Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು :ರಾಜ್ಯದಲ್ಲಿ ಚಾಣಕ್ಯ ಬಂದ ವೇಳೆ ಅಪಘಾತ ಆಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಚಾರಣಕ್ಕೆ ತೆರಳುವವರಿಗೆ ಇದೀಗ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಮಾರ್ಗಸೂರ್ಚಿಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಇದೀಗ ಬಿಡುಗಡೆ ಮಾಡಿದ್ದಾರೆ. ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಚಾರಣಕ್ಕೆ ಹೋಗುವವರಿಗೆ ಎಸ್ಓಪಿ ಕಡ್ಡಾಯಗೊಳಿಸಲಾಗಿದೆ. ಸೆವೆನ್ ಮಿನಿಸ್ಟರ್ ಕ್ವಾಟರ್ಸ್ನಲ್ಲಿ ಸಚಿವ ಈಶ್ವರ ಖಂಡ್ರೆ ಎಸ್ಓಪಿ ಅನ್ನು ಬಿಡುಗಡೆ ಮಾಡಿದರು. ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಂಗಳೂರಲ್ಲಿ ಚರಣಕ್ಕೆ ಬಂದು ಓರ್ವ ಬಾಲಕಿ ಸಾವನ್ನುಪ್ಪಿದ್ದಳು. ಘಟನೆಗಳು ಪುನರಾವರ್ತನೆ ಆಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಎಸ್ಓಪಿ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಚಾಣಕ್ಯ ತೆರಳುವವರಿಗೆ ಎಸ್ಓಪಿ ಬಿಡುಗಡೆ ಮಾಡಿದ ಬಳಿಕ ಸಚಿವ ಈಶ್ವರ ಖಂಡ್ರೆ ಮಾತನಾಡಿ, ರಾಜ್ಯದಲ್ಲಿ 44 ಚಾರಣ ಪಾಯಿಂಟ್ ಗಳು ಚಾಲ್ತಿಯಲ್ಲಿವೆ. ಕಡ್ಡಾಯವಾಗಿ ಎಸ್ಓಪಿ ಜಾರಿಗೆ ತರಲು ಸೂಚನೆ ನೀಡಿದ್ದೇವೆ. ಚಾಲನೆಗಳ ಮೊಬೈಲ್ ಗೆ ಟ್ರ್ಯಾಕಿಂಗ್ ಆಪ್ ಅಳವಡಿಕೆ ಮಾಡುತ್ತೇವೆ. 10 ಚಾರಣಿಗರಿಗೆ ಒಬ್ಬ ಗೈಡ್ ಇರಲೇಬೇಕು. ಚಾರಣಕ್ಕೆ ಹೋಗುವವರು ಆನ್ಲೈನ್ ನಲ್ಲಿ ಬುಕಿಂಗ್ ಮಾಡಬೇಕು.…
ಬೆಂಗಳೂರು : ಬೆಂಗಳೂರಿನಲ್ಲಿ ಕುಡಿದ ನಶೆಯಲ್ಲಿ ವ್ಯಕ್ತಿಗೆ ಕಾರ್ ಶೋರೂಮ್ ಸಿಬ್ಬಂದಿಗಳು ಕಾರನ್ನು ಟೆಸ್ಟ್ ಡ್ರೈವ್ ಮಾಡಲು ಕೊಟ್ಟಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿ ಸುಮಾರು ನಾಲ್ಕು ವಾಹನಗಳಿಗೆ ಗುದ್ದಿ ವ್ಯಕ್ತಿ ಅಪಘಾತ ಮಾಡಿದ್ದಾನೆ. ಮಹಿಂದ್ರಾ ಶೋರೂಮ್ ಸಿಬ್ಬಂದಿ ಎಡವಟ್ಟಿನಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಅಭಿಲಾಶ್ ಎನ್ನುವ ವ್ಯಕ್ತಿ ಕುಡಿದ ಅಮಲಿನಲ್ಲಿ ನಾಲ್ಕೈದು ವಾಹನಗಳಿಗೆ ಗುದ್ದಿದ್ದಾನೆ ಏಪ್ರಿಲ್ 12ರಂದು ಬೆಂಗಳೂರಿನ ಮಹದೇವಪುರದಲ್ಲಿ ಈ ಒಂದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಡಿದ ನಶೆಯಲ್ಲಿ ಅಭಿಲಾಷ್ ನಾಲ್ಕು