Author: kannadanewsnow05

ಬೆಂಗಳೂರು : ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಡಿ ಎನ್ ಜೀವರಾಜ್ ಸಲ್ಲಿಸಿರುವ ಅರ್ಜಿ ಇಂದು ಹೈಕೋರ್ಟ್ ಅಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ಹೈಕೋರ್ಟ್ ಮೇ 7ರವರೆಗೆಬಿಜೆಪಿಯ ಡಿಎನ್ ದೇವರಾಜ್ ಅವರ ವಿರುದ್ಧ ದಾಖಲಾದ ಎಫ್ಐಆರ್‌ ಗೆ ತಡೆಯಾಜ್ಜೆ ನೀಡಿತು. 170 ಮತಗಳನ್ನು ತಿದ್ದುಪಡಿಯಾಗಿದೆ ಎಂದು ಸುಧೀರ್ ಕುಮಾರ್ ಮುರಳಿ ದೂರು ನೀಡಿದ್ದರು. ದೂರು ಆಧರಿಸಿ ನಗರ ಠಾಣೆ ಪೊಲೀಸರು ದಾಖಲಿಸಿದ್ದರು. ಗೊಂದಲಗಳಿದ್ದರೆ ಚುನಾವಣಾ ತಕರಾರು ಅರ್ಜಿಯಲ್ಲೇ ಉಲ್ಲೇಖಿಸಬೇಕಿತ್ತು. ಸಂಬಂಧಪಟ್ಟ ನ್ಯಾಯಮೂರ್ತಿಗಳು ಸೂಕ್ತ ಆದೇಶ ನೀಡುತ್ತಿದ್ದರು. ರಾಜಕೀಯ ಒತ್ತಡದಿಂದ ದೂರು ದಾಖಲಿಸುವುದು ಸರಿಯಲ್ಲ ಹೀಗಾದರೆ ಯಾವ ಅಧಿಕಾರಿಯು ಸ್ವತಂತ್ರವಾಗಿ ಕೆಲಸ ಮಾಡಲಾಗುವುದಿಲ್ಲ ಎಂದು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿತು.

Read More

ಪಶ್ಚಿಮಬಂಗಾಳ : ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಒಂದು ಅಭೂತಪೂರ್ವ ಮತ್ತು ಐತಿಹಾಸಿಕ ಬದಲಾವಣೆ ಘಟಿಸಿದೆ. ಇತ್ತೀಚೆಗೆ ನಡೆದ ಅತ್ಯಂತ ಜಿದ್ದಾಜಿದ್ದಿನ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಭರ್ಜರಿ ಬಹುಮತ ಗಳಿಸುವ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ಮುಕ್ತಿ ಹಾಡಿದೆ. ಈ ಮಹತ್ವದ ಗೆಲುವಿನ ಬೆನ್ನಲ್ಲೇ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕ ಹಾಗೂ ಸಮಯ ಅಧಿಕೃತವಾಗಿ ಪ್ರಕಟಗೊಂಡಿದೆ. ಮುಂಬರುವ ಮೇ 9 ರಂದು ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳದ ಹೊಸ ಮುಖ್ಯಮಂತ್ರಿ ಅಧಿಕಾರ ಸೂತ್ರ ಹಿಡಿಯಲಿದ್ದಾರೆ. ಈ ದಿನವು ಬಂಗಾಳದ ಸಾಂಸ್ಕೃತಿಕ ಇತಿಹಾಸದಲ್ಲಿ ಅತ್ಯಂತ ಪ್ರಮುಖ ದಿನವಾಗಿದ್ದು ವಿಶ್ವಕವಿ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮದಿನವಾದ ರವೀಂದ್ರ ಜಯಂತಿಯಂದೇ ಈ ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿರುವುದು ವಿಶೇಷ ರಾಜಕೀಯ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಬಂಗಾಳ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಈ ನಿರ್ಧಾರವನ್ನು ಮಾಧ್ಯಮಗಳಿಗೆ…

