Subscribe to Updates
Get the latest creative news from FooBar about art, design and business.
Author: kannadanewsnow05
ಉತ್ತರಕನ್ನಡ : ರಾಜ್ಯದಲ್ಲಿ ಈಗಾಗಲೇ ಬೆಂಗಳೂರು ಮಹಾನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಈಗಾಗಲೇ ರಣಚಂಡಿ ಮಳೆಗೆ ಹಲವರು ಬಲಿಯಾಗಿದ್ದಾರೆ. ಇದೀಗ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಭಾರಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣವಾಗಿ ಬಂದ್ ಆಗಿವೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯನ್ನು ರಸ್ತೆಯಲ್ಲಿ ಸಾಗಿಸಲಾಗದೆ ಬಿದಿರಿಗೆ ಕಟ್ಟಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೌದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಒಂದು ಘಟನೆ ಬೆಳಕಿಗೆ ಬಂದಿದ್ದು, ವೃದ್ಧೆಯೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ ಈ ಹಿನ್ನೆಲೆಯಲ್ಲಿ ರಸ್ತೆಗಳು ಸಂಪೂರ್ಣವಾಗಿ ಮಳೆ ನೀರಿನಿಂದ ಕೂಡಿದ್ದು ಸಂಪೂರ್ಣವಾಗಿ ಕೆಸರುಮಯವಾಗಿದೆ. ಹಾಗಾಗಿ ವೃದ್ಧಿಯನ್ನು ಬಿದಿರಿನ ಕಟ್ಟಿಗೆಗೆ ಕಟ್ಟಿ ಕುಟುಂಬಸ್ಥರು ಆಸ್ಪತ್ರೆಗೆ ಹೊತ್ತೊಯ್ದಿರುವ ಘಟನೆ ನಡೆದಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗಾಂಜಾ ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ನಾಲ್ವರು ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಯುವತಿ ಸೇರಿದಂತೆ ಅಬಕಾರಿ ಅಧಿಕಾರಿಗಳು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಒಡಿಶಾ ಮೂಲದ ಸಂಪತ್ ಪ್ರಧಾನ (23) ತಪಸ್ ಪ್ರಧಾನ್ (22) ಜಗನ್ ಪತಂಜಲಿ (24) ಹಾಗೂ ದೀಪಾಂಜಲಿ (22) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ರಾಜಾಜಿನಗರದ ಮೆಟ್ರೋ ಸ್ಟೇಷನ್ ಮಾರುತಿದ್ದರು. ದಾಳಿ ಮಾಡಿ ನಾಲ್ವರನ್ನು ಇದೀಗ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ NDPS ಆಕ್ಟ್ 1985 ಅಡಿ ಪ್ರಕರಣ ದಾಖಲಾಗಿದೆ.
ಆಂಧ್ರಪ್ರದೇಶ : ಹಿಂದೂಗಳ ಪವಿತ್ರ ದೇವಸ್ಥಾನವಾದ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಇದೀಗ ಏಕಾಏಕಿ ಮುಸ್ಲಿಂ ಸಮುದಾಯದ ವ್ಯಕ್ತಿ ಒಬ್ಬ ಬಂದು ನಮಾಜ್ ಸಮಯದ ವೇಳೆ 10 ನಿಮಿಷಗಳ ಕಾಲ ನಮಾಜ್ ಮಾಡಿ ತೆರಳಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು ನೇರವಾಗಿ ತಿರುಪತಿ ತಿರುಮಲ ಕಲ್ಯಾಣ ಮಂಟಪದಲ್ಲಿ ಹಝರತ್ ಕ್ಯಾಪ್ ಧರಿಸಿಕೊಂಡೇ ನಮಾಜ್ ಮಾಡುತ್ತಾನೆ. ಸುಮಾರು 10 ನಿಮಿಷ ಆತ ನಮಾಜ್ ಮಾಡುತ್ತಾನೆ. ಬಳಿಕ ಸದ್ದಿಲ್ಲದೇ ಅಲ್ಲಿಂದ ತೆರಳುತ್ತಾನೆ. ಐಷಾರಾಮಿ ಕಾರಿನಲ್ಲಿ ಬಂದ ವ್ಯಕ್ತಿ ತಿರುಪತಿ ಸನ್ನಿಧಿಯಲ್ಲೇ ನಮಾಜ್ ಮಾಡಿದ್ದಾನೆ. ಇದರ ಬಗ್ಗೆ ಇದೀಗ ತಿರುಮಲ ಆಡಳಿತ ಮಂಡಳಿ ತನಿಖೆಗೆ ಮುಂದಾಗಿದೆ. ಆತ ಯಾರು, ಎಲ್ಲಿಂದ ಬಂದಿದ್ದಾನೆ ಎಂದು ತನಿಖೆಯಾಗುತ್ತಿದೆ. ಆತನ ಕಾರು ನಂಬರ್ ಕೂಡಾ ನೋಟ್ ಮಾಡಿಕೊಳ್ಳಲಾಗಿದ್ದು ಅದರ ಜಾಡು ಹಿಡಿದು ತನಿಖೆ ನಡೆಸಲಾಗುತ್ತಿದೆ. https://twitter.com/BattaKashmiri/status/1925547094573482282?t=CwpLLjxoQtyEjjp6SwPwJw&s=19
ಮಡೆನೂರು ಮನು ವಿರುದ್ಧ ಸಾಕಷ್ಟು ಸಾಕ್ಷಿಗಳಿವೆ, ಯಾವುದೇ ಕಾರಣಕ್ಕೂ ಕೇಸ್ ಹಿಂಪಡೆಯಲ್ಲ : ಅತ್ಯಾಚಾರ ಸಂತ್ರಸ್ತೆ ಹೇಳಿಕೆ
ಬೆಂಗಳೂರು : ತನ್ನ ಸಹ ಕಲಾವಿದಯ ಮೇಲೆ ಅತ್ಯಾಚಾರ ಎಸಗಿದ್ದು ಅಲ್ಲದೆ, ಎರಡು ಬಾರಿ ಗರ್ಭಪಾತ ಮಾಡಿಸಿದ ಆರೋಪದ ಹಿನ್ನೆಲೆಯಲ್ಲಿ ಕಿರುತೆರೆ ನಟ ಮಡೆನೂರು ಮನು ವಿರುದ್ಧ ಇದೀಗ ಅತ್ಯಾಚಾರ ಸಂತ್ರಸ್ತೇ ಆಕ್ರೋಶ ಹೊರಹಾಕಿದ್ದು, ಯಾವುದೇ ಕಾರಣಕ್ಕೂ ಮಡೆನೂರು ಮನು ವಿರುದ್ದ ಪ್ರಕರಣವನ್ನು ನಾನು ಹಿಂಪಡೆಯುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾನು ಯಾವುದೇ ಕಾರಣಕ್ಕೂ ಕೇಸ್ ಹಿಂಪಡೆಯುವುದಿಲ್ಲ. ನನ್ನ ಬಳಿ ಸಾಕಷ್ಟು ಸಾಕ್ಷಾಧಾರವಿದೆ. ಎಲ್ಲಾ ಸಾಕ್ಷಿಗಳನ್ನು ರಿಲೀಸ್ ಮಾಡುತ್ತೇನೆ. ಹಂತವಾಗಿ ಸಾಕ್ಷಿಗಳನ್ನು ರಿಲೀಸ್ ಮಾಡುತ್ತೇನೆ ಎಂದು ಅತ್ಯಾಚಾರ ಸಂತ್ರಸ್ತೆ ತಿಳಿಸಿದರು. ಇದರಲ್ಲಿ ಅಪ್ಪಣ್ಣದು ಯಾವುದೇ ತಪ್ಪಿಲ್ಲ. ಬಲವಂತವಾಗಿ ನನ್ನ ಕೈಯಲ್ಲಿ ವಿಡಿಯೋ ಮಾಡಿಸಿಕೊಂಡಿದ್ದಾರೆ. ನನ್ನ ಖಾಸಗಿ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಸಿನಿಮಾ ಮಾಡಿದ ನಂತರ ನಮ್ಮಿಬ್ಬರ ನಡುವೆ ಗಲಾಟೆ ಆಯಿತು. ಹೆಂಡತಿಯಿಂದಲೇ ಮಡೆನೂರು ಮನು ಹಾಳಾಗಿರೋದು. ಆಕೆಯ ಗಂಡ ಮಾಡಿರುವುದು ಮನೆಹಾಳು ಕೆಲಸ ಅವರು…
ಮೈಸೂರು : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ಕುರಿತಂತೆ, ಚಾರ್ಜ್ ಶೀಟ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಅವರ ಹೆಸರು ಉಲ್ಲೇಖಿಸಿರುವ ವಿಚಾರವಾಗಿ, ದೇಣಿಗೆ ಕೊಡುವುದು ತಪ್ಪಾ? ದೇಣಿಗೆ ಕೊಡುವುದು ತಪ್ಪೇನಿಲ್ಲ ಎಂದು ಮೈಸೂರು ಜಿಲ್ಲೆಯ ಕೆ ಆರ್ ನಗರದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಕಡಿವಾಣ ಹಾಕಬೇಕಿದೆ. ಕೇಂದ್ರ ಸರ್ಕಾರ ಟೆಸ್ಟಿಂಗ್ ಸೇರಿ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೆ ಆರ್ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ ವಿಚಾರವಾಗಿ, ಕಪ್ಪು ಹಣ ಇದ್ದರೆ ಪತ್ತೆಹಚ್ಚಲಿ ಬೇಡ ಅಂತ ನಾವು ಹೇಳಲ್ಲ. ಆದರೆ ನೀವು ರಾಜಕೀಯ ದುರುದ್ದೇಶದಿಂದ ದಾಳಿ ಮಾಡಬಾರದು. ತನಿಖಾ ಸಂಸ್ಥೆಗಳು ಇರೋದೇ ಕಪ್ಪು ಹಣ ತಡೆಗಟ್ಟಲು. ಪರಮೇಶ್ವರ ಪ್ರಕರಣದಲ್ಲಿ ರಾಜಕೀಯ ಪ್ರೇರಿತ ದಾಳಿ ನಡೆಸಲಾಗಿದೆ ಅಂತ ಅನಿಸುತ್ತಿದೆ. ಸುಪ್ರೀಂಕೋರ್ಟ್…
