Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಮಗಳೂರು: ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಇಂದು ನಗರದ ಐಡಿಎಸ್ಜಿ (IDSG) ಸರ್ಕಾರಿ ಕಾಲೇಜಿನಲ್ಲಿ ಮುಕ್ತಾಯಗೊಂಡಿದೆ. ಹೈಕೋರ್ಟ್ ಆದೇಶದಂತೆ ನಡೆದ ಈ ಮರು ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ತಮ್ಮ ಗೆಲುವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ದೀರ್ಘಕಾಲದ ಕಾನೂನು ಹೋರಾಟಕ್ಕೆ ಸದ್ಯ ತೆರೆ ಬಿದ್ದಂತಾಗಿದೆ. ತೀವ್ರಗೊಂಡ ಕಾಂಗ್ರೆಸ್-ಬಿಜೆಪಿ ಜಿದ್ದಾಜಿದ್ದಿ ಚುನಾವಣಾ ಫಲಿತಾಂಶ ಪ್ರಕಟವಾದಾಗಿನಿಂದಲೂ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ವಾತಾವರಣ ನಿರ್ಮಾಣವಾಗಿತ್ತು. ಅಂಚೆ ಮತಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ಕಾನೂನು ಹೋರಾಟ ಆರಂಭಿಸಿದ್ದರು. ಇಂದು ಮರು ಎಣಿಕೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಕಾಲೇಜು ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಎರಡೂ ಪಕ್ಷಗಳ ಕಾರ್ಯಕರ್ತರು ಫಲಿತಾಂಶಕ್ಕಾಗಿ ಕಾದು ಕುಳಿತಿದ್ದು, ರಾಜಕೀಯ ಸಂಚಲನ ಮೂಡಿಸಿತ್ತು. ಮರು ಎಣಿಕೆಯ ಅಂಕಿ-ಅಂಶಗಳ ವಿವರ ಶೃಂಗೇರಿ ಕ್ಷೇತ್ರದಲ್ಲಿ ಒಟ್ಟು 1,822 ಅಂಚೆ ಮತಗಳು…
ನವದೆಹಲಿ: ಜಾಗತಿಕ ಮಟ್ಟದಲ್ಲಿ ಏವಿಯೇಷನ್ ಟರ್ಬೈನ್ ಇಂಧನ (ATF) ದರಗಳಲ್ಲಿ ಕಂಡುಬಂದಿರುವ ಭಾರಿ ಏರಿಕೆ ಹಾಗೂ ವಾಯುಪ್ರದೇಶದ ನಿರ್ಬಂಧಗಳಿಂದಾಗಿ ಏರ್ ಇಂಡಿಯಾ ಸಂಸ್ಥೆಯು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಮುಂಬರುವ ಜೂನ್ ಮತ್ತು ಜುಲೈ ತಿಂಗಳಲ್ಲಿ ತನ್ನ ಅಂತರರಾಷ್ಟ್ರೀಯ ವಿಮಾನ ಸೇವೆಗಳನ್ನು ಕಡಿತಗೊಳಿಸಲು ಸಂಸ್ಥೆ ಮುಂದಾಗಿದೆ ಎಂದು ವರದಿಯಾಗಿದೆ. India Today ಗೆ ಲಭ್ಯವಾದ ಆಂತರಿಕ ಸಂವಹನ ಮಾಹಿತಿಯ ಪ್ರಕಾರ, ವಿಮಾನಯಾನ ಸಂಸ್ಥೆಯ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕ್ಯಾಂಪ್ಬೆಲ್ ವಿಲ್ಸನ್ ಸಿಬ್ಬಂದಿಗೆ ಕಳುಹಿಸಿದ ಸಂದೇಶದಲ್ಲಿ “ಹೆಚ್ಚುತ್ತಿರುವ ಕಾರ್ಯಾಚರಣಾ ಸವಾಲುಗಳ ನಡುವೆ ಜೂನ್ ಹಾಗೂ ಜುಲೈನಲ್ಲಿ ವೇಳಾಪಟ್ಟಿಗಳನ್ನು ಕಡಿಮೆ ಮಾಡುವುದನ್ನು ಬಿಟ್ಟು ಬೇರೆ ಮಾರ್ಗವಿಲ್ಲ” ಎಂದು ತಿಳಿಸಿದ್ದಾರೆ. ಜೆಟ್ ಇಂಧನದ ಭಾರೀ ಬೆಲೆ ಏರಿಕೆ, ವಾಯುಪ್ರದೇಶ ಮುಚ್ಚುವಿಕೆ ಹಾಗೂ ದೀರ್ಘ ಹಾರಾಟ ಮಾರ್ಗಗಳ ಪರಿಣಾಮವಾಗಿ ಎಪ್ರಿಲ್ ಮತ್ತು ಮೇ ತಿಂಗಳಲ್ಲೇ ಕೆಲವು ವಿಮಾನ ಸೇವೆಗಳು ಕಡಿತಗೊಂಡಿವೆ ಎಂದು ಅವರು ಹೇಳಿದ್ದಾರೆ. ಮಧ್ಯಪ್ರಾಚ್ಯ ಯುದ್ಧದ ವ್ಯಾಪಕ ಪರಿಣಾಮ, ಬದಲಾದ ಕರೆನ್ಸಿ ವಿನಿಮಯ ದರಗಳು ಹಾಗೂ…
