Author: kannadanewsnow05

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಘೋರ ಘಟನೆ ಒಂದು ನಡೆದಿದ್ದು, ಬೆಂಗಳೂರಿನಿಂದ ಸ್ನೇಹಿತರ ಜೊತೆಗೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿ ಒಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಪ್ರವಾಸಿತಾಣವಾದ ಎಡಮುರಿ ಕಾವೇರಿ ನದಿಯಲ್ಲಿ ಈ ದುರಂತ ಸಂಭವಿಸಿದೆ. ಬೆಂಗಳೂರಿನ ಇನ್ಫೋಸಿಸ್ ಉದ್ಯೋಗಿ ವಿಘ್ನೇಶ್ (25) ಎಂಬುವವರು ಶ್ರೀರಂಗಪಟ್ಟಣದ ಎಡಮುರಿ ಪ್ರವಾಸಿ ತಾಣದಲ್ಲಿ ಕಾವೇರಿ ನದಿಗೆ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಅವರು, ನೀರಿನ ಹರಿವಿನ ಅಂದಾಜು ಸಿಗದೆ ದುರಂತ ಅಂತ್ಯ ಕಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದು, ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ವೇಗವಾಗಿ ಬಂದ ಆಂಧ್ರ ಬಸ್ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್​ ನುಜ್ಜು ಗುಜ್ಜಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಸ್​​​ ಅಧೋನಿಯಿಂದ ಅನಂತಪುರದ ಮೂಲಕ ಬೆಂಗಳೂರಿಗೆ ಬರುತ್ತಿತ್ತು ಎನ್ನಲಾಗ್ತಿದೆ. ಅಪಘಾತದ ರಭಸಕ್ಕೆ ಬಸ್​ ಮುಂಭಾಗದ ಚಕ್ರ ಹಾಗೂ ಇಂಜಿನ್​ ಕಿತ್ತು ಬಂದಿದೆ. ಬಸ್​​ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ರು ಎನ್ನಲಾಗ್ತಿದ್ದು. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೂ ಗಾಬರಿ ಗಾಯಗಳಾಗಿಲ್ಲ ಎಂದು ವರದಿ ಆಗಿದೆ.

Read More

ಬೆಂಗಳೂರು : ಇತ್ತೀಚಿಗೆ ರಾಜ್ಯ ಸರ್ಕಾರ ಎಸ್ ಎಸ್ ಎಲ್ ಸಿ ಯಲ್ಲಿ ತೃತೀಯ ಭಾಷೆ ಹಿಂದಿ ಭಾಷೆಗ್ ಅಂಕಗಳ ಬದಲು ಗ್ರೇಡ್ ಮಾರ್ಕ್ಸ್ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರಿನ ಹೆಚ್‌.ಎನ್‌.ಚಂದನಾ ಮತ್ತು ಎಸ್.ವೆಂಕಟೇಶ್ ಎಂಬವರು ಈ ಅರ್ಜಿ ಸಲ್ಲಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಆಯುಕ್ತರು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಪ್ರತಿವಾದಿಗಳನ್ನಾಗಿಸಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ, ಹಿಂದಿ ಭಾಷೆ ಸೇರಿದಂತೆ ತೃತೀಯ ಭಾಷೆಗಳು ಕಡ್ಡಾಯವಲ್ಲ. ಈ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್​ಗಳನ್ನಾಗಿ ಪರಿಗಣಿಸಲಾಗುತ್ತದೆ. ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ಸೂತ್ರವನ್ನು ಜಾರಿಗೆ ತರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಸಚಿವರು ಈ ನಿರ್ಧಾರವನ್ನು ಪ್ರಕಟಿಸುವುದಕ್ಕೂ ಮುನ್ನ ಸಾರ್ವಜನಿಕವಾಗಿ ಚರ್ಚೆ ನಡೆಸಿಲ್ಲ. ಸಚಿವ ಸಂಪುಟದ ಅನುಮೋದನೆ ಪಡೆದಿಲ್ಲ ಹಾಗೂ ಭಾಷಾ ತಜ್ಞರ ಸಲಹೆ ಇಲ್ಲದೇ ಏಕಪಕ್ಷೀಯವಾಗಿ ತೆಗೆದುಕೊಂಡಿದ್ದಾರೆ ಎಂದು…

Read More

ಬೆಂಗಳೂರು : ಬೆಂಗಳೂರಿನಲ್ಲಿ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಮಧ್ಯ ಗಲಾಟೆ ನಡೆದಿದ್ದು ಕೊತ್ತನೂರಿನ ಭಾರತಿ ಸಿರಿಯಫ್ ನಲ್ಲಿ ನಿನ್ನೆ ರಾತ್ರಿ ಒಂದು ಘಟನೆ ನಡೆದಿದೆ. ಹೆಣ್ಣೂರು ಭಾಗದಿಂದ ಬಂದು ಹೋಟೆಲ್ ಬಳಿ ಡ್ರಗ್ಸ್ ಸೇವನೆ ಮಾಡಿರುವ ಆರೋಪ ಕೇಳಿ ಬಂದಿದೆ. ಸಿರಿಂಜ್ ಮೂಲಕ ಯುವಕರು ಡ್ರಗ್ಸ್ ಇನ್ಜೆಕ್ಟ್ ಮಾಡಿಕೊಳ್ಳುತ್ತಿದ್ದರು. ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಯುವಕರು ಚೇಂಜ್ ಮೂಲಕ ಡ್ರಗ್ಸ್ ಇಂಜೆಕ್ಟ್ ಮಾಡಿಕೊಂಡಿರುವುದು ಪತ್ತೆಯಾಗಿದೆ. ಬಳಿಕ ಹೋಟೆಲ್ ಸಿಬ್ಬಂದಿಗಳು ಯುವಕರನ್ನು ಪ್ರಶ್ನೆ ಮಾಡಿದ್ದಾರೆ. ಹೋಟೆಲ್ ಗೆ ಬರಬೇಡಿ ಅಂತ ಯುವಕರ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಕೋಪಗೊಂಡು ಹೋಟೆಲ್ ಸಿಬ್ಬಂದಿ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ. ಬಳಿಕ ಯುವಕರ ಗುಂಪಿನ ಮೇಲು ಕೂಡ ಹೋಟೆಲ್ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ. ಹೋಟೆಲ್ ನಲ್ಲಿ ಇದ್ದ ಕುರ್ಚಿ ಸೇರಿದಂತೆ ಸಿಕ್ಕ ಸಿಕ್ಕ ವಸ್ತುಗಳಿಂದ ಹೊಡೆದಾಟ ನಡೆಸಿದ್ದಾರೆ. ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಾಗಿದೆ.

Read More

ಕೊಪ್ಪಳ : ಕೊಪ್ಪಳ. ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಕಳ್ಳರ ರೀತಿಯಲ್ಲಿ ತಡರಾತ್ರಿ ಸಮಯದಲ್ಲಿ ಮನೆಯ ಗೋಡೆ-ಕಂಪೌಂಡ್ ಹಾರಿ ಬಂದು ಮನೆಯ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ ಖದೀಮನೊಬ್ಬ ಲಾಕ್ ಆಗಿದ್ದಾನೆ. ಇಲ್ಲಿನ ಬನ್ನಿಗಿಡದ ಕ್ಯಾಂಪಿನ ಪ್ರತಿಷ್ಠಿತರ ಮನೆಗಳಿಗೆ ರಾತ್ರಿ ವೇಳೆ ಕಳ್ಳರಂತೆ ಬಂದು ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಮಹಿಳೆಯರ ಒಳ ಉಡುಪುಗಳನ್ನು ಕದ್ದುಕೊಂಡು ಹೋಗಿ ಜನರ ಕೈಗೆ ಸಿಗದೇ ಚಳ್ಳೆಹಣ್ಣು ತಿನ್ನಿಸುತ್ತಿದ್ದ ವಿಕೃತ ಮನಸ್ಸಿನ ವ್ಯಕ್ತಿ ಈಗ ರೆಡ್​ಹ್ಯಾಂಡ್​ ಆಗಿ ಸಿಕ್ಕುಬಿದ್ದಿದ್ದಾನೆ. ಕಳ್ಳರ ರೀತಿಯಲ್ಲಿ ತಡರಾತ್ರಿ ಸಮಯದಲ್ಲಿ ಮನೆಯ ಗೋಡೆ-ಕಂಪೌಂಡ್ ಹಾರಿ ಬಂದು ಮನೆಯ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ ಖದೀಮನೊಬ್ಬ ಲಾಕ್ ಆಗಿದ್ದಾನೆ. ಇಲ್ಲಿನ ಬನ್ನಿಗಿಡದ ಕ್ಯಾಂಪಿನ ಪ್ರತಿಷ್ಠಿತರ ಮನೆಗಳಿಗೆ ರಾತ್ರಿ ವೇಳೆ ಕಳ್ಳರಂತೆ ಬಂದು ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಮಹಿಳೆಯರ ಒಳ ಉಡುಪುಗಳನ್ನು ಕದ್ದುಕೊಂಡು ಹೋಗಿ ಜನರ ಕೈಗೆ ಸಿಗದೇ ಚಳ್ಳೆಹಣ್ಣು ತಿನ್ನಿಸುತ್ತಿದ್ದ ವಿಕೃತ…

