Author: kannadanewsnow05

ಉತ್ತರಕನ್ನಡ : ಕಳೆದ ಕೆಲವು ದಿನಗಳ ಹಿಂದೆ ಹೊನ್ನಾವರದಲ್ಲಿ ಹಸುವಿನ ತಲೆ ಕಡೆದು ಗೋಮಾಂಸ ಮಾರಾಟ ಮಾಡಿದ ಪ್ರಕರಣ ಮಾಸುವ ಮುನ್ನವೇ, ಮತ್ತೊಂದು ಹೇಯ ಕೃತ್ಯ ನಡೆದಿದ್ದು, ಪಾಪಿಗಳು ಗಬ್ಬದ ಹಸುವನ್ನು ಭೀಕರವಾಗಿ ಹತ್ಯೆಗೈದು ಅದರ ಹೊಟ್ಟೆಯಲ್ಲಿದ್ದ ಕರುವನ್ನು ನದಿಗೆ ಬಿಸಾಡಿರುವ ದಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ನಡೆದಿದೆ. ಹೌದು ಇತ್ತೀಚೆಗೆ ಪಕ್ಕದ ಹೊನ್ನಾವರ ತಾಲೂಕಿನಲ್ಲಿ ಗಬ್ಬದ ಗೋವನ್ನು ಕದ್ದು ಹತ್ಯೆಗೈದು ಗೋಮಾಂಸವನ್ನು ಸಾಗಾಟ ಮಾಡಿದಪ್ರಕರಣ ಜನಮಾನಸದಿಂದ ಮಾಸುವ ಮುನ್ನವೇ ಭಟ್ಕಳದಲ್ಲಿ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಭಟ್ಕಳ ತಾಲೂಕಿನ ಹೆಬಳೆಯ ಕುಕ್ ನೀರ್‌ಬಳಿಯಲ್ಲಿ ಗಬ್ಬದ ಹಸು ಕಡಿದ ದುರುಳರು ಹೊಟ್ಟೆಯೊಳಗಿದ್ದ ಕರು ಮತ್ತು ಗೋವಿನ ಬಾಲವನ್ನು ವೆಂಕಟಾಪುರ ನದಿಯಂಚಿನಲ್ಲಿ ಎಸೆದು ಗೋಮಾಂಸದೊಂದಿಗೆ ಪರಾರಿಯಾಗಿದ್ದಾರೆ. ಗೋವಿನ ಹೊಟ್ಟೆಯೊಳಗಿದ್ದ ಪುಟ್ಟ ಕರುವನ್ನು ಗೋಣಿ ಚೀಲದಲ್ಲಿ ಸುತ್ತಿ ಬಿಸಾಡಿದ್ದಾರೆ. ಗುರುವಾರ ಬೀದಿ ನಾಯಿಯೊಂದು ಚೀಲವನ್ನು ಎಳೆಯುತ್ತಿರುವಾಗ ಸ್ಥಳೀಯರು ನೋಡಿ ಪರಿಶೀಲಿಸಿದ್ದಾರೆ.ಆಗ ಸತ್ತ ಕರು ಇರುವುದು ಪತ್ತೆಯಾಗಿದೆ. ಜೊತೆಗೆ ಹಸುವಿನ ಬಾಲ ಕೂಡ…