ವಾಹನಗಳಿಗೆ ಗುದ್ದಿ ಜಖಂಗೊಳಿಸಿದ್ದಾನೆ. ಕಾರು ಗುದ್ದಿದ ರಭಸಕ್ಕೆ ರಮೇಶ್ ಎಂಬುವರ ಕಾಲು ಸಹ ಮುರಿತವಾಗಿದೆ. ಘಟನೆ ನಡೆದ ಸ್ಥಳದಲ್ಲಿ ಇದ್ದಂತಹ ಕೆಲವು ವ್ಯಕ್ತಿಗಳು ಅಭಿಲಾಶ್ ನನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದು ಮಾದೇವಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕೋಳಿ ತಿನ್ನುವವರೇ ಇದೀಗ ಆದಷ್ಟು ಎಚ್ಚರದಿಂದ ಇರುವುದು ಒಳ್ಳೆಯದು ಏಕೆಂದರೆ ರಾಜ್ಯಕ್ಕೆ H5N1 (ಹಕ್ಕಿ ಜ್ವರ) ಎಂಟ್ರಿ ಕೊಟ್ಟಿದ್ದು ಬೆಂಗಳೂರಿನ ಹೆಸರಘಟ್ಟದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆಯಾಗಿದೆ.ಕೋಳಿಗಳಲ್ಲಿ ಈ ಒಂದು ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಪೌಲ್ಟ್ರಿ ಫಾರಂ ನಲ್ಲಿ ತಪಾಸಣೆ ನಡೆಸಲಾಗಿದ್ದು ತಪಾಸನೆ ವೇಳೆ ಕೋಳಿಗಳಲ್ಲಿ H5N1 ವೈರಸ್ ಇರುವುದು ಪತ್ತೆಯಾಗಿದೆ. ಹಾಗಾಗಿ ಫಾರಂ ನಲ್ಲಿರುವ 7,400ಕ್ಕೂ ಹೆಚ್ಚು ಕೋಳಿಗಳ ಜೀವಂತ ಸಮಾಧಿ ಮಾಡಲಾಗಿದ್ದು, ಸುಮಾರು 8 ಬಗೆಯ ತಳಿಯ ಸಾವಿರಾರು ಕೋಳಿಗಳ ಮಾರಣಹೋಮ ಆಗಿದೆ ಮೈಸೂರು ನಾಟಿಕೋಳಿ, ಕಾವೇರಿ, ಗಿರಿರಾಜ ಸೇರಿದಂತೆ 8 ತಳಿಗಳ ಸಾವಿರಾರು ಕೋಳಿಗಳನ್ನು ಜೀವಂತ ಸಮಾಧಿ ಮಾಡಲಾಗಿದೆ. ಸುಮಾರು 7400ಕ್ಕೂ ಹೆಚ್ಚು ಕೋಳಿಗಳನ್ನು ಜೀವಂತ ಸಮಾಧಿ ಮಾಡಲಾಗಿದ್ದು ಹಕ್ಕಿ ಜ್ವರ ಹಿನ್ನೆಲೆಯಲ್ಲಿ ಈ ಒಂದು ಕ್ರಮ ಕೈಗೊಳ್ಳಲಾಗಿದೆ. ಸ್ಥಳಕ್ಕೆ ಪಶು ವೈದ್ಯಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ದೇಶದ ಹಲವು ರಾಜ್ಯಗಳಲ್ಲಿ ಆತಂಕ ಮೂಡಿಸಿರುವ ಮಾರಕ ಹಕ್ಕಿ ಜ್ವರ (H5N1) ಈಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ಕಾಲಿಟ್ಟಿದೆ. ನಗರದ ಹೊರವಲಯದ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದ ಕೋಳಿ ಫಾರಂನಲ್ಲಿ ಈ ವೈರಸ್ ಇರುವುದು ದೃಢಪಟ್ಟಿದ್ದು, ಪಶುಸಂಗೋಪನಾ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಕಳೆದ ಕೆಲವು ದಿನಗಳಿಂದ ಹೆಸರಘಟ್ಟದ ಸರ್ಕಾರಿ ಫಾರಂನಲ್ಲಿ ಕೋಳಿಗಳು ಸರಣಿಯಾಗಿ ಸಾವನ್ನಪ್ಪುತ್ತಿದ್ದವು. ಇದರಿಂದ ಸಂಶಯಗೊಂಡ ಅಧಿಕಾರಿಗಳು ಸತ್ತ ಪಕ್ಷಿಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಪರೀಕ್ಷಾ ವರದಿಯಲ್ಲಿ ಕೋಳಿಗಳಿಗೆ ‘H5N1’ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ. ಸೋಂಕು ತಡೆಗೆ ಕಟ್ಟುನಿಟ್ಟಿನ ಕ್ರಮ (Culling): ವೈರಸ್ ಮತ್ತಷ್ಟು ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ, ಸೋಂಕು ಪತ್ತೆಯಾದ ಫಾರಂನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲಾ ಕೋಳಿಗಳನ್ನು ನಾಶಪಡಿಸಲು (Culling) ಇಲಾಖೆ ನಿರ್ಧರಿಸಿದೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಈ ಕಾರ್ಯಾಚರಣೆಗೆ ಅಧಿಕಾರಿಗಳ ತಂಡ ಸಜ್ಜಾಗಿದೆ. ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯ ಪ್ರಮುಖ ಸೂಚನೆಗಳು: ಹಕ್ಕಿ…
ಬೆಂಗಳೂರು : ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರನ್ನು ವರ್ಗಾವಣೆಗೊಳಿಸಲಾಗಿದೆ. ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿ ವರ್ಗಾವಣೆಗೊಳಿಸಲಾಗಿದೆ. ಹೈಕೋರ್ಟ್ ರಿಜಿಸ್ಟರ್ ಜನರಲ್ ಕೆ.ಎಸ್ ಭರತ್ ಕುಮಾರ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಪ್ರಧಾನ ಜಿಲ್ಲಾ ನ್ಯಾಯಾಧೀಶರಾಗಿ ಸಂತೋಷ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿದ್ದು, 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾಯಿಸಿ ಹೈಕೋರ್ಟ್ ರಿಜಿಸ್ಟರ್ ಜನರಲ್ ಕೆ ಎಸ್ ಭರತ್ ಕುಮಾರ್, ಆದೇಶ ಹೊರಡಿಸಿದ್ದಾರೆ. ಪ್ರತಿವರ್ಷ ನಡೆಯುವ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಂತೆ ವರ್ಗಾವಣೆ ನಡೆಸಲಾಗಿದೆ, ಜೂನ್ 1 ರಿಂದ ಹೊಸ ಕಾರ್ಯಭಾರ ವಹಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಶಿವಮೊಗ್ಗ : ಶಿವಮೊಗ್ಗದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಆರೋಪಿಯನ್ನು ಬಂಧಿಸಲಾಗಿದೆ. ಸಂಕೇತ್ ಕೊಲೆ ಪ್ರಕರಣದಲ್ಲಿ ತಮ್ಮ ಸ್ನೇಹಿತರು ಜೈಲು ಪಾಲಾಗಿದ್ದಾರೆ ಎಂಬ ಸಿಟ್ಟಿಗೆ ಅಪ್ರಾಪ್ತ ಈ ಕೃತ್ಯ ಎಸಗಿರುವುದು ಬಯಲಾಗಿದೆ. ಸಂಕೇತ್ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ಆರೋಪಿಗಳ ಅಪ್ರಾಪ್ತ ಸ್ನೇಹಿತನೇ ಈ ಕೃತ್ಯ ಎಸಗಿರೋದು ಬಯಲಾಗಿದ್ದು, ಮಾರ್ಚ್ 31ರಂದು ಸಂಕೇತ್ ಸಮಾಧಿಯನ್ನು ಧ್ವಂಸಗೊಳಿಸಲಾಗಿತ್ತು. ಈ ಹಿನ್ನೆಲೆ ಆರೋಪಿ ಪತ್ತೆಗೆ ತೀವ್ರ ತನಿಖೆ ನಡೆಸಿದ್ದ ತುಂಗಾನಗರ ಪೋಲಿಸರು, ಹಲವು