Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡುವುದನ್ನು ತಡೆಯಲು ಮತ್ತು ಮದ್ಯ ಖರೀದಿ ಮಾಡುವವರ ವಯಸ್ಸಿನ ದೃಢೀಕರಣವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ಹೆಜ್ಜೆ ಇರಿಸಿದೆ. ಮದ್ಯದ ಅಂಗಡಿ ಹಾಗೂ ಬಾರ್‌ಗಳಲ್ಲಿ ಗ್ರಾಹಕರ ವಯಸ್ಸಿನ ಪುರಾವೆ ಪರಿಶೀಲಿಸುವುದನ್ನು ಕಡ್ಡಾಯಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಬಾರ್ ಮಾಲೀಕರ ಸಂಘಕ್ಕೆ ನೋಟಿಸ್ ಜಾರಿ ಮಾಡಿದೆ. ಅಪ್ರಾಪ್ತರಿಗೆ ಮದ್ಯ ಪೂರೈಕೆ ಮತ್ತು ಬ್ರಿವರಿಂಗ್ ಕಂಪನಿಗಳು ಸೇರಿದಂತೆ ಮದ್ಯ ಸರಬರಾಜು ಸಂಸ್ಥೆಗಳಲ್ಲಿ ಅವರ ಪ್ರವೇಶಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಆದೇಶ ಹೊರಡಿಸಿರುವ ಹೈಕೋರ್ಟ್, ಈ ಪಿಡುಗಿನಿಂದ ಯುವಕರು ವಿಶೇಷವಾಗಿ ಅಪ್ರಾಪ್ತ ವಯಸ್ಸಿನವರನ್ನು ರಕ್ಷಿಸುವುದು ಕೇವಲ ಶಾಸನಾತ್ಮಕ ಕರ್ತವ್ಯವಲ್ಲ, ಬದಲಿಗೆ ನೈತಿಕ ಕರ್ತವ್ಯವೂ ಆಗಿದೆ ಎಂದು ಸಾರಿದೆ. ಈ ವಿಚಾರದಲ್ಲಿ ಯಾವುದೇ ತಪ್ಪು ಮಾಡಿದರೂ ಅಂತಹ ಸಂಸ್ಥೆಗಳ ಆಡಳಿತ ಮಂಡಳಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದೂ ಹೇಳಿದೆ. ಬ್ರಿವರೀಸ್ ಮತ್ತು ಅಂತಹದ್ದೇ ಮದ್ಯ ಮಾರಾಟ ಸಂಸ್ಥೆಗಳು ತನ್ನಲ್ಲಿಗೆ ಬರುವವರ…

Read More

ಗೋವಾ : ಕಳೆದ ವರ್ಷ ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣ ಬಾರಿ ಸದ್ದು ಮಾಡಿತ್ತು. ಬಳಿಕ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ಇದೇ ರೀತಿ ಗೋವಾದಲ್ಲಿ ಪ್ರಕರಣ ನಡೆದಿದ್ದು ಬಿಜೆಪಿಯ ಕೌನ್ಸಿಲರ್ ಮಗ 30 ಬಾಲಕಿಯರ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಸದ್ಯ ಪೋಲಿಸಿರುವ ಆತನನ್ನು ಅರೆಸ್ಟ್ ಮಾಡಿದ್ದಾರೆ. ಹೌದು ದಕ್ಷಿಣ ಗೋವಾದ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯಕ್ ಪುತ್ರ ಸೋಹಂ ನಾಯಕ್ (20) ಬಂಧಿತ ಆರೋಪಿಯಾಗಿದ್ದಾನೆ. ಈತ 30ಕ್ಕೂ ಹೆಚ್ಚು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದು ಅಲ್ಲದೆ ಅವುಗಳನ್ನು ವಿಡಿಯೋ ಮಾಡಿ ಬಾಲಕಿಯರಿಗೆ ಬೆದರಿಸುತ್ತಿದ್ದ ಈ ಒಂದು ವಿಡಿಯೋ ಅವರ ಸ್ನೇಹಿತರ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆರೋಪಿತನಿಗೆ ಕುಡಿತದ ಚಟ ಇತ್ತು ಈ ಹಿನ್ನಲೆ ಕುಡಿದ ನಶೆಯಲ್ಲಿ ತಾನು ಬಾಲಕಿಯರ ಜೊತೆಗೆ ಮಾಡಿದ್ದ ದುಷ್ಕೃತ್ಯ ವಿಡಿಯೋಗಳನ್ನು ಹಾಗೂ ಫೋಟೋಗಳನ್ನು ನಶೆಯಲ್ಲಿ ತನ್ನ ಸ್ನೇಹಿತರಿಗೆ ಫಾರ್ವರ್ಡ್ ಮಾಡಿದ್ದಾನೆ. ಬಳಿಕ ಆತನ ಸ್ನೇಹಿತರು ಈ ವಿಡಿಯೋಗಳನ್ನು…

