Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಶಿವಮೊಗ್ಗ: ಆಟವಾಡುತ್ತಾ, ಕಲಿಯುತ್ತಾ ಹೆತ್ತವರ ಕಣ್ಣೆದುರೇ ಹಸನ್ಮುಖಿಯಾಗಿ ಇರಬೇಕಾಗಿದ್ದ ಆರು ವರ್ಷದ ಪುಟಾಣಿ ಬಾಲಕನೊಬ್ಬ, ಶಾಲೆ ಮುಗಿಯುವ ಹೊತ್ತಿಗೆ ಶಾಲಾ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಅತ್ಯಂತ ಕರುಣಾಜನಕ ಘಟನೆಯೊಂದು ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದೆ. ಕೇವಲ ಒಂದನೇ ತರಗತಿಯಲ್ಲಿ ಓದುತ್ತಿದ್ದ ಈ ಪುಟ್ಟ ಕಂದಮ್ಮನಿಗೆ ಹೃದಯಾಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ಈ ಅನಿರೀಕ್ಷಿತ ದುರಂತ ಇಡೀ ಗ್ರಾಮವನ್ನೇ ಕಣ್ಣೀರಿನ ಕಡಲಲ್ಲಿ ಮುಳುಗಿಸಿದೆ. ಆವರಣದಲ್ಲೇ ಕುಸಿದು ಬಿದ್ದ ಪುಟಾಣಿ ತ್ರಿಲೋಕ್ ಜಿಲ್ಲೆಯ ಕರೂರು ಹೋಬಳಿಯ ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರ್ದೈವಿ ಘಟನೆ ನಡೆದಿದೆ. ಕೊಡನವಳ್ಳಿ ಗ್ರಾಮದ ನಿವಾಸಿಗಳಾದ ಗೌತಮ್ ಜೈನ್ ಮತ್ತು ಶಿಲ್ಪಾ ದಂಪತಿಯ ಪ್ರೀತಿಯ ಪುತ್ರ ತ್ರಿಲೋಕ್ ಜೈನ್ (6) ಮೃತಪಟ್ಟ ದುರ್ದೈವಿ ಬಾಲಕನಾಗಿದ್ದಾನೆ. ಶನಿವಾರ ಎಂದಿನಂತೆ ಉತ್ಸಾಹದಿಂದಲೇ ಶಾಲೆಗೆ ಬಂದಿದ್ದ ತ್ರಿಲೋಕ್, ದಿನವಿಡೀ ಸಹಪಾಠಿಗಳೊಂದಿಗೆ ಸಕ್ರಿಯನಾಗಿದ್ದನು. ಆದರೆ ಮಧ್ಯಾಹ್ನ ಶಾಲಾ ಅವಧಿ ಮುಗಿಯುವ ಕೆಲವೇ ನಿಮಿಷಗಳ ಮೊದಲು, ಶಾಲಾ ಆವರಣದಲ್ಲಿ ಗೆಳೆಯರೊಂದಿಗೆ ಇರುವಾಗ ಏಕಾಏಕಿ…

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಮ್ಮೆ ಮಹಿಳಾ ಸುರಕ್ಷತೆಯ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಸಹೋದರಿಯ ಮನೆಗೆ ಹೋಗಲು ಓಲಾ ಕ್ಯಾಬ್ ಬುಕ್ ಮಾಡಿದ್ದ 27 ವರ್ಷದ ಯುವತಿಯನ್ನು ಚಾಲಕನೊಬ್ಬ ಟ್ರಾಫಿಕ್ ಜಾಮ್ ನೆಪದಲ್ಲಿ ಮಧ್ಯರಾತ್ರಿ ಬೇರೆ ಬೇರೆ ಕಡೆ ಸುತ್ತಾಡಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಓಲಾ ಕ್ಯಾಬ್ ಚಾಲಕನ ವಿರುದ್ಧ ಎಫ್‌ಐಆ‌ರ್ (FIR) ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಚಾಲಕನ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ಟ್ರಾಫಿಕ್ ನೆಪದಲ್ಲಿ ಹಾದಿ ತಪ್ಪಿಸಿದ ಚಾಲಕ ಪೊಲೀಸ್ ಮೂಲಗಳ ಪ್ರಕಾರ, ಜೂನ್ 9ರ ಮಂಗಳವಾರ ರಾತ್ರಿ ಸುಮಾರು 12.37ರ ಸುಮಾರಿಗೆ ಎ. ನಾರಾಯಣಪುರ ನಿವಾಸಿಯಾದ ಯುವತಿಯು ಆದೂರಿನಲ್ಲಿರುವ ತನ್ನ ಸಹೋದರಿಯ ಮನೆಗೆ ಹೋಗಲು ಓಲಾ ಕ್ಯಾಬ್ ಬುಕ್ ಮಾಡಿದ್ದಳು. ಆದರೆ, ಕಾರು ಹತ್ತಿದ ಬಳಿಕ…

