Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಅಹ್ಮದಾಬಾದ್: ಕ್ರಿಕೆಟ್ ಪ್ರೇಮಿಗಳ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭರ್ಜರಿ ಜಯ ಸಾಧಿಸಿದೆ. ಅಹ್ಮದಾಬಾದ್ನ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್ಸಿಬಿ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿಯುವ ಮೂಲಕ ಬೆಂಗಳೂರು ತಂಡ ಇತಿಹಾಸ ನಿರ್ಮಿಸಿದೆ. ಕೊಹ್ಲಿ ಬ್ಯಾಟಿಂಗ್ ಅಬ್ಬರಕ್ಕೆ ನಡುಗಿದ ಗುಜರಾತ್ ಪಂದ್ಯದ ಪ್ರಮುಖ ಆಕರ್ಷಣೆಯಾಗಿದ್ದು ಕಿಂಗ್ ವಿರಾಟ್ ಕೊಹ್ಲಿ ಅವರ ಅಬ್ಬರದ ಬ್ಯಾಟಿಂಗ್. ಆರಂಭದಿಂದಲೇ ಗುಜರಾತ್ ಬೌಲರ್ಗಳ ವಿರುದ್ಧ ಸಿಡಿಲಮರಿಗಳಂತೆ ಮುನ್ನುಗ್ಗಿದ ಕೊಹ್ಲಿ, ಮೈದಾನದ ಮೂಲೆ ಮೂಲೆಗೂ ಬೌಂಡರಿ, ಸಿಕ್ಸರ್ಗಳ ಮಳೆ ಹರಿಸಿದರು. ಕೊಹ್ಲಿ ಅವರ ಈ ಭರ್ಜರಿ ಆಟಕ್ಕೆ ಗುಜರಾತ್ ಟೈಟಾನ್ಸ್ ತಂಡದ ಬೌಲಿಂಗ್ ವಿಭಾಗವು ಸಂಪೂರ್ಣವಾಗಿ ಅಕ್ಷರಶಃ ನಡುಗಿಹೋಯಿತು. ಅವರ ಈ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನವೇ ಆರ್ಸಿಬಿ ತಂಡ ಸುಲಭವಾಗಿ ಗೆಲುವಿನ ದಡ ಸೇರಲು ಪ್ರಮುಖ ಕಾರಣವಾಯಿತು. ಡೊಳ್ಳಿನ ಸೌಂಡ್ಗೆ ವಿರಾಟ್…
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಕೊನೆಗೂ ಅದ್ಭುತ ಪ್ರತಿಫಲ ಸಿಕ್ಕಿದೆ. ನಿನ್ನೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅಂತಿಮ ಜಿದ್ದಾಜಿದ್ದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಗುಜರಾತ್ ತಂಡದ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದೆ. ಈ ರೋಮಾಂಚಕ ಗೆಲುವಿನೊಂದಿಗೆ ಆರ್ಸಿಬಿ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡು ಇತಿಹಾಸ ಸೃಷ್ಟಿಸಿದೆ. ಅಹಮದಾಬಾದ್ನ ಕ್ರೀಡಾಂಗಣದಲ್ಲಿ ನೆರೆದಿದ್ದ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ಉಭಯ ತಂಡಗಳ ನಡುವೆ ಹೈ-ವೋಲ್ಟೇಜ್ ಪಂದ್ಯ ಜರುಗಿತು. ಆರಂಭದಿಂದಲೇ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದ ಬೆಂಗಳೂರು ತಂಡವು, ಬಲಿಷ್ಠ ಗುಜರಾತ್ ಪಡೆಯನ್ನು ಧೂಳೀಪಟ ಮಾಡಿತು. ಈ ಬ್ಯಾಕ್-ಟು-ಬ್ಯಾಕ್ ಚಾಂಪಿಯನ್ಸ್ ಪಟ್ಟವು ಆರ್ಸಿಬಿ ಅಭಿಮಾನಿಗಳ ಸಂಭ್ರಮವನ್ನು ಮುಗಿಲು ಮುಟ್ಟುವಂತೆ ಮಾಡಿದ್ದು, ಇಡೀ ಕರ್ನಾಟಕವೇ ವಿಜಯೋತ್ಸವದಲ್ಲಿ ಮುಳುಗಿದೆ. ಜಯದ ಸಂಭ್ರಮ ಹಾಗೂ ಬಹುಮಾನದ ವಿವರ: ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಸಿಸಿಐ ಬರೋಬ್ಬರಿ 20…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ದಕ್ಷಿಣ ಒಳನಾಡಿನ ಒಟ್ಟು