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಕಾಂಗ್ರೆಸ್ ಶಾಸಕ ಸತೀಶ ಸೈಲ್ ಆಪ್ತ ಗೋಪಾಲಕೃಷ್ಣ ನಾಯಕ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಾರವಾರ ಪೊಲೀಸರು ನಾಲ್ವರ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಅಂಕೋಲಾ ತಾಲೂಕಿನ ಕಿಣಿ ಬಳಿ ಎಂದು ಬೆಳಿಗ್ಗೆ ಚಾಕು ಇರಿದ ಘಟನೆ ನಡೆದಿತ್ತು. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಿಣಿ ಗ್ರಾಮದಲ್ಲಿ ಈ ಒಂದು ಕೊಲೆ ಪ್ರಕರಣ ನಡೆದಿದೆ. ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಗೆ ಆರೋಪಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು.ಸದ್ಯ ಗೋವಾ ಗಡಿಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ನಾಲ್ವರನ್ನು ವಶಕ್ಕೆ ಪಡೆದಿದ್ದೇವೆ ಚಾಕುವಿನಿಂದ ಇರಿದು ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದರು. ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬರಲಿದೆ ಎಂದು ಉತ್ತರ ಕನ್ನಡ ಎಸ್ ಪಿ ಎಂ. ಎನ್ ದೀಪನ್ ಮಾಹಿತಿ ನೀಡಿದರು.

Read More

ಬೆಂಗಳೂರು : ಜನರ ಸಮಸ್ಯೆಗೆ ಕಷ್ಟಕ್ಕೆ ಪೊಲೀಸರು ಸದಾ ಕಾವಲು. ಇರಬೇಕು. ಆದರೆ ಇಲ್ಲೊಬ್ಬ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಲೇಡಿ ರೌಡಿ ಮೇಲೆ ಲವ್ ಆಗಿ ಚಿನ್ನು, ಮುದ್ದು ಅಂತಾ ಮಂಚಕ್ಕೆ ಕರೆದು ಪೇಚಿಗೆ ಸಿಲುಕಿದ್ದಾನೆ. ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಲೇಡಿ ರೌಡಿ ಕಮಿಷನರ್‌ಗೆ ದೂರು ನೀಡಿದ್ದಾರೆ. ಹೌದು ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ, ನಟೋರಿಯಸ್ ಮಹಿಳಾ ರೌಡಿಶೀಟರ್‌ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಇಬ್ಬರ ನಡುವಿನ ಸಂಭಾಷಣೆ ಹಾಗೂ ಅಶ್ಲೀಲ ಚಾಟ್ ಸಮೇತ ಮಹಿಳಾ ರೌಡಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಪೊಲೀಸ್ ಇನ್‌ಸ್ಪೆಕ್ಟರ್ ಪಾಪಣ್ಣ, ಲೇಡಿ ರೌಡಿಶೀಟರ್‌ಳನ್ನು ‘ಚಿನ್ನು’, ‘ಮುದ್ದು’, ‘ಬಂಗಾರಿ’ ಎಂದು ಸಂಬೋಧಿಸಿದ್ದು, ಆಡಿಯೋದಲ್ಲಿ ರೆಕಾರ್ಡ್ ಆಗಿದೆ. ಅಲ್ಲದೇ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬರುವಂತೆ ಕರೆಯುತ್ತಿದ್ದರು ಎಂದು ದೂರಲಾಗಿದೆ. ‘ಮುದ್ದು ಬಂಗಾರಿ’ ಎಂದು ಕರೆದು ಲೈಂಗಿಕ ಪ್ರಚೋದನೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ವಾಟ್ಸಪ್ ಸಂದೇಶಗಳ ಮೂಲಕವೂ ಮಂಚಕ್ಕೆ ಕರೆದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ…

