Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ನಿನ್ನೆ ಹಠಾತ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ತೆರವಾಗಿರುವ ಸಿಎಂ ಗಾದಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರು ಅಂತಿಮಗೊಂಡಿದೆ. ನಿನ್ನೆ ನಡೆದ ಮಹತ್ವದ ‘ಬ್ರೇಕ್ ಫಾಸ್ಟ್ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಅವರೇ ಖುದ್ದಾಗಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಘೋಷಣೆ ಮಾಡುವ ಮೂಲಕ ದಶಕಗಳ ರಾಜಕೀಯ ಹಗ್ಗಜಗ್ಗಾಟಕ್ಕೆ ತೆರೆ ಎಳೆದಿದ್ದಾರೆ. ಸಿದ್ದರಾಮಯ್ಯ ಅವರ ಅಧಿಕೃತ ಘೋಷಣೆ ಹೊರಬೀಳುತ್ತಿದ್ದಂತೆ ಇತ್ತ ಡಿ.ಕೆ. ಶಿವಕುಮಾರ್ ಅವರ ಪಡಸಾಲೆಯಲ್ಲಿ ಸಂಭ್ರಮ ಮನೆಮಾಡಿದ್ದು, ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ಆರಂಭವಾಗಿವೆ. ರಾಜ್ಯದ ಚುಕ್ಕಾಣಿ ಹಿಡಿಯಲು ಸಜ್ಜಾಗಿರುವ ಕನಕಪುರ ಬಂಡೆ, ತಮ್ಮ ರಾಜಕೀಯ ಜೀವನದ ಅತ್ಯುನ್ನತ ಕ್ಷಣವನ್ನು ಅತ್ಯಂತ ವೈಭವ ಹಾಗೂ ಶಾಸ್ತ್ರೋಕ್ತವಾಗಿ ನೆರವೇರಿಸಲು ತೀರ್ಮಾನಿಸಿದ್ದಾರೆ. ರಾಜಭವನ ಹಾಗೂ ಕೆಪಿಸಿಸಿ ಕಚೇರಿಗಳಲ್ಲಿ ಈಗಾಗಲೇ ಪೂರ್ವಭಾವಿ ಸಿದ್ಧತೆಗಳು ಚುರುಕುಗೊಂಡಿವೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆ…

Read More

ನವದೆಹಲಿ: ಕರ್ನಾಟಕ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ನಿನ್ನೆ ತಡರಾತ್ರಿ ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದು ಬೆಳಿಗ್ಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾದ ಅವರು, ತಮ್ಮ ಅಧಿಕಾರಾವಧಿಯಲ್ಲಿ ನೀಡಿದ ಬೆಂಬಲಕ್ಕೆ ಧನ್ಯವಾದ ಸಮರ್ಪಿಸಿದರು. ದೆಹಲಿಯ ಪ್ರಸಿದ್ಧ ’10 ಜನಪಥ್’ ರಸ್ತೆಯಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ, ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ತಮಗೆ ಈವರೆಗೆ ನೀಡಿದ ಸಹಕಾರ ಮತ್ತು ನಾಯಕತ್ವಕ್ಕೆ ಅವರು ಹೃದಯಪೂರ್ವಕವಾಗಿ ಕೃತಜ್ಞತೆ ಸಲ್ಲಿಸಿದರು. ಕೇವಲ ಸೌಜನ್ಯದ ಭೇಟಿಯಾಗಷ್ಟೇ ಉಳಿಯದ ಈ ಹೈಕಮಾಂಡ್ ಸಭೆಯಲ್ಲಿ, ರಾಜ್ಯ ರಾಜಕಾರಣದ ಮುಂದಿನ ನಡೆಗಳ ಬಗ್ಗೆಯೂ ಸುದೀರ್ಘ ಚರ್ಚೆ ನಡೆದಿದೆ. ರಾಜೀನಾಮೆ ನೀಡಿದ ನಂತರವೂ ರಾಜ್ಯ ರಾಜಕೀಯದಲ್ಲಿ ತಮ್ಮ ಹಿಡಿತವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಮುಂದೆ…

