Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಗುಪ್ತಾಂಗದಲ್ಲಿ ಡ್ರಗ್ಸ್ ಬಚ್ಚಿಟ್ಟು ಪರಪ್ಪನ ಅಗ್ರಹಾರ ಜೈಲಿನೊಳಗೆ ಸಾಗಿಸಲು ಯತ್ನಿಸುತ್ತಿದ್ದ ಯುವತಿ ಸಿಕ್ಕಿಬಿದ್ದಿದ್ದಾಳೆ. ಈ ಕುರಿತು ಜೈಲಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಯುವತಿಯನ್ನ ಬಂಧಿಸಲಾಗಿದೆ. ರಿತಿಕಾ ರೈ ಬಂಧಿತ ಯುವತಿ ಎಂದು ತಿಳಿದುಬಂದಿದೆ. ಅಪರಾಧ ಪ್ರಕರಣವೊಂದರಲ್ಲಿ ಪರಪ್ಪನ ಅಗ್ರಹಾರ ಜೈಲಿನ ವಿಚಾರಣಾಧೀನ ಕೈದಿ ಪರ್ಹಾನ್ ಖಾನ್ ನನ್ನ ಮಾ.26ರಂದು ಭೇಟಿಯಾಗಲು ಬಂದಿದ್ದಳು.ವಿಸಿಟರ್ ಪಾಸ್ ಪಡೆದು ಸಂದರ್ಶಕರ ಕೊಠಡಿ ಬಳಿ ಸಿಬ್ಬಂದಿಗಳು ತಪಾಸಣೆಗೊಳಪಡಿಸಿದಾಗ ಅನುಮಾನ್ಪಾಸದ ವಸ್ತುಗಳಿರುವುದನ್ನು ಪತ್ತೆ ಹಚ್ಚಿದ್ದರು. ಈ ಬಗ್ಗೆ ಪರಿಶೀಲಿದಾಗ ಯುವತಿ ಗುಪ್ತಾಂಗದಲ್ಲಿ ನಿಷೇಧಿತ ವಸ್ತುಗಳಾದ ಡ್ರಗ್ಸ್, ಬೀಡಿ ಹಾಗೂ 3 ಏರ್ ಟೆಲ್ ಸಿಮ್ ಕಾರ್ಡ್ ಗಳು ಬಿಳಿ ಬಣ್ಣದ ಕವರ್ನಲ್ಲಿ ಅಡಗಿಸಿಕೊಂಡಿರುವುದು ಪತ್ತೆಯಾಗಿದೆ. ಕಾರಾಗೃಹದ ಪ್ರಭಾರ ಅಧೀಕ್ಷಕ ಶಿವಾನಂದ ಶಿವಪುರ ಎಂಬುವರು ನೀಡಿದ ದೂರಿನ ಮೇರೆಗೆ ಆರೋಪಿತೆಯನ್ನು ಬಂಧಿಸಲಾಗಿದೆ. ಈ ಹಿಂದೆ ಇದೇ ಮಾದರಿಯಲ್ಲಿ ನಿಷೇಧಿತ ವಸ್ತುಗಳನ್ನು ಸಾಗಾಟ ಯತ್ನ ಆರೋಪದಡಿ ಬಂಧನಕ್ಕೊಳಗಾಗಿದ್ದಳು. ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದ ರಿತಿಕಾ ಮತ್ತೆ ಹಳೆ ಚಾಳಿ…
ಮಂಗಳೂರು : ವೇಗವಾಗಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ (KSRTC) ಬಸ್ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಇಬ್ಬರು ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ಗೇರುಕಟ್ಟೆ ಎಂಬಲ್ಲಿ ಅಕ್ಕ-ತಂಗಿ ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿನ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ, ಬಸ್ಸಿನ ಬಾಗಿಲು ಏಕಾಏಕಿ ತೆರೆದುಕೊಂಡಿದೆ. ಈ ವೇಳೆ ಬಾಗಿಲ ಬಳಿಯೇ ನಿಂತಿದ್ದ ಅಕ್ಕ ಮೊದಲು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಅವರನ್ನು ರಕ್ಷಿಸಲು ಹೋದ ತಂಗಿ ಕೂಡ ನಿಯಂತ್ರಣ ತಪ್ಪಿ ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ.ಬಿದ್ದ ತಕ್ಷಣ ಸ್ಥಳೀಯರು ಓಡಿ ಬಂದು ವಿದ್ಯಾರ್ಥಿನಿಯರನ್ನು ರಕ್ಷಿಸಿ, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ
