Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ಮುಂದಿನ 2028ರ ವಿಧಾನಸಭೆ ಚುನಾವಣೆಗು ಮುನ್ನ ಹೊಸ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಶಾಸಕ ಯತ್ನಾಳ ಈ ಹಿಂದೆ ಹೇಳಿಕೆ ನೀಡಿದ್ದರು. ಇದೀಗ ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ. ಜಿಲ್ಲಾವಾರು ಹಿಂದುತ್ವದ ಸಭೆ ಮಾಡುತ್ತೇನೆ. ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ಸಭೆ ಪ್ರಾರಂಭ ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು. ಹಿಂದುತ್ವ, ನಿರುದ್ಯೋಗ, ಅಭಿವೃದ್ಧಿ ಮೂರು ಉದ್ದೇಶಗಳೊಂದಿಗೆ ಸಭೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಜನರ ಅಭಿಪ್ರಾಯ ಪಡೆಯುತ್ತೇನೆ. ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ ಒಳ್ಳೆಯ ಮುಹೂರ್ತ ನೋಡಿ ರಾಜ್ಯದಂತ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು. ಮೊದಲು…
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಬೆಂಗಳೂರಿನ ಬಸವನಗುಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಕಟ್ಟಡದ ಟೆರೆಸ್ ಮೇಲೆ ಟೆಂಟುಗಳು ಸಂಪೂರ್ಣವಾಗಿ ಹೊತ್ತಿ ಉರಿಯುತ್ತಿರುವ ಘಟನೆ ಇದೀಗ ವರದಿಯಾಗಿದೆ. ಈ ಒಂದು ಬೆಂಕಿ ಹಾಕ ಪಕ್ಕದ ಕಟ್ಟಡಗಳಿಗೂ ವ್ಯಾಪಿಸಿದ್ದು, ಸಂಪೂರ್ಣ ಬೆಂಕಿಯ ಕೆನ್ನಾಲಿಗೆಯಿಂದ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನ ಜನನಿಬಿಡ ಪ್ರದೇಶವಾದ ಬಸವನಗುಡಿಯಲ್ಲಿ ಈ ಘಟನೆ ನಡೆದಿದ್ದು, ಕಟ್ಟಡವೊಂದರ ಮೇಲ್ಛಾವಣಿಯಲ್ಲಿದ್ದ ತಾತ್ಕಾಲಿಕ ಟೆಂಟ್ಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ತೀವ್ರತೆಗೆ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಮೂಡಿದೆ. ಶಾರ್ಟ್ ಸರ್ಕ್ಯೂಟ್ ಅಥವಾ ಬೇರೆ ಯಾವುದಾದರೂ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆಯೇ ಎಂಬ ಬಗ್ಗೆ ತನಿಖೆ ನಡೆಯಬೇಕಿದೆ. ಅದೃಷ್ಟವಶಾತ್ ಪ್ರಾಣಾಪಾಯದ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ನಿಲಗುಂದ-ಹೊಸಳ್ಳಿ ಗ್ರಾಮದ ಕೆರೆಯಲ್ಲಿ ಜಾನುವಾರುಗಳ ಮೈ ತೊಳೆಯುತ್ತಿದ್ದ ವೇಳೆ ಏಕಾಏಕಿ ಕಾಲು ಜಾರಿದ್ದು ಪ್ರತೀಕ್ (10) ಹಾಗೂ ಪ್ರಭಾಕರ್ (45) ಈಜು ಬರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬೇಸಿಗೆ ರಜೆ ಹಿನ್ನೆಲೆ, ಪ್ರತೀಕ್ ರಜೆಗಾಗಿ ಮಾವ ಪ್ರಭಾಕರನ ಮನೆಗೆ ಬಂದಿದ್ದ. ಮಾವ ಮತ್ತು ಅಳಿಯ ಜಾನುವಾರುಗಳ ಮೈ ತೊಳೆಯಲು ಕೆರೆಗೆ ತೆರಳಿದ್ದರೆ, ಉಳಿದ ಕುಟುಂಬಸ್ಥರು ಕೃಷಿ ಚಟುವಟಿಕೆ ನಿಮಿತ್ತ ಗದ್ದೆಗೆ ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಘಟನೆಯಿಂದ ಸ್ಥಳೀಯರಿಗೆ ಆಘಾತ ವ್ಯಕ್ತವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಂಡಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಲಬುರ್ಗಿ : ರಾಜ್ಯದಲ್ಲಿ ರಣ ಬಿಸಿಲಿಗೆ ಜನತೆ ಹೈರಾಣಾಗಿದ್ದಾರೆ. ಬಿಸಿಲಿನ ತಾಪಮಾನದಿಂದ ರಕ್ಷಿಸಿಕೊಳ್ಳಲು ಜನ ನಾನಾ ರೀತಿ ಪ್ರಯತ್ನ ಮಾಡುತ್ತಿದ್ದಾರೆ. ಸೂರ್ಯನ ಬಿಸಿಲಿನ ಹೋಡೆತಕ್ಕೆ ಜನ ತತ್ತರಿಸಿದ್ದಾರೆ. ಇದೀಗ ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಪೊಲೀಸ್ ಸಿಬ್ಬಂದಿ ಏರ್ ಕೂಲರ್ ವ್ಯವಸ್ಥೆ ಮಾಡಿದ್ದಾರೆ. ಹೌದು ಕಲ್ಬುರ್ಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಗು ಹೆಚ್ಚಾಗಿ ಇದ್ದು ಇದೀಗ ಕಲ್ಬುರ್ಗಿಯಲ್ಲಿ ಪೊಲೀಸರು ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಮಾಡಿದ್ದಾರೆ. ಇನ್ನು ಬೀದರ್ ಜಿಲ್ಲೆಯಲ್ಲಿ ಮನೆಯ ಮೇಲ್ಚಾವಣಿಯಲ್ಲಿ ತಾಡಪತ್ರಿ ಹಾಕಿ ನೀರು ಸುರಿದು ಜನ ಮೇಲ್ಚಾವಣಿ ತಂಪು ಮಾಡುತ್ತಿದ್ದಾರೆ. ಅಲ್ಲದೆ ಬಿಸಿಲಿನ ತಾಪಮಾನಕ್ಕೆ ಇಂದು ಬೀದರ್ ಜಿಲ್ಲೆಯ ಕಮಲಾಪುರದಲ್ಲಿ ಉತ್ತರ ಪ್ರದೇಶ ಮೂಲದ 20 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದಾನೆ.
ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರ ಘಟನೆ ನಡೆದಿದ್ದು, ಕಾಫಿ ತೋಟದಲ್ಲಿ ಆಟವಾಡುತ್ತಿದ್ದ 7 ವರ್ಷದ ಬಾಲಕನ ಮೇಲೆ 5-6 ಸಾಕು ನಾಯಿಗಳು ಭೀಕರವಾಗಿ ದಾಳಿ ಮಾಡಿದ್ದು, ಸ್ಥಿತಿ ಗಂಭೀರವಾಗಿದೆ. ಕಳಸ ತಾಲೂಕಿನ ಕೆಳಗೂರು ಗ್ರಾಮದ ಕಾಫಿ ತೋಟದಲ್ಲಿ ಘಟನೆ ನಡೆದಿದೆ.ಕಾಫಿ ಗಿಡದ ಕಸಿಗೆ ಬಂದಿದ್ದ ತಮಿಳುನಾಡಿನ ಕಾರ್ಮಿಕ ಕುಟುಂಬದ 7 ವರ್ಷದ ಮಾಧವ ನಾಯಿ ದಾಳಿಗೆ ಒಳಗಾದ ಬಾಲಕ. ಕಾಫಿ ತೋಟದ ಕಾರ್ಮಿಕರ ಮಕ್ಕಳು ತೋಟದೊಳಗಿನ ಲೈನ್ ಮನೆಗಳ ಬಳಿ ಆಟವಾಡುತ್ತಿದ್ದರು. ಈ ವೇಳೆ 5-6 ಸಾಕು ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ಮಗುವಿನ ತಲೆ, ಭುಜ, ಕುತ್ತಿಗೆಯಲ್ಲಿ ಗಂಭೀರ ಗಾಯಗಳಾಗಿವೆ. ಕೂಡಲೇ ಬಾಲಕನ ಪೋಷಕರು ಕಳಸ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆಯನ್ನು ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮೈಸೂರು : ರಾಜ್ಯಕ್ಕೆ ಬಂದಾಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಿವಿಯಲ್ಲಿ ಏನು ಹೇಳಿದರು ಎಂಬ ಗುಟ್ಟನ್ನು ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ, ಮಹಿಳಾ ಮೀಸಲಾತಿ ವಿಚಾರದಲ್ಲಿ ನಿಮ್ಮ ನಿಲುವು ಏನು ಎಂದು ನನ್ನ ಕಿವಿಯಲ್ಲಿ ಪ್ರಧಾನಿ ಮೋದಿ ಕೇಳಿದರು. ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಎಂದು ಹೇಳಿದೆ ಅಂತಾ ಪಿಎಂ ಗುಟ್ಟನ್ನು ಸಿಎಂ ರಟ್ಟು ಮಾಡಿದ್ದಾರೆ. ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರುದ್ಧ ಇಲ್ಲ. ಕ್ಷೇತ್ರ ಪುನರ್ ವಿಂಗಡಣೆ ವಿಚಾರವಾಗಿ ಮಾತ್ರ ನಮ್ಮ ತಕರಾರು ಇದೆ. ಮಹಿಳಾ ಮೀಸಲಾತಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಮೀಸಲಾತಿ ಜಾರಿಯ ಬದ್ಧತೆ ಬಿಜೆಪಿಗೆ ಇಲ್ಲ. ವಿಧೇಯಕದ ವಿಚಾರದಲ್ಲಿ ಸುಳ್ಳು ಹೇಳುತ್ತಾ ರಾಜಕಾರಣ ಮಾಡುತ್ತಿದೆ. 2023 ಮೀಸಲಾತಿ ವಿಧೇಯಕ ಇತ್ತು. ಅದನ್ನ ಅವತ್ತೇ ಯಾಕೆ ಜಾರಿ ಮಾಡಬಾರದಿತ್ತು. ಈಗ ಕ್ಷೇತ್ರ ಪುನರ್ ವಿಗಂಡಣೆ ವಿಚಾರದಲ್ಲಿ ಯಾಕೆ ಅದನ್ನ ತಳುಕು ಹಾಕಿದ್ರು ಎಂದು ಪ್ರಶ್ನಿಸಿದರು. ಹೊಸ ಜನಗಣತಿ ಪ್ರಕಾರ ಕ್ಷೇತ್ರ ಪುನರ್ ವಿಂಗಡಣೆಯಾಗಬೇಕು.…
ಉತ್ತರಕನ್ನಡ : ಉತ್ತರಕನ್ನಡದಲ್ಲಿ ಭೀಕರ ಕೊಲೆ ನಡೆದಿದ್ದು, ಎರಡನೇ ಮದುವೆಯಾಗಲು ಸಿದ್ಧತೆ ನಡೆಸಿದ್ದ ವೈದ್ಯರೊಬ್ಬರ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಭಯಾನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನ್ಯೂ ಕೆ.ಹೆಚ್.ಬಿ. ಕಾಲೋನಿಯಲ್ಲಿ ನಡೆದಿದೆ. ಡಾ. ರಮೇಶ್ ಕಲಘುಟಕರ್ (51) ಕೊಲೆಯಾದ ಆಯುರ್ವೇದ ವೈದ್ಯ ಎಂದು ತಿಳಿದುಬಂದಿದೆ. ಕಳೆದ ಐದು ತಿಂಗಳ ಹಿಂದಷ್ಟೇ ಕೊಲೆಯಾದ ವೈದ್ಯ ರಮೇಶ್ ಅವರ ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಸೋಮವಾರ (ಇಂದು) ಶಿರಸಿ ತಾಲೂಕಿನ ಮಂಜಗುಣಿಯಲ್ಲಿ ವೈದ್ಯ ರಮೇಶ್ ಅವರು ತಮ್ಮ ಪತ್ನಿಯ ತಂಗಿಯ ಜೊತೆಯಲ್ಲಿಯೇ ಮದುವೆ ಆಗುವವರಿದ್ದರು. ಒಬ್ಬರೇ ಇರುತ್ತಿದ್ದ ವೈದ್ಯ ರಮೇಶ್ ಮನೆಗೆ ಸಂಬಂಧಿಕರು ಬಂದಿದ್ದರು. ಈ ವೇಳೆ ಅವರು ಬಾಗಿಲು ತೆರೆದಿಲ್ಲ. ಹೀಗಾಗಿ ಬಾಗಿಲು ಒಡೆದು ತೆಗೆದಾಗ ಕೊಲೆಯಾದ ವಿಷಯ ಬೆಳಕಿಗೆ ಬಂದಿದೆ. ಇನ್ನು, ವೈದ್ಯರ ಒಬ್ಬ ಮಗ ಬೆಂಗಳೂರಿನಲ್ಲಿ ಹಾಗೂ ಇನ್ನೋರ್ವ ಉತ್ತರ ಪ್ರದೇಶದಲ್ಲಿ ವೈದ್ಯಕೀಯ ಕೋರ್ಸ್ ಓದುತ್ತಿದ್ದಾರೆ. ಮದುವೆಯ ಕಾರಣ ಮನೆಗೆ ಬಂಗಾರದ ಆಭರಣಗಳನ್ನು ವೈದ್ಯ ರಮೇಶ್…
ಚಿಕ್ಕಮಗಳೂರು : ಚಾಮರಾಜನಗರ ಜಿಲ್ಲೆಯಲ್ಲಿ ವ್ಯಕ್ತಿಯ ಬರ್ಬರ ಕೊಲೆಯಾಗಿದ್ದು, ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ರಾಡ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸುರಪುರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಕುಣಗಳ್ಳಿ ನಿವಾಸಿ ರಾಮಕೃಷ್ಣ ಬರ್ಬರವಾಗಿ ಹತ್ಯೆಯಾದ ವ್ಯಕ್ತಿ. ಸುರಪುರ ಗ್ರಾಮದ ಮಲ್ಲಿಕಾರ್ಜುನನಿಂದ ಕೊಲೆ ಆಗಿದೆ. ರಾಮಕೃಷ್ಣ ಕೊಲೆ ಮಾಡಿದ ಬಳಿಕ ಮಲ್ಲಿಕಾರ್ಜುನ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ರಾಮಕೃಷ್ಣ ಪದೇ ಪದೇ ತನ್ನ ವಿರುದ್ಧ ದೂರು ನೀಡುತ್ತಿದ್ದ ಹಾಗಾಗಿ ಕೊಲೆ ಮಾಡಿದ್ದಾಗಿ ತಪ್ಪೋಪ್ಪಿಕೊಂಡಿದ್ದಾನೆ.
