Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದ್ದು, ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆಗೈದ ಘಟನೆ ನಗರದ ಹೊರವಲಯ ಅಲಿಯಾಬಾದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನಡೆದಿದೆ.ರಾಜು ಕರೆ (48) ಕೊಲೆಯಾದ ದುರ್ದೈವಿ. ಸಂಜೆ 4:30ರ ಸುಮಾರು ಘಟನೆ ನಡೆದಿದೆ. ರಸ್ತೆಯನ್ನು ಗಮನಿಸಿದರೆ ಎರಡು ವಾಹನಗಳು ದಾಟುವುದು ಕಷ್ಟ. ರಾಜು ತಮ್ಮ ಥಾರ್ ವಾಹನದಲ್ಲಿ ಬರುತ್ತಿರುವುದನ್ನು ಗಮನಿಸಿಯೇ ದುಷ್ಕರ್ಮಿಗಳು ಟಿಪ್ಪರ್ ಮೂಲಕ ಬಂದು ಡಿಕ್ಕಿ ಹೊಡೆದು ಮೊದಲು ಅಪಘಾತ ಮಾಡಿದ್ದಾರೆ. ಬಳಿಕ ಜೀಪ್ ಡೋರ್ ಓಪನ್ ಆಗದ್ದಕ್ಕೆ ಜೀಪಿನ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ. ಫೈರಿಂಗ್ ಕೂಡ ಮಾಡಿದ್ದಾರೆ. ಸೋಕೋ(SOCO) ಹಾಗೂ ಎಲ್ಲ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಮಾಡಲಾಗುತ್ತದೆ. ಮೇಲ್ನೋಟಕ್ಕೆ ಆಸ್ತಿ ವಿಚಾರಕ್ಕೆ ಹತ್ಯೆ ನಡೆದಿರುವ ಶಂಕೆ ಇದೆ. ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತದೆ. ಕೊಲೆಗೀಡಾದ ವ್ಯಕ್ತಿ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿದ್ದರೆಂಬ ಮಾಹಿತಿ ಇದೆ” ಎಂದು…
BREAKING : ರಾಜ್ಯದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ : ಯುವತಿಗೆ ವಿಷ ಹಾಕಿ ಕೊಂದ ಬಳಿಕ, ಶವ ಸುಟ್ಟು ಹಾಕಿದ ಕಿರಾತಕರು!
ಬೆಳಗಾವಿ : ಕಳೆದ ಕೆಲವು ತಿಂಗಳುಗಳ ಹಿಂದೆ ಹುಬ್ಬಳ್ಳಿಯಲ್ಲಿ ಮರ್ಯಾದ ಹತ್ಯೆ ಪ್ರಕರಣ ಭಾರಿ ಸದ್ದು ಮಾಡಿತ್ತು. ಅದರ ಬೆನ್ನಲ್ಲೆ, ರಾಜ್ಯ ಸರ್ಕಾರ ಮರ್ಯಾದ ಹತ್ಯೆ ತಡೆ ಕಾನೂನು ಜಾರಿ ಮಾಡಿದ್ದು, ಇದೀಗ ರಾಜ್ಯದಲ್ಲಿ ಮತ್ತೊಂದು ಮರ್ಯಾದ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಪ್ರಿಯಕರನ ಜೊತೆಗೆ ಯುವತಿ ಓಡಿ ಹೋಗಿದ್ದಕ್ಕೆ ವಿಷ ಹಾಕಿ ಕೊಂದ ಬಳಿಕ ಯುವತಿಯ ಸಂಬಂಧಿಕರೇ ಆಕೆಯ ಶವ ಸುಟ್ಟು ಹಾಕಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನಲ್ಲಿ ಫೆಬ್ರವರಿ 17ರಂದು ಪ್ರಿಯಕರ ಕೃಷ್ಣನ ಜೊತೆಗೆ ಸತ್ತ್ಯವ್ವ ಓಡಿ ಹೋಗಿದ್ದಳು. ಸೌದತ್ತಿ ತಾಲೂಕಿನ ಬೆಳವಡಿಯಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರು ವಾಸಿಸುತ್ತಿದ್ದರು. 15 ದಿನಗಳ ಬಳಿಕ ಇಬ್ಬರನ್ನು ಕುಟುಂಬದ ಸದಸ್ಯರು ಕರೆ ತಂದಿದ್ದಾರೆ. ಎರಡು ಕುಟುಂಬಸ್ಥರ ನಡುವೆ ರಾಜಿ ಸಂಧಾನ ನಡೆದು ಕರೆತಂದಿದ್ದರು. ಬಳಿಕ ಸತ್ಯವ್ವಳ ಅಣ್ಣ ಆಕೆಯನ್ನು ಕರೆದುಕೊಂಡು ಬಂದು ಅಕ್ಕನ ಮನೆಗೆ ಕಳುಹಿಸಿದ್ದ. ಮಹಾರಾಷ್ಟ್ರದ ಶಿರೋಳದಲ್ಲಿ ಸತ್ಯವ ಅಕ್ಕನ ಮನೆಗೆ ಕಳುಹಿಸಿದ್ದಾರೆ. ಈ…