ಏಳು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಈ ಹಿನ್ನೆಲೆಯಲ್ಲಿ ಇಲಾಖೆಯು ಆಯಾ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಭಾರಿ ಮಳೆಯಾಗುವ ಬಲವಾದ ಸಂಭವವಿದೆ. ಮಳೆಯೊಂದಿಗೆ ಈ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕಾಗಿ ವಿನಂತಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಬಿರುಗಾಳಿ ಸಹಿತ ಹಗುರ ಮಳೆ ದಕ್ಷಿಣ ಒಳನಾಡು…
ಬೆಂಗಳೂರು : ನಿನ್ನೆ ಗುಜರಾತ್ನ ಅಹ್ಮದಾಬಾದ್ ನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡವನ್ನು ಮಣಿಸಿ ಸತತ ಎರಡನೇ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಆರ್ಸಿಬಿ ತಂಡವನ್ನು ವಿಜಯ್ ಮಲ್ಯ ಕೊಂಡಾಡಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಆರ್ಸಿಬಿ ನಿನಗೆ ಅಭಿನಂದನೆಗಳು. ಸತತ ಎರಡು ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದೀರಿ. ನಮ್ಮ ದೊಡ್ಡ ಸಿಂಹಗಳೇ ಜೋರಾಗಿ ಘರ್ಜಿಸಿ ಎಲ್ಲರೂ ಹೆಮ್ಮೆಪಡುವಂತೆ ಮಾಡಿದ್ದೀರಿ ಎಂದು ಹಾಡಿ ಹೊಗಳಿದ್ದಾರೆ. https://twitter.com/TheVijayMallya/status/2061144862053838975?t=E09JFn1r1aLL6zxRORqNIQ&s=19
ಬೆಳಗಾವಿ: ʻಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿʼ ಎಂಬ ನಕಲಿ ಫೇಸ್ಬುಕ್ ಖಾತೆಯಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಎಂಬವರು ದೂರು ದಾಖಲಿಸಿದ್ದಾರೆ. ʻಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿʼ ಎಂಬ ನಕಲಿ ಫೇಸ್ ಬುಕ್ ಖಾತೆಯಲ್ಲಿ “ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ವಿರುದ್ದ 37 ಶಾಸಕರಿಂದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಹಿ ಸಂಗ್ರಹ ಮಾಡಲಾಗಿದೆ” ಎಂಬ ಗಂಭೀರ ಆರೋಪ ಮಾಡಲಾಗಿದೆ. ರಾಜಕೀಯ ವಲಯದಲ್ಲಿ ಇದು ದೊಡ್ಡ ಮಟ್ಟದ ಚರ್ಚೆ ಹುಟ್ಟು ಹಾಕಿತ್ತು. ಆದರೆ, ಈ ಆರೋಪವನ್ನು ಸ್ವತಃ ಮಾಜಿ ಸಚಿವ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದರು. ಹೀಗಾಗಿ ಸತೀಶ್ ಅವರ ವಿರುದ್ಧ ಇಲ್ಲಸಲ್ಲದ ಅಪವಾದ ಹೊರಿಸಿ ಅವರ ಹೆಸರು ಹಾಳು ಮಾಡಲು ನಕಲಿ ಫೇಸ್ಬುಕ್ ಖಾತೆಯಲ್ಲಿ ಸಂಚು ರೂಪಿಸಲಾಗಿದೆ ಎಂದು…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಕಸರತ್ತು ತೀವ್ರಗೊಂಡಿದ್ದು, ಇಂದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಜಂಟಿಯಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 12:30ರ ಸುಮಾರಿಗೆ ಇಬ್ಬರೂ ನಾಯಕರು ರಾಷ್ಟ್ರ ರಾಜಧಾನಿಗೆ ತಲುಪಲಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ನೂತನ ಸಂಪುಟ ರಚನೆ ಹಾಗೂ ಪ್ರಮುಖ ರಾಜಕೀಯ ವಿಚಾರಗಳ ಕುರಿತು ಈ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ. ಮುಖ್ಯಮಂತ್ರಿಗಳೊಂದಿಗೆ ಮೊದಲ ಹಂತದಲ್ಲಿ ಎಷ್ಟು ಸಚಿವರು ಪ್ರಮಾಣವಚನ ಸ್ವೀಕರಿಸಬೇಕು ಎಂಬ ಗೊಂದಲಕ್ಕೆ ಈ ಭೇಟಿಯ ಮೂಲಕ ತೆರೆ ಬೀಳುವ ಸಾಧ್ಯತೆಯಿದೆ. ಹೈಕಮಾಂಡ್ ಈಗಾಗಲೇ ಜಿಲ್ಲಾವಾರು ಮತ್ತು ಸಮುದಾಯವಾರು ಆಕಾಂಕ್ಷಿಗಳ ಸಂಪೂರ್ಣ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಕಾಯುತ್ತಿದೆ. ಎಲ್ಲಾ ಸಮುದಾಯಗಳಿಗೂ ಸಮಾನ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಹೈಕಮಾಂಡ್ ನಾಯಕರು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಜಾತಿ ಸಮೀಕರಣದ ಜೊತೆಗೆ ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಳ್ಳುವುದು ಹೈಕಮಾಂಡ್ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಾಗಿ, ಪ್ರಾದೇಶಿಕವಾರು ಸಚಿವ ಸ್ಥಾನ ಹಂಚಿಕೆ ಮಾಡಲು ನಾಯಕರು ಸೂಕ್ಷ್ಮವಾಗಿ ಪರಿಶೀಲನೆ ನಡೆಸುತ್ತಿದ್ದಾರೆ.…
ಬೆಂಗಳೂರು : ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು ಬಿಗಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಶುಭ ಕೋರಿದ್ದು, ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಆರ್ಸಿಬಿ ಪಂದ್ಯ ಆಯೋಜಿಸಿದೆ ಅನ್ಯಾಯ ಮಾಡಿದರು ಎಂದು ಅಸಮಾಧಾನ ಹೊರಹಾಕಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬೆಂಗಳೂರಿನಲ್ಲಿ ಆರ್ಸಿಬಿ ಪಂದ್ಯ ಆಯೋಜಿಸಿದೆ ಅನ್ಯಾಯ ಮಾಡಿದರು ಗುಜರಾತ್ ನಲ್ಲಿ ಫೈನಲ್ ಆಯೋಜನೆ ಮಾಡಿದ್ದಕ್ಕೆ ಡಿಕೆ ಶಿವಕುಮಾರ್ ಸಮಾಧಾನ ಹೊರಹಾಕಿದ್ದಾರೆ. ಆರ್ ಸಿ ಬಿ ಫೈನಲ್ ಮ್ಯಾಚ್ ಬೆಂಗಳೂರುನಲ್ಲಿ ಆಗಬೇಕಿತ್ತು. ರಾಜಕಾರಣ ಮಾಡಿದ್ದರು ಈ ವಿಚಾರವಾಗಿ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಆರ್ಸಿಬಿ ತಂಡ ಬಹಳ ಚೆನ್ನಾಗಿ ಆಡಿ ಕಪ್ ಗೆದ್ದಿದ್ದಾರೆ ಎಂದು ಇದೆ ಸಂದರ್ಭದಲ್ಲಿ ಶುಭ ಕೋರಿದರು. https://twitter.com/PTI_News/status/2061089790687379594?t=lNEXdfu9dVB8jVtbw5s0iA&s=19