ಬೆಂಗಳೂರು : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿಯಾಗಿದ್ದು, ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರ ಹೆಸರಘಟ್ಟದ ಬೆನಕ ಚೌಟ್ರಿ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಕಾಮಾಕ್ಷಿಪಾಳ್ಯ ನಿವಾಸಿ ವೃದ್ಧ ನಾಗರಾಜ್ (60) ಎಂದು ತಿಳಿದುಬಂದಿದೆ. BMTC ಬಸ್ ನೆಲಮಂಗಲದಿಂದ ಹೆಸರಘಟ್ಟ ಮಾರ್ಗವಾಗಿ ಯಲಹಂಕಕ್ಕೆ ತೆರಳುತ್ತಿತ್ತು. ಈ ವೇಳೆ ಎದುರಿಗೆ ಬಂದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ರಾಭಸಕ್ಕೆ ಗಂಭೀರ ಗಾಯಗೊಂಡು ನಾಗರಾಜ್ ಬಿದ್ದಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದರೆ. ಸ್ಥಳಕ್ಕೆ ಸೋಲದೇವನಹಳ್ಳಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೂ, ಬಸ್ ಸಮೇತ ಚಾಲಕ ನರಸಿಂಹಮೂರ್ತಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ
ಬೀದರ್ : ಬೀದರ್ ಜಿಲ್ಲೆಯ ಕಮಲನಗರದಲ್ಲಿ 20 ವರ್ಷದ ಯುವಕನೋರ್ವ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಉತ್ತರ ಪ್ರದೇಶ ಮೂಲದ ಮೊಹ್ಮದ್ ಸಮೀರ್, ಬಿಸಿಲಿನ ತಾಪ ತಾಳಲಾರದೆ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತ ಯುವಕನನ್ನು ಉತ್ತರ ಪ್ರದೇಶ ಮೂಲದ ಮೊಹ್ಮದ್ ಸಮೀರ್ ಎಂದು ಗುರುತಿಸಲಾಗಿದೆ. ಕಳೆದ ಹಲವು ತಿಂಗಳಿಂದ ಮೃತ ಸಮೀರ್ ಕಮಲನಗರ ಪಟ್ಟಣದ ಕಟಿಂಗ್ ಶಾಪ್ನಲ್ಲಿ ಕೆಲಸ ಮಾಡಿಕೊಂಡಿದ್ದನು. ಬಿಸಿಲಿನ ತಾಪ ತಾಳಲಾರದೇ ತಲೆ ಸುತ್ತು ಬಿದ್ದು ಸಮೀರ್ ಮೃತನಾಗಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಪ್ರಕರಣದ ವಿವರಗಳು: ಮೃತ ಯುವಕ: ಮೊಹ್ಮದ್ ಸಮೀರ್ (20 ವರ್ಷ). ಮೂಲ: ಉತ್ತರ ಪ್ರದೇಶ ರಾಜ್ಯದ ನಿವಾಸಿ. ಸ್ಥಳ: ಕಮಲನಗರದ ರಸ್ತೆ ಬದಿ. ಸಾವಿನ ಶಂಕೆ: ಪ್ರಸ್ತುತ ಬೀದರ್ ಜಿಲ್ಲೆಯಾದ್ಯಂತ ತೀವ್ರವಾದ ಬಿಸಿಲಿದ್ದು, ಉಷ್ಣಾಂಶವು ಅಧಿಕವಾಗಿದೆ. ಯುವಕನು ಈ ಬಿಸಿಲಿನ ತಾಪವನ್ನು ತಾಳಲಾರದೆ (Heatstroke) ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಪೊಲೀಸ್ ಕ್ರಮ: ಸ್ಥಳಕ್ಕೆ ಭೇಟಿ ನೀಡಿದ…