Read More

ಹಾವೇರಿ : ಹಾವೇರಿಯಲ್ಲಿ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎರಡು ವರ್ಷದ ಮಗು ಹಜರತ್ ಅಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಹಾವೇರಿ ಬಸ್ ನಿಲ್ದಾಣದಲ್ಲಿ ಇಂದು ಈ ಒಂದು ಭೀಕರ ಅಪಘಾತ ಸಂಭವಿಸಿತ್ತು ಬಸ್ ಗಾಗಿ ಕಾಯುತ್ತಿದವರ ಮೇಲೆ ಸರ್ಕಾರಿ ಬಸ್ ಏಕಾಏಕಿ ಬಂದು ನಿಯಂತ್ರಣ ಕಳೆದುಕೊಂಡು ಹರಿದಿದೆ ಈ ವೇಳೆ ಎರಡು ವರ್ಷದ ಹಜರತ್ ಅಲಿಗೆ ಗಂಭೀರವಾದ ಗಾಯಗಳಾಗಿತ್ತು. ಇನ್ನು ಉಳಿದ ಮೂವರು ಪ್ರಯಾಣಿಕರಾದ ವಾಸುದೇವ ಹರ್ಷ ಹಾಗೂ ಕಾವ್ಯಂಜಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಮಂಗಳೂರು : ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ಭೀಕರವಾದ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿಯಾದ ಭೀಕರ ಅಪಘಾತ ಸಂಭವಿಸಿದೆ. ಘಟನೆ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಒಂದು ಕ್ಷಣ ಮೈ ಜುಮ್ ಎನ್ನುವಂತಿದೆ. ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂಬುವವರೇ ಗಾಯಗೊಂಡ ಮಹಿಳೆ. ಇವರು ಬೆಳಗ್ಗೆ ಮಗಳು ದೀಪಶ್ರೀ ಅವರೊಂದಿಗೆ ಗುಳಿಗಜ್ಜ ಕಟ್ಟೆಗೆ ಕಾಣಿಕೆ ಹಾಕುವ ಸಲುವಾಗಿ ಬಂದಿದ್ದರು. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಿ ರಸ್ತೆಯ ಅಂಚಿಗೆ ತಲುಪುತ್ತಿದ್ದಂತೆ, ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಅತೀ ವೇಗವಾಗಿ ಬಂದ ಕಾರು ಇವರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.