ಬೆಂಗಳೂರು : ಐಪಿಎಲ್ ಟಿಕೆಟ್ ಗಾಗಿ ವಿಧಾನಸಭೆಯಲ್ಲಿ ಶಾಸಕರ ಬೇಡಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಒಬ್ಬ ಶಾಸಕರಿಗೆ 3 ಟಿಕೆಟ್ ಕೊಡುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಬೆಂಗಳೂರಿನ ಸದಾಶಿವನಾಗರದ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. KSCA, DNA, RCB ಪದಾಧಿಕಾರಿಗಳ ಜೊತೆಗೆ ಸಭೆಯ ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿ ಐಪಿಎಲ್ ಟಿಕೆಟ್ ಸಂಬಂಧ ಸ್ಪೀಕರ್ ಯುಟಿ ಖಾದರ್ ಜೊತೆಗೆ ಮಾತನಾಡಿದ್ದೆ ಅಂತರಾಷ್ಟ್ರೀಯ ಪಂದ್ಯ ಇದ್ದಾಗ ಶಾಸಕರಿಗೆ ಎರಡು ಟಿಕೆಟ್ ಕೊಡುತ್ತಾರೆ. ಇನ್ನು ಹೆಚ್ಚು ಟಿಕೆಟ್ ಬೇಕಾದರೆ ಬೇರೆ ರೀತಿ ಮನವಿ ಮಾಡಬೇಕು. ಇಲ್ಲದಿದ್ದರೆ ಹಣ ನೀಡಿ ಟಿಕೆಟ್ ಖರೀದಿ ಮಾಡಿ ಎಂದು ಹೇಳಿದ್ದಾರೆ. ಬೇರೆ ಕಡೆ ಎಲ್ಲಿ ಕ್ರೀಡಾಂಗಣ ಕಟ್ಟಿದರೆ ಸೂಕ್ತ ಎಂದು ಚಿಂತಿಸುತ್ತಿದ್ದೇವೆ. ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಹಾಸನ ಸಾಮರ್ಥ್ಯ ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಕೆಯಾಗಿದ್ದು ಯಾರಿಗೆ ಏನು ಅನುಮತಿ ಕೊಡಬೇಕು ಎಂದು ಚರ್ಚೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. https://twitter.com/DKShivakumar/status/2038582969833542080?t=PlbrJD5b7_UHkcP1N0aY3w&s=19
ಬೆಂಗಳೂರು : ಮುಂದಿನ 5 ದಿನಗಳವರೆಗೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಕಂಡುಬಂದಿರುವ ಟ್ರಫ್ ಮತ್ತು ದಕ್ಷಿಣ ಒಳನಾಡಿನಲ್ಲಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇಂದಿನಿಂದ ಏಪ್ರಿಲ್ 3ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ 5 ದಿನಗಳವರೆಗೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ಬೆಂಗಳೂರಿನಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಮುಂದಿನ 5 ದಿನಗಳವರೆಗೆ ಗರಿಷ್ಠ ಉಷ್ಣಾಂಶ 35ರಿಂದ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
BIG NEWS : ಯುದ್ಧದ ಎಫೆಕ್ಟ್ : ಗಲ್ಫ್ ರಾಷ್ಟ್ರಗಳಿಗೆ ರಫ್ತಾಗುತ್ತಿದ್ದ ಈರುಳ್ಳಿಗೆ ಬಿತ್ತು ಬ್ರೇಕ್, ರೈತರು ಕಂಗಾಲು!
