Author: kannadanewsnow05

ಬೆಂಗಳೂರು : ಬಾಡಿಗೆ ಮನೆಯಲ್ಲಿ ಯುವತಿ ಸ್ನಾನ ಮಾಡುವಾಗ ಅಪರಿಚಿತ ವ್ಯಕ್ತಿಯೋರ್ವ ವಿಡಿಯೋ ಚಿತ್ರೀಕರಣ ಮಾಡಿರುವ ಘಟನೆ ನಗರದ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 23 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಈ ಬಗ್ಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದೂರುದಾರೆ ಯುವತಿ ಕಳೆದ ಒಂಬತ್ತು ತಿಂಗಳ ಹಿಂದೆ ಗರುಡಾಚಾರ್ ಪಾಳ್ಯಕ್ಕೆ ವಾಸ್ತವ್ಯ ಬದಲಾಯಿಸಿದ್ದರು. ಏಪ್ರಿಲ್​​ 29ರಂದು ರಾತ್ರಿ ಸುಮಾರು 9.30ರಿಂದ 9.40ರ ವೇಳೆ ಅವರು ಸ್ನಾನ ಮಾಡುತ್ತಿದ್ದಾಗ, ಪಕ್ಕದ ಕಟ್ಟಡದಿಂದ ಯಾರೋ ಫೋನ್ ಮೂಲಕ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿ ಬೆಚ್ಚಿಬಿದ್ದಿ ಕಿರುಚಿದ್ದಾರೆ. ಈ ವೇಳೆ ಆ ವ್ಯಕ್ತಿ ಮೊಬೈಲ್​ ಸಮೇತ ಓಡಿ ಹೋಗಿದ್ದಾನೆ. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಯಿಂದ ತೀವ್ರ ಮಾನಸಿಕ ನೋವಿಗೆ ಒಳಗಾಗಿರುವ ದೂರುದಾರೆ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಆತಂಕ ಎದುರಿಸುತ್ತಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಯ ವಿವರ: ನಗರದ ಗರುಡಾಚಾರ್ ಪಾಳ್ಯದಲ್ಲಿ ವಾಸವಾಗಿರುವ 23 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್…

Read More

ದಕ್ಷಿಣ ಕನ್ನಡ: ಜಿಲ್ಲೆಯ ಸುಬ್ರಹ್ಮಣ್ಯ–ಮಂಜೇಶ್ವರ ರಾಜ್ಯ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಮಂಗಳವಾರ ಸಂಜೆ ಮೈನಡುಗಿಸುವ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ನಡೆದ ಈ ಭೀಕರ ಸಂಘರ್ಷದಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದು, ಮೃತರ ಕುಟುಂಬದಲ್ಲಿ ಶೋಕದ ಮಡುವು ಆವರಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಬಿಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಸಹ ಸವಾರನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಲಾಯಿತಾದರೂ, ಸಾಗಿಸುವ ದಾರಿ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ಯುವಕರನ್ನು ಬಂಟ್ವಾಳ ತಾಲೂಕಿನ ಮಿತ್ತೂರು ಬೊಳ್ಳರಮಜಲು ನಿವಾಸಿ ಪುರಂದರ ಎಂಬುವರ ಪುತ್ರ ಯಜ್ನೇಶ್ (21) ಮತ್ತು ಆರ್ಲಪದವು ನೋಣಯ್ಯ ಭರಣ್ಯ ಎಂಬುವರ ಪುತ್ರ ಜಗನ್ (20) ಎಂದು ಗುರುತಿಸಲಾಗಿದೆ. ಘಟನೆಯ ವಿವರದಂತೆ, ಚಾಪಳ್ಳದ ಅಪಾಯಕಾರಿ ತಿರುವಿನಲ್ಲಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸ ಎಷ್ಟಿತ್ತೆಂದರೆ ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಇದೇ ವೇಳೆ ಮೃತರ ಬೈಕ್ ಹಿಂದೆಯೇ ಬರುತ್ತಿದ್ದ ಮತ್ತೊಂದು ಬೈಕ್‌ ಕೂಡ ನಿಯಂತ್ರಣ ತಪ್ಪಿ…