Read More

ಮಂಗಳೂರು : ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಇದೀಗ ಇಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ನೆಲೆಯಲ್ಲಿ ನಗರದಲ್ಲಿ ಯಾವುದೇ ರೀತಿಯಾಗಿ ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆದಂತೆ ಸುಮಾರು 2000 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಮಂಗಳೂರು ಎಸ್ಪಿ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಹೌದು ವಕ್ಫ್ ತಿದ್ದುಪಡಿ ವಿರುದ್ಧ ಪ್ರತಿಭಟನೆ ನಡೆಯಲಾಗುತ್ತಿದ್ದು ಕರ್ನಾಟಕ ಉಲಿಮಾ ಸಂಘಟನೆಯಿಂದ ಈ ಒಂದು ಪ್ರತಿಭಟನೆ ನಡೆಯುತ್ತಿದೆ ಮಂಗಳೂರಿನ ಗಾರ್ಡನ್ ಮೈದಾನದಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಮಂಗಳೂರು ನಗರದಲ್ಲಿ ಐವರು ಎಸ್ ಪಿ ಗಳ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಐವರು ಎಸ್ಪಿ ಗಳು, ಐವರು ಹೆಚ್ಚುವರಿ ಎಸ್ಪಿ ಗಳು, 20 ಡಿವೈಎಸ್ಪಿ, 230 ಇನ್ಸ್ಪೆಕ್ಟರ್ ಗಳು ಸೇರಿದಂತೆ 2,000ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅರೆಸೇನಾಪಡೆ, 20 ಕೆಎಸ್‌ಆರ್‌ಪಿ ತುಕಡಿ, 20 ಶಸಸ್ತ್ರ ಪೊಲೀಸ್ ಪಡೆ ನಿಯೋಜನೆ ಮಾಡಲಾಗಿದೆ ಎಂದು ಅನುಪಮ್ ಅಗರ್ವಾಲ್ ಮಾಹಿತಿ ನೀಡಿದರು. ಧರಣಿಯ ಸ್ಥಳ ಮಂಗಳೂರಿನ ಸೂಕ್ಷ್ಮ ಮತ್ತು…

Read More

ಅಮೇರಿಕ : ಅಮೇರಿಕಾದ ಫ್ಲೋರಿಡಾ ವಿಶ್ವವಿದ್ಯಾಲಯದಲ್ಲಿ ಭೀಕರ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 6 ಜನರು ಗಾಯಗೊಂಡಿದ್ದಾರೆ ಎಂದುನ್ ತಿಳಿದುಬಂದಿದೆ. ಗುಂಡಿನ ದಾಳಿ ನಡೆಸಿರುವ 20 ವರ್ಷದ ವಿದ್ಯಾರ್ಥಿಯನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಫ್ಲೋರಿಡಾ ಸ್ಟೇಟ್ ಯೂನಿವರ್ಸಿಟಿಯಲ್ಲಿ ಗುಂಡಿನ ದಾಳಿ ಮಾಡಿದ ಯುವಕಾನನನ್ನು ಸ್ಥಳೀಯ ಶೆರಿಫ್ ಡೆಪ್ಯೂಟಿಯ ಮಗ ಎಂದು ತಿಳಿದುಬಂದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಒಂದು ಘಟನೆ ಅಮೆರಿಕದ ಕಾಲೇಜು ಕ್ಯಾಂಪಸ್ ಅನ್ನು ಬೆಚ್ಚಿಬೀಳಿಸಿದೆ. ಯುವಕನನ್ನು 20 ವರ್ಷದ ಫೀನಿಕ್ಸ್ ಇಕ್ನರ್ ಎಂದು ಗುರುತಿಸಲಾಗಿದ್ದು, ಆಪಾದಿತ ಬಂದೂಕುಧಾರಿ ವಿದ್ಯಾರ್ಥಿ ಬೆಳಿಗ್ಗೆ 11:50 ರ ಸುಮಾರಿಗೆ ಗುಂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದು ಗುಡ್ನದ ಅಳಿಯಲಿ ಆರು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು. ಮಾಹಿತಿ ನೀಡಿದ್ದಾರೆ. ತಕ್ಷಣ ಗುಂಡಿನ ದಾಳಿ ನಡೆಸಿದ ಯುವಕನನ್ನು ಪೊಲೀಸರು…

