Author: kannadanewsnow05

ಬೆಂಗಳೂರು : ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ಹಗರಣ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಇದೀಗ ಈ ಒಂದು ಪ್ರಕರಣದಲ್ಲಿ ಅರಕಲಗೂಡು ಶಾಸಕ ಎ ಮಂಜು ಅವರ ಹೆಸರು ಕೂಡ ತಳಕು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ಹೌದು ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಇದಿಗ ಸ್ಪೋಟಕ ತಿರುವು ಸಿಕ್ಕಿದ್ದು, ಅರಕಲಗೂಡು ಜೆಡಿಎಸ್ ಶಾಸಕ ಎ ಮಂಜು ಹೆಸರು ತಳಕು ಹಾಕುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನವೀನ ಗೌಡ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ಪೆನ್ ಡ್ರೈವ್ ನನ್ನು ಶಾಸಕ ಮಂಜು ಅವರಿಗೆ ನಾನು ನೀಡಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಆರೋಪಿ ನವೀನ್ ಗೌಡ ಫೇಸ್ಬುಕ್ ಖಾತೆಯಿಂದ ಈ ಒಂದು ಪೋಸ್ಟ್ ವೈರಲಾಗುತ್ತಿದೆ. ಏಪ್ರಿಲ್ 20 ರಂದು ನನಗೆ ರಸ್ತೆಯಲ್ಲಿ ಪೆನ್ ಡ್ರೈವ್ ಸಿಕ್ಕಿದ್ದು, ಅರಕಲಗೂಡು ಶಾಸಕರಾದ ಎ ಮಂಜು ಅವರಿಗೆ 21 ರಂದು ಅರಕಲಗೂಡಿನ ಮಾರುತಿ ಕಲ್ಯಾಣ ಮಂಟಪದಲ್ಲಿ A ಮಂಜು ಅವರಿಗೆ ನೀಡಿದ್ದೇನೆ ಕುಮಾರಸ್ವಾಮಿ ಅವರು ಹೇಳಿದ ಹಾಗೆ ವಿಡಿಯೋ…

Read More

ಕಲಬುರಗಿ : ವಿವಾಹಿತ ಮಹಿಳೆಯೊಬ್ಬಳ ಜೊತೆ ಯುವಕನೊಬ್ಬ ಅನೈತಿಕ ಸಂಬಂಧ ಹೊಂದಿದ್ದ ಎಂದು ತಿಳಿದ ಮಹಿಳೆಯ ಕುಟುಂಬದವರು, ಆತ ಒಬ್ಬಂಟಿಯಾಗಿ ಸಿಗುವುದಕ್ಕೆ ಕಾದು ಆತನ ಮೇಲೆ ಹಲ್ಲೆ ನಡೆಸಿ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಮಣ್ಣೂರಿನಲ್ಲಿ ನಡೆದಿದೆ. ಮಣ್ಣೂರಿನ ರಂಜಾನ್ ಮೆಹಬೂಬ್ ತಾರಾ ವ್ಯಕ್ತಿ ಕೊಲೆಯಾಗಿದ್ದು, ಅದೇ ಗ್ರಾಮದ ವಿವಾಹಿತ ಮಹಿಳೆಯೊಬ್ಬಳ ಜೊತೆ ಈ ರಂಜಾನ್ ಮೆಹಬೂಬ್ ಅನೈತಿಕ ಸಂಬಂಧ ಹೊಂದ್ದಿದ್ದ. ಆಕೆ ಗಂಡ ದುಬೈನಲ್ಲಿ ಇರುವುದರಿಂದ ಈ ರಂಜಾನ್ ಜೊತೆ ಕದ್ದು ಮುಚ್ಚಿ ಇಬ್ಬರು ಸೇರುತ್ತಿದ್ದರಂತೆ. ಇದನ್ನ ನೋಡಿದ್ದ ಮಹಿಳೆ ಕುಟುಂಬಸ್ಥರು ಹತ್ತಾರು ಭಾರಿ ಕರೆದು ರಾಜಿ ಪಂಚಾಯಿತಿ ಮಾಡಿದ್ದಾರೆ. ಆದರೂ ರಾಜಿ ಪಂಚಾಯಿತಿ ಹಾಗೂ ಎಚ್ಚರಿಕೆಗೂ ಕೂಡ ರಂಜಾನ್ ಮೆಹಬೂಬ್ ತಲೆ ಕೆಡಿಸಿಕೊಳ್ಳದೆ ಮಹಿಳೆಯ ಜೊತೆ ಸಂಬಂಧವನ್ನು ಮುಂದುವರೆಸಿದ್ದ. ಇದರಿಂದ ಕುಪಿತಗೊಂಡ ಮಹಿಳೆಯ ಕುಟುಂಬಸ್ಥರು ಈತನಿಗೆ ಒಂದು ಗತಿ ಕಾಣಿಸಬೇಕೆಂದು ನಿನ್ನೆ ಆತ ಹೊಲದ ಕಡೆಯಿಂದ ಒಬ್ಬನೇ ವಾಪಸ್ ಮರಳುತ್ತಿದ್ದಾಗ, ಗ್ರಾಮದ ಹೊರವಲಯದಲ್ಲಿ ಮನಬಂದಂತೆ…

