Subscribe to Updates
Get the latest creative news from FooBar about art, design and business.
Author: kannadanewsnow05
ದಾವಣಗೆರೆ : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 22.40 ಲಕ್ಷ ವಂಚಿಸಿದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ದಾವಣಗೆರೆ ಸೆನ್ ಠಾಣೆ ಪೊಲೀಸರಿಂದ ಅರುಣ್ ಕುಮಾರ್ (35) ಎನ್ನುವ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ದಾವಣಗೆರೆ ಮೂಲದ ಶಿಕ್ಷಕನಿಗೆ 22.40 ಲಕ್ಷ ರೂಪಾಯಿ ವಂಚನೆ ಎಸಗಿದ್ದು, ಬ್ಯಾಂಕ್ ಖಾತೆಯಲ್ಲಿ 19 ಲಕ್ಷ ಫ್ರೀಜ್ ಮಾಡುವಂತೆ ಮನವಿ ಮಾಡಿದ್ದಾರೆ. ಕೋರಟಿಕೆರೆ ಮೂಲದ ಆರೋಪಿಯನ್ನು ಬಂಧಿಸಲಾಗಿದೆ. ಮತ್ತೆ ಇಬ್ಬರು ಆರೋಪಿಗಳಿಗೆ ಪೊಲೀಸರು ಶೋಧ ನಡೆಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೋರಟಿಕೆರೆ ಮೂಲದವರು ಮಾರ್ಚ್ 12 ರಂದು ಬ್ಲೂಡಾರ್ಟ್ ಕೊರಿಯರ್ ಹೆಸರಿನಲ್ಲಿ ಮುಂಬೈನಿಂದ ದುಬೈಗೆ ಕಳುಹಿಸುತ್ತಿದ್ದ ಪಾರ್ಸಲ್ನಲ್ಲಿ ಡ್ರಗ್ಸ್ ಸಿಕ್ಕಿದೆ. ನಿಮಗೆ ತಿಂಗಳಿಗೆ 20 ಲಕ್ಷ ಆದಾಯವಿದೆ ಎಂದು ಕರೆ ಮಾಡಿದ್ದರು. ಪಾರ್ಸಲ್ ನಲ್ಲಿ ಡ್ರಗ್ಸ್ ಸಿಕ್ಕಿದೆ ಡಿಜಿಟಲ್ ಅರೆಸ್ಟ್ ಮಾಡ್ತೇವೆ ಎಂದು ಶಿಕ್ಷಕನನ್ನು ಬೆದರಿಸಿ ಹಣ ಪಡೆದಿದ್ದರು. ಶಿಕ್ಷಕನ ಬ್ಯಾಂಕ್ ಖಾತೆ ಮಾಹಿತಿ ಪಡೆದು 22.40 ಲಕ್ಷ ವಂಚಿಸಿದ್ದರು . ವಂಚನೆಗೆ ಒಳಗಾದ ಶಿಕ್ಷಕನ ದೂರು ಆದರಿಸಿ…
ಬೆಂಗಳೂರು : ಬೆಂಗಳೂರಿನ ಪಬ್, ಕ್ಲಬ್, ಹೋಟೆಲ್, ಬಾರ್ಗಳಿಗೆ ಬಿಬಿಎಂಪಿ ಬಿಗ್ಶಾಕ್ ನೀಡಿದೆ. ಬಿಬಿಎಂಪಿ ನೋಟಿಸ್ ಜಾರಿ ಮಾಡಿದರೂ ಪ್ರತಿಕ್ರಿಯಿಸದ ಹೋಟೆಲ್ಗಳು, ಪಬ್, ಕ್ಲಬ್, ರೆಸ್ಟೋರೆಂಟ್ ಪರವಾನಗಿ ರದ್ದು ಮಾಡಲು ಬಿಬಿಎಂಪಿ ಮುಂದಾಗಿದೆ. ಹೌದು ಬೆಂಗಳೂರಿನಲ್ಲಿರುವ ಎಲ್ಲಾ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ಗಳು ನಿಯಮಾನುಸಾರ ಕ್ರಮವಹಿಸಬೇಕು. ಸ್ಮೋಕಿಂಗ್ ಝೋನ್ ಕಡ್ಡಾಯ ಇರಲೇಬೇಕು. ಇಲ್ಲದೇ ಹೋದರೆ ಕೇಸ್ ಹಾಕಿ ಪರವಾನಗಿ ರದ್ದು ಮಾಡಲು ಬಿಬಿಎಂಪಿ ಮುಂದಾಗಿದೆ.