Read More

ಕೊಲ್ಕತ್ತಾ : ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನಲ್ಲಿ ವಕ್ಫ್ ಕಾಯ್ದೆಯ ವಿರುದ್ಧದ ಪ್ರತಿಭಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯು ಎನ್ಐಎ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿತ್ತು. ಆದರೆ ಬಿಜೆಪಿ ಸಲ್ಲಿಸಿದ ಅರ್ಜಿಯನ್ನು ಇದೀಗ ಕೊಲ್ಕತ್ತಾ ಹೈಕೋರ್ಟ್ ತಿರಸ್ಕರಿಸಿದೆ. ಹೌದು ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಳೆದ ಏಪ್ರಿಲ್ 11ರಂದು ಪಶ್ಚಿಮ ಬಂಗಾಳದ ಮುಶಿದಾಬಾದ್ ನಲ್ಲಿ ಗಲಭೆ ನಡೆದಿತ್ತು. ಈ ಒಂದು ಗಲಭೆಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ NIA ತನಿಖೆ ನಡೆಸುವಂತೆ ಬಿಜೆಪಿ ಅರ್ಜಿ ಸಲ್ಲಿಸಿತ್ತು. ಆದರೆ ಕೊಲ್ಕತ್ತಾ ಹೈಕೋರ್ಟ್ ಅರ್ಜಿ ತಿರಸ್ಕೃರಿಸಿದೆ. ಬಿಜೆಪಿ ಸಲ್ಲಿಸಿದ ಅರ್ಜಿಯನ್ನು ಕೋಲ್ಕತ್ತಾ ಹೈಕೋರ್ಟ್ ಇದೀಗ ತಿರಸ್ಕರಿಸಿದೆ. ಘಟನೆ ಹಿನ್ನೆಲೆ? ಏಪ್ರಿಲ್ 11 ಮತ್ತು 12 ರಂದು ಮುರ್ಶಿದಾಬಾದ್‌ನ ಸುತಿ, ಧುಲಿಯನ್ ಮತ್ತು ಜಂಗೀಪುರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ತಿದ್ದುಪಡಿ ಮಾಡಿದ ವಕ್ಫ್ ಕಾಯ್ದೆಯ ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಹಿಂಸಾಚಾರದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ನೂರಾರು ಜನರು ನಿರಾಶ್ರಿತರಾಗಿದ್ದು, ಭಯಭೀತ ಗ್ರಾಮಸ್ಥರು ಊರು ತೊರೆದಿದ್ದರು.…

Read More

ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಂಗಳೂರಲ್ಲಿ ಯುವತಿಯೊರ್ವಳಿಗೆ ಮದ್ಯ ಕುಡಿಸಿ ಆಟೋ ಚಾಲಕ ಹಾಗು ಆತನ ಇಬ್ಬರು ಸ್ನೇಹಿತರು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಮುನ್ನೂರು ಗ್ರಾಮ ಮತ್ತು ಉಳ್ಳಾಲ ನಗರಸಭೆ ಗಡಿಯಲ್ಲಿರುವ ನೇತ್ರಾವತಿ ನದಿ ಸಮೀಪದ ಬೊಳ್ಳ ಹೌಸ್‌ ಬಳಿ ಘಟನೆ ನಡೆದಿದ್ದು, ಕುಂಪಲ ಬಗಂಬಿಲ ಮೂಲದ ರಿಕ್ಷಾ ಚಾಲಕ ಸೇರಿ ಮೂವರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದ್ದು, ರಿಕ್ಷಾ ಚಾಲಕ ಹಾಗು ಆತನ ಇಬ್ಬರು ಸ್ನೇಹಿತರನ್ನು ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ.ಮುಲ್ಕಿ ನಿವಾಸಿ 10 ವರ್ಷಕ್ಕಿಂತ ಹೆಚ್ಚು ಕಾಲ ಆಟೋ ಚಾಲಕನಾಗಿ ದುಡಿಯುತ್ತಿದ್ದ ಪ್ರಭುರಾಜ್ (38), ಕುಂಪಲ ನಿವಾಸಿ ಇಲೆಕ್ಟಿಷಿಯನ್ ಕಾರ್ಯನಿರ್ವಹಿಸುವ ಮಿಥುನ್ (30) ಹಾಗೂ ಮಂಗಳೂರಿನಲ್ಲಿ ವಾಸ ಮಾಡುವ ಮತ್ತೋರ್ವ ಗೆಳೆಯ ಮಣಿಯನ್ನು ಬಂಧಿಸಲಾಗಿದೆ. ಪ.ಬಂಗಾಳ ಮೂಲದ ಯುವತಿ ಉದ್ಯೋಗ ಅರಸಿ ಬಂದಿದ್ದಳು. ಕೇರಳದ ಉಪ್ಪಳ ಎಂಬಲ್ಲಿ ವಾಸವಾಗಿದ್ದಳು. ಸ್ನೇಹಿತನ ಜೊತೆಗೆ ಮಂಗಳೂರಿಗೆ ಬಂದಿದ್ದ ವೇಳೆ…