Read More

ಮೈಸೂರು : ರಾಜ್ಯದಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತಂತೆ ಹೈಕಮಾಂಡ್ ಈಗಾಗಲೇ ಮಹೂರ್ತ ಫಿಕ್ಸ್ ಮಾಡಿದೆ ಎಂದು ಹೇಳಲಾಗಿರತ್ತು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಇದುವರೆಗೂ ನನ್ನ ರಾಹುಲ್ ಗಾಂಧಿ ದೆಹಲಿಗೆ ಕರೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಇದುವರೆಗೂ ರಾಹುಲ್ ಗಾಂಧಿ ನನ್ನನ್ನು ದೆಹಲಿಗೆ ಕರೆದಿಲ್ಲ. ನಾನು ಕೂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಅವಕಾಶ ಕೇಳಿಲ್ಲ. ರಾಹುಲ್ ಗಾಂಧಿ ನನ್ನನ್ನು ದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ರಾಹುಲ್ ಗಾಂಧಿ ಭೇಟಿ ಫಿಕ್ಸ್ ಆದಮೇಲೆ ಸಂಪುಟ ಪುನರ್ ರಚನೆ ಆಗುತ್ತಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಂಪುಟ ವಿಸ್ತರಣೆನ ಅಥವಾ ಯಾವ ವಿಷಯದ ಚರ್ಚೆ ಗೊತ್ತಾಗಲಿದೆ. ರಾಹುಲ್ ಕರೆದೇ ಇಲ್ಲ ಅಂದಮೇಲೆ ಅಜೆಂಡ ಹೇಗೆ ಫಿಕ್ಸ್ ಆಗುತ್ತದೆ? ಅವರು ಕರೆಯದಿದ್ದರೆ, ನಾನೇ ರಾಹುಲ್ ಗಾಂಧಿಗೆ ಕೇಳುತ್ತೇನೆ. ಸದ್ಯಕ್ಕಂತೂ ದೆಹಲಿಯ ಪ್ರವಾಸ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Read More

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಬಸ್‌ಗಳಲ್ಲಿ ದಿನನಿತ್ಯ ಸಂಚರಿಸುವ ಲಕ್ಷಾಂತರ ಪ್ರಯಾಣಿಕರಿಗೆ ಈಗ ಸುಸಜ್ಜಿತ ಮತ್ತು ತಾಂತ್ರಿಕ ಸ್ನೇಹಿ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಮೆಟ್ರೋ ರೈಲುಗಳಲ್ಲಿ ಇರುವಂತೆ ಇನ್ನು ಮುಂದೆ ಬಿಎಂಟಿಸಿ ಬಸ್‌ಗಳಲ್ಲೂ ಕ್ಯಾಶ್‌ಲೆಸ್‌ ಪ್ರಯಾಣಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ‘ರಿಚಾರ್ಜೆಬಲ್‌ ಪ್ರಿಪೇಯ್ಡ್ ಕಾರ್ಡ್’ ಅನ್ನು ಪರಿಚಯಿಸಲು ಸಂಸ್ಥೆ ಮುಂದಾಗಿದೆ. ಈ ಕ್ರಮವು ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆಯಲಿದೆ. ಸಾಮಾನ್ಯವಾಗಿ ಬಸ್‌ಗಳಲ್ಲಿ ಪ್ರಯಾಣಿಸುವಾಗ ಚಿಲ್ಲರೆ ಹಣದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತದೆ. ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಚಾರವಾಗಿ ಆಗಾಗ ನಡೆಯುವ ಕಿರಿಕಿರಿಗಳಿಗೆ ಈ ಪ್ರಿಪೇಯ್ಡ್ ಕಾರ್ಡ್ ಶಾಶ್ವತ ಪರಿಹಾರ ನೀಡಲಿದೆ. ಪ್ರಯಾಣಿಕರು ಒಮ್ಮೆ ಕಾರ್ಡ್ ಪಡೆದು ಅದಕ್ಕೆ ಬೇಕಾದ ಮೊತ್ತವನ್ನು ರಿಚಾರ್ಜ್ ಮಾಡಿಸಿಕೊಂಡರೆ, ಟಿಕೆಟ್ ಪಡೆಯಲು ನಗದು ನೀಡುವ ಅಗತ್ಯವಿರುವುದಿಲ್ಲ. ಇದು ಸಮಯವನ್ನು ಉಳಿಸುವುದಲ್ಲದೆ ಪ್ರಯಾಣವನ್ನು ಹೆಚ್ಚು ಸುಗಮಗೊಳಿಸಲಿದೆ. ನೂಕುನುಗ್ಗಲಿನ ಸಮಯದಲ್ಲಿ ಬಸ್ ಹತ್ತಿದಾಗ ಕೈಯಲ್ಲಿ ಹಣ…

