Author: kannadanewsnow05

ಬೆಂಗಳೂರು: ಹೋಮ್‌ವರ್ಕ್ ಮಾಡಲಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರು 7ನೇ ತರಗತಿ ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.ಹುಳಿಮಾವು ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡಿರುವ ವಿದ್ಯಾರ್ಥಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹುಳಿಮಾವು ಬಿ.ಜಿ. ರಸ್ತೆಯಲ್ಲಿರುವ ಖಾಸಗಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಫರ್ದೀನ್ ಗಾಯಗೊಂಡವ. ವಿದ್ಯಾರ್ಥಿ ಕೈಗೆ ಆರು ಹೊಲಿಗೆ ಹಾಕಲಾಗಿದೆ ಎಂದು ತಿಳಿದುಬಂದಿದೆ.ಶಾಲಾ ಆಡಳಿತ ಮಂಡಳಿಯಿಂದ ಈ ಪ್ರಕರಣ ಮುಚ್ಚಿಹಾಕುವ ಪ್ರಯತ್ನವೂ ನಡೆಯುತ್ತಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಸಿದಂತೆ ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಹುಳಿಮಾವು ಪೊಲೀಸರು ತಿಳಿಸಿದ್ದಾರೆ. ದೂರು ಪರಿಶೀಲಿಸಿ ಕ್ರಮ ಶಾಲೆಯೊಂದರ ಶಿಕ್ಷಕಿ ವಿದ್ಯಾರ್ಥಿಗೆ ಹಲ್ಲೆ ನಡೆಸಿರುವ ಬಗ್ಗೆ ದೂರು ಬಂದಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಗುರುವಾರ ಮಾಹಿತಿ ಬಂದಿದೆ. ವಿಚಾರಣೆಗೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಕಳುಹಿಸಲಾಗಿದೆ. ಶಾಲೆಗೆ ನೋಟಿಸ್‌ ಕೊಡಲಾಗುವುದು. ಶಾಲೆಯಿಂದ ಈ ಬಗ್ಗೆ ಮಾಹಿತಿ ಪಡೆದುಕೊಂಡು, ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು…

Read More

ಮಂಗಳೂರು : ಸದಾ ಮುಸ್ಲಿಂ ಧರ್ಮದ ವಿರುದ್ಧ ಧ್ವನಿ ಎತ್ತಿ ಹೋರಾಟ ಮಾಡುತ್ತಿದ್ದ ಹಿಂದೂ ಸಂಘಟನೆಗಳಲ್ಲಿ ಭಜರಂಗ ದಳ ಕೂಡ ಒಂದು.ಆದರೆ ಇದೀಗ ಭಜರಂಗ ದಳದ ಕಾರ್ಯಕರ್ತನೊಬ್ಬ ತನ್ನ ಪಕ್ಕದ ಮನೆಯಲ್ಲಿರುವ ಮುಸ್ಲಿಂ ಯುವತಿಯನ್ನು ವಿವಾಹವಾಗಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರಿನಲ್ಲಿ ಬಜರಂಗದಳದ ಕಾರ್ಯಕರ್ತನನ್ನೇ ಮುಸ್ಲಿಂ ಯುವತಿಯೊಬ್ಬಳು ವರಿಸಿದ ವಿದ್ಯಮಾನ ನಡೆದಿದೆ. ಲವ್ ಜಿಹಾದ್ ವಿರುದ್ಧ ಧ್ವನಿ ಎತ್ತಿರುವ ಬಜರಂಗದಳದಲ್ಲೇ ಅಂತರ್ಧರ್ಮಿಯ ವಿವಾಹ ನಡೆದ ಬಗ್ಗೆ ಜಾಲತಾಣಗಳಲ್ಲಿ ಪೋಸ್ಟ್ ಹರಿದಾಡುತ್ತಿದ್ದು, ಫೋಟೋ ಸಹಿತ ವೈರಲ್ ಆಗಿದೆ. ಮಂಗಳೂರಿನ ಸುರತ್ಕಲ್‌ನಲ್ಲಿ ಈ ಹಿಂದೂ-ಮುಸ್ಲಿಂ ಲವ್ ಸ್ಟೋರಿ ನಡೆದಿದೆ. ಸುರತ್ಕಲ್‌ನ ಪ್ರಶಾಂತ್ (31) ಎಂಬಾತನು ತನ್ನ ನೆರೆಮನೆಯ ಮುಸ್ಲಿಂ ಯುವತಿ ಆಯೇಷಾ (19) ಎಂಬಾಕೆಯನ್ನು ವಿವಾಹವಾಗಿದ್ದಾರೆ ಎಂದು ಪ್ರಶಾಂತ್‌ನ ಸ್ನೇಹಿತರು ಜಾಲತಾಣಗಳಲ್ಲಿ ಫೋಟೋ ಸಹಿತ ವೈರಲ್ ಮಾಡಿದ್ದಾರೆ. ಈ ನಡುವೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಆಯೇಷಾ ನಾಪತ್ತೆಯಾಗಿರುವ ಬಗ್ಗೆ ಆಕೆಯ ಪೋಷಕರು ದೂರು ದಾಖಲಿಸಿದ್ದಾರೆ. ನ.30ರಂದು ಆಯೇಷಾ ಜೊತೆ ತೆರಳಿದ್ದ ಪ್ರಶಾಂತ್ ಆಕೆಯನ್ನು ವಿವಾಹವಾಗಿದ್ದರು.…

