Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಬೆಂಗಳೂರಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ನಡೆಸಿದ ಪರಿಣಾಮ ಓರ್ವ ವ್ಯಕ್ತಿ ಸಾವನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರು ರಸ್ತೆಯ ಇಂದ್ರಪ್ರಸ್ಥ ಅಪಾರ್ಟ್ಮೆಂಟ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಅಡ್ಡಾದಿಡಿಯಾಗಿ ಚಾಲಕ ಇಕೋ ಕಾರನ್ನು ಚಲಾಯಿಸಿದ್ದಾನೆ. ಇಕೋ ಕಾರಿನಲ್ಲಿ ಇದ್ದ ಸುಖದೇವ್ ಸಾವನಪ್ಪಿದು ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ವೇಗವಾಗಿ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಎರಡು ಬೈಕ್ಗಳಿಗೆ ಕಾರು ಡಿಕ್ಕಿ ಹೊಡೆದಿದೆ. ಮುಂದೆ ಹೋಗುತ್ತಿದ್ದ ಎರಡು ಬೈಕ್ಗಳಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಈ ವೇಳೆ ಹೊರಗೆ ಬಿದ್ದಿದ್ದ ಸುಖದೇವ್ ಮೇಲೆ ಇಕೋ ಕಾರು ಬಿದ್ದಿದೆ. ಎರಡು ಬೈಕ್ ಗಳಿದ್ದ ಮೂವರು ಸವಾರರಿಗೆ ಗಂಭೀರ ಗಾಯಗಳಾಗಿದ್ದು ಕಾರುಬಿದ್ದ ಪರಿಣಾಮ ಸುಖದೇವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಪಘಾತ ಸಂಭವಿಸಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮತ್ತೆ ವಿವಾದಕ್ಕೆ ಸಿಲುಕಿದ್ದು, ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ರ‍್ಯಾಶ್ ಡ್ರೈವಿಂಗ್ ಮಾಡಲಾಗಿದೆ. ಏರ್ಪೋರ್ಟ್ ರಸ್ತೆಯಲ್ಲಿ ರಿಕ್ಕಿ ಲ್ಯಾಂಬರ್ಗಿನಿ ಕಾರಿನಿಂದ ಪುಂಡಾಟ ಮೆರೆಯಲಾಗಿದೆ. ಸಾರ್ವಜನಿಕರಿಗೆ ಭಯ ಮತ್ತು ಆತಂಕ ಸೃಷ್ಟಿಸುವ ರೀತಿಯಲ್ಲಿ ಕಾರು ಚಾಲನೆ ಮಾಡಲಾಗಿದೆ. ಕಾರಿನ ಸೈಲೆನ್ಸರ್ ನಲ್ಲಿ ಬೆಂಕಿಯನ್ನು ಸಿಡಿಸಿ ಕರ್ಕಶವಾಗಿ ಶಬ್ದ ಮಾಡಿಕೊಂಡು ಕಾರು ಡ್ರೈವ್ ಮಾಡಲಾಗಿದೆ ಈ ಒಂದು ವಿಡಿಯೋ ಆದರಿಸಿ ಪೊಲೀಸರು ಪರಿಶೀಲನೆಗೆ ಮುಂದಾಗಿದ್ದಾರೆ. ಅತಿ ವೇಗವಾಗಿ ಚಾಲನೆ ಮಾಡಿರುವ ವಿಡಿಯೋ ವೈರಲ್ ಆಗಿದೆ KA 05 NR 0009 ನಂಬರ್ನ ರಿಕ್ಕಿ ರಾಯ್ ಒಡೆತನದ ಲ್ಯಾಂಬೋರ್ಗಿನಿ ಕಾರು ಎಂದು ತಿಳಿದುಬಂದಿದೆ. ಕಾರು ಯಾರು ಚಾಲನೆ ಮಾಡಿದ್ದಾರೆ ಎನ್ನುವುದು ತಿಳಿದುಬಂದಿಲ್ಲ ಈ ವಿಡಿಯೋ ಆಧರಿಸಿ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