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಕ್ರಿಕೆಟ್ ಜಗತ್ತಿನಲ್ಲಿ ಮತ್ತೊಮ್ಮೆ ಹೊಸ ಇತಿಹಾಸ ಸೃಷ್ಟಿಸಿದೆ. ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಆರ್ಸಿಬಿ, ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯಾವಳಿಯುದ್ದಕ್ಕೂ ಆರ್ಸಿಬಿ ಹುಡುಗರು ತೋರಿದ ಕೆಚ್ಚೆದೆಯ ಆಟಕ್ಕೆ ಎದುರಾಳಿ ತಂಡಗಳ ಬಳಿ ಯಾವುದೇ ಉತ್ತರವೇ ಇಲ್ಲದಂತಾಗಿತ್ತು. ಫೈನಲ್ ಪಂದ್ಯದಲ್ಲಿ ಮಿಂಚಿದ ತಾರೆಯರು ಇಂದಿನ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಆರ್ಸಿಬಿ ಆಟಗಾರರು ಸಂಘಟಿತ ಹೋರಾಟ ಪ್ರದರ್ಶಿಸಿದರು. ಪ್ರಮುಖವಾಗಿ ವಿರಾಟ್ ಕೋಹ್ಲಿ ಅವರ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ಹಾಗೂ ಬೌಲಿಂಗ್ನಲ್ಲಿ ರಸಿಕ್ ಧಾರ್ ಮತ್ತು ಭುವನೇಶ್ವರ್ ಕುಮಾರ್ ಅವರ ಮಾರಕ ದಾಳಿ ಪಂದ್ಯದ ದಿಕ್ಕನ್ನೇ ಬದಲಿಸಿತು. ಈ ಮೂವರ ಅತ್ಯದ್ಭುತ ಆಟವು ಕ್ರಿಕೆಟ್ ಪ್ರೇಮಿಗಳ ಮನಸ್ಸಿನಲ್ಲಿ ಬಹುಕಾಲ ನೆನಪಿನಲ್ಲಿ ಉಳಿಯುವಂತದ್ದಾಗಿದ್ದು, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು. ಸಿದ್ದರಾಮಯ್ಯ ಅಭಿನಂದನೆ ನಮ್ಮ ಆರ್ಸಿಬಿ ಮತ್ತೊಮ್ಮೆ ಐಪಿಎಲ್ ಚಾಂಪಿಯನ್…
ಮೈಸೂರು : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮಲಗನಕೆರೆ ಗೇಟ್ ಬಳಿ ಸಂಭವಿಸಿದೆ. ಮೃತರನ್ನು ಸುದೀಪ್ ನಾಯಕ್ (26) ಹಾಗು ರಾಜ ನಾಯಕ್ (30) ಎಂದು ತಿಳಿದುಬಂದಿದೆ. ಮೃತ ರಾಜ ನಾಯಕಗೆ ಆರು ತಿಂಗಳ ಹಿಂದೆ ಅಷ್ಟೇ ಮದುವೆಯಾಗಿತ್ತು ಎನ್ನಲಾಗಿದೆ. ಅಪಘಾತದ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ: ಪ್ರತಿಷ್ಠಿತ ಟೂರ್ನಿಯ ಫೈನಲ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅತ್ಯಂತ ಮಹತ್ವದ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಪ್ರಸಕ್ತ ಸೀಸನ್ನಲ್ಲಿ ತಂಡವು ಫೈನಲ್ ತಲುಪಲು ಕಾರಣವಾದ ಗೆಲುವಿನ ರಹಸ್ಯ ಹಾಗೂ ತಂಡದ ಒಳಗಿನ ವಾತಾವರಣ ಹೇಗಿತ್ತು ಎಂಬುದನ್ನು ಕೊಹ್ಲಿ ಮಾಧ್ಯಮಗಳ ಮುಂದೆ ಮುಕ್ತವಾಗಿ ಬಿಚ್ಚಿಟ್ಟಿದ್ದಾರೆ. ಒತ್ತಡ ಮುಕ್ತ ವಾತಾವರಣ “ಕಳೆದ ವರ್ಷ ತಂಡದಲ್ಲಿದ್ದ ವಿಪರೀತ ಒತ್ತಡ ಈ ಬಾರಿ ಆಟಗಾರರ ಮೇಲೆ ಇರಲಿಲ್ಲ.” ಎಂದು ಕೊಹ್ಲಿ ಹೇಳಿದ್ದಾರೆ. ಹಿಂದಿನ ಆವೃತ್ತಿಗಳಿಗೆ ಹೋಲಿಸಿದರೆ ಈ ಬಾರಿ ತಂಡವು ಯಾವುದೇ ಹೆಚ್ಚುವರಿ ಒತ್ತಡವನ್ನು ತಲೆಗೆ ಹಾಕಿಕೊಳ್ಳದೆ, ಅತ್ಯಂತ ನಿರಾಳವಾಗಿ ಅಖಾಡಕ್ಕಿಳಿದಿತ್ತು. ಈ ಮುಕ್ತ ವಾತಾವರಣವೇ ಆಟಗಾರರು ತಮ್ಮ ನೈಜ ಪ್ರದರ್ಶನವನ್ನು ಹೊರಹಾಕಲು ಪ್ರಮುಖ ಕಾರಣವಾಯಿತು ಎಂದು ಅವರು ವಿಶ್ಲೇಷಿಸಿದ್ದಾರೆ. ಸೋಲಿನಲ್ಲೂ ಕಾಯ್ದುಕೊಂಡ ಅಗ್ರಸ್ಥಾನ ಟೂರ್ನಿಯುದ್ದಕ್ಕೂ ತಂಡವು ಸ್ಥಿರ ಪ್ರದರ್ಶನ ನೀಡಿದೆ. ಕೆಲವು ಪಂದ್ಯಗಳಲ್ಲಿ ಹಿನ್ನಡೆ ಅನುಭವಿಸಿದರೂ, ತಂಡದ ರನ್ ರೇಟ್ ಮತ್ತು ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು…