Read More

ಅಮೇರಿಕಾ : ಹಂದಿ ಕಿಡ್ನಿ ಅಳವಡಿಸಿಕೊಂಡ ವಿಶ್ವದ ಮೊದಲ ವ್ಯಕ್ತಿ ಎಂಬ ಐತಿಹಾಸಿಕ ದಾಖಲೆಗೆ ಕಾರಣನಾದ ರಿಚರ್ಡ್ ಸ್ಲೇಮನ್ ಅವರು ಈ ಶಸ್ತ್ರಚಿಕಿತ್ಸೆ ನಡೆದು 2 ತಿಂಗಳ ಬಳಿಕ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹೌದು ಅಮೆರಿಕಾದ ಮೂಲದ 62 ವರ್ಷ ಪ್ರಾಯದ ರಿಚರ್ಡ್ ಸ್ಲೇಮನ್ ಅವರಿಗೆ 2 ತಿಂಗಳ ಹಿಂದೆ ಮಾರ್ಚ್ 21 ರಂದು ತಳೀಯವಾಗಿ ಮಾರ್ಪಡಿಸಿದ ಹಂದಿಯ ಕಿಡ್ನಿಯನ್ನು ಅಳವಡಿಸಲಾಗಿತ್ತು. ಬೋಸ್ಟನ್‌ನ ಮ್ಯಾಸಚುಸೆಟ್ಸ್‌ನ ಆಸ್ಪತ್ರೆಯಲ್ಲಿ ಈ ಶಸ್ತ್ರಚಿಕಿತ್ಸೆ ನಡೆದಿತ್ತು. ಶಸ್ತ್ರಚಿಕಿತ್ಸೆ ನಡೆದ 2 ವಾರಗಳ ನಂತರ ಅವರು ಮನೆಗೆ ಮರಳಿದ್ದರು. ಡಯಲಿಸೀಸ್‌ನಲ್ಲಿನ ಸಮಸ್ಯೆಯಿಂದಾಗಿ ಅವರು ಪ್ರತಿ ಎರಡು ವಾರಗಳಿಗೊಮ್ಮೆ ಆಸ್ಪತ್ರೆಗೆ ದಾಖಲಾಗಬೇಕಾಗಿತ್ತು. ಹೀಗಾಗಿ ಅವರು ಹಂದಿ ಕಿಡ್ನಿ ಕಸಿಗೆ ಒಳಗಾಗಲು ಬಯಸಿದ್ದರು. ‘ಇದು ಕೇವಲ ನನಗೆ ಮಾತ್ರ ಸಹಾಯ ಮಾಡುವುದಿಲ್ಲ, ಇದು ಬದುಕಲು ಕಿಡ್ನಿ ಕಸಿಗೆ ಒಳಗಾಗಲೇಬೇಕು ಎಂಬ ಸ್ಥಿತಿಯಲ್ಲಿರುವ ಅನೇಕರಿಗೆ ಒಂದು ಭರವಸೆಯ ಮಾರ್ಗವಾಗಿದೆ ಎಂದು ಅವರು ಕಸಿ ಪ್ರಕ್ರಿಯೆಗೆ ಒಳಗಾದ ಸಂದರ್ಭದಲ್ಲಿ ಹೇಳಿಕೊಂಡಿದ್ದರು. ಒಂದು ಜಾತಿಯಿಂದ…