Read More

ಹಾಸನ : ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಮಗು ಮಾರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಪತಿಯೇ ತನ್ನ ಪತ್ನಿಯನ್ನು ಕ್ರೂರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಚನ್ನರಾಯಪಟ್ಟಣದ ಟಿಪ್ಪು ನಗರದ ನಿವಾಸಿಯಾದ ಗುಲ್‌ಶೀರ್ ಭಾನು (31) ಕೊಲೆಯಾದ ದುರ್ದೈವಿ ಮಹಿಳೆಯಾಗಿದ್ದಾರೆ. ಮೃತಳ ಪತಿ ಸೈಫುಲ್ಲಾ (37) ಹಾಗೂ ಆತನ ಕುಟುಂಬಸ್ಥರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಮಹಿಳೆಯ ತವರು ಮನೆಯವರು ಗಂಭೀರ ಆರೋಪ ಮಾಡಿದ್ದಾರೆ. 13 ವರ್ಷಗಳ ದಾಂಪತ್ಯಕ್ಕೆ ಬಿದ್ದ ಬಿರುಕು ಮೃತ ಗುಲ್‌ಶೀರ್ ಭಾನು ಅವರನ್ನು ಸುಮಾರು 13 ವರ್ಷಗಳ ಹಿಂದೆ ಚನ್ನರಾಯಪಟ್ಟಣದ ಸೈಫುಲ್ಲಾ ಎಂಬಾತನಿಗೆ ನೀಡಿ ಮದುವೆ ಮಾಡಲಾಗಿತ್ತು. ದಾಂಪತ್ಯ ಜೀವನದ ಆರಂಭದ ಒಂದೆರಡು ವರ್ಷಗಳು ಇವರ ಸಂಸಾರ ಚೆನ್ನಾಗಿಯೇ ಇತ್ತು. ಆದರೆ, ಆ ಬಳಿಕ ಪತಿ ಸೈಫುಲ್ಲಾ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಎನ್ನಲಾಗಿದೆ. ಹಣದ ಹಣಾಹಣಿಯಿಂದಾಗಿ ಆತ ತಮಗಿದ್ದ ಗಂಡು ಮಗುವನ್ನೇ ಮಾರಾಟ ಮಾಡಿದ್ದ. ಮಗುವನ್ನು ಮಾರಾಟ ಮಾಡಿದ ದಿನದಿಂದ…

Read More

ಬೆಂಗಳೂರು : ರಾಜ್ಯ ರಾಜಕಾರಣದ ದಿಢೀರ್ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ರಾಜ್ಯ ಸಚಿವ ಸಂಪುಟ ಅಧಿಕೃತವಾಗಿ ವಿಸರ್ಜನೆಗೊಂಡಿದೆ. ನಿನ್ನೆ ಮುಖ್ಯಮಂತ್ರಿಗಳು ನೀಡಿದ್ದ ರಾಜೀನಾಮೆಯನ್ನು ಇಂದು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಈ ಪ್ರಮುಖ ರಾಜಕೀಯ ಸ್ಥಿತ್ಯಂತರದ ಬೆನ್ನಲ್ಲೇ, ರಾಜಧಾನಿ ಬೆಂಗಳೂರಿನಲ್ಲಿ ಆಡಳಿತಾರೂಢ ಸಚಿವರ ಅಧಿಕೃತ ಸೌಲಭ್ಯಗಳನ್ನು ಹಿಂಪಡೆಯುವ ಪ್ರಕ್ರಿಯೆ ಬಿರುಸಿನಿಂದ ಆರಂಭವಾಗಿದೆ. ಸಚಿವ ಸಂಪುಟ ವಿಸರ್ಜನೆಯಾಗುತ್ತಿದ್ದಂತೆ, ಈವರೆಗೆ ಸಚಿವರಿಗೆ ಹಂಚಿಕೆಯಾಗಿದ್ದ ಅಧಿಕೃತ ಸರ್ಕಾರಿ ವಾಹನಗಳನ್ನು ಸರ್ಕಾರ ತಕ್ಷಣವೇ ವಾಪಸ್ ಪಡೆದಿದೆ. ಇದರಿಂದಾಗಿ ಹಾಲಿ ಸಚಿವರಾಗಿದ್ದ ನಾಯಕರುಗಳು ಇದೀಗ ಮಾಜಿಗಳಾಗಿದ್ದು, ತಮ್ಮ ಅಧಿಕೃತ ಸರ್ಕಾರಿ ಕಾರುಗಳನ್ನು ಬಿಟ್ಟು ಖಾಸಗಿ ವಾಹನಗಳಿಗೆ ಶಿಫ್ಟ್ ಆಗುತ್ತಿದ್ದಾರೆ. ಬೆಂಗಳೂರಿನ ಸಚಿವರ ನಿವಾಸಗಳ ಮುಂದೆ ನಿಲ್ಲುತ್ತಿದ್ದ ಸರ್ಕಾರಿ ವಾಹನಗಳು ಇದೀಗ ಸಿಬ್ಬಂದಿ ಹಾಗೂ ಸಚಿವಾಲಯದ ವಶಕ್ಕೆ ಮರಳಿವೆ. ಮತ್ತೊಂದೆಡೆ, ಸಚಿವರಿಗೆ ನೀಡಲಾಗಿದ್ದ ಸರ್ಕಾರಿ ನಿವಾಸಗಳ ಮುಂದಿದ್ದ ನಾಮಫಲಕಗಳನ್ನು ತೆರವುಗೊಳಿಸುವ ಕಾರ್ಯವೂ ಸಾಗುತ್ತಿದೆ. ಸಚಿವರಾಗಿದ್ದ ನಾಯಕರುಗಳು ತಾವಾಗಿಯೇ ತಮ್ಮ ಹೆಸರಿನ ಬೋರ್ಡ್‌ಗಳನ್ನು ತೆಗೆಸುತ್ತಿದ್ದಾರೆ. ಪ್ರಮುಖವಾಗಿ, ಮಾಜಿ…

