Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಭರತ್ ಹೆಗಡೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡಾಗಿ ಬಲೆಗೆ ಬಿದ್ದಿದ್ದಾರೆ. 6 ಲಕ್ಷ ರೂಪಾಯಿ ಲಂಚ ಪಡೆಯುವಾಗ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಭರತ್ ಹೆಗಡೆ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ. ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಭರತ್ ಹೆಗಡೆ ಟ್ರ್ಯಾಕ್ ಮಾಡಲಾಗಿದ್ದು, ದೂರುದಾರರಿಗೆ 60 ಲಕ್ಷ ಹಣ ಕಟ್ಟುವಂತೆ ಡಿಸಿ ಭರತ್ ಹೆಗಡೆ ನೋಟಿಸ್ ನೀಡಿದ್ದ. ಹಣ ಕಡಿಮೆ ಮಾಡಬೇಕು ಅಥವಾ ಕಟ್ಟದ ಹಾಗೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಹತ್ತು ಲಕ್ಷ ಹಣ ನೀಡುವಂತೆ ಭರತ್ ಹೆಗಡೆ ಬೇಡಿಕೆ ಇಟ್ಟಿದ್ದ ಲಾರಿ ಮತ್ತು ಪೆಟ್ರೋಲ್ ಬಂಕ್ ಮಾಲಿಕನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಂಗಡವಾಗಿ 6 ಲಕ್ಷ ರೂಪಾಯಿ ಲಂಚ ಪಡೆಯುವಾಗ ಭರತ್ ಹೆಗಡೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಗಿಬಿದ್ದಿದ್ದಾನೆ.
ಬೆಂಗಳೂರು: ದೇಶಾದ್ಯಂತ ಉಂಟಾಗಿರುವ ಎಲ್ಪಿಜಿ ಕೊರತೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ ಕರ್ನಾಟಕಕ್ಕೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆಯನ್ನು ಶೇ.68ಕ್ಕೆ ಹೆಚ್ಚಿಸಲಾಗಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಭಾನುವಾರ ಹೆಚ್ಚುವರಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳನ್ನು ಆದ್ಯತೆ ಅನುಸಾರವಾಗಿ ಹಂಚಿಕೆ ಪರಿಷ್ಕರಿಸಿದೆ. ಶಿಕ್ಷಣ ಸಂಸ್ಥೆಗಳು, ವಸತಿ ನಿಲಯಗಳು ಆಸ್ಪತ್ರೆ ಮತ್ತು ಇತರೆ ಅವಶ್ಯಕ ಸಂಸ್ಥೆಗಳಿಗೆ 4200 ಸಿಲಿಂಡರ್ಗಳು, ಸರ್ಕಾರ/ಪಿ.ಎಸ್.ಯು ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು, ಬಸ್ ನಿಲ್ದಾಣಗಳ ಕ್ಯಾಂಟೀನ್ಗಳಿಗೆ 1200, ಹೋಟೆಲ್, ಡಾಬಾ, ರೆಸ್ಟೋರೆಂಟ್, ಕಾರ್ಖಾನೆ, ಕೆಎಂಎಫ್., ಡೇರಿ, ಸಮುದಾಯ ಅಡುಗೆ ಕೇಂದ್ರಗಳು, ಪಿ.