Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಗೋವಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕೇತನ್ ಭಾಟಿಕರ್ ಅವರು ನಾಗರಹಾವು ಕಡಿದು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಬಳಿ ಹಾವು ಕಡಿದು ಭಾಟಿಕರ್ ಮೃತಪಟ್ಟಿದ್ದಾರೆ. ಇವರು ಗೋವಾದ ಪೊಂಡಾದಿಂದ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರ ಬಳಿಯ ಅನಮೋಡ್ ಬಳಿ ಪಕ್ಷದ ಕಾರ್ಯ ನಿಮಿತ್ತ ಸ್ನೇಹಿತನೊಂದಿಗೆ ಬಂದಿದ್ದರು. ಮೂತ್ರ ವಿಸರ್ಜನೆಗಾಗಿ ಅನಮೋಡ್ ಘಟ್ಟ ಭಾಗದ ಕಾಡಿನಲ್ಲಿ ಕಾರು ನಿಲ್ಲಿಸಿ ತೆರಳಿದ್ದರು. ಮೂತ್ರ ವಿಸರ್ಜಿಸುವ ವೇಳೆ ನಾಗರಹಾವು ಕಡಿದಿದೆ. ತಕ್ಷಣ ಗೋವಾದ ಜಿಎಮ್ಸಿ ಮೆಡಿಕಲ್ ಕಾಲೇಜಿನ (ಬಾಂಬೋಲಿನ್) ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಘಟನೆ ಸಂಬಂಧ ಕೋಲಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋವಾ ರಾಜ್ಯದ ಪೊಂಡಾ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಗೋವಾದ ಕೃಷಿ ಸಚಿವ ರವಿ ನಾಯ್ಕ ಅಕಾಲಿಕ ನಿಧನದಿಂದ ತೆರವಾಗಿದ್ದ ಪೊಂಡಾ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯಲ್ಲಿ ಕಣಕ್ಕಿಳಿದಿದ್ದರು. ಗೆಲ್ಲುವ ಅಭ್ಯರ್ಥಿ…
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ದೊರೆತಿದೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು, ಮುಂಬರುವ ಜೂನ್ 30ರಿಂದ ಜುಲೈ 29ರ ವರೆಗೆ ಬೂತ್ ಮಟ್ಟದ ಅಧಿಕಾರಿಗಳು (BLO) ರಾಜ್ಯಾದ್ಯಂತ ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ನಡೆಸಲಿದ್ದಾರೆ ಎಂದು ಪ್ರಮುಖ ಮಾಹಿತಿ ನೀಡಿದರು. ಮತದಾರರ ಪಟ್ಟಿ ಪರಿಷ್ಕರಣೆಯು ವ್ಯವಸ್ಥಿತವಾಗಿ ನಡೆಯಲಿದ್ದು, ಇದಕ್ಕಾಗಿ ವಿವಿಧ ಹಂತಗಳ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ಮೊದಲ ಹಂತವಾಗಿ 2026ರ ಜೂನ್ 20ರಿಂದ ಜೂನ್ 29ರ ವರೆಗೆ ಅಗತ್ಯ ಸಿದ್ಧತೆಗಳು, ಅಧಿಕಾರಿಗಳಿಗೆ ತರಬೇತಿ ಹಾಗೂ ನಮೂನೆಗಳ ಮುದ್ರಣ ಕಾರ್ಯಗಳು ನಡೆಯಲಿವೆ. ಇದಾದ ಬಳಿಕ ಜೂನ್ 30ರಿಂದ ಜುಲೈ 29ರ ವರೆಗೆ ಬಿಎಲ್ಓಗಳು ಮತದಾರರ ಮನೆಗಳಿಗೆ ನೇರವಾಗಿ ಭೇಟಿ ನೀಡಿ, ನಿಗದಿತ ಗಣತಿ ನಮೂನೆಗಳನ್ನು ವಿತರಿಸಿ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಲಿದ್ದಾರೆ. ಮನೆ ಮನೆ ಸಮೀಕ್ಷೆಯ ಪ್ರಕ್ರಿಯೆ ಪೂರ್ಣಗೊಂಡ…
