Subscribe to Updates
Get the latest creative news from FooBar about art, design and business.
Author: kannadanewsnow05
ಉತ್ತರಕನ್ನಡ : ಮಧ್ಯಾಹ್ನದ ಊಟ ಸೇವಿಸಿದ 70ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಪಂಚವಟಿಯಲ್ಲಿ ಇರುವ ಪಿಎಂಶ್ರೀ ಜವಹಾರ ನವೋದಯ ವಿದ್ಯಾಲಯದಲ್ಲಿ ನಡೆದಿದೆ. ಫೆಬ್ರುವರಿ 4ರಂದು 518 ಮಕ್ಕಳು ಮಧ್ಯಾಹ್ನದ ಬಿಸಿ ಊಟ ಸೇವಿಸಿದರು. ಈ ಪೈಕಿ 70 ಮಕ್ಕಳಿಗೆ ಜ್ವರ, ವಾಂತಿ, ಭೇದಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿತು. ತಕ್ಷಣ ಮಕ್ಕಳನ್ನು ಮುಂಡಗೋಡು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಸ್ಥಳಕ್ಕೆ ಆಗಮಿಸಿ ಆರೋಗ್ಯ ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದೆ. ಅಧಿಕಾರಿಗಳು ಬೆಳಗಾವಿ ಇಲಾಖೆ ಕಳುಹಿಸಿದ್ದಾರೆ. ಇನ್ನು 8 ಶಾಲಾ ಮಕ್ಕಳಲ್ಲಿ ಜ್ವರ ಹಾಗೂ ವಾಂತಿಯ ಲಕ್ಷಣ ಕಂಡು ಬಂದಿದೆ. ಎಲ್ಲ ಮಕ್ಕಳಿಗೆ ಪರೀಕ್ಷೆ ನಡೆಸಿರುವ ಆರೋಗ್ಯ ಅಧಿಕಾರಿಗಳ ತಂಡ ಘಟನೆಗೆ ಕಾರಣ ಏನು ಎನ್ನುವುದರ ಕುರಿತು ತನಿಖೆ ನಡೆಸಲಾಗುತ್ತಿದೆ.
ಹಾಸನ : ಹಾಸನದಲ್ಲಿ ಘೋರ ದುರಂತವೊಂದು ನಡೆದಿದ್ದು, ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲಾದ ಘಟನೆ ಹಾಸನ ಹೊರವಲಯದ ಉದ್ದುರು ಗ್ರಾಮದಲ್ಲಿ ನಡೆದಿದೆ.ಮೃತಪಟ್ಟ ವಿದ್ಯಾರ್ಥಿಯನ್ನು ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಈತ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ. ಇಂದು (ಫೆ.7) ಮಧ್ಯಾಹ್ನ ನಾಲ್ವರು ಸ್ನೇಹಿತರ ಜೊತೆ ಉದ್ದೂರು ಕೆರೆಗೆ ಈಜಲು ತೆರಳಿದ್ದ. ಐವರಲ್ಲಿ ಇಬ್ಬರು ಸ್ನೇಹಿತರು ಈಜಲು ನೀರಿಗೆ ಇಳಿದಿದ್ದರು. ಕೆರೆಯ ಆಳವಾದ ಪ್ರದೇಶಕ್ಕೆ ಈಜುತ್ತಾ ಹೋಗಿದ್ದ ಪ್ರಜ್ವಲ್ ವಾಪಾಸ್ ಬರಲು ಆಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ರಾಯಚೂರು : ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದರ ಸೋಮವಾರದಿಂದ ಏರಿಕೆ ಆಗಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದರು. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕೌಂಟರ್ ನೀಡಿದ್ದು, ಸುಮ್ಮನೆ ಖಾಲಿ ಮಾತನಾಡುವುದು ಬೇಡ ಮೊದಲು ರಾಜ್ಯ ಸರ್ಕಾರಕ್ಕೆ, ನನಗೆ, ಕೇಂದ್ರ ಸರ್ಕಾರಕ್ಕೆ ಹಾಗು ಎಲ್ಲಾ ಸಂಸದರಿಗೆ ಪತ್ರ ಬರೆಯಿರಿ ಎಂದು ಕೌಂಟರ್ ನೀಡಿದರು. ರಾಯಚೂರಿನಲ್ಲಿ ಇದೆ ವಿಚಾರವಾಗಿ ಮಾತನಾಡಿದ ಅವರು ತೇಜಸ್ವಿ ಸೂರ್ಯ ಸುಮ್ಮನೆ ಖಾಲಿ ಮಾತನಾಡುವುದು ಬೇಡ. ಕೇಂದ್ರ ಸರ್ಕಾರಕ್ಕೆ, ರಾಜ್ಯ ಸರ್ಕಾರಕ್ಕೆ, ನನಗೆ ಹಾಗು ಎಲ್ಲಾ ಸಂಸದವರಿಗೆ ಮೊದಲು ಪತ್ರ ಬರೆಯಿರಿ ಯಾರು ಬೇಡ ಅಂತಿದ್ದಾರೆ. ನಾವು ಬೇಡ ಅಂತಿದ್ದೀವಿ ಅದು ಬೇರೆ ವಿಚಾರ. ಯಾರು ಎಂಪಿ ಒಬ್ಬರ ಹೆಸರು ಹೇಳಿಲ್ಲ ಎಲ್ಲರೂ ಸೇರಿ ಪತ್ರ ಬರೆಯಿರಿ. ಪ್ರತಿಭಟನೆಗೆ ವಿರೋಧ ಮಾಡಬಾರದು ಅನ್ನೋ ದೃಷ್ಟಿಯಿಂದ ಪ್ರಧಾನಿ ಮೋದಿ, ಕೇಂದ್ರ ಸಚಿವರಿಗೂ ಪತ್ರ ಬರೆಯಲಿ. ಆಮೇಲೆ ಆ ವಿಚಾರವಾಗಿ ಮಾತನಾಡೋಣ ಬರೀ ಮೀಡಿಯಾ ಮುಂದೆ ಮಾತನಾಡುವುದನ್ನು ಯಾರು…
ದಕ್ಷಿಣಕನ್ನಡ : ಬಿಜೆಪಿಯವರು ಎಷ್ಟೇ ತಿಪ್ಪರಲಾಗ ಹೊಡೆದ್ರೂ ಮತ್ತೆ ಸರ್ಕಾರ ತರೋದು ನಮಗೆ ಗೊತ್ತಿದೆ. ದಾನ ಧರ್ಮ ಮಾಡುವ ಕೈ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಬಡವರಿಗೆ ಪಂಚ ಗ್ಯಾರಂಟಿಗಳನ್ನು ನೀಡಲು ಸಾಧ್ಯವಾಗಿದೆ. ಹೀಗಾಗಿ ಬಿಜೆಪಿಯವರು ಟೀಕಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನೂತನ ಕಾಂಗ್ರೆಸ್ ಭವನಕ್ಕೆ ಶಿಲನ್ಯಾಸ ನೆರವೇರಿಸಿ ಮಾತನಾಡಿದ ಅವರು, ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆ ತಂದಿರುವುದು ಕೇವಲ ಕಾಂಗ್ರೆಸ್ಗರಿಗೆ ಮಾತ್ರ ಎಂದು ಬಿಜೆಪಿಯವರು ಅಪಪ್ರಚಾರ ಮಾಡಿದ್ದರು. ಆದರೆ ಎಲ್ಲರಿಗಾಗಿ ಈ ಯೋಜನೆ ತಂದಿದ್ದೇವೆ. ಇದನ್ನು ಬಿಜೆಪಿಯವರು ಪಡೆಯುತ್ತಿದ್ದಾರೆ. ಟೀಕೆ ಮಾಡುವವರು ಯೋಜನೆ ನಮಗೆ ಬೇಡ ಎಂದು ಬಿಟ್ಟು ಕೊಡಲಿ ಎಂದು ಸವಾಲು ಹಾಕಿದರು. ಬಿಜೆಪಿಯು ಜನರ ವೋಟು ತಡೆಯುವ ನಿಟ್ಟಿನಲ್ಲಿ ಎಸ್ಐಆರ್ ತರುತ್ತಿದೆ. ಈ ಮೂಲಕ ಎಸ್ಸಿ ಎಸ್ಟಿ, ಅಲ್ಪ ಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಮತವನ್ನು ತಡೆಯುವ ಕೆಲಸ ಮಾಡಲಾಗುತ್ತಿದೆ. ಪ್ರತಿ ಬೂತ್ಗಳಲ್ಲಿಯೂ ಇದನ್ನು ಮಾಡಲಾಗುತ್ತಿದೆ. ಇದರ ಬಗ್ಗೆ ಬಹಳ ಜಾಗೃತೆಯಾಗಿರಬೇಕು. ಮುಖ್ಯಮಂತ್ರಿ…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ದರೋಡೆ ನಡೆದಿದ್ದು ಮನೆಯ ಬೀಗ ಒಡೆದು ಹಣ ಮತ್ತು ಚಿನ್ನಾಭರಣವನ್ನು ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಡಿ ಆರ್ ಎಂ ಬಡಾವಣೆಯಲ್ಲಿ ಹರೀಶ್ ಎಂಬುವರ ಮನೆಯಲ್ಲಿ ಈ ಒಂದು ಕಳ್ಳತನ ನಡೆದಿದೆ ಕುಟುಂಬದವರು ಎಲ್ಲರೂ ತಿರುಪತಿಗೆ ಹೋಗಿದ್ದಾಗ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು 30 ಗ್ರಾಂ ಚಿನ್ನ 450 g ಬೆಳ್ಳಿ 46,000 ನಗದು ಹಣ ಕಳ್ಳತನ ಮಾಡಿದ್ದಾರೆ ಈ ಕುರಿತು ಗೌರಿಬಿದನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕನಿಗೆ ಥಳಿಸಲಾಗಿದೆ. ಜಿಲ್ಲೆಯ ಸಾಗರ ನಗರದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಾಧ್ಯಾಪಕನಿಗೆ ಥಳಿಸಿರುವ ಘಟನೆ ವರದಿಯಾಗಿದೆ. ಕೊಳಗಿಬೀಸ್ ಕಾಲೇಜಿನ ವಿದ್ಯಾರ್ಥಿ ನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಕಾಲೇಜು ಪ್ರಾಧ್ಯಾಪಕ ಎಂ. ಆರ್ ಆದರ್ಶ್ ಎಂಬವನಿಗೆ ಇದೀಗ ಜನ ಥಳಿಸಿದ್ದಾರೆ. ಈ ಹಿಂದೆ ಶಿರಸಿಯಲ್ಲಿ ಕೂಡ ಇದೆ ರೀತಿ ಲೈಂಗಿಕ ಕಿರುಕುಳ ನೀಡಿ ಸಿಕ್ಕಿ ಬಿದ್ದಿದ್ದ. ಬಳಿಕ ಆದರ್ಶ ನನ್ನ ಬೇರೆ ಕಾಲೇಜಿಗೆ ವರ್ಗಾಯಿಸಲಾಗಿತ್ತು. ಇದೀಗ ಶಿವಮೊಗ್ಗದಲ್ಲೂ ಈ ರೀತಿ ಕೃತ್ಯ ಎಸಗಿದ್ದು, ಜನರು ಹಿಡಿದು ಥಳಿಸಿದ್ದಾರೆ.
