Author: kannadanewsnow05

ಬೆಂಗಳೂರು : ಕಳೆದ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಹೈದರಾಬಾದ್ ನಡುವೆ ಮೊದಲ ಐಪಿಎಲ್ ಪಂದ್ಯ ನಡೆದಿತ್ತು. ಈ ಒಂದು ಪಂದ್ಯದಲ್ಲಿ ಬೆಂಗಳೂರು ತಂಡ ಹೈದರಾಬಾದ್ ತಂಡವನ್ನು ಮಣಿಸುವ ಮೂಲಕ ಶುಭಾರಂಭ ಮಾಡಿತ್ತು ಆದರೆ ಇದೇ ಸಮಯ ನೋಡಿಕೊಂಡು ಕಳ್ಳರು ತಮ್ಮ ಕೈ ಚಳಕ ತೋರಿಸಿ ಸುಮಾರು 50 ಮೊಬೈಲ್ ಕಳ್ಳತನ ಮಾಡಿದ್ದರು. ಇದೀಗ ಆರ್‌ಸಿಬಿ ಮತ್ತು ಎಸ್‌ಆರ್‌ಹೆಚ್ ನಡುವೆ ಮಾರ್ಚ್ 28ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕ್ರಿಕೆಟ್ ಪಂದ್ಯ ವೀಕ್ಷಿಸಲು ಬಂದಿದ್ದ ಅಭಿಮಾನಿಗಳ ಮೊಬೈಲ್ ಫೋನ್‌ಗಳನ್ನ ಕದ್ದಿದ್ದ ನಾಲ್ವರು ಆರೋಪಿಗಳನ್ನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂವರು ಅಪ್ರಾಪ್ತರ ಸಹಿತ ಒಟ್ಟು ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಂದ್ಯದ ಸಂದರ್ಭದಲ್ಲಿ ಮೈದಾನ ಪ್ರವೇಶಿಸುವ ಗಡಿಬಿಡಿ ಹಾಗೂ ಪಂದ್ಯ ಮುಗಿದ ನಂತರ ಜನಸಂದಣಿ ಉಂಟಾಗುವ ಸಂದರ್ಭವನ್ನ ಬಳಸಿಕೊಳ್ಳುತ್ತಿದ್ದ ಆರೋಪಿಗಳು, ಮೊಬೈಲ್ ಫೋನ್‌ಗಳನ್ನ ಕಳ್ಳತನ ಮಾಡುತ್ತಿದ್ದರು. ಬಂಧಿತರಿಂದ ವಿವಿಧ ಕಂಪನಿಗಳಿಗೆ ಸೇರಿದ…

Read More

ಬೆಂಗಳೂರು : ರಾಜ್ಯದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ವಿದ್ಯುತ್ ಬಳಕೆದಾರರಿಗೆ ದರ ಏರಿಕೆಯ ಬಿಸಿ ತಟ್ಟಲಿದೆ. KERC ಅನುಮೋದಿತ ಈ ಪರಿಷ್ಕೃತ ದರವು ಏಪ್ರಿಲ್ 2025-ಮಾರ್ಚ್ 2026ರ ಅವಧಿಯ ಬಳಕೆಗೆ ಅನ್ವಯವಾಗಿದ್ದು, 2026-27ರ ಬಿಲ್‌ಗಳಲ್ಲಿ ವಸೂಲಾಗಲಿದೆ. ESCOM ನಷ್ಟ ಸರಿದೂಗಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಹೌದು ಹೊಸ ಆರ್ಥಿಕ ವರ್ಷದ ಆರಂಭದಲ್ಲೇ ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕಾ ವಿದ್ಯುತ್ ಬಳಕೆದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ವಿದ್ಯುತ್ ಸರಬರಾಜು ಕಂಪನಿಗಳ (ESCOMs) ನಷ್ಟವನ್ನು ಸರಿದೂಗಿಸಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ದರ ಪರಿಷ್ಕರಣೆಗೆ ಹಸಿರು ನಿಶಾನೆ ತೋರಿಸಿದ್ದು, ಏಪ್ರಿಲ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಈ ದರ ಏರಿಕೆಯು 2025-26ರ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಘೋಷಿಸಲಾಗಿದೆ. ಅಂದರೆ, ಏಪ್ರಿಲ್ 2025 ರಿಂದ ಮಾರ್ಚ್ 2026 ರವರೆಗೆ ಬಳಕೆ ಮಾಡಿರುವ ವಿದ್ಯುತ್‌ಗೆ ಬಳಕೆದಾರರು ಈಗ ಹೆಚ್ಚುವರಿ ಹಣವನ್ನು ಪಾವತಿಸಬೇಕಾಗುತ್ತದೆ. ಈ ಬಾಕಿ ಮೊತ್ತವನ್ನು ಬೆಸ್ಕಾಂ (BESCOM) ಸೇರಿದಂತೆ ಎಲ್ಲಾ…