ಬೆಂಗಳೂರು : ಬೆಂಗಳೂರಿನ ಆರ್ಟ್ ಆಫ್ ಲೀವಿಂಗ್ ಆಶ್ರಮದ ಬಳಿ ಪ್ರಧಾನಿ ಮೋದಿ ಭೇಟಿ ನೀಡಿದ್ದ ಸಂದರ್ಭ ಜಿಲೆಟಿನ್ ಪತ್ತೆಯಾದ ಪ್ರಕರಣಕ್ಕೆ ದ್ವೇಷವೇ ಕಾರಣ ಎಂಬುದು ತಿಳಿದುಬಂದಿದೆ. ಆಶ್ರಮದ ಮೇಲಿನ ದ್ವೇಷದಿಂದ ಕೃತ್ಯ ಎಸಗಲಾಗಿದೆ. ಪ್ರಧಾನಿ ಮೋದಿ ಭೇಟಿ ತಡೆಯಲು ಆಶ್ರಮದ ವಿರೋಧಿಗಳು ಹೂಡಿದ್ದ ತಂತ್ರ ಅದಾಗಿತ್ತು ಎಂಬುದನ್ನು ದಕ್ಷಿಣ ವಲಯ ಪೊಲೀಸರು ಕೊನೆಗೂ ಅಸಲಿ ಕಾರಣ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಆಶ್ರಮಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿದ್ದ ಸಂದರ್ಭದಲ್ಲೇ ಈ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು ತೀವ್ರ ಆತಂಕಕ್ಕೆ ಕಾರಣವಾಗಿತ್ತು. ದೇಶದ ಅತ್ಯುನ್ನತ ನಾಯಕರ ಭೇಟಿಯ ವೇಳೆಯಲ್ಲೇ ಇಂತಹ ಘಟನೆ ನಡೆದಿದ್ದರಿಂದ, ಇದು ಪ್ರಧಾನಿ ಭದ್ರತೆಗೆ ಎದುರಾದ ದೊಡ್ಡ ಸವಾಲು ಎಂದೇ ಭಾವಿಸಲಾಗಿತ್ತು. ಕೇಂದ್ರ ಮತ್ತು ರಾಜ್ಯದ ಗುಪ್ತಚರ ಸಂಸ್ಥೆಗಳು ಹಾಗೂ ಉನ್ನತ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಜಂಟಿ ಕಾರ್ಯಾಚರಣೆ ನಡೆಸಿದ್ದರು. ದಕ್ಷಿಣ ವಲಯ ಪೊಲೀಸರು ತೀವ್ರ ನಿಗಾ ವಹಿಸಿ, ಸ್ಥಳೀಯ ಸಿಸಿಟಿವಿ…
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಭಾರಿ ಚರ್ಚೆ ನಡೆಯುತ್ತಿದ್ದು, ಇದರ ಮಧ್ಯ, ಸಂಪುಟ ಪುನಾರಚನೆ ಕುರಿತು ಕೂಡ ಕೆಲವು ಹಿರಿಯ ಕಾಂಗ್ರೆಸ್ಸಿನ ಶಾಸಕರು ದೆಹಲಿಗೆ ಭೇಟಿಯಾಗಿ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಚರ್ಚಿಸಿದ್ದಾರೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ಜನ್ಮದಿನ ಹಿನ್ನೆಲೆ, ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಗೆ ಶುಭಾಶಯಕೋರಿದ್ದಾರೆ. ಎಕ್ಸ್ ಖಾತೆಯಲ್ಲಿ ರಾಜ್ಯದ ಉಪಮುಖ್ಯಮಂತ್ರಿಗಳು, ಆತ್ಮೀಯರು ಆದ @DKShivakumar ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮ್ಮ ಪಕ್ಷ ನಿಷ್ಠೆ, ಸೈದ್ಧಾಂತಿಕ ಬದ್ಧತೆಯು ಯುವ ಜನರಿಗೆ ಮಾದರಿಯಾದುದ್ದು. ಜನಸೇವೆಯ ನಿಮ್ಮ ಆಶಯಕ್ಕೆ ಭಗವಂತ ದೀರ್ಘ ಆಯಸ್ಸು, ಆರೋಗ್ಯವನ್ನು ನೀಡಿ ಬಲತುಂಬಲಿ ಎಂದು ಹಾರೈಸುತ್ತೇನೆ ಎಂದು ಶುಭ ಕೊರಿದ್ದಾರೆ. https://twitter.com/siddaramaiah/status/2055153230825632092?t=BCXNNK4AuTPFk9-HqCx_BA&s=19
