Subscribe to Updates
Get the latest creative news from FooBar about art, design and business.
Author: kannadanewsnow05
ಬಾಗಲಕೋಟೆ : ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಈಗಾಗಲೇ ದೊಡ್ಡ ದೊಡ್ಡ ಕಾಂಗ್ರೆಸ್ ಮುಖಂಡರನ್ನು ಅಮಾನತುಗೊಳಿಸಲಾಗಿದೆ. ಅದರ ಬೆನ್ನಲ್ಲೆ ಬಾಗಲಕೋಟೆಯಲ್ಲೂ ಕೂಡ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ, ಮೂವರು ಕಾಂಗ್ರೆಸ್ ಮುಖಂಡರನ್ನು ಅಮಾನತುಗೊಳಿಸಲಾಗಿದೆ. ಹೌದು ದಾವಣಗೆರೆ ಆಯ್ತು ಇದೀಗ ಬಾಗಲಕೋಟೆಯಲ್ಲಿ ಅಮಾನತು ಶಿಕ್ಷೆ ಮುಂದುವರೆದಿದ್ದು, ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಕಮತಗಿ ಪಟ್ಟಣದ ಮೂರು ಕಾಂಗ್ರೆಸ್ ಮುಖಂಡರನ್ನು ಅಮಾನತುಗೊಳಿಸಲಾಗಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಕಮತಗಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಚರಂತಿಮಠ ಅವರಿಗೆ ಬೆಂಬಲ ನೀಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಮತ್ತು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ್, ಕಮತಗಿ ಪಟ್ಟಣ ಪಂಚಾಯತ್ ಸದಸ್ಯರಾದ ರಮೇಶ್ ಜಮಖಂಡಿ ಹಾಗೂ ಗುರುಲಿಂಗ ಪಾಟೀಲ್ ಸೇರಿದಂತೆ ಮೂವರು ಮುಖಂಡರನ್ನು ಅಮಾನತುಗೊಳಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಂಜಯ್ಯಮಠ ಅವರು ಈ ಕ್ರಮ ಕೈಗೊಂಡಿದ್ದಾರೆ. ಕಾರಣ ಕೇಳಿ ಮೂವರಿಗೂ ನಂಜಯ್ಯನ ಮಠ ಅವರು ನೋಟೀಸ್ ನೀಡಿದ್ದರು.…
ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ ವಿನಯ್ ಕುಲಕರ್ಣಿ ಹೈಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ವಿಭಾಗಿಯ ಪೀಠದಲ್ಲಿ ವಿಚಾರಣೆ ನಡೆಯಲಿದೆ ಶಿಕ್ಷೆ ಅಮಾನತ್ತಿನಲ್ಲಿ ಇಟ್ಟು ಜಾಮಿನಿ ನೀಡಲು ಕೋರಿಕೆ ಮಾಡಿದ್ದು, ದೋಷಿಯಲ್ಲಿರುವ ತೀರ್ಪಿಗೂ ವಿನಯ ಕುಲಕರಣೆ ಅರ್ಜಿ ಸಲ್ಲಿಸಿದ್ದಾರೆ. ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಅವರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ಪ್ರಮುಖ ಅಂಶಗಳು ಇಲ್ಲಿವೆ ಪ್ರಕರಣದ ಹಿನ್ನೆಲೆ ಮತ್ತು ಇತ್ತೀಚಿನ ಬೆಳವಣಿಗೆ ಶಿಕ್ಷೆ ಪ್ರಕಟ: ಏಪ್ರಿಲ್ 15, 2026 ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ದೋಷಿಗಳು ಎಂದು ತೀರ್ಪು ನೀಡಿತ್ತು. ತದನಂತರ ಏಪ್ರಿಲ್ 17 ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಜೀವಾವಧಿ…
ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧೆ ರಜತ್ ಕಿಶನ್ ಮತ್ತೆ ಪುಂಡಾಟ ಮೆರೆದಿದ್ದಾನೆ. ಪೆಟ್ರೋಲ್ ಬಾಂಬ್ ಮಾದರಿಯ ಸ್ಫೋಟಿಸಿ ರಿಲ್ಸ್ ಶೂಟ್ ಮಾಡಿದ್ದು, ವಿಡಿಯೋ ಕವರ್ನಲ್ಲಿ ಪೆಟ್ರೋಲ್ ಹಾಕಿ ಸ್ಪೋಟಿಸಿ ವಿಡಿಯೋ ಶೂಟ್ ಮಾಡಿದ್ದಾನೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಒಂದು ವಿಡಿಯೋ ವೈರಲ್ ಆಗಿದೆ. ಎಲ್ಲಿ ಯಾವಾಗ ಶೂಟ್ ಮಾಡಲಾಯಿತು ಎನ್ನುವ ಮಾಹಿತಿ ಇಲ್ಲ ಮುಂಜಾಗ್ರತ ಕ್ರಮ ಇಲ್ಲದೆ ಸ್ಪೋಟಗೊಳಿಸಿದ್ದಾನೆ. ಏನಾದರು ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂದು ಇದೀಗ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.ರಜತ್ ಕಿಶನ್ ಇನ್ಸ್ಟಾಗ್ರಾಮ್ ಅಲ್ಲಿ ನಿನ್ನೆ ಒಂದು ರೀಲ್ಸ್ ಪೋಸ್ಟ್ ಮಾಡಿದ್ದು, ಆ ಒಂದು ವಿಡಿಯೋದಲ್ಲಿ ಕ್ಯಾಪ್ಶನ್ ನಲ್ಲಿ ಇದು ಸುಮ್ಮನೆ ತಮಾಷೆಗೆ ವಿಡಿಯೋ ಶೂಟ್ ಮಾಡಿದ್ದು ಇದಕ್ಕೂ ಕೇಸ್ ಹಾಕಬೇಡರಪ್ಪ ಎಂದು ರಜತ್ ಕಿಶನ್ ಅವರು ಬರೆದುಕೊಂಡಿದ್ದಾರೆ. ಇದೀಗ ಆ ಒಂದು ವಿಡಿಯೋ ಹಾಗೂ ಅವರು ಬರೆದಿರುವ ಕ್ಯಾಪ್ಷನ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಈ ಒಂದು ವಿಡಿಯೋದಲ್ಲಿ ಕೆಜಿಎಫ್ ನಲ್ಲಿ…
ಉತ್ತರಕನ್ನಡ : ಬೆಂಗಳೂರು, ಚಿಕ್ಕಮಂಗಳೂರು, ಹಾಸನ, ಮೈಸೂರು, ಮಂಡ್ಯ ಸೇರಿದಂತೆ ಈ ಭಾಗಗಳಲ್ಲಿ ಹೆಚ್ಚು ಚಿರತೆ, ಹುಲಿಗಳು ಪ್ರತ್ಯಕ್ಷ ಆಗಿರುವ ಪ್ರಕರಣಗಳು ನಡೆದಿದ್ದವು. ಆದರೆ ಇದೀಗ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಕುಡ್ಲೆ ಕಡಲತೀರದ ರಸ್ತೆಯಲ್ಲಿ ಚಿರತೆಯೊಂದು ಪ್ರತ್ಯಕ್ಷ ಆಗಿದೆ. ಹೌದು ಉತ್ತರ ಕನ್ನಡ ಜಿಲ್ಲೆಯ ಕುಮಟ ತಾಲೂಕಿನ ಗೋಕರ್ಣದ ಕುಡ್ಲೆ ಕಡಲ ತೀರದಲ್ಲಿ ಪ್ರವಾಸಿಗರು ಓಡಾಡುವ ಸಮುದ್ರ ತೀರದ ರಸ್ತೆಯ ಬಳಿ ಚಿರತೆ ಒಂದು ಪ್ರತ್ಯಕ್ಷವಾಗಿದೆ. ಚಿರತೆ ಓಡಾಟ ಕಂಡು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ಹಳದಿ ಈ ಒಂದು ಕಡಲೇ ತೀರಕ್ಕೆ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಾರೆ ಚಿರತೆ ಓಡಾಡಿರುವ ದೃಶ್ಯ ಕಂಡು ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.