Read More

ಬೆಂಗಳೂರು: ದೇಶದ ಪ್ರಮುಖ ಸ್ಥಳೀಯ ಭಾಷಾ ಕಂಟೆಂಟ್ ವೇದಿಕೆಯಾದ ‘ಡೈಲಿಹಂಟ್’ (Dailyhunt) ಮತ್ತು ಶಾರ್ಟ್ ವಿಡಿಯೋ ಆ್ಯಪ್ ‘ಜೋಶ್’ (Josh) ನ ಮಾತೃಸಂಸ್ಥೆಯಾದ ‘ವರ್ಸ್ ಇನ್ನೋವೇಶನ್’ (VerSe Innovation), ತನ್ನ ಆಡಳಿತ ಮಂಡಳಿಯ ನೂತನ ಸ್ವತಂತ್ರ ನಿರ್ದೇಶಕರಾಗಿ ಡೆಲಾಯ್ಟ್ ಇಂಡಿಯಾದ ಮಾಜಿ ಅಧ್ಯಕ್ಷ ಪಿ.ಆರ್. ರಮೇಶ್ ಅವರನ್ನು ಅಧಿಕೃತವಾಗಿ ನೇಮಕ ಮಾಡಿರುವುದಾಗಿ ಕಂಪನಿ ತಿಳಿಸಿದೆ. ಈ ನೇಮಕಾತಿಯ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ವರ್ಸ್ ಇನ್ನೋವೇಶನ್‌ನ ಸಹ-ಸಂಸ್ಥಾಪಕ ಉಮಂಗ್ ಬೇಡಿ, ಯಾವುದೇ ಒಂದು ಕಂಪೆನಿಯು ದೀರ್ಘಕಾಲದವರೆಗೆ ಯಶಸ್ವಿಯಾಗಿ ಮುನ್ನಡೆಸಲು ಬಲವಾದ ಆಡಳಿತ ಮತ್ತು ಹಣಕಾಸಿನ ಶಿಸ್ತು ಅತ್ಯಂತ ಮೂಲಭೂತ ಅಂಶಗಳಾಗಿವೆ. ಪಿ.ಆರ್‌ ರಮೇಶ್‌ ಅವರು ಬೋರ್ಡ್‌ ಉಸ್ತುವಾರಿ, ನಿಯಂತ್ರಣ ಚೌಕಟ್ಟುಗಳು ಮತ್ತು ಜಾಗತಿಕ ಲೆಕ್ಕಪರಿಶೋಧನಾ ನಾಯಕತ್ವದಲ್ಲಿ ಸಾಟಿಯಿಲ್ಲದ ಅನುಭವವನ್ನು ಹೊಂದಿದ್ದಾರೆ. ವರ್ಸ್ ಇನ್ನೋವೇಶನ್ ಸುಸ್ಥಿರ ಬೆಳವಣಿಗೆಯತ್ತ ಗಮನಹರಿಸುತ್ತಿರುವ ಈ ಸಂದರ್ಭದಲ್ಲಿ, ನಮ್ಮ ಆಡಳಿತದ ಮಾನದಂಡಗಳನ್ನು ಬಲಪಡಿಸಲು ಮತ್ತು ಪಾಲುದಾರರ ವಿಶ್ವಾಸವನ್ನು ಹೆಚ್ಚಿಸಲು ಅವರ ಮಾರ್ಗದರ್ಶನವು ಪ್ರಮುಖ ಸಾಧನವಾಗಲಿದೆ,” ಎಂದು ಹೇಳಿದ್ದಾರೆ. ತಮ್ಮ ಹೊಸ…