Read More

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಮತ್ತು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (UG-CET) ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಎರಡಕ್ಕೂ ಸೇರಿ ‘ಒಂದೇ ಅರ್ಜಿ’ ಸಲ್ಲಿಸುವ ಕ್ರಾಂತಿಕಾರಿ ಮತ್ತು ಹೊಸ ನಿಯಮವನ್ನು ಕೆಇಎ ಜಾರಿಗೊಳಿಸುತ್ತಿದೆ. ಈ ಹಿಂದೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಸಿದ್ಧತೆಯ ಭರದಲ್ಲೇ ಸಿಇಟಿಗೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕಿತ್ತು. ಇದರಿಂದ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದರು. ಅಲ್ಲದೆ ಕೊನೆಯ ಕ್ಷಣದಲ್ಲಿ ಕೆಇಎ ವೆಬ್‌ಸೈಟ್‌ನಲ್ಲಿ ಸರ್ವರ್ ಸಮಸ್ಯೆ ಎದುರಾಗಿ, ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಲು ಬಹುತೇಕ ವಿದ್ಯಾರ್ಥಿಗಳು ವಿಫಲರಾಗುತ್ತಿದ್ದರು. ಹೊಸ ನಿಯಮದ ಜಾರಿಯಿಂದಾಗಿ ವಿದ್ಯಾರ್ಥಿಗಳ ಈ ಎಲ್ಲಾ ಸರ್ವರ್ ಸಮಸ್ಯೆ ಹಾಗೂ ಮಾನಸಿಕ ಒತ್ತಡಕ್ಕೆ ಶಾಶ್ವತ ಪರಿಹಾರ ಸಿಗಲಿದೆ. ಸುಲಭ ಪ್ರಕ್ರಿಯೆ: ಪ್ರವೇಶದ ವೇಳೆಯೇ ಸಿಇಟಿ ಆಯ್ಕೆ ವಿದ್ಯಾರ್ಥಿಗಳಿಗೆ ಸಿಇಟಿ ಬಗ್ಗೆ ಸಮಗ್ರ…