ಬೆಂಗಳೂರು : ರಾಜ್ಯ ಸರ್ಕಾರದಿಂದ ಇದೀಗ ಪಿಯುಸಿ ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ನೀಡಿದೆ. 2026–27ನೇ ಸಾಲಿನಿಂದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ನೀಡಲು ನಿರ್ಧಾರ ಮಾಡಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಬಹಳ ದೊಡ್ಡ ಅನುಕೂಲವಾಗಲಿದೆ. ಸರ್ಕಾರದ ಈ ಕ್ರಮ ಬಹಳ ಸ್ವೀಕಾರವಾಗಿದೆ. ಪಠ್ಯಪುಸ್ತಕಗಳ ಬೆಲೆ, ಕಾರ್ಯಪುಸ್ತಕಗಳ ಖರೀದಿ, ಶುಲ್ಕ ಇತ್ಯಾದಿ ಖರ್ಚುಗಳಿಂದ ಅನೇಕರು ಒತ್ತಡಕ್ಕೆ ಒಳಗಾಗುತ್ತಾರೆ. ಉಚಿತ ಪಠ್ಯಪುಸ್ತಕಗಳ ವ್ಯವಸ್ಥೆಯಿಂದ ಈ ಭಾರ ಸ್ವಲ್ಪವಾದರೂ ಕಡಿಮೆಯಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಪುಸ್ತಕಗಳ ಕೊರತೆಯಿಂದ ಓದನ್ನು ನಿಲ್ಲಿಸುವ ಪರಿಸ್ಥಿತಿ ಕಡಿಮೆಯಾಗುವ ಸಾಧ್ಯತೆ ಇದೆ. ಈ ಯೋಜನೆಯ ಮುಖ್ಯ ಉದ್ದೇಶ ಪೋಷಕರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು. ವಿಶೇಷವಾಗಿ ಗ್ರಾಮೀಣ ಪ್ರದೇಶಗಳ ಪೋಷಕರಿಗೆ ಮಕ್ಕಳ ಶಿಕ್ಷಣ ವೆಚ್ಚ ದೊಡ್ಡ ಸಮಸ್ಯೆಯಾಗಿರುತ್ತದೆ. ಹೀಗಾಗಿ ಪಿಯುಸಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡುವ ನಿರ್ಧಾರ ಕೈಗೊಂಡಿದೆ. ಸಂಖ್ಯೆಗಳ ದೃಷ್ಟಿಯಿಂದ ನೋಡಿದರೆ, ಸರ್ಕಾರಿ ಪಿಯು ಕಾಲೇಜುಗಳಲ್ಲಿ ಮೊದಲ ಮತ್ತು ದ್ವಿತೀಯ ವರ್ಷದ ಪಿಯು ತರಗತಿಗಳಲ್ಲಿ ಒಟ್ಟು ಸುಮಾರು 13.17 ಲಕ್ಷ…
ಇಸ್ಲಾಮಾಬಾದ್ : ಆಸ್ಪತ್ರೆಯಲ್ಲಿ ಬಳಕೆ ಮಾಡಿರುವ ಸಿರಿಂಜ್ ಅನ್ನು ಮತ್ತೆ ಮತ್ತೆ ಬಳಕೆ ಮಾಡಿದ ಪರಿಣಾಮ 331 ಮಕ್ಕಳಿಗೆ HIV ಸೋಂಕು ತಗುಲಿರುವ ಆಘಾತಕಾರಿ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಹೌದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಅಸುರಕ್ಷಿತ ಇಂಜೆಕ್ಷನ್ ಪದ್ಧತಿಗಳು ಮುಂದುವರೆದಿವೆ. ಮಕ್ಕಳಲ್ಲಿ ಹೆಚ್ಐವಿ ಪ್ರಕರಣಗಳು ಹೆಚ್ಚಾದ ನಂತರ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಅಲ್ಲಿ ಮರುಬಳಕೆ ಮಾಡಲಾದ ಸಿರಿಂಜ್ಗಳು ಮತ್ತು ಕಲುಷಿತ ಬಾಟಲುಗಳು ನೂರಾರು ಮಕ್ಕಳನ್ನು ಸೋಂಕಿಗೆ ದೂಡಿವೆ ಎನ್ನಲಾಗಿದೆ. ಪ್ರಾಂತೀಯ ಸ್ಕ್ರೀನಿಂಗ್ ಕಾರ್ಯಕ್ರಮಗಳು, ಖಾಸಗಿ ಚಿಕಿತ್ಸಾಲಯಗಳು ಮತ್ತು ಸೋರಿಕೆಯಾದ ಪೊಲೀಸ್ ದಾಖಲೆಗಳ ಡೇಟಾವನ್ನು ಬಳಸಿಕೊಂಡು ತನಿಖಾ ವರದಿ ಮಾಡಲಾಗಿದೆ. 2024ರ ನವೆಂಬರ್ನಿಂದ 2025 ರ ಅಕ್ಟೋಬರ್ ನಡುವೆ ಟೌನ್ಸಾದಲ್ಲಿ ಹೆಚ್ಐವಿ ಪಾಸಿಟಿವ್ ಪರೀಕ್ಷೆಯಲ್ಲಿ 331 ಮಕ್ಕಳು ಸೋಂಕಿಗೆ ತುತ್ತಾಗಿದ್ದಾರೆ.