Read More

ನವದೆಹಲಿ : ಭಾರತದ ಹೆದ್ದಾರಿ ಟೋಲ್ ಸಂಗ್ರಹ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಸರ್ಕಾರ ಸಜ್ಜಾಗಿದೆ. ಮೇ 1ರಿಂದ ದೇಶಾದ್ಯಂತ ಫಾಸ್ಟ್​​ಟ್ಯಾಗ್​ ಬದಲಿಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬರಲಿದೆ. ಈ ಹೊಸ ವ್ಯವಸ್ಥೆಯು ಗ್ಲೋಬಲ್ ನ್ಯಾವಿಗೇಷನ್ ಸ್ಯಾಟ್​​ಲೈಟ್ ಸಿಸ್ಟಮ್ (GNSS) ತಂತ್ರಜ್ಞಾನ ಬಳಸಿಕೊಂಡು ವಾಹನಗಳ ಚಲನೆಯನ್ನು ಟ್ರ್ಯಾಕ್ ಮಾಡಿ, ಸಂಚರಿಸಿದ ದೂರದ ಆಧಾರದ ಮೇಲೆ ಟೋಲ್ ಶುಲ್ಕ ಲೆಕ್ಕಹಾಕಲಿದೆ. ಪ್ರಯಾಣಿಕರು ಸಂಚರಿಸಿದ ನಿಖರ ದೂರಕ್ಕೆ ತಕ್ಕಂತೆ ಟೋಲ್ ಶುಲ್ಕ ವಿಧಿಸಲಾಗುತ್ತದೆ. ಇದರಿಂದ ಸಣ್ಣ ಅಂತರದ ಪ್ರಯಾಣಿಕರಿಗೆ ಹಣ ಉಳಿತಾಯವಾಗಲಿದೆ. ಟೋಲ್ ಬೂತ್‌ಗಳನ್ನು ತೆಗೆದುಹಾಕುವುದರಿಂದ ಟ್ರಾಫಿಕ್ ಜಾಮ್‌ನ ಸಮಸ್ಯೆ ಕಡಿಮೆಯಾಗಿ, ವಾಹನ ಚಾಲಕರ ಮತ್ತು ಪ್ರಯಾಣಿಕರ ಸಮಯ ಉಳಿತಾಯವಾಗಲಿದೆ. ಆನ್‌ಬೋರ್ಡ್ ಯೂನಿಟ್ (OBU) ಮೂಲಕ ಟೋಲ್ ಶುಲ್ಕ ಸ್ವಯಂಚಾಲಿತವಾಗಿ ಲೆಕ್ಕಹಾಕಿ, ಚಾಲಕರ ಬ್ಯಾಂಕ್ ಖಾತೆಯಿಂದ ಶುಲ್ಕ ಕಡಿತಗೊಳ್ಳಲಿದೆ. ಇದರಿಂದ ಕೈಯಿಂದ ಶುಲ್ಕ ಸಂಗ್ರಹದ ದೋಷಗಳು ಮತ್ತು ವಂಚನೆ ಸಾಧ್ಯತೆ ಕಡಿಮೆಯಾಗುತ್ತದೆ. ಟ್ರಾಫಿಕ್ ಜಾಮ್ ಕಡಿಮೆಯಾಗುವುದರಿಂದ ಇಂಧನ ಬಳಕೆ ಮತ್ತು ವಾಹನ…

