಕರು ಮಹಿಳೆಯನ್ನು ಹೊಡೆದು ಕೊಲೆ ಮಾಡಿದ್ದಾರೆ 38 ವರ್ಷದ ಮುಕ್ತಬಾಯಿ ಕೊಲೆಯಾದ ಮಹಿಳೆ ಎಂದು ತಿಳಿದು ಬಂದಿದೆ. ಕಲಬುರ್ಗಿಯ ಆಳಂದದ ನಿವಾಸಿಯಾಗಿರುವ ಮುಕ್ತಬಾಯಿ ಆಗಿರುವ ಈಕೆ ಮಹಾರಾಷ್ಟ್ರದ ಮುರುಮ್ ಗ್ರಾಮದಲ್ಲಿ ಭೀಕರವಾಗಿ ಕೊಲೆಯಾಗಿದ್ದಾಳೆ. ಕಾರಣ ಏನೆಂದರೆ ಈಕೆಗೆ ದೆವ್ವ ಮೆತ್ತಿ ಕೊಂಡಿದೆ ಅದನ್ನ ಬಿಡಿಸುತ್ತೇವೆ ಅಂತ ಹೇಳಿ ಬೇವಿನ ಕಟ್ಟಿಗೆನಿಂದ ಹೊಡೆದು ಕೊಲೆ ಮಾಡಿದ್ದಾರೆ ಬೇವಿನ ಕಟ್ಟಿಗೆಯಿಂದ ಹೊಡೆದರೆ ದೆವ್ವ ಬಿಟ್ಟು ಹೋಗುತ್ತದೆ ಎನ್ನುವ ನಂಬಿಕೆಯಿಂದ ಹೊಡೆದು ಹೊಡೆದು ಕೊಲೆ ಮಾಡಿದ್ದಾರೆ ಎಂದು ಮುಕ್ತ ಬಾಲ್ಯ ಸಂಬಂಧಿಕರು ಗಂಭೀರವಾಗಿ ಆರಂಭಿಸಿದ್ದಾರೆ. ಏಕಾಏಕಿ ತಲೆ ಸುತ್ತಿನಿಂದ ಮುಕ್ತಾಭಾಯಿ ಮನೆಯ ಮಳೆ ಬಂದು ಬಿದ್ದಿದ್ದಾಳೆ. ದೆವ್ವ ಹಿಡಿದಿದೆ ಅಂತ ಮುಕ್ತಾಭಾಯಿ ಮೇಲೆ ಹಲ್ಲೆ ಮಾಡಿದ್ದಾರೆ ಕಳೆದ ನಾಲ್ಕು ದಿನಗಳ ಹಿಂದೆ…
ಮೈಸೂರು : ಮೈಸೂರು ಅರಮನೆ ಎದುರು ಹೀಲಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ತನಿಖೆಯ ವೇಳೆ ಮೃತ ಸಲೀಂ ಸೈಕಲ್ ನಲ್ಲಿ ಇದ್ದಂತಹ ಅರ್ಧ ಕೆಜಿ ಹಿಲಿಯಂ ಪೌಡರ್ ನನ್ನು ವಶ ಪಡಿಸಿಕೊಂಡಿದ್ದಾರೆ. ಹೌದು ಮೈಸೂರು ಅರಮನೆ ಬಳಿ ಹೀಲಿಯಮ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಸಲೀಂ ಸೈಕಲ್ನಲ್ಲಿ ಇಟ್ಟುಕೊಂಡು ಬಲೂನ್ ಮಾರಾಟ ಮಾಡುತ್ತಿದ್ದ ಸ್ಪೋಟದ ಸ್ಥಳದಲ್ಲಿ ಇದೀಗ ಅರ್ಧ ಕೆಜಿ ಹಿಲಿಯಂ ಪೌಡರ್ ತುಂಬಿದ ಚೀಲ ಪತ್ತೆಯಾಗಿದೆ. ಪೊಲೀಸ್ ಪರಿಶೀಲನೆಯ ವೇಳೆ ಪೊಲೀಸರು ಹಿಲಿಯಂ ಪೌಡರನ್ನು ಅಶಕ್ಕೆ ಪಡೆದುಕೊಂಡಿದ್ದಾರೆ. ಹಿಲಿಯಂ ಗ್ಯಾಸ್ ರೆಫೀಲ್ ಮಾಡಲು ಅರ್ಧ ಗಂಟೆ ಬೇಕು ಜನನಿ ನಿಬಿಡ ಪ್ರದೇಶದಲ್ಲಿ ಹೀಲಿಯಂ ತಯಾರಿಸಲು ಸಾಧ್ಯವಿಲ್ಲ ಹೀಗಿದ್ದರೂ ಕೂಡ ಸಲೀಂ ಜೊತೆಯಲ್ಲಿಯೇ ಹಿಲಿಯಂ ಪೌಡರ್ ಇಟ್ಟುಕೊಂಡಿದ್ದು ಯಾಕೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಅನುಮಾನಕ್ಕೆ ಇದೀಗ ಹಿಲಿಯಂ ಪೌಡರ್ ಕಾರಣವಾಗಿದ್ದು ಅದನ್ನು ಸಂಗ್ರಹಿಸಲಾಗಿದೆ.