Read More

ರಾಮನಗರ : ಕೌಟುಂಬಿಕ ಕಲಹಕ್ಕೆ ಬೇಸತ್ತು ಪತಿಯೊಬ್ಬ ತನ್ನ ಪತ್ನಿಯ ವಿಚ್ಛೇದನಕ್ಕೆ ಮುಂದಾಗಿದ್ದಾಳೆ ಎಂದು ತಿಳಿದು ಆಕೆಯ ತಲೆಗೆ ರಾಡ್ ನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಮುದುವಾಡಿ ಗೇಟ್ ಬಳಿ ನಡೆದಿದೆ.ಪಿಚ್ಚನಕೆರೆ ಗ್ರಾಮದ ಮಂಜುಳಾ, ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ. ಮದುವೆಯಾದ ಹೊಸತರಲ್ಲಿ ಎಲ್ಲವು ಚೆನ್ನಾಗಿಯೇ ಇತ್ತು.ರಾಜೇಶ್ ಎಂಬಾತನೊಂದಿಗೆ ಮಂಜುಳಾ ಪೋಷಕರು ಮದುವೆ ಮಾಡಿ ಕೊಟ್ಟಿದ್ದರು. ಆದರೆ ದಿನ ಕಳೆದಂತೆ ಪತ್ನಿ ಜೊತೆಗೆ ರಾಜೇಶ್ ಜಗಳವಾಡಲು ಆರಂಭಿಸಿದ್ದ ಇದರಿಂದ ಬೇಸತ್ತ ಇಬ್ಬರು ವಿಚ್ಛೇದನ ಪಡೆದುಕೊಳ್ಳಲು ನಿರ್ಧರಿಸಿದ್ದಾರೆ. ಅಲ್ಲದೆ ವಿಚ್ಛೇದನಕ್ಕೆ ಇಬ್ಬರು ಕೂಡ ಅರ್ಜಿ ಸಲ್ಲಿಸಿದ್ದರು.ಇದಾದ ಮೇಲೂ ಕೂಡ ಪತಿ ರಾಜೇಶ್ ಪತ್ನಿ ಮಂಜುಳಾ ಜೊತೆಗೆ ಗಲಾಟೆ ಮುಂದುವರೆಸಿದ್ದ. ಇಂದು ದೊಡ್ಡಮುದುವಾಡಿ ಗೇಟ್ ಬಸ್‌ ನಿಲ್ದಾಣದ ಬಳಿ ನಿಂತಿದ್ದಾಗ ರಾಡ್‌ನಿಂದ ತಲೆಗೆ ಹೊಡೆದು ಪತಿ ರಾಜೇಶ್ ಅಲ್ಲಿಂದ ಪರಾರಿಯಾಗಿದ್ದಾನೆ.ತಲೆಗೆ ಬಿದ್ದ ಬಲವಾದ ಹೊಡೆತದಿಂದ ಮಂಜುಳಾ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ.ಸ್ಥಳಕ್ಕೆ ಕನಕಪುರ ಗ್ರಾಮಾಂತರ ಪೊಲೀಸರು…

Read More

ಬೆಂಗಳೂರು : ನನ್ನ ಪ್ರಕಾರ ಈ ಬಾರಿ ಕೈ ಮೈತ್ರಿಕೂಟದ ಇಂಡಿಯಾ ಅಧಿಕಾರಕ್ಕೆ ಬರುತ್ತದೆ, ಬಿಜೆಪಿಯವರು ಪ್ರಧಾನಿಯಾಗಲು ಸಾಧ್ಯವೇ ಇಲ್ಲ.ಇಂಡಿಯಾ ಮೈತ್ರಿ ಕೂಟ ಭಾರತ ದೇಶವನ್ನು ಆಳುತ್ತದೆ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಪರ್ಮನೆಂಟಾಗಿ ಅವರ ಮೈತ್ರಿ ಇರಲಿ ನಮ್ಮದೇನು ಅಭ್ಯಂತರವಿಲ್ಲ. ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಯಾರ ಫೋಟೋ ಬೇಕಾದರೂ ಹಾಕಿಕೊಂಡು ಚುನಾವಣೆಗೆ ಹೋಗಲಿ ಯಾರ ಬೇಕಾದರೂ ಜೋಡಣೆ ಮಾಡಿಕೊಳ್ಳಲಿ ಯಾವುದಕ್ಕೂ ನಮ್ಮ ಅಭ್ಯಂತರವಿಲ್ಲ. ಇನ್ನು ಪ್ರಜ್ವಲ್ ರೇವಣ್ಣ ಶೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಭಾರತಕ್ಕೆ ಆಗಮಿಸಿದ ಪ್ರಜ್ವಲ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಡಿಸಿಎಂ ಡಿಕೆ ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡದೆ ಹಾಗೆ ತೆರಳಿದರು.