Read More

ಬೆಂಗಳೂರು : ಈಗಾಗಲೇ ರಹಸ್ಯವಾಗಿ ಮದುವೆಯಾಗಿದ್ದರೂ ಪಾಲಕರ ಒತ್ತಾಯದ ಮೇರೆಗೆ ಮತ್ತೊಂದು ವಿವಾಹಕ್ಕೆ ಮುಂದಾಗಿದ್ದ ಪತ್ನಿಯನ್ನು ಪತಿಯೇ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ. ಭವಾನಿ (22) ಹತ್ಯೆಗೀಡಾದವಳು. ನಗರದ ತಿಗಳರಪಾಳ್ಯದಲ್ಲಿ ಘಟನೆ ನಡೆದಿದೆ. ಭವಾನಿ ತಂದೆ ಶ್ರೀನಿವಾಸ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಚಂದ್ರಶೇಖರ್ ಅಲಿಯಾಸ್ ಚಂದನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಭವಾನಿ ಎರಡು ವರ್ಷದಿಂದ ಮನೆ ಸಮೀಪದ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಚಂದನ್ ಆಟೋದಲ್ಲಿ ಭವಾನಿ, ಮನೆಯಿಂದ ಮೊಬೈಲ್ ಅಂಗಡಿಗೆ ಕೆಲಸಕ್ಕೆ ಹೋಗುತ್ತಿದ್ದಳು. ಈ ವೇಳೆ ಇಬ್ಬರ ಪರಿಚಯವಾಗಿ, ಬಳಿಕ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಗೌಪ್ಯ ವಿವಾಹ : ಕೆಲ ತಿಂಗಳ ಹಿಂದೆಯಷ್ಟೇ ದೇವಸ್ಥಾನ ದಲ್ಲಿ ಚಂದನ್ ಮತ್ತು ಭವಾನಿ ಮದುವೆಯಾಗಿದ್ದರು. ಆದರೆ, ಪ್ರತ್ಯೇಕವಾಗಿ ವಾಸವಾಗಿದ್ದುಕೊಂಡು ಪಾಲಕರಿಗೆ ವಿಷಯ ತಿಳಿಸದೆ ಎಂದಿನಂತೆ ಜೀವನ ನಡೆಸುತ್ತಿದ್ದರು. ಭವಾನಿ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಾಳೆ ಎಂಬ ವಿಚಾರ ತಿಳಿದು ಆಕೆಯ ಮನೆಯವರು, ಬೇರೆ ಮದುವೆಗೆ ಸಿದ್ಧತೆ ನಡೆಸಿದ್ದರು. ಪಾಲಕರ ಮನವಿಗೆ ಭವಾನಿ…