ಬೆಂಗಳೂರು : ಡೈವೋರ್ಸ್ ಪ್ರಕರಣಗಳಲ್ಲಿ ಪತ್ನಿ ಮತ್ತು ಮಕ್ಕಳ ಮಾಸಿಕ ಜೀವನಾಂಶ ಪಾವತಿಸಲು ಕೋರಿ ಸಿಆರ್ಪಿಸಿ 125 ಅಡಿಯಲ್ಲಿ ಸಲ್ಲಿಸುವ ಅರ್ಜಿಗಳ ವಿಚಾರಣೆ ನಡೆಸಿ ಆದೇಶಗಳನ್ನು ಹೊರಡಿಸುವ ಸಂದರ್ಭಗಳಲ್ಲಿ ಲುಕ್ಔಟ್ ನೋಟಿಸ್ ಜಾರಿ ಮಾಡಲು ಕೌಟುಂಬಿಕ ನ್ಯಾಯಾಲಯಕ್ಕೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಕೌಟುಂಬಿಕ ನ್ಯಾಯಾಲಯಕ್ಕೆ ಲುಕ್ಔಟ್ ನೋಟಿಸ್ ಜಾರಿ ಮಾಡುವುದಕ್ಕೆ ಅಧಿಕಾರವಿಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಹಲವು ಪ್ರಕರಣಗಳಲ್ಲಿ ತಿಳಿಸಿದೆ. ಸುಪ್ರೀಂಕೋರ್ಟ್ನ ಆದೇಶದ ಹೊರತಾಗಿಯೂ ಲುಕ್ಔಟ್ ನೋಟಿಸ್ ಮುಂದುವರೆಸುವುದು ಕಾನೂನುಬಾಹಿರವಾಗಿದೆ. ಇದು ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಪೀಠ ಹೇಳಿದೆ. ಮಾಸಿಕ ಜೀವನಾಂಶ ಪಾವತಿ ಮಾಡದ ಹಿನ್ನೆಲೆಯಲ್ಲಿ, ಕೌಟುಂಬಿಕ ನ್ಯಾಯಾಲಯವು ಜಾರಿ ಮಾಡಿದ್ದ ಲುಕ್ಔಟ್ ನೋಟಿಸ್ ಪ್ರಶ್ನಿಸಿ, ಪ್ರಸ್ತುತ ಕುವೈತ್ನಲ್ಲಿ ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಮೂಲದ ಮಹಮ್ಮದ್ ಅಜೀಂ ಎಂಬವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನೆಗಂಟ್ಟಿ ಅವರಿದ್ದ ನ್ಯಾಯಪೀಠ, ಸೆಪ್ಟೆಂಬರ್ 22ರಂದು ಈ…
ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಯರಿಗೆ ಬೀದಿ ಪುಂಡರು ಕಿರುಕುಳ ನೀಡಿದ್ದಾರೆ. ಬೈಕ್ ನಲ್ಲಿ ಹೋಗುತ್ತಿದ್ದ ಯುವತಿಯನ್ನು ಕಿಡಿಗೇಡಿಗಳು ಫಾಲೋ ಮಾಡಿ ಕಿರುಕುಳ ನೀಡಿದ್ದಾರೆ. ಸುಮಾರು 2 ಕಿಲೋಮೀಟರ್ ವರೆಗೂ ಯುವತಿಯನ್ನು ಪುಂಡರು ಫಾಲೋ ಮಾಡಿದ್ದಾರೆ. ಒಂದೇ ಬೈಕ್ ನಲ್ಲಿ ಮೂವರು ಪುಂಡರು ಯುವತಿಯನ್ನು ಫಾಲೋ ಮಾಡಿ ಕಿರುಕುಳ ನೀಡಿದ್ದಾರೆ. ಯುವತಿ ಸ್ಕೂಟಿ ಮೇಲೆ ತೆರಳುತ್ತಿದ್ದರೆ, ಮತ್ತೊಂದು ಸ್ಕೂಟಿಯಲ್ಲಿ ಪುಂಡರು ಯುವತಿ ಹತ್ತಿರ ಅಡ್ಡಾದಿಡ್ಡಿ ಹಿಂದೆ ಮುಂದೆ ಚಲಿಸಿದ್ದಾರೆ. ಬೇಕು ಬೇಕು ಅಂತಾನೆ ಆಕೆಯ ಪಕ್ಕದಲ್ಲಿ ಬೈಕ್ ಚಲಾಯಿಸಿದ್ದಾರೆ ಕಾರಿನಲ್ಲಿ ಹಿಂದೆ ಬರುತ್ತಿದ್ದ ವ್ಯಕ್ತಿ ಈ ವಿಡಿಯೋ ಸೆರೆ ಹಿಡಿದು ವಿಡಿಯೋ ಸಮೇತ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.
ಬೆಳಗಾವಿ : ದಂಪತಿ ಮತ್ತು ಮಕ್ಕಳ ಮೇಲೆ ಬೀದಿ ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ರಸ್ತೆಯಲ್ಲಿ ಹೋಗುತ್ತಿದ್ದಾಗ ಬೀದಿ ನಾಯಿಗಳು ಏಕಾಏಕಿ ಮಕ್ಕಳ ಮೇಲೆ ದಾಳಿ ಮಾಡಿವೆ ಬೆಳಗಾವಿಯ ಜೋಶಮಾಳಾದಲ್ಲಿ ಈ ಒಂದು ಘಟನೆ ನಡೆದಿದೆ. ಬೆಳಗಾವಿಯ ಜೋಶಮಾಳಾದಲ್ಲಿ ಟ್ಯೂಷನ್ ಮುಗಿಸಿಕೊಂಡು ಮಕ್ಕಳೊಂದಿಗೆ ತಾಯಿ ಒಬ್ಬರು ಬರುತ್ತಿದ್ದರು. ಈ ವೇಳೆ ಗುಂಪು ಕಟ್ಟಿಕೊಂಡು ನಾಯಿಗಳು ದಾಳಿ ಮಾಡಿದಂತಹ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೂದಲೆಳೆ ಅಂತರದಲ್ಲಿ ಮಕ್ಕಳು ಹಾಗೂ ಮಹಿಳೆ ಪಾರಾಗಿದ್ದಾರೆ. ಹೊರಗಡೆ ಓಡಾಡೋದಕ್ಕೂ ನಿವಾಸಿಗಳು ಭಯಪಡುತ್ತಿದ್ದಾರೆ ಬೀದಿನಾಯಿಗಳಿಗೆ ಕಡಿವಾಣ ಕಡಿವಾಣ ಹಾಕಿದ್ದರಿಂದ ಮಹಾನಗರ ಪಾಲಿಕೆಗಳ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ಮುಂದುವರೆದಿದ್ದು ಈ ವರ್ಷದಲ್ಲಿ 19769 ಮಂದಿಗೆ ನಾಯಿಗಳು ಕಚ್ಚಿ ಗಾಯಗೊಳಿಸಿವೆ ಜನವರಿಯಿಂದ ಡಿಸೆಂಬರ್ ವರೆಗೆ 19,000ಕ್ಕೂ ಹೆಚ್ಚು ಜನರ ಮೇಲೆ ಬೀದಿನಾಯಿಗಳು ದಾಳಿ ಮಾಡಿವೆ ಬೆಳಗಾವಿ ಜಿಲ್ಲೆ ಮತ್ತು ನಗರದಲ್ಲಿ ಜನರ ಮೇಲೆ ನಾಯಿಗಳು ದಾಳಿ ಮಾಡಿದೆ ಎಂದು…