Read More

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಭಾರಿ ಚಟುವಟಿಕೆಗಳು ಗರಿಗೆದರಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ನಿನ್ನೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಇಂದು ರಾಜ್ಯಪಾಲರು ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸುವ ಮೂಲಕ ಸಾಂವಿಧಾನಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿ ಸದ್ಯಕ್ಕೆ ಮುಕ್ತಾಯಗೊಂಡಂತಾಗಿದೆ. ರಾತ್ರಿ ಬೆಳಗಾಗುವುದರೊಳಗೆ ದೆಹಲಿ ತಲುಪಿದ ನಾಯಕ: ನಿನ್ನೆ ರಾಜೀನಾಮೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಅವರು ತಡರಾತ್ರಿ ರಾಷ್ಟ್ರ ರಾಜಧಾನಿ ನವದೆಹಲಿಗೆ ಪ್ರಯಾಣ ಬೆಳೆಸಿದರು. ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಲುವಾಗಿ ಅವರು ತುರ್ತು ದೆಹಲಿ ಪ್ರವಾಸ ಕೈಗೊಂಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಇಂದು ಬೆಳಗ್ಗೆ ನವದೆಹಲಿ ತಲುಪಿದ ಅವರು ನೇರವಾಗಿ ಕಾಂಗ್ರೆಸ್‌ನ ಹಿರಿಯ ನಾಯಕರ ಭೇಟಿಗೆ ಮುಂದಾದರು. 10 ಜನಪಥ್ ನಿವಾಸದಲ್ಲಿ ಮಹತ್ವದ ಭೇಟಿ: ದೆಹಲಿಗೆ ಆಗಮಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಎಐಸಿಸಿ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಅಧಿಕೃತ ನಿವಾಸವಾದ ’10 ಜನಪಥ್’ ರಸ್ತೆಗೆ ಭೇಟಿ ನೀಡಿದರು. ಸೋನಿಯಾ ಗಾಂಧಿ ಅವರನ್ನು…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದಾರೆ. ಈ ದಿಢೀರ್ ರಾಜಕೀಯ ವಿದ್ಯಮಾನದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಅಲರ್ಟ್ ಆಗಿದ್ದು, ಮುಂದಿನ ಸರ್ಕಾರ ರಚನೆ ಮತ್ತು ನೂತನ ನಾಯಕನ ಆಯ್ಕೆಗೆ ಚುರುಕಿನ ಗತಿ ನೀಡಿದೆ. ಸಿದ್ದರಾಮಯ್ಯ ಅವರ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನವನ್ನು ಭರ್ತಿ ಮಾಡಲು ನಾಳೆ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕಾಂಗ ಸಭೆಯನ್ನು (CLP Meeting) ನಿಗದಿಪಡಿಸಲಾಗಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಈ ಸಭೆಯಲ್ಲಿ ಕಾಂಗ್ರೆಸ್‌ನ ನೂತನ ಶಾಸಕಾಂಗ ಪಕ್ಷದ ನಾಯಕನನ್ನು ಅಧಿಕೃತವಾಗಿ ಆಯ್ಕೆ ಮಾಡುವ ಪ್ರಕ್ರಿಯೆ ಜರುಗಲಿದೆ. ಈ ಸಭೆಯು ರಾಜ್ಯದ ಮುಂದಿನ ರಾಜಕೀಯ ದಿಕ್ಸೂಚಿಯನ್ನು ನಿರ್ಧರಿಸುವುದರಿಂದ ತೀವ್ರ ಪ್ರಾಮುಖ್ಯತೆ ಪಡೆದುಕೊಂಡಿದೆ. ರಾಜ್ಯ ರಾಜಕಾರಣದ ಈ ಮಹತ್ವದ ಸಭೆಗೆ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಿರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಕಚೇರಿಯಿಂದಲೇ ರಾಜ್ಯದ ಎಲ್ಲಾ ಕಾಂಗ್ರೆಸ್ ಶಾಸಕರಿಗೂ…