Read More

ಗದಗ : ಜಿಲ್ಲೆಯ ಲಕ್ಷ್ಮೇಶ್ವರದ ಹಳ್ಳದ ಕೆರೆ ಬಡಾವಣೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮನೆ ಒಂದು ಹೊತ್ತಿ ಉರಿದಿದ್ದು ಮನೆಯಲ್ಲಿದ್ದ ಫ್ಯಾನ್ ಈ ಘಟನೆ ನಡೆದಿದ್ದು,ಕುರ್ಚಿ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಗಿವೆ. ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಮನೆಯೊಂದು ಹೊತ್ತಿ ಉರಿದಿದ್ದು, ದಾನಪ್ಪ ಹುಲಕೋಟಿ ಎಂಬುವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಫ್ಯಾನ್ ಚೇರ್ ಸೇರಿದಂತೆ ಮನೆಯಲ್ಲಿದ್ದ ಎಲ್ಲ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿಯವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More

ಬೆಂಗಳೂರು : ತಂದೆ ಕಾರ್ ವಾಶ್ ಮಾಡುತ್ತಿದ್ದ ವೇಳೆ ಬಾಲಕ ಕಾರಿನ ಎಕ್ಸಲೇಟರ್ ಒತ್ತಿದರಿಂದ ಐದು ವರ್ಷದ ಮಗು ದುರಂತವಾಗಿ ಸಾವನ್ನಪ್ಪಿರುವ ಘಟನೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು ಬಾಲಕ 15 ವರ್ಷದವನೆಂದು ತಿಳಿದಿದ್ದು ಇದೀಗ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ಘಟನೆಯಲ್ಲಿ ಮತ್ತೊಂದು ಮಗುವಿಗೆ ಗಂಭೀರ ಗಾಯ 5 ವರ್ಷದ ಬಾಲಕ ಧನರಾಜ್ ಗೆ ಗಂಭೀರ ಗಾಯವಾಗಿದೆ. ರಾಯಚೂರು ಮೂಲದ ಲೋಕೇಶ್ ಪುತ್ರ ಧನರಾಜ್ ಎನ್ನುವ ಬಾಲಕನಿಗೆ ಗಂಭೀರವಾದ ಗಾಯವಾಗಿದೆ.ಲೋಕೇಶ್ ಬ್ಯಾಂಕ್ ಒಂದರಲ್ಲಿ ಸೆಕ್ಯೂರಿಟಿ ಗಾರ್ಡಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಕಾರಿನ ಮೇಲೆ ಪೊಲೀಸ್ ಫಲಕ ಪತ್ತೆಯಾಗಿದ್ದು, ಸದ್ಯ ಕಾರು ಓಡಿಸುತ್ತಿದ್ದ ಬಾಲಕನನ್ನು ಇದೀಗ ಬಂಧಿಸಲಾಗಿದೆ. ಬೆಂಗಳೂರಿನ ಓಲ್ಡ್ ಏರ್ ಪೋರ್ಟ್ ರಸ್ತೆ ಮುರುಗೇಶಪಾಳ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಬಾಲಕನನ್ನು 5 ವರ್ಷದ ಅರವ್ ಎಂದು ಹೇಳಲಾಗುತ್ತಿದೆ. ಇಂದು ಬೆಳಗ್ಗೆ 10.30ರ ಸುಮಾರಿಗೆ ಈ ದುರಂತ ನಡೆದಿದೆ. 15 ವರ್ಷದ…

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಕರಣವನ್ನು ಸಿವಿಐಗೆ ಕೊಡಿ ಎಂದು ಆಗ್ರಹಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ಕೊಡಿ ಎನ್ನುವ ಬಿಜೆಪಿಯವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿ ಎಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಿ ಎನ್ನುವ ಬಿಜೆಪಿಯವರಿಗೆ ಯಾವ ನೈತಿಕತೆ ಇದೆ? ಸಿಬಿಐ ಮೇಲೆ ನನಗೆ ನಂಬಿಕೆ ಇಲ್ಲ ಅಂತಲ್ಲ. ಬಿಜೆಪಿಯವರಿಗೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇಲ್ವಾ? ಬಿಜೆಪಿಯವರಿಗೆ ಸುಳ್ಳು ಆರೋಪ ಮಾಡುವುದೇ ಕಸುಬಾಗಿದೆ. ಸಂತ್ರಸ್ತೆ ದೂರಿನ ಮೇಲೆ ದೇವರಾಜ ಗೌಡನನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ನಾವು ಪೊಲೀಸ್ ತನಿಖೆಯಲ್ಲಿ ಮಧ್ಯ ಪ್ರವೇಶ ಮಾಡುತ್ತಿಲ್ಲ.ತನಿಖೆ ಮಾಡಲು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜವಾಬ್ದಾರಿಯಿಂದ ಮಾತನಾಡಲಿ. ಪರೇಶ್ ಮೇಸ್ತ ಕೇಜ್ ಸಿಬಿಐಗೆ ಕೊಟ್ಟಿದ್ದೆವು ಆದರೆ ಆ ಕೇಸ್ ಏನಾಯಿತು? ಸುಳ್ಳು ಹೇಳುವುದರಲ್ಲಿ…