ಬೆಂಗಳೂರು : ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಮದುವೆಯಾದ ಕೇವಲ 58 ದಿನಗಳಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಮಾಡಿಕೊಂಡಿದ್ದು ಅದರ ಬೆನ್ನಲ್ಲೇ ಆಕೆಯ ಪತಿ ಶಿವರಾಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಷ್ಟೇ ಅಲ್ಲದೆ ಮಗ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ನಾಗಪುರದಲ್ಲಿರುವ ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಹೌದು ಹೌದು ಸೂರಜ್ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ತಾಯಿ ಜಯಂತಿ ಅವರು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ ಮಹಾರಾಷ್ಟ್ರದ ನಾಗಪುರದಲ್ಲಿಯೇ ಜಯಂತಿಯವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರು ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಬೆಂಗಳೂರಿನ ಶ್ರೀನಿವಾಸಪುರದ ಕೋಗಿಲು ಬಳಿ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೋಗಿಲೆ ಲೇಔಟ್ ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಭೇಟಿ ನೀಡಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ ಕೋಸಂಬೇ ಭೇಟಿ ನೀಡಿದ್ದಾರೆ. ಸಂತ್ರಸ್ತರಿಂದ ಆಯೋಗದ ಅಧ್ಯಕ್ಷ ಮಾಹಿತಿ ಸಂಗ್ರಹಿಸಿದ್ದಾರೆ. ಡಿಸೆಂಬರ್ 22 ರಿಂದ 24ರ ವರೆಗೆ ಸಂತ್ರಸ್ತರನ್ನು ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಬೆಂಗಳೂರಿನ ಶ್ರೀನಿವಾಸಪುರದ ಕೋಗಿಲು ಲೇಔಟ್ ನಲ್ಲಿ ಮನೆಗಳ ತೆರವು ಮಾಡಿದ್ದು ಅನೇಕ ವರ್ಷಗಳಿಂದ ನೆಲೆಸಿರುವ ನೂರಾರು ಮುಸ್ಲಿಂ ಕುಟುಂಬಗಳು ಇದೀಗ ಬೀದಿಗೆ ಬಂದಿವೆ. ಸಂತ್ರಸ್ಥರನ್ನು ಭೇಟಿಯಾಗಿ ಅಧ್ಯಕ್ಷ ಶಶಿಧರ್ ಕೋಸಂಬೇ ಧೈರ್ಯ ತುಂಬಿದ್ದರೆ. 18 ವರ್ಷದ ಒಳಗಿನ ಮಕ್ಕಳಿಗೆ ಸಂಕಷ್ಟ ಎದುರಾಗಿದೆ. ಮಕ್ಕಳ ಆರೋಗ್ಯ ಶಿಕ್ಷಣ ಮತ್ತು ರಕ್ಷಣೆಗೆ ಸಂಬಂಧಿಸಿದಂತೆ ತುರ್ತು ಕ್ರಮ ಪುನರ್ವಸತಿ ಕಲ್ಪಿಸುವಂತೆ ಸ್ಥಳದಲ್ಲಿ ಇದ್ದಂತಹ ಅಧಿಕಾರಿಗಳಿಗೆ ಶಶಿಧರ ಸೂಚನೆ ನೀಡಿದ್ದಾರೆ.