Read More

ಬೆಂಗಳೂರು : ಬೈಕ್ ಅಪಘಾತದಲ್ಲಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ಬೆಂಗಳೂರಿನ ಕೆಂಗೇರಿಯ ಆರ್ ಆರ್ ಡೆಂಟಲ್ ಕಾಲೇಜಿನ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಕಾಲೇಜು ಬಳಿ ಡಿವೈಡರ್ಗೆ ಡಿಕ್ಕಿಯಾದ ಬೈಕ್ ನಲ್ಲಿ ಇದ್ದಂತಹ ಅತುಲ್ ಹಾಗೂ ಗೌರಿಶಂಕರ್ ಸಾವನಪ್ಪಿದ್ದಾರೆ. ಮೈಸೂರು ನಿಂದ ಇಬ್ಬರು ಬೆಂಗಳೂರು ಕಡೆಗೆ ಬರುತ್ತಿದ್ದರು. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಇಬ್ಬರು ಬರುವಾಗ ಕಾಲೇಜು ಬಳಿ ಇರುವ ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಮೈಸೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ಮೈಸೂರಿನ ಸಾಲಿಗ್ರಾಮದಲ್ಲಿ ಘೋರ ದುರಂತ ಸಂಭವಿಸಿದೆ ತಾಯಿ ಒಬ್ಬಳು ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಜವರೇಗೌಡರ ಕೊಪ್ಪಲಿನಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ. ಮೂರು ವರ್ಷದ ಧೃತಿ ಹಾಗೂ ಒಂದುವರೆ ವರ್ಷದ ದಿಶಾ ಎನ್ನುವ ಮಕ್ಕಳನ್ನು ಕೊಲೆ ಮಾಡಲಾಗಿದೆ. ಇಬ್ಬರು ಮಕ್ಕಳನ್ನು ನೇಣು ಬಿಗಿದುಕೊಂದು ಬಳಿಕ ತಾಯಿ ಪ್ರಿಯಾಂಕಾ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ವಿಷಯ ತಿಳಿದ ತಕ್ಷಣ ಸ್ಥಳೀಯರು ತಾಯಿ ಪ್ರಿಯಾಂಕಳನ್ನು ರಕ್ಷಣೆ ಮಾಡಿದ್ದಾರೆ ಮೈಸೂರಿನ ಖಾಸಗಿ ಹಾಸ್ಪಿಟಲ್ಗೆ ಶಿಫ್ಟ್ ಮಾಡಲಾಗಿದೆ. ಆರು ವರ್ಷದ ಹಿಂದೆ ಪ್ರಿಯಾಂಕ ಮತ್ತು ಅನಿಲ್ ಕುಮಾರ್ ಮದುವೆ ಆಗಿತ್ತು.ಆದರೆ ಈ ರೀತಿ ಮಕ್ಕಳನ್ನು ಕೊಂದು ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಪರಿಸ್ಥಿತಿ ಯಾವ ಕಾರಣಕ್ಕೆ ಬಂದಿತು ಎಂದು ತಿಳಿದು ಬಂದಿಲ್ಲ. ಈ ಕುರಿತು ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಶಾಲಾ ವಾಹನ ಹರಿದು ತಾಯಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಬೆಂಗಳೂರಿನ ವೈಟ್ ಫೀಲ್ಡ್ ಸಂಚಾರಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ. ಮಗಳನ್ನು ಕಾಲೇಜಿಗೆ ಕರೆದುಕೊಂಡು ಹೋಗುವಾಗ ಈ ವೇಳೆ ಬೈಕ್ ಸ್ಕಿಡ್ ಆಗಿ ತಾಯಿ ಕಾಂತ ರಸ್ತೆಯಲ್ಲಿ ಬಿದ್ದಿದ್ದಾರೆ. ಈ ವೇಳೆ ಶಾಲಾ ವಾಹನ ಏಕಾಏಕಿ ಕಾಂತ ಅವರ ಮೇಲೆ ಹರಿದಿದೆ. ಘಟನೆಯಲ್ಲಿ ತಾಯಿ ಕಾಂತ ಸ್ಥಳದಲ್ಲಿ ಸಾವನ್ನಪ್ಪಿದ್ದು ಪುತ್ರಿ ನೇಹ ಬಚಾವ್ ಆಗಿದ್ದಾಳೆ. ಬೈಕ್ ನಲ್ಲಿ ಮಗಳನ್ನು ಕಾಲೇಜಿಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಒಂದು ದುರಂತ ಸಂಭವಿಸಿದೆ. ಮಾರತಹಳ್ಳಿಯಿಂದ ಸಿದ್ದಾಪುರ ಕಡೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ತಾಯಿಯ ಸಾವನ್ನು ಕಣ್ಣಾರೆ ಕಂಡ ನೇಹಾ ತೀವ್ರ ಆಘಾತಕ್ಕೆ ಒಳಗಾಗಿದ್ದು, ಈ ಬಗ್ಗೆ ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ನಟ, ರಾಜಕಾರಣಿ ವಿಜಯ್ ಅವರು ಇಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರು ಆತ್ಮೀಯವಾಗಿ ಬರಮಾಡಿಕೊಂಡರು. ಅರ್ಧ ಗಂಟೆಗೂ ಹೆಚ್ಚು ಕಾಲ ವಿಶೇಷ ಪೂಜೆ ದೇವಸ್ಥಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ವಿಜಯ್ ಅವರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ದೇವಸ್ಥಾನದ ಗರ್ಭಗುಡಿಯ ಮುಂದೆ ಕುಳಿತು ಅತ್ಯಂತ ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದ ಅವರು, ದೇವಿಗೆ ವಿಶೇಷ ನಮನಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು ವಿಜಯ್ ಅವರ ಕೈಗೆ ರಕ್ಷಾದಾರವನ್ನು ಕಟ್ಟಿ, ಪ್ರಸಾದ ನೀಡಿ ಆಶೀರ್ವದಿಸಿದರು. 2 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗ ಸಮರ್ಪಣೆ ರಾಜಕೀಯದಲ್ಲಿ ಮಹತ್ತರ ಜಯ ಗಳಿಸಿ ನೂತನ…

Read More

ನವದೆಹಲಿ: ವಿಶ್ವ ಕ್ರಿಕೆಟ್‌ನ ಅತ್ಯಂತ ಸುಸಂಸ್ಕೃತ, ಶಾಂತಚಿತ್ತದ ಬ್ಯಾಟರ್ ಹಾಗೂ ನ್ಯೂಜಿಲೆಂಡ್ ತಂಡದ ಮಾಜಿ ಯಶಸ್ವಿ ನಾಯಕ ಕೇನ್ ವಿಲಿಯಂಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಈ ಬೆನ್ನಲ್ಲೇ ಜಾಗತಿಕ ಕ್ರಿಕೆಟ್ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಅಭಿಮಾನಿಗಳು ಹಾಗೂ ಕ್ರಿಕೆಟ್ ಪ್ರೇಮಿಗಳು ಕಂಬನಿ ಮಿಡಿಯುತ್ತಿದ್ದಾರೆ. ದಾಖಲೆಗಳ ಸರದಾರನ ಆಟಕ್ಕೆ ತೆರೆ: ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿರುವ ಕೇನ್ ವಿಲಿಯಂಸನ್, ತಮ್ಮ ಅದ್ಭುತ ಬ್ಯಾಟಿಂಗ್ ಶೈಲಿಯಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದವರು. ಕಿವೀಸ್ ತಂಡದ ಬೆನ್ನೆಲುಬಾಗಿ ನಿಂತು ಹಲವು ಐತಿಹಾಸಿಕ ಜಯ ತಂದುಕೊಟ್ಟಿದ್ದ ಈ ‘ರನ್‌ ಮಷಿನ್’, ಇದೀಗ ಅಂತರರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ಅಧಿಕೃತವಾಗಿ ವಿದಾಯ ಹೇಳುವ ಮೂಲಕ ಸುದೀರ್ಘ ಯಾನವನ್ನು ಮುಕ್ತಾಯಗೊಳಿಸಿದ್ದಾರೆ. ಭಾರತದ ವಿರುದ್ಧವೇ ಆರಂಭವಾಗಿದ್ದ ಕ್ರಿಕೆಟ್ ಪಯಣ: ವಿಶೇಷವೆಂದರೆ, ಕೇನ್ ವಿಲಿಯಂಸನ್ ಅವರ ಅಂತರರಾಷ್ಟ್ರೀಯ ಕ್ರಿಕೆಟ್ ಬದುಕಿನ ಆರಂಭ ಮತ್ತು ಭಾರತ ದೇಶಕ್ಕೆ ಅತ್ಯಂತ ಹತ್ತಿರದ ನಂಟಿದೆ. ಅವರು 2010ರ ಆಗಸ್ಟ್ 10 ರಂದು…