ಉತ್ತರಕನ್ನಡ : ಬಿಜೆಪಿ ನಾಯಕರನ್ನು ಹೊಗಳಿ ರಾಜ್ಯ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ಶಾಸಕ ಆರ್ ವಿ ದೇಶಪಾಂಡೆ ವ್ಯಂಗ್ಯವಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಶಾಸಕ ಆರ್ ವಿ ದೇಶಪಾಂಡೆ ಹೇಳಿಕೆ ನೀಡಿದ್ದು ಕೇಂದ್ರ ಸಚಿವ ವಿ ಸೋಮಣ್ಣ ಅವರನ್ನು ಹೊಗಳಿದ್ದಾರೆ. ವಿ ಸೋಮಣ್ಣ ಅವರು ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಪ್ರಯಾಣದ ಫಲವಾಗಿ ರೈಲು ಸೇವೆ ಪೂನ ಆರಂಭವಾಗಿದೆ. ದಾಂಡೇಲಿ ಮತ್ತು ಅಳ್ಳಾವರ ರೈಲು ಸಂಚಾರ ಪುನರಾರಂಭ ಆಗಿದೆ. ವಿ ಸೋಮಣ್ಣ ಅವರು ಮತ್ತಷ್ಟು ಎತ್ತರಕ್ಕೆ ಬೆಳೆಯಬೇಕು ಎಂದು ಹಾರೈಸುತ್ತೇನೆ ಎಂದು ತಿಳಿಸಿದರು. ಸಿದ್ದರಾಮಯ್ಯ ಮಹಿಳೆಯರಿಗೆ ಬಸ್ ಫ್ರೀ ಮಾಡಿದ್ದಾರೆ ಯಾವ ಭಾಷೆ ನೋಡಿದರೂ ಫುಲ್ ಆಗಿರುತ್ತವೆ ಗಂಡು ಮಕ್ಕಳಿಗೆ 10ವುದಕ್ಕೂ ಸಹ ಆಗಲ್ಲ ಬಸ್ನಲ್ಲಿ ಯಾರಿಗಾದರೂ ಹಣ ಬೀಳುತ್ತದೆ ಬಸ್ನಲ್ಲಿ ಗಂಡು ಮಕ್ಕಳು ನೋಡಿಕೊಂಡು ಓಡಾಡಬೇಕಿದೆ ಸಿದ್ದರಾಮಯ್ಯ ಮಾಡಿದ್ದು ಒಂದೆರಡು ಅಲ್ಲ ಎಂದು ಆರ್ ವಿ ದೇಶಪಾಂಡೆ ಗ್ಯಾರಂಟಿ ಕುರಿತು ವ್ಯಂಗ್ಯವಾಡಿದ್ದಾರೆ.
ಬೆಂಗಳೂರು : ಮೆಟ್ರೋ ದರ ಹೆಚ್ಚಳ ಆಗಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಏನು ಹೇಳಿಕೆ ನೀಡಿದ್ದರೊ, ಈ ಕುರಿತು ಬಿಎಂಆರ್ಸಿಎಲ್ ಹಿರಿಯ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು, ನಮಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ ಎಂದು ತಿಳಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ‘BMRCL’ ಹಿರಿಯ ಅಧಿಕಾರಿಗಳು ನಮಗೆ ಮಾಹಿತಿ ಬಂದಮೇಲೆ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ. ಅಲ್ಲಿಯವರೆಗೂ ನಮ್ಮ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ. ಮಾಹಿತಿ ಬಂದ ನಂತರ ಬಳಿಕವಷ್ಟೇ ಟಿಕೇಟ್ ದರ ಇಳಿಕೆ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಬಿಎಂಆರ್ಸಿಎಲ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದ್ದು ಮೆಟ್ರೋ ಪ್ರಯಾಣದ ದರ ಹೆಚ್ಚಳ ಇಲ್ಲ ಎಂದು ಹೇಳಲಾಗುತ್ತಿದೆ ಈ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.