ಮಂಡ್ಯ : ಮಂಡ್ಯದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿ ಇದ್ದಂತಹ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿಯ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮಂಡ್ಯ ಜಿಲ್ಲೆಯ ಕಾರು ಚಾಲಕ ಗೋವಿಂದರಾಜು ಹಾಗೂ ಅಶೋಕ್ ಸ್ಥಳದಲ್ಲಿ ಸಾವನಪ್ಪಿದ್ದರೆ, ಇನ್ನೂ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೈಸೂರು : ಇಲ್ಲಿನ ವಿಶ್ವವಿಖ್ಯಾತ ಅರಮನೆ ಬಳಿ ಬಲೂನ್ಗೆ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿ, ಐವರು ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ವಿಶ್ವ ವಿಖ್ಯಾತ ಮೈಸೂರು ಅರಮನೆಯ ಬಳಿ ಜಯಮಾರ್ತಾಂಡ ದ್ವಾರದ ಬಳಿ ಈ ಘಟನೆ ನಡೆದಿದೆ. ಬಲೂನ್ಗೆ ಬಳಸುವ ಹೀಲಿಯಂ ಗ್ಯಾಸ್ನ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಐವರಲ್ಲಿ ಇಬ್ಬರು ಪರಿಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೂಡಲೇ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಸಲೀಂ ಖಮರುದ್ದೀನ್ (40) ಮೃತ ವ್ಯಕ್ತಿ ಎಂದು ತಿಳಿದು ಬಂದಿದ್ದು ಇದೀಗ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೂವಿನ ವ್ಯಾಪಾರಿ ಮಂಜುಳ ಸಹ ಸಾವನ್ನಪ್ಪಿದ್ದಾರೆ ಆ ಮೂಲಕ ಸಾವಿನ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಇದೀಗ ಈ ಒಂದು ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಂಭೀರವಾಗಿ ಗಾಯಗೊಂಡಿದ್ದ ಹೂವಿನ ವ್ಯಾಪಾರಿ ಮಂಜುಳಾ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮಂಜುಳಾ ಸಾವನ್ನಪ್ಪಿದ್ದಾರೆ. ನಿನ್ನೆ ಮೈಸೂರು…
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ನಗರದ ಸಿದ್ದೇಶ್ವರ ನಗರದಲ್ಲಿ ಮನೆಯೊಂದರಲ್ಲಿ ಎಲ್ ಪಿ ಜಿ ಸಿಲಿಂಡರ್ ಸ್ಫೋಟಗೊಂಡು ಮಹೇಶ್ ಎಂಬುವವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಮಹೇಶ್ ಮೋಹಿನಿ ದಂಪತಿ ಮನೆಯಲ್ಲಿ ಇಲ್ಲದಿದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ ಮನೆಯಲ್ಲಿ ಇದಂತಹ 80 ಗ್ರಾಂ ಚಿನ್ನಾಭರಣ, ದವಸ, ಧಾನ್ಯ ಬಟ್ಟೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು ಟಿವಿ, ವಾಷಿಂಗ್ ಮಷೀನ್ ಸೇರಿದಂತೆ ಎಲ್ಲವೂ ಸುಟ್ಟು ಕರಕಲಾಗಿದೆ ವಿಷಯ ತಿಳಿದು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ.