Read More

ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ಎನ್. ಮೋಹನ್ ನಾಯಕ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ನ್ಯಾಯಾಂಗ ಬಂಧನ ದಲ್ಲಿರುವ ಮೋಹನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ಈ ಆದೇಶ ಮಾಡಿದೆ. ಇಡೀ ಪ್ರಕರಣದಲ್ಲಿ ಮೋಹನ್ ಜಾಮೀನು ಪಡೆದ ಮೊದಲ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಪ್ರಕರಣವೇನು: 2017ರ ಸೆ.5ರಂದು ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಗೌರಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಹತ್ಯೆಯ ಪ್ರಮುಖ ರೂವಾರಿ ಅಮೋಲ್ ಕಾಳೆ. ಪರಶುರಾಮ್ ವಾಗೋರೆ ಗುಂಡು ಹಾರಿಸಿದ್ದರೆ, ಬೈಕ್ ಚಲಾಯಿಸಿದ ಆರೋಪ ಗಣೇಶ್ ಮಿಸ್ಕಿನ್ ಮೇಲಿದೆ. ಎಸ್‌ಐಟಿ 17 ಆರೋಪಿ ಗಳನ್ನು ಬಂಧಿಸಿ, 8,500 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಪ್ರಕರಣದಲ್ಲಿ ಒಟ್ಟು 527 ಸಾಕ್ಷಿಗಳಿದ್ದಾರೆ. ಮೋಹನ್ 11ನೇ ಆರೋಪಿಯಾಗಿದ್ದು, ಕೊಲೆಗೆ ಸಂಚು ಆರೋಪ ಆತನ ಮೇಲಿದೆ.ಇದೀಗ ಆತನಿಗೆ ಜಾಮೀನು ನೀಡಲಾಗಿದೆ.

Read More

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಈಗಾಗಲೇ ಜೆಡಿಎಸ್ ಪಕ್ಷದಿಂದ ಉಚ್ಚಾಟನೆಗೊಂಡಿರುವ ಜೆಡಿಎಸ್ ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು, ಪಕ್ಷದ ಐವರು ಶಾಸಕರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮಾತನ್ನು ಕೇಳದಿದ್ದರೆ ನಾವು ತೀರ್ಮಾನ ತೆಗೆದುಕೊ ಳ್ಳುತ್ತೇವೆ. ಸದ್ಯ ಐವರು ಶಾಸಕರು ಸಂಪರ್ಕದಲ್ಲಿದ್ದಾರೆ. ಈ ಸಂಖ್ಯೆ 12ಕ್ಕೆ ಏರಿಕೆಯಾಗುವ ವಿಶ್ವಾಸವಿದೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು. ಇದೇ ತಿಂಗಳ 11ರ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ರಾಜ್ಯದಲ್ಲಿ ಮೂರನೇ ಶಕ್ತಿಯಾಗಿ ಬೆಳೆಯಲು ನಮಗೆ ಎಲ್ಲ ಅವಕಾಶವಿದೆ. ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರಿಗೆ ಮತ್ತೊಮ್ಮೆ ಹೇಳುತ್ತೇನೆ. ನಮ್ಮ ಮಾತನ್ನು ನೀವು ಕೇಳದಿದ್ದರೆ ನಾವು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

Read More

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಲಬುರಗಿ ಉತ್ತರ ಕ್ಷೇತ್ರದದಿಂದ ಆಯ್ಕೆಯಾದ ಕಾಂಗ್ರೆಸ್ ಶಾಸಕಿ ಕನೀಝ್ ಫಾತಿಮಾ ಅವರು ಅಫಿಡವಿಟ್‌ನಲ್ಲಿ ಆಸ್ತಿ ಹಾಗೂ ಶೈಕ್ಷಣಿಕ ಅರ್ಹತೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದ್ದರಿಂದ ಅವರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಫಾತಿಮಾ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.ಈ ಕುರಿತಂತೆ ಚುನಾವಣೆಗೆ ಜನತಾದಳ (ಸಂಯುಕ್ತ) ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ಎ.ಎಸ್. ಶರಣಬಸಪ್ಪ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು. ಕೆಲ ಕಾಲ ಅರ್ಜಿದಾರರ ಪರ ವಕೀಲ ವಾದ ಆಲಿಸಿದ ಬಳಿಕ ಪ್ರತಿವಾದಿಗಳಾದ ಶಾಸಕಿ ಕನೀಝ್ ಫಾತಿಮಾ, ಚಂದ್ರಕಾಂತ್, ನಾಸಿರ್‌ಹುಸೇನ್, ಮತ್ತಿತರರಿಗೆ ನೋಟಿಸ್‌ ಜಾರಿಗೊಳಿಸಿದ ನ್ಯಾಯಪೀಠ, ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿತು.

Read More

ಕೊಪ್ಪಳ : ಪಿಎಸ್ಐ ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ರೈತನೊಬ್ಬ ಅಹವಾಲು ಸಲ್ಲಿಸಲು ಬಂದಿದ್ದ ವೇಳೆ ADGP ಅಲೋಕ್ ಕುಮಾರ ಆತನನ್ನೇ ಗಡಿಪಾರಿಗೆ ಸೂಚನೆ ನೀಡಿದ್ದಾರೆ. ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ಮಲ್ಲಯ್ಯ‌ ಎನ್ನುವ ರೈತನ ಮೇಲೆ ಕೆಲವು ದಿನಗಳ ಹಿಂದೆ ಕುಕನೂರು ಪಿ ಎಸ್ ಐ ಹಲ್ಲೆ ಮಾಡಿದ್ದು ಈ ವಿಡಿಯೋ ವೈರಲ್ ಆಗಿತ್ತು. ಈ ಕುರಿತು ನನ್ನ ಮೇಲೆ ಮಾಡಿದ್ದಾರೆ ಎಂದು ಎಡಿಜಿಪಿಗೆ ರೈತ ಮಲ್ಲಯ್ಯ ಹೇಳಿದರು. ಹಲ್ಲೆ ಪ್ರಕರಣದಲ್ಲಿ ಯಲಬುರ್ಗಾ ಸಿಪಿಐ ನೇತ್ರತ್ವದಲ್ಲಿ ತನಿಖೆ‌ ನಡೆದಿದೆ. ಹಲ್ಲೆಗೊಳಗಾದ ರೈತನ ಮೇಲೆ ಈ ಹಿಂದೆ ಗಂಭೀರ ಪ್ರಕರಣವಿದೆ. ಈಗ ಟ್ರಾಕ್ಟರ್ ಟ್ರಾಲಿ ರಸ್ತೆಗೆ ಅಡ್ಡವಾಗಿ ಸಾರ್ವಜನಿಕರಿಗೆ ತೊಂದರೆ ಮಾಡಿದ್ದೀರಿ. ಹೀಗಾಗಿ ಹಲ್ಲೆಒಳಗಾದ ರೈತನನ್ನೇ ಗಡಿಪಾರು ಮಾಡಲು ಸೂಚಿಸಿದರು. ಇದೇ ವೇಳೆ ಪ್ರಕರಣದ ಕುರಿತು ಎಸ್ಪಿ, ಸಿಪಿಐ, ಪಿಎಸ್ ಐ ಗೆ ಮಾಹಿತಿ ಕೇಳಿದ ನಂತರ ರೈತನದ್ದೇ ತಪ್ಪಿದೆ ಎಂದು ಹೇಳಿದ ಪೊಲೀಸ್ ಅಧಿಕಾರಿಗಳು.‌ ಜೊತೆಗೆ ರೈತ ಮಲ್ಲಯ್ಯ…