Read More

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಪ್ರಮುಖ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಇಂದು ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜ್ಯಪಾಲರ ಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಅಧಿಕೃತವಾಗಿ ಘೋಷಣೆ ಮಾಡಿದರು. ರಾಜೀನಾಮೆ ಸಲ್ಲಿಕೆಯ ಸಂದರ್ಭದ ಕುರಿತು ಮಾಹಿತಿ ನೀಡಿದ ಸಿದ್ದರಾಮಯ್ಯ ಅವರು, “ರಾಜ್ಯಪಾಲರು ಸದ್ಯ ಬೆಂಗಳೂರಿನಲ್ಲಿ ಇಲ್ಲ. ಇಂದು ರಾತ್ರಿ ಅವರು ನಗರಕ್ಕೆ ವಾಪಸ್ ಆಗಲಿದ್ದಾರೆ ಎಂದು ರಾಜಭವನದ ಕಚೇರಿ ಸಿಬ್ಬಂದಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನನ್ನ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಯವರಿಗೆ ಹಸ್ತಾಂತರಿಸಿ ಬಂದಿದ್ದೇನೆ” ಎಂದು ಸ್ಪಷ್ಟಪಡಿಸಿದರು. ತಮ್ಮ ರಾಜೀನಾಮೆಯ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಸೂಚನೆಗೆ ಗೌರವ ನೀಡಿ ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು. “ನಾನು ಮೊದಲಿನಿಂದಲೂ ಅನೇಕ ಬಾರಿ ಹೇಳುತ್ತಲೇ ಬಂದಿದ್ದೆ. ಹೈಕಮಾಂಡ್ ನಾಯಕರು ಯಾವಾಗ ಸೂಚಿಸುತ್ತಾರೋ, ಆ ಕ್ಷಣದಲ್ಲೇ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ದಿಢೀರ್ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜಭವನಕ್ಕೆ ತೆರಳಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಆದರೆ, ತಾಂತ್ರಿಕ ಕಾರಣಗಳಿಂದಾಗಿ ಅವರ ರಾಜೀನಾಮೆ ಸಲ್ಲಿಕೆ ಪ್ರಕ್ರಿಯೆ ತಾತ್ಕಾಲಿಕವಾಗಿ ವಿಫಲಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದಾಗಿ ರಾಜಭವನಕ್ಕೆ ಆಗಮಿಸಿ, ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಯವರಿಗೆ ಹಸ್ತಾಂತರಿಸಲು ಯತ್ನಿಸಿದರು. ಆದರೆ ರಾಜ್ಯಪಾಲರ ಕಾರ್ಯದರ್ಶಿಯಾದ ಪ್ರಭು ಶಂಕರ್ ಅವರು ಈ ರಾಜೀನಾಮೆ ಪತ್ರವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಯಾವುದೇ ಕಾರಣಕ್ಕೂ ಪತ್ರವನ್ನು ಕೈಗೆತ್ತಿಕೊಳ್ಳಲು ಅವರು ಸಮ್ಮತಿಸಲಿಲ್ಲ ಎನ್ನಲಾಗಿದೆ. ರಾಜೀನಾಮೆ ಪತ್ರವನ್ನು ನಿರಾಕರಿಸಿದ್ದಕ್ಕೆ ಸ್ಪಷ್ಟನೆ ನೀಡಿರುವ ಕಾರ್ಯದರ್ಶಿ ಪ್ರಭು ಶಂಕರ್ ಅವರು, ಪ್ರಸ್ತುತ ರಾಜ್ಯಪಾಲರು ರಾಜಭವನದಲ್ಲಿ ಲಭ್ಯವಿಲ್ಲದಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು ತಿಳಿಸಿದ್ದಾರೆ. ಸಾಂವಿಧಾನಿಕ ನಿಯಮಗಳ ಪ್ರಕಾರ ಮುಖ್ಯಮಂತ್ರಿಯವರ ರಾಜೀನಾಮೆಯನ್ನು ರಾಜ್ಯಪಾಲರೇ ಖುದ್ದಾಗಿ ಸ್ವೀಕರಿಸಬೇಕಾಗಿರುವುದರಿಂದ, ಅವರ ಅನುಪಸ್ಥಿತಿಯಲ್ಲಿ ತಾವು ಇದನ್ನು ಅಂಗೀಕರಿಸಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ರಾಜ್ಯಪಾಲರು ರಾಜಭವನಕ್ಕೆ ಮರಳಿದ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಂದು ಅತ್ಯಂತ ಪ್ರಮುಖ ಹಾಗೂ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಇಂದು ಮಧ್ಯಾಹ್ನ ಬೆಂಗಳೂರಿನ ರಾಜಭವನಕ್ಕೆ ಆಗಮಿಸಿದ ಅವರು, ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸುವ ಮೂಲಕ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದಾರೆ. ರಾಜೀನಾಮೆ ನೀಡುವ ಸಂದರ್ಭದಲ್ಲಿ ರಾಜ್ಯಪಾಲರು ವೈಯಕ್ತಿಕ ಕಾರಣಗಳಿಗಾಗಿ ಮುಂಬೈಗೆ ತೆರಳಿದ್ದರಿಂದ, ಸಿದ್ದರಾಮಯ್ಯ ಅವರು ರಾಜ್ಯಪಾಲರ ಕಾರ್ಯದರ್ಶಿಗೆ ತಮ್ಮ ಅಧಿಕೃತ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ಈ ಮೂಲಕ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದ ಸಿಎಂ ಬದಲಾವಣೆ ಹಾಗೂ ರಾಜೀನಾಮೆ ವದಂತಿಗಳಿಗೆ ಇದೀಗ ಅಧಿಕೃತ ತೆರೆ ಬಿದ್ದಂತಾಗಿದೆ. ಕಾವೇರಿ ನಿವಾಸದಲ್ಲಿ ‘ಬ್ರೇಕ್ ಫಾಸ್ಟ್ ಮೀಟಿಂಗ್’ ರಾಜೀನಾಮೆ ನೀಡುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗಾಗಿ ವಿಶೇಷ ‘ಬ್ರೇಕ್ ಫಾಸ್ಟ್ ಮೀಟಿಂಗ್’ (ಉಪಾಹಾರ ಕೂಟ) ಆಯೋಜಿಸಿದ್ದರು. ಸರ್ಕಾರದ ಪ್ರಮುಖ ಸಚಿವರು ಭಾಗವಹಿಸಿದ್ದ ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಾವು…

Read More

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಂದು ಬಹುದೊಡ್ಡ ಬೆಳವಣಿಗೆ ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ರಾಜೀವ್ ನಾಮಿ ನೀಡಲಿದ್ದಾರೆ ಕೆಲವೇ ಕ್ಷಣಗಳಲ್ಲಿ ರಾಜಭವನಕ್ಕೆ ತೆರಳಿ, ರಾಜೀನಾಮೆ ನೀಡಲಿದ್ದಾರೆ. ಈಗಾಗಲೇ ಹಿಂದಿನ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ರಾಜಿನಾಮೆ ನೀಡುತ್ತೇನೆಂದು ಘೋಷಿಸಿದ್ದು, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಸಹ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇದೀಗ ಸಿದ್ದರಾಮಯ್ಯ ಅವರ ರಾಜಕೀಯದಲ್ಲಿ ನಡೆದು ಬಂದು ಹಾದಿಯ ಕುರಿತು ತಿಳಿಯೋಣ. ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಹೆಜ್ಜೆ ಗುರುತು! ಸಿಎಂ ಸಿದ್ದರಾಮಯ್ಯ ಅವರ ಸುಮಾರು 5 ದಶಕಗಳ ಕಾಲ ರಾಜಕೀಯ ಪಯಣ, 1978 ರಲ್ಲಿ ಮೈಸೂರು ತಾಲೂಕು ಬೋರ್ಡ್ ಸದಸ್ಯರ ಮೂಲಕ ರಾಜಕೀಯಕ್ಕೆ ಎಂಟ್ರಿ ಆಗುತ್ತಾರೆ, 1983 ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ವಿಧಾನಸಭೆಗೆ ಎಂಟ್ರಿ ಆಗುತ್ತಾರೆ. ಚಾಮುಂಡೇಶ್ವರಿ ಕ್ಷೇತ್ರದಿಂದ 1983 ರಲ್ಲಿ ಮೊದಲ ಗೆಲುವು ಸಾಧಿಸುತ್ತಾರೆ. ಲೋಕದಳ ಪಕ್ಷದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗುತ್ತಾರೆ. ಪ್ರೊ. ನಂಜುಂಡಸ್ವಾಮಿ ಪ್ರಭಾವದಿಂದ…

Read More