Read More

ತುಮಕೂರು : ನಿನ್ನೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾತಿಗಣತಿ ವರದಿ ಕುರಿತು ವಿಶೇಷ ಸಂಪುಟ ಸಭೆ ನಡೆಯಿತು.ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಕೈಗೊಂಡ ಮಾನದಂಡಗಳ ವಿವರಗಳನ್ನು ಸ್ವಲ್ಪ ಮಟ್ಟಿಗೆ ಚರ್ಚಿಸಲಾಗಿದ್ದು, ಚರ್ಚೆ ಅಪೂರ್ಣವಾಗಿರುವುದರಿಂದ ಮುಂದಿನ ಸಚಿವ ಸಂಪುಟ ಸಭೆ ಏಪ್ರಿಲ್ 24 ರಂದು ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿದ್ದು, ಆಯಾ ಭಾಗದ ವಿಷಯಗಳು ಹೆಚ್ಚಾಗಿ ಚರ್ಚೆಗೆ ಬರುತ್ತದೆ. ಮೇ 2 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲು ಸಚಿವ ಸಂಪುಟ ನಿರ್ಧರಿಸಿದೆ. ಇನ್ನು ಈ ವಿಚಾರವಾಗಿ ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ  ಶ್ರೀಗಳು ಮಾತನಾಡಿದ್ದು, ಸಮೀಕ್ಷೆ ಮಾಡೋಕೆ ಮಠಕ್ಕೆ ಯಾರೂ ಬಂದಿಲ್ಲ ಇಲ್ಲಿ ಯಾರನ್ನ ಕೇಳಿದರೂ ಗೊತ್ತಿಲ್ಲ ಅಂತ ಹೇಳುತ್ತಿದ್ದಾರೆ. ಲಿಂಗಾಯತರಲ್ಲೂ ಕೂಲಿ ಮಾಡುವ ಜನರು ಇದ್ದಾರೆ ಇವತ್ತು ಬಡವರು ಯಾವ ಸಮಾಜದಲ್ಲಿ ಇಲ್ಲ ಹೇಳಿ? 10 ವರ್ಷ ಹಿಂದಿನ ಜಾತಿಯ ಗಣತಿ ಅದನ್ನ ಮಾಡದಂಡವಾಗಿ ಇಟ್ಟುಕೊಳ್ಳಬೇಕಾಗುತ್ತದೆ. 10 ವರ್ಷದ ಹಿಂದಿನ ಜಾತಿಗಣತಿಯನ್ನು…

Read More

ಉತ್ತರಪ್ರದೇಶ : ಇತ್ತೀಚಿಗೆ ಗುಜರಾತಿನ ವಾರಣಾಸಿಯಲ್ಲಿ 23 ಯುವಕರು ಯುವತಿಯ ಮೇಲೆ ಐದು ದಿನಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ನಡೆದಿದ್ದು ಕಿವಿ ಕೇಳದ ಹಾಗೂ ಮಾತು ಬಾರದ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಹೌದು ಉತ್ತರ ಪ್ರದೇಶದ ರಾಮಂಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಾಲಿಗೆ ಗುಂಡು ಹಾರಿಸುವ ಮೂಲಕ ಆರೋಪಿಯನ್ನು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ದೇಹದ ವಿವಿಧ ಭಾಗಗಳಲ್ಲಿ ಕಚ್ಚಿದ ಹಾಗೂ ಖಾಸಗಿ ಭಾಗಗಳಿಗೆ ಸಿಗರೇಟ್‌ನಿಂದ ಸುಟ್ಟ ಗುರತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವ ಶಂಕಿತನನ್ನ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ನಾಪತ್ತೆಯಾಗಿದ್ದ ಬಾಲಕಿ ನಿನ್ನೆಯ ದಿನ ಮುಂಜಾನೆ ಆಕೆ ಬೆತ್ತಲೆಯಾಗಿ ಗಾಯಗೊಂಡ ಸ್ಥಿತಿಯಲ್ಲಿ ಹೊಲವೊಂದರಲ್ಲಿ ಪತ್ತೆಯಾಗಿದ್ದಳು. ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿಂದ ಮತ್ತೆ…