Read More

ಬೆಂಗಳೂರು : ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಪಕ್ಕದ ರಸ್ತೆಗೆ ಕಾರು ಪಲ್ಟಿಯಾಗಿ ಬಿದ್ದಿದೆ. ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲುರು ಗ್ರಾಮದಲ್ಲಿ ಮೈಸೂರು ನಿಂದ ಎರಡು ಕಾರುಗಳು ಬೆಂಗಳೂರು ಕಡೆಗೆ ಹೋಗುತ್ತಿದ್ದವು. ಮುಂದೆ ಹೋಗುತ್ತಿದ್ದ ಟಾಟಾ ಇಂಡಿಕಾಗೆ ಹಿಂಬದಿಯಿಂದ ಪೋಲೋ ಕಾರು ಡಿಕ್ಕಿ ಹೊಡೆದಿದೆ. ಎರಡು ಕಾರುಗಳಲ್ಲಿ ಇದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಅವರನ್ನು ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಬೀದಿ ನಾಯಿಗಳ ದಾಳಿಗೆ ಒಳಗಾಗಿ ಆಸ್ಪತ್ರೆಗೆ ಸೇರಿದ ವ್ಯಕ್ತಿ ಇದೀಗ ಕೋಮಾಗೆ ಜಾರಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಲ್ಲೋಳಿಹಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಸವರಾಜ್ ಹೆಬ್ಬಾಳಿ (18) ಎಂಬ ಯುವಕ ಬೀದಿ ನಾಯಿಯ ದಾಳಿಗೆ ತುತ್ತಗಿದ್ದು, ಇದೀಗ ಆತ ಕೋಮಾಗೆ ಜಾರಿದ್ದಾನೆ. ಬೆಳಗಾವಿ ವೈದಿಕೀಯ ಕಾಲೇಜು ಆಸ್ಪತ್ರೆಯಲ್ಲಿ ಬಸವರಾಜನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಬೀದಿ ನಾಯಿಗಳ ದಾಳಿಗೆ ಒಳಗಾಗಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾನೆ. ಬಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೋಮಾಗೆ ಜಾರಿದ್ದಾನೆ ಪ್ರತಿ ದಿನ ಜನರು ಬೀದಿ ನಾಯಿಗಳ ದಾಳಿ ಆತಂಕದಲ್ಲಿ ಬದುಕುತ್ತಿದ್ದಾರೆ. ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿದ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಜನರು ಹಿಡಿಶಾಪ ಹಾಕುತ್ತಿದ್ದಾರೆ.

