Author: kannadanewsnow05

ಮಂಗಳೂರು : ಕಳೆದ ಒಂದು ಗಂಟೆಯ ಹಿಂದೆ ಗದಗ ಜಿಲ್ಲಾಡಳಿತ ಭವನ ಸ್ಪೋಟಿಸುವುದಾಗಿ ಕಿಡಿಗೇಡಿಗಳಿಂದ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಅದರ ಬೆನ್ನಲ್ಲೇ ಇದೀಗ ಮಂಗಳೂರು ಆರ್‌ಟಿಓ ಕಚೇರಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. aarna aswin sekar@outlook.com ನಿಂದ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದೆ ಪಾಕಿಸ್ತಾನ ಐಎಸ್ಐ, ಎಲ್ ಟಿ ಟಿ ಇ ಯಿಂದ ರಿಮೋಟ್ ಆಪರೇಷನ್ ಮಾಡಲಾಗುತ್ತೆ ಎಂದು ಉಲ್ಲೇಖಿಸಿ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ ತಮಿಳುನಾಡು ರಾಜಕೀಯ ವಿಚಾರವಾಗಿ ಕಿಡಿಗೇಡಿಗಳು ಇ-ಮೇಲ್ ಸಂದೇಶ ಕಳುಹಿಸಿದ್ದಾರೆ. ಸಜ್ಜನ್ ಹೈದರ್ ಪಿಎಎಫ್ ಗೆ ಜಿಂದಾಬಾದ್ ಎಂದು ಘೋಷಣೆ ಇದ್ದು, ತಮಿಳುನಾಡಿನ ಐಪಿಎಸ್ ಅಧಿಕಾರಿಗಳ ಹೆಸರು ಉಲ್ಲೇಖಿಸಿ ಇ-ಮೇಲ್ ಕಳುಹಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದ ಬಳಿ ನಡು ರಸ್ತೆಯಲ್ಲಿಯೇ ಏಕಾಏಕಿ ಕಾರೊಂದು ಆಕಸ್ಮಿಕವಾಗಿ ಹೊತ್ತಿ ಉರಿದಿರುವ ಘಟನೆ ಇದೀಗ ವರದಿಯಾಗಿದೆ. ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ತಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ತಗುಲಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಹೌದು ಬೆಂಗಳೂರಿನ ವಿಜಯನಗರ ಮುಖ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದು ಏಕಾಏಕಿ ಹೊತ್ತಿ ಉರಿದಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಗೆ ತಾಂತ್ರಿಕ ದೋಷ ಕಾರಣವಿರಬಹುದೆಂದು ಶಂಕಿಸಲಾಗಿದೆ.ಘಟನೆಯಿಂದಾಗಿ ವಿಜಯನಗರ ಮುಖ್ಯರಸ್ತೆಯಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಈ ಘಟನೆ ವಿಜಯನಗರದ ಮುಖ್ಯರಸ್ತೆಯಲ್ಲಿರುವ ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ಸಮೀಪ ನಡೆದಿದೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಒಂದು ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಕಾರನ್ನು ಆವರಿಸಿದ್ದು, ಕಾರು ಧಗಧಗನೆ ಉರಿಯಲು ಶುರು ಮಾಡಿದೆ.…

