Subscribe to Updates
Get the latest creative news from FooBar about art, design and business.
Author: kannadanewsnow05
ಯಾದಗಿರಿ : ಯಾದಗಿರಿಯಲ್ಲಿ ಮಧ್ಯಾಹ್ನದ ಬಿಸಿ ಊಟ ಸೇವಿಸಿ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಯಾದಗಿರಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ನಡೆದಿದೆ. ಬೆಳಗುಂದಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿಬೇಳೆ ಬಾತ್ ಸೇವಿಸಿದ್ದರು. ಊಟ ಮಾಡಿದ ಕೆಲ ಹೊತ್ತಲ್ಲೇ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ವಾಂತಿ ಭೇದಿ ಕಾಣಿಸಿಕೊಂಡ ಹಿನ್ನೆಲೆ ತಕ್ಷಣ ವಿದ್ಯಾರ್ಥಿಗಳನ್ನು ಸೈದಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಚಿಕ್ಕಬಳ್ಳಾಪುರ : ಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಭೀಕರ ಹಬ್ಬದ ಸಂಭವಿಸಿದ್ದು, ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಒಂದು ಅಪಘಾತಕ್ಕೆ ಈಡಾಗಿದೆ. ಟ್ರಕ್ಕಿಗೆ ಖಾಸಗಿ ಸ್ಲಿಪ್ಪರ್ ಬಸ್ ಒಂದು ಡಿಕ್ಕಿ ಹೊಡೆಡಿದೆ. ಚಿಕ್ಕಬಳ್ಳಾಪುರದ ಅಗಲಗುರ್ಕಿ ಗ್ರಾಮದ ಬಳಿ ಈ ಒಂದು ಭೀಕರ ಬಘಾತ ಸಂಭವಿಸಿದ್ದು. 11 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿವೆ. ಬಸ್ನೊಳಗೆ ಸಿಲುಕಿದ್ದ ಶಿವಪ್ಪ ಎಂಬಾತನನ್ನು ತಕ್ಷಣ ರಕ್ಷಿಸಲಾಗಿದೆ. ಬಸ್ ಕ್ಲೀನರ್ ಸೇರಿದಂತೆ ಇಬ್ಬರಿಗೆ ಗಂಭೀರವಾದ ಗಾಯಳಾಗಿದ್ದು, ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನಿಂದ ಮಂತ್ರಾಲಯಕ್ಕೆ ಬಸ್ ತೆರಳುತ್ತಿತ್ತು. ಸುಗಮ ಸಂಸ್ಥೆಯ ಬಸ್ ಅಪಘಾತ ಆಗಿದ್ದು, ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿ ಷ್ಕರಣೆ(ಎಸ್ಐಆರ್)ಯ ಪೂರ್ವ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ಮುಂದಿನ ತಿಂಗಳಿಂದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗುವ ಸಾಧ್ಯತೆಯಿದೆ. ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿದೆ. ರಾಜ್ಯದಲ್ಲಿ ಎಸ್ಐಆರ್ಪೂರ್ವಭಾವಿ ಪ್ರಕ್ರಿಯೆಗೆ ಚುನಾವಣಾ ಆಯೋಗ ಕಳೆದ ಡಿಸೆಂಬರ್ ನಲ್ಲಿಯೇ ಚಾಲನೆ ನೀಡಿದೆ. ಕರ್ನಾಟಕದಲ್ಲಿ ಎಸ್ಐಆರ್ಗೆ ಪೂರ್ವಭಾವಿಯಾಗಿ 2002ರ ಮತ್ತು 2025ರ ಮತದಾರರ ಪಟ್ಟಿಯನ್ನು ಹೋಲಿಕೆ ಮಾಡಲಾಗುತ್ತಿದೆ. ರಾಜ್ಯದ 5.547 ಕೋಟಿ ಮತದಾರರ ಪೈಕಿ 3.05 ಕೋಟಿ ಮತದಾರರ ವಿವರಗಳು ತಾಳೆಯಾಗಿವೆ ಎಂದು ತಿಳಿದು ಬಂದಿದೆ. ಈಎಸ್ಐಆರ್ಪೂರ್ವಭಾವಿಪ್ರಕ್ರಿಯೆಯ ಭಾಗವಾಗಿಮತಗಟ್ಟೆ ಅಧಿಕಾರಿಗಳು ಮನೆ-ಮನೆಗೆಹೋಗಿಮತದಾರರ ವಿಳಾಸ ಪಟ್ಟಿ ಪರಿಶೀಲನೆ ನಡೆಸಲಿದ್ದಾರೆ. ಮೃತಪಟ್ಟವರು, ಬದಲಾದವರು. ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಹೊಂದಿರುವವರ ವಿವರವನ್ನು ಕಲೆ ಹಾಕುತ್ತಾರೆ. ಅರ್ಹ ದಾಖಲೆಗಳನ್ನು ಒದಗಿಸಿದವರು ಮತದಾರರ ಪಟ್ಟಿಯಲ್ಲಿ ಉಳಿಯುತ್ತಾರೆ. ಇದರಿಂದ ಅರ್ಹ ಮತದಾರರ ಸಂಖ್ಯೆ ಅಂದಾಜು ಸಿಗಲಿದೆ. ಈ ಮಾಸಾಂತ್ಯದ ವೇಳೆ ಎಸ್ಐಆರ್ ಪೂರ್ವ ಪ್ರಕ್ರಿಯೆ…
ಬೆಂಗಳೂರು : ರಾಜ್ಯದ ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಎನ್ನುವಂತೆ ಬಾಕಿ ಇದ್ದಂತ ಎರಡು ತಿಂಗಳ ಹಣವನ್ನು ಸರ್ಕಾರ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎರಡು ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ರಾಜಕೀಯದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ ಎಂಬುದಾಗಿ ಟೀಕಿಸಿದಂತ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಸಮನವಾಗಿ ತಲುಪುತ್ತಿವೆ ಎಂದರು. ಎಷ್ಟೋ ಜನರಿಗೆ ಗೃಹಲಕ್ಷ್ಮೀ ಹಣ ಬಂದಿದೆ. ಇದರಿಂದ ಮಹಿಳೆಯರ ಜೀವನ ಉತ್ತಮಗೊಂಡಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಜನರ ಜೀವನ ಉತ್ತಮಗೊಂಡಿದೆ ಎಂಬುದಾಗಿ ತಿಳಿಸಿದರು.
ಬೆಂಗಳೂರು : ಇಲಾಖೆಯವರು ಬಿಟ್ಟಿಯಾಗಿ ಯೋಜನೆಗಳನ್ನು ಹಾಕಿಕೊಳ್ಳುತ್ತಾರೆ. ಹಣ ವ್ಯರ್ಥ ಆಗುತ್ತಿದೆ. ಜನರಿಗೆ ಉಪಯೋಗ ಆಗುತ್ತಿಲ್ಲ. ಹೀಗಾಗಿ ಅನೇಕ ಸರ್ಕಾರದ ಯೋಜನೆಗಳು ವಿಫಲವಾಗುತ್ತಿವೆ ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್ ತಿಳಿಸಿದರು. ನಿನ್ನೆ ಗಾಂಧಿಭವನದಲ್ಲಿ ನಡೆದ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಅವಶ್ಯಕತೆ, ಸಾಕ್ಷ್ಯ ಮತ್ತು ಫಲಿತಾಂಶ ಆಧಾರಿತ ನೀತಿ ಹಾಗೂ ಯೋಜನೆ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಸರ್ವ ಶಿಕ್ಷಣ ಅಭಿಯಾನದಡಿ ಕಟ್ಟಿದ ಎಲ್ಲಾ ಶಾಲಾ ಕಟ್ಟಡಗಳು ಖಾಲಿ ಬಿದ್ದಿವೆ, ಅಲ್ಲಿ ವಿದ್ಯಾರ್ಥಿಗಳು ಸಹ ಇಲ್ಲ, ಶಿಕ್ಷಕರು ಮೊದಲೇ ಇಲ್ಲ. ನನ್ನ ಕ್ಷೇತ್ರದಲ್ಲಿ ನಾನೇ ಕೇಳೇ ಇಲ್ಲ, ನನಗೆ ಗೊತ್ತೂ ಇಲ್ಲ. ಆದರೆ ಒಂದು ಗ್ರಾಮದಲ್ಲಿ ಐದು ಕೋಟಿ ರೂಪಾಯಿ ಬಿಡುಗಡೆ ಮಾಡಿ ದೊಡ್ಡ ಹಾಸ್ಟೆಲ್ ಕಟ್ಟಲು ಹಣ ಮಂಜೂರಾಗಿದೆ. ಅಷ್ಟು ದೊಡ್ಡ ಹಾಸ್ಟೆಲ್ ಅಗತ್ಯನೂ ಇಲ್ಲ. ಇದೇ ರೀತಿ ಅನೇಕ ಕಡೆ ಹಾಸ್ಟೆಲನ್ನು ಕಟ್ಟಲಾಗಿದೆ. ಮಕ್ಕಳು ಅಲ್ಲಿ ಇಲ್ಲ. ಈ ರೀತಿ…
ಬೆಂಗಳೂರು : ರಾಜ್ಯ ಸರ್ಕಾರದ ಯೋಜನೆಗಳು ರಾಜ್ಯದ ಇನ್ನೂ ಕೆಲವಷ್ಟು ಜನರಿಗೆ ತಲುಪಿಲ್ಲ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ಇಷ್ಟೆಲ್ಲಾ ಯೋಜನೆಗಳಿದ್ದರೂ ಸಹ ಈವರೆಗೆ ಕೆಲವರಿಗೆ ಅವು ತಲುಪಿಲ್ಲ.ನನ್ನ ಬಳಿ ಅದರ ಅಂಕಿಅಂಶ ಇದೆ. ಈಗಲೂ ರಾಜ್ಯದಲ್ಲಿ ಕೆಲವರಿಗೆ ಯೋಜನೆ ತಲುಪಿಲ್ಲ. ಇದಕ್ಕೆ ಯಾರು ಜವಾವ್ದಾರರು?. ವಿಕೇಂದ್ರೀಕರಣ ವ್ಯವಸ್ಥೆ, ಆಡಳಿತ ಯಂತ್ರ, ಸಂಘ ಸಂಸ್ಥೆಗಳು ಇದರ ಹೊಣೆ ಹೊರಬೇಕು ಎಂದು ಅವರು ತಿಳಿಸಿದರು. ಕಳೆದ 75 ವರ್ಷದಿಂದ ಗ್ರಾಮೀಣಾಭಿವೃದ್ಧಿಗೆ ಲಕ್ಷಾಂತರ ರೂಪಾಯಿ ಹಾಕಿದ್ದೇವೆ. ಅದನ್ನು ಲೆಕ್ಕಹಾಕಿದರೆ ಪ್ರತಿಯೊಬ್ಬನಿಗೆ ಸುಮಾರು 1 ಲಕ್ಷ ರೂ. ಬಂದಂತಾಗಿದೆ. ಆದರೆ ತಳಮಟ್ಟದಲ್ಲಿ ಅದರ ಫಲಿತಾಂಶ ಕಾಣಿಸುತ್ತಿಲ್ಲ. ಬಿಪಿಎಲ್ ಸಂಖ್ಯೆ ಹೇಳಲು ನಾಚಿಕೆ ಆಗುತ್ತದೆ. ಅದನ್ನು ಪರಿಷ್ಕರಣೆ ಮಾಡಲು ಸಾಧ್ಯವಾಗಿಲ್ಲ. ಅವರು ವಾಸ್ತವವಾಗಿ ಬಿಪಿಎಲ್ ಇದ್ದಾರಾ?. ಅದನ್ನು ಟಚ್ ಮಾಡಿದರೆ ಸಮಸ್ಯೆ ಆಗುತ್ತದೆ ಎಂದು ತಿಳಿಸಿದರು. ಗ್ರಾಮೀಣ ಭಾಗದಲ್ಲಿ ಯೋಜನೆಗಳು, ಆಯವ್ಯಯ ಹಣ ಸರಿಯಾಗಿ ಸಮೀಕರಣ ಆಗುತ್ತಿಲ್ಲ.ಎಲ್ಲಾ…
