Author: kannadanewsnow05

ಮೈಸೂರು : ಯುವಕನೊಬ್ಬ ತನ್ನ ಮೊಬೈಲ್, ಬಟ್ಟೆ ಎಲ್ಲಾ ಬಿಚ್ಚಿ ಸೇತುವೆ ಮೇಲೆ ಇಟ್ಟು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನಲ್ಲಿ ನಡೆದಿದೆ. ಟಿ ನರಸೀಪುರ ಪಟ್ಟಣದ ಕಬಿನಿ ಮೇಲ್ಸೇತುವೆ ಬಳಿ ಕೇತಳ್ಳಿಗ್ರಾಮದ ಮಲ್ಲಿಕಾರ್ಜುನ್ ನದಿಗೆ ಹಾರಿದ ಯುವಕ ಎಂದು ತಿಳಿದುಬಂದಿದೆ. ಕೇತಳ್ಳಿ ಗ್ರಾಮದ ಮಲ್ಲೇಶ್ ಎಂಬುವರ ಪುತ್ರ ಮಲ್ಲಿಕಾರ್ಜುನ್‌ ಆತ್ಮಹತ್ಯೆಗು ಮುನ್ನ ಮೊಬೈಲ್, ಬಟ್ಟೆಯನ್ನು ಸೇತುವೆ ಮೇಲೆ ಇಟ್ಟು ನದಿಗೆ ಹಾರಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ನರಸೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನದಿಯಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಈಜುಗಾರರಿಂದ ಯುವಕನ ಶವಕ್ಕಾಗಿ ಶೋಧಕಾರ್ಯ ಮುಂದುವರೆದಿದೆ. ಘಟನೆ ಕುರಿತಂತೆ ಟಿ ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಗ್ಯಾಂಗಿನ ಮೂವರು ಆರೋಪಿಗಳಿಗೆ ಇದೀಗ ಜಾಮೀನು ಸಿಕ್ಕಿದೆ. ಇದೆ ಸಂದರ್ಭದಲ್ಲಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಅವರನ್ನು ನೋಡಲು ಪತ್ನಿ ವಿಜಯಲಕ್ಷ್ಮಿ, ಜೈಲಿಗೆ ಭೇಟಿ ನೀಡಿದ್ದರು. ಈ ವೇಳೆ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರಿಗೆ ಸಿಕ್ಕಿದೆ ನಿಮಗೂ ಸಿಗುತ್ತದೆ ಆತಂಕ ಪಡಬೇಡಿ ಎಂದು ಧೈರ್ಯ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬಳ್ಳಾರಿ ಜೈಲಿಗೆ ಭೇಟಿ ನೀಡಿದ ಪತ್ನಿ ವಿಜಯಲಕ್ಷ್ಮಿ ಅವರು, ಕೈದಿಗಳ ಸಂದರ್ಶನ ಕೋಣೆಯಲ್ಲಿ ನಟ ದರ್ಶನ್ ಅವರನ್ನು ಭೇಟಿಯಾದರು. ಈ ವೇಳೆ ಜೈಲಿನಲ್ಲಿ ಸಮಸ್ಯೆಯಾಗುತ್ತಿದೆ. ದಿಂಬು, ಬೆಡ್, ಚೇರ್ ಕೊಡ್ತಿಲ್ಲ ಎಂದು ದರ್ಶನ್ ವಿಜಯಲಕ್ಷ್ಮಿ ಎದುರು ಅಳಲು ತೋಡಿಕೊಂಡಿದ್ದಾರೆ. ಈ ವೇಳೆ ಪತ್ನಿ ವಿಜಯ್ ಲಕ್ಷ್ಮಿ ವಕೀಲರ ಜೊತೆಗೆ ಚರ್ಚೆ ಮಾಡುವುದಾಗಿ ತಿಳಿಸಿದರು. ಇನ್ನು ಸ್ವಲ್ಪ ದಿನ ಎಲ್ಲಾ ಸರಿಯಾಗುತ್ತೆ ಧೈರ್ಯವಾಗಿರಿ ಎಂದು ದರ್ಶನ್ ಗೆ ಪತ್ನಿ ವಿಜಯಲಕ್ಷ್ಮಿ ಧೈರ್ಯ ತುಂಬಿದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನೋಡಿ ಮೂವರಿಗೆ ಬೇಲ್ ಸಿಕ್ಕಿದೆ.…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳು ಜಲ್ಲಿ ಸೇರಿದ್ದರು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಹೌದು ಪ್ರಕರಣದ ಎ-15, ಎ-17 ಆರೋಪಿಗಳಾದ ಕಾರ್ತಿಕ್, ನಿಖಿಲ್ ನಾಯ್ಕ್ ಗೆ 57 ನೇ ಸಿಸಿಹೆಚ್ ಕೋರ್ಟ್ ಜಾಮೀನು ನೀಡಿದೆ. ಇನ್ನೂ ಪ್ರಕರಣದ A16 ಆರೋಪಿಯಾಗಿರುವ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ನೀಡಿದೆ. ಕೊಲೆಯಾದ ಸಂದರ್ಭದಲ್ಲಿ ಸಾಕ್ಷಿ ನಾಶ ಪಡಿಸಲು ಈ ಮೂವರು ಯತ್ನಿಸಿದ್ದರು ಎಂದು ಪೊಲೀಸರು ಕೋರ್ಟಿಗೆ ಸಲ್ಲಿಸಿದ ಚರ್ಚಿನಲ್ಲಿ ಉಲ್ಲೇಖಿಸಿದ್ದರು. ಹಾಗಾಗಿ ಇದೀಗ ಮೂವರು ಆರೋಪಿಗಳಿಗೆ ಜಾಮೀನು ನೀಡಿದೆ. ಇನ್ನೊಂದು ಕಡೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು.ಈ ವೇಳೆ ನ್ಯಾಯಾಧೀಶರು ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಪವಿತ್ರಗೌಡ ಜಾಮೀನು ಅರ್ಜಿ ವಿಚಾರಣೆ ಕೂಡ…