ಕೊಪ್ಪಳ: ಜಿಲ್ಲೆಯ ಮುನಿರಾಬಾದ್ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಸೇತುವೆಯ ಮೇಲಿಂದ ಕೆಳಗೆ ಬಿದ್ದಿದೆ. ಈ ದಾರುಣ ಘಟನೆಯಲ್ಲಿ ಒಂದು ಮಗು ಸೇರಿದಂತೆ ಒಂದೇ ಕುಟುಂಬದ ಏಳು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಂಗಭದ್ರಾ ಸೇತುವೆಯ ಮೇಲೆ ಈ ಹೃದಯವಿದ್ರಾವಕ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಟ್ರ್ಯಾಕ್ಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕರುಣಾಜನಕ ದೃಶ್ಯ ನಿರ್ಮಾಣವಾಗಿತ್ತು. ಸದ್ಯಕ್ಕೆ ಏಳು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, ಟ್ರ್ಯಾಕ್ಟರ್ನಲ್ಲಿದ್ದ ಇನ್ನುಳಿದ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಮೃತಪಟ್ಟ ದುರ್ದೈವಿಗಳು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರಲಯನಹಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಒಂದೇ ಕುಟುಂಬದ ಸದಸ್ಯರು ಮತ್ತು ಅವರ ಸಂಬಂಧಿಕರು ಸೇರಿ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಪ್ಪಳದ ಹುಲಿಗಮ್ಮ ದೇವಸ್ಥಾನಕ್ಕೆ ಹರಕೆ ತೀರಿಸಲು…
ಕೊಪ್ಪಳ: ಜಿಲ್ಲೆಯ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ತುಂಗಭದ್ರಾ ನದಿಯ ಸೇತುವೆಯ ಮೇಲಿಂದ ಕೆಳಗೆ ಬಿದ್ದ ಪರಿಣಾಮ, ನಾಲ್ವರು ಸ್ಥಳದಲ್ಲೇ ಅತ್ಯಂತ ದುರಂತವಾಗಿ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಟ್ರ್ಯಾಕ್ಟರ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳದಲ್ಲಿ ಕರುಣಾಜನಕ ದೃಶ್ಯ ನಿರ್ಮಾಣವಾಗಿದೆ. ಹೆಚ್ಚಾಗುವ ಸಾಧ್ಯತೆಯಿರುವ ಸಾವಿನ ಸಂಖ್ಯೆ: ಮೂಲಗಳ ಪ್ರಕಾರ, ಅಪಘಾತದ ಸಮಯದಲ್ಲಿ ಟ್ರ್ಯಾಕ್ಟರ್ನಲ್ಲಿ ಹಲವಾರು ಜನರಿದ್ದರು ಎಂದು ತಿಳಿದುಬಂದಿದೆ. ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದ ರಭಸಕ್ಕೆ ಹಲವರು ವಾಹನದ ಅಡಿಯಲ್ಲಿ ಸಿಲುಕಿಕೊಂಡಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಲ್ಲಿ ಕೆಲವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ. ಸ್ಥಳಕ್ಕೆ ಧಾವಿಸಿದ ಮುನಿರಾಬಾದ್ ಪೊಲೀಸರು: ಘಟನೆ ನಡೆದ ತಕ್ಷಣವೇ ಸ್ಥಳೀಯರು ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ…