Read More

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮನೆಯ ಮುಂದೆ ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ. ಎಸಿಎಫ್ ಮೋಹನ್ ಹಾಗು ಜೀಪ್ ಡ್ರೈವರ್ ಮೇಲೂ ಕೂಡ ವಾಮಾಚಾರ ಪ್ರಯೋಗ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ಮನೆ ಮುಂದೆ ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ. ಕಿಡಿಗೇಡಿಗಳು ಎ ಸಿ ಎಫ್ ಮೋಹನ್ ಹಾಗೂ ಜೀಪ್ ಚಾಲಕನ ಫೋಟೋ ಇಟ್ಟು ವಾಮಾಚಾರ ಮಾಡಿದ್ದಾರೆ. ಕೂಡಲೇ ಕಚೇರಿಯ ಸಿಬ್ಬಂದಿಯ ಮೇಲೆ ಅನುಮಾನ ಬಂದು ಎ ಸಿ ಎಫ್ ಮೋಹನ್ ಇದೀಗ ದೂರು ನೀಡಿದ್ದಾರೆ. ಮೋಹನ್ ಅವರ ದೂರಿನ ಆಧಾರದ ಮೇಲೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಕೇರಳ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ, ಬೆಂಗಳೂರಿನ ನಂದಿನಿ ಲೇಔಟ್ ಪೋಲಿಸರಿಂದ ಸೌಗೇಶ್ ಮತ್ತು ಅಲ್ತಾಫ್ ಎಂಬ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.. ಹೈಡ್ರೋ ಗಾಂಜಾ ತರಿಸಿ ಸ್ಥಳೀಯರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. 5.75 ಕೋಟಿ ರೂಪಾಯಿ ಮೌಲ್ಯದ 5 ಕೆಜಿ 700 ಗ್ರಾಂ ಹೈಡ್ರೋ ಗಾಂಜಾವನ್ನು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದಲ್ಲಿ ಆರೋಪಿಗಳು ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು. ಬಂಧಿತರ ವಿರುದ್ಧ ಕೇರಳದಲ್ಲಿ ಸಹ ಎನ್.ಡಿಪಿಎಸ್ ಕೇಸ್ ದಾಖಲಾಗಿದೆ. ನಂದಿನಿ ಲೇಔಟ್ ಠಾಣೆ ಪೋಲೀಸರಿಂದ ಮುಂದುವರೆದಿದೆ.

Read More

ತಮಿಳುನಾಡು : ತಮಿಳುನಾಡು ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಅಚ್ಚರಿಯ ಫಲಿತಾಂಶ ಕೂಡ ಬಂದಿದೆ. ಕೇವಲ ಒಂದೇ ಒಂದು ಮತದಿಂದ ಡಿಎಂಕೆ ಸಚಿವ ಪೆರಿಯಾಕರುಪ್ಪನ್ ಸೋಲು ಕಂಡಿದ್ದಾರೆ. ಒಂದು ಮತದಿಂದ ಟಿವಿಕೆ ಅಭ್ಯರ್ಥಿ ಶ್ರೀನಿವಾಸ್ ಸೇತುಪತಿ ಗೆಲುವು ಕಂಡಿದ್ದಾರೆ. ಹೌದು ತಮಿಳುನಾಡಿನ ತಿರುಪುತ್ತೂರ್ ನಲ್ಲಿ ಈ ಅಚ್ಚರಿ ಫಲಿತಾಂಶ ಬಂದಿದೆ. ಸಚಿವ ಕೆ ಆರ್ ಪೆರಿಯಾಕರುಪ್ಪನ್ ಪಡೆದಿದ್ದು ಒಟ್ಟು 83, 374 ಮತಗಳು. ಇನ್ನು ಟಿ ವಿ ಕೆ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ಪಡೆದಿದ್ದು 83,375 ಮತಗಳು ಪಡೆದಿದ್ದಾರೆ.ಹಾಗಾಗಿ ಒಂದು ಮತ ಅಂತರದಿಂದ ಟಿ ವಿ ಕೆ ಶ್ರೀನಿವಾಸ ಸೇತುಪತಿ ಗೆದ್ದಿದ್ದಾರೆ. ತಮಿಳುನಾಡು ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಈ ರೀತಿ ಅಚ್ಚರಿ ಫಲಿತಾಂಶ ಬಂದಿದೆ.