Read More

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ವೃದ್ಧರೊಬ್ಬರು ಸೈಬರ್ ವಾಂಚನಿಗೆ ಒಳಗಾಗಿ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡಿದ್ದರು. ಇದೀಗ ಅಂತದ್ದೇ ಘಟನೆ ಮತ್ತೊಂದು ವರದಿಯಾಗಿದ್ದು, ಬೆಂಗಳೂರಿನ ಹಿರಿಯ ಉದ್ಯಮಿ, ರಾಮ ಭಕ್ತರಾದ ರಾಜೇಂದ್ರ ನಾಯ್ಡು ಅವರನ್ನು ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ವಂಚಿಸಿರುವ ಸೈಬರ್ ಖದೀಮರು, 8.3 ಕೋಟಿ ರೂ. ಎಗರಿಸಿದ್ದಾರೆ. ಹೂಡಿಕೆಯಿಂದ ಬಂದ ಲಾಭದ ಹಣವನ್ನು ದಾನ ಮಾಡಲು ಉದ್ದೇಶಿಸಿದ್ದ ರಾಜೇಂದ್ರ ನಾಯ್ಡು ಇದ್ದ ಹಣವನ್ನೂ ಕಳೆದು ಕೈಸುಟ್ಟುಕೊಂಡಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ನಂಬಿಸಿ ಸೈಬರ್ ವಚಕರು ಅವರಿಂದ ಹಣ ಪೀಕಿಸಿದ್ದಾರೆ. ವಂಚನೆಗೆ ಒಳಗಾದವರು ರಾಜೇಂದ್ರ ನಾಯ್ಡು (71) ಎಂಬ ಉದ್ಯಮಿಯಾಗಿದ್ದು, ಅಯೋಧ್ಯೆಯ ರಾಮ ಭಕ್ತರಾಗಿದ್ದಾರೆ. ಅವರು ಅಯೋಧ್ಯೆಯ ರಾಮಮಂದಿರಕ್ಕೆ ಬೆಳ್ಳಿ ಪೂಜಾ ಸಾಮಾಗ್ರಿಗಳನ್ನು ದೇಣಿಗೆ ನೀಡಿದ್ದರು. ಈ ಹಿಂದೆ ರಿಲಯನ್ಸ್ ಕ್ಯಾಪಿಟಲ್‌ನಲ್ಲಿ ಸಾಲ ಪಡೆದು ಅದನ್ನು ಸಂಪೂರ್ಣವಾಗಿ ತೀರಿಸಿದ್ದರು. ರಿಲಯನ್ಸ್ ಕಂಪನಿಯ ಹೆಸರನ್ನು ಬಳಸಿ ನಂಬಿಕೆ ಮೂಡಿಸಿದ ವಂಚಕರು, RARCLLPRO ಎಂಬ ಮೊಬೈಲ್ ಆ್ಯಪ್…

Read More

ಬೆಂಗಳೂರು : ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್ ಆಗಿತ್ತು. ಬಳಿಕ ಎಚ್ಚತ್ತ ರಾಜ್ಯ ಸರ್ಕಾರ ರಾಜ್ಯಾದ್ಯಂತ ಮೊಟ್ಟೆ ಸ್ಯಾಂಪಲ್ ಸಂಗ್ರಹಕ್ಕೆ ಇದೀಗ ಮುಂದಾಗಿದ್ದು ಈ ವಿಚಾರವಾಗಿ ಆರೋಗ್ಯ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶದ ವರದಿಯ ಕುರಿತು ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಮೊನ್ನೆ ಕಂಪನಿಯೊಂದರ ಮೊಟ್ಟೆಯ ಉಪಯೋಗ ಮಾಡಬಾರದು ಅಂತ ವಿಡಿಯೋವೊಂದು ವೈರಲ್ ಆಗಿತ್ತು. ಕಂಪನಿಯ ಮೊಟ್ಟೆಯಲ್ಲಿ ಉಪಯೋಗ ಮಾಡಬಾರದು, ಆ್ಯಂಟಿ ಬಯೋಟೆಕ್ ಅಂಶ ಇದೆ ಎಂಬ ಬಗ್ಗೆ ಮಾಹಿತಿ ಬಂದಿತ್ತು. ಇದರ ಕುರಿತಂತೆ ಸ್ಪಷ್ಟವಾದ ವಿಚಾರ ತಿಳಿದುಕೊಳ್ಳಲು ನಮ್ಮ‌ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದರು. ಕಳೆದ ಸೆಪ್ಟೆಂಬರ್ – ಅಕ್ಟೋಬರ್ ತಿಂಗಳಿನಲ್ಲಿ 125 ಮೊಟ್ಟೆಯ ಸ್ಯಾಂಪಲ್ ಟೆಸ್ಟ್ ಮಾಡಿದ್ದೇವೆ. ಅದರಲ್ಲಿ 123 ಮೊಟ್ಟೆಯ ಸ್ಯಾಂಪಲ್ ಗುಣಮಟ್ಟ ಸರಿಯಿದೆ. ಒಂದು, ಎರಡು ಮೊಟ್ಟೆಯ ಸ್ಯಾಂಪಲ್ ಮಾತ್ರ ಸರಿಯಿಲ್ಲ‌ ಎಂದು ಬಂದಿತ್ತು‌. ಇದರಿಂದ…

Read More

ಬಳ್ಳಾರಿ : ಬಳ್ಳಾರಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಏಕಾಏಕಿ ಬೆಂಕಿ ತಗುಲಿದೆ. ಈ ವೇಳೆ ಲಾರಿಯಲ್ಲಿ ಇದ್ದಂತಹ ಸುಮಾರು 45 ಲಕ್ಷಕ್ಕೂ ಹೆಚ್ಚು ಮೌಲ್ಯದ 40 ಬೈಕುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ ನಗರದ ಅನಂತಪುರ ರಸ್ತೆಯ ಆಟೋನಗರದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಲಾರಿಯಲ್ಲಿದ್ದ 45 ಲಕ್ಷ ರೂ. ಮೌಲ್ಯದ 40 ಬೈಕ್‌ಗಳು ಸುಟ್ಟು ಕರಕಲಾಗಿವೆ. ರಸ್ತೆ ಬದಿ ನಿಂತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಕಾಣಿಸಿಕೊಂಡಿದೆ. ಲಾರಿಯಲ್ಲೇ ಕುಳಿತಿದ್ದ ಚಾಲಕ ಕೂಡಲೇ ಎಚ್ಚೆತ್ತುಕೊಂಡು ಲಾರಿಯಿಂದ ಕೆಳಗೆ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವಷ್ಟರಲ್ಲಿ ಲಾರಿಯಲ್ಲಿದ್ದ ಬೈಕ್‌ಗಳು ಸುಟ್ಟು ಕರಕಲಾಗಿದ್ದವು. ಘಟನೆ ಸಂಬಂಧ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದೆಹಲಿ, ಡಿ.16: “ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡುವ ಬಗ್ಗೆ ಕೇಳಿದಾಗ, “ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ” ಎಂದು ತಿಳಿಸಿದರು. “ಪೊಲೀಸರು ನೀಡಿರುವ ನೋಟಿಸ್ ಗೆ ನನ್ನ ಉತ್ತರದ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇನೆ. ಏಕೆಂದರೆ ಅವರು ಎಫ್ಐಆರ್ ಪ್ರತಿಯನ್ನು ಲಗತ್ತಿಸಿಲ್ಲ. ಇ.ಡಿ.ಗೆ ಈಗಾಗಲೇ ಉತ್ತರ ನೀಡಿದ್ದೇವೆ. ಎಫ್ಐಆರ್ ಪ್ರತಿಯಲ್ಲಿ ಏನಿದೆ ಎಂದು ಓದಿಲ್ಲ. ಕೇವಲ ನೋಟಿಸ್ ಮಾತ್ರ ನೀಡಿದ್ದಾರೆ. ಎಫ್ಐಅರ್ ಪ್ರತಿ ನೀಡಿ ಎಂದು ಕೇಳುತ್ತೇನೆ” ಎಂದು ತಿಳಿಸಿದರು. ಕೆ.ಸಿ ವೇಣುಗೋಪಾಲ್ ಹಾಗೂ ಸುರ್ಜೆವಾಲ…

Read More

ಮಂಡ್ಯ : ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನಾಮಫಲಕವನ್ನು ಹರಿದು ಹಾಕಿ ದೌರ್ಜನ್ಯ ಎಸಗಿರುವ ಘಟನೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೋಲೀಸ್ ಠಾಣಾ ವ್ಯಾಪ್ತಿಯ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಜರುಗಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ 30 ಗುಂಟೆ ಗ್ರಾಮಠಾಣಾ ಜಾಗವಿದ್ದು, ಈ ಜಾಗದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮಾಡುವಂತೆ ಈಗಾಗಲೇ ಗ್ರಾಮ ಪಂಚಾಯಿತಿ, ತಾಲೂಕು ಆಡಳಿತ, ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೂ ಒಂದು ವರ್ಷದ ಹಿಂದೆಯೇ ಗ್ರಾಮದ ದಲಿತ ಮುಖಂಡರು ಸಾಕಷ್ಟು ಮನವಿ ಸಲ್ಲಿಸಿದ್ದಾರೆ. ಆದರೆ, ಗ್ರಾಮದ ಸವರ್ಣಿಯ ಮುಖಂಡರು ಗ್ರಾಮಠಾಣಾ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸೋಮವಾರ ಬೆಳಿಗ್ಗೆ ದಲಿತ ಮುಖಂಡರು ಗ್ರಾಮಠಾಣಾ ಜಾಗದಲ್ಲಿ ಅಂಬೇಡ್ಕರ್ ಅವರ ನಾಮಫಲಕ ಅಳವಡಿಸಲು ಮುಂದಾಗಿದ್ದಾರೆ. ಆದರೆ, ಗ್ರಾಮದ ಕೆಲವು ಸವರ್ಣಿಯ ಮುಖಂಡರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ನಾಮಫಲಕವನ್ನು ಹರಿದು ಹಾಕಿ ದೌರ್ಜನ್ಯ ಎಸಗಿದ್ದಾರೆ.…