ಬೆಂಗಳೂರು : ಕಳೆದ 3 ವರ್ಷಗಳಿಂದ ಪಡಿತರ ಚೀಟಿಗಾಗಿ ಅರ್ಜಿ ಕರೆಯದ ಹಿನ್ನಲೆಯಲ್ಲಿ ಲಕ್ಷಾಂತರ ಅರ್ಹ ಬಡವರು ಬಿಪಿಎಲ್ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಬಡವರು ಬಿಪಿಎಲ್ ಪಡಿತರ ಚೀಟಿಗಾಗಿ ಕಾಯುತ್ತಿದ್ದರೂ, ರಾಜ್ಯ ಸರಕಾರ ಮಾತ್ರ ಕಳೆದ 3 ವರ್ಷಗಳಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನೇ ಕರೆದಿಲ್ಲ. ಇದರಿಂದ ಅರ್ಹ ಬಡವರು ಬಿಪಿಎಲ್ ಸೌಲಭ್ಯ ವಂಚಿತರಾಗಿದ್ದಾರೆ. ರಾಜ್ಯ ಸರಕಾರದ ಆಹಾರ , ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪ್ರಸ್ತುತ ವೈದ್ಯಕೀಯ ತುರ್ತು ಪರಿಸ್ಥಿತಿ ಹಿನ್ನೆಲೆಯವರಿಗೆ, ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ, ಬುಡಕಟ್ಟು ಜನಾಂಗದವರಿಗೆ ಆದ್ಯತಾ ಪಡಿತರ ಚೀಟಿ ನೀಡುತ್ತಿದೆ. ಇದರ ಹೊರತಾಗಿ ಲಕ್ಷಾಂತರ ಮಂದಿ ಬಿಪಿಎಲ್ ಪಡಿತರ ನಿರೀಕ್ಷೆಯಲ್ಲಿದ್ದಾರೆ. ರಾಜ್ಯದಲ್ಲಿ ಅಂತ್ಯೋದಯ ಅನ್ನ ಪಡಿತರ ಚೀಟಿ (ಎಎವೈ)ಗಳು 10,47,080 ಇದ್ದು, 42,76,526 ಫಲಾನುಭವಿಗಳಿದ್ದಾರೆ. ಆದ್ಯತಾ ಪಡಿತರ ಚೀಟಿಗಳು(ಬಿಪಿಎಲ್) 1,14,38,886 ಇದ್ದು, 4,00,46,744 ಫಲಾನುಭವಿಗಳಿದ್ದಾರೆ. ಆದ್ಯತೇತರ ಪಡಿತರ ಚೀಟಿಗಳು 29,71,601 ಇದ್ದು, 1,02,18,470 ಫಲಾನುಭವಿಗಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ 1,54,57,567 ಪಡಿತರ…
ಬೆಂಗಳೂರು : ಬೆಂಗಳೂರಲ್ಲಿ ಬನ್ನೇರುಘಟ್ಟದ ಸಮೀಪ ಬಿಲ್ವಾರದ ಹಳ್ಳಿ ಬಳಿ ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ವೃದ್ದೇಯ ಶವ ಪತ್ತೆಯಾಗಿದೆ. ಕೊಲೆ ಮಾಡಿ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ಚಿ ದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ಬಿಲ್ಬಾರದ ಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಬೇರೆ ಕಡೆಗೆ ಕೊಲೆ ಮಾಡಿ ಇಲ್ಲಿ ತಂದು ಬೆಂಕಿ ಹಚ್ಚಿರುವುದು ಪತ್ತೆಯಾಗಿದ್ದು, ಆಸ್ತಿ ವಿವಾದಕ್ಕೆ ವೃದ್ಧೆಯನ್ನು ಕೊಲೆ ಮಾಡಿ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗುತ್ತಿದೆ. ಬೆಳಗ್ಗೆ 9:30 ಸುಮಾರಿಗೆ ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬನ್ನೇರುಘಟ್ಟ ಪೊಲೀಸರು ಇದೀಗ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಬೆಂಗಳೂರು : ನಾನ್ ಐಪಿಎಸ್ ಅಧಿಕಾರಿಗಳಿಗೆ ಎಸ್ಪಿ ಹುದ್ದೆಗೆ ಭರ್ತಿ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಕೆಎಸ್ಎಟಿ ಆದೇಶ ಮಾರ್ಪಡಿಸಿದ ಹೈಕೋರ್ಟ್ ವಿಭಾಗಿಯ ಪೀಠ. ಕೆಸಿಎಸ್ಆರ್ 45ರ ನಿಯಮದ ಅಡಿ ಬಡ್ತಿ ಪರಿಗಣನೆಗೆ ಸೂಚನೆ ನೀಡಿದ್ದು, ಡಿಸಿಪಿ, ಹುದ್ದೆ ಲಭ್ಯತೆ, ಗೃಹ ಸಚಿವರ ಅನುಮೋದನೆ ಆಧರಿಸಿ ತೀರ್ಮಾನಿಸಿ ಎರಡು ತಿಂಗಳಲ್ಲಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಡಿವೈಎಸ್ಪಿ ದರ್ಜೆಯ 30 ಅಧಿಕಾರಿಗಳು ಕೆಎಸ್ಎಟಿಗೆ ಅರ್ಜಿ ಸಲ್ಲಿಸಿದರು ಕೆಎಸ್ಎಟಿ ಅಧಿಕಾರಿಗಳಿಗೆ ಭಡ್ತಿ ನೀಡಲು ಆದೇಶ ನೀಡಿತು. ಈ ಒಂದು ಆದೇಶವನ್ನು ಆದೇಶವನ್ನು ರಾಜ್ಯ ಸರ್ಕಾರ ಹೈಕೋರ್ಟ್ ನಲ್ಲಿ ಪ್ರಶ್ನಿಸಿತು. ಇತರೆ ಅಂಶಗಳನ್ನು ಪರಿಗಣಿಸಿ ನಿರ್ಧರಿಸಲು ಇದೀಗ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಹಿನ್ನೆಲೆ ಏನು? ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿವೈಎಸ್ಪಿ ದರ್ಜೆಯ ಸುಮಾರು 30 ಅಧಿಕಾರಿಗಳು ತಮಗೆ ಎಸ್ಪಿ ಹುದ್ದೆಗೆ ಬಡ್ತಿ ನೀಡುವಂತೆ ಕೋರಿ ಕೆಎಸ್ಎಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಕೆಎಸ್ಎಟಿ, ಈ ಅಧಿಕಾರಿಗಳಿಗೆ…
ಮಂಡ್ಯ : ಮಂಡ್ಯದಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ಪತಿಯ ಸಾವಿನಿಂದ ಮನನೊಂದ ಪತ್ನಿ ಒಬ್ಬರು ಪತಿಯ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಅತ್ತಿಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗೀತಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿಯ ಸಾವಿನಿಂದ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ಗೀತಾ ಪತಿ ರಾಜು ಅನಾರೋಗ್ಯದಿಂದ ಮೃತಪಟ್ಟಿದ್ರು. ಪತಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದು ಪತ್ನಿ ಗೀತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 6 ತಿಂಗಳ ಹಿಂದೆಯಷ್ಟೆ ಕಿರಿಯ ಮಗ ಅಪಘಾತದಲ್ಲಿ ಮೃತಪಟ್ಟಿದ್ದ. ಇದೀಗ ತಂದೆ ತಾಯಿ ಸಾವಿನಿಂದ ಹಿರಿ ಮಗ ಅನಾಥನಾಗಿದ್ದಾನೆ. ಪತಿ ಪತ್ನಿ ಸಾವಿನಿಂದ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.
ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಖುಲಾಸೆ ಆಗಿದ್ದಾರೆ. ಸಾಕ್ಷಾಧಾರ ಕೊರತೆ ಹಿನ್ನೆಲೆಯಲ್ಲಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಇದೀಗ ಕೆ ಎಸ್ ಈಶ್ವರಪ್ಪ ಅವರನ್ನು ಖುಲಾಸೆಗೊಳಿಸಿದೆ. 2024 ಎಪ್ರಿಲ್ ತಿಂಗಳಿನಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಸಭೆ ಮಾಡಿದ್ದರು.ಅಂಬುತೀರ್ಥ ಸಮೀಪ ಸಭೆ ನಡೆಸಿದ ಆರೋಪದಡಿ ಪ್ರಕರಣ ಸಹ ದಾಖಲಾಗಿತ್ತು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೆಎಸ್ ದಾಖಲಾಗಿತ್ತು. ಪ್ರಕರಣದ ಹಿನ್ನೆಲೆ ಮತ್ತು ಆರೋಪ 2024ರ ಏಪ್ರಿಲ್ ತಿಂಗಳಿನಲ್ಲಿ ನಡೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕೆ.ಎಸ್. ಈಶ್ವರಪ್ಪ ಅವರು, ಅನುಮತಿ ಪಡೆಯದೆ ಸಭೆ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಅಂದಿನ ಚುನಾವಣಾ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ನ್ಯಾಯಾಲಯದ ವಿಚಾರಣೆ ಬೆಂಗಳೂರಿನ 42ನೇ ಎಸಿಜೆಎಂ (ACJM)…
BREAKING : ಬೆಂಗಳೂರಲ್ಲಿ ಡೆತ್ ನೋಟ್ ಬರೆದಿಟ್ಟು, ‘SSLC’ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ!
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸಂಧ್ಯಾ (16) ಎನ್ನುವ ವಿದ್ಯಾರ್ಥಿನೀ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೈರೇಗೌಡನಹಳ್ಳಿ ಒಂದು ಘಟನೆ ನಡೆದಿದೆ. ಬೈರೇಗೌಡನಹಳ್ಳಿಯಲ್ಲಿ ಚಿಕ್ಕಬಳ್ಳಾಪುರ ಮೂಲದ ರಾಘವೇಂದ್ರ ಮತ್ತು ಜ್ಯೋತಿ ದಂಪತಿಯ ಪುತ್ರಿ ಸಂಧ್ಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾಭ್ಯಾಸಕ್ಕಾಗಿ ಅಕ್ಕ ಶೈಲಜಾ ಮನೆಗೆ ಪುತ್ರಿಯನ್ನು ರಾಘವೇಂದ್ರ ಕಳುಹಿಸಿದ್ದರು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಂಧ್ಯಾ 90 ಪರ್ಸೆಂಟ್ ಅಂಕ ಪಡೆದು ಟಾಪರ್ ಆಗಿದ್ದಳು. ಮೆಡಿಕಲ್ ಓದುವ ಆಸೆಯಿಂದ ನಿನ್ನೆ ಸಂಧ್ಯ ಅರ್ಜಿಯನ್ನು ತಂದಿದ್ದಾಳೆ. ಇದೆ ವೇಳೆ ಅಜ್ಜಿಗೆ ಹುಷಾರಿಲ್ಲ ಎಂದು ಕುಟುಂಬದ ಸದಸ್ಯರು ಆಸ್ಪತ್ರೆಗೆ ತೆರಳಿದ್ದಾರೆ. ಮನೆಯಲ್ಲಿ ಸಂಧ್ಯಾಳನ್ನು ಒಬ್ಬಳನ್ನೇ ಬಿಟ್ಟು ಕುಟುಂಬಸ್ಥರು ಆಸ್ಪತ್ರೆಗೆ ತೆರಳಿದ್ದಾರೆ. ಬಳಿಕ ಮನೆಯವರು ಮನೆಗೆ ಬಂದು ನೋಡಿದಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಡೆತ್ ನೋಟ್ ನಲ್ಲಿ ಸಾರಿ ಅಪ್ಪ ಎಂದು ಬಾಲಕಿ…
ಬೆಂಗಳೂರಲ್ಲಿ ಬಸ್ ಹರಿದು ಬಾಲಕ ಸಾವು ಕೇಸ್ ಗೆ ಟ್ವಿಸ್ಟ್ : ತಲೆ ಸುತ್ತು ಬಂದು ಬಿದ್ದಾಗ, ಖಾಸಗಿ ಬಸ್ ಹರಿದು ದುರ್ಮರಣ!