ಬೆಂಗಳೂರು : ಐಪಿಎಲ್ ಬ್ಲ್ಯಾಕ್ ಟಿಕೆಟ್ ದಂಧೆಕೋರರಿಗೆ ಪೊಲೀಸರು ಇದೀಗ ಬಿಸಿ ಮುಟ್ಟಿಸಿದ್ದು ಕಳೆದ ಒಂದು ತಿಂಗಳಲ್ಲಿ ಇದುವರೆಗೂ 17 ಕೇಸುಗಳು ದಾಖಲಾಗಿವೆ. ಇದುವರೆಗೆ ಬ್ಲಾಕ್ ಟಿಕೆಟ್ ಗಳ ಮಾರಾಟ ಸಂಬಂಧ ಪೊಲೀಸರು 17 ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಲ್ಲದೆ 17 ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 24 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ 16ಕೇಸ್ ದಾಖಲಾಗಿದ್ದರೆ, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಕೇಸ್ ದಾಖಲಾಗಿದೆ. ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ 5 ಪಂದ್ಯಗಳಲ್ಲಿ ಪೊಲೀಸರು 37 ಟಿಕೆಟ್ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ ಎಂ. ಹಾಕೆ ಈ ಒಂದು ಮಾಹಿತಿ ನೀಡಿದ್ದಾರೆ ಕಬ್ಬನ್ ಪಾರ್ಕ್ ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ಈ ಕುರಿತು ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.
ಬೆಂಗಳೂರಲ್ಲಿ ಪ್ಲಾಸ್ಟಿಕ್ ಗೋಡೌನ್ನಲ್ಲಿ ಅಗ್ನಿ ಅವಘಡ- ಪಿಜಿ ಕಟ್ಟಡ ಹಾರಿ ಜೀವ ಉಳಿಸಿಕೊಂಡ ಯುವತಿಯರು | Video Viral
ಬೆಂಗಳೂರು : ಬೆಂಗಳೂರಿನಲ್ಲಿ ಎಲ್ಇಡಿ ಬ್ಯಾನರ್ ಗೊಡೌನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪಕ್ಕದಲ್ಲಿದ್ದ ಪಿಜಿಯಲ್ಲಿ ವಾಸವಿದ್ದ 50 ಯುವತಿಯವರು ನಾಲ್ಕು ಅಂತಸ್ತಿನ ಬಿಲ್ಡಿಂಗ್ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಎಲ್ಲ ಯುವತಿಯರು ಬಚಾವ್ ಆಗಿದ್ದಾರೆ. ಪ್ರಾಣ ಲೆಕ್ಕಿಸದೆ ಯುವತಿಯರು ಬಿಲ್ಡಿಂಗ್ ಮೇಲಿಂದ ಜಿಗಿದಿದ್ದಾರೆ. ಪ್ರಾಣ ಉಳಿಸಿಕೊಳ್ಳುವುದಕ್ಕಾಗಿ ಬಿಲ್ಡಿಂಗ್ ಮೇಲಿಂದ ಜಿಗಿದಿರುವ ವಿಡಿಯೋ ಇದೀಗ ವೈರಲ್ ಆಗಿದೆ. LED ಬ್ಯಾನರ್ ಇರುವ ಗೊಡೌನ್ಗೆ ಬೆಂಕಿ ವ್ಯಾಪಿಸುತ್ತಿದ್ದಂತೆಯೇ ಪಿಜಿಯಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಯುವತಿಯರು ಬಿಲ್ಡಿಂಗ್ ಮೇಲಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಒಂದು ಅಗ್ನಿ ಅವಘಡ ಸಂಭವಿಸಿತ್ತು. ಮೊನ್ನೆ ರಾತ್ರಿ ಎಲ್ಇಡಿ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಒಂದು ಅಂಗಡಿ ಪಕ್ಕದಲ್ಲಿ ಒಂದು ಪಿಜಿಗು ಬೆಂಕಿ ವ್ಯಾಪಿಸಿತ್ತು. ನೋಡುತ್ತಿದ್ದಂತೆ ಪಿಜಿಗು ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡಿತ್ತು . ಪಿಜಿ ಕಟ್ಟಡದಿಂದ ಜಿಗಿದು ಯುವತಿಯರು ಪ್ರಾಣ…
ಸುಮ್ನೆ ತಮಾಷೆಗೆ ವಿಡಿಯೋ ಮಾಡಿದ್ದು ಇದಕ್ಕೂ ಕೇಸ್ ಹಾಕ್ಬೇಡ್ರಪ್ಪೋ : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಪೋಸ್ಟ್ ವೈರಲ್!