ಕಲಬುರ್ಗಿ : ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ನಂದಿನಿ (16) ಮತ್ತು ಸಂಜನಾ (17) ಎಂಬ ಇಬ್ಬರು ಬಾಲಕಿಯರ ಶವಗಳು ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ. ಅಘಾತ ವಿಷಯ ಏನೆಂದರೆ, ಇಬ್ಬರ ಕೈಗಳನ್ನು ಹಗ್ಗದಿಂದ ಕಟ್ಟಿದ ಸ್ಥಿತಿಯಲ್ಲಿ ಶವಗಳು ಕಂಡುಬಂದಿರುವುದು ಪ್ರಕರಣಕ್ಕೆ ಗಂಭೀರ ತಿರುವು ನೀಡಿದೆ. ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ಈ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಹಳೆ ವೈಷಮ್ಯ ಹಿನ್ನೆಲೆ ಊರ ಜಾತ್ರೆಯ ವೇಳೆ ಅಟ್ಟಾಡಿಸಿ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹನುಮಂತಯ್ಯನಪಾಳ್ಯದಲ್ಲಿ ಈ ಒಂದು ಕೊಲೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮಾಂಜಿನಪ್ಪ (45) ಎಂದು ತಿಳಿದುಬಂದಿದೆ. ಕೊಲೆಗೈದ ಬಳಿಕ ಬೈಕ್ ಸಮೇತ ಗುಡ್ಡದ ಬಳಿ ಆರೋಪಿಗಳು ರಾಮಾಂಜಿನಪ್ಪ ಶವ ಎಸೆದು ಪರಾರಿಯಾಗಿದ್ದಾರೆ. ರಸ್ತೆ ಬದಿ ಬಿದ್ದಿದ್ದ ಬೈಕ್ ಪರಿಶೀಲನೆ ಮಾಡಿದಾಗ ಶವ ಪತ್ತೆಯಾಗಿದೆ. ಘಟನೆ ಕುರಿತಂತೆ ದೊಡ್ಡ ಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಬಿಹಾರ್ : ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌದರಿ ಆಯ್ಕೆಯಾಗಿದ್ದಾರೆ. ಬಿಹಾರ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿ ಆಗಿ ಸಾಮ್ರಾಟ್ ಚೌದರಿ ಇದೀಗ ಆಯ್ಕೆ ಆಗಿದ್ದಾರೆ. ಬಿಹಾರದ ಮೊದಲ ಬಿಜೆಪಿ ಸಿಎಂ ಎಂಬ ಹೆಗ್ಗಳಿಕೆಗೆ ಸಾಮ್ರಾಟ್ ಚೌದರಿ ಪಾತ್ರರಾಗಿದ್ದಾರೆ. ಸದ್ಯ ಅವರು ಬಿಹಾರ ರಾಜ್ಯದ ಹಾಲಿ ಉಪ ಮುಖ್ಯಮಂತ್ರಿ ಆಗಿದ್ದಾರೆ. ನಾಳೆ ಬಿಹಾರದ ನೂತನ ಸಿಎಂ ಪ್ರಮಾಣವಚನ ಸ್ವೀಕಾರ ಸಮಾರಂಭ ಚೌದ್ರಿ ಬಿಹಾರದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು ಅದರ ಬೆನ್ನಲ್ಲೇ ಬಿಹಾರದ ನೂತನ ಮುಖ್ಯಮಂತ್ರಿ ಯಾಗಿ ಬಿಜೆಪಿಯ ಸಾಮ್ರಾಟ್ ಚೌದರಿ ಆಯ್ಕೆಯಾಗಿದ್ದಾರೆ. ಯಾರಿದು ಸಾಮ್ರಾಟ ಚೌದರಿ? ಬಿಹಾರದಲ್ಲಿ ಬಿಜೆಪಿ ‘ಮೇಲ್ವರ್ಗ ಪರ’ ಎಂಬ ಆರೋಪಗಳನ್ನು ತೊಡೆದು ಹಾಕಲು ನೆರವಾಗುತ್ತಿರುವ ಒಬಿಸಿ ನಾಯಕ ಸಾಮ್ರಾಟ್ ಚೌಧರಿ, ಸುಮಾರು ಏಳು ವರ್ಷಗಳ ಹಿಂದೆ ಪಕ್ಷ ಸೇರ್ಪಡೆಯಾದ ಬಳಿಕ ತ್ವರಿತವಾಗಿ ಪ್ರಮುಖ ನಾಯಕರಾಗಿ ಬೆಳೆದವರು. ಸಾಮ್ರಾಟ್ ಅವರನ್ನು ಬಿಜೆಪಿ ಶಾಸಕಾಂಗ…