Read More

ಬೆಂಗಳೂರು : ತಂದೆಯ ಜೊತೆ ಕಾರ್ ವಾಶ್ ಮಾಡುತಿದ್ದ ಬಾಲಕ ಕಾರಿನಲ್ಲಿ ಕುಳಿತು ಜೋರಾಗಿ ಎಕ್ಸಲೇಟರ್ ತುಳಿದಿದ್ದಾನೆ.ಈ ವೇಳೆ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಕಾರು ಹರಿದು ಸಾವನ್ನಪ್ಪಿರುವ ಘೋರ ಘಟನೆ ಬೆಂಗಳೂರಿನ ಓಲ್ಡ್ ಏರ್ ಪೋರ್ಟ್ ರಸ್ತೆ ಮುರುಗೇಶಪಾಳ್ಯ ರಸ್ತೆಯಲ್ಲಿ ನಡೆದಿದೆ. ಹೌದು ಮೃತ ಬಾಲಕನನ್ನು 5 ವರ್ಷದ ಅರವ್ ಎಂದು ಹೇಳಲಾಗುತ್ತಿದ್ದು, ಇಂದು ಬೆಳಗ್ಗೆ 10.30ರ ಸುಮಾರಿಗೆ ಈ ದುರಂತ ನಡೆದಿದೆ. 15 ವರ್ಷದ ಬಾಲಕನೊರ್ವ ತಂದೆಯ ಜತೆ ಕಾರ್ ವಾಶ್ ಮಾಡುತ್ತಿದ್ದ. ಇದೇ ವೇಳೆ ಕಾರಿನ ಡ್ರೈವಿಂಗ್‌ ಸೀಟ್‌ನಲ್ಲಿ ಕುಳಿತ ಬಾಲಕ ಏಕಾಏಕಿ ಎಕ್ಸಿಲೇಟರ್ ತುಳಿದಿದ್ದಾನೆ. ಪರಿಣಾಮ ಕಾರು ರಭಸವಾಗಿ ಚಲಿಸಿದೆ. ಅಲ್ಲೇ ಕಾರ್ ಬಳಿ ಆಟವಾಡುತ್ತಿದ್ದ 5 ವರ್ಷದ ಆರವ್ ಮೇಲೆ ಹರಿದಿದೆ. ಕಾರು ಗುದ್ದಿದ ರಭಸಕ್ಕೆ ಆರವ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ನಂತರದ ತಕ್ಷಣ ಮಗುವಿನ ಮೃತ ದೇಹವನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ ಈ ಒಂದು…

Read More

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಮೂರು ಪದವೀಧರರ ಕ್ಷೇತ್ರ ಹಾಗೂ ಎರಡು ಶಿಕ್ಷಕರ ಕ್ಷೇತ್ರಕ್ಕೆ ನಿನ್ನೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೂ, ಇದೀಗ ಕಾಂಗ್ರೆಸ್ ಕೂಡ ಆರೂ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಕಾಂಗ್ರೆಸ್​ ಈ ಹಿಂದೆ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿ, ಒಂದು ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿತ್ತು. ಇದೀಗ ಬಾಕಿ ಉಳಿದಿದ್ದ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರನ್ನು ​ಆಯ್ಕೆ ಮಾಡುವ ಮೂಲಕ, ವಿಧಾನ ಪರಿಷತ್​​ನ ಆರೂ ಸ್ಥಾನಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನೈಋತ್ಯ ಶಿಕ್ಷಕರ ಕ್ಷೇತ್ರ ಕೆ.ಕೆ ಮಂಜುನಾಥ್ ಕಣಕ್ಕೆ ಇಳಿಯಲಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರ ಮರತಿಬ್ಬೇಗೌಡ ಅವರು ಸ್ಪರ್ಧೆಸಲಿದ್ದಾರೆ. ಅದೇ ರೀತಿಯಾಗಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ.ಶ್ರೀನಿವಾಸ್ ಕಣಕ್ಕೆ ಇಳಿಯಲಿದ್ದಾರೆ.ಇನ್ನು ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಡಾ.ಚಂದ್ರಶೇಖರ ಪಾಟೀಲ, ಅಲ್ಲದೆ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಆಯನೂರು ಮಂಜುನಾಥ್ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ ಅವರು ಸ್ಪರ್ಧಿಸಲಿದ್ದಾರೆ. ಇನ್ನು ಪದವೀಧರ…

Read More