Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ಸಾಲು ಸಾಲು ದರೋಡೆ ಪ್ರಕರಣಗಳು ನಡೆಯುತ್ತಿವೆ. ನಿನ್ನೆ ಮೈಸೂರಲ್ಲಿ ಕೇರಳ ಮೂಲದ ಉದ್ಯಮಿಯ ಹಣ ಹಾಗೂ ಕಾರಿನ ಸಮೇತ ದರೋಡೆ ಮಾಡಿದರೆ ಹುಬ್ಬಳ್ಳಿಯಲ್ಲಿ ಕೆನರಾ ಬ್ಯಾಂಕ್ ಅನ್ನು ಖದೀಮರು ದರೋಡೆಗೆ ಯತ್ನಿಸಿ ವಿಫಲರಾಗಿದ್ದಾರೆ.ಇದೀಗ ಬೆಂಗಳೂರಿನಲ್ಲಿ ಕೂಡ ಈ ಒಂದು ಮುಸುಕುಧಾರಿ ಗ್ಯಾಂಗ್ ಬೆಂಗಳೂರಿನ ಕೆಆರ್ ಪುರಂನಲ್ಲಿ ಪ್ರತ್ಯಕ್ಷವಾಗಿದೆ. ಹೌದು ಮೂರು ಜನ ಕಳ್ಳರ ಈ ಒಂದು ಗ್ಯಾಂಗ್ ಕೈಯಲ್ಲಿ ಮಾರಾಕಸ್ತ್ರ ಹಿಡಿದುಕೊಂಡು ರಾತ್ರಿ 2.30 ರ ಸುಮಾರಿಗೆ ಮನೆ ಕಳ್ಳತನಕ್ಕೆ ಸ್ಕೆಚ್ ಹಾಕಿದ್ದಾರೆ. ಕೆಆರ್ ಪುರಂ ನ ಕಿತ್ತಗನೂರಿನಲ್ಲಿ ಮೂವರು ಕಳ್ಳರು ರೌಂಡ್ಸ್ ಹಾಕಿದ್ದಾರೆ. ರಾಜಾರೋಷವಾಗಿ ಮನೆಗಳ ಬಳಿ ಓಡಾಡಿರುವ ಗ್ಯಾಂಗ್ ಮುಸುಕು ಧರಿಸಿ ಮೂವರು ಖದೀಮರು ಎಂಟ್ರಿ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಹಜವಾಗಿ ಕೆಆರ್ ಪುರಂ ಸುತ್ತಮುತ್ತಲು ಏರಿಯಾಗಳಲ್ಲಿನ ಜನರಿಗೆ ಆತಂಕ ಸೃಷ್ಟಿಯಾಗಿದೆ.

Read More

ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬೆಳಗಾವಿಯಲ್ಲಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. 5ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಆರೋಪಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ನಡೆದಿದೆ. ಹೌದು ರಾಮದುರ್ಗ ತಾಲೂಕಿನ ಕೊಣ್ಣೂರು ಗ್ರಾಮದ ಈರಪ್ಪ ಕರಡಿ ಎಂಬಾತನೇ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೊಬೈಲ್ ಆಸೆ ತೋರಿಸಿ 5 ವರ್ಷದ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಹೆಸರುವ ವಿಚಾರ ಬಾಲಕಿಯ ಮನೆಯಲ್ಲಿ ಗೊತ್ತಾದ ಬಳಿಕ ಭಾವ ಪ್ರಜ್ಞೆಯಿಂದ ಆರೋಪಿ ಈರಪ್ಪ ಕಡಾಡಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತು ಕಡಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ನಾಳೆ ಬೆಳಗಾವಿಯಲ್ಲಿ ಗಾಂಧಿ ಸಮಾವೇಶ ಹಿನ್ನೆಲೆಯಲ್ಲಿ ಬೆಳಗಾವಿ ನಗರ ತಾಲೂಕಿನ ಶಾಲೆ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲೆ ಅಂಗನವಾಡಿಗಳಿಗೆ ರಜೆ ಘೋಷಿಸಿ ಡಿಸಿ ಮಹಮ್ಮದ್ ರೋಷನ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಅಲ್ಲದೆ ನಾಳೆ ಪ್ರಾಥಮಿಕ ಹಾಗೂ ಪ್ರೌಢಶಾಲೆ ಅಂಗನವಾಡಿ, ಬೆಳಗಾವಿ ಗ್ರಾಮಾಂತರ ಹಾಗೂ ನಗರದ ಎಲ್ಲಾ ಶಾಲೆಗಳು ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೂ ಕೂಡ ನಾಳೆ ರಜೆ ಘೋಷಿಸಿ ಡಿಸಿ ಮಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