ಬಿಹಾರ್ : ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಮಂಗಳವಾರ ರಾಜೀನಾಮೆ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಎರಡು ದಶಕಗಳ ಐತಿಹಾಸಿಕ ಯುಗ ಅಂತ್ಯಗೊಂಡಿದೆ. ಅದರ ಬೆನ್ನಲ್ಲೇ ಬಿಹಾರದ ನೂತನ ಮುಖ್ಯಮಂತ್ರಿ ಯಾಗಿ ಸಾಮ್ರಾಟ್ ಚೌದರಿ ಆಯ್ಕೆಯಾಗಿದ್ದಾರೆ. ನಿತೀಶ್ ಕುಮಾರ್ ಸುಮಾರು 20 ವರ್ಷಗಳಿಂದ ಬಿಹಾರದ ರಾಜಕೀಯ ಭೂದೃಶ್ಯದ ನಿರ್ಣಾಯಕ ವ್ಯಕ್ತಿಯಾಗಿದ್ದಾರೆ. ಜನತಾ ದಳ (ಯುನೈಟೆಡ್) (ಜೆಡಿಯು) ಮುಖ್ಯಸ್ಥರ ನಿರ್ಗಮನವನ್ನು ಹಲವಾರು ಕಾರಣಗಳಿಗಾಗಿ “ಪರಿಣಾಮಕಾರಿ ಬದಲಾವಣೆ” ಎಂದು ನೋಡಲಾಗುತ್ತದೆ. ಅವರ ನಿರ್ಗಮನವು ಮೈತ್ರಿಕೂಟದ ಪಾಲುದಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ಬಿಹಾರದಲ್ಲಿ ತನ್ನ ಮೊದಲ ಮುಖ್ಯಮಂತ್ರಿಯನ್ನು ನೇಮಿಸಲು ದಾರಿ ಮಾಡಿಕೊಡುತ್ತದೆ, ಈ ಹಿಂದೆ ಅದು ಕಿರಿಯ ಪಾಲುದಾರ ಅಥವಾ ಒಕ್ಕೂಟದಲ್ಲಿ ಮಾತ್ರ ಸೇವೆ ಸಲ್ಲಿಸಿದ್ದ ರಾಜ್ಯವಾಗಿದೆ. ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ನಂತರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. https://twitter.com/NitishKumar/status/2043991163473146172?t=U3mQcEdW4RuN0zyPSi4oMQ&s=19
ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, 14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ದುರಂತ ಸಂಭವಿಸಿದೆ. ವೈಟ್ ಫೀಲ್ಡ್ ಬಳಿಯ ಇಮ್ಮಡಿ ಹಳ್ಳಿಯ ಮನೆಯಲ್ಲಿ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ. ಕಾರುಣ್ಯ (14) ವರ್ಷದ ಮಗಳನ್ನು ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿದ್ದಾರೆ. ಬಳಿಕ ತಾಯಿ ಸುವರ್ಣ (40) ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ ಸುವರ್ಣ ಅವರ ಅತ್ತೆ ಮಾವ ಮನೆಯಲ್ಲಿ ಇದ್ದರು ಈ ವೇಳೆ ಕೋಣೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್ ಠಾಣೆ ಪೊಲೀಸರು ಭೇಟಿ ನೀಡಿದ್ದು ಈ ಒಂದು ಘಟನೆಗೆ ಏನು ಕಾರಣ ಎನ್ನುವುದನ್ನು ಪರಿಶೀಲನೆ ನಡೆಸುತ್ತಿದ್ದಾರೆ.
