Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು ಮಚ್ಚಿನಿಂದ ಕೊಚ್ಚಿ ಪತಿ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಕೊಲೆ ನಡೆದಿದೆ. ಮಚ್ಚಿನಿಂದ ಕೊಚ್ಚಿ ದೇವಿಕ (50) ಪತ್ನಿಯನ್ನು ಪತಿ ಕುಮಾರ್ ಕೊಲೆ ಕೊಲೆ ಮಾಡಿದ್ದಾನೆ. ಇತ್ತೀಚಿಗೆ ಕುಟುಂಬದ ಸಮೇತ ಕೇರಳ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಚಾಲಕನ ಜೊತೆಗೆ ಪತ್ನಿ ಮಾತನಾಡಿದ್ದಕ್ಕೆ ಅನುಮಾನ ವ್ಯಕ್ತಪಡಿಸಿದ್ದಾನೆ. ಪತ್ನಿಯ ಮೇಲೆ ಅನುಮಾನ ಹೊಂದಿದ್ದ ಆರೋಪಿ ಪತಿ ಕುಮಾರ್ ನಿನ್ನೆ ರಾತ್ರಿ ಮಲಗಿದ ವೇಳೆ ಮಚ್ಚಿನಿಂದ ಕೊಚ್ಚಿ ದೇವಿಕಾಳನ್ನು ಕೊಲೆ ಮಾಡಿದ್ದಾನೆ ಬಳಿಕ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆರೋಪಿ, ಕುಮಾರ್ನನ್ನು ಮಕ್ಕಳು ತಡೆದಿದ್ದಾರೆ ಸದ್ಯ ಕೊಲೆ ಆರೋಪಿ ಕುಮಾರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯ :- ಜನರ ನಂಬಿಕೆ ವಿಶ್ವಾಸಕ್ಕೆ ಕಳಂಕ ಬಾರದಂತೆ ಸಂಘದ ಮೂಲಕ ಸದಸ್ಯರಿಗೆ ಸಿಗಬಹುದಾದ ಎಲ್ಲಾ ಬಗೆಯ ಸಾಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನೂತನ ನಿರ್ದೇಶಕರಿಗೆ ಶಾಸಕ ಕೆ.ಎಂ.ಉದಯ್ ಕಿವಿಮಾತು ಹೇಳಿದರು. ಮದ್ದೂರು ತಾಲೂಕಿನ ಬೆಳತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ 11 ಅಭ್ಯರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಆರ್ಥಿಕಾಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಗ್ರಾಮದ ಜನರ ನಂಬಿಕೆ ವಿಶ್ವಾಸಕ್ಕೆ ಕಳಂಕ ಬಾರದಂತೆ ಸಂಘದ ಮೂಲಕ ಸದಸ್ಯರಿಗೆ ಸಿಗಬಹುದಾದ ಎಲ್ಲಾ ಬಗೆಯ ಸಾಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ತಿಳಿಸಿದರು. ಸಂಘದ ಷೇರುದಾರರು ರಾಜಕೀಯ ಬೆರೆಸದೆ ಒಗ್ಗಟ್ಟಿನಿಂದ 11 ಮಂದಿ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದು ಸಂತಸದ ಸಂಗತಿಯಾಗಿದ್ದು, ನೂತನ ಆಡಳಿತ ಮಂಡಳಿ ಸಂಘದ ಮತ್ತಷ್ಟು ಉನ್ನತಿಕರಣಕ್ಕೆ ಶ್ರಮಿಸಬೇಕೆಂದರು. ಸಂಘದ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆ ವೇಳೆ…