Read More

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌ನ 14 ಜನ ಶಾಸಕರಿಗೆ ಕರೆ ಮಾಡಿ ಸೆಳೆಯುವ ಪ್ರಯತ್ನ ಮಾಡಿದ್ದಾರೆ ಎಂದು ಶಾಸಕ ಎಚ್.ಸಿ.ಬಾಕೃಷ್ಣ ಆರೋಪಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್ಸಿಗೆ ಮತಗಳ ಕೊರತೆ ಇಲ್ಲ. ಇಬ್ಬರು ಬಿಜೆಪಿ ಉಚ್ಚಾಟಿತ ಶಾಸಕರಿದ್ದಾರೆ. ಎರಡನೇ ಪ್ರಾಶಸ್ತ್ರ ಮತಗಳಿಂದ ಕಾಂಗ್ರೆಸ್ ಐದನೇ ಅಭ್ಯರ್ಥಿಯೂ ಗೆಲ್ಲಲಿದ್ದಾರೆ. ಇದೆಲ್ಲ ಗೊತ್ತಿದ್ದೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರಿಗೆ ಡಿ.ಕೆ.ಶಿವಕುಮಾರ್ ಕಾಟ ಕೊಡಬೇಕೆಂದು ಕುಮಾರಸ್ವಾಮಿ ಅಭ್ಯರ್ಥಿ ಹಾಕಿದ್ದಾರೆ. ಈ ಹಿಂದೆ ಜೆಡಿಎಸ್‌ನಲ್ಲಿದ್ದ ಹಾಲಿ ಶಾಸಕರು ಮತ್ತು ಪಕ್ಷೇತರರು ಸೇರಿ 14 ಶಾಸಕರಿಗೆ ಕರೆ ಮಾಡಿ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರ ಎಂದರು.

Read More

ನಾಗ್ಪುರ : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ದೇಶದ ಇಂಧನ ವಲಯದಲ್ಲಿ ಮತ್ತೊಂದು ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟಿದ್ದಾರೆ. ವಾಹನಗಳಲ್ಲಿ ಶೇಕಡಾ 100 ರಷ್ಟು ಎಥೆನಾಲ್ ಬಳಸಲು ಅನುಮತಿ ನೀಡುವ ಪ್ರಮುಖ ಕಡತಕ್ಕೆ ತಾವು ಸಹಿ ಹಾಕಿರುವುದಾಗಿ ಅವರು ಶನಿವಾರ ನಾಗ್ಪುರದಲ್ಲಿ ಪ್ರಕಟಿಸಿದ್ದಾರೆ. ಈ ನಿರ್ಧಾರವು ದೇಶದ ಇಂಧನ ಸ್ವಾವಲಂಬನೆಗೆ ದೊಡ್ಡ ಬಲ ತುಂಬಲಿದೆ ಎಂದು ನಿರೀಕ್ಷಿಸಲಾಗಿದೆ. ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, “ಹಿಂದೆ ನಾನು ಎಥೆನಾಲ್ ಬಳಕೆಯ ಬಗ್ಗೆ ಮತ್ತು ಪೆಟ್ರೋಲ್‌ಗೆ ಇದು ಪರ್ಯಾಯವಾಗುವ ಬಗ್ಗೆ ಮಾತನಾಡಿದಾಗ ಹಲವರು ನನ್ನನ್ನು ನೋಡಿ ನಗುತ್ತಿದ್ದರು. ನನ್ನ ಕೆಲವು ಸ್ನೇಹಿತರೇ ಈ ಆಲೋಚನೆಯನ್ನು ತಮಾಷೆ ಮಾಡಿದ್ದರು ಮತ್ತು ಟೀಕಿಸಿದ್ದರು. ಆದರೆ ಇಂದು ಎಥೆನಾಲ್ ದೇಶದ ಇಂಧನ ಮಾರುಕಟ್ಟೆಯಲ್ಲಿ ಪೆಟ್ರೋಲ್‌ಗೆ ಅತ್ಯುತ್ತಮ ಪರ್ಯಾಯವಾಗಿ ಹೊರಹೊಮ್ಮಿದೆ” ಎಂದು ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಂಡರು. ತಮ್ಮ ಐತಿಹಾಸಿಕ ನಿರ್ಧಾರದ ಬಗ್ಗೆ ಮಾಹಿತಿ ನೀಡಿದ ಗಡ್ಕರಿ, “ಕಳೆದ ರಾತ್ರಿ 8 ಗಂಟೆಗೆ, ನಾನು…