Read More

ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ನಿವಾಸದಲ್ಲಿ ಚಿನ್ನಾಭರಣ ಕದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಶಿವಾಜಿನಗರ ಠಾಣೆ ಪೋಲೀಸರು ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಬಂಧಿತ ಆರೋಪಿಗಳನ್ನು ಸಯ್ಯದ್ ಅಮೀರ್ ಹಾಗೂ ಅಮೀರ್ ಅಹ್ಮದ್ ಎಂದು ತಿಳಿದು ಬಂದಿದೆ. ಬಿಜಿನೆಸ್ ಲಾಸ್ ಆಗಿದ್ದಕ್ಕೆ ಪರಿಚಯಸ್ಥರಿಂದಲೇ ಕಳ್ಳತನ ಮಾಡಿದ್ದಾರೆ. ಸೈಯದ್ ಜೊತೆಗೆ ಅಮೀರ್ ಅಹ್ಮದ್ ಟ್ರಾವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ. ಜಮೀರ್ ಮನೆಯಲ್ಲಿ ಸಯ್ಯದ್ ಮತ್ತು ಅಮೀರ್ ಇಬ್ಬರು ಕಳ್ಳತನ ಮಾಡಿದ್ದರು. ಮನೆಯಲ್ಲಿ ಬಂದು ಚಿನ್ನಾಭರಣ ಕಳ್ಳತನ ಮಾಡಿದ್ದರು. ಜಮೀರ್ ತಾಯಿಯ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಗಳು, 1.13 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದರು. ಚಿನ್ನ ಕಳ್ಳತನ ಮಾಡಿ ಆಭರಣ ಅಡವಿಟ್ಟು ಆರೋಪಿಗಳು ಹಣ ಪಡೆದಿದ್ದರು. ಆ ಹಣವನ್ನು ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಮಾಡಿ ಲಾಭಕ್ಕೆ ಪ್ಲಾನ್ ಮಾಡಿದರು. ಕಾಲ್ ಮಾಡಿದಾಗ ರಿಸೀವ್ ಮಾಡಲಿಲ್ಲ. ಇಬ್ಬರ ಮೇಲೆ ಅನುಮಾನ ವ್ಯಕ್ತವಾಗಿದೆ. ಸದ್ಯ…

Read More

ದಾವಣಗೆರೆ : ಇದೆ ಮೇ 31ರವರೆಗೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನುಗವಾಡಿ ಬಳಿ ಇರುವ ಪಂಚಮಸಾಲಿ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಠದಲ್ಲಿ ಶಾಂತಿ ಕಾಪಾಡುವ ಹಿತ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೇ 31 ರವರೆಗೆ ಯಾವುದೇ ಸಭೆ ಸಮಾರಂಭ ಮತ್ತು ಸುದ್ದಿಗೋಷ್ಠಿ ನಡೆಸುವಂತಿಲ್ಲ. ಟ್ರಸ್ಟಿಗಳು ಆಗಿರಬಹುದು, ಸ್ವಾಮೀಜಿ ಬೆಂಬಲಿಗರು ಸಭೆ ನಡೆಸಿ ಹೇಳಿಕೆ ನೀಡುತ್ತಿದ್ದಾರೆ. ಉದ್ರಿಕ್ತ ಹೇಳಿಕೆಗಳನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗುತ್ತಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುತ್ತದೆ ಎಂದು ವರದಿ ಬಂದಿದ್ದು, ಹಾಗಾಗಿ ದಾವಣಗೆರೆ ಎಸ್ಪಿ ಶೇಖರ್ ನೀಡಿದ ವರದಿ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಠದಲ್ಲಿ ದೈನಂದಿನ ಪೂಜಾ ಕಾರ್ಯಕ್ಕೆ ಯಾವುದೇ ಅಡ್ಡಿ ಇಲ್ಲವೆಂದು ಡಿಸಿ ಸ್ಪಷ್ಟಪಡಿಸಿದ್ದಾರೆ.

Read More

ಬೆಂಗಳೂರು : ವಾಣಿಜ್ಯ ಬಳಕೆ ಅನಿಲದ ಸಿಲಿಂಡ‌ರ್ ದರ ದಿಢೀ‌ರ್ ಹೆಚ್ಚಳವಾಗಿದ್ದು, ಹೋಟೆಲ್‌ಗಳಲ್ಲಿ ಊಟ-ಉಪಹಾರದ ದರ ಏರಿದೆ. ಕೆಲವು ಸಣ್ಣ ಹೋಟೆಲ್‌, ದರ್ಶಿನಿಗಳು ಶನಿವಾರದಿಂದಲೇ ದರ ಹೆಚ್ಚಿಸಿವೆ. ವಾಣಿಜ್ಯ ಬಳಕೆಯ 19ಕೆ.ಜಿ ಅನಿಲದ ಸಿಲಿಂಡ‌ರ್ ಈ ಮೊದಲು ರೂ. 2,140ಕ್ಕೆ ದೊರೆಯುತ್ತಿತ್ತು, ಇದೀಗ ಒಂದು ಸಿಲಿಂಡರ್‌ಗೆ ಒಮ್ಮೆಲೆ ರೂ.993 ಹೆಚ್ಚಳವಾಗಿದೆ. ಇದರ ಪರಿಣಾಮ ಇಡ್ಲಿ, ವಡಾ, ಉಪ್ಪಿಟ್ಟು, ಪುಲಾವ್, ದೋಸೆ, ಊಟ ಹೀಗೆ ಎಲ್ಲ ಬಗೆಯ ಖಾದ್ಯದ ಬೆಲೆ ಹೆಚ್ಚಾಗಿದೆ. ಟೀ, ಕಾಫಿ ಬೆಲೆಯೂ ರೂ. 2ರಿಂದ ರೂ. 5 ಏರಿಕೆಯಾಗಿದೆ. ಇದು ಗ್ರಾಹಕರ ಕಂಗೆಡಿಸಿದೆ. ಒಂದೇ ಬಾರಿಗೆ 993 ರೂಪಾಯಿ ಏರಿಕೆ! ವಾಣಿಜ್ಯ ಬಳಕೆಯ 19 ಕೆ.ಜಿ ತೂಕದ ಅನಿಲ ಸಿಲಿಂಡರ್ ಬೆಲೆಯಲ್ಲಿ ಈ ಹಿಂದೆಂದೂ ಕಾಣದ ರೀತಿಯಲ್ಲಿ ಏರಿಕೆ ಕಂಡುಬಂದಿದೆ. ಈ ಮೊದಲು 2,140 ರೂಪಾಯಿಗಳಿಗೆ ದೊರೆಯುತ್ತಿದ್ದ ಸಿಲಿಂಡರ್ ಬೆಲೆ ಈಗ ಬರೋಬ್ಬರಿ 993 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಅನಿಲ ದರದಲ್ಲಿನ ಈ ದಿಢೀರ್ ಬದಲಾವಣೆಯು ಹೋಟೆಲ್ ಮಾಲೀಕರನ್ನು ಕಂಗೆಡಿಸಿದ್ದು,…