Read More

ಬೆಂಗಳೂರು : ಕಗ್ಗಲಿಪುರದ ಸರ್ಕಾರಿ ಜಮೀನು ಕೆರೆ ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್ಟ್ ಆಫ್ ಲಿವಿಂಗ್ನ ಶ್ರೀ ಶ್ರೀ ರವಿಶಂಕರ್ ಗುರೂಜಿ ವಿರುದ್ಧ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ನ್ಯಾಯಮೂರ್ತಿ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಬಿಎಂಟಿಎಫ್ ಪೊಲೀಸರು ಒತ್ತುವರಿ ಸಂಬಂಧ ರವಿಶಂಕರ್ ಗುರೂಜಿ ಎಫ್ಆರ್ ದಾಖಲಿಸಿದ್ದರು. ಒತ್ತೂವರಿ ಆರೋಪಕ್ಕು ಶ್ರೀ ರವಿಶಂಕರ್ ಗುರೂಜಿಗೂ ಯಾವುದೇ ಸಂಬಂಧವಿಲ್ಲ ಆಧಾರಗಳು ಇಲ್ಲದೆ ಎಫ್ಐಆರ್ ದಾಖಲಿಸಿದ್ದಾರೆ ಎಂದು ರವಿಶಂಕರ್ ಪರ ವಕೀಲ ಪಿ ಪ್ರಸನ್ನ ಕುಮಾರ್ ವಾದಿಸಿದ್ದರು. ಹೀಗಾಗಿ ಹೈಕೋರ್ಟ್ ರವಿಶಂಕರ್ ಗುರೂಜಿ ಅವರ ವಿರುದ್ಧ ದಾಖಲಾಗಿದ್ದ FIR ರದ್ದುಪಡಿಸಿ ಆದೇಶ ಹೊರಡಿಸಿದೆ.

Read More

ಬೆಂಗಳೂರು : ಮೈಸೂರು ನಾಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದ ಅಕ್ರಮ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮೆಟ್ಟಿಲೇರಿದ್ದಾರೆ. ಇದರಿಂದ ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ ಶುರುವಾಗಿದೆ. ಹೌದು ಸ್ನೇಹಮಯಿ ಕೃಷ್ಣ ಅವರು, ಮೈಸೂರು ಜಿಲ್ಲಾ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನಿನ ಮೂಲ ಮಾಲೀಕ ಜೆ. ದೇವರಾಜು, ಮುಡಾದ ಮಾಜಿ ಆಯುಕ್ತ ಜಿ ಟಿ ದಿನೇಶ್ ಕುಮಾ‌ರ್ ಮತ್ತು ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿ ಹೆಸರಿಸಿದ್ದಾರೆ. ಈ ಪ್ರಕರಣದಲ್ಲಿ ಖಾಸಗಿ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ. ವಿಶೇಷ ನ್ಯಾಯಾಲಯವು 2026ರ ಜನವರಿ 28ರಂದು ಈ ಬಿ ರಿಪೋರ್ಟ್ ಅನ್ನು ಅಂಗೀಕರಿಸಿ ಆದೇಶ ಹೊರಡಿಸಿತ್ತು. ಹೀಗಾಗಿ, ಲೋಕಾಯುಕ್ತ ಎಸ್ಪಿ ಸಲ್ಲಿಸಿರುವ ಬಿ ರಿಪೋರ್ಟ್…