ಯಾದಗಿರಿ : ದೇಶದ ವಿವಿಧ ಭಾಗಗಳಲ್ಲಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ ಎಂದು ಗ್ರಾಹಕರು ಚಿಂತಿಸುತ್ತಿದ್ದರೆ, ಇತ್ತ ಬೆಳೆ ಬೆಳೆದ ರೈತರಿಗೆ ಮಾತ್ರ ‘ಯುದ್ಧ’ದ ಭೀತಿ ಆವರಿಸಿದೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಗಲ್ಫ್ ರಾಷ್ಟ್ರಗಳಿಗೆ ರಫ್ತಾಗುತ್ತಿದ್ದ ಈರುಳ್ಳಿಗೆ ಈಗ ‘ಬ್ರೇಕ್’ ಬಿದ್ದಿದೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕುಸಿತ ಕಂಡು ರೈತರು ಕಂಗಾಲಾಗಿದ್ದಾರೆ. ಹೌದು ಗಲ್ಫ್ ರಾಷ್ಟ್ರಗಳಿಗೆ ರಫ್ತು ಆಗುತ್ತಿದ್ದ ಈರುಳ್ಳಿಗೆ ಬ್ರೇಕ್ ಹಾಕಲಾಗಿದೆ ಇಲ್ಲದೆ ರೈತರು ಇದೀಗ ಕಂಗಾಲಾಗಿದ್ದಾರೆ ಯುದ್ಧದಿಂದಾಗಿ ಬೆಲೆ ಸಂಪೂರ್ಣವಾಗಿ ಕುಸಿತ ಆಗಿದೆ ಒಂದು ತಿಂಗಳ ಹಿಂದೆ ಕೇವಲ 300 ಇಂದ 400 ರೂಪಾಯಿಗೆ ಮಾತ್ರ ಖರೀದಿ ಆಗುತ್ತಿದೆ ಎಂದು ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ. ರಫ್ತು ಕುಸಿತಕ್ಕೆ ಪ್ರಮುಖ ಕಾರಣಗಳೇನು? ಸಾರಿಗೆ ಅಸ್ತವ್ಯಸ್ತ: ಯುದ್ಧದ ಹಿನ್ನೆಲೆಯಲ್ಲಿ ಕೆಂಪು ಸಮುದ್ರದ (Red Sea) ಮಾರ್ಗವಾಗಿ ನಡೆಯುತ್ತಿದ್ದ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಇದರಿಂದ ಸರಕು ಸಾಗಣೆ ವೆಚ್ಚ ವಿಪರೀತ ಹೆಚ್ಚಾಗಿದ್ದು, ರಫ್ತುದಾರರು ಹಿಂದೆ ಸರಿಯುತ್ತಿದ್ದಾರೆ. ಬೇಡಿಕೆಯಲ್ಲಿ ಇಳಿಕೆ:…
ಬೆಂಗಳೂರು : ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಇದೀಗ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ASI ಸುರೇಶ್ ಕಾನ್ಸ್ಟೇಬಲ್ ಗಳಾದ ಪ್ರಶಾಂತ್ ಹಾಗು ಸಾದಿಕ್ ಸಸ್ಪೆಂಡ್ ಆದ ಪೊಲೀಸ್ ಸಿಬ್ಬಂದಿಗಳಾಗಿದ್ದಾರೆ. ಪಶ್ಚಿಮ ವಿಭಾಗದ ಸಂಚಾರಿ ಡಿಸಿಪಿ ಅನೂಪ್ ಶೆಟ್ಟಿ ಆದೇಶ ಹೋರಡಿಸಿದ್ದಾರೆ. ಕರ್ತವ್ಯ ನಿರ್ವಹಿಸುವ ವೇಳೆ ಲಂಚ ಪಡೆದಿರುವ ಆರೋಪ ಕೇಳಿಬಂದಿದೆ. ಕರ್ತವ್ಯಲೋಪ ಬಾಡಿವಾರ್ನ್ ಕ್ಯಾಮರಾ ಆಫ್ ಮಾಡಿ ಕೆಲಸ ಮಾಡಿದ್ದಾರೆ. ಅಲ್ಲದೇ ವಿನಾಕಾರಣ ಬೈಕ್ ತಡೆದು ಹಣ ವಸೂಲಿ ಮಾಡಿದ್ದ ಆರೋಪ ಸಹ ಕೇಳಿಬಂದಿದೆ. ಇಲಾಖ ತನಿಖೆಯಲ್ಲಿ ಆರೋಪ ಸಾಬೀತು ಹಿನ್ನೆಲೆ ಅಮಾನತು ಮಾಡಲಾಗಿದೆ. ಚಾಲುಕ್ಯ ಸರ್ಕಲ್ ಬಳಿ ಕರ್ತವ್ಯ ವೇಳೆ ಲಂಚ ಸ್ವೀಕರಿಸಿದ್ರು.