Read More

ಬೀದರ್ : ರಾಶಿ ಮಾಡಿ ಕೂಡಿಟ್ಟಿದ್ದ ತೊಗರಿ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗೋಳಿ ಲಕ್ಷಾಂತರ ರೂಪಾಯಿ ಮೌಲ್ಯದ ತೊಗರಿ ಬೆಳೆ ಹೊತ್ತಿ ಉರಿದಿರುವ ಘಟನೆ ಬೀದರ್ ಜಿಲ್ಲೆಯ ಬಾಲಕಿ ತಾಲೂಕಿನ ಕೇಸರ ಜವಳಗ ಗ್ರಾಮದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಹೌದು ಕೆಸರ ಜವಳಗ ಗ್ರಾಮದಲ್ಲಿ ಈ ಒಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೀದರ್ ಜಿಲ್ಲೆಯ ಬಾಲಕಿ ತಾಲೂಕಿನ ಕೆಸರ ಜವಳಗ ಗ್ರಾಮದಲ್ಲಿ ಆಕಸ್ಮಿಕವಾಗಿ ಹೊತ್ತಿದ ಬೆಂಕಿಯಿಂದ ತೊಗರಿ ಬಣವೆ ಬೆಂಕಿಗೆ ಆಹುತಿಯಾಗಿದೆ. ಸುಮಾರು 45 ಕ್ವಿಂಟಲ್ ಗು ಅಧಿಕ ತೊಗರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಗ್ರಾಮದ ಪ್ರತಿಭಾ ಕೊಳೇಕರ್ ಎಂಬ ರೈತ ಮಹಿಳೆಗೆ ಈ ಒಂದು ತೊಗರಿ ಸೇರಿತ್ತು ಎನ್ನಲಾಗಿದೆ. ರಾಶಿ ಮಾಡಲು ಕೂಡಿ ಹಾಕಿದ್ದ ಬಣವೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಈ ಒಂದು ದುರಂತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ತೊಗರಿ ನಷ್ಟವಾಗಿದೆ. ಘಟನೆ ಕುರಿತು ಮೇಹಕಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಾಷಿಂಗ್ಟನ್ : ಉನ್ನತ ವ್ಯಾಸಂಗಕ್ಕಾಗಿ ಹಾಗೂ ಉದ್ಯೋಗಕ್ಕಾಗಿ ಎಂದು ಭಾರತೀಯರು ವಿದೇಶಕ್ಕೆ ತೆರಳುತ್ತಾರೆ. ಆದರೆ ವಿದೇಶದಲ್ಲಿ ಭಾರತೀಯರ ಮೇಲೆ ನಿರಂತರವಾಗಿ ಹಲ್ಲೆ ಹಾಗೂ ದಾಳಿ ನಡೆಯುತ್ತಲೇ ಇರುತ್ತೆ. ಇದೀಗ ಹೈದರಾಬಾದ್ ಮೂಲದ ಯುವಕನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ವರದಿಯಾಗಿದೆ. ಹೌದು ಹೈದ್ರಾಬಾದ್ ಮೂಲದ ಯುವಕ ರವಿತೇಜ (26) ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಈ ಒಂದು ಭೀಕರ ಹತ್ಯೆಯು ಅಮೆರಿಕಾದ ವಾಷಿಂಗ್ಟನ್ ಡಿಸಿಯ ಗ್ಯಾಸ್ ಸ್ಟೇಷನ್ ನಲ್ಲಿ ನಡೆದಿದೆ. ಹೈದರಾಬಾದ್‌ನ ಆರ್‌ಕೆ ಪುರಂ ಗ್ರೀನ್ ಹಿಲ್ಸ್ ಕಾಲೋನಿಯ ನಿವಾಸಿಯಾಗಿದ್ದು, ಸ್ನಾತಕೋತ್ತರ ಪದವಿ ಪಡೆಯುವ ಸಲುವಾಗಿ 2022ರಲ್ಲಿ ಅಮೆರಿಕಗೆ ತೆರಳಿದ್ದರು. ಉನ್ನತ ವ್ಯಾಸಂಗ ಶಿಕ್ಷಣ ಮುಗಿಸಿದ ಬಳಿಕ ರವಿತೇಜ ಅವರು ಅಲ್ಲಿಯೇ ಉದ್ಯೋಗಕ್ಕಾಗಿ ಅರಸುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಅವರನ್ನು ಹತ್ಯೆಗೈದಿದ್ದಾರೆ. ಸ್ಥಳೀಯ ಪೊಲೀಸರು ದಾಳಿಯ ಹಿಂದಿನ ಉದ್ದೇಶವನ್ನು ತನಿಖೆ ಮಾಡುತ್ತಿದ್ದಾರೆ ಮತ್ತು ದುಷ್ಕರ್ಮಿಗಳನ್ನು ಗುರುತಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು…