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಅವಧಿಗೆ ‘ಯಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ. ಹವಾಮಾನ ಇಲಾಖೆಯ ತಜ್ಞರಾದ ಸಿ. ಎಸ್. ಪಾಟೀಲ್ ಅವರು ಈ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದ ಕರಾವಳಿ ತೀರ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ವಾಯುಭಾರ ಕುಸಿತ ಅಥವಾ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿಯ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಮತ್ತು ಕರಾವಳಿ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆಯ ತೀವ್ರತೆ ಹೆಚ್ಚಿರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲದೆ, ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಚಾಮರಾಜನಗರ,…
ಭೋಪಾಲ್ : ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ದಶಕಗಳಿಂದಲೂ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುದೀರ್ಘ ಕಾನೂನು ಹೋರಾಟಕ್ಕೆ ಪ್ರಮುಖ ತಿರುವು ನೀಡಿರುವ ಉನ್ನತ ನ್ಯಾಯಾಲಯವು, ವಿವಾದಿತ ಭೋಜಶಾಲಾ ಆವರಣವನ್ನು “ದೇವಸ್ಥಾನ” ಎಂದು ಘೋಷಿಸಿ ಐತಿಹಾಸಿಕ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ವಿಜಯ್ ಕುಮಾರ್ ಶುಕ್ಲಾ ಮತ್ತು ಅಲೋಕ್ ಅವಸ್ತಿ ಅವರನ್ನೊಳಗೊಂಡ ಹೈಕೋರ್ಟ್ನ ದ್ವಿಸದಸ್ಯ ಪೀಠವು ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೇ 12 ರಂದೇ ಎಲ್ಲಾ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯವು, ತೀರ್ಪನ್ನು ಕಾಯ್ದಿರಿಸಿತ್ತು. ತೀವ್ರ ಕುತೂಹಲ ಕೆರಳಿಸಿದ್ದ ಈ ತೀರ್ಪನ್ನು ಇಂದು ಅಧಿಕೃತವಾಗಿ ಪ್ರಕಟಿಸಲಾಗಿದೆ. ನ್ಯಾಯಾಲಯವು ತನ್ನ ಆದೇಶದಲ್ಲಿ ಐತಿಹಾಸಿಕ ಸಾಕ್ಷ್ಯಗಳನ್ನು ಉಲ್ಲೇಖಿಸಿದ್ದು, ವಿವಾದಿತ ಇಡೀ ಸಂಕೀರ್ಣವು ಮೂಲತಃ ವಾಗ್ದೇವಿ (ಸರಸ್ವತಿ ದೇವಿ)ಯ ಮಂದಿರವಾಗಿತ್ತು ಮತ್ತು ಇದನ್ನು ರಾಜ ಭೋಜನು ಸ್ಥಾಪಿಸಿದ್ದ ಪ್ರಸಿದ್ಧ ಸಂಸ್ಕೃತ ಅಧ್ಯಯನ ಕೇಂದ್ರವಾಗಿತ್ತು ಎಂದು ಸ್ಪಷ್ಟವಾಗಿ…