Read More

ಬೆಳಗಾವಿ, ಡಿಸೆಂಬರ್ 14: ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶ್ಯಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಇಂದು ಮಂಡಿಸಲಾದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿ ಅವರು ಮಾತನಾಡಿದರು. ಶ್ಯಾಮನೂರು ಶಿವಶಂಕರಪ್ಪ ಅವರು ತಮ್ಮ 63 ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಲಾ ರಾಜಕೀಯದಲ್ಲಿದ್ದರು ಎಂದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು. 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು ಎಂದರು. ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಖಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ ಎಂದರು. ದಾವಣಗೆರೆಗೆ ಬ್ರಾಂಡ್ ಹೆಸರು ಕೊಟ್ಟರು ಜವಳಿ ಕ್ಷೇತ್ರದ ಅವನತಿ…

Read More

ಬೆಂಗಳೂರು : ಬೆಂಗಳೂರಲ್ಲಿ ಯುವತಿಯೋಬ್ಬಳು ತನ್ನ ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದಳು. ಈ ವೇಳೆ ಏಕಾಏಕಿ ಪೊಲೀಸರು ಹೋಟೆಲ್ ಗೆ ಎಂಟ್ರಿ ಆಗಿದ್ದಾರೆ. ಆಗ ಭಯದಿಂದ ಯುವತಿ ಒಬ್ಬಳು ಬಾಲ್ಕನಿಯಿಂದ ಕೆಳಗೆ ಹಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಚ್‌ಎಎಲ್‌ನ ಎಇಸಿಎಸ್ ಲೇಔಟ್ ನ ಹೊಟೇಲ್‌ನಲ್ಲಿ ನಡೆದಿದೆ. ವೀಕೆಂಡ್‌ನಲ್ಲಿ ಸ್ನೇಹಿತರೊಂದಿಗೆ ಹೋಟೆಲ್‌ನಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಪೊಲೀಸರು ಧಿಡೀರ್ ಎಂಟ್ರಿ ಕೊಟ್ಟ ಪರಿಣಾಮ ಭಯಗೊಂಡ ಯುವತಿ ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿದ್ದಾಳೆ. ಘಟನೆಯಲ್ಲಿ ಯುವತಿಯ ತಲೆ, ಮೈಕೈಗೆ ಗಂಭೀರ ಗಾಯಗಳಾಗಿವೆ. ಸದ್ಯ ಗಂಭೀರ ಗಾಯಗೊಂಡಿರುವ ಯುವತಿಯನ್ನು ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಶನಿವಾರ ರಾತ್ರಿ ಯುವತಿ ಸೇರಿದಂತೆ ಎಂಟು ಜನ ಸ್ನೇಹಿತರು ಸೇರಿ ಪಾರ್ಟಿ ಆಯೋಜಿಸಿದ್ದರು. ಪಾರ್ಟಿಗಾಗಿ ಮೂರು ರೂಂಗಳನ್ನು ಬುಕ್ ಮಾಡಿದ್ದರು. ಬಳಿಕ ಯುವಕರು ಹಾಗೂ ಯುವತಿಯರು ಹಾಡುಗಳನ್ನ ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದರು. ಯುವಕರ ಪಾರ್ಟಿ, ಡ್ಯಾನ್ಸ್ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಏಕೆಂದರೆ…

Read More

ಬೆಳಗಾವಿ : ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (95) ಭಾನುವಾರ ಸಂಜೆ ನಿಧನರಾದರು. ವಯೋಸಹಜ ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸಂಜೆ ಕಲ್ಲೇಶ್ವರ ಮಿಲ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನಡೆಯಲಿದೆ.ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಶಾಮನೂರು ಶಿವಶಂಕರಪ್ಪ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಇಂದು ಶ್ಯಾಮನೂರು ಅವರ ಅಂತ್ಯಕ್ರಿಯೆಯಲ್ಲಿ ಎಲ್ಲಾ ಸಚಿವರು ಶಾಸಕರು ವಿರೋಧ ಪಕ್ಷದವರು ಭಾಗಿಯಾಗಲಿದ್ದಾರೆ.ಇಂದು ಕಲಾಪ ಆರಂಭವಾದ ವೇಳೆ ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಆರ್ ಅಶೋಕ್ ಸಚಿವರಾದ ಕೆ ಎಚ್ ಮುನಿಯಪ್ಪ ಸೇರಿದಂತೆ ಹಲವರು ಸಂತಾಪ ಸೂಚಿಸಿದರು.

Read More