ಬೆಂಗಳೂರು : ರಸ್ತೆ ಸಾರಿಗೆ ನಿಗಮಗಳಿಗೆ ಡೀಸೆಲ್ ಕೊರತೆ ಸಮಸ್ಯೆ ಸದ್ಯಕಿಲ್ಲ. ಆದರೆ ಪಶ್ಚಿಮ ಏಷ್ಯಾದಲ್ಲಿ ಯುದ್ಧ ಹೀಗೆ ಮುಂದುವರಿದ್ರೆ ರಸ್ತೆ ಸಾರಿಗೆ ನಿಗಮಗಳಿಗೆ ಡೀಸೆಲ್ ಕೊರತೆ ಆಗಬಹುದು ಎಂಬ ಸುಳಿವನ್ನು ಸಾರಿಗೆ ಸಚಿವರು ನೀಡಿದ್ದಾರೆ. ಬೆಂಗಳೂರಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, “ನಾವು ಸದ್ಯಕ್ಕೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಯುದ್ಧ ದೀರ್ಘಕಾಲ ಮುಂದುವರಿದಲ್ಲಿ ಕಚ್ಚಾ ತೈಲದ ಆಮದು ಕಡಿಮೆಯಾಗಿ, ದೇಶೀಯವಾಗಿ ಡೀಸೆಲ್ ಲಭ್ಯತೆ ಕುಗ್ಗಬಹುದು. ಇದು ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ದೇಶದ ಸಾರಿಗೆ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ,” ಎಂದು ತಿಳಿಸಿದರು. ಸುದ್ದಿಯ ಮುಖ್ಯಾಂಶಗಳು: ಅಂತರಾಷ್ಟ್ರೀಯ ಬಿಕ್ಕಟ್ಟಿನ ಎಫೆಕ್ಟ್: ಇಸ್ರೇಲ್ ಮತ್ತು ಇತರೆ ದೇಶಗಳ ನಡುವಿನ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಪೂರೈಕೆಯಲ್ಲಿ ವ್ಯತ್ಯಯ: ಭಾರತವು ತನ್ನ ಅಗತ್ಯದ ಬಹುಪಾಲು ತೈಲವನ್ನು ಪಶ್ಚಿಮ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವುದರಿಂದ, ಅಲ್ಲಿನ ಯುದ್ಧದ ಪರಿಸ್ಥಿತಿ ನೇರವಾಗಿ ಸ್ಥಳೀಯ ಮಾರುಕಟ್ಟೆಯ ಮೇಲೆ…
ಹಾಸನ : ಹಾಸನದಲ್ಲಿ ಘೋರ ದುರಂತ ಸಂಭವಿಸಿದ್ದು ಸಿಲಿಂಡರ್ ಬದಲಿಸುವ ವೇಳೆ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡು ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ ಅಬ್ಬೂರು ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ಸಿಲಿಂಡರ್ ನಲ್ಲಿದ್ದ ಗ್ಯಾಸ್ ಖಾಲಿ ಆದಾಯ ನಡಿಯಲ್ಲಿ ಅದನ್ನು ಬದಲಾಯಿಸಲಾಗುತ್ತಿತ್ತು ಈ ವೇಳೆ ತುಂಬಿದ್ದ ಸಿಲಿಂಡರ್ ಗೆ ರೆಗುಲೇಟರ್ ಅಳವಡಿಸುವಾಗ ಅನಿಲ ಸೋರಿಕೆಯಾಗಿದೆ ಮಹಿಳೆ ಪುತ್ರ ಸೇರಿದಂತೆ ಮನೆಯಲ್ಲಿ ಇದನ್ನು ಅವರಿಗೆ ಗಂಭೀರವಾದ ಗಾಯಗಳಾಗಿವೆ. ಕೋಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಸುಂದರೇಶ್ ಮನೆಯಲ್ಲಿ ಇದ್ದಂತಹ ಲಕ್ಷಾಂತರ ಮೂಲದ ವಸ್ತುಗಳಿಗೆ ಹಾನಿಯಾಗಿದೆ. ಘಟನೆ ಕುರಿತಂತೆ ಕೋಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮುಂಬೈ : ದೇಶದ ಆರ್ಥಿಕ ಕ್ಷೇತ್ರದಲ್ಲಿ ಇಂದು ಭಾರಿ ಬೆಳವಣಿಗೆಯಾಗಿದ್ದು, ಅಮೆರಿಕನ್ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಒಂದು ಡಾಲರ್ ಬೆಲೆ 95 ರೂಪಾಯಿ ತಲುಪುವ ಮೂಲಕ ವಹಿವಾಟು ನಡೆಸುತ್ತಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತ, ಕಚ್ಚಾ ತೈಲ ಬೆಲೆ ಏರಿಕೆ ಮತ್ತು ವಿದೇಶಿ ಹೂಡಿಕೆದಾರರು ಭಾರತೀಯ ಮಾರುಕಟ್ಟೆಯಿಂದ ಹಿಂದೆ ಸರಿಯುತ್ತಿರುವುದು ಈ ಕುಸಿತಕ್ಕೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗಿದೆ. ರೂಪಾಯಿ ಮೌಲ್ಯ ಕುಸಿತದಿಂದಾಗಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಆಮದು ಮಾಡಿಕೊಳ್ಳುವ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ತುಮಕೂರು : ತುಮಕೂರಲ್ಲಿ ಬರ್ಬರವಾದ ಹತ್ಯೆ ನಡೆದಿದ್ದು, ಅತ್ತಿಗೆ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಅಣ್ಣನೊಬ್ಬ ಮದುವೆ ನಿಶ್ಚಯವಾಗಿದ್ದ ತಮ್ಮನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ನಗರದ ಬನಶಂಕರಿಯಲ್ಲಿ ನಡೆದಿದೆ.ಸ್ಟಾಲಿನ್ (29) ಮೃತ ಯುವಕನಾಗಿದ್ದು, ಆತನ ಸಹೋದರ ನವೀನ್ ಮತ್ತು ತಂದೆ ಜಾನ್ ಪಾಲ್ ಎಂಬುವವರೇ ಆರೋಪಿಗಳಾಗಿದ್ದಾರೆ. ಆರೋಪಿ ಜಾನ್ ಪಾಲ್ಗೆ ಇಬ್ಬರು ಗಂಡುಮಕ್ಕಳಿದ್ದು, ಆ ಪೈಕಿ ನವೀನ್ ಮೊದಲ ಮಗನಾದರೆ ಮೃತ ಸ್ಟಾಲಿನ್ ಎರಡನೇ ಪುತ್ರ. ನವೀನ್ಗೆ ಅದಾಗಲೇ ಮದುವೆಯಾಗಿದ್ದು, ಆತನ ಹೆಂಡತಿ ತುಂಬು ಗರ್ಭಿಣಿ ಕೂಡ ಹೌದು. ಈ ನಡುವೆ ಸ್ಟಾಲಿನ್ಗೆ ಜನಿಫರ್ ಎಂಬ ಯುವತಿಯ ಜೊತೆಗೆ ಮದುವೆ ನಿಶ್ಚಯವಾಗಿತ್ತು. ವಿವಾಹ ತಯಾರಿಯ ನಡುವೆ ತಾನು ಮದುವೆಯಾಗಬೇಕಿದ್ದ ಸ್ಟಾಲಿನ್ ಮತ್ತು ಆತನ ಅತ್ತಿಗೆ ಅಂದರೆ ನವೀನ್ ಪತ್ನಿ ನಡುವೆ ಅಕ್ರಮ ಸಂಬಂಧ ಇರೋದಾಗಿ ಆಕೆ ಗಂಭೀರ ಆರೋಪ ಮಾಡಿದ್ದಳು. ದೇ ವಿಚಾರವಾಗಿ ಸ್ಟಾಲಿನ್ ಮನೆಯಲ್ಲಿ ಒಂದು ವಾರದಿಂದ ಗಲಾಟೆ ನಡೆಯುತ್ತಿತ್ತು. ಇದು ವಿಕೋಪಕ್ಕೆ ಹೋಗಿ…