Read More

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. 2026ನೇ ಸಾಲಿನ ವೈದ್ಯಕೀಯ ಕೋರ್ಸ್‌ಗಳ ಶುಲ್ಕದಲ್ಲಿ ಯಾವುದೇ ರೀತಿಯ ಹೆಚ್ಚಳ ಮಾಡದಿರಲು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಕಳೆದ ವರ್ಷದ ಶುಲ್ಕವೇ ಈ ವರ್ಷವೂ ಮುಂದುವರಿಯಲಿದ್ದು, ಖಾಸಗಿ ಕಾಲೇಜುಗಳ ಒಕ್ಕೂಟದ ಒತ್ತಡಕ್ಕೂ ಮಣಿಯದೆ ಸರ್ಕಾರ ಯಥಾಸ್ಥಿತಿ ಕಾಯ್ದುಕೊಂಡಿದೆ. ಇತ್ತೀಚಿನ ದಿನಗಳಲ್ಲಿ ನೀಟ್ (NEET) ಪರೀಕ್ಷೆಗಳ ಗೊಂದಲ ಹಾಗೂ ಮರು ಪರೀಕ್ಷೆಯ ತೀವ್ರ ಒತ್ತಡದಲ್ಲಿದ್ದ ವಿದ್ಯಾರ್ಥಿಗಳಿಗೆ ಸರ್ಕಾರದ ಈ ನಡೆ ಭಾರಿ ನೆಮ್ಮದಿ ತಂದಿದೆ. ಶುಲ್ಕ ದುಬಾರಿಯಾಗಬಹುದು ಎಂಬ ಆತಂಕದಲ್ಲಿದ್ದ ಪೋಷಕರು ಇದೀಗ ನಿಟ್ಟುಸಿರು ಬಿಡುವಂತಾಗಿದೆ. ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಶುಲ್ಕ ವಿವರ ಸಚಿವರ ಅಧಿಕೃತ ಪ್ರಕಟಣೆಯ ಪ್ರಕಾರ, ಹೊಸ ನಿಯಮವು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಿಗೂ ಅನ್ವಯವಾಗಲಿದೆ. ಈ…

Read More

ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆಯೇ ಮುಖ್ಯಮಂತ್ರಿಗಳು ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಮುಖ್ಯಮಂತ್ರಿ ವಿಜಯ್ ಅವರ ಭೇಟಿಯ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರು ಭವ್ಯ ಸ್ವಾಗತ ಕೋರಿದರು. ಮಳೆಯ ನಡುವೆಯೇ ದೇವಸ್ಥಾನದ ಪ್ರಧಾನ ಅರ್ಚಕರು ಮುಖ್ಯಮಂತ್ರಿಗಳಿಗೆ ಪುಷ್ಪಗುಚ್ಛ ನೀಡಿ ಬರಮಾಡಿಕೊಂಡರು. ಬಳಿಕ ದೇವಸ್ಥಾನದ ಸಂಪ್ರದಾಯದಂತೆ ಮಂಗಲ ವಾದ್ಯಗಳ ಮೊಳಗಿನೊಂದಿಗೆ ಅತ್ಯಂತ ಗೌರವಪೂರ್ವಕವಾಗಿ ‘ಪೂರ್ಣಕುಂಭ ಸ್ವಾಗತ’ವನ್ನು ಕೋರಿ ಅವರನ್ನು ಗರ್ಭಗುಡಿಯತ್ತ ಕರೆದೊಯ್ಯಲಾಯಿತು. ದೇವಸ್ಥಾನದ ಆಚಾರ-ವಿಚಾರ ಹಾಗೂ ಕಟ್ಟುನಿಟ್ಟಿನ ನಿಯಮಗಳನ್ನು ಗೌರವಿಸಿದ ತಮಿಳುನಾಡು ಮುಖ್ಯಮಂತ್ರಿಗಳು, ತಾವು ಧರಿಸಿದ್ದ ಶರ್ಟ್ ಧರಿಸದೇ, ಮೈಮೇಲೆ ಕೆಂಪು ಬಣ್ಣದ ಸಾಂಪ್ರದಾಯಿಕ ಶಲ್ಯವನ್ನು ಹೊದ್ದು ಅತ್ಯಂತ ಭಕ್ತಿಭಾವದಿಂದ ದೇವಸ್ಥಾನದ ಒಳಗೆ ಪ್ರವೇಶಿಸಿದರು. ದೇವಸ್ಥಾನದ…

Read More