Read More

ಬೆಂಗಳೂರು : ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪ ಹೊತ್ತು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿ ಕಾಲ ಕಳೆಯುತ್ತಿದ್ದಾರೆ. ಅಲ್ಲದೆ ಇತ್ತೀಚಿಗೆ ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದು, ಈ ವಿಚಾರವಾಗಿ ಹಾಡಿ ಸರಕಾರಕ್ಕೆ ಸುಪ್ರೀಂಕೋರ್ಟ್ ಒಂದು ವಾರದ ಒಳಗಾಗಿ ವರದಿ ನೀಡುವಂತೆ ಸೂಚನೆ ನೀಡಿದೆ. ಇದಕ್ಕಿಂತ ಮೊದಲು ದರ್ಶನ್ ಜೈಲಿನಲ್ಲಿ ಇದ್ದಾಗ ಪತ್ನಿ ವಿಜಯಲಕ್ಷ್ಮಿ, ಹೋಗದ ದೇವಸ್ಥಾನಗಳಿಲ್ಲ. ತೀರಿಸಿದ ಹರಕೆಗಳಿಲ್ಲ. ಪತಿ ದರ್ಶನ್ ಗಾಗಿ ದೇವಸ್ಥಾನ, ದೇವರುಗಳ ಮೊರೆ ಹೋಗಿದ್ದರು. ಈಗಲೂ ಸಹ ಅವರು ದರ್ಶನ್ ಗಾಗಿ ಪ್ರಾರ್ಥನೆ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಇನ್ಸ್ಟಾಗ್ರಾಮ್ ನಲ್ಲಿ ವಿಜಯಲಕ್ಷ್ಮಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು ಅದಕ್ಕೆ ಒಬ್ಬರು ಕಮೆಂಟ್ ಮಾಡಿದ್ದು ಭಾರಿ ವೈರಲ್ ಆಗುತ್ತಿದೆ. ಹೌದು ಇಂದು ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದೆ. ರೇಷ್ಮೆ ಸೀರೆಯನ್ನು ಉಟ್ಟು, ತಲೆಯಲ್ಲಿ ಮಲ್ಲಿಗೆ ಮುಡಿದು, ಮುಗುಳ್ನಗುತ್ತಾ ಸಾಂಪ್ರದಾಯಿಕ ಉಡುಗೆಯಲ್ಲಿ ವಿಜಯಲಕ್ಷ್ಮಿ ಕಂಗೊಳಿಸಿದ್ದಾರೆ. ಈ ಫೋಟೋ…