Read More

ಮೈಸೂರು : ಖರ್ಚಿಗೆ ಹಣ ಕೊಡಲಿಲ್ಲವೆಂದು ಮಂಗಳಮುಖಿಯರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಮೈಸೂರಿನ ಸಾತಗಳ್ಳಿ ಬಳಿಯ ಅಮೃತಾ ಬಡಾವಣೆಯಲ್ಲಿ ಕೃತ್ಯ ನಡೆದಿದೆ. ಮಂಗಳಮುಖಿಯರಾದ ಪಾರಿ, ಆನಂ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಲಾಗಿದೆ. ಬಡಾವಣೆ ನಿವಾಸಿ ಆನಂ ಬಳಿ ಯುವಕರು ಹಣ ಕೇಳಿದ್ದರು. ಹಣ ನೀಡದ ಹಿನ್ನೆಲೆ ಯುವಕರು ಗಲಾಟೆ ಮಾಡಿದ್ದಾರೆ. ಸ್ನೇಹಿತೆ ಪಾರಿಯನ್ನು ಸ್ಥಳಕ್ಕೆ ಕರೆಸಿಕೊಂಡಿದ್ದ ಆನಂ, ನಂತರ ಮತ್ತಷ್ಟು ಗಲಾಟೆ ವಿಕೋಪಕ್ಕೆ ಹೋಗಿದೆ. ಈ ವೇಳೆ ಮಂಗಳಮುಖಿ ಪಾರಿ ಮುಖಕ್ಕೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ. ಗಾಯಾಳು ಮಂಗಳಮುಖಿ ಪಾರಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಕೆಲಸದಿಂದ ತೆಗೆದು ಹಾಕಿದಕ್ಕೆ ಚಾಕು ಇರಿದು ಮ್ಯಾನೇಜರ್ ನನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಿಗಳರಪಾಳ್ಯದಲ್ಲಿ ನಡೆದಿದೆ. ತಿಗಳರಪಾಳ್ಯದ ಪವರ್ ಪ್ರೈವೇಟ್. ಲಿಮಿಟೆಡ್ ಕಂಪನಿಯ ಮ್ಯಾನೇಜರ್ ರಾಹುಲ್ (38) ನನ್ನ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ರಾಜಗೋಪಾಲ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Read More

ನವದೆಹಲಿ : ದೇಶದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ಹಣಕಾಸು ವಂಚನೆಗಳನ್ನು ತಡೆಗಟ್ಟಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ನಿರ್ಧರಿಸಿದೆ. ಈ ಹೊಸ ಮಾರ್ಗಸೂಚಿಯ ಪ್ರಕಾರ, ಇನ್ಮುಂದೆ ಯುಪಿಐ (UPI) ಮೂಲಕ ಹಣ ಪಾವತಿ ಮಾಡುವಾಗ ಕೇವಲ ಒನ್ ಟೈಮ್ ಪಾಸ್‌ವರ್ಡ್ (OTP) ಅಥವಾ ಪಿನ್ (PIN) ಮಾತ್ರ ಸಾಕಾಗುವುದಿಲ್ಲ. ಬದಲಾಗಿ, ‘ಮಲ್ಟಿ ಫ್ಯಾಕ್ಟರ್ ಅಥೆಂಟಿಕೇಶನ್’ (Multi-factor Authentication) ಅಡಿಯಲ್ಲಿ ಡಬಲ್ ಸೆಕ್ಯೂರಿಟಿಯನ್ನು ಕಡ್ಡಾಯಗೊಳಿಸಲು ಆರ್‌ಬಿಐ ಮುಂದಾಗಿದೆ. ನಾಳೆಯಿಂದಡಿಜಿಟಲ್ ಪಾವತಿಯಲ್ಲಿ ನಿಯಮ ಬದಲಾವಣೆ ಆಗುತ್ತಿದೆ. RBI ಆರ್ಥಿಕ ವರ್ಷದ ಆರಂಭದಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ಆನ್ಲೈನ್ ವೈವಾಟಿಗೆ ಏಪ್ರಿಲ್ ಒಂದರಿಂದ ಹೊಸ ರೂಲ್ಸ್ ನಾಳೆಯಿಂದ ಅನ್ವಯವಾಗುತ್ತಿದೆ ಸಾಲದು ಅದರ ಜೊತೆಗೆ ಕಡ್ಡಾಯ UPI ಕಾರ್ಡ್, ವಾಲೆಟ್ ಪಾವತಿಗಳಿಗೆ ಎರಡು ಫ್ಯಾಕ್ಟರ್ ಅಥೆಂಟಿಕೇಶನ್ ಸೈಬರ್ ವಂಚನೆತ್ರೆಯಿಂದ ಕಠಿಣ ಸುರಕ್ಷತಾ ಕ್ರಮ ಜಾರಿ ಮಾಡಿದೆ ವ್ಯವಸ್ಥೆಯ ವೈಫಲ್ಯದಿಂದ ಹಣ ಕಳೆದುಕೊಂಡರೆ ಬ್ಯಾಂಕುಗಳೆ ಹೊಣೆ ಆಗಲಿವೆ. ಪಿನ್ ಅಥವಾ ಬಯೋಮೆಟ್ರಿಕ್…