ಜಿ, ಕ್ಯಾಂಟೀನ್, ಕ್ರೀಡಾ ವಸತಿ ನಿಲಯಗಳಿಗೆ 17500, ಬೀಜ ಸಂಸ್ಕರಣೆ, ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳು, ಔಷಧೋದ್ಯಮ, ಮೀನುಗಾರಿಕೆ, ಕೋಳಿ ಸಾಕಣೆ, ರೇಷ್ಮೆ ಹುಳು ಸಾಕಣೆಗೆ 6 ಸಾವಿರ, ಇತರ ಅವಶ್ಯಕತೆ ಆಧಾರದ ಮೇಲೆ 563 ಸಿಲಿಂಡರ್ ಸೇರಿದಂತೆ ಒಟ್ಟು 29463 ಸಿಲಿಂಡರ್ ಪ್ರತಿನಿತ್ಯ ಒದಗಿಸಲಾಗುವುದು ಎಂದು ಮುನಿಯಪ್ಪ ವಿವರಿಸಿದ್ದಾರೆ. ಹೆಚ್ಚು ದರ ವಸೂಲಿ…
ಮೈಸೂರು : ಮೈಸೂರಲ್ಲಿ ಘೋರ ದುರಂತ ಒಂದು ನಡೆದಿದ್ದು, ಒಣಗಿದ ದಾಸವಾಳ ಹೂ ನುಗಿದ್ದ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜುರು ಗ್ರಾಮದಲ್ಲಿ ಈ ಒಂದು ಮನಕಲಕುವ ಘಟನೆ ನಡೆದಿದೆ. ದಾಸವಾಳ ಹೂವು ನುಂಗಿದ್ದ ಆರುವರೆ ತಿಂಗಳ ಚಿನ್ಮಯಗೌಡ ಮನೆಯ ಹೊಸ್ತಿಲಿನಲ್ಲಿ ಪೂಜೆಗೆ ಎಂದು ಹೂವು ಇಟ್ಟಿದ್ದರು. ಈ ವೇಳೆ ಚಿನ್ಮಯ್ ಗೌಡ ಒಣಗಿದ ದಾಸವಾಳ ಹೂವನ್ನು ನುಂಗಿ ಅಸ್ವಸ್ಥಗೊಂಡಿತ್ತು. ತಕ್ಷಣ ಮೈಸೂರಿನ ಖಾಸಗಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿ ಆಗದೆ ಆಸ್ಪತ್ರೆಯಲ್ಲಿ ಚಿನ್ಮಯ್ ಗೌಡ ಮೃತಪಟ್ಟಿದೆ ಸುದರ್ಶನ್ ಮತ್ತು ನವ್ಯ ಎರಡನೇ ಪುತ್ರ ಚಿನ್ಮಯ್ ಗೌಡ ಎಂದು ತಿಳಿದುಬಂದಿದೆ.
ಚಿಕ್ಕಮಗಳೂರು : ರಾಜ್ಯದಲ್ಲಿ ಇತ್ತೀಚಿಗೆ ಸೈಬರ್ ವಂಚನೆ ಕೇಸ್ ಗಳು ಹೆಚ್ಚಿದ್ದು, ಇದೀಗ ಟ್ರೇಡಿಂಗ್ನಲ್ಲಿ ಹೆಚ್ಚು ಹಣ ಗಳಿಸುವ ಆಸೆ ಹುಟ್ಟಿಸಿ ಚಿಕ್ಕಮಗಳೂರಿನ ವ್ಯಕ್ತಿಗೆ ಕೋಟಿಗೂ ಅಧಿಕ ಹಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆಗೆ ವಂಚನೆಗೊಳಗಾದ ವ್ಯಕ್ತಿ ದೂರು ನೀಡಿದ್ದಾರೆ. ಟ್ರೇಡಿಂಗ್ ಮೂಲಕ ಅಲ್ಪ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸುವ ಬಗ್ಗೆ ವಂಚಕರು ಭರವಸೆ ನೀಡಿದ್ದರು. ಇದನ್ನು ನಂಬಿದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ವ್ಯಕ್ತಿ ಹಣ ಹೂಡಿಕೆ ಮಾಡಿ ಬರೋಬ್ಬರಿ 1.28 ಕೋಟಿ ರೂಪಾಯಿ ಹಣ ಕಳೆದುಕೊಂಡಿದ್ದಾರೆ. ಕಡೂರು ತಾಲೂಕಿನ ನಿವಾಸಿ ಕಲ್ಲೇಗೌಡ ವಂಚನೆಗೊಳಗಾದವರು. ಫೇಸ್ಬುಕ್ನಲ್ಲಿ ಕಂಡುಬಂದ ‘FYERS’ ಎಂಬ ಟ್ರೇಡಿಂಗ್ ಲಿಂಕ್ ಅನ್ನು ಇವರು ಕ್ಲಿಕ್ ಮಾಡಿದ್ದರು. ಈ ಮೂಲಕ ಇವರು ‘F8-FYERS ಸೆಕ್ಯೂರಿಟಿ ಗ್ರೂಪ್’ ಎಂಬ ವಾಟ್ಸಾಪ್ ಗುಂಪಿಗೆ ಸೇರ್ಪಡೆಯಾಗಿದ್ದರು. ಬಳಿಕ ವಂಚಕರು ನೀಡಿದ ‘QIB-iPO’ ಟ್ರೇಡಿಂಗ್ ಲಿಂಕ್ನಲ್ಲಿ ಖಾತೆ ತೆರೆದಿದ್ದರು. ಆರಂಭದಲ್ಲಿ ಕಲ್ಲೇಗೌಡ ಅವರು 60 ಸಾವಿರ…
ಚಿಕ್ಕಬಳ್ಳಾಪುರ : ಚಲಿಸುತ್ತಿದ್ದ ಟೆಂಪೋನಿಂದ ಬಿದ್ದು ಕಾರ್ಮಿಕ ಮಹಿಳೆ ಒಬ್ಬರು ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಿಂಡಿಪಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅನಸೂಯಮ್ಮ (25) ಎಂದು ತಿಳಿದುಬಂದಿದೆ. ಮಲ್ಲಿಕಾ, ಗೀತಾ, ಅನಿತಾ ಎಂಬ ಮಹಿಳೆಯರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪಾಟ್ನಾ : ಈ ತಿಂಗಳ ಆರಂಭದಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ (ಮಾರ್ಚ್ 30) ಬಿಹಾರ ವಿಧಾನ ಪರಿಷತ್ತಿನ (ಎಂಎಲ್ಸಿ) ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ಪರಿಷತ್ತಿನ ಅಧ್ಯಕ್ಷ ಅವಧೇಶ್ ನಾರಾಯಣ್ ಸಿಂಗ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಲಾಗಿದೆ. ರಾಜೀನಾಮೆ ಕುರಿತು ಅಧಿಕೃತ ಘೋಷಣೆ ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆಯಿದೆ. ಮಾರ್ಚ್ 16 ರಂದು ಜೆಡಿಯು ಅಧ್ಯಕ್ಷರು ಸಂಸತ್ತಿನ ಮೇಲ್ಮನೆಗೆ ಆಯ್ಕೆಯಾದರು. ಸಂವಿಧಾನದ ಪ್ರಕಾರ, ಒಬ್ಬ ವ್ಯಕ್ತಿಯು ಏಕಕಾಲದಲ್ಲಿ ಎರಡು ಸದನಗಳ ಸದಸ್ಯತ್ವವನ್ನು ಹೊಂದಲು ಸಾಧ್ಯವಿಲ್ಲ, ಇದು 14 ದಿನಗಳಲ್ಲಿ ಒಂದು ಸ್ಥಾನವನ್ನು ತ್ಯಜಿಸುವುದು ಕಡ್ಡಾಯಗೊಳಿಸುತ್ತದೆ. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ರಾಜ್ಯಸಭಾ ಸಂಸದರಾಗಿ ರಾಷ್ಟ್ರಮಟ್ಟಕ್ಕೆ ಪರಿವರ್ತನೆಗೊಳ್ಳಲು ಸಿದ್ಧತೆ ನಡೆಸುತ್ತಿರುವಾಗ ಬಿಹಾರದ ಬಂಕಿಪುರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕ್ಷೇತ್ರದ ಜನತೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಭಾವನಾತ್ಮಕ ಸಂದೇಶವಾಗಿ ತಮ್ಮ ರಾಜೀನಾಮೆಯನ್ನು ಘೋಷಿಸಿದ ನಬಿನ್, ಈ…