ಬೆಂಗಳೂರು : ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ರಾಜ್ಯ ಸರ್ಕಾರ ಮತ್ತೆ ಅನುಮತಿ ನೀಡಿದ ವಿಚಾರವಾಗಿ, ಏನೇ ಟೀಕೆ-ಟಿಪ್ಪಣಿ ಮಾಡಲಿ. ಎಲ್ಲಾ ಚೆನ್ನಾಗಿರಲಿ ಅಂತ ಕಾನೂನುಗಳನ್ನಾಗಲಿ, ನೀತಿಗಳನ್ನು ಮಾಡುತ್ತಾರೆ. ಹಿಜಾಬ್ ಹಿಂದಿನಿಂದಲೂ ಹಾಕುತ್ತಿದ್ದರು. ಹೊಸದಾಗಿ ಏನೂ ಹಾಕುತ್ತಿಲ್ಲ. ಮಧ್ಯದಲ್ಲಿ ಇವರೇ ಗೊಂದಲ ಸೃಷ್ಟಿ ಮಾಡಿದರು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಿನ ಸದಾಶಿವ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದು ಕೇಂದ್ರ ಸರ್ಕಾರದ ನೀತಿಯನ್ನು ಎಕ್ಸ್ಪೋಸ್ ಮಾಡಿದೆ. ಕೇಂದ್ರ ಸರ್ಕಾರ ಜನಪರವಾಗಿಲ್ಲ ಎಂಬುದನ್ನು ಈ ಬೆಳವಣಿಗೆ ಹೇಳುತ್ತದೆ. ವಿಪರೀತ ಬೆಲೆ ಏರಿಕೆ ಆಗ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಸಲಾಗಿದೆ. ಇದನ್ನು ಕೇಂದ್ರ ಮಾಡಬಾರದಿತ್ತು ಎಂದರು. ರಾಜ್ಯದಲ್ಲಿ ಎಸ್ಐಆರ್ ವಿಚಾರವಾಗಿ ಪ್ರತಿಕ್ರಿಯಿಸಿ, ಎಸ್ಐಆರ್ ಬಗ್ಗೆ ನಮಗೆಲ್ಲರಿಗೂ ಅನುಮಾನಗಳಿವೆ. ಅದು ಪಶ್ಚಿಮ ಬಂಗಾಳ ಇರಬಹುದು, ಬೇರೆ ಬೇರೆ ರಾಜ್ಯದಲ್ಲಿ ಎಲ್ಲೆಲ್ಲಿ ಎಸ್ಐಆರ್ ಮಾಡಿದ್ದಾರೋ ಅಲ್ಲೆಲ್ಲ ಅನುಮಾನಗಳು ಹುಟ್ಟಿಕೊಂಡಿವೆ. ಕೆಲವರನ್ನು ಉದ್ದೇಶಪೂರ್ವಕವಾಗಿ ಓಟರ್ ಲಿಸ್ಟ್ನಿಂದ ತೆಗೆಯುತ್ತಿದ್ದಾರೆ. ಕೆಲವರನ್ನು…
ರಾಯಚೂರು: ಇಡೀ ಸಮಾಜವೇ ತಲೆ ತಗ್ಗಿಸುವಂತಹ ಹಾಗೂ ಮಾನವೀಯತೆಯನ್ನೇ ಮರೆತ ಅತ್ಯಂತ ಅಮಾನವೀಯ ಘಟನೆಯೊಂದು ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಹೆತ್ತ ಮಗಳ ರಕ್ಷಣೆಗೆ ನಿಲ್ಲಬೇಕಾದ ತಂದೆ ಮತ್ತು ಆತನ ಸ್ನೇಹಿತನೇ ಸೇರಿ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಘನಘೋರ ಕೃತ್ಯ ನಡೆದಿದ್ದು, ಜಿಲ್ಲೆಯ ಜನತೆಯನ್ನು ತಲ್ಲಣಗೊಳಿಸಿದೆ. ಎರಡು ವರ್ಷಗಳಿಂದ ನರಕಯಾತನೆ: ಬಂಧಿತ ಆರೋಪಿಗಳನ್ನು ಸಂತ್ರಸ್ತ ಬಾಲಕಿಯ ತಂದೆ ಅಮರೇಶ್ ಹಾಗೂ ಆತನ ಆಪ್ತ ಸ್ನೇಹಿತ ಸೀನು ಎಂದು ಗುರುತಿಸಲಾಗಿದೆ. ಈ ಇಬ್ಬರು ಕಾಮುಕರು ಕಳೆದ ಎರಡು ವರ್ಷಗಳಿಂದ ಆ ರಕ್ಷಣೆ ಇಲ್ಲದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಾ, ಆಕೆಗೆ ನರಕಯಾತನೆ ನೀಡಿದ್ದಾರೆ. ಹೆತ್ತ ತಂದೆಯ ಕ್ರೂರತೆಗೆ ಒಳಗಾಗಿ ಹೊರಗೆ ಹೇಳಿಕೊಳ್ಳಲಾಗದೆ ಬಾಲಕಿ ಇಷ್ಟು ದಿನ ಮೌನವಾಗಿ ಕಣ್ಣೀರಿಟ್ಟಿದ್ದಾಳೆ. ಸಾಂತ್ವಾನ ಕೇಂದ್ರದಲ್ಲಿ ಸತ್ಯ ಬಯಲು: ಇತ್ತೀಚೆಗಷ್ಟೇ ಸಂಕಷ್ಟದಲ್ಲಿದ್ದ ಬಾಲಕಿಯನ್ನು ರಕ್ಷಿಸಿದ ಪೊಲೀಸರು ಮತ್ತು ಅಧಿಕಾರಿಗಳು ಆಕೆಯನ್ನು ಲಿಂಗಸುಗೂರಿನ ಸಾಂತ್ವಾನ ಕೇಂದ್ರಕ್ಕೆ ರವಾನಿಸಿದ್ದರು.…