Read More

ಬೆಂಗಳೂರು : ರಸ್ತೆಯಲ್ಲಿ ಸಿಗ್ನಲ್ ಮೀರಿ ದಾಟಿ ಹೋಗೋದು, ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ ಮಾಡುವುದು, ಕುಡಿದು ಬೈಕ್ ಕಾರು ಓಡಿಸುವವರಿಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ಕೊಟ್ಟಿದ್ದಾರೆ. ಹೌದು ಇನ್ಮುಂದೆ ಸಂಚಾರ ನಿಯಮ ಪಾಲಿಸದೇ ಇರುವವರಿಗೆ ಚಾಲನಾ ಪರವಾನಗಿಯನ್ನು ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಮಹತ್ವದ ಸೂಚನೆ ನೀಡಿದರು. ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ.ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರು, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಸೂಚನೆ ನೀಡಿದರು. ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು.ಈ ವೇಳೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಭೀಕರ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಸಿ ಕೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯ ಕತ್ತರಿಗುಪ್ಪೆಯಲ್ಲಿ ರೌಡಿಶೀಟರ್ ಗಳು ಲಾಂಗು ಮಚ್ಚಿನಿಂದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಹೌದು ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿ ಇದೀಗ ಮತ್ತೊಮ್ಮೆ ಲಾಂಗು ಮತ್ತು ಮಚ್ಚುಗಳು ಝಳಪಿಸಿವೆ. ಸಿ.ಕೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯ ಕತ್ತರಿಗುಪ್ಪೆಯಲ್ಲಿ ಈ ಒಂದು ಘಟನೆ ನಡೆದಿದೆ. ನಿನ್ನೆ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿದೆ. ರೌಡಿಶೀಟರ್ ಗಳ ಹಾವಳಿಗೆ ಸ್ಥಳೀಯ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಅಭಿ ಹಾಗೂ ದೀಪಕ್ ಮೇಲೆ ರೌಡಿಶೀಟರ್ ಪ್ರದೀಪ ಮತ್ತು ಗ್ಯಾಂಗ್ನಿಂದ ಹಲ್ಲೆ ನಡೆಸಲಾಗಿದೆ. ಪ್ರದೀಪ್ ಅಲಿಯಾಸ್ ಜೂಲಿ ಹಾಗೂ ಆತನ ತಂಡದಿಂದ ಹಲ್ಲೆ ನಡೆಸಿದ್ದಾರೆ. ಸದ್ಯ ಹಲ್ಲೆಗೆ ಒಳಗಾದ ಅಭಿ ಎಂಬಾತನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿ ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣದಲ್ಲಿ ಜೈಲು ಸೇರಿ ಬಿಡುಗಡೆಯಾಗಿದ್ದ ಬಿಜೆಪಿ ಶಾಸಕ ಮುನಿರತ್ನ, ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಜೈಲು ಸೇರಿದ್ದಾರೆ. ಇದೀಗ ಮುನಿರತ್ನ ವಿರುದ್ಧ ಸಾಕ್ಷಿ ಹೇಳದಂತೆ ಅವರ ಬೆಂಬಲಿಗರು ಜೀವ ಬೆದರಿಕೆ ಹಾಕಿದರೆ ಎಂಬ ಆರೋಪದ ವಿಚಾರವಾಗಿ ಇಂದು ಮಾಜಿ ಕಾರ್ಪೊರೇಟರ್ ವೇಲುನಾಯಕ್ ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ಸಲ್ಲಿಸಿದ್ದಾರೆ. ಹೌದು ಅತ್ಯಾಚಾರ ಆರೋಪ ಮಾಡಿರುವ ಸಂತ್ರಸ್ತೆ ಪುತ್ರನಿಗೆ ಮುನಿರತ್ನ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿತ್ತು. ಮುನಿರತ್ನ ನಾಯ್ಡು ಬೆಂಬಲಿಗರಿಂದ ಜೀವ ಬೆದರಿಕೆ ಹಿನ್ನೆಲೆ ಮಾಜಿ ಕಾರ್ಪೊರೇಟರ್​ ವೇಲು ನಾಯಕ್ ಹಾಗೂ ದಲಿತ ಸಂಘಟನೆ ಮುಖಂಡರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ.ದೂರು ನೀಡಿದ್ದವರಿಗೆ ಹಾಗೂ ನಮಗೆ ಜೀವ ಬೆದರಿಕೆ ಕರೆ ಬರುತ್ತಿವೆ. ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ನಮಗೆ ತೊಂದರೆ ಕೊಡುತ್ತಿದ್ದಾರೆ. ಮುನಿರತ್ನ ಆಪ್ತ ಹೆಬ್ಬಗೂಡಿ ಠಾಣೆ ಐ.ಎನ್.ರೆಡ್ಡಿ ಸಸ್ಪೆಂಡ್ ಮಾಡುವಂತೆಯೂ ಸಿಎಂಗೆ ಮನವಿ ಮಾಡಲಾಗಿದೆ. ಮುನಿರತ್ನ ನಾಯ್ಡು ಆಪ್ತೆ ಸುನಂದಮ್ಮ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಪುಂಡರ ಹಾವಳಿ ಮಿತಿಮೀರಿದೆ. ಪೊಲೀಸರು ಎಷ್ಟೇ ಕಠಿಣವಾದ ಅಂತಹ ಕ್ರಮ ಕೈಗೊಂಡರು ಸಹ ಇಂತಹ ಪುಂಡರು ಆಗಾಗ ಬಾಲ ಬಿಚ್ಚುತ್ತಿರುತ್ತಾರೆ. ಇದೀಗ ಮೂರು ಬೈಕ್ ಗಳಿಗೆ ಪೆಟ್ರೋಲ್ ಹಾಕಿ ಸುಟ್ಟು ಹುಚ್ಚಾಟ ಮೆರೆದಿರುವ ಘಟನೆ ಬೆಂಗಳೂರಿನ ಎಚ್ ಎಮ್ ಟಿ ಲೇಔಟ್ ನಲ್ಲಿ ನಡೆದಿದೆ. ಹೌದು ಬೆಂಗಳೂರು ನಗರದಲ್ಲಿ ಪುಂಡರ ಹಾವಳಿ ಮತ್ತೆ ಮುಂದುವರೆದಿದ್ದು, ಯಾರು ಇಲ್ಲದ ವೇಳೆಯಲ್ಲಿ ಮೂರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದಾರೆ. ಉತ್ತರ ಭಾರತದ ವಿದ್ಯಾರ್ಥಿಗಳ ಬೈಕ್ ಗಳೇ ಈ ಒಂದು ಪುಂಡರಿಗೆ ಮೇನ್ ಟಾರ್ಗೆಟ್ ಆಗಿವೆ.ಬೆಂಗಳೂರಿನ ಎಚ್ ಎಮ್ ಟಿ ಲೇಔಟ್ ನಲ್ಲಿ ಈ ಒಂದು ಘಟನೆ ಸಂಭವಿಸಿದೆ. ಕಿಡಿಗೇಡಿಗಳು ಬುಲೆಟ್ ಬೈಕ್ ನಿಂದ ಪೆಟ್ರೋಲ್ ಕದ್ದು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಬುಲೆಟ್ ಬೈಕ್ ಸೇರಿದಂತೆ ಮೂರು ವಾಹನಗಳಿಗೆ ಬೆಂಕಿ ಹಚ್ಚಿ ಪುಂಡರು ಪರಾರಿಯಾಗಿದ್ದಾರೆ. ಸೆಪ್ಟೆಂಬರ್ 18ರಂದು ತಡರಾತ್ರಿ ನಡೆದಿದ್ದ ಘಟನೆ ತಡವಾಗಿ ಬಳಕೆಗೆ ಬಂದಿದೆ. ಕಿಡಿಗೇಡಿಗಳು ಬೈಕ್…

