Author: kannadanewsnow05

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಡ್ರಾಪ್ ನೀಡುವ ನೆಪದಲ್ಲಿ ಕಾಮುಕನಬ್ಬ ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ತಾನು ಮಾಡಿದ್ದು ಪಾಪದ ಕೆಲಸ ಎಂದು ಪಶ್ಚಾಪತಾಪದಿಂದ ಸ್ನೇಹಿತನಿಗೆ ಕರೆ ಮಾಡಿ ವಿಷಯ ತಿಳಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಘಟನೆ ಹಿನ್ನೆಲೆ? ಬಾಗೇಪಲ್ಲಿಯ ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಂತ್ರಸ್ತೆ, ಬಾಗೇಪಲ್ಲಿಯಿಂದ ವಾಪಸ್ಸು ಚಿಕ್ಕಬಳ್ಳಾಪುರ ತಾಲೂಕಿನ ಸ್ವಗ್ರಾಮಕ್ಕೆ ತೆರಳಲು ಪೆರೇಸಂದ್ರ ಕ್ರಾಸ್ ಬಳಿಯ ಬಸ್‍ನಿಲ್ದಾಣದಲ್ಲಿ ನಿಂತಿದ್ದಳು. ಆ ವೇಳೆ ಅಲ್ಲಿಗೆ ಬಂದ ಬೈಕ್ ಸವಾರ ಗಣೇಶ್​​ ಅಪ್ರಾಪ್ತ ವಿದ್ಯಾರ್ಥಿನಿಗೆ ಡ್ರಾಪ್ ಕೊಡುವ ನೆಪದಲ್ಲಿ ಆಕೆಯನ್ನು ಬೈಕ್ ಮೇಲೆ ಹತ್ತಿಸಿಕೊಂಡಿದ್ದಾನೆ. ನಂತರ ನಿರ್ಜನ ಪ್ರದೇಶಕ್ಕೆ ಆಕೆಯನ್ನು ಕರೆದೊಯ್ದು ಅತ್ಯಾಚಾರವೆಸಗಿದ್ದಾನಂತೆ. ನಂತರ ಭಯ ಭೀತನಾದ ಆರೋಪಿ ತನ್ನ ಸ್ನೇಹಿತನಿಗೆ ಕರೆ ಮಾಡಿ ಮಾಡಿದ ಪಾಪಕೃತ್ಯವನ್ನು ಹೇಳಿಕೊಂಡಿದ್ದಾನೆ. ಗಣೇಶ್​​ ಸ್ನೇಹಿತ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಆ ಬೆನ್ನಲ್ಲೇ ಪೊಲೀಸರು ನಿರ್ಜನ ಪ್ರದೇಶಕ್ಕೆ ಬಂದು ಹುಡುಕಾಡಿದ್ದಾರೆ. ಆರೋಪಿಯ ಮೊಬೈಲ್​​ ಟ್ರೇಸ್​​…