Read More

ನವದೆಹಲಿ : ರಿಯಲ್ ಎಸ್ಟೇಟ್ ಡೀಲರ್ ಒಬ್ಬರು ಕ್ಯಾನ್ಸರ್ ಗೆ ವ್ಯರ್ಥವಾಗಿ ಹಣ ಖರ್ಚು ಆಗಬಾರದು ಎಂದು ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಜಿಯಾಬಾದ್‌ನಲ್ಲಿ ನಿನ್ನೆ ನಡೆದಿದೆ. ಕುಲದೀಪ್ ತ್ಯಾಗಿ (46) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ನನಗೆ ಕ್ಯಾನ್ಸರ್ ಇತ್ತು. ಚಿಕಿತ್ಸೆಗೆ ಹಣ ವ್ಯರ್ಥವಾಗಬಾರದು ಎಂದು ಈ ನಿರ್ಧಾರಕ್ಕೆ ಬಂದೆವು. ಪತ್ನಿ ಅಂಶು ತ್ಯಾಗಿ ಮತ್ತು ನಾನು ಒಟ್ಟಿಗೆ ಇರುವುದಾಗಿ ನಿರ್ಧರಿಸಿದೆವು. ಹೀಗಾಗಿ, ಅವಳನ್ನೂ ಕೊಂದಿದ್ದೇನೆ ಎಂದು ಉಲ್ಲೇಖವಾಗಿದೆ. ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದರು. ಕುಲದೀಪ್ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಎಂದು ತಿಳಿದುಬಂದಿದೆ.ಪೊಲೀಸರ ಪ್ರಕಾರ, ರಾಜ್ ನಗರ ಎಕ್ಸ್‌ಟೆನ್ಶನ್‌ನ ರಾಧಾ ಕುಂಜ್ ಸೊಸೈಟಿಯಲ್ಲಿರುವ ತನ್ನ ಮನೆಯಲ್ಲಿ ನಿನ್ನೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಪರವಾನಗಿ ಪಡೆದ ರಿವಾಲ್ವರ್‌ನಿಂದ ಗುಂಡು ಹಾರಿಸಿ ಕುಲದೀಪ್ ಮೊದಲಿಗೆ ತನ್ನ ಪತ್ನಿಯನ್ನು ಕೊಂದಿದ್ದಾರೆ. ನಂತರ ತಾನು ಗುಂಡು ಹಾರಿಸಿಕೊಂಡಿದ್ದಾರೆ. ಘಟನೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಒಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ದಂಪತಿಗಳ ಶವ ಪತ್ತೆಯಾಗಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಈ ಒಂದು ಘಟನೆ ನಡೆದಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಪರ್ವೀನ್ ಮತ್ತು ಮೆಹಬೂಬ್ ಎನ್ನುವ ದಂಪತಿಗಳ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಮೆಹಬೂಬ್ ಪತ್ನಿ ಪರ್ವೀನ್ ಶವ ಪತ್ತೆಯಾದರೆ, ಇನ್ನು ನೆಲದ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ಪತಿ ಮೆಹಬೂಬ್ ಶವ ಪತ್ತೆಯಾಗಿದೆ. ಇಬ್ಬರು ಕಟ್ಟಡ ನಿರ್ಮಾಣದ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಸಂಜಯನಗರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More