Read More

ಬೆಂಗಳೂರು : ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ A16 ಆರೋಪಿಯಾಗಿರುವ ಕೇಶವಮೂರ್ತಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ವಿಚಾರಣೆಯ ವೇಳೆ ಕೇಶವಮೂರ್ತಿ ಅವರ ಪರ ವಕೀಲರಾದ ರಂಗನಾಥ್ ರೆಡ್ಡಿ ವಾದ ಮಂಡಿಸಿ, ಕೇವಲ ಕೊಲೆಯ ನಂತರದ ಸಾಕ್ಷಿಯ ನಾಶದ ಆರೋಪ ಮಾತ್ರವಿತ್ತು. ಈ ಜಾಮೀನು ಇತರೆ ಆರೋಪಿಗಳ ಮೇಲಿನ ಕೇಸಿಗೆ ಸಂಬಂಧಿಸಿದಲ್ಲ. ಹಾಗಾಗಿ ಈ ಒಂದು ಕಾರಣಕ್ಕೆ ಜಾಮೀನು ಮಂಜೂರು ಮಾಡಿದೆ. ವಿಚಾರಣೆ ವೇಳೆ ನ್ಯಾಯಾಧೀಶರಾದ ಎಸ್ ವಿಶ್ವಜೀತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಕೇಶವಮೂರ್ತಿ ವಿರುದ್ಧ ಕೊಲೆ ಆರೋಪ ಇರಲಿಲ್ಲ ಕೇವಲ ಕೊಲೆಯ ನಂತರದ ಸಾಕ್ಷ ನಾಶದ ಆರೋಪ ಮಾತ್ರವಿತ್ತು. ಆರೋಪಿ ವಿರುದ್ಧದ ಜಾಮೀನು ನೀಡಬಹುದಾದ ಅಪರಾಧಗಳಿವೆ ಆರೋಪ ಪಟ್ಟಿಯಲ್ಲಿ ಈತನ ಮೇಲೆ ಕೊಲೆ ಆರೋಪವಿಲ್ಲವೆಂದು ಕೇಶವಮೂರ್ತಿ ಪರ ವಕೀಲ ರಂಗನಾಥ ರೆಡ್ಡಿ ವಾದಿಸಿದರು. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ…