Read More

ಮಂಡ್ಯ : ಬಿಗ್ ಬಾಸ್ ಕನ್ನಡ 12 ಈಗಾಗಲೇ ಫಿನಾಲೆ ಹಂತಕ್ಕೆ ತಲುಪಿದ್ದು ಬರುವ ಭಾನುವಾರದಂದು ಬಿಗ್ ಬಾಸ್ ವಿನ್ನರ್ ಯಾರು ಎಂದು ಘೋಷಣೆ ಆಗಲಿದೆ. ಈಗಾಗಲೇ ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ, ಗಿಲ್ಲಿ, ರಘು, ದೃವಂತ್, ಕಾವ್ಯ ರಕ್ಷಿತಾ, ಹಾಗು ಧನುಷ್ ಉಳಿದುಕೊಂಡಿದ್ದು ಬರುವ ಭಾನುವಾರ ಬಿಗ್ ಬಾಸ್ ವಿನ್ನರ್ ಯಾರು ಎಂದು ನಟ ಕಿಚ್ಚ ಸುದೀಪ್ ಘೋಷಣೆ ಮಾಡಲಿದ್ದಾರೆ. ಈಗಾಗಲೇ ಎಲ್ಲರ ಅಭಿಮಾನಿಗಳು ಸಹ ತಮ್ಮ ಮೆಚ್ಚಿನ ಸ್ಪರ್ಧಿಯ ಪರವಾಗಿ ಓಟು ಹಾಕಲು ಆರಂಭಿಸಿದ್ದು, ಕೆಲವರಂತೂ ಅಭಿಯಾನವನ್ನೇ ಮಾಡುತ್ತಿದ್ದಾರೆ. ಇದೀಗ ಗಿಲ್ಲಿ ಪರವಾಗಿ ಅವರ ಕ್ಷೇತ್ರದ ಶಾಸಕರೇ ಮತ ಕೇಳಿದ್ದಾರೆ. ಗಿಲ್ಲಿಗೆ ಓಟು ಹಾಕಿರೆಂದು ಮಂಡ್ಯ ಜಿಲ್ಲೆ ಮಳವಳ್ಳಿ ಕ್ಷೇತ್ರದ ಶಾಸಕ ನರೇಂದ್ರ ಸ್ವಾಮಿ ಅವರು ಮತ ಯಾಚನೆ ಮಾಡಿದ್ದಾರೆ. ವಿಡಿಯೋ ಮೂಲಕ ಅವರು ಗಿಲ್ಲಿಗೆ ಮತ ಹಾಕಿ ಎಂದು ಕೇಳಿಕೊಂಡಿದ್ದು, ಈಗಾಗಲೇ ಬಿಗ್ ಬಾಸ್ ಅಂತಿಮ ಘಟ್ಟಕ್ಕೆ ತಲುಪಿದ್ದು ಮಳವಳ್ಳಿಯ ಹೆಮ್ಮೆಯ ಗಿಲ್ಲಿ ನಟ ಅವರು ಸಹ…

Read More

ಚಿಕ್ಕಮಗಳೂರು : ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಶಬರಿಮಲೆಗೆ ತೆರಳಿರುವ ಅಯ್ಯಪ್ಪ ಮಾಲಾಧಾರಿಗಳು ಕೇರಳ ಸರ್ಕಾರ ಹಾಗೂ ಅಲ್ಲಿನ ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಈ ವ್ಯವಸ್ಥೆಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಲಾಧಾರಿಗಳು ರಸ್ತೆ ಮಧ್ಯೆಯೇ ಮಲಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇರಳ ಸರ್ಕಾರ ಹಾಗೂ ಪೊಲೀಸರ ನಡೆಗೆ ಮಾಲಾಧಾರಿಗಳು ಆಕ್ರೋಶ ಹೊರಹಾಕಿದ್ದಾರೆ. ‘ಅಯ್ಯಪ್ಪಸ್ವಾಮಿ ಕರ್ನಾಟಕದಲ್ಲೇ ನೆಲೆಸಬೇಕಿತ್ತು, ಇಲ್ಲಿಗೆ ಏಕೆ ಬಂದ್ರಿ’ ಎಂದು ಭಾವುಕದ ಮಾತುಗಳನ್ನಾಡಿದ್ದಾರೆ. ಕರ್ನಾಟಕದ ವಾಹನಗಳನ್ನು ಎರಿಮಲೈನಲ್ಲೇ ತಡೆಹಿಡಿಯುತ್ತಿರುವ ಕೇರಳ ಪೊಲೀಸರು ಅಲ್ಲಿಂದ ಮುಂದಕ್ಕೆ ಪ್ರಯಾಣಿಸಲು ಕೇರಳದ ಖಾಸಗಿ ಮತ್ತು ಸರ್ಕಾರಿ ಬಸ್ಸುಗಳಿಗೆ ಮಾತ್ರ ಅವಕಾಶ ನೀಡುತ್ತಿದ್ದಾರೆ ಎಂದು ಮಾಲಾಧಾರಿಗಳು ಆರೋಪಿಸಿದ್ದಾರೆ. ಎರಿಮಲೈಯಿಂದ ಶಬರಿಮಲೆಗೆ ಸುಮಾರು 100 ಕಿ.ಮೀ.‌ ದೂರವಿದ್ದು, ಭಕ್ತರು ಅನಿವಾರ್ಯವಾಗಿ ತಮ್ಮ ವಾಹನಗಳನ್ನು ಬಿಟ್ಟು ಕೇರಳದ ವಾಹನಗಳನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕದ ವಾಹನಗಳಿಗೆ ಸೂಕ್ತ ಸ್ಪಂದನೆ ನೀಡದ ಕೇರಳ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಾಡಿಗೆ ವಾಹನ ಮಾಡಿಕೊಂಡು ಹೋಗಿರುವ ತರೀಕೆರೆಯ ಭಕ್ತರು ಈಗ ಅತ್ತ ಹೋಗಲಾಗದೆ, ಇತ್ತ…