ಆಯಾಮಗಳಲ್ಲಿ ಈ ಬಗ್ಗೆ ತನಿಖೆ ನಡೆಸಿದ್ದರು. ಅಂತಿಮವಾಗಿ ತ್ತಾಂತ್ರಿಕ ಆಧಾರದ ಹಿನ್ನೆಲೆಯಲ್ಲಿ ಸಮಾಧಿ ಕೆಡವಿದ್ದ ಅಪ್ರಾಪ್ತ ಆರೋಪಿಯನ್ನ ಬಂಧಿಸಿದ್ದಾರೆ. ಕಳೆದ ಫೆಬ್ರವರಿ 23ರಂದು ಶಿವಮೊಗ್ಗ ನಗರದಲ್ಲಿ ಸಂಕೇತ ಸ್ನೇಹಿತ ಗಿರೀಶನನ್ನು ಹಿಡಿದು ಐವರು ಬಾಲಕರು ಹಲ್ಲೆ ಮಾಡುತ್ತಿದ್ದರು. ಇದನ್ನು ಬಿಡಿಸಲು ಹೋದ ಸಂಕೇತ ಮೇಲೆ ಬಾಲಕರು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ನಂತರ ಮೃತ ಸಂಕೇತ್ನ ಅಂತ್ಯಕ್ರಿಯೆಯನ್ನು ಗುಡ್ಡೆಮರಡಿಯ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಿದ್ದ…
ನವದೆಹಲಿ : ದೆಹಲಿ ಕೋರ್ಟ್ ಪ್ರಕರಣ ಒಂದರಲ್ಲಿ ಐತಿಹಾಸಿಕ ತೀರ್ಪು ನೀಡಿದ್ದು, ಸೈನಿಕನ ಪತ್ನಿ ಆಸೆಯನ್ನು ಪೂರ್ಣಗೊಳಿಸಲು ಮುಂದಾಗಿದೆ. ದೀರ್ಘಕಾಲದವರೆಗೆ ಕೋಮಾದಲ್ಲಿರುವ ಭಾರತೀಯ ಸೇನಾ ಸೈನಿಕನ ಸ್ಪರ್ಮ್ ಹೊರತೆಗೆದು ಸಂರಕ್ಷಿಸಲು ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರ್ ನೇತೃತ್ವದ ಪೀಠವು ತನ್ನ ತೀರ್ಪಿನಲ್ಲಿ, ಸೈನಿಕನು ತನ್ನ ಪತ್ನಿಯೊಂದಿಗೆ ಐವಿಎಫ್ ಚಿಕಿತ್ಸೆಗೆ ಒಳಗಾಗಲು ಈಗಾಗಲೇ ಒಪ್ಪಿಗೆ ನೀಡಿದ್ದಾರೆ. ಕಳೆದ ಜುಲೈ 2025 ರಲ್ಲಿಸೈನಿಕ ಗಸ್ತಿನಲ್ಲಿದ್ದಾಗ ಮೇಲಿನಿಂದ ಕೆಳಗೆ ಬಿದ್ದಿದ್ದರು. ಅವರ ತಲೆಗೆ ತೀವ್ರವಾದ ಗಾಯವಾಗಿತ್ತು. ಮಿದುಳಿನಲ್ಲಾದ ಗಾಯದಿಂದ ಸೈನಿಕ ಕೋಮಾ ಸ್ಥಿತಿಯಲ್ಲಿದ್ದಾರೆ. ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. 2023 ರಲ್ಲಿ ಸೈನಿಕ ಹಾಗೂ ಅವರ ಪತ್ನಿ ಐವಿಎಫ್ ಗೆ ಒಪ್ಪಿಗೆ ನೀಡಿ ಚಿಕಿತ್ಸೆ ಶುರು ಮಾಡಿದ್ದರು. ಆದ್ರೆ ಸೈನಿಕನ ಆರೋಗ್ಯ ಹದಗೆಟ್ಟಿದ್ದರಿಂದ ಚಿಕಿತ್ಸೆ ನಿಲ್ಲಿಸಲಾಗಿದೆ. ಈಗ ಪತ್ನಿ ಕೋರ್ಟ್ ಮೆಟ್ಟಿಲೇರಿ ಒಪ್ಪಿಗೆ ಚಿಕಿತ್ಸೆ ಮುಂದುವರೆಸಲು ಒಪ್ಪಿಗೆ ಕೇಳಿದ್ದಾರೆ. ಸೈನಿಕನ ಪತ್ನಿ ಅರ್ಜಿ ಪರಿಶೀಲನೆ ನಡೆಸಿದ ದೆಹಲಿ ಹೈಕೋರ್ಟ್,…
ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಹಿಳಾ ಮೀಸಲಾತಿ ಮಸೂದೆಯು ಭಾರತದ ಭವಿಷ್ಯಕ್ಕೆ ಹೊಸ ದಿಕ್ಕು ಮತ್ತು ಬಲವನ್ನು ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲೋಕಸಭೆಯಲ್ಲಿ ಮಸೂದೆಯ ಕುರಿತು ಮಾತನಾಡಿದ ಅವರು, ಈ ಐತಿಹಾಸಿಕ ಹೆಜ್ಜೆಯು ದೇಶದ ಶಾಸನ ಪ್ರಕ್ರಿಯೆಯನ್ನು ಮತ್ತಷ್ಟು ಸೂಕ್ಷ್ಮ ಹಾಗೂ ಒಳಗೊಳ್ಳುವಂತೆ ಮಾಡುವ ಪ್ರಯತ್ನವಾಗಿದೆ ಎಂದು ಬಣ್ಣಿಸಿದರು. ರಾಷ್ಟ್ರ ನಿರ್ಮಾಣಕ್ಕೆ ಈ ಮಸೂದೆಗಳು ಸಹಕಾರಿ ಮೀಸಲಾತಿಗೆ ರಾಜಕೀಯ ಬಣ್ಣ ಕೊಡುವುದು ಬೇಡ ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಮುಕ್ತವಾಗಿ ಹೇಳುತ್ತಿದ್ದಾರೆ ವಿಕಸಿತ ಭಾರತದಲ್ಲಿ ಮಹಿಳಾ ಪಾತ್ರ ನಿರ್ಣಾಯಕವಾಗಿದೆ ಮಹಿಳಾ ಮೀಸಲಾತಿಗೆ ಎಲ್ಲರೂ ಒಪ್ಪಿಗೆ ನೀಡಬೇಕು ನಾವೆಲ್ಲರೂ ಒಗ್ಗಟ್ಟಾಗಿ ಮೀಸಲಾತಿಯನ್ನು ಬೆಂಬಲಿಸಬೇಕು ಎಂದು ಪ್ರಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದರು. ಮೀಸಲಾತಿ ವಿರೋಧಿಸುವವರು ರಾಜಕೀಯವಾಗಿ ಬೆಳೆಯಲ್ಲ ರಾಷ್ಟ್ರ ನಿರ್ಮಾಣಕ್ಕೆ ಈ ಮಸೂದಿಗಳು ಸಹಕಾರಿ ನಾವು ಯಾರು ಜವಾಬ್ದಾರರು ಎನ್ನುವುದನ್ನು ಲೆಕ್ಕಿಸದೆ ಈಗಾಗಲೇ ಮಹಿಳಾ ಮೀಸಲಾತಿ ವಿಳಂಬ ಮಾಡಿದ್ದೇವೆ. ಮೊದಲು ಶೇಕಡ…
ತುಮಕೂರು : ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ನಡೆದಿದೆ. ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಕೆಳೆಗೆ ಇಳಿಸಲಾಗಿದ್ದು, ಡೀಸೆಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ತಕ್ಷಣ ನೀರು ಹಾಕಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಸಹ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು ಯಾವುದೇ ರೀತಿ ಪ್ರಾಣ ಹಾನಿ ಸಂಭವಿಸಿಲ್ಲ.
ಬೆಂಗಳೂರು : ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಆರೋಪಿಗಳು ದೋಷಿಗಳು ಎಂದು ತೀರ್ಪು ನೀಡಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 17 ಆರೋಪಿಗಳಿಗೆ ನಾಳೆ ಶಿಕ್ಷಪ್ರಮಾಣ ಪ್ರಕಟಿಸಲಾಗುತ್ತದೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಡ್ಜ್ ಸಂತೋಷ ಗಜಾನನ ಭಟ್ ತಿಳಿಸಿದರು. ವಿಚಾರಣೆ ಆರಂಭವಾದ ವೇಳೆ ಶಿಕ್ಷ ಪ್ರಮಾಣದ ಬಗ್ಗೆ ಸಿಬಿಐ ಪರವಾಗಿ ಎಎಸ್ಜಿ ವಾದ ಮಂಡಿಸಿದರು. ಹೆಚ್ಚುವರಿ ಜನರಲ್ ಸಾಲಿಟರ್ ಎಸ್ ವಿ ರಾಜು ಅವರು ವಾದ ಮಂಡಿಸಿದರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿ ಎಸ್ ವಿ ರಾಜು ವಾದ ಮಂಡಿಸಿದರು. ಈ ವೇಳೆ ಕೋರ್ಟ್ ಹಾಲ್ಗೆ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಅಪರಾಧಿಗಳು ಹಾಜರಾದರು ಸಿಬಿಐ ಪರ ಎ ಎಸ್…