Read More

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳು ದುರ್ಬಳಕೆಯಾಗುತ್ತಿರುವುದನ್ನು ತಡೆಯಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳನ್ನು ಮರುದೃಢೀಕರಿಸಲು ಹೊಸದಾಗಿ ಅರ್ಜಿ ಸಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ. ಆದರೆ, ಈ ಆದೇಶವನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷವಾದ ಬಿಜೆಪಿ, “ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಂಚು ರೂಪಿಸಿದೆ” ಎಂದು ಟೀಕಿಸಿತ್ತು. ವಿಪಕ್ಷಗಳ ಈ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆ ಮೂಲಕ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ಯೋಜನೆಗಳು ನಿಲ್ಲುವುದಿಲ್ಲ, ವದಂತಿ ನಂಬಬೇಡಿ ರಾಜ್ಯದಲ್ಲಿ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಅವರು ಖಡಾಖಂಡಿತವಾಗಿ ಹೇಳಿದ್ದಾರೆ. ಇವು ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ಯೋಜನೆಗಳಾಗಿದ್ದು, ನೂರಕ್ಕೆ ನೂರರಷ್ಟು ಮುಂದುವರೆಯಲಿವೆ. ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸಲು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದು, ಸಾರ್ವಜನಿಕರು ಹಾಗೂ ಮಹಿಳೆಯರು ಇಂತಹ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಅವರು ಮನವಿ ಮಾಡಿದ್ದಾರೆ. ಮರು-ಅರ್ಜಿಗೆ…

Read More

ಬೆಂಗಳೂರು: ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮವನ್ನು ಖಂಡಿಸಿ ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ದೆಹಲಿಯಲ್ಲಿ ನಡೆದ ಯಶಸ್ವಿ ಪ್ರತಿಭಟನೆಯ ಬೆನ್ನಲ್ಲೇ, ಇಂದು ಬೆಂಗಳೂರಿನ ಪ್ರಸಿದ್ಧ ಫ್ರೀಡಂ ಪಾರ್ಕ್‌ನಲ್ಲಿ ಕಾಕ್ರಾಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯ ಯುವಕರು, ವಿದ್ಯಾರ್ಥಿಗಳು ಹಾಗೂ ಆಕ್ರೋಶಿತ ಪೋಷಕರು ಪಾಲ್ಗೊಂಡಿದ್ದರು. ಭ್ರಷ್ಟಾಚಾರ ಮತ್ತು ಪರೀಕ್ಷಾ ಅಕ್ರಮಗಳಿಂದ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು. ಫ್ರೀಡಂ ಪಾರ್ಕ್ ಆವರಣವು ಕೇಂದ್ರ ಸರ್ಕಾರದ ವಿರುದ್ಧದ ಘೋಷಣೆಗಳಿಂದ ಮೊಳಗಿಹೋಗಿತ್ತು. ಕೇಂದ್ರ ಸಚಿವರ ರಾಜೀನಾಮೆಗೆ ಆಗ್ರಹ: ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇಷ್ಟೊಂದು ದೊಡ್ಡ ಮಟ್ಟದ ಪರೀಕ್ಷಾ ಹಗರಣ ನಡೆದಿದ್ದರೂ…