Read More

ತುಮಕೂರು : ತುಮಕೂರಿನಲ್ಲಿ ಬೆಳ್ಳಂ ಬೆಳಗ್ಗೆ ಸರಗಳ್ಳರು ಅಟ್ಟಹಾಸ ಮೆರೆದಿದ್ದು ವೃದ್ಧೆಯ ಕತ್ತಿನಲ್ಲಿ ಇದ್ದ ಚಿನ್ನದ ಸರಕದ್ದು ಪರಾರಿಯಾಗಿರುವ ಘಟನೆ ತುಮಕೂರಿನ ಮೈದಾಳ ರಸ್ತೆಯಲ್ಲಿ ನಡೆದಿದೆ. ಬೆಳಿಗ್ಗೆ 6:30ಕ್ಕೆ ಈ ಒಂದು ಘಟನೆ ನಡೆದಿದೆ ತುಮಕೂರಿನ ಮೈದಾಳ ರಸ್ತೆಯಲ್ಲಿ ವೃದ್ದೆ ಚಿಲ್ಲರೆ ಅಂಗಡೇ ಇಟ್ಟು ವ್ಯಾಪಾರ ಮಾಡುತ್ತಿದ್ದರು. ಗುಟ್ಕಾ ಕೇಳೋ ನೆಪದಲ್ಲಿ ಬಂದು ಏಕಾಏಕಿ ವೃದ್ದೆಯ ಕತ್ತಿಗೆ ಕೈ ಹಾಕಿ ಚಿನ್ನದ ಸರವನ್ನು ಕಿತ್ತು ಅಲ್ಲಿಂದ ಪರಾರಿಯಾಗಿದ್ದಾರೆ. ಬೆಳಗ್ಗೆ ಆದುದರಿಂದ ವೃದ್ದೆ ಪಾರ್ವತಮ್ಮ ಎಷ್ಟೇ ಕೂಗಾಡಿದರು ಅಲ್ಲಿ ಯಾರು ಜನ ಇರಲಿಲ್ಲ.

Read More

ವಿಜಯಪುರ : ವಿಜಯಪುರದಲ್ಲಿ ಮತ್ತೆ ಬೀದಿ ನಾಯಿಗಳು ಅಟ್ಟಹಾಸ ಮೆರೆದಿವೆ. ವಿಜಯಪುರ ನಗರದ ಕೆಎಸ್ಆರ್ಟಿಸಿ ಕಾಲೋನಿಯಲ್ಲಿ ಈ ಒಂದು ಘಟನೆ ನಡೆದಿದ್ದು ಮನೆ ಮುಂದೆ ನಿಂತಿದ್ದ ಬಾಲಕಿಯ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಅನ್ವಿತ ಪಡ್ಡಿ ಎನ್ನುವ ಬಾಲಕಿಯ ಮೇಲೆ ಬಿದ್ದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿವೆ. ಮಾರಣಾಂತಿಕವಾಗಿ ಐದಾರು ಬೀದಿ ನಾಯಿಗಳು ದಾಳಿ ಮಾಡಿದ್ದು ಈ ವೇಳೆ ತಕ್ಷಣ ಬಾಲಕಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅನ್ವಿತಾ ಕಣ್ಣು, ಬೆನ್ನು ಹಾಗೂ ಕಾಲಿಗೆ ಬೀದಿನಾಯಿಗಳು ಕಚ್ಚಿ ಗಾಯಗೊಳಿಸಿವೆ . ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಬಾಲಕಿ ಅನ್ವಿತಾಗೆ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ ಬೀದಿ ನಾಯಿಗಳ ಕಾಟಕ್ಕೆ ನಿವಾಸಿಗಳು ಬೇಸತ್ತು ಹೋಗಿದ್ದಾರೆ.

Read More

ಬೆಂಗಳೂರು : ಪರಿಷತ್ ಸದಸ್ಯರ ವರ್ತನೆಗೆ ಸಭಾಪತಿ ಬಸವರಾಜ್ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಸಭಾಪತಿ ಸ್ಥಾನದಲ್ಲಿ ಕುಳಿತವರಿಗೆ ತಾಳ್ಮೆ ಹೆಚ್ಚಿರಬೇಕು ಸಭಾಪತಿ ಸ್ಥಾನದಲ್ಲಿ ಮಂಗ್ಯಾನ ತರ ಕೂತಿರುತ್ತೇನೆ. ಮೊದಲು ಶಾಸಕರು ಕೈ ಎತ್ತಿ ಮಾತನಾಡುವುದಕ್ಕೆ ಅವಕಾಶ ಕೇಳುತ್ತಿದ್ದರು. ಈಗ ಏನು ಇಲ್ಲ ಎಂದು ಬಸವರಾಜ್ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ನನಗೂ ತಾಳ್ಮೆಯಿಂದ ಇದು ಸಾಕಾಗಿದೆ ದನ ಕಾಯಲು ಹೋಗಿ ಎಂದು ನಾನು ಬೈದಿದ್ದೇನೆ. ಅಷ್ಟಕ್ಕೆ ಅವರು ಕೊಠಡಿಗೆ ಬಂದು ಪ್ರಶ್ನಿಸಿದ್ದಾರೆ ದನ ಕಾಯೋರ ವಿಡಿಯೋ ಅವರಿಗೆ ವಿಡಿಯೋ ತೋರಿಸಿದ್ದೇನೆ ದನ ಕಾಯುವವರೆಗೂ ನಿಮಗೂ ಏನು ವ್ಯತ್ಯಾಸ ಎಂದು ನಾನು ಕೇಳಿದೆ ಬಳಿಕ ಅವರು ಕ್ಷಮೆ ಕೇಳಿ ವಾಪಸು ಹೋದರು ಎಂದು ಬಸವರಾಜ್ ಹೊರಟ್ಟಿ ಮಾತನಾಡಿರೊ ವಿಡಿಯೋ ಈಗ ವೈರಲ್ ಆಗಿದೆ.