ವಡೋದರ : ಉಮೆನ್ಸ್ ಪ್ರೀಮಿಯಂ ಲೀಗ್ ನಲ್ಲಿ ಆರ್ಸಿಬಿ ಈಗಾಗಲೇ ಸತತವಾಗಿ ನಾಲ್ಕು ಪಂದ್ಯಗಳನ್ನು ಗೆದ್ದಿದ್ದು ಅಲ್ಲದೆ, ನಿನ್ನೆ ವಡೋದರದಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧ ಸತತ ಐದನೇ ಪಂದ್ಯ ಗೆಲುವು ಮೂಲಕ ಪ್ಲೇ ಆಫ್ ಗೆ ಎಂಟ್ರಿ ಕೊಟ್ಟಿದೆ. ಗುಜರಾತ್ ಜೈಂಟ್ಸ್ ವಿರುದ್ಧ ಏಕಪಕ್ಷೀಯ ಗೆಲುವು ಸಾಧಿಸಿ ಪ್ಲೇಆಫ್ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ. ಹೌದು ನಿನ್ನೆ ವಡೋದರಾದಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸತತ ಗೆಲುವಿನ ಮೂಲಕ ಪ್ಲೇಆಫ್ಗೆ ಮೊದಲ ತಂಡವಾಗಿ ಅರ್ಹತೆ ಪಡೆದುಕೊಂಡಿದೆ. ತವರು ನೆಲ ಆದುದ್ದರಿಂದ ಗುಜರಾತ್ ತಂಡದಿಂದ ಸಂಘಟಿತ ಪ್ರದರ್ಶನ ನಿರೀಕ್ಷಿಸಲಾಗಿತ್ತು. ಆದರೆ ಆರ್ಸಿಬಿ ಮತ್ತೆ ಎರಡನೇ ಬಾರಿ ಗುಜರಾತ್ ತಂಡವನ್ನು ಸೋಲಿಸಿ ಪ್ಲೇ ಆಫ್ ಗೆ ಎಂಟ್ರಿ ಕೊಟ್ಟಿದೆ, ಏಕೆಂದರೆ ಮೊದಲ ಪಂದ್ಯದಲ್ಲಿ ಇದೆ ಗುಜರಾತ್ ತಂಡವನ್ನು ಸೋಲಿಸಿದ್ದು, ಅದರ ಸೇಡನ್ನು ಈ ಪಂದ್ಯದಲ್ಲಿ ತೀರಿಸಿಕೊಳ್ಳುತ್ತದೆ ಎಂದೇ ನಿರೀಕ್ಷಿಸಲಾಗಿತ್ತು. ಆದರೆ ಆರ್ಸಿಬಿ…
ಬಳ್ಳಾರಿ,ಜ.19(ಕರ್ನಾಟಕ ವಾರ್ತೆ): ಜಿಲ್ಲೆಯ ಎಲ್ಲಾ ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿ.ಎಂ.-ಎಸ್.ವೈಎA) ಪಿಂಚಣಿ ಯೋಜನೆಯಡಿ ಕಾರ್ಮಿಕರನ್ನು ನೋಂದಾಯಿಸಲು ವಿಶೇಷ ನೋಂದಣಿ ಅಭಿಯಾನ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಜಿ ಖೈನೂರು ಅವರು ತಿಳಿಸಿದ್ದಾರೆ. ನಗರ ಪ್ರದೇಶಗಳಲ್ಲಿ ಫೆ.15 ರ ವರೆಗೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಫೆ.16 ರಿಂದ ಮಾ.15 ರವರೆಗೆ ವಿಶೇಷ ನೋಂದಣಿ ಅಭಿಯಾನ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ. ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮೋದ್ಯಮದ ಕಾರ್ಮಿಕರು, ಧ್ವನಿ ಮತ್ತು ದೃಶ್ಯ ಕಾರ್ಮಿಕರು ಮತ್ತು ಇದೇ ರೀತಿಯ ಇತರೆ ಉದ್ಯೋಗಗಳ ಕೆಲಸಗಾರರು ಅಸಂಘಟಿತ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಅಸಂಘಟಿತ…
ಬೆಂಗಳೂರು : ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಇವುಗಳಿಗೆ ಇದ್ದ ಮೀಸಲಾತಿ ಸಮಸ್ಯೆ ಬಗೆಹರಿಸಲು ಸಿಎಂ ಹಾಗೂ ಸಚಿವರು ತಿಳಿಸಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆಗಳನ್ನೂ ಪಕ್ಷದ ಚಿಹ್ನೆ ಮೇಲೆ ನಡೆಸಬೇಕು ಎಂದು ಅನೇಕರು ಸಲಹೆ ನೀಡಿದ್ದು, ನಾವಿನ್ನೂ ಆ ಬಗ್ಗೆ ತೀರ್ಮಾನ ಮಾಡಿಲ್ಲ. ಒಂದೇ ಬಾರಿಗೆ ಎಲ್ಲವನ್ನು ನಡೆಸಲು ಚಿಂತನೆ ನಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ನ್ಯಾಯಾಲಯ ಆದೇಶ ನೀಡಿದೆ. ನಮ್ಮ ಸರ್ಕಾರ ಸಂವಿಧಾನದ 73, 74ನೇ ತಿದ್ದುಪಡಿಗೆ ಬದ್ಧವಾಗಿದೆ. ಯುವಕರಿಗೆ ಅಧಿಕಾರ ನೀಡಬೇಕು, ಹೊಸ ಪೀಳಿಗೆ ಅಧಿಕಾರಕ್ಕೆ ಬರಬೇಕು. ಈಗ ಐದು ಪಾಲಿಕೆಗಳಿಂದ 369 ವಾರ್ಡ್ಗಳನ್ನು ರಚಿಸಲಾಗಿದೆ. ಇನ್ನು ಬೆಂಗಳೂರಿನ ಹೊರವಲಯವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು. ನನಗೂ ಈ ಬಗ್ಗೆ ಮಾಹಿತಿ ಬಂದಿದೆ. ಇದು ರಾಜ್ಯ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ. ಮತಪತ್ರ ಬಳಸುವುದರಲ್ಲಿ ತಪ್ಪೇನು ಇಲ್ಲ. ಯಾವ ರೂಪದಲ್ಲಿ ಚುನಾವಣೆ ನಡೆಸಲಾಗುವುದು ಎನ್ನುವುದಕ್ಕಿಂತ…
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಇರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಅಚ್ಚರಿ ಹೇಳಿಕೆ ಒಂದು ನೀಡಿದ್ದು ರಾಜ್ಯದ 140 ಶಾಸಕರು ಸಿರಿದಂತೆ ಸಿಎಂ ಸಿದ್ದರಾಮಯ್ಯ ಸಹ ನನ್ನ ಬೆಂಬಲಕ್ಕೆ ಇದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 140 ಶಾಸಕರು ಕೂಡ ನನ್ನ ಬೆಂಬಲಿಗರೇ. ಸಿಎಂ ಸಿದ್ದರಾಮಯ್ಯ ಅವರು ಕೂಡ ನನಗೆ ಬೆಂಬಲವಾಗಿದ್ದಾರೆ. ನಾನು ಹಾಗೂ ಸಿಎಂ ಅವರು ಏನು ಮಾತನಾಡಿದ್ದೇವೆ ಎಂದು ಸಾರ್ವಜನಿಕವಾಗಿ ಚರ್ಚೆ ಮಾಡಲು ಆಗಲ್ಲ ಎಂದು ತಿಳಿಸಿದರು. ರಾಹುಲ್ ಗಾಂಧಿ ಸಮ್ಮುಖದಲ್ಲಿ ನಾವು ಏನು ಮಾತನಾಡಿಕೊಂಡಿದ್ದೇವೆ, ಹೈಕಮಾಂಡ್ ಸಮ್ಮುಖದಲ್ಲಿ ಏನು ಮಾತನಾಡಿದ್ದೇವೆ, ಎಲ್ಲ ಕೂತು ಏನು ತೀರ್ಮಾನ ಮಾಡಿದ್ದೇವೆ ಎಂದು ನಮಗೆ ಗೊತ್ತಿದೆ. ಈ ವಿಚಾರವನ್ನು ನಿಮ್ಮ ಮುಂದೆ ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವೇ? ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದರು.