Read More

ಚಿತ್ರದುರ್ಗ: ತಾಯಿಯೊಬ್ಬಳು ತನ್ನ ಇಬ್ಬರು ಪುಟ್ಟ ಕಂದಮ್ಮಗಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಕೊಂದು ನಂತರ ತಾನು ಕೂಡ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಘಟ್ಟದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಘಟ್ಟದಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವಂತ ಹೃದಯವಿದ್ರಾವಕ ಘಟನೆ ನಡೆದಿದೆ. ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಕೊಂದು ಬಳಿಕ ಮನೆಯಲ್ಲಿ ನೇಣಿಗೆ ಶರಣಾಗಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ತಾಯಿ ಲತಾ (25 )ಮಗಳು ಪ್ರಣಿತ (5) ಪುತ್ರ ಜ್ಞಾನೇಶ್ವರ ಮೃತ ದುರ್ದೈವಿಗಳಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ ಘಟನೆ ಕುರಿತಂತೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/kptcl-recruitment-appointment-orders-to-be-issued-to-selected-candidates-soon-says-minister-k-j-george/ https://kannadanewsnow.com/kannada/zpm-leader-lalduhoma-takes-oath-as-mizoram-chief-minister/

Read More

ಬೆಳಗಾವಿ : ಸರ್ಕಾರ ಗುತ್ತಿಗೆದಾರರ ಕಾಮಗಾರಿಗಳ ಬಾಕಿ ಬಿಲ್ ಉಳಿಸಿಕೊಂಡಿರುವ ಕುರಿತು ಸದನದಲ್ಲಿ ಶಾಸಕ ಬಸನಗೌಡ ಪಾಟೀಲ ಪ್ರಸ್ತಾಪಿಸಿ, ಕಾಮಗಾರಿಗಳ ಬಿಲ್ ಬಿಡುಗಡೆಯಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು. ಕಾಮಗಾರಿಗಳ ಬಾಕಿ ಬಿಲ್ಗಳಿಗಾಗಿ ಕಮಿಷನ್ ಆರೋಪದ ಬಗ್ಗೆ ಪ್ರಸ್ತಾಪಿಸಿದ್ದು ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಸ್ತಾಪಿಸಿದರು. ಸರ್ಕಾರ ಕಾಮಗಾರಿಗಳಿಗೆ ಅಗತ್ಯವಾದಂತಹ ಹಣವನ್ನು ಬಿಡುಗಡೆ ಮಾಡಿಲ್ಲ.ಸಣ್ಣ ನೀರಾವರಿ,ಲೋಕೋಪಯೋಗಿ ಹಾಗೂ ಗ್ರಾಮೀಣ ಅಭಿವೃದ್ಧಿ ಕಾಮಗಾರಿ ಬಿಲ್ ಬಿಡುಗಡೆಯಾಗಿಲ್ಲ. ರಾಜ್ಯದ ಗುತ್ತಿಗೆದಾರರಿಗೆ ಸರ್ಕಾರ ಇನ್ನು ಹಣ ಬಿಡುಗಡೆ ಮಾಡಿಲ್ಲ. ಆದರೆ ಆಂಧ್ರದ ಗುತ್ತಿಗೆದಾರರಿಗೆ ಸರ್ಕಾರ ಹಣ ಬಿಡುಗಡೆ ಮಾಡಿದೆ. ಈ ಮೂಲಕ ಪೆಸಿಎಂ ಹೆಸರಿನಲ್ಲಿ ಹಗರಣ ನಡೆದಿದೆ. ಕಮಿಷನ್ ಪಡೆದು ಆಂಧ್ರ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಆರೋಪಿಸಿದರು. ಇದರಲ್ಲಿ ದೊಡ್ಡ ಹಗರಣ ನಡೆದಿದೆ ಈ ಕುರಿತಂತೆ ಸರ್ಕಾರ ಸ್ಪಷ್ಟನೆ ಕೊಡಬೇಕು ಎಂದು ಸದನದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.ಈ ವೇಳೆ ಯತ್ನಾಳ್ ಆರೋಪಕ್ಕೆ…