Read More

ಯಾದಗಿರಿ : ಇತ್ತೀಚಿಗೆ ಶಾಲಾ ಬಸ್ ಹರಿದು ಬೆಂಗಳೂರಿನಲ್ಲಿ ಇಬ್ಬರು ಕಂದಮ್ಮಗಳು ಬಲಿಯಾಗಿದ್ದರು. ಇದೀಗ ಯಾದಗಿರಿಯಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಮಗು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟದಲ್ಲಿ ನಡೆದಿದೆ. ನಿನ್ನೆ ಈ ಒಂದು ಘಟನೆ ನಡೆದಿದ್ದು ಬಸ್ನಿಂದ ಕೆಳಗೆ ಇಳಿಯುತ್ತಿದ್ದಂತೆ ಶಾಲಾ ಬಸ್ ಚಾಲಕ ಬಸ್ ರಿವರ್ಸ್ ತೆಗೆದುಕೊಂಡಿದ್ದಾನೆ. ಈ ವೇಳೆ ಬಸ್ಸಿನ ಚಕ್ರಕ್ಕೆ ಸಿಲುಕಿ 4 ವರ್ಷದ ಪುನೀತ್ ಎಂಬ ಬಾಲಕ ಸಾವನಪ್ಪಿದ್ದಾನೆ. ಗಾಜರ್ ಕೋಟ ಗ್ರಾಮದ ವಿಸಡಂ ಶಾಲೆಯ ವಿದ್ಯಾರ್ಥಿ ಪುನೀತ್ ಸಾವನಪ್ಪಿದ್ದಾನೆ. ಮಗನನ್ನು ಕಳೆದುಕೊಂಡು ಇದೀಗ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮಸ್ಥರು ಮಗುವಿನ ಶವ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಬಸ್ ಚಾಲಕನಿಗೆ ಜೀವಾವಧಿ ಶಿಕ್ಷೆ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪೊಲೀಸರ ಮನವೊಲಿಕೆಯ ಬಳಿಕ ಪ್ರತಿಭಟನೆ ಕೈಬಿಟ್ಟರು. ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಖಾಸಗಿ ಬಸ್ ಒಂದು ಹೊತ್ತಿ ಉರಿದಿದೆ. ಇಂದು ಬೆಳಿಗ್ಗೆ 10: 30ಕೆ ಈ ಒಂದು ಘಟನೆ ನಡೆದಿದ್ದು ಚಂದ್ರಾ ಲೇಔಟ್ ಬಿಎಂಟಿಸಿ ಒಂದು ಘಟನೆ ನಡೆದಿದೆ. ಅದೃಷ್ಟ ವಸಾದ್ ಬಸ್ ನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಸಂಪೂರ್ಣವಾಗಿ ಬಸ್ ಹೊತ್ತಿ ಉರಿದಿದೆ. ಕೆಲಕಾಲ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಚಂದ್ರ ಲೇಔಟ್ ಬಿಎಂಟಿಸಿ ಡಿಪೋ ಬಳಿ ಒಂದು ಘಟನೆ ನಡೆದಿದ್ದು, ಆದರೆ ಕಾರಣ ಏನು ಎಂಬುದು ಇದುವರೆಗೂ ಗೊತ್ತಾಗಿಲ್ಲ. ಈ ಒಂದು ಖಾಸಗಿ ಬಸ್ ಯಾರಿಗೆ ಸೇರಿದೆ ಎಂಬುದು ತಿಳಿದು ಬಂದಿಲ್ಲ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದರು. ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