ಮೈಸೂರು : ರಾಜ್ಯದಲ್ಲಿ ಅತ್ಯಾಚಾರ ಕೊಲೆ ಪ್ರಕರಣಗಳ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ಎಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ನಡೆಯುತ್ತಿವೆ? ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮರು ಪ್ರಶ್ನಿಸಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಹೆಚ್ಚುತ್ತಿರುವ ವಿಚಾರವಾಗಿ ರಾಜ್ಯದಲ್ಲಿ ಎಲ್ಲಿ ರೇಪ್ & ಕೊಲೆ ಹಲವಾರು ಪ್ರಕರಣಗಳು ಆಗುತ್ತಿವೆ? ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದ್ದ ಕೊಲೆ ಪ್ರಕರಣಗಳಿಗಿಂತಲೂ ನಮ್ಮ ಸರ್ಕಾರ ಬಂದ ಮೇಲೆ ಕಡಿಮೆಯಾಗಿದೆ. ರೇಪ್ ಮತ್ತು ಕೊಲೆ ಪ್ರಕರಣದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಂಗಳೂರು : ಒಂದು ಕಡೆ ರಾಜ್ಯದಲ್ಲಿ ಮಹತ್ವದ ಜಾತಿ ಗಣತಿ ಜಾರಿ ಸಂಬಂಧ ಜಟಾಪಟಿ ನಡೆಯುತ್ತಿದ್ದರೆ, ಇನ್ನೊಂದು ಕಡೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿಯವರು ನಾನು 2028 ರಲ್ಲಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು 2028ರ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ನಾನು ಮಹಾನ್ ನಾಯಕ ಅಲ್ಲ. ಈಗ ಸಿಎಂ ಕ್ಯಾಂಡಿಡೇಟ್ ಅಲ್ಲ. ಆದರೆ 2028ಕ್ಕೆ ಮುಖ್ಯಮಂತ್ರಿಯಾಗುವ ಆಸೆಯನ್ನು ಇಟ್ಟುಕೊಂಡಿದ್ದೇನೆ. ಈಗ ನಾನೇನು ಒತ್ತಡ ಹಾಕುತ್ತಿಲ್ಲ ನಮ್ಮದೇನಿದ್ದರೂ 2028ಕ್ಕೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು. ಇನ್ನು ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿ ಮುಂದೂಡಿದ ವಿಚಾರವಾಗಿ, ಮಾತನಾಡಿದ ಸತೀಶ್ ಜಾರಕಿಹೊಳಿ, ಈ ವಿಷಯದ ಕುರಿತು ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಕೆಲವರು ತಮ್ಮ ಅಭಿಪ್ರಾಯ ಹೇಳುತ್ತಿದ್ದಾರೆ. ತರಾತುರಿ ಇಲ್ಲ ಎಲ್ಲರ ಅಭಿಪ್ರಾಯ ಪಡೆದು ಜಾತಿಗಣತಿ ಜಾರಿ ಮಾಡಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದರು. ಇನ್ನು ರಾಮನಗರ…
ಮೈಸೂರು : ಇತ್ತೀಚಿಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸೊಸೆಗೆ ಮಕ್ಕಳು ಆಗಿಲ್ಲ ಎಂಬ ಕಾರಣಕ್ಕೆ ಕಲ್ಲಿನಿಂದ ಜಜ್ಜಿ ಅತ್ತೆ ಸೊಸೆಯನ್ನು ಭೀಕರವಾಗಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಇದೀಗ ಮೈಸೂರು ಜಿಲ್ಲೆಯ ನಂಜನಗೂಡಲ್ಲಿ ಗೃಹಿಣಿ ಒಬ್ಬರು ಮಕ್ಕಳಾಗದಿದ್ದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ನಂಜನಗೂಡು ತಾಲ್ಲೂಕಿನ ಕರಳಪುರದಲ್ಲಿ ಶ್ರೀಕಾಂತ ಅವರ ಮಡದಿ ಮಹಾದೇವಿ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.4 