Read More

ವಿಜಯಪುರ : ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಮನಸೋಇಚ್ಛೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದವರ ಪೈಕಿ ಇಟ್ಟಿಗೆ ಕಾರ್ಖಾನೆ ಮಾಲೀಕ ಖೇಮು ರಾಠೋಡ್, ವಿಶಾಲ ಜುಮನಾಳ ಹಾಗೂ ಸಚಿವ ಮಾನವರ ಅನ್ನು ಪೊಲೀಸರು ಗಾಂಧಿನಗರದ ಖೇಮು ನಿವಾಸದಲ್ಲಿ ಬಂಧಿಸಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಹೋಗಿದ್ದವರು ಹಿಂದಿರುಗುವುದು ತಡವಾಗಿದ್ದಕ್ಕೆ ಮೂವರು ಕಾರ್ಮಿಕರ ಪಾದಗಳಿಗೆ ಕಟ್ಟಿಗೆ, ಪೈಪ್​ಗಳಿಂದ ಹೊಡೆದಿದ್ದಾರೆ. ಕಾರ್ಮಿಕರ ಮೇಲೆ ಹಲ್ಲೆ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಮಾನವೀಯ ಹಲ್ಲೆ ಸಂಬಂಧ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. ಪ್ರಕರಣ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಹಲ್ಲೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾರೇ ತಪ್ಪು ಮಾಡಿದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Read More

ಚಿಕ್ಕಮಗಳೂರು : ಸಾವು ಯಾರಿಗೆ ಯಾವಾಗ ಹೇಗೆ ಬರುತ್ತದೆ ಎಂದು ಹೇಳಲಾಗುವುದಿಲ್ಲ. ಕಳೆದ ಕೆಲವು ದಿನಗಳ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಕೆಲವೇ ದಿನಗಳಲ್ಲಿ ಹಸೆಮಣೆ ಎರಬೇಕಾಗಿದ್ದ ಯುವತಿ ಒಬ್ಬಳು ಭೀಕರವಾದ ಅಪಘಾತದಲ್ಲಿ ಸಾವನಪ್ಪಿದ್ದಳು. ಇದೀಗ ಚಿಕ್ಕಮಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ  ನೆಡೆದಿದ್ದು ಮಗಳ ಮದುವೆಯ ಸಂಭ್ರಮದಲ್ಲಿದ್ದ ತಂದೆಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಮದುವೆಯ ಬಳಿಕ ತಂದೆ ಸಾವಿನ ಸುದ್ದಿ ಕುಟುಂಬಸ್ಥರಿಗೆ ತಿಳಿಸಲಾಗಿದೆ. ಹೌದು ಮಗಳ ಮದುವೆ ಸಂಭ್ರಮದಲ್ಲಿದ್ದ ತಂದೆಯ ಸಾವನ್ನಾಪ್ಪಿದ್ದಾರೆ. ಹುಲಿತಿಮಾಪುರ ಬಳಿ ನಿನ್ನೆ ಅಪಘಾತದಲ್ಲಿ ಚಂದ್ರಪ್ಪ (45) ಎನ್ನುವವರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹುಲಿತಿಮಾಪುರದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಮೃತ ಚಂದ್ರಪ್ಪ ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿಯಾಗಿದ್ದಾರೆ. ಮದುವೆ ನಿಲ್ಲಬಾರದೆಂಬ ಕಾರಣಕ್ಕೆ ಸಂಬಂಧಿಕರು ಚಂದ್ರಪ್ಪ ಸಾವಿನ ವಿಷಯ ಮುಚ್ಚಿಟ್ಟಿದ್ದರು. ಮದುವೆ ಮುಗಿದ ಬಳಿಕ ಸಂಬಂಧಿಕರು ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಸದ್ಯ ಚಂದ್ರಪ್ಪ ಮೃತ ಪಟ್ಟಿರುವ ವಿಷಯ ತಿಳಿದು ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Read More