ಇನ್ನೂ ಬಿಬಿಎಂಪಿ ಮುಂದಿನ ವಾರ ನೋಟಿಸ್ ನೀಡಿದ್ದ ಸ್ಥಳಗಳನ್ನು ಪರಿಶೀಲನೆ ನಡೆಸಲಿದೆ. ಪರಿಶೀಲನೆ ನಡೆಸಿ ನೋಟಿಸ್ ಕೊಟ್ಟ ಮೇಲೂ ಸ್ಮೋಕಿಂಗ್ ಝೋನ್ ಅಳವಡಿಸಿಕೊಂಡಿಲ್ಲ ಎಂಬುದು ಕಂಡು ಬಂದರೆ ಪರವಾನಗಿ ರದ್ದು ಮಾಡಲಿದ್ದಾರೆ. ಕಳೆದ 15 ದಿನಗಳ ಹಿಂದೆ BBMP ಸುಮಾರು 300ಕ್ಕೂ ಹೆಚ್ಚು ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್ಗಳಿಗೆ ನೋಟಿಸ್ ಜಾರಿ ಮಾಡಿತ್ತು. ಸ್ಮೋಕಿಂಗ್ ಝೋನ್ ನಿರ್ಮಾಣ ಮಾಡಿಲ್ಲ ಅಂತಾ ನೋಟಿಸ್ ನೀಡಿ ಎಚ್ಚರಿಸಿತ್ತು. ನೋಟಿಸ್ ಜಾರಿ ಮಾಡಿದರೂ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ಗಳು ಸರಿಪಡಿಸಿಕೊಂಡಿಲ್ಲ ಎಂಬ…
ಮಂಗಳೂರು : ಅನನ್ಯ ಭಟ್ ನಾಪತ್ತೆ ದೂರು ವಿಚಾರವಾಗಿ ಎರಡು ದಿನಗಳ ಕಾಲ ನಡೆದ ವಿಚಾರದಲ್ಲಿ ಅನನ್ಯಾ ಭಟ್ ತನ್ನ ಮಗಳು ಎಂದು ದಾಖಲೆ ನೀಡಲಾಗದೆ ಸುಸ್ತಾಗಿದ್ದಾರೆ. ಅನನ್ಯಾ ಭಟ್ ಕಥೆ ಸೃಷ್ಟಿಯ ಹಿಂದೆ ಇದ್ದ ಗ್ಯಾಂಗ್ನ ಮುಖವಾಡ ಅನಾವರಣ ಮಾಡಿದ ಸುಜಾತ ಭಟ್ ಹೇಳಿಕೆಯಿಂದ ಬುರುಡೆ ಗ್ಯಾಂಗ್ಗೆ ಸಂಕಷ್ಟಕ್ಕೆ ಸಿಲುಕಿದೆ. ಹೌದು ಮಂಗಳವಾರ ಕರೆಯದಿದ್ದರೂ ಬೆಳ್ಳಂಬೆಳಗ್ಗೆ ಎಸ್ಐಟಿ ಕಚೇರಿಯಲ್ಲಿ ಪ್ರತ್ಯಕ್ಷವಾಗಿದ್ದ ಸುಜಾತಾ ಭಟ್ಗೆ ಅಧಿಕಾರಿಗಳು ಸತತ 6 ಗಂಟೆಗಳ ಕಾಲ ಗ್ರಿಲ್ ಮಾಡಿದರು. ಶಿವಮೊಗ್ಗದ ರಿಪ್ಪನ್ ಪೇಟೆ, ಉಡುಪಿಯ ಪರಿಕದ ಪರಿಸರ, ಕೊಡಗಿನ ವಿರಾಜಪೇಟೆ ಲಿಂಕ್ ಸಂಬಂಧ ವಿಚಾರಣೆ ನಡೆಸಿದ್ದ ಎಸ್ಐಟಿ ಬುಧವಾರ ಮತ್ತೆ ಪ್ರಶ್ನೆ ಕೇಳಿತು.ನಾನು ಹೇಳಿದ್ದ ಅನನ್ಯಾ ಭಟ್ ಕಥೆ ಸುಳ್ಳು ಎಂದು ಒಪ್ಪಿಕೊಂಡಿದ್ದಾರೆ. ನನಗೆ ಬುರುಡೆ ಗ್ಯಾಂಗ್ ಹೇಳಿದಂತೆ ಮಾಡಿದ್ದೇನೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ನನ್ನ ಹಿರಿಯರ ಆಸ್ತಿ ನನಗೆ ಬೇಕಿತ್ತು. ಈ ಕಾರಣಕ್ಕೆ ಅನನ್ಯಾ ಭಟ್ ಪಾತ್ರ ಸೃಷ್ಟಿಯಾಗಿತ್ತು. ಬೇರೆ ನನಗೆ ಏನು…