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆ ತಿರುವಿನಲ್ಲಿ ಸರ್ಕಾರಿ ಬಸ್ ಗೆ ಬೈಕಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೂರ್ಣಕೆರೆ ಬಳಿ ತಾಳಬೆಟ್ಟದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ರಾಮೇಗೌಡನಹಳ್ಳಿಯ ಶಿವಪ್ಪ ಮತ್ತು ಸತೀಶ್ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಗಾಗಿ ಇಬ್ಬರ ಶವಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಪಘಾತದ ಕುರಿತು ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ರಾಜ್ಯ ರಾಜಕಾರಣದಲ್ಲಿ ಇದೀಗ ಮತ್ತೊಂದು ಬೆಳವಣಿಗೆ ಆಗಿದ್ದು, ಇಂದು ರಾಹುಲ್ ಗಾಂಧಿ, ಮೈಸೂರಿನ ಮೂಲಕ ಕೇರಳಕ್ಕೆ ತೆರಳಿದ್ದರು. ಇದೀಗ ಕೇರಳದಿಂದ ವಾಪಸ್ ಆದಾಗ ಮೈಸೂರಿನ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿದ್ದು ತೀವ್ರ ಕುತೂಹಲ ಮೂಡಿಸಿದೆ. ಹೌದು ಇಂದು ಮೈಸೂರಿನ ಏರ್ಪೋರ್ಟ್ ನಲ್ಲಿ ರಾಹುಲ್ ಗಾಂಧಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕೆಲವು ಕಾಲ ಚರ್ಚೆ ಮಾಡಿದ್ದಾರೆ. ಹಲವು ದಿನಗಳ ಬಳಿಕ ರಾಹುಲ್ ಗಾಂಧಿ ಜೊತೆಗೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಸಿದ್ದರಾಮಯ್ಯ ಜೊತೆಗೂ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ “ನಥಿಂಗ್ ಟೂ ವರಿ ಡಿಕೆ ಯು ವಿಲ್ ಕಾಲ್ ಟು ಡೆಲ್ಲಿ ಸೂನ್” ಎಂದು ಸಂದೇಶ ನೀಡಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಅವರ ಜೊತೆ ಯಾವ ವಿಚಾರವಾಗಿ ಚರ್ಚೆ ಮಾಡಿದ್ದಾರೆ ಎನ್ನುವುದು ತೀವ್ರ…

Read More

ಮೈಸೂರು : ರಾಜ್ಯ ರಾಜಕಾರಣದಲ್ಲಿ ಇದೀಗ ಮತ್ತೊಂದು ಬೆಳವಣಿಗೆ ಆಗಿದ್ದು, ಇಂದು ರಾಹುಲ್ ಗಾಂಧಿ, ಮೈಸೂರಿನ ಮೂಲಕ ಕೇರಳಕ್ಕೆ ತೆರಳಿದ್ದರು. ಇದೀಗ ಕೇರಳದಿಂದ ವಾಪಸ್ ಆದಾಗ ಮೈಸೂರಿನ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿದ್ದು ತೀವ್ರ ಕುತೂಹಲ ಮೂಡಿಸಿದೆ. ಹೌದು ಇಂದು ಮೈಸೂರಿನ ಏರ್ಪೋರ್ಟ್ ನಲ್ಲಿ ರಾಹುಲ್ ಗಾಂಧಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕೆಲವು ಕಾಲ ಚರ್ಚೆ ಮಾಡಿದ್ದಾರೆ. ಹಲವು ದಿನಗಳ ಬಳಿಕ ರಾಹುಲ್ ಗಾಂಧಿ ಜೊತೆಗೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಸಿದ್ದರಾಮಯ್ಯ ಜೊತೆಗೂ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಅವರ ಜೊತೆ ಯಾವ ವಿಚಾರವಾಗಿ ಚರ್ಚೆ ಮಾಡಿದ್ದಾರೆ ಎನ್ನುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Read More