ಬೆಂಗಳೂರು : ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರು ಸಾರ್ವಜನಿಕವಾಗಿ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ 2025ರ ಏಪ್ರಿಲ್ನಲ್ಲಿ ಬಂಧನಕ್ಕೊಳಗಾಗಿದ್ದರು. ಅದಾದ ಬಳಿಕ ಇತ್ತೀಚಿಗೆ ಮತ್ತೊರ್ವ ಬಿಗ್ ಬಾಸ್ ಸ್ಪರ್ಧಿ ಡಾಗ್ ಸತೀಶ್ ಗೆ ಬೆದರಿಕೆ ಪ್ರಕರಣದಲ್ಲಿ ರಜತ್ ಕಿಶನ್ ವಿರುದ್ಧ ಎಫ್ಐಆರ್ ಸಹ ದಾಖಲಾಗಿತ್ತು. ಇದೀಗ ರಜತ್ ಕಿಶನ್ ಇನ್ಸ್ಟಾಗ್ರಾಮ್ ಅಲ್ಲಿ ನಿನ್ನೆ ಒಂದು ರೀಲ್ಸ್ ಪೋಸ್ಟ್ ಮಾಡಿದ್ದು, ಆ ಒಂದು ವಿಡಿಯೋದಲ್ಲಿ ಕ್ಯಾಪ್ಶನ್ ನಲ್ಲಿ ಇದು ಸುಮ್ಮನೆ ತಮಾಷೆಗೆ ವಿಡಿಯೋ ಶೂಟ್ ಮಾಡಿದ್ದು ಇದಕ್ಕೂ ಕೇಸ್ ಹಾಕಬೇಡರಪ್ಪ ಎಂದು ರಜತ್ ಕಿಶನ್ ಅವರು ಬರೆದುಕೊಂಡಿದ್ದಾರೆ. ಇದೀಗ ಆ ಒಂದು ವಿಡಿಯೋ ಹಾಗೂ ಅವರು ಬರೆದಿರುವ ಕ್ಯಾಪ್ಷನ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಈ ಒಂದು ವಿಡಿಯೋದಲ್ಲಿ ಕೆಜಿಎಫ್ ನಲ್ಲಿ ನಟ ಯಶ್ ಅವರ ಡೈಲಾಗ್ ಬಳಸಿ ರಿಲ್ಸ್ ಮಾಡಿದ್ದು ರಜತ್ ಬೈಕ್ ಮೇಲೆ ಎಂಟ್ರಿ ಕೊಡುವ ದೃಶ್ಯದಲ್ಲಿ ಹಿಂದೆ ಬಾಂಬ್ ಬ್ಲಾಸ್ಟ್ ಆಗೋ ರೀತಿ…
ಬೆಂಗಳೂರು : ವಿದ್ಯುತ್ ಗ್ರಾಹಕರಿಗೆ ಇಂಧನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ವಿದ್ಯುತ್ ಬಿಲ್ನಲ್ಲಿನ ಹೆಸರು ಬದಲಾವಣೆ ಈಗ ಮತ್ತಷ್ಟು ಸುಲಭಗೊಂಡಿದೆ. ಮನೆಯಲ್ಲೇ ಕುಳಿತುಕೊಂಡು ವಿದ್ಯುತ್ ಬಿಲ್ನಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಬಹುದು. ಹೌದು ಇಂಧನ ಇಲಾಖೆ ಹೊಸ ಲಿಂಕ್ ಬಿಡುಗಡೆ ಮಾಡಿದ್ದು, ಹೊಸ ಆನ್ಲೈನ್ ಲಿಂಕ್ ಮೂಲಕ ಹೆಸರು ಬದಲಾವಣೆ ಮಾಡಿಕೊಳ್ಳಬಹುದು. ಈಗಾಗಲೇ ಐದು ಸಾವಿರ ಗ್ರಾಹಕರು ಈ ಸೌಲಭ್ಯ ಪಡೆದುಕೊಂಡಿದ್ದಾರೆ. ಬೇರೆ ಹೆಸರಿನಲ್ಲಿ ಇರುವ ಬಿಲ್ಡಿಂಗ್ ಖರೀದಿ ಮಾಡಿ ವಿದ್ಯುತ್ ಹೆಸರು ಬದಲಾವಣೆಗೆ ಬೆಸ್ಕಾಂ ಕಚೇರಿಗೆ ಅಲೆಯಬೇಕಿತ್ತು. ಆದರೆ ಈಗ ಹೊಸ ಲಿಂಕ್ ಮೂಲಕ ವಿದ್ಯುತ್ ಬಿಲ್ನಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಬಹುದು. ಈ ಹಿಂದೆ ವಿದ್ಯುತ್ ಬಿಲ್ನಲ್ಲಿ ಹೆಸರು ಬದಲಾವಣೆ (Name Transfer) ಮಾಡಬೇಕೆಂದರೆ ಅಸಿಸ್ಟೆಂಟ್ ಇಂಜಿನಿಯರ್ ಕಚೇರಿಗೆ ಹೋಗಿ, ಸಾಲುಗಟ್ಟಿ ನಿಂತು ಅರ್ಜಿ ಸಲ್ಲಿಸಬೇಕಿತ್ತು. ಆದರೆ ಈಗ ನಿಮ್ಮ ವ್ಯಾಪ್ತಿಯ ವಿದ್ಯುತ್ ಸರಬರಾಜು ಕಂಪನಿಗಳ (BESCOM, MESCOM, CHESCOM, HESCOM, GESCOM) ಅಧಿಕೃತ ಪೋರ್ಟಲ್ ಮೂಲಕ ಇದನ್ನು ಸುಲಭವಾಗಿ…
ಬೆಂಗಳೂರು : ನಾಲ್ಕು ವರ್ಷಗಳ ಹಿಂದೆ ಮಂಗಳೂರಿನ ಹೊರವಲಯದಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಈ ಸಂಬಂಧ ಎನ್ಐಎ ವಿಶೇಷ ನ್ಯಾಯಾಲಯ ಇದೀಗ ಮೊಹಮ್ಮದ್ ಶಾಲಿತಿಗೆ 10 ವರ್ಷಗಳ ಕಾಲ ಕಡಿಮೆ ಶಿಕ್ಷೆ ಪ್ರಕಟಿಸಿ ಬೆಂಗಳೂರಿನ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಬಾಂಬ್ ಸ್ಪೋಟ ಎಸಗಿರುವುದಾಗಿ ಶಾರೀಕ್ ಕಳೆದ ಡಿಸೆಂಬರ್ನಲ್ಲಿ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿದ್ದ. ಮೂರು ತಿಂಗಳ ಬಳಿಕ ನ್ಯಾಯಾಲಯ ಆರೋಪಿಯ ಅರ್ಜಿಯನ್ನು ಪುರಸ್ಕರಿಸಿತ್ತು. ಬಳಿಕ ವಾದ-ಪ್ರತಿವಾದ ನಡೆದಿತ್ತು. ಗುರುವಾರ ವಿಚಾರಣೆ ನಡೆಸಿದ ಕೋರ್ಟ್, ತಾಂತ್ರಿಕ ಕಾರಣಗಳಿಂದಾಗಿ ಅಂತಿಮ ತೀರ್ಪನ್ನು ಏ.25ಕ್ಕೆ ಮುಂದೂಡಿತ್ತು. ಇದೀಗ ಎಂದು