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಹಲವರಿಗೆ ಬೈಕ್ ಡಿಕ್ಕಿಯಾಗಿ ನವದಂಪತಿಗಳು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದಲ್ಲಿ ನಡೆದಿದೆ. ಬೈಕ್ ನಲ್ಲಿ ಇದ್ದಂತಹ ದಂಪತಿಗಳಾದ ಬಾಬು (30) ಹಾಗೂ ಸಾವಿತ್ರಿ (26) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಹೋಟೆಲ್ ಕೆಲಸ ಮುಗಿಸಿಕೊಂಡು ಊರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಮೂಲದ ಬಾಬು ಮತ್ತು ಸಾವಿತ್ರಿ ಎಂದು ತಿಳಿದುಬಂದಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗದಗ : ರಾಜ್ಯದಲ್ಲಿ ಸಿಲಿಂಡರ್ ಗಳ ಅಭಾವ ತುಂಬಾ ಇದ್ದು, ಇದೀಗ ಗದಗದಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ರೋಣ – ಗಜೇಂದ್ರಗಡ ಮಾರ್ಗವಾಗಿ ಕುಷ್ಟಗಿ ಪಟ್ಟಣಕ್ಕೆ ಹೊರಟಿದ್ದ ಲಾರಿ ತಿರುವಿನಲ್ಲಿ ಓವರಟೇಕ್ ಮಾಡಲು ಹೋದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದೆ. ಸಿಲಿಂಡರ್ ತುಂಬಿದ್ದ ವಾಹನ ಇದಾಗಿದ್ದರಿಂದ ಕೆಲಕಾಲ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಯಾವುದೇ ಅನಿಲ ಸ್ಫೋಟ ಆಗಿಲ್ಲ. ಭಾರತ್ ಗ್ಯಾಸ್ ಕಂಪನಿಗೆ ಸೇರಿದ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಲಾರಿ ಉರುಳಿ ಬಿದ್ದಿದ್ದರಿಂದ ಸಿಲಿಂಡರ್ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಆದ್ರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬೆಂಗಳೂರು : ಮಾರ್ಚ್ 28 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು ಹೈದ್ರಾಬಾದ್ ನಡುವೆ ಬೆಂಗಳೂರು ಮೊದಲ ಪಂದ್ಯದಲ್ಲಿ ಗೆದ್ದು ಬೀಗಿದೆ. ಇನ್ನು ಪಂದ್ಯದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣಕ್ಕೆ ನಾಗರಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಸಾಮಾನ್ಯ ದಿನಗಳಿಗಿಂತ ದ್ವಿಗುಣ ಪ್ರಮಾಣದಲ್ಲಿ ಪ್ರಯಾಣಿಕರು ಮೆಟ್ರೋ ಬಳಸಿದ್ದಾರೆ ಎಂದು ಬಿಎಂಆರ್ಸಿಎಲ್ ಮೂಲಗಳು ತಿಳಿಸಿವೆ. ಪಂದ್ಯ ಮುಗಿದ ಕೇವಲ 50 ನಿಮಿಷಗಳ ಅವಧಿಯಲ್ಲಿ ಸುಮಾರು 22,000 ಜನರು ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ನಿಲ್ದಾಣಗಳಿಂದ ಸುರಕ್ಷಿತವಾಗಿ ಪ್ರಯಾಣ ಬೆಳೆಸಿದ್ದಾರೆ. ಈ ಬಾರಿ ಸಂಚಾರ ದಟ್ಟಣೆ ಹಾಗೂ ಪಾರ್ಕಿಂಗ್ ಸಮಸ್ಯೆ ತಪ್ಪಿಸಲು ಬಿಎಂಆರ್ಸಿಎಲ್ ವಿಶೇಷ ರೈಲುಗಳ ವ್ಯವಸ್ಥೆ ಮಾಡಿತ್ತು. ಮೆಜೆಸ್ಟಿಕ್ ಕಡೆಗೆ 13 ಹಾಗೂ ವೈಟ್ಫೀಲ್ಡ್ ಕಡೆಗೆ 9 ರೈಲುಗಳು ಸೇರಿದಂತೆ ಒಟ್ಟು 39 ರೌಂಡ್ ಟ್ರಿಪ್ಗಳನ್ನು ಕಾರ್ಯಾಚರಣೆ ಮಾಡಲಾಗಿದೆ. ಪರ್ಪಲ್ ಲೈನ್ನಲ್ಲಿ 18, ಗ್ರೀನ್ ಲೈನ್ನಲ್ಲಿ 15 ಮತ್ತು ಯಲ್ಲೋ ಲೈನ್ನಲ್ಲಿ 6 ಹೆಚ್ಚುವರಿ ಸಂಚಾರಗಳನ್ನು ನಡೆಸುವ ಮೂಲಕ ಪ್ರಯಾಣಿಕರ ದಟ್ಟಣೆಯನ್ನು ಯಶಸ್ವಿಯಾಗಿ…
ಮುಂಬೈ: ಜಾಗತಿಕ ರಾಜಕೀಯ ಉದ್ವಿಗ್ನತೆ, ವಿಶೇಷವಾಗಿ ಇರಾನ್ ಮತ್ತು ಇಸ್ರೇಲ್/ಅಮೆರಿಕ ನಡುವೆ ನಡೆಯುತ್ತಿರುವ ಸಂಘರ್ಷವು ಭಾರತೀಯ ಷೇರು ಮಾರುಕಟ್ಟೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಸೋಮವಾರದ ವಹಿವಾಟು ಆರಂಭವಾಗುತ್ತಿದ್ದಂತೆ ಸೆನ್ಸೆಕ್ಸ್ ಮತ್ತು ನಿಫ್ಟಿ ಭಾರೀ ಕುಸಿತ ಕಂಡಿದ್ದು, ಕಳೆದ ಆರು ವರ್ಷಗಳಲ್ಲೇ ಮಾರುಕಟ್ಟೆ ಅತ್ಯಂತ ಕೆಟ್ಟ ಮಾಸಿಕ ನಷ್ಟವನ್ನು ಅನುಭವಿಸುವ ಹಾದಿಯಲ್ಲಿದೆ. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ (Sensex) ಸುಮಾರು 1,100 ಪಾಯಿಂಟ್ಗಳಿಗೂ ಹೆಚ್ಚು ಕುಸಿತ ಕಂಡರೆ, ನಿಫ್ಟಿ (Nifty 50) 22,500 ಮಟ್ಟಕ್ಕಿಂತ ಕೆಳಕ್ಕೆ ಇಳಿದಿದೆ.ಈ ಮಾರ್ಚ್ ತಿಂಗಳಲ್ಲಿ ಮಾರುಕಟ್ಟೆಯು ಸುಮಾರು 10.5% ರಷ್ಟು ನಷ್ಟ ಅನುಭವಿಸಿದೆ. ಇದು 2020ರ ಕೊರೊನಾ ಲಾಕ್ಡೌನ್ ನಂತರದ ಅತಿದೊಡ್ಡ ಮಾಸಿಕ ಕುಸಿತ ಎನ್ನಲಾಗಿದೆ. ಯುದ್ಧದ ಕಾರಣದಿಂದಾಗಿ ಕಚ್ಚಾ ತೈಲ ಬೆಲೆ ಏರಿಕೆ ಮತ್ತು ವಿದೇಶಿ ಹೂಡಿಕೆದಾರರು (FII) ಭಾರತೀಯ ಮಾರುಕಟ್ಟೆಯಿಂದ ಬೃಹತ್ ಪ್ರಮಾಣದಲ್ಲಿ ಹಣವನ್ನು ಹಿಂತೆಗೆದುಕೊಳ್ಳುತ್ತಿರುವುದು ಈ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಯುದ್ಧವು ಜಾಗತಿಕ ಆರ್ಥಿಕತೆಯ ಮೇಲೆ ಕಪ್ಪುಛಾಯೆ…