ಬೆಂಗಳೂರು : ಬೆಂಗಳೂರಿನ ಜನತೆಗೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇದೀಗ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ದಿನದ ಪಾಸ್ 3 ದಿನದ ಪಾಸ್ ಮತ್ತು 5 ದಿನದ ಪಾಸ್ ಗಳು ಪರಿಚಯಿಸಿದೆ. ಅನಿಯಮಿತ ಪ್ರಯಾಣ ಪಾಸ್ ಪರಿಚಯಿಸಿದ ‘BMRCL’ ಜನವರಿ 15 ರಿಂದ ಮೆಟ್ರೋದಲ್ಲಿ ಕ್ಯೂ ಆರ್ ಪಪಾಸ್ ಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಹೌದು ಡಿಜಿಟಲ್ ಟಿಕೆಟ್ ವ್ಯವಸ್ಥೆ ಉತ್ತೇಜಿಸಲು ಬಿಎಮ್ಆರ್ಸಿಎಲ್ ಈ ಒಂದು ಕ್ರಮ ಕೈಗೊಂಡಿದೆ. ಜನವರಿ 15 ರಿಂದ ಮೆಟ್ರೋದಲ್ಲಿ QR ಪಾಸ್ ಗಳ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಮೊಬೈಲಲ್ಲಿ ಕ್ಯೂಆರ್ ಕೋಡ್ ಬಳಸಿ ಪಾಸ್ ಪಡೆಯಬಹುದು. ಪಾಸ್ ಪಡೆಯಲು ಯಾವುದೇ ರೀತಿಯ ಭದ್ರತಾ ಠೇವಣಿ ಇರುವುದಿಲ್ಲ. ಒಂದು ದಿನದ ಪಾಸಿಗೆ ರೂ.250 ಮೂರು ದಿನಗಳ ಪಾಸಿಗೆ 550 ರೂಪಾಯಿ ಐದು ದಿನಗಳ ಪಾಸಿಗೆ 850 ರೂಪಾಯಿಯನ್ನು ಬಿಎಂಆರ್‌ಸಿಎಲ್ ದರ ನಿಗದಿಗೊಳಿಸಿದೆ. ಈ ಕುರಿತು ಬಿಎಮ್ಆರ್‌ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ. https://twitter.com/OfficialBMRCL/status/2011036997536923673?t=WknPyWxEiVR8lxaOVItT4Q&s=19

Read More

ಬೆಂಗಳೂರು : ನಾಳೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ಭವಿಷ್ಯ ನಿರ್ಧಾರ ಆಗಲಿದೆ. ಕಾಂಗ್ರೆಸ್ ಮಾಜಿ ಸಚಿವ ಮತ್ತು ಶಾಸಕರಾಗಿರುವ ನಾಗೇಂದ್ರಗೆ ಬಂಧನದ ಭೀತಿ ಎದುರಾಗಿದ್ದು, ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆ ಬಿ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು . ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ನಾಳೆಗೆ ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ ಕೂಡ ಮೇಲಿಂದ ಮೇಲೆ ಜಾರಣೆ ನಡೆಸುತ್ತಿದೆ. ಹಾಗಾಗಿ ಬಿ ನಾಗೇಂದ್ರ ಕೋರ್ಟ್ ಮೊರೆ ಹೋಗಿದ್ದಾರೆ ಈಗಾಗಲೇ ಬಹಳ ದಿನಗಳ ಕಾಲ ಜೈಲಿನಲ್ಲಿ ಇದ್ದು ಬಂದಿದ್ದಾರೆ. ಮತ್ತೊಮ್ಮೆ ಬಂಧನದ ಭೀತಿ ಹಿನ್ನೆಲೆ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದು, ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ ಆದೇಶ ಕಾಯ್ದಿರಿಸಿದೆ.