ಈ ವಿಚಾರವಾಗಿ ಬಿಎಂಆರ್ಸಿಎಲ್ ಇಂದ ಅಧಿಕೃತ ಮಾಹಿತಿ ಬರಬೇಕಷ್ಟೇ. ಕೇಂದ್ರ ಗೃಹ ವ್ಯವಹಾರಗಳ ಸಚಿವ ಮನೋಹರ್ ಕಟ್ಟರ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದೇನೆ, ಸೋಮವಾರದಿಂದ ಪ್ರಾರಂಭಿಸಲು ಪ್ರಸ್ತಾಪಿಸಲಾದ ರಾಜ್ಯ ಸರ್ಕಾರದ ಅನ್ಯಾಯದ ಬೆಂಗಳೂರು ಮೆಟ್ರೋ ದರ ಏರಿಕೆಯ ವಿರುದ್ಧ ತಕ್ಷಣದ ಮಧ್ಯಪ್ರವೇಶವನ್ನು ಕೋರಿದ್ದೇನೆ. ಬೆಂಗಳೂರಿನಲ್ಲಿ ಈಗಾಗಲೇ ಭಾರತದಲ್ಲಿ ಅತ್ಯಂತ ದುಬಾರಿ ಮೆಟ್ರೋ ದರಗಳಿವೆ ಎಂದು ನಾನು ಗಮನಸೆಳೆದಿದ್ದೇನೆ. ಈ ಹೆಚ್ಚಳವು ಲಕ್ಷಾಂತರ ನಾಗರಿಕರಿಗೆ ಸಾರ್ವಜನಿಕ ಸಾರಿಗೆಯನ್ನು ತಲುಪಲು ಕಷ್ಟವಾಗುತ್ತದೆ ಮತ್ತು ಅದರ ಉದ್ದೇಶವನ್ನು ವಿಫಲಗೊಳಿಸುತ್ತದೆ. ಪ್ರಸ್ತಾವಿತ ಹೆಚ್ಚಳವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಅವರು ಸೂಚನೆ ನೀಡಿದ್ದಾರೆ. ಇದು ಸೋಮವಾರದಿಂದ ಜಾರಿಗೆ ಬರುವುದಿಲ್ಲ. FFC ಯಲ್ಲಿನ ವೈಪರೀತ್ಯಗಳ ವೈಯಕ್ತಿಕ ಪರಿಶೀಲನೆಯನ್ನು ಸಹ ಅವರು ಭರವಸೆ…
ಬೆಂಗಳೂರು : ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಆರೋಗ್ಯ ಇಲಾಖೆಯಿಂದ ಸ್ಫೋಟಕ ಸಂಗತಿ ಹೊರಬಿದ್ದಿದೆ. ವರ್ಷದಲ್ಲಿ 1 ಲಕ್ಷಕ್ಕೂ ಹೆಚ್ಚು ಜನರಿಗೆ ಆತ್ಮಹತ್ಯೆ ಆಲೋಚನೆ ಬರುತ್ತಿವೆ. ಉದ್ಯಮಿ ಸಿ ಜೆ ರಾಯ್ ಆತ್ಮಹತ್ಯೆ ಬೆನ್ನಲ್ಲೇ ಇದೀಗ ಆರೋಗ್ಯ ಇಲಾಖೆ ಸ್ಫೋಟಕ ಮಾಹಿತಿ ಬಹಿರಂಗಗೊಳಿಸಿದೆ. ಈ ಕುರಿತು ಡಾಕ್ಟರ್ ಗುರುರಾಜ ಹೆಗಡೆ ಮಾಹಿತಿ ನೀಡಿದ್ದು , ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಹಿಡನ್ ಡಿಪ್ರೆಶನ್ ಪ್ರಕರಣ. ನೀವು ನಿಮಾನ್ಸ್ ನ ಟೆಲಿ ಮಾನಸ್ ವೆ ಜನರು ಸುಮಾರು 2 ಲಕ್ಷ 3 ಸಾವಿರಕ್ಕೂ ಹೆಚ್ಚು ಜನರು ಕರೆ ಮಾಡಿದ್ದಾರೆ. ತಮ್ಮ ಸಮಸ್ಯೆಗಳನ್ನು ಮನೋರೋಗಿಗಳು ಹೇಳಿಕೊಳ್ಳುತ್ತಿದ್ದಾರೆ. ಶೇಕಡಾ 49.86 ಪುರುಷರು ಶೇಕಡ 45.45 ಮಹಿಳೆಯರಲ್ಲಿ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ. ಒಂದು ಕಡೆ ಉದ್ಯಮದಲ್ಲಿ ನಷ್ಟ, ಒತ್ತಡ, ಕೌಟುಂಬಿಕ ಚಿಂತೆ, ಕೆಲಸ ಮಾಡುವ ಸ್ಥಳದಲ್ಲಿ ಒತ್ತಡ ಹೀಗೆ ಹತ್ತು ಹಲವು ಸಮಸ್ಯೆಗಳಿಂದ ಹಿಡನ್ ಡಿಪ್ರೆಶನ್ ನಿಂದ ಪುರುಷ ಮತ್ತು ಮಹಿಳೆಯರು ಬಳಲುತ್ತಿದ್ದಾರೆ. ತಮಗೆ ಅರಿವಿಲ್ಲದಂತೆ ಖಿನ್ನತೆಗೆ…