Read More

ತುಮಕೂರು : ಇಂದು ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಡಾ. ಶಿವಕುಮಾರ್ ಶ್ರೀಗಳ ಜನ್ಮದಿನೊತ್ಸವ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದಾರೆ. ಇದೇ ವೇಳೆ ಮಠದ ಕಾರ್ಯಕ್ರಮಕ್ಕೆ ಎಂದು ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಕಾರ್ಯಕ್ರಮಕ್ಕೆ ಬಂದಿದ್ದ ನಟರಾಜು (60) ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಎದೆನೋವು ಕಾಣಿಸಿಕೊಂಡು ಮಠದಲ್ಲೇ ಕುಸಿದುಬಿದ್ದು ದುರ್ಮರಣ ಹೊಂದಿದ್ದಾರೆ. ಮೃತ ನಟರಾಜು ಮೈಸೂರು ಜಿಲ್ಲೆಯ ನಂಜನಗೂಡಿನ ತಾಲೂಕಿನ ತಾಯೂರು ನಿವಾಸಿ ಎಂದು ತಿಳಿದುಬಂದಿದೆ. ನಿನ್ನೆ ಸ್ನೇಹಿತರ ಜೊತೆಗೆ ಸಿದ್ದಗಂಗಾ ಮಠಕ್ಕೆ ಬಂದಿದ್ದ ನಟರಾಜು ಶೌಚಾಲಯಕ್ಕೆ ಹೋಗಿ ಬರುವಾಗಿ ಕುಸಿದುಬಿದ್ದು ಸಾವನ್ನಪ್ಪಿದ್ದಾನೆ. ಅಲ್ಲದೇ ಮಠದ ಹಳೆ ವಿದ್ಯಾರ್ಥಿಯಾದ ನಟರಾಜು ಪ್ರತಿವರ್ಷದಂತೆ ಈ ವರ್ಷವು ಬಂದಿದ್ದ. ಕೆಲ ದಿನಗಳ ಹಿಂದೆ ಅಷ್ಟೆ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಡಾಕ್ಟರ್ ಮಲ್ಲು ಅರೆಸ್ಟ್ ಆಗಿದ್ದಾರೆ. ಗಾಂಧಿ ನಗರದಲ್ಲಿರುವ ನರಸಿಂಹ ಕೌನ್ಸಿಲ್ ಕಚೇರಿಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡುವ ಘಟನೆ ನಡೆದಿತ್ತು. ಕಚೇರಿಯಲ್ಲಿ ಕೆಲಸ ಮಾಡುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಮಹಿಳಾ ಸಿಬ್ಬಂದಿ ಜೊತೆಗೆ ಆರೋಪಿ ಡಾಕ್ಟರ್ ಮಲ್ಲು ಅಸಭ್ಯವಾಗಿ ವರ್ತಿಸಿದ್ದಾನೆ ಮಹಿಳೆಯ ಅಂಗಾಂಗ ಮುಟ್ಟಿ, ಎಳೆದಾಡಿ ದೌರ್ಜನ್ಯ ಎಸಗಿದ್ದಾನೆ. ಕಾರು ಬಳಿ ಬಲವಂತವಾಗಿ ತಬ್ಬಿಕೊಂಡು ಮುತ್ತು ಕೊಡಲು ಯತ್ನಿಸಿದ್ದಾನೆ. ಅಲ್ಲದೇ ಮಹಿಳೆಯನ್ನು ಬಲವಂತವಾಗಿ ಕಾರಿನ ಒಳಗಡೆ ಎಳೆದುಕೊಳ್ಳಲು ಯತ್ನಿಸಿದ್ದಾನೆ. ಘಟನೆ ಸಂಭಂದ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಸಂತೃಪ್ತ ಮೇಲೆ ದೂರು ನೀಡಿದ್ದಾರೆ. ಸಂತ್ರಸ್ತೆ ಮಹಿಳೆ ದೂರು ನೀಡಿದ ಆಧಾರದ ಮೇಲೆ ಸದ್ಯ ಡಾಕ್ಟರ್ ಮಲ್ಲುನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Read More

ಬೆಂಗಳೂರು : ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ಇದೀಗ ಬಿಜೆಪಿ ದೂರು ನೀಡಿದೆ. ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದೆ. ಜಯನಗರ ಶಾಸಕ ಸಿಕೆ ರಾಮಮೂರ್ತಿ ನೇತೃತ್ವದಲ್ಲಿ ದೂರು ಸಲ್ಲಿಕೆಯಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ ಪ್ರಚಾರದಲ್ಲಿ ಬಿಜೆಪಿ ಕುರಿತು ಪ್ರದೀಪ್ ಈಶ್ವರ್ ನೀಡಿದ್ದ ಹೇಳಿಕೆ ವಿರುದ್ಧ ದೂರು ನೀಡಲಾಗಿದೆ. ಪ್ರಚಾರದಲ್ಲಿ ಭಾಗಿಯಾಗಿದ್ದ ಸರ್ಕಾರಿ ಶಿಕ್ಷಕನ ವಿರುದ್ಧ ದೂರು ದಾಖಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಚಂದ್ರಶೇಖರ ಭಾಗಿಯಾಗಿದ್ದ.

Read More