Read More

ಬೆಂಗಳೂರು : ಸಾವು ಯಾವ ರೂಪದಲ್ಲಿ ಯಾವಾಗ ಬರುತ್ತೆ ಅಂತ ಹೇಳುವುದಕ್ಕೆ ಆಗಲ್ಲ ಇದೀಗ ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ಹುಟ್ಟು ಹಬ್ಬದ ದಿನದಂದೇ ಯುವಕನೊಬ್ಬ ಸ್ನೇಹಿತರ ಜೊತೆಗೆ ಹೊರಗಡೆ ಹೋದಾಗ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಬೈಕ್ ಹಾಗೂ ಅಶೋಕಾ ಲೈಲಾಂಡ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪವನ್ (24) ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಪವನ್ ಬೆಂಗಳೂರು ಉತ್ತರ ತೋಟದ ಗುಡ್ಡದಹಳ್ಳಿ ನಿವಾಸಿ. ಈತ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಐವರಕಂಡಪುರದ ಬಳಿ ಅಪಘಾತದಲ್ಲಿ ನಿನ್ನೆ ಸಂಜೆ 5:45 ಕ್ಕೆ ಹುಟ್ಟುಹಬ್ಬ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಓವರ್ ಸ್ಪೀಡ್‌ನಲ್ಲಿದ್ದ ಗೂಡ್ಸ್ ವಾಹನ ಹಾಗೂ ಬೈಕ್ ಸವಾರ ಕಾರಣ ಎನ್ನಲಾಗಿದೆ. ಬೈಕ್‌ ಮತ್ತು ಗೂಡ್ಸ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಪವನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸೋಲದೇವನಹಳ್ಳಿ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

Read More

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಇಂದು ಮನೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿಯ ಯಾಸೀನ್ ಸೇರಿದಂತೆ ಆರು ಆರೋಪಿಗಳನ್ನು ಪೊಲೀಸರು ನಿನ್ನೆ ಬಂಧಿಸಿದ್ದರು.ಅಪ್ರಾಪ್ತ ಬಾಲಕರು ಸೇರಿದಂತೆ ಬಸವನಹಳ್ಳಿ ಪೊಲೀಸರು 6 ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದರು. ರಾತ್ರಿ ಚಿಕ್ಕಮಂಗಳೂರಿನ ಜಡ್ಜ್ ನಿವಾಸದಲ್ಲಿ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಜಡ್ಜ್ ನಿವಾಸದಲ್ಲಿ ಆರು ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಜಡ್ಜ್ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ. ನಾಲ್ವರು ಅಪರಾಪ್ತರನ್ನು ಹಾಸನದ ರಿಮೈಂಡ್ ಹೋಂ ಗೆ ಶಿಫ್ಟ್ ಮಾಡಲಾಗಿದೆ ಸುಧಾ ಎಂಬವರ ಮನೆಯ ಮೇಲೆ ಆರೋಪಿಗಳು ಕಲ್ಲುತೂರಾಟ ನಡೆಸಿದರು ಸುಧಾ ನೀಡಿದ ದೂರಿನ ಮೇರೆಗೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು ವಿಜಯಪುರ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿತ್ತು.

Read More

ಉಡುಪಿ : ಪಾಕಿಸ್ತಾನದಲ್ಲಿರುವವರಿಗೆ ಬಾರತೀಯ ನೌಕಾಪಡೆಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಹಂಚಿಕೊಂಡ ಆರೋಪದಲ್ಲಿ ಉಡುಪಿಯಲ್ಲಿ ಮತ್ತೊಬ್ಬನ ಬಂಧನವಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಬಂಧಿತ ಆಲಿಫ್ ಇಸ್ಲಾಂ ಬಾಂಗ್ಲೇದೇಶ ಮೂಲದವನೇ ಎಂಬ ಶಂಕೆಯೂ ವ್ಯಕ್ತವಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ 21 ವರ್ಷದ ಆಲಿಫ್ ಇಸ್ಲಾಂ ಎಂದು ಗುರುತಿಸಲಾಗಿದೆ. ಆತ ಪ್ರಸ್ತುತ ಕೇರಳದ ಇಡುಕ್ಕಿ ಜಿಲ್ಲೆಯ ಮರಾಯು ಗ್ರಾಮದಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಬಂಧಿತ ಬಾಂಗ್ಲಾದೇಶದ ಪ್ರಜೆ ಆಗಿರಬಹುದೆಂಬ ಅನುಮಾನವನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ. ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆಗಳ ಗೋಪ್ಯ ಮಾಹಿತಿಯನ್ನು ವಾಟ್ಸ್​ಆ್ಯಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನದ ಜತೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಈ ಪ್ರಕರಣದಲ್ಲಿ ಈಗಾಗಲೇ 2025ರ ನವೆಂಬರ್ ಹಾಗೂ ಡಿಸೆಂಬರ್​​ನಲ್ಲಿ ಗುಜರಾತ್ ಮೂಲದ ಹಿರೇಂದ್ರ ಕುಮಾರ್,…

Read More