Read More

ಬೆಂಗಳೂರು : ಇಸ್ರೋದ ಕ್ಯಾಂಪಸ್‌ ಮೇಲೆ ಡ್ರೋನ್ ಹಾರಾಟ ನಡೆಸಿರುವ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಮೇ 2ರಂದು ಬೆಳಿಗ್ಗೆ 8:16ರ ಸುಮಾರಿಗೆ ಕಾರ್ತಿಕ್ ನಗರದ ಇಸ್ರೋದ ಉಪಗ್ರಹ ಏಕೀಕರಣ ಮತ್ತು ಪರೀಕ್ಷಾ ಕೇಂದ್ರದ ಮೇಲೆ ಸುಮಾರು 80ರಿಂದ 100 ಅಡಿಗಳ ಮೇಲೆ 10-12 ಸೆಕೆಂಡ್‌ಗಳ ಕಾಲ ಅಪರಿಚಿತರು ಡ್ರೋನ್ ಹಾರಿಸಿರುವುದು ವರದಿಯಾಗಿದೆ. ಸಿಐಎಸ್‌ಎಫ್ ಸಬ್ ಇನ್ಸ್‌ಪೆಕ್ಟರ್ ನೀಡಿರುವ ದೂರಿನನ್ವಯ ಹೆಚ್ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ: ಕಳೆದ ಮೇ 2ರಂದು ಬೆಳಿಗ್ಗೆ ಸುಮಾರು 8:16ರ ವೇಳೆಗೆ ಈ ಘಟನೆ ಸಂಭವಿಸಿದೆ. ಅತೀ ಹೆಚ್ಚು ಭದ್ರತೆ ಹೊಂದಿರುವ ಈ ಪ್ರದೇಶದ ಮೇಲೆ ಸುಮಾರು 80 ರಿಂದ 100 ಅಡಿ ಎತ್ತರದಲ್ಲಿ ಅಪರಿಚಿತ ಡ್ರೋನ್ ಕಾಣಿಸಿಕೊಂಡಿದೆ. ಸುಮಾರು 10 ರಿಂದ 12 ಸೆಕೆಂಡ್‌ಗಳ ಕಾಲ ಈ ಡ್ರೋನ್ ಇಸ್ರೋ ಆವರಣದ ಮೇಲೆ ಹಾರಾಟ ನಡೆಸಿ ಮಾಯವಾಗಿದೆ ಎಂದು ವರದಿಯಾಗಿದೆ. ಭದ್ರತಾ ಲೋಪದ ಆತಂಕ: ಇಸ್ರೋದ ಈ ಕೇಂದ್ರವು ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು,…

Read More

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಬಸ್ ಸಂಪೂರ್ಣ ಜ್ವಾಲೆಗೆ ಆಹುತಿಯಾಗಿದೆ. ತಪ್ಪಿದ ಭಾರಿ ಪ್ರಾಣಾಪಾಯ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ಒಟ್ಟು 17 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಬಸ್‌ನ ಎಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಚಾಲಕ ಪಕ್ಕೀರಪ್ಪ, ಕೂಡಲೇ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಯುವಂತೆ ಸೂಚಿಸಿದ್ದಾರೆ. ಚಾಲಕನ ಈ ಸಮಯಪ್ರಜ್ಞೆಯಿಂದಾಗಿ ಎಲ್ಲಾ 17 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸುರಕ್ಷಿತವಾಗಿ ಹೊರಬಂದಿದ್ದಾರೆ. ನಂದಿಸಲು ಸಿಬ್ಬಂದಿ ಹರಸಾಹಸ ಬೆಂಕಿ ಕಾಣಿಸಿಕೊಂಡ ತಕ್ಷಣ ಬಸ್ ಸಿಬ್ಬಂದಿ ಲಭ್ಯವಿದ್ದ ಅಗ್ನಿಶಾಮಕ ಉಪಕರಣಗಳ ಮೂಲಕ ಜ್ವಾಲೆಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದರೆ, ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಕ್ಷಣಾರ್ಧದಲ್ಲಿ ಬಸ್ ಪೂರ್ತಿಯಾಗಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದೆ. ಬಸ್‌ನ ಬಹುತೇಕ ಭಾಗ ಸುಟ್ಟು ಕರಕಲಾಗಿದ್ದು, ಪ್ರಯಾಣಿಕರ ಲಗೇಜುಗಳಿಗೂ…

Read More