ಬೆಂಗಳೂರು : ಬೆಂಗಳೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಆಗಸ್ಟ್ 30 ಮತ್ತು 31 ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳು ವಿಸರ್ಜನಾ ಕಾರ್ಯಕ್ರಮ ಇರುವುದರಿಂದ ಗಿಡಿ ಗಿಡಿಗಳು ಮಧ್ಯ ಸೇವಿಸಿ ದಾಂದಲೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 2025ನೇ ಸಾಲಿನ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮದ ಮೆರವಣಿಗೆಯ ಸಮಯದಲ್ಲಿ ಕೆಲವು ಕಿಡಿಗೇಡಿಗಳು ಮದ್ಯಪಾನದ ಅಮಲಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಮಾಡಬಹುದಾದ ಸಾಧ್ಯತೆಗಳಿರುತ್ತವೆ. ಈ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ, ಬಾರ್ & ರೆಸ್ಟೋರೆಂಟ್ ಮತ್ತು ವೈನ್ಸ್ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸುವಂತೆ ಸಂಬಂಧಪಟ್ಟ ವಿಭಾಗಗಳ…
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಭಾರಿ ಮಳೆ ಸುರಿಯುತ್ತಿದ್ದು, ಈಗಾಗಲೇ ಉಡುಪಿ, ಶಿವಮೊಗ್ಗ, ಉತ್ತರಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇಂದಿನಿಂದ ರಾಜ್ಯದಲ್ಲಿ ಮಳೆ ಮತ್ತಷ್ಟು ಜೋರಾಗಲಿದ್ದು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ರೆಡ್, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಹೌದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡದಲ್ಲಿ ಕೂಡ ಮಳೆಯಾಗಲಿದೆ. ಕದ್ರಾ, ಸಿದ್ದಾಪುರ, ಗೇರುಸೊಪ್ಪ, ಕಾರ್ಕಳ, ಶಿರಾಲಿ, ಭಾಲ್ಕಿ, ಬಂಟವಾಳ, ಉಪ್ಪಿನಂಗಡಿ, ಮಂಗಳೂರು, ಕಾರವಾರ, ಜೋಯ್ಡಾ, ಬೀದರ್, ಅಂಕೋಲಾದಲ್ಲಿ ಭಾರಿ ಮಳೆಯಾಗಿದೆ.