ಬೆಂಗಳೂರು : ನಿನ್ನೆ ಬೆಂಗಳೂರಿನ ಬಾಗಲೂರು ಹೆಣ್ಣೂರು ಬಳಿ ರಸ್ತೆದಾಟುವಾಗ ಬಾಲಕ್ಕನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ತಳದಲ್ಲಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಸ್ ಡಿಕ್ಕಿ ಹೊಡೆದು ಬಾಲಕ ಸಾವನಪ್ಪಿಲ್ಲ. ರಸ್ತೆ ದಾಟಲು ನಿಂತಿದ್ದಾಗ ತಲೆ ಸುತ್ತಿ ಬಿದ್ದು ಖಾಸಗಿ ಬಸ್ ತಲೆ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ನಡೆದಿದೆ. ವರುಣ್ (16) ಮೃತ ದುರ್ದೈವಿ. ನಿನ್ನೆ ಬೆಳಿಗ್ಗೆ ಈ ಒಂದು ಘಟನೆ ನಡದಿದ್ದು, ಬಸ್ ಡಿಕ್ಕಿಯಾಗಿ ವರುಣ್ ಸಾವನಪ್ಪಿದ್ದ ಎಂದು ತಿಳಿದುಬಂದಿತ್ತು. ಆದರೆ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ, ವರುಣ್ ತಂದೆಗೆ ಆರಾಮಿಲ್ಲ ಎಂದು ಔಷಧಿ ತರಲು ಹೋಗಿದ್ದ. ರಸ್ತೆ ದಾಟಲು ನಿಂತಾಗ ತಲೆ ಸುತ್ತಿ ಬಿದ್ದಿದ್ದಾನೆ. ಈ ವೇಳೆ ಏಕಾಏಕಿ ಖಾಸಗಿ ಬಸ್ ಅಡಿಗೆ ಸಿಲುಕಿದ್ದಾನೆ. ವಿದ್ಯಾರ್ಥಿಯ ಮೇಲೆ ಬಸ್ ಹರಿದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ವರುಣ್ ಎಸ್ಎಸ್ಎಲ್ಸಿ ಉನ್ನತ ಶ್ರೇಣಿಯಲ್ಲಿ ಪಾಸ್ ಆಗಿದ್ದ. ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ವೈಟ್ ಟ್ಯಾಪಿಂಗ್ ನಡೆಯುತ್ತಿದೆ.…
ಮಂಡ್ಯ : ಮಂಡ್ಯದಲ್ಲಿ ಅನುಮಾನಾಸ್ಪದವಾಗಿ ಗ್ರಹಿಣಿ ಸಾವನ್ನಪ್ಪಿದ್ದಾರೆ ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು ಮಂಡ್ಯ ತಾಲೂಕಿನ ಜವನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಬನಂಗಾಡಿಯ ನಾಗವೇಣಿ (24) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಜವನ ಹಳ್ಳಿಯ ಬಾವಿಯಲ್ಲಿ ನಾಗವೇಣಿಯ ಶವಪತ್ತೆಯಾಗಿದೆ. ಆರು ವರ್ಷಗಳ ಹಿಂದೆ ಬ್ಯಾಟಗೆಗೌಡನ ಜೊತೆಗೆ ನಾಗವೇಣಿ ಮದುವೆ ಆಗಿತ್ತು. ದಂಪತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗು ಇದೆ. ಮದುವೆ ವೇಳೆ 80 ಗ್ರಾಂ ಚಿನ್ನಾಭರಣ ಹಾಗೂ ಅರವತ್ತು ಸಾವಿರ ವರದಕ್ಷಿಣೆ ಸಹ ನೀಡಲಾಗಿತ್ತು. ಆದರೆ ಇನ್ನಷ್ಟು ವರದಕ್ಷಿಣೆ ಬೇಕು ಎಂದು ಬ್ಯಾಟಗೆಗೌಡ ಪೀಡಿಸುತ್ತಿದ್ದ. ಆರು ತಿಂಗಳ ಹಿಂದೆ ಕುಟುಂಬ ಆದರೂ ಕೂಡ ಮತ್ತಷ್ಟು ಹಣ ತರುವಂತೆ ನಾಗವೇಣಿಗೆ ಪತಿ ಕಿರುಕುಳ ನೀಡಿದ್ದಾನೆ. ಮನೆಯಲ್ಲಿ ಸಾಯಿಸಿ ಬಾವಿಗೆ ಹೆಣ ಹಾಕಿದ್ದಾರೆ ಎಂದು ಇದೀಗ ನಾಗವೇಣಿ, ಕುಟುಂಬಸ್ಥರು ಆರೋಪಿಸಿದ್ದಾರೆ. ನಾಗವೇಣಿ ಪತಿ ಮತ್ತು ಅತ್ತೆ ಹಾಗೂ ಅವರ ಕುಟುಂಬದವರು ಘಟನೆಯ ಬಳಿಕ ನಾಪತ್ತೆಯಾಗಿದ್ದಾರೆ.…