Read More

ಹುಬ್ಬಳ್ಳಿ : ಹುಬ್ಬಳ್ಳಿ ಮತ್ತು ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಸುಮಾರು 17 ಕಳ್ಳತನ ಕೇಸ್ ನಲ್ಲಿ ಭಾಗಿಯಾಗಿದ್ದ ಆರೋಪಿಯ ಮೇಲೆ ಹುಬ್ಬಳ್ಳಿ ತಾಲೂಕಿನ ಬೆಂಡಿಗೇರಿ ಠಾಣೆಯ ಎಸ್ಐ ಆರೋಪಿ ಕಾಲಿಗೆ ಗುಂಡು ಹಾರಿಸಿರುವ ಘಟನೆ ನಡೆದಿದೆ. ಹೌದು ಆರೋಪಿ ವಿನೋದ್ ಕಾಲಿಗೆ ಗುಂಡು ಹಾರಿಸಲಾಗಿದ್ದು, ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರಿಂದ ಇದೀಗ ಗುಂಡಿನ ದಾಳಿ ನಡೆದಿದೆ. ತಾರಿಹಾಳ ಬಳಿ ಆರೋಪಿ ವಿನೋದ್ ಮೇಲೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಕಳ್ಳತನ ಪ್ರಕರಣದಲ್ಲಿ ಪೊಲೀಸರು ನಿನ್ನೆ ವಿನೋದನನ್ನು ಬಂಧಿಸಿದ್ದರು. ತನ್ನ ಸಹಚರನ್ನು ತೋರಿಸುತ್ತೇನೆ ಎಂದು ವಿನೋದ್ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಪೊಲೀಸರ ಮೇಲೆ ವಿನೋದ್ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಯಶ್ರೀ ಛಲವಾದಿ, ಕಾನ್ಸ್ಟೇಬಲ್ ರಮೇಶ್ ಹಿತ್ತಲಮನಿ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಆತ್ಮ ರಕ್ಷಣೆಗಾಗಿ ಪಿಐ ಜಯಶ್ರೀ ವಿನೋದ ಕಾಲಿಗೆ ಗುಂಡು…

Read More

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಗೆ ಜೈಲಾಧಿಕಾರಿಗಳು ಕೈದಿ ನಂಬರ್ ನೀಡಿದ್ದಾರೆ. ಹೌದು ಮುನಿರತ್ನಗೆ ಜೈಲಾಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್-9273 ನೀಡಿದ್ದಾರೆ. ಮುನಿರತ್ನ ನನ್ನ ಮೇಲೆ ಅತ್ಯಾಚಾರ ಎಸೆಗಿದ್ದಾನೆ ಎಂದು ಇತ್ತೀಚೆಗೆ ಮಹಿಳೆ ಒಬ್ಬರು ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದರು. ಈ ಒಂದು ದೂರಿನ ಹಿನ್ನೆಲೆಯಲ್ಲಿ, ಅವರನ್ನು ಬಂಧಿಸಲಾಗಿದೆ. ಇದಕ್ಕೂ ಮೊದಲು ಅಟ್ರಾಸಿಟಿ ಪ್ರಕರಣದಲ್ಲಿ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಈ ವೇಳೆ ಬಿಡುಗಡೆಯಾದ ತಕ್ಷಣ ಮತ್ತೆ ರಾಮನಗರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದಾರೆ. ಬಳಿಕ ರಾಜ್ಯ ಸರ್ಕಾರ ಮುನಿರತ್ನ ಪ್ರಕರಣವನ್ನು ಎಸ್ ಐ ಟಿ ಇ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು.ಇದೀಗ ಇಂದು ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣೆ 25ಕ್ಕೆ ಮುಂದೂಡಿದೆ.

Read More