Read More

ಕಲಬುರ್ಗಿ : ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ಕಲಬುರ್ಗಿಯ ಸಾಯಿ ಮಂದಿರ ಬಳಿ ವಕೀಲ ಈರಣ್ಣ ಗೌಡ ಎಂಬವರನ್ನು ಮಚ್ಚಿನಿಂದ ಕೊಚ್ಚಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮೂವರನ್ನು ಬಂಧಿಸಿದ್ದು ಪ್ರಮುಖ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಕಲಬುರ್ಗಿಯ ಸಾಯಿ ಮಂದಿರದ ಅಪಾರ್ಟ್ಮೆಂಟ್ ಒಂದರಲ್ಲಿ ವಕೀಲ ಹಿರಣಗೌಡ ಎಂಬ ಆರೋಪಿಗಳು ಅಟ್ಟಾಡಿಸಿಕೊಂಡು ಹೊಡೆದಿದ್ದು ನಂತರ ವಕೀಲನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರಬರವಾಗಿ ಕೊಲೆ ಮಾಡಿದ್ದರು. ಘಟನೆ ಕುರಿತಂತೆ ವಿಶ್ವವಿದ್ಯಾಲಯ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಲಾಗುತ್ತಿದ್ದು ಪ್ರಮುಖ ಆರೋಪಿಯು ತಲೆಮರಿಸಿಕೊಂಡಿದ್ದು ಆತನ ಹುಡುಕಾಟಕ್ಕಾಗಿ ತೀವ್ರ ಶೋಧ ಕಾರ್ಯ ಮುಂದುವರೆದಿದೆ ಎಂದು ಹೇಳಲಾಗುತ್ತಿದೆ.

Read More

ಬೆಳಗಾವಿ : ಗ್ಯಾರಂಟಿ ಯೋಜನೆಗಳಿಗೆ SCP-TSP ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಪ್ರಸ್ತಾಪಿಸಿದ್ದು, ಪರಿಶಿಷ್ಟ ಜಾತಿಗೆ ಮೀಸಲು ಗ್ಯಾರಂಟಿ ಗಳಿಗೆ ಹೇಗೆ ಬಳಸುತ್ತಿದ್ದೀರಿ? ಉಚಿತ ಬಸ್ ನಲ್ಲಿ ಪ್ರಯಾಣಿಸುವವರಿಗೆ ಜಾತಿ ನೋಡಿ ಟಿಕೆಟ್ ಕೊಡ್ತೀರಾಜಾತಿ ನೋಡಿ ಅನ್ನ ಭಾಗ್ಯ ಯೋಜನೆಯ ಅಕ್ಕಿ ಕೊಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ನಾರಾಯಣಸ್ವಾಮಿ ಪ್ರಶ್ನೆಗೆ ಸಚಿವ ಹೆಚ್ಚಿಸಿ ಮಾದೇವಪ್ಪ ಉತ್ತರಿಸಿ,ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ SCP-TSP ಯೋಜನೆ ಜಾರಿ ಮಾಡಲಾಗಿತ್ತು.7a, 7ಬ್, 7c,7d ಅಂತ ಮಾಡಲಾಗಿದೆ. ಆದರೆ 7d ಸೆಕ್ಷನ್ ಅನ್ನು ಕ್ಯಾಬಿನೆಟ್ ನಲ್ಲಿ ತೆಗೆದು ಹಾಕಿದ್ದೇವೆ.ಬೇರೆ ಉದ್ದೇಶಕ್ಕೆ ಯೋಜನೆ ಹಣ ಬಳಸಲು ಸಾಧ್ಯವಿಲ್ಲ. ಅದೇ ಸಮುದಾಯಕ್ಕೆ SCP-TSP ಹಣ ಬಳಕೆ ಆಗಲಿದೆ ಎಂದು SCP-TSP ಪರಿಷತ್ತಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಮಹದೇವಪ್ಪ ಹೇಳಿದರು. ಪ್ರಾರಂಭದಲ್ಲಿ ಗ್ಯಾರಂಟಿ ಯೋಜನೆಗಳಿಗೆ 11 ಸಾವಿರ ಕೋಟಿ ಅನ್ಯ ಉದ್ದೇಶಕ್ಕೆ ಬಳಸಿ ಬಿಟ್ಟಿದ್ದೀರಿ. ಗ್ಯಾರೆಂಟಿಗಳಿಗೆ ಬಳಸಿದ 11 ಸಾವಿರ ಕೋಟಿಯನ್ನ ವಾಪಸ್ ಪಡೆಯಿರಿ…

Read More