Read More

ತಮಿಳುನಾಡು : ತಮಿಳುನಾಡಲ್ಲಿ ಟಿವಿಕೆ ಪಕ್ಷಕ್ಕೆ ಬೆಂಬಲ ಸೂಚಿಸಲು ಮುಂದಾಗಿದ್ದ ಕಾಂಗ್ರೆಸ್ ಗೆ ಇದೀಗ ಬಿಗ್ ಶಾಕ್ ಎದುರಾಗಿದೆ. AIADMK ಜೊತೆಗೆ ಟಿವಿಕೆ ಮಾತುಕತೆ ನಡೆಸಿದ್ದರಿಂದ ಕಾಂಗ್ರೆಸ್ ಗೆ ಹಿನ್ನಡೆ ಆಗಿದೆ. ಟಿವಿಕೆ ಬೆಂಬಲಿಸೋ ಸಲುವಾಗಿ ಸಭೆ ನಡೆಸಲು ಮುಂದಾಗಿತ್ತು. ಆದರೆ ಇದೀಗ ಕಾಂಗ್ರೆಸ್ ಗೆ ಶಾಕ್ ಎದುರಾಗಿದೆ. ಟಿವಿಕೆ ಬೆಂಬಲಿಸೋ ವಿಚಾರವಾಗಿ ಕಾಂಗ್ರೆಸ್ ಸುದ್ದಿಗೋಷ್ಠಿ ಕರೆದಿತ್ತು. ಏಕಾಏಕಿ ಸುದ್ದಿಗೋಷ್ಠಿ ವಿಳಂಬ ಮಾಡಿದೆ. ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ. ಇನ್ನೊಂದು ಕಡೆ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಯಲ್ಲಿ ಬಿರುಕು ಮೂಡಿದೆ. ಎಂ.ಕೆ ಸ್ಟಾಲಿನ್ ಅಸಮಾಧಾನ ಹೊರ ಹಾಕಿದ್ದು ಸುಧೀರ್ಘಕಾಲದ ಮೈತ್ರಿಗೆ ಮಾಡಿದ ದ್ರೋಹ ಎಂದು ಕಿಡಿ ಕರೆದಿದ್ದಾರೆ ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ ಟಿ ವಿ ಕೆ ಜೊತೆ ಹೋದರೆ ಬಿಎಂಟಿ ಜೊತೆ ಯಾವುದೇ ಸಂಬಂಧ ಇರಲ್ಲ ಅಂತ ಸ್ಪಷ್ಟವಾಗಿ ಹೇಳಿದ್ದಾರೆ.

Read More

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಹರಳೆ ಗ್ರಾಮದ ಬಳಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನೊಬ್ಬ ಯಮಸ್ವರೂಪಿಯಾಗಿ ಬಂದ ಟೆಂಪೋಗೆ ಬಲಿಯಾಗಿದ್ದಾನೆ. ಅಪಘಾತದ ತೀವ್ರತೆಗೆ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಮೃತರ ಗುರುತು: ಅಪಘಾತದಲ್ಲಿ ಮೃತಪಟ್ಟ ಬಾಲಕನನ್ನು ಹರಳೆ ಗ್ರಾಮದ ನಿವಾಸಿ ಯಶವಂತ್ (11) ಎಂದು ಗುರುತಿಸಲಾಗಿದೆ. ಎಂದಿನಂತೆ ಬಾಲಕನು ತನ್ನ ಸೈಕಲ್‌ನಲ್ಲಿ ಗ್ರಾಮದ ರಸ್ತೆಯಲ್ಲಿ ಸವಾರಿ ಮಾಡುತ್ತಿದ್ದಾಗ ಈ ಅವಘಡ ನಡೆದಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯ ವಿವರ: ಯಶವಂತ್ ರಸ್ತೆಯ ಬದಿಯಲ್ಲಿ ಸೈಕಲ್ ತುಳಿಯುತ್ತಿದ್ದಾಗ, ಅತೀ ವೇಗವಾಗಿ ಬಂದ ಟೆಂಪೋ ನಿಯಂತ್ರಣ ತಪ್ಪಿ ಬಾಲಕನಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಾಲಕ ಸೈಕಲ್ ಸಮೇತ ರಸ್ತೆಗೆ ಉರುಳಿ ಬಿದ್ದಿದ್ದಾನೆ. ತಲೆಗೆ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರವಾದ ಪೆಟ್ಟು ಬಿದ್ದ ಪರಿಣಾಮ ಅತಿಯಾದ ರಕ್ತಸ್ರಾವವಾಗಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಥಳೀಯರ ಆಕ್ರೋಶ: ಅಪಘಾತ…