ವರ್ಷಗಳ ಹಿಂದೆ ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಮಹದೇವ ಶೆಟ್ಟಿ ಅವರ ಮಗಳು ಮಹಾದೇವಿಯನ್ನು ಕರಳಪುರ ಗ್ರಾಮದ ದೇವಶೆಟ್ಟಿ ಅವರ ಮಗ ಶ್ರೀಕಾಂತನೊಡನೆ ವಿವಾಹವಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮೃತಳ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಸುನಿಲ್ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದಕ್ಷಿಣಕನ್ನಡ : ನಿನ್ನೆ ರಾಜ್ಯದಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರು ಸಾವನ್ನಪ್ಪಿದ್ದರು. ಇದೀಗ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಮನಕಲಕುವ ಘಟನೆ ನಡೆದಿದ್ದು, ಪತ್ನಿಯ ಸೀಮಂತದ ದಿನವೇ ಪತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ. ಪತ್ನಿಯ ಸೀಮಂತದ ದಿನದಂದೆ ಸಾವನ್ನಪ್ಪಿದ ಪತಿಯನ್ನು ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ವಾಹನದ ಚಾಲಕ ಸತೀಶ್ (33) ಎಂದು ತಿಳಿದುಬಂದಿದೆ. ನಿನ್ನೆ ಅವರ ಪತ್ನಿಯ ಸೀಮಂತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮನೆಯಲ್ಲಿ ಬೆಳಿಗ್ಗೆ ಕುಸಿದು ಬಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಯಿತು. ಅಷ್ಡರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸೀಮಂತದ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಸೂತಕ ಆವರಿಸಿದೆ.
ಹಾವೇರಿ : ಗ್ಯಾಂಗ್ ರೇಪ್ ಪ್ರಕರಣದಲ್ಲಿ ಬೇಲ್ ಸಿಕ್ಕ ಕೂಡಲೇ ಪ್ರಕರಣದ ಆರೋಪಿಗಳಿಂದ ರೋಡ್ ಶೋ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ರೋಡ್ ಶೋ ನಡೆದಿದೆ. ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ಕಿ ಆಲೂರು ಪಟ್ಟಣದಲ್ಲಿ ಆರೋಪಿಗಳಿಂದ ಇದೀಗ ರೋಡ್ ಶೋ ನಡೆಸಲಾಗಿದೆ. ಹಾವೇರಿ ಸಬ್ ಜೈಲಿನಿಂದ ಅಕ್ಕಿ ಆಲೂರಿನವರೆಗೂ ಇದೀಗ ಆರೋಪಿಗಳು ರೋಡ್ ಶೋ ನಡೆಸಿದ್ದಾರೆ. 5 ಕಾರುಗಳಲ್ಲಿ 20 ಕ್ಕೂ ಹೆಚ್ಚು ಹಿಂಬಾಲಕರ ಜೊತೆಗೆ ಮೆರವಣಿಗೆ ನಡೆಸಿದ್ದಾರೆ. ಕಳೆದ 2024 ಜನವರಿ 8ರಂದು ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು. ಇದೀಗ ಈ ಒಂದು ಪ್ರಕರಣದಲ್ಲಿ ಬೇಲ್ ಪಡೆದುಕೊಂಡು ಹೊರಬಂದ ಆರೋಪಿಗಳು ರೋಡ್ ಶೋ ನಡೆಸಿದ್ದಾರೆ. ರೋಡ್ ಶೋ ನಡೆಸಿದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೇಲ್ ಷರತ್ತು ಉಲ್ಲಂಘನೆ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಇಂದು ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಆರೋಪಿಗಳು ಹಾಜರಾಗಿದ್ದರು. ಈ ವೇಳೆ ಪ್ರಮುಖ ಆರೋಪಿಗಳಲ್ಲಿ…