ಬಾಗಲಕೋಟೆ : ಕಳೆದ ಕೆಲವು ತಿಂಗಳ ಹಿಂದೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಡ್ಡಿ ಗ್ಯಾಂಗ್ ಅಲರ್ಟ್ ಆಗಿದ್ದು ಇದೀಗ ಮತ್ತೆ ರಾಜ್ಯದಲ್ಲಿ ಚಡ್ಡಿ ಗ್ಯಾಂಗ್ ಅಲರ್ಟ್ ಆಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ರಾತ್ರಿ ಮನೆಯೊಂದಕ್ಕೆ ಕನ್ನ ಹಾಕಲು ಕಳ್ಳರು ಹೊಂಚು ಹಾಕಿದ್ದರು. ಆದರೆ ಅಮೆರಿಕಾದಲ್ಲಿರುವ ಮನೆಯ ಮಾಲಿಕನ ಪುತ್ರಿ ಅಲ್ಲಿಂದಲೇ ಕಳ್ಳರನ್ನು ಓಡಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿದೆ. ಹೌದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿರುವ ಪಿಡಬ್ಲ್ಯೂಡಿ ನಿವೃತ್ತ ಇಂಜಿನಿಯರ್ ಹನುಮಂತಗೌಡರ ಮನೆಗೆ ಚಡ್ಡಿ ಗ್ಯಾಂಗ್ ಕನ್ನ ಹಾಕಿತ್ತು. ನಾಲ್ವರು ಚಡ್ಡಿ ಗ್ಯಾಂಗ್ ರಾತ್ರಿ ಒಂದು ಗಂಟೆಗೆ ಮನೆಗೆ ಎಂಟ್ರಿ ಕೊಟ್ಟಿದ್ದು ಇದೇ ಮನೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು. ಈ ಒಂದು ಸಿಸಿಟಿವಿ ಕ್ಯಾಮೆರಾ ನನ್ನ ಮೊಬೈಲ್ ಗೆ ಕನೆಕ್ಟ್ ಮಾಡಿಕೊಂಡಿರುವ ಹನುಮಂತಗೌಡರ ಪುತ್ರಿ ಶೃತಿ ಅಮೇರಿಕಾದಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿಂದಲೇ ಮನೆಯವರನ್ನು ನೋಡುತ್ತಿದ್ದರು ಆದರೆ ಮಧ್ಯರಾತ್ರಿ ಚಡ್ಡಿ ಗ್ಯಾಂಗ್ ಮನೆ ಒಳಗೆ ನುಗ್ಗಿದ್ದಾರೆ. ಈ ವೇಳೆ ಶೃತಿ…
ಬೆಂಗಳೂರು : ಕನ್ನಡದ ಖ್ಯಾತ ನಿರೂಪಕಿ ಎಂದೇ ಪ್ರಸಿದ್ಧರಾದ ಅನುಶ್ರೀ ಅವರು ರೋಷನ್ ಅವರೊಂದಿಗೆ ಇಂದು ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಹಸೆ ಮಣೆ ಏರಲಿದ್ದಾರೆ. ಇದೀಗ ಅವರ ಅರಿಶಿನ ಶಾಸ್ತ್ರದ ಹಲವು ಫೋಟೋ ವೈರಲ್ ಆಗಿವೆ. ಆ್ಯಂಕರ್ ಅನುಶ್ರೀ ಅವರಿಗೆ ಇರುವ ಜನಪ್ರಿಯತೆ ಅಪಾರ. ಕಿರಿತೆರೆ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಅವರಿಗೆ ತುಂಬ ಸ್ನೇಹಿತರಿದ್ದಾರೆ. ಆಪ್ತರು ಅನುಶ್ರೀ ಮದುವೆಗೆ ಹಾಜರಿ ಹಾಕಲಿದ್ದಾರೆ. ಈಗ ಮದುವೆ ಶಾಸ್ತ್ರಗಳು ಶುರುವಾಗಿದ್ದು, ಹಳದಿ ಶಾಸ್ತ್ರದಲ್ಲಿ ಅನುಶ್ರೀ ಮತ್ತು ರೋಷನ್ ಅವರು ಭಾಗಿಯಾಗಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಆ್ಯಂಕರ್ ಅನುಶ್ರೀ ಮತ್ತು ರೋಷನ್ ಅವರ ಹಳದಿ ಶಾಸ್ತ್ರ ಬಹಳ ಅದ್ದೂರಿಯಾಗಿ ನಡೆದಿದೆ. ಹಳದಿ ಶಾಸ್ತ್ರದ ಫೋಟೋಗಳು ಕೂಡ ಲಭ್ಯವಾಗಿವೆ. ಇಂದು ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ನಿರೂಪಕಿ ಅನುಶ್ರೀ ಅವರ ಮದುವೆ ಬೆಂಗಳೂರಿನ ಹೊರವಲಯದಲ್ಲಿ ಇರುವ ರೆಸಾರ್ಟ್ನಲ್ಲಿ ನಡೆಯಲಿದೆ. ಈ ವಿವಾಹಕ್ಕೆ ಅನೇಕ ಗಣ್ಯರು ಸಾಕ್ಷಿ ಆಗಲಿದ್ದಾರೆ.