Read More

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡು ಫಲಿತಾಂಶ ಹೊರಬಿದ್ದಿದ್ದರೂ ಸಹ ಹಿಂಸಾಚಾರದ ಕಿಚ್ಚು ಮಾತ್ರ ಆರಿಲ್ಲ. ರಾಜ್ಯದ ವಿವಿಧೆಡೆ ನಡೆದ ಭೀಕರ ಸಂಘರ್ಷಗಳಲ್ಲಿ ಕಳೆದ 24 ಗಂಟೆಗಳಲ್ಲಿ ನಾಲ್ವರು ರಾಜಕೀಯ ಕಾರ್ಯಕರ್ತರು ಬಲಿಯಾಗಿದ್ದು, ಜನರ ಭೀತಿ ಮುಂದುವರೆದಿದೆ. ರಾಜ್ಯದ ಸುಮಾರು 12ಕ್ಕೂ ಹೆಚ್ಚು ಕಡೆಗಳಲ್ಲಿ ಗುಂಪು ಘರ್ಷಣೆ, ಮನೆಗಳಿಗೆ ಬೆಂಕಿ ಹಚ್ಚುವುದು ಮತ್ತು ದಾಳಿ ಪ್ರಕರಣಗಳು ವರದಿಯಾಗಿವೆ. ಬಿಜೆಪಿ ಕಾರ್ಯಕರ್ತನ ಭೀಕರ ಹತ್ಯೆ ಕೋಲ್ಕತ್ತಾದ ನ್ಯೂ ಟೌನ್ ಪ್ರದೇಶದಲ್ಲಿ ತಡರಾತ್ರಿ ನಡೆದ ದಾಳಿಯಲ್ಲಿ ಬಿಜೆಪಿ ಕಾರ್ಯಕರ್ತ ಮಧು ಎಂಬುವವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮಧು ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದ್ದು, ಸ್ಥಳದಲ್ಲೇ ಅವರು ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಬಿಜೆಪಿ ನಾಯಕರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಕಿಡಿಕಾರಿದ್ದಾರೆ. ಟಿಎಂಸಿ ಕಾರ್ಯಕರ್ತನ ಕೊಲೆ ಇನ್ನೊಂದೆಡೆ, ವೀರಭೂಮಿಯ ನ್ಯೂಟೌನ್ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಘರ್ಷಣೆಯಲ್ಲಿ ಟಿಎಂಸಿ ಕಾರ್ಯಕರ್ತ ಅಬೀರ್ ಎಂಬುವವರನ್ನು ಹತ್ಯೆ…