Read More

ಹುಬ್ಬಳ್ಳಿ: “ತ್ರಿಶೂಲವನ್ನು ದೇವರ ಮನೆಯಲ್ಲಿ ಇಟ್ಟು ಪೂಜೆ ಮಾಡಲು ನೀಡುತ್ತಿಲ್ಲ. ಅದನ್ನು ನಿಮ್ಮ ವ್ಯಾನಿಟಿ ಬ್ಯಾಗ್‌ನಲ್ಲಿ ಇಟ್ಟುಕೊಂಡು ಓಡಾಡಿ. ನಿಮ್ಮ ಮೇಲೆ ಯಾರಾದರೂ ಆಕ್ರಮಣ ಮಾಡಲು ಬಂದರೆ, ಅದರಿಂದ ಅವರ ಹೊಟ್ಟೆಗೆ ಚುಚ್ಚಿ ಆತ್ಮರಕ್ಷಣೆ ಮಾಡಿಕೊಳ್ಳಿ” ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಆಯೋಜನೆಗೊಂಡಿದ್ದ ತ್ರಿಶೂಲ ದೀಕ್ಷಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಹಿಳೆಯರು ತಮ್ಮ ರಕ್ಷಣೆಗೆ ಶಸ್ತ್ರ ಹೊಂದುವುದು ಅನಿವಾರ್ಯವಾಗಿದೆ ಎಂದು ಪ್ರತಿಪಾದಿಸಿದರು. ಇದೇ ವೇಳೆ ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ನಡೆಗಳ ವಿರುದ್ಧ ಆಕ್ರೋಶ ಹೊರಹಾಕಿದ ಅವರು, “ಶ್ರೀರಾಮನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಭಗವಾನ್ ಎಂಬುವವರ ವಿರುದ್ಧ ಸರ್ಕಾರ ಯಾವುದೇ ಕೇಸ್ ದಾಖಲಿಸಿಲ್ಲ. ಆದರೆ ನಾವು ‘ಭಾರತ್ ಮಾತಾ ಕಿ ಜೈ’ ಎಂದರೆ ನಮಗೆ ನೋಟಿಸ್ ನೀಡಲಾಗುತ್ತದೆ. ನಾವು ಕೇವಲ ತ್ರಿಶೂಲ ದೀಕ್ಷೆ ನೀಡುವುದಕ್ಕೆ ಸೀಮಿತವಾಗುವುದಿಲ್ಲ, ಮುಂದಿನ ದಿನಗಳಲ್ಲಿ ತಲ್ವಾರ್ (ಖಡ್ಗ) ಗಳನ್ನೂ ವಿತರಿಸುತ್ತೇವೆ. ತಲ್ವಾರ್ ನೀಡುವುದನ್ನು ತಡೆಯುವ ಧೈರ್ಯ ಯಾರಿಗಾದರೂ ಇದ್ದರೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಜ್ಯುವೆಲರಿ ಶಾಪ್ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮೇ 30 ರಂದು ಚಿನ್ನಾಭರಣ ಅಂಗಡಿ ದರೋಡೆ ನಡೆಸಿದ್ದಾರು. ಕೇವಲ 30 ಸೆಕೆಂಡ್ ನಲ್ಲಿ 30 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು. ನೆಲಮಂಗಲ ತಾಲೂಕಿನ ಟಿ. ಬೇಗುರಿನಲ್ಲಿ ಈ ಒಂದು ಘಟನೆ ನಡೆದಿತ್ತು. ಚಾಕು ಹಿಡಿದು ಖರೀಮರು ದರೋಡೆ ಮಾಡಿದ್ದರು. ಇದೀಗ ಸಿಸಿಟಿವಿ ದೃಶ್ಯ ಆಧರಿಸಿ ರಾಜಸ್ಥಾನ ಮೂಲದ ಕಳ್ಳರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುಷ್ಪೇಂದ್ರ ಸಿಂಗ್ ಬಾಬುಲಾಲ್ ಹಾಗೂ ಮತ್ತೋರ್ವ ವ್ಯಕ್ತಿ ಬಂದಿತ ಆರೋಪಿಗಳು ಎಂದು ತಿಳಿದುಬಂದಿದೆ.

Read More

ಬಾಗಲಕೋಟೆ: ಕರ್ನಾಟಕ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಇನ್‌ಸ್ಟಾಗ್ರಾಮ್ ಖಾತೆಯೊಂದರ ವಿರುದ್ಧ ಬಾಗಲಕೋಟೆಯಲ್ಲಿ ಕಾನೂನು ಸಮರ ಆರಂಭವಾಗಿದೆ. ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪೊಲೀಸರಿಗೆ ಅಧಿಕೃತವಾಗಿ ದೂರು ನೀಡಲಾಗಿದೆ. ಜಮಖಂಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಜಿಲ್ಲಾ ಯುವ ಕಾಂಗ್ರೆಸ್ ನಿಯೋಗವು, ಇನ್‌ಸ್ಟಾಗ್ರಾಮ್ ಖಾತೆಯೊಂದರ ವಿರುದ್ಧ ಲಿಖಿತ ದೂರನ್ನು ಹಸ್ತಾಂತರಿಸಿತು. ಜಮಖಂಡಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಅವರಿಗೆ ಅಧಿಕೃತ ದೂರು ಪತ್ರವನ್ನು ಸಲ್ಲಿಸಿದ ಯುವ ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿಗಳ ತೇಜೋವಧೆ ಮಾಡುತ್ತಿರುವವರ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಶಿವಕುಮಾರ ದಾನಕ್ಕನವರ ನೇತೃತ್ವ ಈ ಪ್ರತಿಭಟನಾತ್ಮಕ ದೂರು ಸಲ್ಲಿಕೆಯ ನೇತೃತ್ವವನ್ನು ಬಾಗಲಕೋಟೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರ ದಾನಕ್ಕನವರ…

Read More