ಹುಬ್ಬಳ್ಳಿ : ರಾಜ್ಯದಲ್ಲಿ ಸಾಲು ಸಾಲು ಬ್ಯಾಂಕ್ ದರೋಡೆಗಳ ಪ್ರಕರಣಗಳ ನಡೆದಿದ್ದು, ಕಳೆದ ಹಲವು ದಿನಗಳ ಹಿಂದೆ ಬೀದರ್, ಮಂಗಳೂರಿನಲ್ಲಿ ನಡೆದ ದರೋಡೆ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಅಲ್ಲದೆ ಇಂದು ಬೆಳಿಗ್ಗೆ ಕೂಡ ಮೈಸೂರಿನಲ್ಲಿ ಕೇರಳ ಮೂಲದ ಉದ್ಯಮಿಯ ಕಾರು ಹಾಗೂ ಹಣದ ಜೊತೆಗೆ ದರೋಡೆ ಮಾಡಿದ ಘಟನೆ ನಡೆದಿತ್ತು. ಇದೀಗ ಹುಬ್ಬಳ್ಳಿಯಲ್ಲಿ ಕೂಡ ಬ್ಯಾಂಕ್ ದರೋಡೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಹೌದು ಹುಬ್ಬಳ್ಳಿಯಲ್ಲಿ ನಿನ್ನೆ ರಾತ್ರಿ ನವನಗರದಲ್ಲಿರುವ ಕೆನರಾ ಬ್ಯಾಂಕಿಗೆ ಕನ್ನ ಹಾಕಲು ಖದೀಮರು ಯತ್ನಿಸಿರುವ ಘಟನೆ ವರದಿಯಾಗಿದೆ. ಹುಬ್ಬಳ್ಳಿಯ ಎಪಿಎಂಸಿ ಆವರಣದಲ್ಲಿರುವ ಕೆನರಾ ಬ್ಯಾಂಕ್ ಶಾಖೆಗೆ ದರೋಡೆಗೆ ಯತ್ನಿಸಿದ್ದಾರೆ. ಬ್ಯಾಂಕಿನ ಶೇಟರ್ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ನವನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬ್ಯಾಂಕ್ ದರೋಡೆಗೆ ಯತ್ನಿಸಿದ ಕಳ್ಳರಿಗಾಗಿ ಇದೀಗ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಜಾತ್ರೆಯಲ್ಲಿ ದೀಪ ಹಚ್ಚುವ ವಿಚಾರಕ್ಕೆ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದೆ ಈ ಗಲಾಟೆ ಬಳಿಕ ಕುಸ್ತಿ ಪೈಲ್ವಾನ್ ರೀಲ್ಸ್ ಮುಖಾಂತರ ಉರಿಸಿದ್ದಕ್ಕಾಗಿ ಕುಸ್ತಿ ಪೈಲ್ವಾನನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಸಂಬಂಧ ಇಬ್ಬರು ಬಾಲಾಪರಾಧಿಗಳು ಸೇರಿದಂತೆ ಪೊಲೀಸರು 8 ಜನ ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಹೌದು ಬೆಳಗಾವಿಯಲ್ಲಿ ರೀಲ್ಸ್ ಮಾಡಿ ಉರಿಸಿದ ಹಿನ್ನೆಲೆಯಲ್ಲಿ ಸಿನಿಮಾ ಶೈಲಿಯಲ್ಲಿ ಸ್ಕೆಚ್ ಹಾಕಿ ಕುಸ್ತಿ ಪೈಲ್ವಾನ್ ನನ್ನು ಮರ್ಡರ್ ಮಾಡಲಾಗಿದೆ. ಜನವರಿ 15ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಳವಿ ಗ್ರಾಮದ ಹೊರವಲಯದಲ್ಲಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ಕೊಳವಿ ಗ್ರಾಮದ ಪ್ರಕಾಶ್ ಹಿರಟ್ಟಿ ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಜಾತ್ರೆಯಲ್ಲಿ ದೀಪ ಹಚ್ಚುವ ವಿಚಾರಕ್ಕೆ ಪ್ರಕಾಶ್ ಹಾಗೂ ರವಿಚಂದ್ರ ಎನ್ನುವವರ ನಡುವೆ ಗಲಾಟೆ ಆಗಿದೆ. ಗಲಾಟೆಯ ಬಳಿಕ ಪ್ರಕಾಶ್ ಹಿರಟ್ಟಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಹಾಕಿದ್ದ. ಬಳಿಕ ಪ್ರಕಾಶ್ ಹಿರಟ್ಟಿಯನ್ನು ಮಾರಕಸ್ತ್ರಗಳಿಂದ ಕೊಚ್ಚಿ…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಿಯಮಿತ ಜಾಮೀನು ಪಡೆದಿರುವ ನಟ ದರ್ಶನ್, ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ದರ್ಶನ್​ ಇಂದ 37 ಲಕ್ಷ ರೂಪಾಯಿ ಹಣ ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಆ ಹಣವನ್ನು ಮರಳಿ ಕೊಡಿಸುವಂತೆ ದರ್ಶನ್ ಅರ್ಜಿ ಹಾಕಿದ್ದರು. ಅರ್ಜೆ ವಿಚಾರಣೆ ನಡೆಯಿಸಿದ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಫೆಬ್ರವರಿ 1ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನದ ಬಳಿಕ ಅವರಿಂದ ಬರೋಬ್ಬರಿ 37 ಲಕ್ಷ ರೂಪಾಯಿ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಹಣವನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಬಳಸಲಾಗಿತ್ತು ಎಂದು ಪೊಲೀಸರು ಆರೋಪ ಮಾಡಿದ್ದರು. ರೇಣುಕಾ ಸ್ವಾಮಿ ಕೊಲೆಯನ್ನು ತಾವು ಮಾಡಿದ್ದಾಗಿ ಒಪ್ಪಿಕೊಳ್ಳಲು ಹೊರಗಡೆಯಿಂದ ಕರೆಸಲಾಗಿದ್ದ ಮೂವರಿಗೆ ಅದಾಗಲೇ ಒಂದಿಷ್ಟು ಹಣವನ್ನು ಸಹ ನೀಡಲಾಗಿತ್ತು. ಹಣ ವಶಪಡಿಸಿಕೊಂಡಿದ್ದ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ನ್ಯಾಯಾಲಯದಲ್ಲಿ…

Read More