Read More

ಮೈಸೂರು: ಜಿಲ್ಲೆಯ ಕೆ.ಆರ್. ನಗರ ಪಟ್ಟಣದಲ್ಲಿ ಜನಗಣತಿ ಕಾರ್ಯದಲ್ಲಿ ತೊಡಗಿದ್ದ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಕರ್ತವ್ಯದ ಅವಧಿಯಲ್ಲೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ. ಕೆ.ಆರ್. ನಗರದ ಕುವೆಂಪು ಬಡಾವಣೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಶಿಕ್ಷಣ ಇಲಾಖೆಯ ಸಹೋದ್ಯೋಗಿಗಳಲ್ಲಿ ಮತ್ತು ಸ್ಥಳೀಯರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಮೃತ ಶಿಕ್ಷಕರು ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಮುಳ್ಳೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಸುದೀರ್ಘ ಸೇವೆ ಸಲ್ಲಿಸುತ್ತಿದ್ದರು. ಜನಗಣತಿ ಪ್ರಕ್ರಿಯೆಯ ಭಾಗವಾಗಿ ಇವರಿಗೆ ಕೆ.ಆರ್. ನಗರ ಪಟ್ಟಣದ ಜವಾಬ್ದಾರಿಯನ್ನು ವಹಿಸಲಾಗಿತ್ತು. ಎಂದಿನಂತೆ ನಿಗದಿತ ಬಡಾವಣೆಯಲ್ಲಿ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದ ವೇಳೆ ಇವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಕುವೆಂಪು ಬಡಾವಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಶಿಕ್ಷಕರು ಹಠಾತ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರು ಮತ್ತು ಸಹ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರಾದರೂ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಕೆಲಸದ ಒತ್ತಡ ಅಥವಾ ಹಠಾತ್ ಆರೋಗ್ಯ ಏರುಪೇರಿನಿಂದ ಈ…

Read More

ಬೆಂಗಳೂರು : ಬೆಂಗಳೂರಲ್ಲಿ ಘೋರ ಕೃತ್ಯವನ್ನು ನಡೆದಿದ್ದು, ನಿರ್ಜನ ಪ್ರದೇಶದಲ್ಲಿ ಕಾರೊಂದು ಹೊತ್ತಿ ಉರಿದಿದೆ. ಸುಟ್ಟುಕರಕಲಾದ ಕಾರಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ ನಡೆದ ಅನತಿ ದೂರದಲ್ಲಿ ಪುರುಷನೊಬ್ಬನ ಸುಟ್ಟ ಬಟ್ಟೆ ಮೊಬೈಲ್ ಪತ್ತೆಯಾಗಿದೆ. ಸ್ಥಳದಿಂದ ಪರಾರಿಯಾಗಿದ್ದ ವ್ಯಕ್ತಿ ಅದೇ ದಿನ ರಾತ್ರಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ದೊಡ್ಡಬಳ್ಳಾಪುರ ತಾಲೂಕಿನ ಕೆ.ಜಿ ಕುಂಟನಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ನಡೆದ ಕೆಲವೇ ತಾಸಿನಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಇಂಚಿಂಚು ಮಾಹಿತಿಯನ್ನ ಹೊರಗೆ ತಂದಿದ್ದಾರೆ. ಅಂದ ಹಾಗೇ ಇಲ್ಲಿ ಸುಟ್ಟುಕರಕಲಾದ ಸ್ಥಿತಿಯಲ್ಲಿ ಸಿಕ್ಕ ಮಹಿಳೆ ಹೆಸರು ಸರೋಜಾ ಎಂದು ಪೊಲೀಸರು ಗುರುತಿಸಿದ್ದಾರೆ. ಪ್ರಕರಣ ಹಿನ್ನೆಲೆ? ದೇವನಹಳ್ಳಿಯಲ್ಲಿ ವಾಸವಾಗಿರುವ ಸರೋಜಾಗೆ ಮದುವೆಯಾಗಿ ಒಬ್ಬ ಮಗನಿದ್ದಾನೆ. ಗಂಡ ಏರ್ ಪೋರ್ಟ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ಮೇ 2ರಂದು ಹಲ್ಲಿನ ಸಮಸ್ಯೆ ಇದೆ, ಆಸ್ಪತ್ರೆಗೆ ಹೋಗಬೇಕೆಂದು ಗಂಡನಿಗೆ ಹೇಳಿ ಬಸ್ ನಿಲ್ದಾಣಕ್ಕೆ ಡ್ರಾಪ್ ಹಾಕಿಸಿಕೊಂಡಿದ್ದ ಸರೋಜಾ, ಮಾರ್ಗ ಮಧ್ಯದಲ್ಲಿ ಇಳಿದು…

Read More