ಬೆಂಗಳೂರಿನ ವಿಶೇಷ ನ್ಯಾಯಾಲಯ ಮಹಮ್ಮದ್ ಶಾರಿಕ್ ಗೆ 10 ವರ್ಷ ಕಠಿಣ ಶಿಕ್ಷೆ ಪ್ರಕಟಿಸಿದೆ. ಇನ್ನು ಕೋರ್ಟ್ ತೀರ್ಪು ಪ್ರಕಟಿಸುವ ಮುನ್ನ ಆರೋಪಿ ಮೊಹಮ್ಮದ್ ಶಾರಿಕ್ ನನಗೆ ಒಬ್ಬ ಮಗಳಿದ್ದಾಳೆ ಮನೆಯಲ್ಲಿ ದುಡಿಯುವವನು ನಾನೇ. ಹೀಗಾಗಿ ಶಿಕ್ಷೆ ಪ್ರಮಾಣ ಕಡಿಮೆ ಮಾಡುವಂತೆ ಶಾರಿಕ್…
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪ್ರಿಯಕರನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮದುವೆಯಾದರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತ ಸ್ನೇಹಿತರ ಬಳಿ ಹೇಳುತ್ತಿದ್ದ. ಹೀಗಾಗಿ ಅವಮಾನ ಸಹಿಸಲಾಗದೇ ಬೆಂಕಿ ಹಚ್ಚಿದೆ ಎಂದು ಪ್ರೇಯಸಿ ತನಿಖೆ ವೇಳೆ ಬಾಯ್ಬಿಟ್ಟಿದ್ದಾಳೆ. ಕಿರಣ್ನನ್ನು ನಾನು ತುಂಬಾ ಇಷ್ಟಪಡುತ್ತಿದೆ. ಆದರೆ ಕಿರಣ್ ಮಾತ್ರ ನನ್ನನ್ನು ಭೋಗದ ವಸ್ತುವನ್ನಾಗಿ ಅಷ್ಟೇ ನೋಡುತ್ತಿದ್ದ. ಸ್ನೇಹಿತರ ಬಳಿ ನನ್ನ ಸೌಂದರ್ಯದ ಬಗ್ಗೆ ನಿತ್ಯ ಅವಮಾನಿಸುತ್ತಿದ್ದ. ಅಲ್ಲದೇ ಮದುವೆಯಾದರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತ ಸ್ನೇಹಿತರ ಬಳಿ ಹೇಳುತ್ತಿದ್ದ. ಇತ್ತೀಚಿಗೆ ಕಂಡ ಕಂಡವರ ಮುಂದೆ ಅವಮಾನಿಸುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದ್ದ. ಮದುವೆ ಅಂತ ಬಂದಾಗ ಜಾತಿಯ ಲೇಪನ ಮಾಡುತ್ತಿದ್ದ. ನೀನು ಬೇರೆ ಜಾತಿಯಾಗಿರುವ ಕಾರಣ ನಮ್ಮ ಮನೆಯಲ್ಲಿ ಮದುವೆಗೆ ಒಪ್ಪಲ್ಲ ಎಂದು ಹೇಳಿಕೊಂಡು ಓಡಾಡುತ್ತಿದ್ದ. ನಾನು ಲವ್ ಪ್ರಪೋಸ್ ಮಾಡಿದಾಗ ಒಪ್ಪಿಕೊಂಡು ನನ್ನನ್ನು ಹೇಗೆ ಬೇಕು ಹಾಗೇ ಬಳಿಸಿಕೊಂಡಿದ್ದಾನೆ. ಆಗ ಜಾತಿ ಮಾತು…