ಮೈಸೂರು : ಈ ಬಾರಿ ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿಚಾರವಾಗಿ ಹಾಗು ಚಾಮುಂಡೇಶ್ವರಿ ದೇವಸ್ಥಾನದ ದಸರಾ ಬೆಳವಣಿಗೆಯ ಬಗ್ಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ವರ್ಷ ಸರ್ಕಾರವು ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಮತ್ತು ವಿಶೇಷವಾಗಿ ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಾಲಯದ ಸುತ್ತ ರಾಜಕೀಯ ನಡೆಯುತ್ತಿರುವುದರಿಂದ ತೀವ್ರ ಬೇಸರದಿಂದ ಇದನ್ನು ಬರೆಯುತ್ತಿದ್ದೇನೆ. ಈ ವರ್ಷದ ನಾಡಹಬ್ಬ(ಜನತಾ ದಸರಾ) ಉದ್ಘಾಟನೆಗೆ ಆಹ್ವಾನಿಸಲಾದ ಗಣ್ಯರ ಆಯ್ಕೆಯು ಸಂಘರ್ಷದ ಅಭಿಪ್ರಾಯಗಳಿಗೆ ಕಾರಣವಾಗಿದೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳಿಗೆ ಸೇರಿಲ್ಲ ಎನ್ನುವಂತಹ ಅಸಂವೇದನಾಶೀಲ ಹೇಳಿಕೆಗಳು ಅನಗತ್ಯ ಮತ್ತು ತಪ್ಪಿಸಬಹುದಾದವು. ಅದು ಹಿಂದೂ ದೇವಸ್ಥಾನವಲ್ಲದಿದ್ದರೆ ಮುಜರಾಯಿ ಅಡಿಯಲ್ಲಿ ತರುತ್ತಿರಲಿಲ್ಲ ಎಂದು ಹೇಳಿದ್ದಾರೆ. ಸರ್ಕಾರದ ದಸರಾ ಒಂದು ಸಾಂಸ್ಕೃತಿಕ ಆಚರಣೆ ಎಂಬುದು ನಮ್ಮ ಅಭಿಪ್ರಾಯ. ರಾಜ್ಯವು ಸ್ವಭಾವತಃ ಇಂತಹ ಉತ್ಸವ ನಡೆಸುವಲ್ಲಿ ಧಾರ್ಮಿಕ ಪವಿತ್ರ ಸಂಪ್ರದಾಯ ಅಥವಾ ಪರಂಪರೆಯನ್ನು ಪ್ರತಿಪಾದಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರವು ಆಯೋಜಿಸುವ…
ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಹುಬ್ಬಳ್ಳಿಯಿಂದ ಪುಣೆಗೆ ಹೊರಟಿದ್ದ ಖಾಸಗಿ ಬಸ್ ಒಂದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 9 ಜನರಿಗೆ ಗಾಯಗಳಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ಹಿರೇ ಬಾಗೇವಾಡಿಯಲ್ಲಿ ಖಾಸಗಿ ಬಸ್ ಪಲ್ಟಿಯಾಗಿದೆ. ಈ ಒಂದು ಬಸ್ ಹುಬ್ಬಳ್ಳಿಯಿಂದ ಪುಣೆಗೆ ತೆರಳುತ್ತಿತ್ತು. ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 9 ಜನರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಇಂದು ಕೂಡ ವರುಣಾರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಹಾಗಾಗಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ, ಶಿವಮೊಗ್ಗ ಹಾಗು ಉತ್ತರಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯ ಟಿಕೆ ಸ್ವರೂಪ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲಿ ಸಹ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗು ಸಾಗರ ತಾಲೂಕಿನ ಅಂಗನವಾಡಿ ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಿ ಸಾಗರ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲೂ ಕೂಡ ಮಳೆ ಆರ್ಭಟ ಮುಂದುವರೆದ ಹಿನ್ನೆಲೆ ಜಿಲ್ಲೆಯ 10 ತಾಲೂಕುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೇ ಹಾಗು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ,…