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಕಾರು ಹೆದ್ದಾರಿಯಲ್ಲಿ ವೇ ಗವಾಗಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನ ಚಾಲಕ ಮತ್ತು ಪ್ರಯಾಣಿಕರು ಹೆದ್ದಾರಿ ಮಧ್ಯೆಯೇ ಕಾರನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ. ಅವರು ಇಳಿಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಕಾರಿನಾದ್ಯಂತ ಆವರಿಸಿದ್ದು, ನೋಡ ನೋಡುತ್ತಿದ್ದಂತೆ ಇಡೀ ಕಾರು ಬೆಂಕಿಗಾಹುತಿಯಾಗಿದೆ. ಇದನ್ನು ಗಮನಿಸಿದ ಕಾರು ಚಾಲಕ ಕೆಳಗಿಳಿದಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಈ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೇಸ್ ದಾಖಲಾಗಿದೆ.

Read More

ಹಾಸನ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದ್ದು, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ಆರೋಪಿಯೊಬ್ಬ ತನ್ನ ತಾಯಿಯನ್ನೇ ಕೊಲೆ ಮಾಡಲು ಪ್ರಯತ್ನಿಸಿರುವ ಘಟನೆ ನಡೆದಿದೆ. ಕಾರಣ 40 ವರ್ಷ ಆದ್ರೂ ತಾಯಿ ಮದ್ವೆ ಮಾಡಿಲ್ಲ ಎಂದು ಪಾಪಿ ಪುತ್ರ ಈ ಕೃತ್ಯ ಎಸಗಿದ್ದಾನೆ. ಹೌದು 40 ವರ್ಷ ವಯಸ್ಸಾದರೂ ಹೆತ್ತ ತಾಯಿ ಮದುವೆ ಮಾಡಲಿಲ್ಲ ಅಂತ ಆಕೆಯೊಂದಿಗೆ ಜಗಳವಾಡಿ ಪುತ್ರನೇ ಕೊಲೆ ಮಾಡಲು ಪ್ರಯತ್ನ ಮಾಡಿರುವ ಆರೋಪ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ಕೇಳಿಬಂದಿದೆ. ಉಮಾಶಂಕರ್ (40) ತನ್ನ ತಾಯಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಪ್ರಯತ್ನ ಮಾಡಿರುವ ಆರೋಪಿ. ತಾಯಿ ಗಂಗಮ್ಮ ಇದೀಗ ಸಾವು ಬದುಕಿನ ಮಧ್ಯ ಹೋರಾಡುತ್ತಿದ್ದಾರೆ. ಗಂಗಮ್ಮ ತನ್ನ ಮಗನಿಗೆ ಮದುವೆ ಮಾಡಲು ಸಾಕಷ್ಟು ಕಡೆ ವಧುವನ್ನು ನೋಡಲು ಮುಂದಾಗಿದ್ದರು. ಆದರೆ, ಕಳೆದ ವರ್ಷ ನಡೆದ ಕುಂಭಮೇಳಕ್ಕೆ ಉಮಾಶಂಕರ್ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳಿ ವಾಪಸ್ ಬರುವಾಗ ಅಪಘಾತ ನಡೆದಿತ್ತು. ಇದರಿಂದಾಗಿ ಅವರ ಹೊಟ್ಟೆ ಮತ್ತು…

Read More