Read More

ಬೆಂಗಳೂರು : ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಇಂದು ಚರ್ಚೆ ನಡೆಯಿತು. ಹೈಕಮಾಂಡ್ ಹೇಳಿದಾಗ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಈ ವೇಳೆ ಸಿಎಂ ಆಗುವ ಆಸೆ ಇಲ್ಲವಾ ಅಂತ ಆರ್ ಅಶೋಕಗೆ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಸಿಎಂ ಆಗಬೇಕು ಅನ್ನೋದನ್ನು ಹೇಳಲಾಗದೆ ಆರ್ ಅಶೋಕ್ ಈ ವೇಳೆ ನಕ್ಕಿದ್ದಾರೆ. ಅಶೋಕ ಆದರೂ ಸಿಎಂ ಆಗಲಿ ಬೆಲ್ಲದ ಆದರೂ ಸಿಎಂ ಆಗಲಿ, ಅಶ್ವತ್ ನಾರಾಯಣ ಸಿಎಂ ಆದರು ಸಹ ಸಂತೋಷವೇ, ಆದರೆ ವಿಜಯೇಂದ್ರ ನೀವು ಸಿಎಂ ಆಗೋಕೆ ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ಕಾಲು ಎಳೆದರು. ಈ ವೇಳೆ ಶಾಸಕ ಸುನಿಲ್ ಕುಮಾರ್ ಡಿಕೆ ಶಿವಕುಮಾರ್ ಸಿಎಂ ಆಗಲಿ ಅಂತ ಒಂದು ಬಾರಿ ಹೇಳಲಿಲ್ಲವಲ್ಲ ಎಂದಾಗ ಹೈಕಮಾಂಡ್ ನವರು ಯಾವಾಗ ತೀರ್ಮಾನ ಮಾಡುತ್ತಾರೆ ಆಗ ಡಿಕೆ ಶಿವಕುಮಾರ್ ಅವರು ಸಿಎಂ ಆಗುತ್ತಾರೆ. ಇಲ್ಲಿರುವ 224 ಶಾಸಕರು ಕೂಡ ಮುಖ್ಯಮಂತ್ರಿ ಆಗಲು ಅರ್ಹರಿದ್ದಾರೆ. ನಮ್ಮಲ್ಲಿ ಅನೇಕರು ಮುಖ್ಯಮಂತ್ರಿ ಆಗುವುದಕ್ಕೆ…

Read More

ಬಾಗಲಕೋಟೆ : ಏಪ್ರಿಲ್ 9 ರಂದು ಉಪಚುನಾವಣೆ ಹಿನ್ನೆಲೆ ಬಾಗಲಕೋಟೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1,39,200 ಹಣವನ್ನ ಜಪ್ತಿ ಮಾಡಿಕೊಳ್ಳಲಾಗಿದೆ.ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 1,39,200 ಹಣವನ್ನು ಸಿಬ್ಬಂದಿಗಳು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಜಾಲಿಹಾಳ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ವೇಳೆ ಹಣ ಪತ್ತೆಯಾಗಿದೆ. ಸುನೀಲ್ ಹಳಕಟ್ಟಿ ಎಂಬುವವರ ಬಳಿ ಇದ್ದ 64,200 ರೂಪಾಯಿ ಮುಕ್ತಿಯರ ಬೆಪಾರಿ ಎಂಬುವವರ ಬಳಿ ಇದ್ದ 75 ಸಾವಿರ ಹಣ ಜಪ್ತಿ ಮಾಡಿದ್ದಾರೆ. 50 ಸಾವಿರಕಿಂತ ಹೆಚ್ಚಿನ ಹಣ ಸಾಗಿಸಲು ದಾಖಲಾತಿ ಕಡ್ಡಾಯ. ಈ ಹಿನ್ನೆಲೆ ಯಾವುದೇ ದಾಖಲಾತಿ ಇಲ್ಲದಕ್ಕೆ ಹಣ ವಶಕ್ಕೆ ಪಡೆದಿದ್ದಾರೆ.

Read More

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚಿನ ದಿನಗಳಲ್ಲಿ ಬಾಂಬ್‌ ಬೆದರಿಕೆಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇಂದು ದೆಹಲಿಯ ಬಜೆಟ್ ಮಂಡನೆಗೆ ನಿಗದಿಯಾಗಿದ್ದು, ಇದೇ ದಿನವೇ ದೆಹಲಿಯ ವಿಧಾನಸಭೆ ಹಾಗೂ ವಿಧಾನ ಸಭೆಯ ಮೆಟ್ರೋ ಸ್ಟೇಷನ್ ಳನ್ನು ಸ್ಪೋಟಿಸಲಾಗುವುದು ಎಂಬ ಸಂದೇಶವಿರುವ ಬಾಂಬ್‌ ಬೆದರಿಕೆ ಬಂದಿದೆ. ದೆಹಲಿ ವಿಧಾನಸಭೆಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದೆ. 16 RDX ಐಇಡಿಗಳನ್ನು ಇಡಲಾಗಿದೆ. ಇಂದು ಮಧ್ಯಾಹ್ನ 1.40ಕ್ಕೆ ಸ್ಪೋಟಿಸೋದಾಗಿ ಉಲ್ಲೆಖಿಸಲಾಗಿದೆ. ಸ್ಥಳಕ್ಕೆ ಶ್ವಾನ ಡಾ ಸಿಬ್ಬಂದಿ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು, ಮಾರ್ಚ್-25: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಮಾರ್ಚ್ 27(27-03-2025) ರ ಶುಕ್ರವಾರದಂದು “ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ನಗರದಲ್ಲಿರುವ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಬಿಎ ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ರವರು ತಿಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಥವಾ ಇತ್ತೀಚಿನ ಆಡಳಿತಾತ್ಮಕ ಬದಲಾವಣೆಯಂತೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸುತ್ತದೆ. 2026ರ ಶ್ರೀರಾಮ ನವಮಿಯು ಮಾರ್ಚ್ 26, ಗುರುವಾರ ಅಥವಾ ಪಂಚಾಂಗದ ಅನ್ವಯ ಮಾರ್ಚ್ 27, ಶುಕ್ರವಾರದಂದು ಆಚರಿಸಲ್ಪಡುತ್ತಿದ್ದು, ಆ ದಿನದಂದು ಈ ಕೆಳಗಿನ ನಿಯಮಗಳು ಅನ್ವಯವಾಗುತ್ತವೆ: ಪ್ರಮುಖ ನಿರ್ಬಂಧಗಳು: ಕಸಾಯಿಖಾನೆಗಳ ಮುಚ್ಚಲ್ಪಟ್ಟಿರುತ್ತವೆ: ನಗರದ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಕಸಾಯಿಖಾನೆಗಳಲ್ಲಿ ಪ್ರಾಣಿವಧೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಾಂಸ ಮಾರಾಟ ನಿಷೇಧ: ಚಿಲ್ಲರೆ ಅಂಗಡಿಗಳು, ಮಾರುಕಟ್ಟೆಗಳು ಮತ್ತು ಮಾಂಸದ ಮಳಿಗೆಗಳಲ್ಲಿ (ಕೋಳಿ, ಕುರಿ, ಮೀನು ಇತ್ಯಾದಿ) ಮಾಂಸ ಮಾರಾಟ ಮಾಡುವಂತಿಲ್ಲ. ದಂಡ ಮತ್ತು ಕ್ರಮ:…

Read More