BREAKING : ವಿಜಯಪುರದಲ್ಲಿ ಘೋರ ದುರಂತ : ನನ್ನ ಹೋಲಿಕೆ ಇಲ್ಲ ಎಂದು, ಹೆತ್ತ ಮಗನನ್ನ ನದಿಯಲ್ಲಿ ಮುಳುಗಿಸಿ ಕೊಂದ ತಂದೆ!
ವಿಜಯಪುರ : ವಿಜಯಪುರದಲ್ಲಿ ಗೌರಘಟನೆ ಒಂದು ಸಂಭವಿಸಿದ್ದು ತಾನೇ ಹೆತ್ತ ಮಗನನ್ನು ನದಿಗೆ ತಳಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ನಾಗಠಾಣದಲ್ಲಿ ನಡೆದಿದೆ. ಇದಕ್ಕೆ ಕಾರಣ ಮಗ ತನ್ನ ಹೋಲಿಕೆ ಇಲ್ಲ ಎಂದು ತಿಳಿದು ನದಿಗೆ ತಳ್ಳಿ ಮಗನನ್ನು , ತಂದೆಯೇ ಕೊಲೆ ಮಾಡಿದ್ದಾನೆ. ಹೌದು ನಾಗಠಾಣದ ಸಿದ್ಧಾರ್ಥ ಮಲ್ಲಿಕಾರ್ಜುನ್ ಅರಕೇರಿ (6) ಕೊಲೆಯಾದ ಬಾಲಕನಾಗಿದ್ದು ಮಲ್ಲಿಕಾರ್ಜುನ ಅರಕೇರಿಗೆ ಗ್ರಾಮದ ಕೆಲ ಜನರು ನಿನ್ನ ಮಗ ಸಿದ್ದಾರ್ಥ ನೋಡಲು ನಿನಂತೆ ಇಲ್ಲ ಎಂದು ಚೇಡಿಸಿದ್ದರು. ನಿನ್ನ ಮಗನ ಹೋಲಿಕೆ ನಿನ್ನಂತಿಲ್ಲ ಎಂದು ನಿತ್ಯ ಸತಾಯಿಸುತ್ತಿದ್ದರು, ಇದರಿಂದ ರೋಸಿಹೋಗಿದ್ದ ಮಲ್ಲಿಕಾರ್ಜುನ ಅರಕೇರಿ ಹೆತ್ತ ಮಗನನ್ನು ನದಿಯಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾನೆ. ಮಹಾರಾಷ್ಟ್ರದ ಕರಾಡ್ ಜಿಲ್ಲೆ ವಡೋಲಿ ಬಳಿ ಕೃಷ್ಣಾ ನದಿ ಬಳಿ ಕರೆದುಕೊಂಡು ಹೋಗಿ ಮಗುವನ್ನ ನದಿಗೆ ತಳ್ಳಿದ್ದಾನೆ. ಕಳೆದ ಮಾರ್ಚ್ 16 ರಂದು ಮಗನನ್ನು ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿ ಹತ್ಯೆ ಮಾಡಿ ವಾಪಸ್ ಊರಿಗೆ ಬಂದಿದ್ದ ಆರೋಪಿ ಮಲ್ಲಿಕಾರ್ಜುನ ಅರಕೇರಿ,…














