Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮೈಸೂರು ಜಿಲ್ಲೆಯ ಸರಗೂರು ತಾಲೂಕಿನಲ್ಲಿ ಪದೇ ಪದೆ ಜನರ ಮೇಲೆ ದಾಳಿ ಮಾಡಿ ಜನ, ಜಾನುವಾರುಗಳ ಸಾವಿಗೆ ಕಾರಣವಾಗಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ ದಾಳಿ ಮಾಡಿ, ಅವರ ಸಾವಿಗೆ ಕಾರಣವಾಗಿದ್ದ ಈ ಹುಲಿಯನ್ನು ಸೆರೆ ಹಿಡಿದಿರುವುದಾಗಿ ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಸಚಿವರು ಹೇಳಿದ್ದಾರೆ. ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಈ ಹುಲಿಯ ಡಿಎನ್ಎ ಎರಡನ್ನೂ ಪರಿಶೀಲಿಸಿ, ಸೆರೆ ಹಿಡಿಯಲಾದ ಹುಲಿ ಹೆಡಿಯಾಲ, ಮೊಳೆಯೂರು, ನುಗು ಸುತ್ತಮುತ್ತ ಜನರ ಅಮೂಲ್ಯ ಜೀವ ಹಾನಿ ಮಾಡಿದ ಹುಲಿಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಉನ್ನತಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ತಪ್ಪು ಮಾಡಿದರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು . ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಮೇಶ್ ರೆಡ್ಡಿ ಹಾಗೂ ಭಯೋತ್ಪಾದಕರಿಗೆ ಮೊಬೈಲ್ ನೀಡಲಾಗಿದ್ದು, ಅಲ್ಲದೆ ಇಂದು ಸಹ ಮತ್ತೊಂದು ವಿಡಿಯೋ ವೈರಲಾಗಿದ್ದು ಕೈದಿಗಳು ಮಧ್ಯ ಸೇವಿಸಿ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆ ರೀತಿ ಯಾರು ಮಾಡಿದ್ದಾರೋ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಅಲ್ಲದೇ ಅವಕಾಶ ಮಾಡಿಕೊಟ್ಟವರೆ ವಿರುದ್ಧವು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
BREAKING : ಜೈಲಲ್ಲಿ ಯಾರಿಗೂ ರಾಜಾತಿಥ್ಯ ನೀಡೋ ಹಾಗಿಲ್ಲ : ಅಧಿಕಾರಿಗಳಿಗೆ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ವಾರ್ನಿಂಗ್
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ಮತ್ತೊಮ್ಮೆ ಬಯಲಾಗಿದ್ದು ಜೈಲಿನಲ್ಲಿ ಉಮೇಶ್ ರೆಡ್ಡಿ ಹಾಗೂ ಭಯೋತ್ಪಾದಕರು ಸೇರಿದಂತೆ ಹಲವು ಕೈದಿಗಳ ಕೈಯಲ್ಲಿ ಮೊಬೈಲ್ ಕಂಡುಬಂದಿದ್ದು ಈ ಒಂದು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ ಇದಕ್ಕೆ ಯಾರು ಹೊಣೆಗಾರರಾಗಿದ್ದಾರೆ. ಅಂಥವರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಇವಂದು ಘಟನೆಗಳು ಮಂಗಳೂರು ಬೆಳಗಾವ್ ಸೇರಿದಂತೆ ಬಹಳ ಕಡೆ ಆದ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಅವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪದೇಪದೇ ಆಗಿದ್ದು ಕೇಳಿಬಂದಿದ್ದು ಇದೇ ಕೂಡ ಇದೇ ರೀತಿಯಾದಾಗ ಕೆಲವರನ್ನು ಸಸ್ಪೆಂಡ್ ಮಾಡಲಾಗಿತ್ತು. ಎಡಿಜಿಪಿ ಬಿ ದಯಾನಂದ ಜೊತೆಗೆ ನಾನು ಮಾತನಾಡಿದ್ದೇನೆ ಯಾರು ಹೊಣೆಗಾರರಾಗಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೂಪರಿಟೆಂಡೆಂಟ್ ಮತ್ತು ಕೆಳ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕೂಡಲೇ ವರದಿ…
ಬೆಂಗಳೂರು : ಯೋಗ ಗುರು ನಿರಂಜನ ಮೂರ್ತಿಯಿಂದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಿ ಪೊಲೀಸ್ ಬೆಂಗಳೂರಿನ ಆರ್ ಆರ್ ನಗರ ಠಾಣೆ ಪೊಲೀಸ್ರು ವಿಶೇಷ ಕೋರ್ಟಿಗೆ ಚಾರ್ಜ ಶೀಟ್ ಸಲ್ಲಿಸಿದ್ದಾರೆ. ಯೋಗ ಕಲಿಯಲು ಬಂದಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ವೇಳೆ ವಿದ್ಯಾರ್ಥಿನಿಗೆ ಅತ್ಯಾಚಾರ ಎಸಗಿರುವ ಸಾಕ್ಷಿ ಲಭ್ಯವಾಗಿದ್ದು ಕೆಲ ವಿಡಿಯೋ ಹಾಗೂ ಫೋಟೋಗಳು ಕೂಡ ಲಭ್ಯವಾಗಿವೆ. FSL ಒಂದು ವರದಿ ಮಾತ್ರ ಬರುವುದು ಬಾಕಿ ಇದೆ. ಹಲವು ಮಹಿಳೆಯರಿಗೆ ಯೋಗ ಗುರು ಅತ್ಯಾಚಾರ ಬಗ್ಗೆ ಆರೋಪ ಸಹ ಕೇಳಿಬಂದಿತ್ತು. ತನಿಖೆಯ ವೇಳೆ ಆರ್ ಆರ್ ನಗರ ಠಾಣೆ ಪೋಲಿಸರು ಮಾಹಿತಿ ಕಲೆ ಹಾಕಿದ್ದರು. ಮೊಬೈಲ್ ಪರಿಶೀಲನೆ ವೇಳೆ ಮಹಿಳೆಯರ ಜೊತೆ ಯೋಗ ಗುರುಗೆ ಸಂಪರ್ಕ ಇರುವುದು ದೃಢವಾಗಿದೆ. ಹಲೋ ಮಹಿಳೆಯರ ಜೊತೆ ಲೈಂಗಿಕ ಸಂಪರ್ಕ ಮಾಡಿದ್ದು ಕೂಡ ಪತ್ತೆಯಾಗಿದೆ. ಆದರೆ ವಿದ್ಯಾರ್ಥಿನಿ ಹೊರತುಪಡಿಸಿ ಬೇರೆ…
ಬೆಂಗಳೂರು : ನಿನ್ನೆ ತಾನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಮೇಶ್ ರೆಡ್ಡಿ ಹಾಗೂ ಭಯೋತ್ಪಾದಕರು ಮೊಬೈಲ್ ನಲ್ಲಿ ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಅದರ ಬೆನ್ನಲ್ಲೇ ಇದೀಗ ಮತ್ತೊಂದು ಜೈಲಿನ ಕರ್ಮಕಾಂಡ ಬಯಲಾಗಿದ್ದು, ಜೈಲಿನಲ್ಲಿ ಮದ್ಯ ಸೇವಿಸಿ ಕೈದಿಗಳ ಭರ್ಜರಿ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಹೌದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಧ್ಯ ಕುಡಿದು ಕೈದಿಗಳು ಭರ್ಜರಿ ಡ್ಯಾನ್ಸ್ ಹಾಕಿದ್ದಾರೆ ಜೈಲಿನಲ್ಲಿ ಡ್ಯಾನ್ಸ್ ಮಾಡುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ನಾನ್ ವೆಜ್ ಎಣ್ಣೆ ಫುಲ್ ಮೋಜು ಮಸ್ತಿ ಮಾಡುತ್ತಿರುವ ವಿಡಿಯೋ ಆಗಿದೆ ಡ್ರಮ್ ಮತ್ತು ತಟ್ಟೆಗಳೇ ಕೈದಿಗಳಿಗೆ ಮ್ಯೂಸಿಕ್ ಬ್ಯಾಂಡ್ ಗಳಾಗಿವೆ. ವಿಡಿಯೋ ಯಾರೂ ವೈರಲ್ ಮಾಡಿದರು ಹೇಗೆ ವೈರಲ್ ಆಯ್ತು ಎನ್ನುವುದರ ಕುರಿತು ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ. ಇನ್ನು ಜೈಲಿನ ವೈರಲ್ ವಿಡಿಯೋ ಬಗ್ಗೆ ಪೊಲೀಸರು ತನಿಖೆ ನಡೆಸುತಿದ್ದಾರೆ ವೈರಲ್ ಆಗಿರುವ ವಿಡಿಯೋ ಪರಪ್ಪನ ಅಗ್ರಹಾರ ಜೈಲಿನದ್ದ ಅಥವಾ ಯಾವ ಜೈಲಿನದ್ದು ಎಂದು…