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧದ ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ಸ್ನೇಹ ಮಯಿಕೃಷ್ಣ ಸಲ್ಲಿಸಿದ ಖಾಸಗಿ ದೂರು ಸಂಬಂಧ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ಕೋರ್ಟ್ ಬಿ ರಿಪೋರ್ಟ್ ಸಂಬಂಧ ಜನವರಿ 22ಕ್ಕೆ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿತು. ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿಯ ವಿರುದ್ಧ ಯಾವುದೇ ಸಾಕ್ಷಿಗಳು ಕಂಡುಬಂದಿಲ್ಲ. 70 ಸಾಕ್ಷಿಗಳಲ್ಲಿ ಯಾರು ಪ್ರಭಾವ ಬೀರಿರುವುದಾಗಿ ಹೇಳಿಲ್ಲ ಅಂಶಗಳನ್ನು ಪರಿಗಣಿಸಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಬಿ ರಿಪೋರ್ಟ್ ತಿರಸ್ಕರಿಸಬಹುದಾದ ಲೋಪಗಳು ಇಲ್ಲ ಎಂದು ಲೋಕಾಯುಕ್ತ ಎಸ್ಪಿಪಿ ವೆಂಕಟೇಶ್ ಅರಬಟ್ಟಿ ವಾದ ಮಂಡಿಸಿದರು. ಈ ವೇಳೆ ಜಡ್ಜ್ ಸಂತೋಷ ಗಜಾನನ ಭಟ್ ಆದೇಶ ಕಾಯದರಿಸಿದರು.

Read More

ಬೆಂಗಳೂರು : ಬೆಂಗಳೂರಿನಲ್ಲಿ ಶಂಕಿತ ಬಾಂಗ್ಲಾ ವಲಸಿಗರ ಪತ್ತೆಕಾರ್ಯಚರಣೆ ಮುಂದುವರಿದಿದ್ದು, ಆನೇಕಲ್ ಉಪವಿಭಾಗ ಪೊಲೀಸರಿಂದ ಇದೀಗ ಮತ್ತೊಂದು ಕಾರ್ಯಚರಣೆ ನಡೆಸಲಾಗಿದೆ. ಶಂಕಿತ ಅಕ್ರಮ ಬಾಂಗ್ಲಾ ವಲಸಿಗರು ಇದ್ದಂತಹ ಶೆಡ್ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಆನೇಕಲ್ ಉಪ ವಿಭಾಗದಲ್ಲಿ 37 ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಒಂದೇ ವಾರದಲ್ಲಿ ಪೊಲೀಸರು ಹಲವಡೆ ಸರಣಿ ದಾಳಿ ನಡೆಸಿದ್ದಾರೆ. ಬನ್ನೇರುಘಟ್ಟ ವ್ಯಾಪ್ತಿಯಲ್ಲಿ 6 ಮಕ್ಕಳು ಸೇರಿ 20 ಜನ ಪಟ್ಟೆಯಾಗಿದ್ದರೆ. ಅತ್ತಿಬೆಲೆ ಠಾಣ ವ್ಯಾಪ್ತಿಯಲ್ಲಿ ಇಬ್ಬರು ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಆನೇಕಲ್ ಠಾಣ ವ್ಯಾಪ್ತಿಯಲ್ಲಿ 15 ಬಾಂಗ್ಲಾ ವಲಸಿಗರನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ನಕಲಿ ಪಾಸ್ಪೋರ್ಟ್ ಮತ್ತು ಆಧಾರ್ ಕಾರ್ಡ್ ಸೃಷ್ಟಿ ಮಾಡಿ ಬಂದಿರುವ ಆರೋಪ ಕೇಳಿ ಬಂದಿದೆ. ಸ್ಕ್ರಾಪ್ ಗೋದಮಗಳ ಶಡ್ ಗಳಲ್ಲಿ ಬಾಂಗ್ಲಾ ವಲಸಿಗರು ವಾಸವಿದ್ದರು. ಅಲ್ಲದೆ ಕೆಲವು ವಲಸಿಗರು ಅಪಾರ್ಟ್ಮೆಂಟ್ಗಳಲ್ಲೂ ಕೆಲಸ ಮಾಡುತ್ತಿದ್ದಾರೆ. ರಾತ್ರಿಯ ವೇಳೆ ಚಿಂದಿ ಆಯೋಗ ಕೆಲಸ ಮಾಡುತ್ತಿದ್ದ ಶಂಕಿತ ವಲಸಿಗರು. ಇದೀಗ ವಿದೇಶಿಯರ ನೋಂದಣಿ ಕಚೇರಿಗೆ ಪೊಲೀಸರು ಹಾಜರುಪಡಿಸಿದ್ದಾರೆ.

Read More