ಮೈಸೂರು : ಮೈಸೂರಿನ ಶಾಲೆಯಲ್ಲಿ ಬಾಲಕರಿಂದ ರ್ಯಾಗಿಂಗ್ ನಡೆಸಿರುವ ಘಟನೆ ವರದಿಯಾಗಿದ್ದು, 13 ವರ್ಷದ ಬಾಲಕನ ಮೇಲೆ ಮೂವರಿಂದ ಹಾಲೆ ನಡೆದಿದ್ದು, ಬಾಲಕನ ಮರ್ಮಾಂಗಕ್ಕೆ ಮೂವರು ಬಾಲಕರು ಒದ್ದಿದ್ದಾರೆ ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಹಲ್ಲೆಯಿಂದ ಬಾಲಕನ ಮರ್ಮಾಂಗಕ್ಕೆ ಗಂಭೀರವಾದ ಗಾಯಗಳಾಗಿವೆ. ಎಂಟನೇ ತರಗತಿಗೆ ಬಾಲಕ ಕ್ಲಾಸ ಲೀಡರ್ ಆಗಿದ್ದ ಪ್ರತಿನಿತ್ಯ ಹಣ ಕೊಡು ಮೊಬೈಲ್ ತೆಗೆದುಕೊಂಡು ಬಾ, ನಾವು ಹೇಳಿದ ಹಾಗೆ ಕೇಳು ಮಾಡು ಎಂದು ಮೂರು ಬಾಲಕರು ನಡೆಸಿದ್ದಾರೆ ಅಕ್ಟೋಬರ್ 25ರಂದು ಬಾಲಕನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಶೌಚಾಲಯದಲ್ಲಿ ಬಾಲಕನ ಮರುಮಾಂಗಕ್ಕೆ ಒದಿದ್ದಾರೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಬಾಲಕನ ಸ್ಥಿತಿ ಕಂಡು ಪೋಷಕರು ಕಂಗಾಲಾಗಿದ್ದಾರೆ. ಈ ವಿಚಾರವಾಗಿ ಬಾಲಕ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕನ್ನಡ ರಾಜ್ಯೋತ್ಸವ ಹಿನ್ನೆಲೆ ಪ್ರಾಕ್ಟೀಸ್ ಮಾಡುವಾಗ ನಾನು ಶೌಚಾಲಯಕ್ಕೆ ಹೋದೆ ಶೌಚಾಲಯದಲ್ಲಿ ಶಿಕ್ಷಕರಿಗೆ ನಮ್ಮ ಬಗ್ಗೆ ಕಂಪ್ಲೀಟ್ ಮಾಡುತ್ತೀಯಾ ಅಂತ ಹೇಳಿ ಒದಿದ್ದಾರೆ. ಶಿಕ್ಷಕರಿಗೆ ನಮ್ಮ ತಾಯಿ…
ಬೆಂಗಳೂರು : ಹಾರೋಬೆಲೆ ಡ್ಯಾಮ್ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವನಪ್ಪಿವೆ. ಕನಕಪುರ ತಾಲೂಕಿನ ಕೊನೂರು ಗ್ರಾಮದ ಬಳಿ ಈ ಒಂದು ಘಟನೆ ಸಂಭವಿಸಿದ್ದು ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೊನ್ನೂರು ಗ್ರಾಮದಲ್ಲಿ ಹಾರೋಬೆಲೆ ಡ್ಯಾಮ್ ನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವನಪ್ಪಿರುವ ಘಟನೆ ವರದಿಯಾಗಿದೆ. ಮೂರು ದಿನಗಳ ಹಿಂದೆ 3 ಕಾಡಾನೆಗಳು ಗ್ರಾಮದತ್ತ ಬಂದಿದ್ದವು. ನೀರಿನ ಸತ್ಯಗೆ ಸಿಲುಕಿ ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವನಪ್ಪಿವೆ ಕುನೂರು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು : ಸೇವಾವದಿಯಲ್ಲಿ ಸರ್ಕಾರಿ ಮಹಿಳಾ ಉದ್ಯೋಗಿ ಮೃತಪಟ್ಟ ಹಿನ್ನೆಲೆಯಲ್ಲಿ ಮಹಿಳೆಯ ದತ್ತು ಪುತ್ರನಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸುವ ಕುರಿತ ಮನವಿಯನ್ನು ಎಂಟು ವಾರದಲ್ಲಿ ಪರಿಗಣಿಸಿ ಸೂಕ್ತ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಚಿತ್ರದುರ್ಗದ ಜಿಲ್ಲೆಯ ಶ್ರೀರಾಂಪುರ ಹೋಬಳಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೈಮುನ್ನೀಸಾ ಎಂಬಾಕೆ ಉದ್ಯೋಗ ಮಾಡುತ್ತಿದ್ದರು. ಆಕೆಯು ಸೇವೆಯಲ್ಲಿದ್ದಾಗಲೇ ಅರ್ಜಿದಾರರನ್ನು ದತ್ತು ಪಡೆದಿದ್ದರು. ಈ ಕುರಿತು 2022ರ ಸೆಪ್ಟೆಂಬರ್ ವಿಲ್ ಸಹ ನೋಂದಣಿ ಮಾಡಿಸಿ, ಅರ್ಜಿದಾರ ತನ್ನ ಏಕ ಮಾತ್ರ ಉತ್ತರಾಧಿಕಾರಿ ಎಂದು ಘೋಷಣೆ ಮಾಡಿದ್ದರು. 2023ರ ಜೂ.3ರಂದು ಮೈಮುನ್ನೀಸಾ ನಿಧನ ಹೊಂದಿದ್ದರು. ಇದರಿಂದ ಚಿತ್ರದುರ್ಗ ಜಿಲ್ಲೆಯ ಆರೋಗ್ಯ ಮತ್ತು ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 2023ರ ಡಿ.2ರಂದು ಮನವಿ ಪತ್ರ ಸಲ್ಲಿಸಿದ್ದ ಅರ್ಜಿದಾರ, ತಾಯಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ತನಗೆ ಅನುಕಂಪದ ಉದ್ಯೋಗ ನೀಡುವಂತೆ ಕೋರಿದ್ದರು. ಆದರೆ, ಮೈಮುನ್ನೀಸಾ ಅವರ ಹಣಕಾಸು ಸೌಲಭ್ಯ ಪಡೆಯಲು ಅರ್ಜಿದಾರ ಅರ್ಹನಾಗಿಲ್ಲ ಎಂದು ತಿಳಿಸಿ ಆರೋಗ್ಯ…
ಹಾಸನ : ಹಾಸನದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನಿರುಪಾಲಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹುಂಡಿಗನಾಳ ಎಂಬ ಗ್ರಾಮದಲ್ಲಿ ನಡೆದಿದೆ. ಮೃತರನ್ನು ವಿಜಯಕುಮಾರ್ (12) ಹಾಗು ಸುಜನ್ (13) ಎಂದು ತಿಳಿದುಬಂದಿದೆ. ಗ್ರಾಮದ ಕೆರೆಯಲ್ಲಿ ವಿಜಯಕುಮಾರ್ ಸುಜನ್ ಸೇರಿದಂತೆ ಐವರು ಈಜಲು ತೆರಳಿದರು ಈ ವೇಳೆ ವಿಜಯಕುಮಾರ್ ಮತ್ತು ಸುಜನ್ ಕೆರೆಯಲ್ಲಿ ನಿರುಪಾಲಾಗಿ ಮುಳುಗಿ ಸಾವನ್ನಪ್ಪಿದ್ದಾರೆ. ಜಾವಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಬಾಲಕರ ಮೃತ ದೇಹ ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು ಐದು ದಿನದ ಹಸುಗು ಸನ್ನು ಪಾಪಿಗಳು ಎಸೆದು ಹೋಗಿರುವ ಘಟನೆ ವರದಿಯಾಗಿದೆ ನಡುವೆ ಹಸಿ-ಗುಸು ಪತ್ತೆಯಾಗಿದೆ ರಾತ್ರಿ ಇಡೀ ಹಸಿಗುಸು ಚಳಿಯಲ್ಲಿ ನಡುಗುತ್ತಾ ಅಳುತ್ತಿತ್ತು. ತಿರುಮಗೊಂಡನಹಳ್ಳಿ ಲೇಔಟ್ ಬಳಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಮಗು ಪತ್ತೆಯಾಗಿದೆ.ಮಗು ಅಳುವುದನ್ನು ಕೇಳಿ ಘಟನೆ ಸ್ಥಳಕ್ಕೆ ಯುವಕರು ತಕ್ಷಣ ಬಂದಿದ್ದಾರೆ ಮಗನು ರಕ್ಷಿಸಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಗುವನ್ನು ಹಸ್ತಾಂತರಿಸಿದ್ದಾರೆ. ಅಲ್ಲಿಯದಂತಹ ಮೇಳೆ ಒಬ್ಬರು ಮಗುವಿಗೆ ಹಾಲುಣಿಸಿ ತಾಯ್ತನ ಮೆರೆದಿದ್ದು ಮಾನವೀಯತೆ ಮೆರೆದಿರುವ ಘಟನೆ ವರದಿಯಾಗಿದೆ.














